Author: kannadanewsnow57

ಚೆನ್ನೈ : ತಮಿಳು ಖ್ಯಾತ ನಟ ವಿಶಾಲ್ ಹಠಾತ್ತನೆ ಪ್ರಜ್ಞೆ ತಪ್ಪಿ ಬಿದ್ದಿದ್ದು, ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ವಿಶಾಲ್ ಅವರು ಮಾಜಿ ಸಚಿವ ಕೆ. ಪೊನ್ಮುಡಿ ಅವರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದಾರು. ಆದರೆ ಕಾರ್ಯಕ್ರಮದಲ್ಲೇ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ತುರ್ತು ಚಿಕಿತ್ಸೆ ನೀಡಲಾಯಿತು. ಅವರ ಸ್ಥಿತಿ ಸ್ಥಿರವಾಗಿದೆ, ಆದರೂ ಇನ್ನೂ ಯಾವುದೇ ಅಧಿಕೃತ ವೈದ್ಯಕೀಯ ಹೇಳಿಕೆ ಬಿಡುಗಡೆಯಾಗಿಲ್ಲ. ವಿಶಾಲ್ ಅವರ ವ್ಯವಸ್ಥಾಪಕ ಹರಿಕೃಷ್ಣನ್ ಮಾತನಾಡಿ, ನಟ ವಿಶಾಲ್ ಊಟ ಮಾಡದ ಕಾರಣ ಈ ಘಟನೆ ಸಂಭವಿಸಿರಬಹುದು ಎಂದು ಹೇಳಿದ್ದಾರೆ. ಜನವರಿ 2025 ರಲ್ಲಿ ನಟ ಡೆಂಗ್ಯೂನಿಂದ ಚೇತರಿಸಿಕೊಂಡಿದ್ದರು.

Read More

ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ರಾಷ್ಟ್ರೀಯ ಭದ್ರತೆಯನ್ನು ಮೇಲಿನಿಂದ ಖಚಿತಪಡಿಸಿಕೊಳ್ಳಲು ತನ್ನ ಪ್ರಯತ್ನಗಳನ್ನು ಸದ್ದಿಲ್ಲದೆ ಹೆಚ್ಚಿಸುತ್ತಿದೆ. ಭಾರತದ ಕಾರ್ಯತಂತ್ರದ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಅದರ ನಾಗರಿಕರನ್ನು ರಕ್ಷಿಸಲು ಹತ್ತು ಉಪಗ್ರಹಗಳು ಪ್ರಸ್ತುತ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿವೆ ಎಂದು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಭಾನುವಾರ ಘೋಷಿಸಿದರು. ರಾಷ್ಟ್ರೀಯ ಸುರಕ್ಷತೆಯಲ್ಲಿ ಉಪಗ್ರಹಗಳು ದೊಡ್ಡ ಪಾತ್ರವನ್ನು ವಹಿಸುತ್ತವೆ ಅಗರ್ತಲಾದಲ್ಲಿ ನಡೆದ ಕೇಂದ್ರ ಕೃಷಿ ವಿಶ್ವವಿದ್ಯಾಲಯದ (ಸಿಎಯು) 5 ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ನಾರಾಯಣನ್, ಭಾರತದ ಭದ್ರತಾ ಪ್ರಯತ್ನಗಳಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ವಹಿಸುವ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದರು. “ನಮ್ಮ ದೇಶದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ಬಯಸಿದರೆ, ನಾವು ನಮ್ಮ ಉಪಗ್ರಹಗಳ ಮೂಲಕ ಸೇವೆ ಸಲ್ಲಿಸಬೇಕು. ನಾವು ನಮ್ಮ 7,000 ಕಿಮೀ ಸಮುದ್ರ ತೀರ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡಬೇಕು. ಉಪಗ್ರಹ ಮತ್ತು ಡ್ರೋನ್ ತಂತ್ರಜ್ಞಾನವಿಲ್ಲದೆ, ನಾವು ಅನೇಕ…

