Author: kannadanewsnow57

ಬೆಂಗಳೂರು : ದೇಶದ ಪ್ರತಿಯೊಂದು ಹಳ್ಳಿ ಮತ್ತು ಪಟ್ಟಣಗಳಲ್ಲೂ ವ್ಯಾಪಿಸಿರುವ ಅಂಚೆ ಕಚೇರಿಗಳು (Post Offices) ಕೇವಲ ಪತ್ರ ವ್ಯವಹಾರಕ್ಕಷ್ಟೇ ಸೀಮಿತವಾಗಿಲ್ಲ. ಇವು ಸಾರ್ವಜನಿಕರಿಗೆ ಅತ್ಯಂತ ಸುರಕ್ಷಿತ, ನಂಬಿಕಸ್ಥ ಮತ್ತು ಉತ್ತಮ ಲಾಭ ತಂದುಕೊಡುವ ಹಲವು ಉಳಿತಾಯ ಯೋಜನೆಗಳನ್ನು ಒದಗಿಸುತ್ತಿವೆ. ನಿಮ್ಮ ಮಕ್ಕಳ ಭವಿಷ್ಯ, ಹೆಣ್ಣುಮಕ್ಕಳ ಶಿಕ್ಷಣ, ಸುಖಕರ ನಿವೃತ್ತಿ ಜೀವನ ಅಥವಾ ಮಾಸಿಕ ಆದಾಯ ಹೀಗೆ ಪ್ರತಿಯೊಂದು ಆರ್ಥಿಕ ಅಗತ್ಯಕ್ಕೂ ಪೋಸ್ಟ್ ಆಫೀಸ್‌ನಲ್ಲಿ ಸೂಕ್ತ ಯೋಜನೆಗಳು ಲಭ್ಯವಿವೆ. ಷೇರು ಮಾರುಕಟ್ಟೆಯ ಏರಿಳಿತಗಳ ಭಯವಿಲ್ಲದೆ, ಹೂಡಿಕೆ ಮಾಡಿದ ಹಣಕ್ಕೆ ಸಂಪೂರ್ಣ ಸರ್ಕಾರಿ ಗ್ಯಾರಂಟಿ ಹಾಗೂ ಆಕರ್ಷಕ ಬಡ್ಡಿದರ ಬಯಸುವವರಿಗೆ ಈ ಯೋಜನೆಗಳು ಅತ್ಯುತ್ತಮ ಆಯ್ಕೆಯಾಗಿವೆ. ಪ್ರಮುಖ ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳ ವಿವರ ಇಲ್ಲಿದೆ: 1. ಪೋಸ್ಟ್ ಆಫೀಸ್ ಫಿಕ್ಸ್‌ಡ್ ಡಿಪಾಸಿಟ್ (ಗಡುವು ಠೇವಣಿ) ನಿಮ್ಮ ಉಳಿತಾಯದ ಹಣಕ್ಕೆ ಗ್ಯಾರಂಟಿ ಲಾಭವನ್ನು ನೀಡುವ ಅತ್ಯುತ್ತಮ ಯೋಜನೆ ಇದಾಗಿದೆ. ಸುರಕ್ಷಿತ ಭವಿಷ್ಯ ಹಾಗೂ ಭವಿಷ್ಯದ ಯೋಜನೆಗಳಿಗಾಗಿ ಹಣವನ್ನು ಒಟ್ಟುಗೂಡಿಸಲು ಇದು ಸಹಕಾರಿಯಾಗಿದೆ. 2.…

