Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ದಸರಾ ಹಬ್ಬದ ಹೊತ್ತಲ್ಲೇ ಗ್ರಾಹಕರಿಗೆ ಬಿಗ್ ಶಾಕ್. ಇಂದಿನಿಂದ ದೇಶಾದ್ಯಂತ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆಯಲ್ಲಿ ಹೆಚ್ಚಳ ಮಾಡಿವೆ. LPG ಸಿಲಿಂಡರ್ಗಳ ಹೊಸ ದರಗಳನ್ನು ಇಂದು ಅಕ್ಟೋಬರ್ 1 ರಂದು ಬಿಡುಗಡೆ ಮಾಡಲಾಗಿದೆ. ದಸರಾ ಮತ್ತು ದೀಪಾವಳಿಯಂತಹ ಹಬ್ಬಗಳಿಗೆ ಮುನ್ನವೇ ಗ್ರಾಹಕರು ಹಣದುಬ್ಬರದಿಂದ ತತ್ತರಿಸಿದ್ದಾರೆ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಸುಮಾರು 48.50 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇಂದಿನಿಂದ ಎಲ್ಪಿಜಿ ವಾಣಿಜ್ಯ ಸಿಲಿಂಡರ್ ದೆಹಲಿಯಲ್ಲಿ 1740 ರೂ.ಗೆ ಲಭ್ಯವಾಗಲಿದೆ. ಇಂಡೇನ್ ಸಿಲಿಂಡರ್ಗೆ ಈ ದರವಿದೆ. ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಇತ್ತೀಚಿನ ದರಗಳ ಪ್ರಕಾರ, ಅಕ್ಟೋಬರ್ 1, 2024 ರಿಂದ, ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಬೆಲೆ ಮುಂಬೈನಲ್ಲಿ ರೂ 1692.50 ಆಗಿರುತ್ತದೆ, ಕೋಲ್ಕತ್ತಾದಲ್ಲಿ ಇದು ರೂ 1850.50 ಮತ್ತು ಚೆನ್ನೈನಲ್ಲಿ ರೂ 1903 ಆಗಿರುತ್ತದೆ. ಈ ಹಿಂದೆ ಸೆಪ್ಟೆಂಬರ್ನಲ್ಲಿ ಸಹ ಎಲ್ಪಿಜಿ ಸಿಲಿಂಡರ್ ದರ ಸುಮಾರು 39 ರೂಪಾಯಿ ಏರಿಕೆಯಾಗಿ 1691.50 ರೂಪಾಯಿಗೆ ತಲುಪಿತ್ತು.…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (THE KARNATAKA AROGYA SANJEEVINI SCHEME -KASS) ಅನುಷ್ಠಾನಗೊಳಿಸಲು ವಿವಿಧ ಸಮಿತಿಗಳನ್ನು ರಚಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KARNATAKA AROGYA SANJEEVINI SCHEME – KASS) ಎಂಬ ನೂತನ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮುಖಾಂತರ ಅನುಷ್ಠಾನಗೊಳಿಸಲು ಸರ್ಕಾರವು ನಿರ್ಧರಿಸಿ, ಮೇಲೆ (1) ರಿಂದ (3) ರಲ್ಲಿ ಓದಲಾದ ಸರ್ಕಾರದ ಆದೇಶಗಳಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ. ಮೇಲೆ ಓದಲಾದ (2) ರ ಸರ್ಕಾರದ ಆದೇಶ…
ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1)ರ ಏಕ ಕಡತ ಮತ್ತು ಕ್ರಮಾಂಕ (2)ರ ಪತ್ರದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2011 ರಲ್ಲಿ ರಚಿಸಲಾಗಿರುತ್ತದೆ. 2011 ರ ನಂತರ ಸರ್ಕಾರದ ಆದೇಶಗಳಲ್ಲಿ ಕಾಲಕಾಲಕ್ಕೆ ಸಂಘದ ವಸತಿ ಶಾಲೆ/ಕಾಲೇಜುಗಳ ಬೋಧಕ/ಬೋಧಕೇತರ ನೇಮಕಾತಿ, ವಿದ್ಯಾರ್ಹತೆ, ಮುಂಬಡ್ತಿ ಹೀಗೆ ಹಲವಾರು ನಿಯಮಗಳಿಗೆ ತಿದ್ದುಪಡಿ ಮಾಡಿ ಸರ್ಕಾರದ ಆದೇಶಗಳನ್ನು ಹೊರಡಿಸಲಾಗಿರುವ ಬಗ್ಗೆ ಹಾಗೂ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2011 ರ ನಿಯಮಗಳು ರಚನೆಯಾದ ನಂತರ ಸರ್ಕಾರದ ಆದೇಶಗಳಲ್ಲಿ ಮಾಡಿರುವ ನೇಮಕಾತಿ ನಿಯಮಗಳ ತಿದ್ದುಪಡಿಗಳು ಹಾಗೂ ಸರ್ಕಾರದ ಆದೇಶಗಳಲ್ಲಿ ಸಂಘದ ಕೇಂದ್ರ ಕಛೇರಿಗೆ ಹಾಗೂ ವಸತಿ ಶಾಲೆಗಳಿಗೆ ಹಲವು ಹುದ್ದೆಗಳು…
ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ಹೋಬಳಿಯಲ್ಲಿ ವಸತಿ ಶಾಲೆ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ನಾನು ಹಣಕಾಸು ಮಂತ್ರಿಯಾಗಿದ್ದಾಗ , ದಲಿತ ಸಂಘರ್ಷ ಸಮಿತಿಯವರು ಸಾರಾಯಿ ಅಂಗಡಿ ಬೇಡ, ಮಕ್ಕಳಿಗೆ ವಸತಿ ಶಾಲೆ ನಿರ್ಮಾಣವಾಗಬೇಕೆಂಬ ಬೇಡಿಕೆಯನ್ನಾಧರಿಸಿ, 1994-95 ರಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪ್ರಾರಂಭಿಸಲಾಯಿತು. ಹೋಬಳಿಗೊಂದು ವಸತಿ ಶಾಲೆ ಯೋಜನೆಯಂತೆ ರಾಜ್ಯದಲ್ಲಿ ಒಟ್ಟು 822 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ ಎಂದರು. ಈ ವರ್ಷ 20 ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಹಳ್ಳಿಗಾಡಿನ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಮುಂದಿನ ವರ್ಷದೊಳಗೆ ಉಳಿದೆಲ್ಲ ಹೋಬಳಿಗಳಲ್ಲೂ ರಾಜ್ಯದ ಪ್ರತಿ ಹೋಬಳಿಯಲ್ಲಿ ಒಂದು ವಸತಿ ಶಾಲೆ ನಿರ್ಮಿಸುವ ಗುರಿಯನ್ನು ಸಾಧಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆದ್ದರಿಂದ ಹತ್ತನೆ ತರಗತಿಯಲ್ಲಿ ಓದುವ ಮಕ್ಕಳಿಗೆ ವಾರಕ್ಕೆ ಆರು ದಿನ ಮೊಟ್ಟೆ ನೀಡಲಾಗುತ್ತಿದೆ. ಅನ್ನಭಾಗ್ಯದಡಿ 5…
ನವದೆಹಲಿ : ಅಕ್ಟೋಬರ್ ಆರಂಭದಲ್ಲಿ ಗಮನಾರ್ಹ ಬದಲಾವಣೆಗಳು ನಡೆಯಲಿವೆ. ಅಕ್ಟೋಬರ್ 1 ರಿಂದ, TRAI, ಷೇರು ಮಾರುಕಟ್ಟೆ ಮತ್ತು ಬ್ಯಾಂಕಿಂಗ್ಗೆ ಸಂಬಂಧಿಸಿದ ಹೊಸ ನಿಯಮಗಳು ಜಾರಿಗೆ ಬರಲಿವೆ. ಸುಕನ್ಯಾ ಸಮೃದ್ಧಿ ಯೋಜನೆ ಮತ್ತು ಪಿಪಿಎಫ್ಗೆ ಸಂಬಂಧಿಸಿದ ನಿಯಮಗಳನ್ನು ಸಹ ಜಾರಿಗೆ ತರಲಾಗುವುದು, ಇದು ಸಾರ್ವಜನಿಕರ ಮೇಲೆ ಪರಿಣಾಮ ಬೀರುತ್ತದೆ. ಕೆಲವು ನಿಯಮಗಳು ನಷ್ಟಕ್ಕೆ ಕಾರಣವಾಗಬಹುದು ಮತ್ತು ಇತರೆ ನಿಯಮಗಳು ಪ್ರಯೋಜನಕಾರಿಯಾಗಬಹುದು. ಪ್ರತಿ ತಿಂಗಳು, ಮೊದಲ ದಿನ, ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ನಿಗದಿಪಡಿಸುತ್ತವೆ. ಅಕ್ಟೋಬರ್ 1 ರಂದು LPG ಸಿಲಿಂಡರ್ ಬೆಲೆಗಳಲ್ಲಿ ಹೆಚ್ಚಳ ಅಥವಾ ಇಳಿಕೆ ಕಂಡುಬರಬಹುದು. ಹೆಚ್ಚುವರಿಯಾಗಿ, PNB ಉಳಿತಾಯ ಖಾತೆಗಳಿಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ಮಾರ್ಪಡಿಸಲು ಹೊಂದಿಸಲಾಗಿದೆ. ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪ್ರತಿ ತಿಂಗಳು, ಮೊದಲ ದಿನ, ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ನಿಗದಿಪಡಿಸುತ್ತವೆ. ಅಕ್ಟೋಬರ್ 1 ರಂದು LPG ಸಿಲಿಂಡರ್ ಬೆಲೆಗಳಲ್ಲಿ ಹೆಚ್ಚಳ ಅಥವಾ ಇಳಿಕೆ ಕಂಡುಬರಬಹುದು. ಹೆಚ್ಚುವರಿಯಾಗಿ,…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (THE KARNATAKA AROGYA SANJEEVINI SCHEME -KASS) ಅನುಷ್ಠಾನಗೊಳಿಸಲು ವಿವಿಧ ಸಮಿತಿಗಳನ್ನು ರಚಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KARNATAKA AROGYA SANJEEVINI SCHEME – KASS) ಎಂಬ ನೂತನ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮುಖಾಂತರ ಅನುಷ್ಠಾನಗೊಳಿಸಲು ಸರ್ಕಾರವು ನಿರ್ಧರಿಸಿ, ಮೇಲೆ (1) ರಿಂದ (3) ರಲ್ಲಿ ಓದಲಾದ ಸರ್ಕಾರದ ಆದೇಶಗಳಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ. ಮೇಲೆ ಓದಲಾದ (2) ರ ಸರ್ಕಾರದ ಆದೇಶ…
ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣದ ಕುರಿತು ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಿದ್ದು, ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಬಿ.ಆರ್. ಗವಾಯಿ ನೇತೃತ್ವದ ನ್ಯಾಯಾಪೀಠದಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು, ಲಡ್ಡು ವಿವಾದವನ್ನು ಮಾಧ್ಯಮದಲ್ಲಿ ಪ್ರಚಾರ ಮಾಡಿದ್ದು ಏಕೆ? ಜುಲೈನಲ್ಲಿ ವರದಿ ಬಂದರೂ ಕೂಡ ಸೆಪ್ಟೆಂಬರ್ ನಲ್ಲಿ ಬಹಿರಂಗವಾಗಿದೆ. ಇದರ ಉದ್ದೇಶವೇನು? ದೇವರನ್ನು ರಾಜಕೀಯದಿಂದ ದೂರವಿಡಿ. ಇಂತಹ ಪ್ರಚಾರದಿಂದ ಭಕ್ತರ ನಂಬಿಕೆಗೆ ಧಕ್ಕೆ ಆಗುವುದಿಲ್ಲವೇ? ತನಿಖೆ ಪೂರ್ಣ ಆಗೋವವರೆಗೂ ಮಾಧ್ಯಮದಲ್ಲಿ ಪ್ರಚಾರ ಏಕೆ ಮಾಡಿದ್ದೀರಿ? ಇನ್ನಾದರೂ ಬಹಿರಂಗ ಹೇಳಿಕೆ ನೀಡುವುದನ್ನು ತಡೆಯಿರಿ ಎಂದು ರಾಜ್ಯ ಸರ್ಕಾರದ ಪರವಕೀಲರಿಗೆ ಸುಪ್ರೀಂಕೋರ್ಟ್ ತಿಳಿಸಿ ಅಕ್ಟೋಬರ್ 3ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಸುಬ್ರಮಣ್ಯಂ ಸ್ವಾಮಿಯ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜಶೇಖರ್ ರಾವ್ ಅವರು, ತಾವು ಇಲ್ಲಿ ಭಕ್ತನಾಗಿ ಬಂದಿದ್ದೇನೆ ಮತ್ತು ಪ್ರಸಾದದಲ್ಲಿನ ಮಾಲಿನ್ಯದ ಬಗ್ಗೆ ಪತ್ರಿಕೆಗಳಲ್ಲಿ ನೀಡಿರುವ ಹೇಳಿಕೆಯು ದೂರಗಾಮಿ ಪರಿಣಾಮಗಳನ್ನು ಹೊಂದಿದೆ…
ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ ಸೇರಿ ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್ ಪ್ರಜೆ ಸೇರಿ ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳು ಹೆಸರು ಬದಲಾಯಿಸಿಕೊಂಡಿದ್ದರು. ಆರೋಪಿಗಳಾದ ರಶೀದ್ ಎಂಬಾತ ಶಂಕರ್ ಶರ್ಮಾ ಎಂದು ಹೆಸರು ಬದಲಾಯಿಸಿಕೊಂಡಿದ್ದರೆ. ಮೊಹಮ್ಮದ್ ಹನೀಫ್ ಎಂಬಾತ ಬಾಬಾ ಶರ್ಮಾ ಎಂದು