Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಮುಂಬಡ್ತಿ ಹೊಂದಲು ಹುದ್ದೆಗೆ ಅಗತ್ಯವಾದ ತರಬೇತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದು, ವಿವಿಧ ಇಲಾಖೆಗಳ ಉನ್ನತ ಹುದ್ದೆಗಳಿಗೆ ಕಂಪ್ಯೂಟರ್, ತಂತ್ರಾಂಶ, ಸಾಫ್ಟ್ ಸ್ಕಿಲ್ಸ್ ಸೇರಿ ಹಲವು ತರಬೇತಿ ಅಗ ತ್ಯವಿರುತ್ತದೆ. ಈ ತರಬೇತಿ ಪಡೆಯದಿದ್ದರೆ ಮುಂಬ ಡ್ತಿಗೆ ಅವಕಾಶವಿಲ್ಲ ಎಂದು ಸಂಪುಟ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರಕಾರದ ‘ಸಿ’ ವೃಂದ ಮೇಲ್ಪಟ್ಟ ಎಲ್ಲ ಅಧಿಕಾರಿ, ನೌಕರರಿಗೆ ಮುಂಬಡ್ತಿಗೆ ತರಬೇತಿ ಕಡ್ಡಾಯಗೊಳಿಸುವ ಮಹತ್ವದ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಕೇಂದ್ರ ನಾಗರಿಕ ಸೇವಾ ಅಧಿ ಕಾರಿಗಳಿಗೆ ಸೇವಾವಧಿ ನಡುವೆ ಲಾಲ್ ಬಹದ್ದೂರ್ ಶಾಸ್ತ್ರಿ ಅಕಾಡೆಮಿಯಲ್ಲಿ ತರಬೇತಿ ವ್ಯವಸ್ಥೆ ಇದ್ದು, ಅದೇ ಮಾದರಿಯಲ್ಲಿ ರಾಜ್ಯ ಸರಕಾರದ ಎಲ್ಲ ಅಧಿಕಾರಿ ವರ್ಗಕ್ಕೆ ತರಬೇತಿಗೆ ನಿರ್ಧರಿಸಲಾಗಿದೆ. ಮುಂಬಡ್ತಿಗಾಗಿ ಈ ತರಬೇತಿಯನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.…
ಬೆಂಗಳೂರು : ಬೆಂಗಳೂರಿನ ರಿಂಗ್ ರಸ್ತೆಯಲ್ಲಿ ಟ್ರಾಫಿಕ್ ಕಂಟ್ರೋಲ್ ಗಾಗಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಬೆಂಗಳೂರಿನ ಎಚ್ಎಎಲ್ ಠಾಣಾ ವ್ಯಾಪ್ತಿಯ ರಿಂಗ ರಸ್ತೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಸೆಪ್ಟೆಂಬರ್ 19 ರಿಂದ 26ರವರೆಗೆ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ ಲೇ ಅರೇಬಿಯಾ, ಬಿರಿಯಾನಿ ಜೋನ್ ಕ್ರೋಮ್ ಜಂಕ್ಷನ್ ನಿಂದ ಮಾರತಹಳ್ಳಿ, ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆ ಅವರಿಗೆ ಸಂಚಾರ ನಿರ್ಬಂಧಿಸಲಾಗಿದೆ. ಹೆಚ್.ಎ.ಎಲ್ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣೆ ಸರಹದ್ದಿನ ಹೊರವರ್ತುಲ ರಸ್ತೆಯಲ್ಲಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಬಂಧ ದಿನಾಂಕ:19.09.2025 ರಿಂದ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಈ ಕೆಳಕಂಡ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ. ದಿನಾಂಕ ಮತ್ತು ಸಮಯ 19.09.2025 ರಿಂದ 26.09.2025ರವರೆಗೆ (ಒಂದು ವಾರ) ವಾಹನ ನಿರ್ಬಂಧಿಸಲಾದ ರಸ್ತೆ ಮಾರ್ಗ + ಲೇ ಅರೇಬಿಯಾ, ಬಿರಿಯಾನಿ ಜೋನ್ ಮತ್ತು ಕ್ರೋಮ ಜಂಕ್ಷನ್ ಬಳಿ ಹೊರವರ್ತುಲ ರಸ್ತೆಯಿಂದ ಮಾರತ್ತಹಳ್ಳಿ-ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ನಿರ್ಬಂಧಿಸಲಾದ…
ನವದೆಹಲಿ : ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಪ್ರಾಯೋಜಿತ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು. ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪ್ರತಾಪ್ ಸಿಂಹ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಅರ್ಜಿ ವಜಾಗೊಳಿಸಿದೆ. ದಸರಾ ಉದ್ಘಾಟಕರ ಆಯ್ಕೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಹೇಳಿ ಪ್ರತಾಪ್ ಸಿಂಹ…