Read More

ಬೆಂಗಳೂರು: ಅಂಗಡಿಗೆ ಹೋಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವಾಗ ಬ್ಯಾಂಕ್ ಅಕೌಂಟ್‌ನಲ್ಲಿ ದುಡ್ಡಿಲ್ಲ ಎಂದು ಇನ್ಮುಂದೆ ಟೆನ್ಷನ್ ಮಾಡಿಕೊಳ್ಳುವ ಅಗತ್ಯವಿಲ್ಲ! ಭಾರತದ ಪ್ರಮುಖ ಡಿಜಿಟಲ್ ಪಾವತಿ ಸಂಸ್ಥೆಯಾದ ‘ಭಾರತ್‌ಪೇ’ (BharatPe), ಖ್ಯಾತ ‘ಯೆಸ್ ಬ್ಯಾಂಕ್’ (Yes Bank) ಸಹಯೋಗದೊಂದಿಗೆ ಗ್ರಾಹಕರಿಗಾಗಿ ‘ಭಾರತ್‌ಪೇ ಫ್ಲೆಕ್ಸ್’ (BharatPe Flex) ಎಂಬ ವಿನೂತನ ಸೇವೆಯನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದು ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ ಯುಪಿಐ ಮೂಲಕ ತುರ್ತು ಪಾವತಿ ಮಾಡಲು ಗ್ರಾಹಕರಿಗೆ ನೆರವಾಗಲಿದೆ. ಏನಿದು ‘ಭಾರತ್‌ಪೇ ಫ್ಲೆಕ್ಸ್’? ಹೇಗೆ ಕೆಲಸ ಮಾಡುತ್ತದೆ? ಸಾಮಾನ್ಯವಾಗಿ ನಾವು ಯುಪಿಐ (UPI) ಮೂಲಕ ಹಣ ಪಾವತಿಸಿದಾಗ, ಆ ಮೊತ್ತ ನೇರವಾಗಿ ನಮ್ಮ ಬ್ಯಾಂಕ್ ಖಾತೆಯಿಂದ ಕಡಿತಗೊಳ್ಳುತ್ತದೆ. ಆದರೆ, ‘ಭಾರತ್‌ಪೇ ಫ್ಲೆಕ್ಸ್’ ಎಂಬುದು ಯುಪಿಐ ಆಧಾರಿತ ಒಂದು ‘ಕ್ರೆಡಿಟ್ ಲೈನ್’ (ಸಾಲ ಸೌಲಭ್ಯ) ಆಗಿದೆ. ಗ್ರಾಹಕರು ಅಂಗಡಿಗಳಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಲು, ಆನ್‌ಲೈನ್ ಶಾಪಿಂಗ್, ಕರೆಂಟ್ ಬಿಲ್ ಪಾವತಿ, ಮೊಬೈಲ್ ರೀಚಾರ್ಜ್ ಹಾಗೂ ಪೆಟ್ರೋಲ್ ಹಾಕಿಸಲು ಈ ಸಾಲದ ಹಣವನ್ನು…

Read More

ಚಿಕ್ಕೋಡಿ: ಹೆತ್ತ ಮಗನೇ ಕಟುಕನಾದರೆ ಆ ತಾಯಿ ಯಾರಿಗೆ ತಾನೇ ನ್ಯಾಯ ಕೇಳಬೇಕು? ಸರ್ಕಾರದ ಉಚಿತ ಹಣದ ಆಸೆಗೆ ಬಿದ್ದ ಪುತ್ರನೊಬ್ಬ ವೃದ್ಧ ತಾಯಿಯ ಮೇಲೆಯೇ ಹಲ್ಲೆ ನಡೆಸಿ, ಆಕೆಯನ್ನು ಮನೆಯಿಂದ ಆಚೆ ಹಾಕಿರುವ ಮನಕಲಕುವ ಘಟನೆಯೊಂದು ರಾಯಬಾಗ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ರಾಯಬಾಗ ತಾಲೂಕಿನ ಮಾಡಲಗಿ ಗ್ರಾಮದ ನಿವಾಸಿಯಾದ ಸತ್ಯವ್ವಾ ಖಾಂಡೇಕರ (78 ವರ್ಷ) ಎಂಬ ವೃದ್ಧೆಯೇ ಸ್ವಂತ ಮಗನಿಂದ ಹಲ್ಲೆಗೆ ಒಳಗಾದ ದುರ್ದೈವಿ. ಸತ್ಯವ್ವಾ ಅವರ ಮಗ ಹಾಲಪ್ಪ ಖಾಂಡೇಕರ ಎಂಬಾತನೇ ಈ ಅಮಾನವೀಯ ಕೃತ್ಯ ಎಸಗಿದ ಆರೋಪಿ. ತಾಯಿಗೆ ಸರ್ಕಾರದಿಂದ ಬರುತ್ತಿದ್ದ ವೃದ್ಧಾಪ್ಯ ವೇತನ ಹಾಗೂ ‘ಗೃಹಲಕ್ಷ್ಮಿ’ ಯೋಜನೆಯ ಮಾಸಿಕ ಹಣವನ್ನು ಈತ ಬಲವಂತವಾಗಿ ಕಸಿದುಕೊಳ್ಳುತ್ತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೆ, ತಾಯಿಯ ಖಾತೆಯಲ್ಲಿದ್ದ ಉಳಿದ ನಗದು ಹಣವನ್ನೂ ದೋಚಿ, ಆಕೆಗೆ ಮನಬಂದಂತೆ ಥಳಿಸಿ ಮನೆಯಿಂದ ಹೊರಗಟ್ಟಿದ್ದಾನೆ ಎಂದು ನೊಂದ ತಾಯಿ ಕಣ್ಣೀರು ಹಾಕಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಹಾಲಪ್ಪ ಪ್ರತಿಕ್ರಿಯೆ ನೀಡಿದ್ದು,ನಾನು ತಾಯಿಗೆ ಹೊಡೆದಿಲ್ಲ” ಎಂದು…