Read More

ಬೆಂಗಳೂರು : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಪಾಕ್ ಸೈಬರ್ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರಿಂದ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದು, ಅಪರಿಚಿತ ಲಿಂಕ್, ಇ-ಮೇಲ್ ಗಳ ಮೇಲೆ ನಿಗಾವಹಿಸಿ, ಎಕ್ಸ್ ಕ್ಲೂಸಿವ್ ನ್ಯೂಸ್ ಲಿಂಕ್ ಗಳು ಹಾಗೂ ಎಪಿಕೆ ಫೈಲ್ಸ್, ಅಪರಿಚಿತ ಫಾರ್ವರ್ಡ್ ಲಿಂಕ್ ಕ್ಲಿಕ್ ಮಾಡದಂತೆ ಸೂಚನೆ ನೀಡಿದ್ದಾರೆ. ವಾಟ್ಸಪ್ ಸೆಕ್ಯೂರಿಟಿ ಅಪ್ಡೇಟ್ ಮಾಡಿಕೊಳ್ಳಲು ಸೂಚನೆ ಸಹ ನೀಡಲಾಗಿದೆ. ನಾಗರಿಕರು ಜಾಗೃತರಾಗಿರುವಂತೆ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Read More

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ಲಾರಿ ಡಿಕ್ಕಿಯಾಗಿ ಇನ್ನೋವಾ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಂಧ್ರ ಮೂಲದ ಇನ್ನೋವಾ ಕಾರು ಚಿತ್ರದುರ್ಗದಿಂದ ಹೊಳಲ್ಕೆರೆಗೆ ತೆರಳುತ್ತಿತ್ತು. ಹೊಳಲ್ಕೆರೆಯಿಂದ ಚಿತ್ರದುರ್ಗದ ಕಡೆ ಬರುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಪುರುಷರು, ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಲೋ ಬಿಪಿಯಿಂದ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಸಾವನ್ನಪ್ಪಿದ್ದಾರೆ. ಕಾಮಿಡಿ ಕಿಲಾಡಿಗಳು 3 ನೇ ಆವೃತ್ತಿಯಲ್ಲಿ ಅವರು ಭಾಗಿಯಾಗಿದ್ದರು. ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ಚೈತನ್ಯ ಕಲಾವಿದರು ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್ ನಲ್ಲಿ ‘ಕಡ್ಲೆ ಬಜಿಲ್’ ಎಂಬ ತುಳು ರಿಯಾಲಿಟಿ ಶೋ ಮೂಲಕ ಅನೇಕ ಜನರ ಮನ ಗೆದ್ದಿದ್ದರು. ನಂತರ ಹಲವು ಸಿನಿಮಾಗಳಿಗೆ ಆಡಿಷನ್ ನೀಡಿದರು. ಸುಮಾರು 150 ಆಡಿಷನ್ ನೀಡಿದ್ದ ರಾಕೇಶ್ ಪೂಜಾರಿ 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಶೋಗೆ ಸೆಲೆಕ್ಟ್ ಆದರು. ಇದರಲ್ಲಿ ರನ್ನರ್ ಅಪ್ ತಂಡದ ಸದಸ್ಯರಾಗಿದ್ದರು. ಬಳಿಕ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿಜೇತರಾಗಿದ್ದರು. ನಟಿ ರಕ್ಷಿತಾ ಪ್ರೇಮ್ ಅವರು ರಾಕೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ‘ಮಿಸ್ ಯೂ ಮಗನೇ.. ನಾನು ಇನ್ಯಾವತ್ತೂ ನಿನ್ನ ಜೊತೆ ಮಾತನಾಡಲು ಆಗಲ್ಲ, ಕಾಮಿಡಿ ಕಿಲಾಡಿ ನನ್ನ ಹೃದಯಕ್ಕೆ ಹತ್ತಿರವಾದ…

Read More

ಬೆಂಗಳೂರು : ಲೋ ಬಿಪಿಯಿಂದ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಸಾವನ್ನಪ್ಪಿದ್ದಾರೆ. ಕಾಮಿಡಿ ಕಿಲಾಡಿಗಳು 3 ನೇ ಆವೃತ್ತಿಯಲ್ಲಿ ಅವರು ಭಾಗಿಯಾಗಿದ್ದರು. ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ಚೈತನ್ಯ ಕಲಾವಿದರು ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್ ನಲ್ಲಿ ‘ಕಡ್ಲೆ ಬಜಿಲ್’ ಎಂಬ ತುಳು ರಿಯಾಲಿಟಿ ಶೋ ಮೂಲಕ ಅನೇಕ ಜನರ ಮನ ಗೆದ್ದಿದ್ದರು. ನಂತರ ಹಲವು ಸಿನಿಮಾಗಳಿಗೆ ಆಡಿಷನ್ ನೀಡಿದರು. ಸುಮಾರು 150 ಆಡಿಷನ್ ನೀಡಿದ್ದ ರಾಕೇಶ್ ಪೂಜಾರಿ 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಶೋಗೆ ಸೆಲೆಕ್ಟ್ ಆದರು. ಇದರಲ್ಲಿ ರನ್ನರ್ ಅಪ್ ತಂಡದ ಸದಸ್ಯರಾಗಿದ್ದರು. ಬಳಿಕ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿಜೇತರಾಗಿದ್ದರು.

Read More

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿಸುದ್ದಿ ನೀಡಿದ್ದು,SBI ವೃತ್ತ ಆಧಾರಿತ ಅಧಿಕಾರಿಗಳ (CBO) ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಮೇ 29, 2025 ರಂದು ಅಥವಾ ಅದಕ್ಕೂ ಮೊದಲು ತಮ್ಮ ಅರ್ಜಿಗಳನ್ನು ಸಲ್ಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಭ್ಯರ್ಥಿಗಳ ಆಯ್ಕೆಯು ಹಲವಾರು ಮೌಲ್ಯಮಾಪನಗಳನ್ನು ಆಧರಿಸಿದೆ ಎಂಬುದನ್ನು ಆಸಕ್ತರು ಗಮನಿಸಬೇಕು – ಆನ್‌ಲೈನ್ ಪರೀಕ್ಷೆ, ಸ್ಕ್ರೀನಿಂಗ್, ಸಂದರ್ಶನ ಮತ್ತು ಭಾಷಾ ಪ್ರಾವೀಣ್ಯತೆ ಪರೀಕ್ಷೆ. SBI CBO 2025: ಯಾರು ಅರ್ಹರು? SBI ವೃತ್ತ ಆಧಾರಿತ ಅಧಿಕಾರಿಗಳ ಹುದ್ದೆಗೆ ಒಟ್ಟು 3,323 ಹುದ್ದೆಗಳಿಗೆ ಅರ್ಜಿ ಸಲ್ಲಿಸಲಾಗುತ್ತಿದೆ. ಅರ್ಹತೆ ಪಡೆಯಲು ಅರ್ಜಿದಾರರು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು: – ಯಾವುದೇ ವಿಭಾಗದಲ್ಲಿ ಪದವಿ ಪದವಿ (ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ) ಅಥವಾ – GOI ನಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಮಾನ ಅರ್ಹತೆಯನ್ನು ಪಡೆದಿರಬೇಕು – ಈ ಕೆಳಗಿನ…