ಬೆಂಗಳೂರು : ಸೆಪ್ಟೆಂಬರ್ 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಸೂಚನೆ ನೀಡಲಾಗಿದೆ. ಸಮೀಕ್ಷೆಗೆ ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಪಡಿತರ ಚೀಟಿ ಮತದಾರರ ಗುರುತಿನ ಚೀಟಿ, ವಿಕಲಚೇತನರ ಸಂದರ್ಭದಲ್ಲಿ UID ಕಾರ್ಡ್ ಅಥವಾ ಪ್ರಮಾಣಪತ್ರಗಳು. ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ಗಳು ಮೊಬೈಲ್ಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ, ಏಕೆಂದರೆ ಸಮೀಕ್ಷೆಯ ಸಮಯದಲ್ಲಿ ಒಟಿಪಿ (OTP) ಗಾಗಿ ಆಧಾರ್ಗೆ ಲಿಂಕ್…
ಬೆಂಗಳೂರು : ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದವರಿಗೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಮುಂದಿನ ತಿಂಗಳಿನಿಂದ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಅರ್ಜಿ ಸ್ವೀಕರಿಸಲಾಗುವುದು ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅನರ್ಹ ಬಿಪಿಎಲ್ ಕಾರ್ಡ್ ರದ್ದುಮಾಡುವ ಬದಲು ಎಪಿಎಲ್ ಕಾರ್ಡ್ ಆಗಿ ಬದಲಿಸುವ ಚಿಂತನೆ ನಡೆದಿದೆ. ಜತೆಗೆ, ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಮುಂದಿನ ತಿಂಗಳಿಂದ ಅರ್ಜಿ ಸ್ವೀಕರಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿರುವ ಎಲ್ಲಾ ಕಾರ್ಡ್ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಿಪಿಎಲ್ ಕಾರ್ಡ್ ಪರಿಷ್ಕರಣಿ ನಡೆಸಲಾಗುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಯಾವ ಕಾರ್ಡನ್ನೂ ರದ್ದು ಮಾಡುವುದಿಲ್ಲ. ಅನರ್ಹರ ಕಾರ್ಡ್ ಗಳನ್ನು ಪರಿಷ್ಕರಿಸಿ ಎಪಿಎಲ್ ಗೆ ಸೇರ್ಪಡೆ ಮಾಡಲಾಗುವುದು, ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಹೊಂದಿರುವ ರಾಜ್ಯ ಕರ್ನಾಟಕ.…
ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಸಿಹಿಸುದ್ದಿ ಸಿಕ್ಕಿದ್ದು, ಸೆಪ್ಟೆಂಬರ್ 22 ರಿಂದ ಕೆಎಂಎಫ್ ನಂದಿನಿ ಉತ್ಪನ್ನಗಳ ದರಗಳು ಇಳಿಕೆಯಾಗಲಿದೆ. ಹೌದು, ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಶೇಕಡ 12 ರಿಂದ ಶೇ. 5ಕ್ಕೆ ಇಳಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ದರ ಕೂಡ ಕಡಿಮೆಯಾಗಲಿದೆ. ಸೆಪ್ಟೆಂಬರ್ 22 ರಿಂದ ಇದು ಜಾರಿಗೆ ಬರಲಿದ್ದು, ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ಸೇರಿದಂತೆ ನಂದಿನಿ ವಿವಿಧ ಉತ್ಪನ್ನಗಳ ದರ ಕಡಿಮೆಯಾಗಲಿದೆ. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ(ಕೆಎಂಎಫ್) ನಿಂದ ಕೇಂದ್ರ ಸರ್ಕಾರದ ಸೂಚನೆಯಂತೆ ಉತ್ಪನ್ನಗಳ ಜಿಎಸ್ಟಿ ಕಡಿಮೆ ಮಾಡಲು ಮುಂದಾಗಿದ್ದು, ಮೊಸರಿನ ದರ ಲೀಟರ್ ಗೆ 4 ರೂಪಾಯಿವರೆಗೆ ಕಡಿಮೆಯಾಗುವ ಸಾಧ್ಯತೆ ಇದೆ. ಕೆಎಂಎಫ್ ಹಿರಿಯ ಅಧಿಕಾರಿಗಳು ಇಂದು ಸಭೆ ಸೇರಿ ದರ ಇಳಿಕೆ ಬಗ್ಗೆ ಚರ್ಚಿಸಲಿದ್ದಾರೆ. ಸೋಮವಾರದಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಹಾಲಿನ ಉತ್ಪನ್ನಗಳ ಜಿಎಸ್ಟಿ ತೆರಿಗೆ ದರ ಕಡಿಮೆ ಮಾಡಿರುವುದರಿಂದ ಸೆ.…