Read More

ನೆಲಮಂಗಲ: ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಇದೊಂದು ಅಪರೂಪದ ಸಂಭ್ರಮಕ್ಕೆ ನೆಲಮಂಗಲ ಸಾಕ್ಷಿಯಾಗುತ್ತಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುತ್ತಿರುವ ಸುವರ್ಣ ಕ್ಷಣವನ್ನು ಸಂಭ್ರಮಿಸಲು ನೆಲಮಂಗಲ ಕ್ಷೇತ್ರ ಸಜ್ಜಾಗಿದೆ. ಈ ಐತಿಹಾಸಿಕ ದಿನದ ನೆನಪಿಗಾಗಿ ಕ್ಷೇತ್ರದ ಪ್ರತಿಯೊಂದು ಮನೆಗೂ ತಲಾ ಒಂದು ಕೆಜಿ ತೂಕದ ಲಡ್ಡು ವಿತರಿಸಲಾಗುವುದು ಎಂದು ಶಾಸಕ ಎನ್. ಶ್ರೀನಿವಾಸ್ ಘೋಷಿಸಿದ್ದಾರೆ. ಮನೆ ಮನೆಗೆ ಸಿಹಿ ತಲುಪಿಸಲು ಬಾಣಸಿಗರು ರೆಡಿ! ಇತ್ತೀಚೆಗಷ್ಟೇ ನೆಲಮಂಗಲ ತಾಲ್ಲೂಕಿಗೆ ಸೇರ್ಪಡೆಗೊಂಡಿರುವ ಸೋಲೂರು ಹೋಬಳಿಯ ಬಾಣವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ನೆಲಮಂಗಲ ಉತ್ಸವದ ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು, “ನಮ್ಮ ನಾಯಕರು ಮುಖ್ಯಮಂತ್ರಿಯಾಗುತ್ತಿರುವ ಖುಷಿಗೆ ಇಡೀ ಕ್ಷೇತ್ರದಲ್ಲಿ ಸಿಹಿ ಹಂಚಲಾಗುತ್ತಿದೆ. ಈಗಾಗಲೇ ನುರಿತ ಬಾಣಸಿಗರು ಲಡ್ಡು ತಯಾರಿಕೆಯಲ್ಲಿ ಬ್ಯುಸಿಯಾಗಿದ್ದು, ಪ್ರತಿ ಮನೆಗೆ ಬಾಕ್ಸ್ ಮೂಲಕ 1 ಕೆಜಿ ಲಡ್ಡು ತಲುಪಿಸುವ ಜವಾಬ್ದಾರಿಯನ್ನು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ವಹಿಸಿಕೊಂಡಿದ್ದಾರೆ,” ಎಂದು…

