Subscribe to Updates
Get the latest creative news from FooBar about art, design and business.
Author: kannadanewsnow57
ಕಳೆದ ಕೆಲವು ವರ್ಷಗಳಲ್ಲಿ, ಸೈಬರ್ ಅಪರಾಧ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ತಡೆಗಟ್ಟುವಿಕೆಗಾಗಿ ಸರ್ಕಾರ ಮತ್ತು ತಂತ್ರಜ್ಞಾನ ಕಂಪನಿಗಳು ವಿವಿಧ ಮಾರ್ಗಸೂಚಿಗಳನ್ನು ಹೊರಡಿಸಿವೆ. ನಿರ್ಲಕ್ಷ್ಯ ವಹಿಸಿದರೆ ವೈಯಕ್ತಿಕ ಮಾಹಿತಿ ಸೋರಿಕೆಯಾಗಬಹುದು ಎಂದು ಎಲ್ಲರೂ ತಿಳಿದುಕೊಳ್ಳುವುದು ಬಹಳ ಮುಖ್ಯ. ಬ್ಯಾಂಕ್ ಖಾತೆಯನ್ನು ಸಹ ಖಾಲಿ ಮಾಡಬಹುದು. ಜನರನ್ನು ವಂಚಿಸಲು ಸೈಬರ್ ಅಪರಾಧಿಗಳು ವಿಭಿನ್ನ ವಿಧಾನಗಳನ್ನು ಅಳವಡಿಸಿಕೊಳ್ಳುತ್ತಾರೆ. ಮೊಬೈಲ್ ಫೋನ್ ಬಳಕೆದಾರರಿಗೆ ಬೆದರಿಕೆಗಿಂತ ಕಡಿಮೆಯಿಲ್ಲದ ಕೆಲವು ಅಪಾಯಕಾರಿ ಅಪ್ಲಿಕೇಶನ್ಗಳು ಸಂಶೋಧನೆಯಲ್ಲಿ ಬಹಿರಂಗಗೊಂಡಿವೆ. ಸಂಶೋಧನೆಯಲ್ಲಿ ನಕಲಿ ಅಪ್ಲಿಕೇಶನ್ಗಳು ಬಹಿರಂಗಗೊಂಡಿವೆ ಸೈಬಲ್ ರಿಸರ್ಚ್ ಮತ್ತು ಇಂಟೆಲಿಜೆನ್ಸ್ ಲ್ಯಾಬ್ಸ್ (CRIL) ತನ್ನ ಒಂದು ಸಂಶೋಧನೆಯ ಮೂಲಕ ಸುಮಾರು 20 ಅಪ್ಲಿಕೇಶನ್ಗಳನ್ನು ಬಹಿರಂಗಪಡಿಸಿದೆ. ಈ ಎಲ್ಲಾ ಅಪ್ಲಿಕೇಶನ್ಗಳು ಬಳಕೆದಾರರ ವೈಯಕ್ತಿಕ ಡೇಟಾವನ್ನು ಕದಿಯುತ್ತಿವೆ ಎಂದು ಹೇಳಲಾಗುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಬಳಕೆದಾರರ ಗೌಪ್ಯತೆಯು ಅಪಾಯದಲ್ಲಿದೆ. ಬಹಿರಂಗಪಡಿಸುವುದರ ಜೊತೆಗೆ, ಈ ಅಪ್ಲಿಕೇಶನ್ಗಳನ್ನು ಫೋನ್ನಿಂದ ತೆಗೆದುಹಾಕಲು ಸೂಚಿಸಲಾಗಿದೆ. ಯಾವ ರೀತಿಯ ಅಪ್ಲಿಕೇಶನ್ಗಳು ಅಪಾಯಕಾರಿ? CRIL ಪ್ರಕಾರ, ಬಳಕೆದಾರರ ವೈಯಕ್ತಿಕ ಡೇಟಾ ಮತ್ತು ಗೌಪ್ಯತೆಗೆ ಅಪಾಯಕಾರಿಯಾದ…
ಶಾಲಾ ಬಸ್ಗಳಿಗೆ ಹಳದಿ ಬಣ್ಣ ಬಳಿಯುವುದನ್ನು ನೀವು ಎಂದಾದರೂ ಗಮನಿಸಿದ್ದೀರಾ, ಅದರ ಹಿಂದೆ ಏನಾದರೂ ವೈಜ್ಞಾನಿಕ ಕಾರಣವಿದೆಯೇ? ಈ ಲೇಖನದ ಮೂಲಕ ತಿಳಿದುಕೊಳ್ಳಿ. ಪ್ರತಿಯೊಂದು ಶಾಲಾ ಬಸ್ಸು ತನ್ನ ಶಾಲೆಯ ಹೆಸರನ್ನು ಹೊಂದಿದೆ ಮತ್ತು ಈ ಬಸ್ಸುಗಳಿಗೆ ಹಳದಿ ಬಣ್ಣ ಹಾಕಿರುವುದನ್ನು ನೀವು ಗಮನಿಸಿರಬೇಕು. ಬಣ್ಣಗಳು ತಮ್ಮದೇ ಆದ ಪ್ರಾಮುಖ್ಯತೆಯನ್ನು ಹೊಂದಿವೆ. ನಾವು ನೋಡಿದರೆ, ಟ್ರಾಫಿಕ್ ದೀಪಗಳಲ್ಲಿ ವಿವಿಧ ಬಣ್ಣದ ದೀಪಗಳನ್ನು ಅಳವಡಿಸಲಾಗಿದ್ದು, ಅದರ ಸಹಾಯದಿಂದ ದಟ್ಟಣೆಯನ್ನು