Author: kannadanewsnow57

ಬೆಂಗಳೂರು : ರಾಜ್ಯದ ವಾಹನ ಸವಾರರಿಗೇ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್‌ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದ್ದು, ಇದೀಗ ಮಾರ್ಚ್ 31 HSRP ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿದೆ. ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ. ಇದರ ಮೇಲೂ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ. 2019ರ ಏಪ್ರಿಲ್…

Read More

ಬೆಂಗಳೂರು : ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾರ್ಚ್.22ರ ನಾಳೆ ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ರಾಜ್ಯದಲ್ಲಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ, ಈ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದೇವೆ. ಶನಿವಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಇಲ್ಲ, ಗೃಹ ಇಲಾಖೆ ಜೊತೆ ಚರ್ಚಿಸಿ ರಜೆ ಕೊಡುವ ಬಗ್ಗೆ ತೀರ್ಮಾನ ಮಾಡುತ್ತೇವೆ. ಬಂದ್ ಗೆ ಸಾರಿಗೆ ಬೆಂಬಲ ಕೊಟ್ಟರೆ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿನ ಮರಾಠಿಗಳ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು. ಮೇಕೆದಾಟು ಬಗ್ಗ…

Read More

ಬೆಂಗಳೂರು : ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ವಿಚಾರಕ್ಕೆ ಭಾರೀ ಹೈಡ್ರಾಮಾ ನಡೆದಿದ್ದು, ವಿಪಕ್ಷ ಸದಸ್ಯರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ವಿಧಾನಸಬೆ ಕಲಾಪ ಆರಂಭವಾಗುತ್ತದೆ. ವಿಪಕ್ಷ ಸದಸ್ಯರು ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಭಾರೀ ಗದ್ದಲ,ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಲಾಪವನ್ನು ಸ್ಪೀಕರ್ ಯು.ಟಿ. ಖಾದರ್ 10 ನಿಮಿಷ ಮುಂದೂಡಿದ್ದಾರೆ. ನಿನ್ನೆ ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಹಕಾರ ಸಚಿವರ ಮೇಲೆ ಹನಿಟ್ರ್ಯಾಪ್ ಆಗಿದೆ. ಜನಪ್ರತಿನಿಧಿಗಳನ್ನು ಬ್ಲ್ಯಾಕ್ ಮೇಲ್ ಮಾಡುವುದು ಕೆಟ್ಟ ಸಂಸ್ಕೃತಿಯಾಗಿದೆ. ಕೆಲ ರಾಜಕೀಯ ಪಕ್ಷದಲ್ಲಿ ಇರುವವರು ತಮ್ಮ ಹಾಗೂ ತಮ್ಮ ಕುಟುಂಬದ ಭವಿಷ್ಯಕ್ಕಾಗಿಯೋ, ಸಿಎಂ ಆಗಬೇಕೆಂಬ ಕಾರಣಕ್ಕೂ ಹೀಗೆಲ್ಲ ಮಾಡುವುದು ಸರಿಯಲ್ಲ ಎಂದರು. ಈ ವೇಳೆ ನಾನು ಹನಿಟ್ರ್ಯಾಪ್ ವಿಚಾರದಲ್ಲಿ ಲಿಖಿತ ದೂರು ಕೊಡುತ್ತೇನೆ. ಅದನ್ನು ತನಿಖೆ ಮಾಡಿ ಎಂಬುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ಇದಲ್ಲದೇ ನಾನೊಬ್ಬನೇ ಅಲ್ಲ, ರಾಜ್ಯ ಮಾತ್ರವಲ್ಲದೇ ರಾಷ್ಟ್ರ ಮಟ್ಟದ 48 ಮಂದಿಯ ಹನಿಟ್ರ್ಯಾಪ್ ಸಿಡಿ, ಪೆನ್ ಡ್ರೈವ್…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗಳಿಗೆ ಉತ್ತರ ನೀಡಿದ್ದಾರೆ. ಬಜೆಟ್ ಮೇಲಿನ ಚರ್ಚೆಗಳಿಗೆ ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರ-1 1.​ಬಜೆಟ್ ಮೇಲಿನ ವಿರೋಧ ಪಕ್ಷದವರ ಮಾತುಗಳನ್ನು ಕೇಳಿದ್ದೇನೆ ಮತ್ತು ಓದಿದ್ದೇನೆ. ಅನೇಕರು ಬಜೆಟ್ಟನ್ನು ಅಧ್ಯಯನ ಮಾಡಲು ಪ್ರಯತ್ನಿಸಿದ್ದಾರೆ. ಒಳ್ಳೆಯ ಪ್ರಯತ್ನ ಮಾಡಿದ್ದಾರೆ, ಅವರೆಲ್ಲರನ್ನೂ ಅಭಿನಂದಿಸುತ್ತೇನೆ. 2.​ಸದನದಲ್ಲಿ ನಾನು ಗಮನಿಸಿದ ಹಾಗೆ 4-5 ವಿಚಾರಗಳನ್ನು ಪ್ರಮುಖವಾಗಿ ಇಟ್ಟುಕೊಂಡು ಚರ್ಚಿಸಲಾಗಿದೆ. ಮುಖ್ಯವಾಗಿ, 1) ರಾಜ್ಯದ ಸಾಲ ಹಾಗೂ ಆರ್ಥಿಕ ಪರಿಸ್ಥಿತಿ 2) ಗ್ಯಾರಂಟಿ ಯೋಜನೆಗಳು 3) ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ವಿಚಾರ 4) ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಮೀಸಲಾತಿ 5) ಕ್ಷೇತ್ರಗಳಿಗೆ ಅಭಿವೃದ್ಧಿ ಅನುದಾನ ಹಾಗೂ ಪ್ರದೇಶವಾರು ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ. ನಾನು ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗಳಿಗೆ ಉತ್ತರ ಕೊಡುವಾಗ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನಗಳು, ಗ್ಯಾರಂಟಿ ಯೋಜನೆಗಳು ಮುಂತಾದ ವಿಚಾರಗಳ ಕುರಿತು ದೀರ್ಘವಾಗಿ ಉತ್ತರ ಕೊಟ್ಟಿದ್ದೇನೆ. ಹಾಗಾಗಿ ಅವುಗಳಿಗೆ ಕಡಿಮೆ ಸಮಯ ಮೀಸಲಿಟ್ಟು ಉಳಿದ…