ಬೆಂಗಳೂರು : ರಾಜ್ಯ ಸರ್ಕಾರವು ಜಾತಿಗಣತಿಗೆ ಹೊಸ ಉಪಜಾತಿಗಳ ಸೃಷ್ಟಿ ಮಾಡಿದೆ ಎಂದು ಅರೋಪಿಸಿ ರಾಜ್ಯ ಸರ್ಕಾರದ ಜಾತಿಗಣತಿ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರವು ಜಾತಿಗಣತಿಗೆ ಹೊಸ ಉಪಜಾತಿಗಳ ಸೃಷ್ಟಿ ಮಾಡಿದೆ, ಜಾತಿ ಉಪಜಾತಿಗಳ ನಡುವೆ ಸರ್ಕಾರ ಎತ್ತಿ ಕಟ್ಟುತ್ತಿದೆ ಎಂದು ಆರೋಪಿಸಿ ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರಿಂದ ಹೈಕೋರ್ಟ್ ಪಿಐಎಲ್ ಸಲ್ಲಿಕೆಯಾಗಿದೆ. 15 ದಿನಗಳಲ್ಲಿ ರಾಜ್ಯ ಸರ್ಕಾರವು ತರಾತುರಿಯಲ್ಲಿ ಜಾತಿಗಣತಿ ನಡೆಸುತ್ತಿದೆ. ಅದರಲ್ಲೂ ದಸರಾ ರಜೆ ದಿನಗಳಲ್ಲಿ ಜಾತಿಗಣತಿ ನಡೆಸುತ್ತಿದೆ. ಜನರು ಹಬ್ಬ, ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವಾಗ ಜಾತಿಗಣತಿ ನಡೆಸುವುದು ಸರಿಯಲ್ಲ. ಸರ್ಕಾರ 1500 ಉಪಜಾತಿಗೂ ಪ್ರತ್ಯೇಕ ಅಸ್ತಿತ್ವ ನೀಡುತ್ತಿದೆ. ಜಾತಿಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ. ಹೀಗಾಗಿ ರಾಜ್ಯ ಸರ್ಕಾರದ ನಿರ್ಧಾರ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರವು ಜಾತಿಗಣತಿಗೆ ಹೊಸ ಉಪಜಾತಿಗಳ ಸೃಷ್ಟಿ ಮಾಡಿದೆ ಎಂದು ಅರೋಪಿಸಿ ಹೈಕೋರ್ಟ್ ಗೆ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿವೆ ರಾಜ್ಯ ಸರ್ಕಾರವು ಜಾತಿಗಣತಿಗೆ ಹೊಸ ಉಪಜಾತಿಗಳ ಸೃಷ್ಟಿ ಮಾಡಿದೆ, ಜಾತಿ ಉಪಜಾತಿಗಳ ನಡುವೆ ಸರ್ಕಾರ ಎತ್ತಿ ಕಟ್ಟುತ್ತಿದೆ ಎಂದು ಆರೋಪಿಸಿ ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರಿಂದ ಹೈಕೋರ್ಟ್ ಪಿಐಎಲ್ ಸಲ್ಲಿಕೆಯಾಗಿದೆ. 15 ದಿನಗಳಲ್ಲಿ ರಾಜ್ಯ ಸರ್ಕಾರವು ತರಾತುರಿಯಲ್ಲಿ ಜಾತಿಗಣತಿ ನಡೆಸುತ್ತಿದೆ. ಅದರಲ್ಲೂ ದಸರಾ ರಜೆ ದಿನಗಳಲ್ಲಿ ಜಾತಿಗಣತಿ ನಡೆಸುತ್ತಿದೆ. ಜನರು ಹಬ್ಬ, ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವಾಗ ಜಾತಿಗಣತಿ ನಡೆಸುವುದು ಸರಿಯಲ್ಲ. ಸರ್ಕಾರ 1500 ಉಪಜಾತಿಗೂ ಪ್ರತ್ಯೇಕ ಅಸ್ತಿತ್ವ ನೀಡುತ್ತಿದೆ. ಜಾತಿಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ. ಹೀಗಾಗಿ ರಾಜ್ಯ ಸರ್ಕಾರದ ನಿರ್ಧಾರ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ನವದೆಹಲಿ : ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಪ್ರಾಯೋಜಿತ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು. ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪ್ರತಾಪ್ ಸಿಂಹ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಅರ್ಜಿ ವಜಾಗೊಳಿಸಿದೆ. ದಸರಾ ಉದ್ಘಾಟಕರ ಆಯ್ಕೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಹೇಳಿ ಪ್ರತಾಪ್ ಸಿಂಹ…
ನವದೆಹಲಿ : ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಪ್ರಾಯೋಜಿತ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು. https://twitter.com/ANI/status/1968550707360866656?ref_src=twsrc%5Egoogle%7Ctwcamp%5Eserp%7Ctwgr%5Etweet