ನಿಯಂತ್ರಿಸಲಾಗುತ್ತದೆ. ಅದೇ ರೀತಿ ಶಾಲಾ ಬಸ್ಗೂ ಹಳದಿ ಬಣ್ಣ ನೀಡಲಾಗಿದೆ. ಏಕೆ ಹಳದಿ ಬಣ್ಣ? ಬಿಳಿ ಬೆಳಕಿನ ವಿವಿಧ ಘಟಕಗಳಲ್ಲಿ, ಕೆಂಪು ಬಣ್ಣವು ಗರಿಷ್ಠ ತರಂಗಾಂತರವನ್ನು ಹೊಂದಿದೆ ಎಂದು ನಮಗೆಲ್ಲರಿಗೂ ತಿಳಿದಿದೆ (ತರಂಗಾಂತರವು ಸುಮಾರು 650 nm) ಮತ್ತು ಆದ್ದರಿಂದ ಅದು ಸುಲಭವಾಗಿ ಚದುರಿಹೋಗುವುದಿಲ್ಲ ಮತ್ತು ದೂರದಿಂದಲೂ ಸ್ಪಷ್ಟವಾಗಿ ಗೋಚರಿಸುತ್ತದೆ. ಕೆಂಪು ಬಣ್ಣವು ಸಾಮಾನ್ಯವಾಗಿ ಎಚ್ಚರಿಕೆಯೊಂದಿಗೆ ಸಂಬಂಧಿಸಿರುವುದರಿಂದ, ಶಾಲಾ ಬಸ್ ಅನ್ನು ಚಿತ್ರಿಸಲು ಇದು ಉತ್ತಮ ಆಯ್ಕೆಯಾಗಿರುವುದಿಲ್ಲವೇ? ಈಗ ಶಾಲಾ ಬಸ್ಗಳಿಗೆ ಕೆಂಪು…
ಬೆಂಗಳೂರು : ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ ಆಯ್ಕೆ ಪರೀಕ್ಷೆಯ ಮೂಲಕ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈಸನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2025 ನೇ ಜುಲೈ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿರುವ ಸಂಬಂಧಿಸಿದ ಜವಾಹರ ನವೋದಯ ವಿದ್ಯಾಲಯಗಳ ಆಯಾ ಜಿಲ್ಲೆಯ ನಿವಾಸಿಗಳು ಆಗಿರಬೇಕು ಮತ್ತು 2025-26 ನೇ ಶೈಕ್ಷಣಿಕ ವರ್ಷದಲ್ಲಿ ಅದೇ ಜಿಲ್ಲೆಯ ಸರ್ಕಾರಿ/ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ವಿದ್ಯಾರ್ಥಿಯು 3 ಮತ್ತು 4 ನೇ ತರಗತಿಯ ಪೂರ್ಣ ಶೈಕ್ಷಣಿಕ ವರ್ಷವನ್ನು ಸರ್ಕಾರಿ/ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಪೂರ್ಣಾವಧಿ ಶಾಲಾ ಶಿಕ್ಷಣ ಪಡೆದು ತೇರ್ಗಡ ಹೊಂದಿರಬೇಕು. ದಿನಾಂಕ:01-05-2014 ರಿಂದ ದಿನಾಂಕ: 31-07-2016 ಮಧ್ಯೆ ಜನಿಸಿದವರಾಗಿರಬೇಕು. ಪ್ರತಿ ಜಿಲ್ಲೆಯಲ್ಲಿ ಸಹ ಶಿಕ್ಷಣ ವಸತಿ ಶಾಲೆಗಳು, ಬಾಲಕ ಮತ್ತು…
ಬೆಂಗಳೂರು: ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದಂತ ಪ್ರಕರಣ ಸಂಬಂಧ ನಿಖಿಲ್ ಸೋಸಲೆ ಎಂಬುವರನ್ನು ಬಂಧಿಸಲಾಗಿತ್ತು. ಈ ಬಂಧನ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಬಂಧನಕ್ಕೆ ಒಳಗಾದವರ ಅರ್ಜಿಯ ವಿಚಾರಣೆ ಇಂದು ನಡೆಸಲಿದೆ. ನಿನ್ನೆ ಸಿಸಿಬಿಯು ಅಕ್ರಮವಾಗಿ ತಮ್ಮನ್ನು ಬಂಧಿಸಲಾಗಿದೆ ಎಂಬುದಾಗಿ ಆರ್ ಸಿ ಬಿ ಮ್ಯಾನೇಜರ್ ನಿಖಿಲ್ ಸೋಸಲೆ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ನಿಖಿಲ್ ಸೋಸಲೆ ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟ ಅವರು ವಾದಿಸಿದರು. ರಾಜ್ಯ ಸರ್ಕಾರ ಸಿಸಿಬಿಯಿಂದ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ತಮ್ಮ ಕಕ್ಷಿದಾರರನ್ನು ಬಂಧಿಸಲಾಗಿದ. ಇದು ಕಾನೂನು ಉಲ್ಲಂಘಿಸಿ ಬಂಧಿಸಿದಂತ ಬಂಧನವಾಗಿದೆ. ನಿಖಿಲ್ ಸೋಸಲೆಗೆ ಮಧ್ಯಂತರ ಜಾಮೀನು ನೀಡುವಂತೆ ಹೈಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿದರು. ಈ ವೇಳೆ ಹೈಕೋರ್ಟ್ ನಿಖಿಲ್ ಸೋಸಲೆಯನ್ನು ಬಂಧಿಸುವಂತ ಅಧಿಕಾರ ಸಿಸಿಬಿಗೆ ಇತ್ತೆ ಎಂಬುದಾಗಿ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದಂತ ಎಜೆ…
ಬೆಂಗಳೂರು: ಜು.1ರಿಂದ ಆನ್ಲೈನ್ನಲ್ಲಿ ನಂಬಿಕೆ ನಕ್ಷೆ ಸೇರಿ ಕಟ್ಟಡ ಅನುಮತಿಗೆ ಕೋರಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಇ-ಖಾತಾ ಸಲ್ಲಿಸುವುದನ್ನೂ ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಕಟ್ಟಡ ನಕ್ಷೆಗಳ ಮಂಜೂರಾತಿ ಕೋರಿ ಸಲ್ಲಿಸುವ ಪ್ರಸ್ತಾವನೆಗಳ ಸ್ವತ್ತಿನ ದಾಖಲಾತಿಗಳ ಪರಿಶೀಲನೆಗೆ ಪಾಲಿಕೆಯ ಕಂದಾಯ ವಿಭಾಗಕ್ಕೆ ಕಳುಹಿಸುವ ಕ್ರಮವನ್ನು ಪಾಲಿಕೆ ರದ್ದುಪಡಿಸಲಿದೆ. ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶ ಜಾರಿ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೆ ಇ- ಖಾತಾ ನೀಡಲಾಗುತ್ತಿದೆ. ಇಂತಹ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯ ಇದೆ. ನಿವೇಶನ, ಸ್ವತ್ತಿನ ಕಂದಾಯ ದಾಖಲಾತಿಗಳ ಪರಿಶೀಲನಾ ತಂತ್ರಾಂಶದಲ್ಲಿ ಜು.1ರಿಂದ ಸ್ವತ್ತಿನ ಇ-ಖಾತಾ, ಇಪಿಐಡಿ ಸಂಖ್ಯೆಯನ್ನು ಆನ್ಲೈನ್ನಲ್ಲಿ ನಮೂದಿಸುವ ಅಗತ್ಯ ಇದೆ. ಇದರಿಂದಾಗಿ ಕಂದಾಯ ವಿಭಾಗಕ್ಕೆ ಸ್ವತ್ತಿನ ದಾಖಲಾತಿಗಳ ಪರಿಶೀಲನೆಗೆ ಸಲ್ಲಿ ಸುವ ಕ್ರಮ ಹೊರತುಪಡಿಸಿರುವುದರಿಂದ ಪಾಲಿಕೆ ನೀಡುವ ಸೇವೆಗಳನ್ನು ಸರಳೀಕರಣ ಮತ್ತು ಕಾಲಮಿತಿಯಲ್ಲಿ ನಕ್ಷೆ ಮಂಜೂರಾತಿಗೆ ನೆರವಾಗಲಿದೆ.