Read More

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದುಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ಸಂಜೆ 4:05ಕ್ಕೆ ರಾಜಧಾನಿಯ ಲೋಕಭವನದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಅವರು ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ಭರ್ಜರಿ ಸಿದ್ಧತೆ ಡಿಕೆಶಿ ಅವರ ಪಟ್ಟಾಭಿಷೇಕದ ಹಿನ್ನೆಲೆಯಲ್ಲಿ ಲೋಕಭವನದಲ್ಲಿ ಯುದ್ಧೋಪಾದಿಯಲ್ಲಿ ಸಿದ್ಧತೆಗಳು ಆರಂಭವಾಗಿವೆ. ಲೋಕಭವನ ಹಾಗೂ ವಿಧಾನಸೌಧದ ಸುತ್ತಮುತ್ತಲ ಪ್ರದೇಶಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಕಟೌಟ್‌ಗಳು ಮತ್ತು ಬ್ಯಾನರ್‌ಗಳನ್ನು ಅಳವಡಿಸಲಾಗಿದ್ದು, ಇಡೀ ಪರಿಸರ ಹಬ್ಬದ ವಾತಾವರಣವನ್ನು ನೆನಪಿಸುತ್ತಿದೆ. ಅಭಿಮಾನಿಗಳಿಗೆ ಎಲ್‌ಇಡಿ ಪರದೆ ವ್ಯವಸ್ಥೆ ರಾಜ್ಯದ ಮೂಲೆ ಮೂಲೆಗಳಿಂದ ಹರಿದುಬರಲಿರುವ ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಅನುವಾಗುವಂತೆ ಲೋಕಭವನದ ಸುತ್ತಮುತ್ತ ಬೃಹತ್ ಎಲ್‌ಇಡಿ (LED) ಪರದೆಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಭದ್ರತೆ ಹಾಗೂ ಸುಗಮ ಸಂಚಾರಕ್ಕಾಗಿ ಪೊಲೀಸ್ ಇಲಾಖೆಯೂ ಸಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. https://twitter.com/ANI/status/2061650840835039317?ref_src=twsrc%5Etfw%7Ctwcamp%5Etweetembed%7Ctwterm%5E2061650840835039317%7Ctwgr%5E629ea387a01b37d88015ce15721d0ed1fd83e295%7Ctwcon%5Es1_c10&ref_url=https%3A%2F%2Fwww.kannadaprabha.com%2Fkarnataka%2F2026%2FJun%2F02%2Flist-of-10-12-ministers-to-be-sworn-in-with-dk-shivakumar-to-be-out-today

Read More

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು (ಬುಧವಾರ) ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ. ಸಂಜೆ 4.05ಕ್ಕೆ ಲೋಕಸೌಧದ ಭವ್ಯ ಗಾಜಿನಮನೆಯಲ್ಲಿ ಈ ಅದ್ಧೂರಿ ಪ್ರಮಾಣ ವಚನ ಸಮಾರಂಭ ನೆರವೇರಲಿದ್ದು, ಇಡೀ ಸಿಲಿಕಾನ್ ಸಿಟಿ ಮದುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ಕನಕಪುರ ಬಂಡೆಯ ಪಟ್ಟಾಭಿಷೇಕವನ್ನು ಕಣ್ತುಂಬಿಕೊಳ್ಳಲು ಇಡೀ ರಾಜ್ಯವೇ ಚಾತಕ ಪಕ್ಷಿಯಂತೆ ಕಾಯುತ್ತಿದೆ. ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ಧೀಮಂತ ಸಂಘಟನಾ ಚತುರ ಎಂದು ಗುರುತಿಸಿಕೊಂಡಿರುವ ದೊಡ್ಡಾಲಹಳ್ಳಿ ಕೆಂಪೇಗೌಡ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದು ಒಂದು ಸುದೀರ್ಘ ರಾಜಕೀಯ ಹೋರಾಟದ ಫಲಶ್ರುತಿಯಾಗಿದೆ. ಕನಕಪುರದ ಬಂಡೆ ಎಂದೇ ಖ್ಯಾತರಾಗಿರುವ ಡಿ ಕೆ ಶಿವಕುಮಾರ್ ಅವರು ಸಾಮಾನ್ಯ ಮಧ್ಯಮ ವರ್ಗದ ಕೃಷಿ ಹಿನ್ನೆಲೆಯಿಂದ ಬಂದು ಇಂದು ರಾಜ್ಯದ ಅತ್ಯುನ್ನತ ಆಡಳಿತ ಚುಕ್ಕಾಣಿ ಹಿಡಿಯುವ ಹಂತಕ್ಕೆ ತಲುಪಿದ ಹಾದಿ ರೋಚಕತೆಯಿಂದ ಕೂಡಿದೆ. ಒಕ್ಕಲಿಗ ಸಮುದಾಯದಿಂದ ರಾಜ್ಯದ ಮುಖ್ಯಮಂತ್ರಿ ಗದ್ದುಗೆ ಏರುತ್ತಿರುವ ಎಂಟನೇ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿರುವ ಅವರ ಈ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸುವ ಮತ್ತೊಂದು ಮಹತ್ವದ ವಿದ್ಯಮಾನ ಜರುಗುತ್ತಿದ್ದು, ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರು ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾದ ತಕ್ಷಣವೇ ಖಾದರ್ ಅವರು ತಮ್ಮ ಸ್ಪೀಕರ್ ಹುದ್ದೆಯನ್ನು ತೊರೆಯಲಿದ್ದಾರೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ. ನಿಯಮಾವಳಿಗಳ ಪ್ರಕಾರ, ಯು.ಟಿ. ಖಾದರ್ ಅವರು ಇಂದು ಮಧ್ಯಾಹ್ನದ ವೇಳೆಗೆ ವಿಧಾನಸಭೆಯ ಉಪಸಭಾಪತಿಗಳಿಗೆ (ಡೆಪ್ಯುಟಿ ಸ್ಪೀಕರ್) ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಸಿಎಂ ಪ್ರಮಾಣವಚನ ಬೆನ್ನಲ್ಲೇ ಸಂಪುಟ ವಿಸ್ತರಣೆ ಕಸರತ್ತು ಚುರುಕಾಗಿದ್ದು, ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಸುಮಾರು 12 ರಿಂದ 13 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹಿರಿಯ ನಾಯಕ ಯು.ಟಿ. ಖಾದರ್ ಅವರಿಗೆ ಸಚಿವ ಸ್ಥಾನ…