Read More

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲು ಹೆಚ್ಚಳ, ಬಂಗಾಳಕೊಲ್ಲಿ, ಶ್ರೀಲಂಕಾ ಭಾಗದಲ್ಲಿ ಮಳೆ ಮಾರುತಗಳು ಸೃಷ್ಟಿಯಿಂದಾಗಿ ಮಳೆ ಸಾಧ್ಯತೆ ಇದೆ. ಇಂದು ಅಲ್ಲಲ್ಲಿ ಮಳೆಯಾಗಲಿದೆ. ಮಾರ್ಚ್ 23 ಹಾಗೂ 24 ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ. ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾ.22 ರಿಂದ 26ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 22 ರಂದು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು…

Read More

ನವದೆಹಲಿ : ಅರಣ್ಯಗಳು ಕೇವಲ ಮರಗಳಲ್ಲ,ಅವು ಗಾಳಿ, ಆಶ್ರಯ ಮತ್ತು ಆಹಾರವನ್ನು ಒದಗಿಸುತ್ತವೆ. ಮಾರ್ಚ್ 21 ರಂದು, ಪ್ರಪಂಚವು ವಿಶ್ವ ಅರಣ್ಯ ದಿನವನ್ನು ಆಚರಿಸುತ್ತದೆ, ಇದನ್ನು ಅಂತರರಾಷ್ಟ್ರೀಯ ಅರಣ್ಯ ದಿನ ಎಂದೂ ಕರೆಯುತ್ತಾರೆ. ಈ ವಾರ್ಷಿಕ ಕಾರ್ಯಕ್ರಮವು ಪ್ರಕೃತಿಯಲ್ಲಿ ಕಾಡುಗಳ ಪಾತ್ರವನ್ನು ನಮಗೆ ನೆನಪಿಸುತ್ತದೆ. ಅವುಗಳನ್ನು ರಕ್ಷಿಸುವ ತುರ್ತು ಅಗತ್ಯವನ್ನು ಸಹ ಇದು ಎತ್ತಿ ತೋರಿಸುತ್ತದೆ. ಮಾರ್ಚ್ 21 ವಿಶ್ವ ಅರಣ್ಯ ದಿನಾಚರಣೆ ಇತಿಹಾಸ ವಿಶ್ವಸಂಸ್ಥೆಯು 1971 ರಲ್ಲಿ ವಿಶ್ವ ಅರಣ್ಯ ದಿನವನ್ನು ಸ್ಥಾಪಿಸಿತು. ದಿನಾಂಕ, ಮಾರ್ಚ್ 21, ವಸಂತ ವಿಷುವತ್ ಸಂಕ್ರಾಂತಿಯೊಂದಿಗೆ ಹೊಂದಿಕೆಯಾಗುತ್ತದೆ, ಇದು ಪ್ರಕೃತಿಯ ಸಮತೋಲನವನ್ನು ಸಂಕೇತಿಸುತ್ತದೆ. ಅರಣ್ಯಗಳು ಹವಾಮಾನವನ್ನು ಸ್ಥಿರಗೊಳಿಸಲು, ಇಂಗಾಲವನ್ನು ಸಂಗ್ರಹಿಸಲು ಮತ್ತು ವನ್ಯಜೀವಿಗಳನ್ನು ಬೆಂಬಲಿಸಲು ಸಹಾಯ ಮಾಡುತ್ತದೆ. ಅವು ಶತಕೋಟಿ ಜನರು ಅವಲಂಬಿಸಿರುವ ಸಂಪನ್ಮೂಲಗಳನ್ನು ಸಹ ಒದಗಿಸುತ್ತವೆ. ಅರಣ್ಯಗಳು ಭೂಮಿಯ ಸುಮಾರು 31% ಭೂಮಿಯನ್ನು ಆವರಿಸುತ್ತವೆ. ಅವು ಸಸ್ಯಗಳಿಂದ ಪ್ರಾಣಿಗಳವರೆಗೆ 80% ಭೂಮಂಡಲದ ಪ್ರಭೇದಗಳಿಗೆ ನೆಲೆಯಾಗಿದೆ. ಅವು ಇಂಗಾಲದ ಡೈಆಕ್ಸೈಡ್ ಅನ್ನು ಹೀರಿಕೊಳ್ಳುವ ಮತ್ತು…

