Subscribe to Updates
Get the latest creative news from FooBar about art, design and business.
Author: kannadanewsnow57
ಬೃಹತ್ ಡೇಟಾ ಉಲ್ಲಂಘನೆಯು ಗೂಗಲ್ ನ ಜಿಮೇಲ್ ಗೆ ಸಂಬಂಧಿಸಿದ ಖಾತೆಗಳು ಸೇರಿದಂತೆ ಲಕ್ಷಾಂತರ ಇಮೇಲ್ ಬಳಕೆದಾರರನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ವರದಿಯಾಗಿದೆ. ಉಲ್ಲಂಘನೆ-ನೋಟಿಫಿಕೇಶನ್ ಸೈಟ್ ಹ್ಯಾವ್ ಐ ಬಿನ್ ಪಿವ್ನೆಡ್ ಅನ್ನು ನಡೆಸುತ್ತಿರುವ ಆಸ್ಟ್ರೇಲಿಯಾದ ಭದ್ರತಾ ಸಂಶೋಧಕ ಟ್ರಾಯ್ ಹಂಟ್, ಆನ್ ಲೈನ್ ನಲ್ಲಿ ಕಾಣಿಸಿಕೊಂಡಿರುವ ಕದ್ದ ಟ್ರೋವ್ 3.5 ಟೆರಾಬೈಟ್ ಡೇಟಾವನ್ನು ಹೊಂದಿದೆ ಎಂದು ಹೇಳಿದ್ದಾರೆ. 183 ಮಿಲಿಯನ್ ಪಾಸ್ ವರ್ಡ್ ಗಳು ಸೋರಿಕೆ: ರಾಜಿ ಮಾಡಿಕೊಂಡ ಡೇಟಾಸೆಟ್ 183 ಮಿಲಿಯನ್ ಅನನ್ಯ ಖಾತೆಗಳು ಮತ್ತು ಸುಮಾರು 16.4 ಮಿಲಿಯನ್ ವಿಳಾಸಗಳನ್ನು ಹೊಂದಿದೆ, ಅದು ಹಿಂದಿನ ಉಲ್ಲಂಘನೆಗಳಿಂದ ಪರಿಣಾಮ ಬೀರಿಲ್ಲ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ನಿಮ್ಮ ಪಾಸ್ ವರ್ಡ್ ಕಾಂಪ್ರಮೈಸ್ ಆಗಿದೆಯೇ ಎಂದು ಪರಿಶೀಲಿಸುವುದು ಹೇಗೆ? ಬಳಕೆದಾರರು ತಮ್ಮ ರುಜುವಾತುಗಳನ್ನು ರಾಜಿ ಮಾಡಿಕೊಂಡಿದ್ದಾರೆಯೇ ಎಂದು ಪರಿಶೀಲಿಸಲು HaveIBeenPwned.com ಭೇಟಿ ನೀಡಬಹುದು ಎಂದು ಔಟ್ ಲೆಟ್ ವರದಿ ಮಾಡಿದೆ. ಸೈಟ್ ಫ್ಲ್ಯಾಗ್ ಮಾಡಿದ ಇಮೇಲ್ ಉಲ್ಲಂಘನೆಯ ವಿವರವಾದ…
ಮೈಸೂರಿನ : ರೈತನನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಈ ಮೂಲಕ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಬಳಿ ದನ ಮೇಯಿಸಲು ಹೋಗಿದ್ದ ಬೆಣ್ಣೆಗೆರೆ ಗ್ರಾಮದ ರಾಜಶೇಖರ (58) ಎಂಬುವವರು ಹುಲಿ ದಾಳಿಗೆ ಬಲಿಯಾಗಿದ್ದರು. ಇದೀಗ ಅರಣ್ಯಾಧಿಕಾರಿಗಳು ನರಭಕ್ಷಕ ಹುಲಿಯನ್ನು ಸೆರೆಹಿಡಿದಿದ್ದಾರೆ. ಅರಣ್ಯ ವಲಯದ ಮುಳ್ಳೂರು ಬಳಿ ಅರವಳಿಕೆ ನೀಡಿ ಸಾಕಾನೆಗಳ ಸಹಾಯದಿಂದ ಹುಲಿಯನ್ನು ಸೆರೆಹಿಡಿಯಲಾಗಿದೆ. ಸದ್ಯ ಸೆರೆ ಹಿಡಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯ ಪ್ರದೇಶಕ್ಕೆ ರವಾನಿಸಲಾಗಿದೆ.