ಹೆಸರು ಬದಲಾಯಿಸಿಕೊಂಡಿದ್ದ. ಆರೋಪಿಗಳ ಮನೆಯಲ್ಲಿ ಲ್ಯಾಪ್ ಟಾಪ್ ಸೀಜ್ ಮಾಡಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ನಕಲಿ ಭಾರತೀಯ ಪಾಸ್ಪೋರ್ಟ್ ಹೊಂದಿದ್ದ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರದಿಂದ ಬಂಧಿತರಾಗಿರುವ 4 ಜನರ ಬಗ್ಗೆ ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರು ಪ್ರತಿಕ್ರಿಯೆ ನೀಡಿದ್ದು, “ನನಗೆ ಬಂದ ಮಾಹಿತಿಯ ಪ್ರಕಾರ, ಅವರು ಕಳೆದ 10 ವರ್ಷಗಳಿಂದ ಭಾರತದಲ್ಲಿದ್ದಾರೆ. ಅವರು ಒಂದು ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದಾರೆ. ಅವರು ಇಲ್ಲಿಗೆ ಏಕೆ ಬಂದರು ಎಂದು…
ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸೋಮವಾರ (ಸೆಪ್ಟೆಂಬರ್ 30) ಇಲ್ಲಿಯವರೆಗೆ ಆಡಿದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ನ ಎಲ್ಲಾ ಮೂರು ಆವೃತ್ತಿಗಳಲ್ಲಿ ತಲಾ ಕನಿಷ್ಠ 50 ಬ್ಯಾಟರ್ಗಳನ್ನು ಔಟ್ ಮಾಡಿದ ವಿಶ್ವದ ಮೊದಲ ಬೌಲರ್ ಎಂಬ ಇತಿಹಾಸವನ್ನು ನಿರ್ಮಿಸಿದ್ದಾರೆ. ಐಸಿಸಿ ಟೆಸ್ಟ್ ಬೌಲರ್ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನದಲ್ಲಿರುವ ತಮಿಳುನಾಡಿನ 38 ವರ್ಷದ ಸ್ಪಿನ್ನರ್, ಕಾನ್ಪುರದ ಗ್ರೀನ್ ಪಾರ್ಕ್ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ನಲ್ಲಿ ಎರಡನೇ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದರು. ಅವರು WTC 2023-25 ಸೈಕಲ್ನಲ್ಲಿ 50 ವಿಕೆಟ್ಗಳನ್ನು ಪೂರ್ಣಗೊಳಿಸಲು 56 ನೇ ಓವರ್ನ ಕೊನೆಯ ಎಸೆತದಲ್ಲಿ ಶಕೀಬ್ ಅಲ್ ಹಸನ್ ಅವರನ್ನು ಒಂಬತ್ತು ರನ್ಗಳಿಗೆ ಔಟ್ ಮಾಡಿದರು. WTC ಇತಿಹಾಸದಲ್ಲಿ ಎರಡನೇ ಪ್ರಮುಖ ವಿಕೆಟ್ ಟೇಕರ್ ಆಗಿರುವ ಅಶ್ವಿನ್, 2019-21 WTC ಸೈಕಲ್ನ 14 ಪಂದ್ಯಗಳಲ್ಲಿ 71 ಬ್ಯಾಟರ್ಗಳನ್ನು ಔಟ್ ಮಾಡಿದ್ದಾರೆ. 2021-23ರ ಆವೃತ್ತಿಯಲ್ಲಿ, ಅವರು 13 ಪಂದ್ಯಗಳಲ್ಲಿ 61 ಬ್ಯಾಟರ್ಗಳನ್ನು…
ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಕೃಷಿ ಸಂಸ್ಕರಣ ಘಟಕಗಳಿಗೆ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಗೆ ಬರುವ ರೈತರಿಗೆ ಸಾಮಾನ್ಯ ವರ್ಗದಡಿ ಶೇ.50 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ಆಸಕ್ತ ರೈತರು ಅರ್ಜಿಗಳನ್ನು ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು. ರೈತರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತಿಯಾದಲ್ಲಿ ನಿಯಮಾನುಸಾರ ಜೇಷ್ಠತೆ ಅನ್ವಯ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