Read More

ನವದೆಹಲಿ : ಮಹಿಳೆಯರ ಮುಟ್ಟಿನ ನೈರ್ಮಲ್ಯಕ್ಕಾಗಿ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೊಸ ಉಪಕ್ರಮವನ್ನು ಪ್ರಾರಂಭಿಸಿದೆ. ಇದರ ಅಡಿಯಲ್ಲಿ, ಈಗ ದೇಶದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಕ್ಯಾಂಪಸ್‌ಗಳಲ್ಲಿ ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಯಂತ್ರಗಳನ್ನು ಸ್ಥಾಪಿಸಬೇಕಾಗುತ್ತದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಮುಟ್ಟಿನ ನೈರ್ಮಲ್ಯವನ್ನು ಸುಧಾರಿಸಲು ಮತ್ತು ಕ್ಯಾಂಪಸ್‌ನಲ್ಲಿ ನೈರ್ಮಲ್ಯ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳು ಮಾರ್ಚ್ 25 ರೊಳಗೆ ತಮ್ಮ ವರದಿಯನ್ನು ಯುಜಿಸಿಗೆ ಸಲ್ಲಿಸಬೇಕಾಗುತ್ತದೆ. ಯುಜಿಸಿ ಕಾರ್ಯದರ್ಶಿ ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ಪತ್ರ ಬರೆದಿದ್ದಾರೆ ಈ ವಿಷಯದಲ್ಲಿ ಯುಜಿಸಿ ಕಾರ್ಯದರ್ಶಿ ಪ್ರೊಫೆಸರ್ ಮನೀಶ್ ಜೋಶಿ ಎಲ್ಲಾ ರಾಜ್ಯಗಳು ಮತ್ತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಬರೆದಿದ್ದಾರೆ. ಇದರಲ್ಲಿ, ಸಂಸ್ಥೆಗಳ ಕ್ಯಾಂಪಸ್‌ಗಳಲ್ಲಿ ದಹನಕಾರಕಗಳನ್ನು (ತ್ಯಾಜ್ಯ ವಸ್ತುಗಳನ್ನು ಸುಡುವುದು) ಸ್ಥಾಪಿಸಲು ಸೂಚನೆಗಳನ್ನು ನೀಡಲಾಗಿದೆ. ಈಗ ನಾವು ಇದರ ಉದ್ದೇಶದ ಬಗ್ಗೆ ಮಾತನಾಡಿದರೆ, ಮುಟ್ಟಿನ ನೈರ್ಮಲ್ಯವನ್ನು ಉತ್ತೇಜಿಸುವುದು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಬೆಂಬಲ ನೀಡುವ ವಾತಾವರಣವನ್ನು…