ಬೆಂಗಳೂರು : ಪಿಡಿಒ ಕಿರುಕುಳಕ್ಕೆ ಬೇಸತ್ತು ಗ್ರಾಮಪಂಚಾಯಿತಿ ಗ್ರಂಥಪಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಳಲುಘಟ್ಟದಲ್ಲಿ ನಡೆದಿದೆ. ಕಳಲುಘಟ್ಟ ಗ್ರಾಮಪಂಚಾಯಿತಿ ಗ್ರಂಥಪಾಲಕ ರಾಮಚಂದ್ರಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅರೆಕಾಲಿಕ ಗ್ರಂಥಾಲಯ ಮೇಲ್ವಿಚಾರಕಾಗಿದ್ದ ರಾಮಚಂದ್ರಪ್ಪಗೆ ಕಳಲುಘಟ್ಟ ಗ್ರಾಮಪಂಚಾಯತ್ ಪಿಡಿಒ ಗೀತಾಮಣಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ, ಸೀರೆಯಿಂದ ಮರಕ್ಕೆ ಕಟ್ಟಿ ಹಾಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾಲೆ ಮುಗಿಸಿ ಮನೆಗೆ ವಾಪಸ್ ಆಗುವಾಗ 25 ವರ್ಷದ ಶಿಕ್ಷಕಿ ಮೇಲೆ ಹಲ್ಲೆ ನಡೆಸಲಾಗಿದೆ. ಮರಕ್ಕೆ ಕಟ್ಟಿ ಹಾಕಿ ವಿವಸ್ತಗೊಳಿಸಿದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಕೂಗಾಟ ಕೇಳಿ ಸ್ಥಳಕ್ಕೆ ಬಂದ ಶಿಕ್ಷಕಿಯ ಕುಟುಂಬಸ್ಥರು ರಕ್ಷಣೆ ಮಾಡಿದ್ದಾರೆ, ಮಾರಣಾಂತಿಕ ಹಲ್ಲೆಗೊಳಗಾದ ಶಿಕ್ಷಕಿಗೆ ಕೊಪ್ಪ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ 3 ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಪೇದೆ, ಪಿಎಸ್ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್ಆರ್ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿ ಇವೆ. 8500 ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಒಂದು ವಾರದಲ್ಲಿ ನೋಟಿಫಿಕೇಷನ್ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಗೆ ಸಂಬಂಧಿಸಿದ ಅನೇಕ ಪ್ರಸ್ತಾವನೆಗಳಿಗೆ ಅನುಮೋದನೆ ಮಾಡಿಕೊಟ್ಟಿದ್ದಾರೆ. ಇನ್ಸ್ಪೆಕ್ಟರ್ ಹುದ್ದೆಯಿಂದ ಎಸ್ಪಿ ಹುದ್ದೆಯವರೆಗಿನ ಅಧಿಕಾರಿಗಳನ್ನು ಎರಡು ವರ್ಷದವರೆಗೆ ವರ್ಗಾವಣೆ ಮಾಡದಂತೆ ಕಾನೂನು ತಂದಿದ್ದೇವೆ. ಕನಿಷ್ಟ ಎರಡು ವರ್ಷ ಒಂದೇ ಸ್ಥಳದಲ್ಲಿ ಕೆಲಸ ಮಾಡಲು ಅವಕಾಶ ಮಾಡಿ ಕೊಟ್ಟರೆ ಅನುಕೂಲವಾಗುತ್ತದೆ ಎಂಬ ನಿಟ್ಟಿನಲ್ಲಿ ಕಾನೂನಾತ್ಮಕವಾಗಿ ಬದಲಾವಣೆ ತಂದಿದ್ದೇವೆ. ಬಹಳ ಜನ ಇದನ್ನು ಪ್ರಶಂಸೆ ಮಾಡಿದ್ದಾರೆ. ಕೆಳ ಹಂತದ ಸಿಬ್ಬಂದಿಗಳಿಗೆ ಎಸ್ಪಿ ಹಂತದಲ್ಲಿ ವರ್ಗಾವಣೆ ಮಾಡಲು ಅವಕಾಶ ಮಾಡ ಕೊಟ್ಟಿದ್ದೇವೆ ಎಂದರು. ಪೇದೆ, ಪಿಎಸ್ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್ಆರ್ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್…
