Subscribe to Updates
Get the latest creative news from FooBar about art, design and business.
Author: kannadanewsnow57
ಫ್ಲೋರಿಡಾ: ಆಗ್ನೇಯದಲ್ಲಿ ಹೆಲೀನ್ ಚಂಡಮಾರುತವು ಅಪ್ಪಳಿಸಿದ್ದು, 93 ಮಂದಿ ಮೃತಪಟ್ಟಿದ್ದು, ಲಕ್ಷಾಂತರ ಮಂದಿ ವಿದ್ಯುತ್ ಸಂಪರ್ಕ ಕಳೆದುಕೊಂಡಿದ್ದಾರೆ ಮತ್ತು ಹಲವಾರು ಕುಟುಂಬಗಳು ಪ್ರವಾಹದಲ್ಲಿ ಸಿಲುಕಿವೆ ಎಂದು ಸಿಎನ್ಎನ್ ವರದಿ ಮಾಡಿದೆ ದಕ್ಷಿಣ ಕೆರೊಲಿನಾ, ಜಾರ್ಜಿಯಾ, ಫ್ಲೋರಿಡಾ, ಉತ್ತರ ಕೆರೊಲಿನಾ, ವರ್ಜೀನಿಯಾ ಮತ್ತು ಟೆನ್ನೆಸ್ಸಿಯಲ್ಲಿ ಸಾವುಗಳು ವರದಿಯಾಗಿವೆ. ಉತ್ತರ ಕೆರೊಲಿನಾದಲ್ಲಿ ಕನಿಷ್ಠ 36 ಜನರು ಸಾವನ್ನಪ್ಪಿದ್ದಾರೆ ಎಂದು ಕೌಂಟಿ ಮತ್ತು ರಾಜ್ಯ ಅಧಿಕಾರಿಗಳು ತಿಳಿಸಿದ್ದಾರೆ. ಸಲೂಡಾ ಕೌಂಟಿಯ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ದಕ್ಷಿಣ ಕೆರೊಲಿನಾದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಾರ್ಜಿಯಾದಲ್ಲಿ, ಅಲಾಮೋದಲ್ಲಿ ಸುಂಟರಗಾಳಿಯಿಂದ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಗವರ್ನರ್ ಬ್ರಿಯಾನ್ ಕೆಂಪ್ ಅವರ ವಕ್ತಾರರು ತಿಳಿಸಿದ್ದಾರೆ. ಉತ್ತರ ಕೆರೊಲಿನಾದಲ್ಲಿ, ಕೌಂಟಿ ಮತ್ತು ರಾಜ್ಯ ಅಧಿಕಾರಿಗಳು 36 ಸಾವುನೋವುಗಳನ್ನು ದೃಢಪಡಿಸಿದರೆ, ದಕ್ಷಿಣ ಕೆರೊಲಿನಾದಲ್ಲಿ, ಸಲೂಡಾ ಕೌಂಟಿಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ 25 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜಾರ್ಜಿಯಾದಲ್ಲಿ, ಗವರ್ನರ್…
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜಸ್ರೋಟಾ ಬೆಲ್ಟ್ನಲ್ಲಿ ಭಾನುವಾರ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಈ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಹೆಡ್ ಕಾನ್ಸ್ಟೇಬಲ್ಗೆ ಖರ್ಗೆ ಗೌರವ ಸಲ್ಲಿಸುತ್ತಿದ್ದಾಗ ಅವರು ಅಸ್ವಸ್ಥರಾಗಲು ಪ್ರಾರಂಭಿಸಿದರು. ಖರ್ಗೆ ಅವರು ತಮ್ಮ ಭಾಷಣದ ಸಮಯದಲ್ಲಿ ತಲೆತಿರುಗಿ ಕುಳಿತುಕೊಳ್ಳಬೇಕಾಯಿತು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುಲಾಮ್ ಅಹ್ಮದ್ ಮಿರ್ ಪಿಟಿಐಗೆ ತಿಳಿಸಿದ್ದಾರೆ. “ಅವರ ಸಹೋದ್ಯೋಗಿಗಳು ಅವರನ್ನು ಕುರ್ಚಿಯ ಮೇಲೆ ಕೂರಿಸಲು ಸಹಾಯ ಮಾಡಿದರು. ವೈದ್ಯಕೀಯ ಚಿಕಿತ್ಸೆ ಪಡೆದ ನಂತರ ಅವರು ಈಗ ಸ್ಥಿರವಾಗಿದ್ದಾರೆ” ಎಂದು ಮಿರ್ ಹೇಳಿದರು. ರ್ಯಾಲಿ ಸ್ಥಳದಲ್ಲಿ ಚಿಕಿತ್ಸೆ ಪಡೆದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, “ನನಗೆ 83 ವರ್ಷ ವಯಸ್ಸು.…
ಬೆಂಗಳೂರು: ರಾಜ್ಯದ ಜಿಲ್ಲಾ ಕೇಂದ್ರ ಸೇರಿದಂತೆ ತಾಲ್ಲೂಕು ಕೇಂದ್ರಗಳಲ್ಲಿಯೂ ನಮ್ಮ ಕ್ಲಿನಿಕ್ ತೆರೆಯಲಾಗಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ ವಾರ್ಡ್ ಮಟ್ಟದಲ್ಲಿಯೂ ನಮ್ಮ ಕ್ಲಿನಿಕ್ ಓಪನ್ ಮಾಡಲಾಗಿದೆ. ಈ ನಮ್ಮ ಕ್ಲಿನಿಕ್ ನಲ್ಲಿ ಇನ್ಮುಂದೆ ನೇತ್ರ ಚಿಕಿತ್ಸೆ, ಮಕ್ಕಳಿಗೆ ವಿವಿಧ ಲಸಿಕೆ ಹಾಕುವಂತ ನಿರ್ಧಾರಕ್ಕೂ ಸರ್ಕಾರ ಮುಂದಾಗಿದೆ. ಪ್ರಾಯೋಗಿಕ ಎನ್ನುವಂತೆ ರಾಜ್ಯದ ರಾಜಧಾನಿ ಬೆಂಗಳೂರಿನ ನಮ್ಮ ಕ್ಲಿನಿಕ್ ನಲ್ಲಿ ಶೀಘ್ರದಲ್ಲೇ ಕಣ್ಣಿನ ಪರೀಕ್ಷೆ ಹಾಗೂ ಅದಕ್ಕೆ ಚಿಕಿತ್ಸೆಯಂತ ಸೌಲಭ್ಯಗಳು ದೊರೆಯಲಿದ್ದಾವೆ. ಅಲ್ಲದೇ ಮಕ್ಕಳಿಗೆ ವಿವಿಧ ಲಸಿಕಾಕರಣ ಕೂಡ ನಡೆಯಲು ತಯಾರಿ ನಡೆಸಲಾಗಿದೆ. ಇನ್ನೂ ನಾಯಿ ಕಡಿತಕ್ಕೆ ಚುಚ್ಚುಮದ್ದು ಸೇರಿದಂತೆ ಇನ್ನೂ ಕೆಲವು ಸೇವೆಗಳನ್ನು ಆರಂಭಿಸುವ ಮೂಲಕ ನಮ್ಮ ಕ್ಲಿನಿಕ್ ಗಳನ್ನು ಮೇಲ್ದರ್ಜೆಗೆ ಏರಿಸೋದಕ್ಕೆ ಬಿಬಿಎಂಪಿ ಮುಂದಾಗಿದೆ. ಈ ಸೇವೆಯನ್ನು ರಾಜ್ಯಾಧ್ಯಾಂತ ಇರುವಂತ ನಮ್ಮ ಕ್ಲಿನಿಕ್ ಗಳಲ್ಲಿಯೂ ಪ್ರಾರಂಭಿಸುವಂತ ಆಲೋಚನೆ ಇದೆ. ಅಂದಹಾಗೇ ಕಳೆದ ಎರಡು ವರ್ಷಗಳ ಹಿಂದೆ ನಗರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ದೆಹಲಿಯ ಮೊಹಲ್ಲಾ ಕ್ಲಿನಿಕ್ ಮಾದರಿಯಲ್ಲೇ ಕರ್ನಾಟಕದಲ್ಲೂ…
ರಾಮದುರ್ಗ : ಜನರ ಬೆಂಬಲ ನೋಡಿದ್ರೆ ಬಿಜೆಪಿಯಿಂದ ಮುಂದೆ ನಾನೇ ಸಿಎಂ ಆಗುತ್ತೇನೆ. ಹಿಂದುಪರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲ್ಲ.. ರಾಯಣ್ಣಗೆ ತಮ್ಮವರೇ ಮೋಸ ಮಾಡಿದ್ದು, ನನಗೂ ನನ್ನ ಜೊತೆ ಇದ್ದವರೆ ಚೂರಿ ಹಾಕುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದರು. ಕೆಲವರು ಸಿಎಂ ಆಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ.ಇದರಲ್ಲಿ ಕಾಂಗ್ರೆಸ್ನವರೂ ಇದ್ದಾರೆ, ಬೇರೆ ಪಕ್ಷದವರೂ ಇದ್ದಾರೆ. ಸಾವಿರ ಕೋಟಿ ಹಣ ಇಟ್ಟುಕೊಂಡು ಸಿಎಂ ಆಗಲು ಸಿದ್ಧರಿದ್ದಾರೆ ಎಂದು ಸ್ಪೋಟಕ ವಾದಂತಹ ಹೇಳಿಕೆಯನ್ನು ನೀಡಿದ್ದಾರೆ. ಬಿಜೆಪಿಯಲ್ಲಿ ಭಿನ್ನಮತ ಇದೆ. ಪಕ್ಷದ ಗೊಂದಲಗಳ ಬಗ್ಗೆ ಹೈಕಮಾಂಡ್ಗೆ ಮಾಹಿತಿ ರವಾನೆ ಮಾಡಲಾಗಿದೆ. ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚಿಸಿದೆ. ಹೀಗಾಗಿ ನಾವು ಹೆಚ್ಚು ಮಾತಾಡಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾಯಿಸುವ ಅಧಿಕಾರ ನಮಗಿಲ್ಲ. ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ. ಹೈಕಮಾಂಡ್ ಯಾವ ನಿರ್ಧಾರ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಇಂದಿನಿಂದ ಲೋಕಾಯುಕ್ತದಿಂದ ತನಿಖೆ ಆರಂಭವಾಗಲಿದೆ. ‘ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಗೆ ಆದೇಶ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426,…
ಬೀದರ್ : ನಿನ್ನೆ ರಾಜ್ಯಾದ್ಯಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಪರೀಕ್ಷಾರ್ಥಿಯೊಬ್ಬ ಪರೀಕ್ಷಾ ಪ್ರಾಧಿಕಾರಕ್ಕೆ ದೂರು ನೀಡಿದ್ದಾನೆ.ಈ ಕುರಿತಂತೆ ಪರೀಕ್ಷೆ ಬರೆದ ಅಭ್ಯರ್ಥಿ ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದಾನೆ. ಹೌದು ಭಾನುವಾರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗಿದೆ. ಈ ವೇಳೆ ಬೀದರ್ ಜಿಲ್ಲಾ ಕೇಂದ್ರದಲ್ಲಿನ ದತ್ತಗಿರಿ ಕಾಲೇಜಿನ ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಾತಿ ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುತ್ತಿದ್ದ ಕೇಂದ್ರದಲ್ಲಿ ಈ ಎಡವಟ್ಟು ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಹಾಜರಾಗಿದ್ದ ಅಭ್ಯರ್ಥಿ ತಮಗೆ ಸೀಲ್ ಓಪನ್ ಮಾಡಿದ ಪ್ರಶ್ನೆ ಪತ್ರಿಕೆ ಬಂದಿದ್ದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆ ಚಿಂಚೋಳಿ ಮೂಲದ ಸಂತೋಷ್ ಎಂಬ ಪರೀಕ್ಷಾರ್ಥಿ, ಬೀದರ್ ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಗ್ರಾಮ…