Read More

ಕೊಪ್ಪಳ : ತಾಯಿ ಮತ್ತು ಶಿಶು ಮರಣ ಕಡಿಮೆ ಮಾಡುವುದು ಹಾಗೂ ಗರ್ಭಿಣಿ ತಾಯಿಂದಿಯರಿಗೆ ಗುಣಮಟ್ಟದ ಆರೈಕೆ ಕುರಿತು ದೂರವಾಣಿ ಸಂದೇಶಗಳನ್ನು ರವಾನಿಸಲು ಕೇಂದ್ರ ಸಕಾರದಿಂದ ಕಿಲ್ಕಾರಿ ಸೇವೆಯನ್ನು ಪ್ರಾರಂಭಿಸಲಾಗಿರುತ್ತದೆ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಟಿ.ಲಿಂಗರಾಜು ಅವರು ತಿಳಿಸಿದ್ದಾರೆ. ಕಿಲ್ಕಾರಿ ಎಂದರೇನು: ಕಿಲ್ಕಾರಿಯು ಭಾರತ ಸರ್ಕಾರವು ಗರ್ಭಿಣಿ, ಬಾಣಂತಿಯರಿಗೆ ತಂದಿರುವ ಉಚಿತ ಆರೋಗ್ಯ ಮಾಹಿತಿ ನೀಡುವ ಮೊಬೈಲ್ ಸೇವೆಯಾಗಿದೆ. ಇದು ಆರ್.ಸಿ.ಹೆಚ್ ತಂತ್ರಾಂಶದಲ್ಲಿ ನೊಂದಾಯಿತ ಮೊಬೈಲ್ ಫೋನ್‌ಗೆ ನೇರವಾಗಿ ಗರ್ಭಾವಸ್ಥೆ, ಬಾಣಂತಿ ಮತ್ತು ಶಿಶುವಿನ ಆರೋಗ್ಯದ ಮಾಹಿತಿಯನ್ನು ತಲುಪಿಸುತ್ತದೆ ಮತ್ತು ಈ ಉಚಿತ ಮೊಬೈಲ್ ಆರೋಗ್ಯ ಸೇವೆಯು ಗರ್ಭಿಣಿಯ ಗರ್ಭಧಾರಣೆಯ ನಾಲ್ಕನೇ ತಿಂಗಳಿನಿAದ ಮಗುವಿನ ಮೊದಲ ಜನ್ಮ ದಿನದ ವರೆಗಿನ ಅವಧಿಯನ್ನು ಒಳಗೊಂಡಿರುತ್ತದೆ. ಕಿಲ್ಕಾರಿ ಕರೆಗಳನ್ನು ಸ್ವೀಕರಿಸುವುದು ಹೇಗೆ: ಗರ್ಭಧಾರಣೆ ಅಥವಾ ಮಗುವಿನ ಜನನವನ್ನು ಆಶಾ ಕಾರ್ಯಕರ್ತೆಯರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳ ಬಳಿ ನೊಂದಾಯಿಸಬೇಕು. ನೊಂದಾಯಿಸಲು ಮತ್ತು ಕಿಲ್ಕಾರಿ ಸೇವೆಗಳನ್ನು…