Read More

ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಅವರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಸರ್ಕಾರವು ‘ಅಂಗವಿಕಲರ ಮಾಸಾಶನ ಯೋಜನೆ’ಯನ್ನು ಜಾರಿಗೊಳಿಸಿದೆ. ಕೆಳಕಂಡ ವಿಕಲಚೇತನತೆ ಉಳ್ಳವರು, ವಿಕಲಚೇತನತೆಯೊಂದಿಗೆ ಹುಟ್ಟಿದ ಮಗು ಹಾಗೂ ಅಪಘಾತದಿಂದ ಅಂಗವಿಕಲತೆ ಉಂಟಾದ ವ್ಯಕ್ತಿಗಳು ಈ ಮಾಸಾಶನ ಯೋಜನೆಗೆ ಅರ್ಹರಾಗಿರುತ್ತಾರೆ. ಮಾಸಾಶನ ಪಡೆಯಲು ಇರಬೇಕಾದ ಅರ್ಹತೆಗಳು: ಆದಾಯ ಮಿತಿ: ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಾರ್ಷಿಕ ಆದಾಯವು ರೂ. 32,000/- ಕ್ಕಿಂತ ಕಡಿಮೆ ಇರಬೇಕು. ವಿಕಲಚೇತನತೆಯ ಪ್ರಮಾಣ: ವಿಕಲಚೇತನ ವ್ಯಕ್ತಿಗಳ ಕಾಯ್ದೆ 1995ರ ಪ್ರಕಾರ, ವೈದ್ಯಕೀಯ ಪ್ರಾಧಿಕಾರವು ಪ್ರಮಾಣೀಕರಿಸಿದ ರೀತಿಯಲ್ಲಿ ವಿಕಲಚೇತನತೆಯು ಶೇಕಡಾ 40 ಕ್ಕಿಂತ ಕಡಿಮೆ ಇರಬಾರದು. ಯೋಜನೆಯಡಿ ಬರುವ ವಿಕಲಚೇತನತೆಯ ವಿಧಗಳು: ಅಂಧತ್ವ ಮಂದದೃಷ್ಟಿ ಕುಷ್ಠರೋಗ ನಿವಾರಿತರು ಶ್ರವಣದೋಷವುಳ್ಳವರು ಚಲನವಲನ ಅಂಗವಿಕಲತೆ ಬುದ್ಧಿಮಾಂದ್ಯತೆ ಮಾನಸಿಕ ಅಸ್ವಸ್ಥತೆ ಮಾಸಿಕ ಪಿಂಚಣಿ ಮೊತ್ತದ ವಿವರ: ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರದ ಆಧಾರದ ಮೇಲೆ ಪಿಂಚಣಿ ಮೊತ್ತವನ್ನು ಈ ಕೆಳಗಿನಂತೆ ವರ್ಗೀಕರಿಸಲಾಗಿದೆ: ಕ್ರ.ಸಂ ವಿಕಲಚೇತನತೆಯ ಪ್ರಮಾಣ / ವಿವರ…