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ.01 ರಿಂದ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ. ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡುವುದು, ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು ರೂ.17000 ಗಳಿಂದ ರೂ. 27000 ಸಾವಿರಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ. ಮಾಸಿಕ ವಂತಿಕೆಯನ್ನು ನೀಡಲು ಇಚ್ಛಿಸದೇ ಇರುವ ನೌಕರರು ಲಿಖಿತವಾಗಿ ಅ.18 ರೊಳಗೆ ಸಂಬಂಧಿಸಿದ ಡಿ.ಡಿ.ಓ.ಗಳಿಗೆ ನೀಡುವುದು. ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ದಿಷ್ಟಪಡಿಸಿರುವ ವಂತಿಕೆಯನ್ನು ಅಕ್ಟೋಬರ್-2025ನೇ ಮಾಹೆಯಿಂದ ನೀಡುವುದು. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ 25 ಲಕ್ಷ ಕುಟುಂಬ ಸದಸ್ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ…
ಬೆಂಗಳೂರು: ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಬಳಕೆಯಾಗಿರುವ ವಿದ್ಯುತ್ ಮತ್ತು ನೀರಿನ ಬಿಲ್ ಪಾವತಿಗಾಗಿ ರಾಜ್ಯ ಸರ್ಕಾರವು 15 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮೇಲೆ ಓದಲಾದ ಕ್ರಮಾಂಕ (1) ರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಯಲ್ಲಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (2) ರಲ್ಲಿ ಸನ್ಮಾನ್ಯ ಮುಖ್ಯಮಂತ್ರಿಯವರು ವಿಧಾನ ಮಂಡಲದಲ್ಲಿ ಮಂಡಿಸಿರುವ 2024-25ನೇ ಸಾಲಿನ ಆಯವ್ಯಯದ ಭಾಷಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ 102 ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ. “ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳಿಗೆ ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ…
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರು, ಮಹಿಳಾ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ಶಿಶುಪಾಲನಾ ರಜೆ ಸೌಲಭ್ಯ ಕಲ್ಪಿಸಿ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಆದೇಶ ಹೊರಡಿಸಿದ್ದು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ನೌಕರರಿಗೆ ಶಿಶುಪಾಲನ ರಜೆ ಸೌಲಭ್ಯವನ್ನು ಅಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ರಜೆ ಸೌಲಭ್ಯವನ್ನು ವಿಸ್ತರಿಸಲು ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರೇ ಸ್ವಂತ ಸಂಪನ್ಮೂಲದಿಂದಲೇ ಒದಗಿಸಿಕೊಂಡು ಅನುದಾನಿತ ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕಿಯರು/ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡಲು ನಿರ್ದೇಶಿಸಲಾಗಿರುತ್ತದೆ ಎಂದಿದ್ದಾರೆ. ಅದರಂತೆ ಆಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ದುಂಡಳಿಯವರೇ ಸ್ವಂತ ಸಂಪನ್ಮೂಲದಿಂದಲೇ ಒದಗಿಸಿಕೊಂಡು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ/ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಒದಗಿಸಲು ಅಗತ್ಯ ಶ್ರಮವಹಿಸಲು ಸೂಚಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ..,…
