Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 17 ದಿನ ಇರಲಿದೆ. 2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 17 ದಿನ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆ ಸಿಗಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.
ನವದೆಹಲಿ : ಹಿಂದೂ ಧರ್ಮದಲ್ಲಿ ಜ್ಯೋತಿಷ್ಯದ ಪ್ರಕಾರ, ಸೂರ್ಯಗ್ರಹಣಕ್ಕೆ ವಿಶೇಷ ಮಹತ್ವವಿದೆ. ಸೂರ್ಯಗ್ರಹಣವು ಖಗೋಳ ವಿದ್ಯಮಾನವಾಗಿದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಈ ಸಮಯದಲ್ಲಿ ಭೂಮಿಯ ಮೇಲಿನ ಸೂರ್ಯನ ಬೆಳಕು ಕಡಿಮೆಯಾಗುತ್ತದೆ ಅಥವಾ ಸಂಪೂರ್ಣವಾಗಿ ಕಣ್ಮರೆಯಾಗುತ್ತದೆ. ಈ ವಿದ್ಯಮಾನವನ್ನು ಸೂರ್ಯ ಗ್ರಹಣ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ, ಸೂರ್ಯಗ್ರಹಣವು ಅಮಾವಾಸ್ಯೆಯ ದಿನದಂದು ಸಂಭವಿಸುತ್ತದೆ. 2024 ರಲ್ಲಿ ಎರಡು ಸೂರ್ಯ ಗ್ರಹಣಗಳು ಮತ್ತು ಎರಡು ಚಂದ್ರ ಗ್ರಹಣಗಳು ಸಂಭವಿಸಲಿವೆ. ಈ ವರ್ಷದ ಮೊದಲ ಸೂರ್ಯಗ್ರಹಣವು ಏಪ್ರಿಲ್ 8, 2024 ರಂದು ಸಂಭವಿಸಿತು. ಇದರ ಪರಿಣಾಮವು ಯುನೈಟೆಡ್ ಸ್ಟೇಟ್ಸ್ ಮತ್ತು ಅದರ ಹತ್ತಿರದ ದೇಶಗಳಲ್ಲಿ ಗೋಚರಿಸಿತು. ಭಾರತದಲ್ಲಿ ಕಾಣುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಈ ವರ್ಷದ ಎರಡನೇ ಮತ್ತು ಅಂತಿಮ ಸೂರ್ಯಗ್ರಹಣದ ಬಗ್ಗೆ ಜನರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳಿವೆ. ಈ ಸೂರ್ಯಗ್ರಹಣ ಯಾವಾಗ ಸಂಭವಿಸುತ್ತದೆ? ಎಂಬುದರ ಕುರಿತು ಇಲ್ಲಿದೆ ಮಾಹಿತಿ ವರ್ಷದ ಎರಡನೇ ಸೂರ್ಯಗ್ರಹಣ ಈ ವರ್ಷದ ಎರಡನೇ ಸೂರ್ಯಗ್ರಹಣವು…
ಇಸ್ಲಮಾಬಾದ್: ಪಾಕಿಸ್ತಾನದ ವೈಟ್ ಬಾಲ್ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ಅಬರ್ ಅಜಮ್ ಕೆಳಗಿಳಿದಿದ್ದಾರೆ.ಬಾಬರ್ ಎಕ್ಸ್ ನಲ್ಲಿ ತಡರಾತ್ರಿ ಪೋಸ್ಟ್ ನಲ್ಲಿ ಈ ಘೋಷಣೆ ಮಾಡಿದ್ದಾರೆ. ”ಪ್ರಿಯ ಅಭಿಮಾನಿಗಳೇ, ನಾನು ಇಂದು ನಿಮ್ಮೊಂದಿಗೆ ಕೆಲವು ಸುದ್ದಿಗಳನ್ನು ಹಂಚಿಕೊಳ್ಳುತ್ತಿದ್ದೇನೆ. ಕಳೆದ ತಿಂಗಳು ಪಿಸಿಬಿ ಮತ್ತು ಟೀಮ್ ಮ್ಯಾನೇಜ್ಮೆಂಟ್ಗೆ ನನ್ನ ಅಧಿಸೂಚನೆಯ ಪ್ರಕಾರ ನಾನು ಪಾಕಿಸ್ತಾನ ಪುರುಷರ ಕ್ರಿಕೆಟ್ ತಂಡದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಈ ತಂಡವನ್ನು ಮುನ್ನಡೆಸುವುದು ಒಂದು ಗೌರವವಾಗಿದೆ, ಆದರೆ ನಾನು ಕೆಳಗಿಳಿಯಲು ಮತ್ತು ನನ್ನ ಆಟದ ಪಾತ್ರದ ಮೇಲೆ ಗಮನ ಹರಿಸಲು ಇದು ಸಮಯ, “ಎಂದು ಬ್ಯಾಟ್ಸ್ಮನ್ ಹೇಳಿದರು. ನಾಯಕತ್ವವು ತನಗೆ ಪ್ರತಿಫಲದಾಯಕ ಅನುಭವವಾಗಿದೆ ಎಂದು ಅವರು ಹೇಳಿದರು ಆದರೆ ಜವಾಬ್ದಾರಿಯು “ಗಮನಾರ್ಹ ಕೆಲಸದ ಹೊರೆಗೆ” ಕಾರಣವಾಗಿದೆ ಎಂದು ಹೇಳಿದರು. “ನಾನು ನನ್ನ ಪ್ರದರ್ಶನಕ್ಕೆ ಆದ್ಯತೆ ನೀಡಲು ಬಯಸುತ್ತೇನೆ, ನನ್ನ ಬ್ಯಾಟಿಂಗ್ ಅನ್ನು ಆನಂದಿಸಲು ಮತ್ತು ನನ್ನ ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಬಯಸುತ್ತೇನೆ, ಇದು ನನಗೆ…