Read More

ಕ್ವೆಟ್ಟಾ: ಕಳೆದ ವಾರ ನಡೆದ ಭೀಕರ ರೈಲು ಬಾಂಬ್ ಸ್ಫೋಟಕ್ಕೆ ಪ್ರತಿಯಾಗಿ ಪಾಕಿಸ್ತಾನದ ಭದ್ರತಾ ಪಡೆಗಳು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭಾರಿ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ ‘ಬಲೂಚ್ ಲಿಬರೇಷನ್ ಆರ್ಮಿ’ (BLA) ಸಂಘಟನೆಯ ಕನಿಷ್ಠ 17 ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಸೇನೆ ಮಂಗಳವಾರ ತಿಳಿಸಿದೆ. ಮೇ 24 ರಂದು ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದ ಮಿಲಿಟರಿ ವಲಯದ ಶಟಲ್ ರೈಲೊಂದರಲ್ಲಿ ಉಗ್ರರು ನಡೆಸಿದ ಭೀಕರ ಬಾಂಬ್ ದಾಳಿಯಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದರು. ಈ ದಾಳಿಯ ಹೊಣೆಯನ್ನು ನಿಷೇಧಿತ ಉಗ್ರಗಾಮಿ ಸಂಘಟನೆಯಾದ ಬಿಎಲ್‌ಎ (BLA) ಹೊತ್ತುಕೊಂಡಿತ್ತು. ರೈಲು ಸ್ಫೋಟದ ಬೆನ್ನಲ್ಲೇ ಎಚ್ಚೆತ್ತುಕೊಂಡ ಭದ್ರತಾ ಪಡೆಗಳು, ಖಚಿತ ಮಾಹಿತಿ ಆಧರಿಸಿ ಬಲೂಚಿಸ್ತಾನದ ಮಸ್ತುಂಗ್, ನುಷ್ಕಿ, ಜೆಹ್ರಿ, ಖುಜ್ದಾರ್ ಮತ್ತು ಕೇಚ್ ಜಿಲ್ಲೆಗಳಲ್ಲಿ ಸರಣಿ ಜಂಟಿ ಕಾರ್ಯಾಚರಣೆಗಳನ್ನು ಕೈಗೊಂಡಿದ್ದವು. ಕಾರ್ಯಾಚರಣೆಯ ಸಂದರ್ಭದಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುತಾಣಗಳನ್ನು ಯಶಸ್ವಿಯಾಗಿ ಸುತ್ತುವರಿದು ದಾಳಿ ನಡೆಸಿವೆ. ಈ ವೇಳೆ ಉಗ್ರರು ಮತ್ತು ಸೇನೆಯ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದ್ದು,…

Read More

ಬೆಂಗಳೂರು: ಜೂನ್ 3 ರ ಇಂದು ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭದ ಹಿನ್ನಲೆಯಲ್ಲಿ ಬೆಂಗಳೂರಲ್ಲಿ  ಸುಗಮ ಸಂಚಾರಕ್ಕಾಗಿ ಪರ್ಯಾಯ ಮಾರ್ಗ ಹಾಗೂ ಮಾರ್ಗಸೂಚಿಗಳನ್ನು ಸಂಚಾರ ಪೊಲೀಸರು ಸಲಹೆ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ದಿನಾಂಕ 03.06.2026 ರಂದು ಸಂಜೆ 04:00 ಗಂಟೆಗೆ ಕಬ್ಬನ್ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಲೋಕಭವನದ ಗಾಜಿನ ಮನೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭವನ್ನು ನಿಗದಿಪಡಿಸಲಾಗಿದೆ. ಈ ಅತ್ಯಂತ ಪ್ರಮುಖ ಕಾರ್ಯಕ್ರಮಕ್ಕೆ ದೇಶದ ಹಾಗೂ ರಾಜ್ಯದ ಅತಿಗಣ್ಯ ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಭದ್ರತೆ ಮತ್ತು ನಿಯಂತ್ರಣದ ಹಿತದೃಷ್ಟಿಯಿಂದ ಲೋಕಭವನಕ್ಕೆ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ಸಿ.ಬಿ.ಡಿ. ವ್ಯಾಪ್ತಿಯಲ್ಲಿರುವ ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್‌ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ನಗರದಲ್ಲಿ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ದಿನಾಂಕ: 03.06.2026 ರಂದು ಮಧ್ಯಾಹ್ನ 12:00…

Read More