ಬೆಂಗಳೂರು: ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಯಡಿ ವಾರ್ಷಿಕ ವಿದ್ಯುತ್ ಬಳಕೆಯ ಸರಾಸರಿ ಮಾನದಂಡ ಪರಿಷ್ಕರಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಯಡಿ ವಾರ್ಷಿಕ ವಿದ್ಯುತ್ ಬಳಕೆಯ ಸರಾಸರಿ ಮಾನದಂಡ ಪರಿಷ್ಕರಿಸುವುದಿಲ್ಲ,ಆದರೆ ಯೋಜನೆ ಫಲಾನುಭವಿಗಳು ಪಿಎಂ ಸೂರ್ಯಘರ್ ಯೋಜನೆಯ ಲಾಭಪಡೆಯಬಹುದೆಂದು ಮಾಹಿತಿ ನೀಡಿದ್ದಾರೆ. ಇನ್ನು ರಾಜ್ಯದಲ್ಲಿ ಕುಸುಮ್-ಸಿ ಯೋಜನೆ ಮೂಲಕ ಡಿಸೆಂಬರ್ ವೇಳೆಗೆ 2,400 ಮೆ. ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಿದ್ದು, ರೈತರಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಈ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ನಾಳೆ ಗೌರಿಬಿದನೂರಿನಲ್ಲಿ ಅಧಿಕೃತ ಚಾಲನೆ ನೀಡಲಿದ್ದಾರೆ
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 15 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ. ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಜೂ.12ರಿಂದ ಜೂ.13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಕೊಟ್ಟಿದೆ. ಜೂ.13ರಂದು ಹಾವೇರಿ, ಧಾರವಾಡ ಮತ್ತು ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು: ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮಗ್ರ ಸಮೀಕ್ಷೆ ಕಾರ್ಯಾವಧಿ ವಿಸ್ತರಿಸಿ ಆದೇಶಿಸಲಾಗಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Emperical Data) ಸಂಗ್ರಹಿಸುವ ಕುರಿತು ದಿನಾಂಕ: 05-05-2025 ರಿಂದ ಸಮೀಕ್ಷಾ ಕಾರ್ಯವನ್ನು ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ಇನ್ನೂ ಪ್ರಗತಿಯಾಗಬೇಕಾಗಿರುವುದರಿಂದ, ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಅನೇಕ ಪರಿಶಿಷ್ಟ ಜಾತಿ ಸಂಘಗಳಿಂದ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೋರಿಕೆಯ ಮೇರೆಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಅನುವಾಗುವಂತೆ ಈ ಕೆಳಕಂಡಂತೆ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ. ಪ್ರಸ್ತುತ ದಿನಾಂಕ: 02.06.2025 ರಿಂದ ದಿನಾಂಕ: 08.06.2025 ರವರೆಗೆ ಕೇವಲ ವಿಶೇಷ ಶಿಬಿರಗಳು ಮತ್ತು ಆನ್-ಲೈನ್ ಲಿಂಕ್ ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳುವುದರ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ದಿನಾಂಕ:06-06-2025 ರವರೆವಿಗೆ ರಾಜ್ಯಾದ್ಯಂತ ಸಮೀಕ್ಷೆಯಲ್ಲಿ ಶೇ. 