ನವದೆಹಲಿ : ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, ಇತ್ತೀಚೆಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ಪರಿಷ್ಕರಿಸಿ 70 ವರ್ಷ ಮೇಲ್ಪಟ್ಟ ಹಿರಿಯರಿಗೆ 5 ಲಕ್ಷ ರೂ.ವರೆಗೆ ಪ್ರತ್ಯೇಕ ವಿಮಾ ಸೌಲಭ್ಯವನ್ನು ಜಾರಿಗೆ ತಂದಿದ್ದು, ಅರ್ಹರನ್ನು ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದು ರಾಜ್ಯಗಳಿಗೆ ಸೂಚನೆ ನೀಡಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಈಗ ₹ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯುತ್ತಾರೆ ಎಂದು ಭಾರತ ಸರ್ಕಾರ ಘೋಷಿಸಿದೆ. ನಿಮ್ಮ ಕುಟುಂಬವು ಯೋಜನೆಗೆ ಅರ್ಹವಾಗಿದೆಯೇ ಅಥವಾ ಇಲ್ಲವೇ ಎಂಬುದರ ಹೊರತಾಗಿಯೂ, ಹಿರಿಯ ನಾಗರಿಕರು ಇದರ ಪ್ರಯೋಜನವನ್ನು ಪಡೆಯುತ್ತಾರೆ. ಆದಾಗ್ಯೂ, ಈ ಪ್ರಯೋಜನಗಳನ್ನು ಪಡೆಯಲು ಯೋಜನೆಯಲ್ಲಿ ನೋಂದಣಿ ಅಗತ್ಯವಿದೆ. ನೋಂದಣಿ ನಂತರ, ಹಿರಿಯ ನಾಗರಿಕರಿಗೆ ಹೊಸ ಕಾರ್ಡ್ ನೀಡಲಾಗುತ್ತದೆ. ಈ ಯೋಜನೆಯು ಬಡವರು ಮತ್ತು ಶ್ರೀಮಂತರು ಇಬ್ಬರಿಗೂ ಲಭ್ಯವಿದೆ. ಆಯುಷ್ಮಾನ್ ಭಾರತ್ ಯೋಜನೆಗೆ ಹೇಗೆ ನೋಂದಾಯಿಸಿಕೊಳ್ಳುವುದು ಮತ್ತು ಆಯುಷ್ಮಾನ್ ಭಾರತ್ ಕಾರ್ಡ್ ಪಡೆಯಲು ಅಗತ್ಯವಾದ…
ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ, ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ ಸುವರ್ಣ ರಥದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ಮನುಷ್ಯರಿಗೆ ಸಂಪತ್ತನ್ನು ದಯಪಾಲಿಸುತ್ತಾರೆ ಮತ್ತು…
ಸಾವಳಗಿ : ವಾಕರಸಾ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳ ಕೊರತೆ ಇದ್ದು, 2000 ಚಾಲನಾ ಸಿಬ್ಬಂದಿಗಳ ನೇಮಕಕ್ಕೆ ಅನುಮೋದನೆಯನ್ನು ನೀಡಿದ್ದು, ಈಗಾಗಲೇ 1000 ಜನರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ. ದಿನಾಂಕ 28-09-2024 ರಂದು ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣಗಳನ್ನು ಉದ್ಘಾಟನೆಗೊಳಿಸಿದ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿರಾದ ರಾಮಲಿಂಗಾರೆಡ್ಡಿ ರವರು ಮಾತನಾಡುತ್ತ, ವಾಕರಸಾ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳ ಕೊರತೆ ಇದ್ದು, 2000 ಚಾಲನಾ ಸಿಬ್ಬಂದಿಗಳ ನೇಮಕಕ್ಕೆ ಅನುಮೋದನೆಯನ್ನು ನೀಡಿದ್ದು, ಈಗಾಗಲೇ 1000 ಜನರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ನಾನು ಈ ಹಿಂದೆ ಸಾರಿಗೆ ಮಂತ್ರಿಯಾಗಿದ್ದ ಸಮಯದಲ್ಲಿ ನವನಗರ, ಜಮಖಂಡಿ, ತೇರದಾಳ, ಬಾದಾಮಿ, ಹುನಗುಂದ,ಬಾಡಗಂಡಿ, ಹಾಗು ಯಡಹಳ್ಳಿ ನೂತನ ಬಸ್ ನಿಲ್ದಾಣಗಳ ನಿರ್ಮಾಣ ಮಾಡಲಾಗಿತ್ತು. ಬಾಗಲಕೋಟೆ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಬಸ್ ನಿಲ್ದಾಣಗಳನ್ನು ನಿರ್ಮಿಸಿದ್ದೇವೆ. ಕಳೆದ 5 ವರ್ಷಗಳಿಂದ ಹೊಸ ಬಸ್ಸುಗಳ ಖರೀದಿ ಇರಲಿಲ್ಲ. ಈಗ ನಮ್ಮ ಸರ್ಕಾರ ಬಂದ ಮೇಲೆ ಹೊಸ ಬಸ್ಸುಗಳನ್ನು ಖರೀದಿ…
ನವದೆಹಲಿ : ಭಾರತದಲ್ಲಿನ ನಾಗರಿಕರನ್ನು ಸರಿಯಾಗಿ ಗುರುತಿಸಲು ಆಧಾರ್ ಅನ್ನು ಪ್ರಮುಖ ದಾಖಲೆ ಎಂದು ಪರಿಗಣಿಸಲಾಗುತ್ತದೆ. ಇಂದಿನ ಯುಗದಲ್ಲಿ, ಇದು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕೆಲಸಗಳಲ್ಲಿ ಬಳಸಲ್ಪಡುತ್ತದೆ, ಆಧಾರ್ ವಿಶಿಷ್ಟ ಗುರುತಿನ ಪ್ರಾಧಿಕಾರ ಅಥವಾ UIDAI ಆಧಾರ್ ಕಾರ್ಡ್ ಅನ್ನು 14 ಡಿಸೆಂಬರ್ 2024 ಕ್ಕೆ ಉಚಿತವಾಗಿ ನವೀಕರಿಸಲು ಗಡುವನ್ನು ನಿಗದಿಪಡಿಸಿದೆ. ಅಕ್ಟೋಬರ್ 2024 ರಿಂದ ನವೀಕರಿಸಲಾಗಿದೆ. ಇದಕ್ಕೆ ಸಂಬಂಧಿಸಿದ ನಿಯಮಗಳಲ್ಲಿ ದೊಡ್ಡ ಬದಲಾವಣೆಯಾಗಲಿದೆ. ವಾಸ್ತವವಾಗಿ, ಕೇಂದ್ರ ಬಜೆಟ್ 2024 ರಲ್ಲಿ, ಆಧಾರ್ ಸಂಖ್ಯೆಗೆ ಬದಲಾಗಿ ಆಧಾರ್ ನೋಂದಣಿ ಐಡಿಯನ್ನು ಉಲ್ಲೇಖಿಸುವುದನ್ನು ನಿಲ್ಲಿಸಲು ಪ್ರಸ್ತಾಪಿಸಲಾಗಿದೆ, ಇದರ ಅಡಿಯಲ್ಲಿ, ಐಟಿಆರ್ ಮತ್ತು ಪ್ಯಾನ್ ಅಪ್ಲಿಕೇಶನ್ಗಳಲ್ಲಿ ಆಧಾರ್ ಸಂಖ್ಯೆಯ ಬದಲಿಗೆ ಆಧಾರ್ ನೋಂದಣಿ ಐಡಿಯನ್ನು ಉಲ್ಲೇಖಿಸಲು ಅನುಮತಿಸುವ ನಿಬಂಧನೆಗಳು ಇರುವುದಿಲ್ಲ ಅಕ್ಟೋಬರ್ 1, 2024 ರಿಂದ ಅನ್ವಯವಾಗುತ್ತದೆ, ಅಂದರೆ ಪ್ಯಾನ್ ಹಂಚಿಕೆಗಾಗಿ ಮತ್ತು ನಿಮ್ಮ ಆದಾಯ ತೆರಿಗೆ ರಿಟರ್ನ್ನಲ್ಲಿ ನಿಮ್ಮ ಆಧಾರ್ ದಾಖಲಾತಿ ಐಡಿಯನ್ನು ಇನ್ನು ಮುಂದೆ ನಮೂದಿಸಲು ನಿಮಗೆ ಸಾಧ್ಯವಾಗುವುದಿಲ್ಲ. ಕಾಯಿದೆಯ…