ವಾಷಿಂಗ್ಟನ್: ಇಸ್ರೇಲ್ಗೆ ಸಹಾಯ ಮಾಡಲು ಮತ್ತು ಇರಾನಿನ ಕ್ಷಿಪಣಿಗಳನ್ನು ಹೊಡೆದುರುಳಿಸಲು ಯುಎಸ್ ಮಿಲಿಟರಿಗೆ ಯುಎಸ್ ಅಧ್ಯಕ್ಷ ಜೋ ಬೈಡನ್ ಮಂಗಳವಾರ ಆದೇಶಿಸಿದ್ದಾರೆ ಎಂದು ಶ್ವೇತಭವನ ತಿಳಿಸಿದೆ ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ಮಧ್ಯೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕದನ ವಿರಾಮಕ್ಕೆ ಕರೆ ನೀಡಿದ್ದಾರೆ ಲೆಬನಾನ್ ನಲ್ಲಿ ಇರಾನ್ ಬೆಂಬಲಿತ ಉಗ್ರರ ವಿರುದ್ಧ ಇಸ್ರೇಲ್ ನಡೆಸಿದ ದಾಳಿಯ ನಂತರ ಇಸ್ರೇಲ್ ಮಂಗಳವಾರ ಇರಾನ್ ನಿಂದ ಕ್ಷಿಪಣಿ ದಾಳಿಗೆ ಒಳಗಾಗಿದೆ ಎಂದು ಇಸ್ರೇಲ್ ಮಿಲಿಟರಿ ಮತ್ತು ಇರಾನಿನ ಸರ್ಕಾರಿ ಮಾಧ್ಯಮಗಳು ತಿಳಿಸಿವೆ. “ಸ್ವಲ್ಪ ಸಮಯದ ಹಿಂದೆ, ಇರಾನ್ನಿಂದ ಇಸ್ರೇಲ್ ರಾಜ್ಯದ ಕಡೆಗೆ ಕ್ಷಿಪಣಿಗಳನ್ನು ಉಡಾಯಿಸಲಾಯಿತು” ಎಂದು ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್ನಾದ್ಯಂತ ಸೈರನ್ಗಳು ಮೊಳಗಿದವು, ಎಎಫ್ಪಿ ಪತ್ರಕರ್ತರು ಜೆರುಸಲೇಂನಲ್ಲಿ ಸ್ಫೋಟದ ಶಬ್ದವನ್ನು ವರದಿ ಮಾಡಿದ್ದಾರೆ. ಇರಾನ್ನ ಅಧಿಕೃತ ಸುದ್ದಿ ಸಂಸ್ಥೆ ಐಆರ್ಎನ್ಎ ಇಸ್ರೇಲ್ನ ವಾಣಿಜ್ಯ ಕೇಂದ್ರವಾದ ಟೆಲ್ ಅವೀವ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ಹೇಳಿದೆ. ಕಳೆದ ವಾರ…
ಬೆಂಗಳೂರು : ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಿಗೆ ಯುಜಿಸಿ ಮಾನದಂಡ ಅನುಸರಿಸಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಝ್ಯ ಸರ್ಕಾರ ನಿರ್ಧರಿಸಿದ್ರೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ 5,000 ಅತಿಥಿ ಉಪನ್ಯಾಸಕರು ನೇಮಕಾತಿಗೆ ಅನರ್ಹರಾಗಲಿದ್ದಾರೆ. ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೊದಲು ಯುಜಿಸಿ ನಿಯಮಾವಳಿ 2018 ರ ಅಡಿಯಲ್ಲಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಸಂಪೂರ್ಣವಾಗಿ ಪಾಲಿಸುವಂತೆ ಕರ್ನಾಟಕ ಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ. ಎಚ್.ಸಂಜೀವಯ್ಯ ಮತ್ತು ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಆರ್.ನಟರಾಜ್ ಈ ನಿರ್ದೇಶನ ನೀಡಿದ್ದಾರೆ. ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆಎಸ್ಇಟಿ) / ರಾಜ್ಯ ಅರ್ಹತಾ ಪರೀಕ್ಷೆ (ಎಸ್ಇಟಿ) / ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) / ಪಿಎಚ್ಡಿ ವಿದ್ಯಾರ್ಹತೆ ಹೊಂದಿರುವವನ್ನು ಮಾತ್ರ ನೇಮಕಾತಿ ಮಾಡಿಕೊಳ್ಳಲು ಹೈಕೋರ್ಟ್ ಸೂಚನೆ ನೀಡಿದೆ.
ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪಿಎಂಎಲ್ಎ ಪ್ರಕರಣವು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಮೇಲಿನ ರಾಜಕೀಯ ಸೇಡಿನ ಕೃತ್ಯ ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ, “ಚುನಾಯಿತ ಕಾಂಗ್ರೆಸ್ ಸರ್ಕಾರವನ್ನು, ಚುನಾಯಿತ ಮುಖ್ಯಮಂತ್ರಿಯನ್ನು ಬುಲ್ಡೋಜ್ ಮಾಡಲು ಮತ್ತು ಬೆದರಿಸಲು ‘ಇಡಿ’ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ ಎಂಬುದು ಬಹಳ ಸ್ಪಷ್ಟವಾಗಿದೆ” ಎಂದು ಹೇಳಿದರು. ಇಡಿ ಬಿಜೆಪಿಯ ಚುನಾವಣಾ ಇಲಾಖೆಯಲ್ಲದೆ ಬೇರೇನೂ ಅಲ್ಲ ಎಂದು ಅವರು ಹೇಳಿದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, “ಕರ್ನಾಟಕದ ಮುಖ್ಯಮಂತ್ರಿಗಳು ತನಿಖೆಯನ್ನು ಸ್ವಾಗತಿಸುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ. ಈ ಇಡಿ ಕ್ರಮವು ರಾಜಕೀಯ ದುರುದ್ದೇಶ, ರಾಜಕೀಯ ಸೇಡು, ಮುಖ್ಯಮಂತ್ರಿ ನೇತೃತ್ವದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಮೇಲಿನ ರಾಜಕೀಯ ಪ್ರತೀಕಾರದ ಕ್ರಮವಾಗಿದೆ ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಂಬಿದೆ ಮತ್ತು ಮನವರಿಕೆಯಾಗಿದೆ. ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿಯ ಸೋಲನ್ನು ಒಪ್ಪಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇನ್ನೂ…
ಬೆಂಗಳೂರು : ಇದೆ ಅಕ್ಟೊಬರ್ 3 ರಂದು ರಾಜ್ಯಾದ್ಯಂತ 402 PSI ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಅತ್ಯಂತ ಕಠಿಣ ರೂಲ್ಸ್ ಜಾರಿ ಮಾಡಲಾಗಿದೆ. ಕಳದ ಬಾರಿ ಆದ ಅಕ್ರಮದ ಹಿನ್ನಲೆ ಈ ಬಾರಿ ಬೀಗಿಭದ್ರತೆ ಮಾಡಲಾಗಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಎಲ್ಲಾ ಪರೀಕ್ಷಾ ಕೊಠಡಿಯನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಇದನ್ನು ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಇನ್ನು ಪ್ರಶ್ನೆ…