90.00 ರಷ್ಟು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮ ಪಂಚಾಯ್ತಿ ಸಂಗ್ರಹಿಸಲು ಅವಕಾಶ ನೀಡಿ ಸರ್ಕಾರ ಆದೇಶಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಸಿ), 94-(ಸಿಸಿ), 94-(ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡಲು ಕೈಗೊಳ್ಳಬೇಕಾದ ಪುಕ್ರಿಯೆಗಳ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಡಿ) ರಡಿಯಲ್ಲಿ ಕಂದಾಯ ಇಲಾಖೆಯಿಂದ ವಿತರಣೆ ಮಾಡಲಾದ ಹಕ್ಕುಪತ್ರಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉಂಟಾದ ಗೊಂದಲಗಳಿಗೆ ಸಂಬಂಧಿಸಿದಂತೆ…
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕುಸುಮ್-ಸಿ ಸೋಲಾರ್ ಯೋಜನೆ ಉದ್ಘಾಟಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಸಬ್ಸಿಡಿ ಸೌರಶಕ್ತಿ ಚಾಲಿತ ನೀರಾವರಿ ಪಂಪ್ಗಳೊಂದಿಗೆ ರೈತರಿಗೆ ಬೆಂಬಲ ನೀಡಲು ಸರ್ಕಾರ ಮುಂದಾಗಿದೆ. ಜೂನ್ 11 ರಂದು ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಕುಸುಮ್-ಸಿ ಯೋಜನೆಯ ಅನುಷ್ಠಾನವನ್ನು ಉದ್ಘಾಟನೆಯನ್ನು ಮಾಡಲಾಗುತ್ತದೆ. ಇದು ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ (PM-Kusum)ಯೋಜನೆಯ ಒಂದು ಭಾಗವಾಗಿದೆ. ಸರ್ಕಾರಿ ಭೂಮಿ ಲಭ್ಯವಿರುವಲ್ಲೆಲ್ಲಾ ಫಲಕಗಳನ್ನು ಅಳವಡಿಸಲಾಗುತ್ತಿದೆ. ಎಲ್ಲಾ ಜಿಲ್ಲಾಧಿಕಾರಿಗಳಿಗೆ ಭೂಮಿಯನ್ನು ಹುಡುಕಿ ಕೆಲಸ ಪ್ರಾರಂಭಿಸಲು ನಿರ್ದೇಶವನನ್ನು ಸಹ ಇಂಧನ ಸಚಿವರು ಮಾಡಿದ್ಧಾರೆ. ಪಂಚಾಯತ್ಗಳು ಲಭ್ಯವಿರುವ ಭೂಮಿಯನ್ನು ಉಪಯುಕ್ತತಾ ಕಾರ್ಯಗಳಿಗೆ ಬಳಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದ್ದಾರೆ. ಕುಸುಮ್ –ಬಿ ಯೋಜನೆಯಡಿ ರೈತರು ಸ್ವಂತ ಜಾಗ ಹೊಂದಿದ್ದರೆ ಪಂಪ್ಸೆಟ್ ಗೆ ಸೋಲಾರ್ ಪ್ಯಾನಲ್ ಅಳವಡಿಸಿಕೊಳ್ಳಲು ಸರ್ಕಾರವೇ ಸಬ್ಸಿಡಿ ನೀಡುವುದರಿಂದ ಅನೇಕ ರೈತರು ಅಳವಡಿಸಿಕೊಂಡಿದ್ದಾರೆ.