ಹೈದರಾಬಾದ್ : ಬಂಗಾಳಕೊಲ್ಲಿಗೆ ಮಧ್ಯರಾತ್ರಿ ಮೊಂಥಾ ಚಂಡಮಾರುತ ಅಪ್ಪಳಿಸಿದ್ದು, ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಆಂಧ್ರ ಪ್ರದೇಶದ ತೀರಕ್ಕೆ ಮಧ್ಯರಾತ್ರಿ 11.30 ರಿಂದ 12.30ರ ನಡುವೆ ಮೊಂಥಾ ಚಂಡಮಾರುತ ಅಪ್ಪಳಿಸಿದ್ದು, ಆಂಧ್ರದ ಕರಾವಳಿ ಭಾಗದಲ್ಲಿ ಭಾರಿ ಅಲೆಗಳು ಸೃಷ್ಟಿಯಾಗಿವೆ. ಮಚಲಿಪಟ್ಟಣಂ ಕಾಕಿನಾಡ, ವಿಜಯವಾಡ, ವಿಶಾಖಪಟ್ಟಣಂ, ವಿಜಯನಗರಂ, ಶ್ರೀಕಾಕುಳಂ, ಏಲೂರು, ಕೃಷ್ಣಾ, ಎನ್ ಟಿಆರ್, ಗುಂಟೂರು, ಬಾಪಟ್ಲ, ಪಲ್ನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಹಲವಾರು ಪ್ರದೇಶಗಳಲ್ಲಿ ಚರಂಡಿಗಳು ಉಕ್ಕಿ ಹರಿಯುತ್ತಿವೆ. ಕೋನಸೀಮ, ಕಾಕಿನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಆಂಧ್ರಪ್ರದೇಶದ 19 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. https://twitter.com/ANI/status/1983072604161261853 https://twitter.com/ANI/status/1983046108130554295?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/DeccanChronicle/status/1982786883345170808 https://twitter.com/Indiametdept/status/1982797579415966026 https://twitter.com/Indiametdept/status/1982797579415966026 https://twitter.com/PTI_News/status/1983011135344246795
ನವದೆಹಲಿ : ದೇಶದ ಒಂದು ಶತಕೋಟಿಗೂ ಹೆಚ್ಚು ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಸುದ್ದಿ ಇದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) 2025 ರ ವರ್ಷಕ್ಕೆ ಹಲವಾರು ಆಧಾರ್ ಸಂಬಂಧಿತ ಸೇವೆಗಳು ಮತ್ತು ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ. ಅಕ್ಟೋಬರ್ 1 ರಿಂದ ನವೀಕರಣ ಶುಲ್ಕಗಳು ಹೆಚ್ಚಿದ್ದರೂ, ನವೆಂಬರ್ 1 ರಿಂದ ಡಿಜಿಟಲ್ ಸೇವೆಗಳಲ್ಲಿ ಪ್ರಮುಖ ಬದಲಾವಣೆ ಬರಲಿದ್ದು, ಸಾರ್ವಜನಿಕರಿಗೆ ಗಮನಾರ್ಹ ಪರಿಹಾರ ದೊರೆಯಲಿದೆ. ನವೆಂಬರ್ 1 ರಿಂದ ವ್ಯವಸ್ಥೆಯನ್ನು ಸಂಪೂರ್ಣವಾಗಿ ಡಿಜಿಟಲ್ ಮಾಡಲು ನವೀಕರಿಸಿ ನವೆಂಬರ್ 1, 2025 ರಿಂದ, ಯುಐಡಿಎಐ ಹೊಸ ಡಿಜಿಟಲ್ ನವೀಕರಣ ವ್ಯವಸ್ಥೆಯನ್ನು ಪ್ರಾರಂಭಿಸುತ್ತಿದೆ, ಇದು ಆಧಾರ್ ಹೊಂದಿರುವವರಿಗೆ ಪ್ರಮುಖ ಪರಿಹಾರವಾಗಿರುತ್ತದೆ. ಸೇವಾ ಕೇಂದ್ರಗಳಿಗೆ ಇನ್ನು ಮುಂದೆ ಭೇಟಿ ನೀಡುವುದಿಲ್ಲ: ಈ ವ್ಯವಸ್ಥೆಯಡಿಯಲ್ಲಿ, ಹೆಸರು, ವಿಳಾಸ, ಜನ್ಮ ದಿನಾಂಕ, ಲಿಂಗ ಮತ್ತು ಮೊಬೈಲ್ ಸಂಖ್ಯೆಯಂತಹ ಮಾಹಿತಿಯನ್ನು ಈಗ ಸಂಪೂರ್ಣವಾಗಿ ಆನ್ಲೈನ್ನಲ್ಲಿ ನವೀಕರಿಸಬಹುದು. ಸ್ವಯಂಚಾಲಿತ ಪರಿಶೀಲನೆ: ಹೊಸ ವ್ಯವಸ್ಥೆಯು ಸರ್ಕಾರಿ ಡೇಟಾಬೇಸ್ಗಳ ಮೂಲಕ ಮಾಹಿತಿಯನ್ನು ಸ್ವಯಂಚಾಲಿತವಾಗಿ…