ಬೆಂಗಳೂರು: ಬೆಂಗಳೂರಿನಲ್ಲಿ ಪ್ರಯಾಣಿಕನೊಬ್ಬ ಬಿಎಂಟಿಸಿ ಕಂಡಕ್ಟರ್ ಗೆ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವಂತ ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವೈಟ್ ಫೀಲ್ಡ್ ನ ಐಟಿಪಿಎಲ್ ಬಸ್ ನಿಲ್ದಾಣದಲ್ಲಿ ಇಂದು ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಎಂಬುವರಿಗೆ ಪ್ರಯಾಣಿಕನೊಬ್ಬ ಚಾಕುವಿನಿಂದ ಇರಿದು ಹಲ್ಲೆಗೊಳಿಸಲಾಗಿತ್ತು. ಪ್ರಕರಣ ಸಂಬಂಧ ಜಾರ್ಖಂಡ್ ಮೂಲದ ಹರ್ಷ ಸಿನ್ಹಾ ಎಂಬುವನು ಕೃತ್ಯವೆಸಗಿದ್ದು, ಆರೋಪಿಯನ್ನು ವೈಟ್ ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಪ್ರಯಾಣಿಕರಿನಂದ ಚಾಕು ಇರಿತಕ್ಕೆ ಒಳಗಾದಂತ ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ಕೊಟ್ಟಿದ್ದಂತ 14 ಸೈಟ್ ಗಳನ್ನು ಮುಡಾಗೆ ಮರಳಿ ನೀಡಿದ್ದರು. ಈ 14 ಮುಡಾ ಸೈಟ್ ಗಳ ಕ್ರಯಪತ್ರವನ್ನು ರದ್ದುಗೊಳಿಸಲಾಗಿದ್ದು, ಮುಡಾ ಮರಳಿ ವಾಪಾಸ್ ಪಡೆದಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಮೈಸೂರು ಮುಡಾ ಆಯುಕ್ತ ರಘುನಂದನ್ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿಯವರು 14 ಸೈಟ್ ಗಳನ್ನು ಮುಡಾಗೆ ವಾಪಾಸ್ ಮಾಡಿದ್ದಾರೆ. ಅವುಗಳನ್ನು ಮುಡಾ ಪಡೆದಿದೆ ಎಂದರು. ಪಾರ್ವತಿಯವರು ಸ್ವಇಚ್ಛೆಯಿಂದ ತಮಗೆ ನೀಡಿದ್ದಂತ 14 ಸೈಟ್ ಗಳನ್ನು ವಾಪಾಸ್ ಮಾಡಿದ್ದಾರೆ. ಹೀಗಾಗಿ 14 ಮುಡಾ ಸೈಟ್ ಗಳ ಕ್ರಯಪತ್ರ ರದ್ದುಗೊಳಿಸಲಾಗಿದೆ ಎಂಬುದಾಗಿ ತಿಳಿಸಿದರು. ಸ್ವಇಚ್ಛೆಯಿಂದ ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಅವರು ಕೊಟ್ಟಿದ್ದಾರೆ. ನಾವು ಸ್ವೀಕರಿಸಿದ್ದೇವೆ. ಇದನ್ನು ಸರ್ಕಾರದ ಗಮನಕ್ಕೂ ತಂದಿದ್ದೇವೆ ಎಂಬುದಾಗಿ ಹೇಳಿದರು.
ಮೈಸೂರು: ಚೆಕ್ ಬೌನ್ಸ್ ಕೇಸ್ ನಲ್ಲಿ ಕೋರ್ಟ್ ಗೆ ಹಾಜರಾಗದ ಕಾರಣ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಮೈಸೂರಿನ ಕೋರ್ಟ್ ಗೆ ಚೆಕ್ ಬೌನ್ಸ್ ಕೇಸ್ ಸಂಬಂಧ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಜರಾಗಬೇಕಿತ್ತು. ಆದರೇ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಕಾರಣ, ಕೋರ್ಟ್ ಮುಂದೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಡಾ ದೂರುದಾರ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ, ಬಿಗ್ ಶಾಕ್ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅವರು, ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ಕಾರಣ ಕೋರ್ಟ್ ಗೆ ಹಾಜರಾಗಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಕೋರ್ಟ್ ಗೆ ಹಾಜರಾಗುತ್ತೇನೆ. ಜಾಮೀನು ರಹಿತ ವಾರೆಂಟ್ ರೀ ಕಾಲ್ ಮಾಡಿಸುವುದಾಗಿ ಸ್ಪಷ್ಟ ಪಡಿಸಿದರು.