Read More

ಕೊಪ್ಪಳ : ವಣಗೇರಿ ಗ್ರಾಮದ ಅಪರಾಧಿ ಬಸವರಾಜ ತಂದೆ ಮಲ್ಲಪ್ಪ ಮಕ್ಕಳ್ಳಿ ಇತನು ತನ್ನ ಹೆಂಡತಿಯಾದ ಅಂಬವ್ವ @ ಕಲ್ಲವ್ವ ಈಕೆಯ ಶೀಲದ ಮೇಲೆ ಸಂಶಯಪಟ್ಟು ಮನೆಯಲ್ಲಿದ್ದ ಕೊಡಲಿಯಿಂದ ಕುತ್ತಿಗೆಗೆ ಹಾಗೂ ಇತರೆ ಕಡೆಗಳಿಗೆ ಹೊಡೆದು ಕೊಲೆ ಮಾಡಿದ ಅಪರಾಧ ಸಾಭಿತಾಗಿದೆ ಎಂದು ಕೊಪ್ಪಳ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಈ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ರೂ. 50,000 ದಂಡ ವಿಧಿಸಿರುತ್ತಾರೆ. ಬೇವೂರು ಪೋಲಿಸ್ ಠಾಣೆ ವ್ಯಾಪ್ತಿಯ ವಣಗೇರಿ ಗ್ರಾಮದ ಆರೋಪಿ ಬಸವರಾಜ ತಂದೆ ಮಲ್ಲಪ್ಪ ಮಕ್ಕಳ್ಳಿ ಈತನು ತನ್ನ ಹೆಂಡತಿಯಾದ ಮೃತ ಅಂಬವ್ವ @ ಕಲ್ಲವ್ವ ಇವಳ ಶೀಲದ ಮೇಲೆ ಸಂಶಯಪಡುತ್ತಾ ಆಗಾಗ್ಗೆ ಜಗಳ ಮಾಡುತ್ತಾ ಬಂದಿದ್ದು, ಈ ವಿಷಯವಾಗಿ ವಣಗೇರಿ ಗ್ರಾಮದ ಅಪರಾಧಿ ಬಸವರಾಜನ ಅಕ್ಕಪಕ್ಕದ ಮನೆಯವರು ಅಪರಾಧಿ ಬಸವರಾಜನಿಗೆ ಬುದ್ದಿವಾದ ಹೇಳಿದರೂ ತನ್ನ ಚಾಳಿಯನ್ನು ಬಿಡದೇ ತನ್ನ ಹೆಂಡತಿಯಾದ ಮೃತ ಅಂಬವ್ವ @ ಕಲ್ಲವ್ವ ಈಕೆಯ ಶೀಲದ ಮೇಲೆ ಸಂಶಯ ಪಟ್ಟು ಅವಳೊಂದಿಗೆ ಜಗಳ…

Read More

ಚೆನ್ನೈ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಚೆನ್ನೈನಲ್ಲಿ ಹಾಡಹಾಗಲೇ ಪೊಲೀಸ್ ಅಧಿಕಾರಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚೆನ್ನೈನಲ್ಲಿ ಹಾಡಹಗಲೇ ಹೆದ್ದಾರಿಯಲ್ಲಿ ಕೆಲವು ಆಕ್ರಮಣಕಾರರು ಪೊಲೀಸ್ ಅಧಿಕಾರಿಯನ್ನು ಕ್ರೂರವಾಗಿ ಹತ್ಯೆ ಮಾಡಿದರು. ಚಾಕುಗಳಿಂದ ಪೊಲೀಸ್ ಅಧಿಕಾರಿಯ ತಲೆಯನ್ನು ಕತ್ತರಿಸಿ ಕೊಂದರು. ಅದಕ್ಕೆ ಸಂಬಂಧಿಸಿದ ವಿಡಿಯೋ ಈಗ ವೈರಲ್ ಆಗಿದೆ. ಇದನ್ನು ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಇಂದಿನ ಸಮಾಜದಲ್ಲಿ, ಒಬ್ಬನೇ ಒಬ್ಬ ಪೊಲೀಸ್ ಅಧಿಕಾರಿಗೂ ರಕ್ಷಣೆ ಇಲ್ಲದಿದ್ದರೆ ಸಾಮಾನ್ಯ ಜನರ ಪರಿಸ್ಥಿತಿ ಏನಾಗುತ್ತಿತ್ತು ಎಂದು ಜನರು ಚರ್ಚಿಸುತ್ತಿದ್ದಾರೆ. ನಾವು ಪೂರ್ಣ ವಿವರಗಳಿಗೆ ಹೋದರೆ.. ಜಾಕೀರ್ ಹುಸೇನ್ (57) ಈ ಹಿಂದೆ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಭದ್ರತಾ ವಿಭಾಗದಲ್ಲಿ ಎಸ್‌ಐ ಆಗಿ ಕೆಲಸ ಮಾಡುತ್ತಿದ್ದರು. ಅವರು ತಮ್ಮ ರಂಜಾನ್ ಉಪವಾಸದ ಭಾಗವಾಗಿ ದರ್ಗಾಕ್ಕೆ ಹೋಗಿ ನಂತರ ಮನೆಗೆ ಮರಳಿದರು. ಅದೇ ಸಮಯದಲ್ಲಿ, ಕೆಲವು ಆಕ್ರಮಣಕಾರರು ಬೈಕ್‌ನಲ್ಲಿ ಬಂದು ಜಾಕಿರ್ ಹುಸೇನ್ ಮೇಲೆ ಚಾಕುಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ…

Read More