Read More

ಬೆಂಗಳೂರು : 2024-25ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಸಂಘಟಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಸುತ್ತೋಲೆ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗ ನಗರದಲ್ಲಿ ದಿನಾಂಕ:18-05-2025 ರಿಂದ 20-05-2025 ರವರೆಗೆ (ಮೂರು ದಿನ) ನಡೆಸಲು ತೀರ್ಮಾನಿಸಲಾಗಿರುತ್ತದೆ. ಸದರಿ ಕ್ರೀಡಾಕೂಟವನ್ನು ಈ ಕೆಳಕಂಡಂತೆ ಆಯೋಜಿಸಲು ಸೂಚಿಸಿ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿಗಳು: ಸದರಿ ಕ್ರೀಡಾಕೂಟದಲ್ಲಿ ರಾಜ್ಯ ಸರ್ಕಾರದ ಕೆ.ಜಿ.ಐ.ಡಿ. ಸಂಖ್ಯೆಯನ್ನು ಹೊಂದಿರುವ ಎಲ್ಲಾ ಖಾಯಂ ನೌಕರರು ಭಾಗವಹಿಸಲು ಅರ್ಹರಾಗಿರುತ್ತಾರೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಆನೈನ್ ಮೂಲಕ ನೊಂದಣಿ ಮಾಡಿಕೊಂಡಲ್ಲಿ ಮಾತ್ರ ಸ್ಪರ್ಧೆಗಳಲ್ಲಿ ಭಾಗವಹಿಸಲು ಹಾಗೂ ಸೌಲಭ್ಯ ಪಡೆಯಲು ಮಾತ್ರ ಅರ್ಹರಿರುತ್ತಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು, ಹಾಗೂ ಕ್ರೀಡಾಕೋಟಾದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ. ಎಲ್ಲಾ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ…

Read More

ಬೆಂಗಳೂರು : ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಆಸ್ತಿ ತೆರಿಗೆ ಶೇ.5 ರ ರಿಯಾಯತಿಯನ್ನು ಜೂನ್ 30 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಹೌದು, 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆಸ್ತಿ ತೆರಿಗೆಯ ಶೇಕಡ 5ರ ರಿಯಾಯಿತಿ ಅವಧಿಯನ್ನು 2025ರ ಜೂನ್ 30 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಆಸ್ತಿ ಮಾಲೀಕರು ತಮ್ಮ ಮನೆ, ನಿವೇಶನಗಳಿಗೆ ಸಕಾಲದಲ್ಲಿ ತೆರಿಗೆಯನ್ನು ಪಾವತಿಸಿ, ಶೇಕಡ 5ರ ರಿಯಾಯಿತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರವು ಪ್ರಕಟಣೆಯಲ್ಲಿ ತಿಳಿಸಿದೆ.

Read More

ಬೆಂಗಳೂರು : 2025-26 ಸಾಲಿನ D.El.Ed, D.P.Ed & D.P.S.E ಕೋರ್ಸ್ ಗಳಿಗೆ ಸರ್ಕಾರಿ ಕೋಟಾದ ಸೀಟುಗಳಿಗೆ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 2025-26 ಸಾಲಿನ D.El.Ed, D.P.Ed & D.P.S.E ಕೋರ್ಸಿನ (ವಿವಿಧ ಮಾಧ್ಯಮಗಳು) ಪ್ರಥಮ ವ್ಯಾಸಂಗಕ್ಕಾಗಿ ರಾಜ್ಯದಲ್ಲಿನ ಅಂಗೀಕೃತ ಶಿಕ್ಷಕರ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್ www.schooleducation.kar.nic.in ಅನ್ನು ಸಂಪರ್ಕಿಸಿ, ವೆಬ್‌ಸೈಟ್‌ನಲ್ಲಿ ಕಾಣುವ APPLICATION FOR D.El.Ed / D.P.S.E / D.P.Ed / ADMISSIONS FOR GOVERNMENT QUOTA SEATS: 2025-26ರ ಮೂಲಕ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು, ಸದರಿ ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕ (DIET) ಕೇಂದ್ರಗಳಲ್ಲಿ ಅಂತಿಮ ದಿನಾಂಕದೊಳಗೆ ಸಲ್ಲಿಸುವುದು. ಸೂಚನೆ: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ (SBI) ಅಥವಾ ಯಾವುದೇ ರಾಷ್ಟ್ರೀಕೃತ ಬ್ಯಾಂಕಿನಲ್ಲಿ Joint Director’…

Read More