Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ. ಪ್ರತಿ ತಿಂಗಳು ಅನೇಕ ಹಣಕಾಸು ಕಾರ್ಯಗಳಿಗೆ ಕೊನೆಯ ಗಡುವು ಇರುತ್ತದೆ. ಹಣಕಾಸಿನ ಕೆಲಸಗಳಿಗೆ ಮಾರ್ಚ್ ತಿಂಗಳು ಬಹಳ ಮುಖ್ಯ. ವಾಸ್ತವವಾಗಿ, ಇದು ಆರ್ಥಿಕ ವರ್ಷದ ಕೊನೆಯ ತಿಂಗಳು. ನೀವು ಪಿಪಿಎಫ್, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಅಥವಾ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ, ಈ ಯೋಜನೆಗಳ ಹೂಡಿಕೆದಾರರು ಪ್ರತಿ ಹಣಕಾಸು ವರ್ಷದಲ್ಲಿ ಕನಿಷ್ಠ ಹಣವನ್ನು ಠೇವಣಿ ಮಾಡಬೇಕು. ಕನಿಷ್ಠ ಮೊತ್ತವನ್ನು ಠೇವಣಿ ಮಾಡದಿದ್ದರೆ ಅವರ ಖಾತೆ ನಿಷ್ಕ್ರಿಯವಾಗಿರುತ್ತದೆ. ಸಾರ್ವಜನಿಕ ಭವಿಷ್ಯ ನಿಧಿ (PPF) ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ದೀರ್ಘಾವಧಿಯ ಹೂಡಿಕೆ ಯೋಜನೆಯಾಗಿದೆ. ಇದು ಪ್ರತಿ ಹಣಕಾಸು ವರ್ಷದಲ್ಲಿ ಕನಿಷ್ಠ ೫೦೦ ರೂ.ಗಳನ್ನು ಹೂಡಿಕೆ ಮಾಡಬೇಕು. ಈ ಯೋಜನೆಯಲ್ಲಿ ಗರಿಷ್ಠ ಹೂಡಿಕೆ ಮೊತ್ತ 1.5 ಲಕ್ಷ ರೂ. ಹೂಡಿಕೆಯ ಮೊತ್ತದ ಮೇಲೆ ಸರ್ಕಾರವು ವಾರ್ಷಿಕವಾಗಿ ಶೇಕಡಾ 7.1 ರ ದರದಲ್ಲಿ ಬಡ್ಡಿಯನ್ನು ಪಾವತಿಸುತ್ತದೆ. ಪಿಪಿಎಫ್ 15 ವರ್ಷಗಳ ಲಾಕ್-ಇನ್ ಅವಧಿಯನ್ನು ಹೊಂದಿದೆ. ನೀವು 15 ವರ್ಷಗಳವರೆಗೆ ನಿಧಿಯಿಂದ ಯಾವುದೇ ಹಿಂಪಡೆಯುವಿಕೆಯನ್ನು…
ಬೆಂಗಳೂರು : ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿ ಆಧಾರಿತ ನರೇಗಾ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಸಣ್ಣ, ಅತಿ ಸಣ್ಣ ರೈತರಿಗೆ ಬಾಳೆ, ಅಂಜೂರ, ತಾಳೆಬೆಳೆ, ದಾಳಿಂಬೆ, ಸಪೋಟ, ಮಾವು, ನುಗ್ಗೆ, ತೆಂಗು, ಪಪ್ಪಾಯ ಮತ್ತು ಪೇರಲ ಬೆಳೆಗಳನ್ನು ಬೆಳೆಯಲು ಹಾಗೂ ಕೊಳವೆ ಬಾಯಿ ಮರುಪೂರ್ಣ ಘಟಕ ಮಾಡಲು ಸಹಾಯಧನ ನೀಡಲಾಗುವುದು. ನೀರಾವರಿ ಸೌಕರ್ಯವುಳ್ಳ ರೈತರು ತಮ್ಮ ಜಮೀನುಗಳಲ್ಲಿ ಕಾಮಗಾರಿ ಕೈಗೊಂಡಲ್ಲಿ ನರೇಗಾ ಯೋಜನೆಯ ಅನುದಾನ ಬಳಸಿ ಕೂಲಿ ಮೊತ್ತವನ್ನು ಮತ್ತು ಸಾಮಗ್ರಿ ವೆಚ್ಚವನ್ನು ಆನ್ಲೈನ್ ಮೂಲಕ ಪಾವತಿ ಮಾಡಲಾಗುತ್ತದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಹೊಸ ಪ್ರದೇಶ ವಿಸ್ತರಣೆ, ದಾಳಿಂಬೆ, ಅಂಜೂರ, ಈರುಳ್ಳಿ ಶೇಖರಣಾ ಘಟಕ, ಪಾಲಿಹೌಸ್ ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ನೀಡಲಾಗುವುದು. ಪ್ರಧಾನಮಂತ್ರಿ ಕೃಷಿ ಸಿಂಚಾಯನ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಸೌಲಭ್ಯವನ್ನು…
ಬೆಂಗಳೂರು : ಲೋಕಸಭೆ ಚುನಾವಣೆಯ ಕಾವು ನಾಳೆಯಿಂದ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಸೂಚನೆ ಪ್ರಕಟವಾಗಲಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮಾರ್ಚ್, 28 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್, 04 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಉಡುಪಿ-ಚಿಕ್ಕಮಗಳೂರು ಹಾಸನ ದಕ್ಷಿಣ ಕನ್ನಡ ಚಿತ್ರದುರ್ಗ ತುಮಕೂರು ಮಂಡ್ಯ ಮೈಸೂರು ಚಾಮರಾಜನಗರ ಬೆಂಗಳೂರು ಗ್ರಾಮಾಂತರ ಬೆಂಗಳೂರು ಉತ್ತರ ಬೆಂಗಳೂರು ದಕ್ಷಿಣ ಚಿಕ್ಕಬಳ್ಳಾಪುರ ಕೋಲಾರ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ…
ಬೆಂಗಳೂರು : ರಾಜ್ಯದಲ್ಲಿ ಅತಂಕ ಸೃಷ್ಟಿಸಿರುವ ಮಂಗನಕಾಯಿಲೆಗೆ (ಕೆಎಫ್ ಡಿ) ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಒಬ್ಬರು ಮಂಗನಕಾಯಿಲೆಗೆ ಬಲಿಯಾಗಿದ್ದು, ವಿವರ ಬಹಿರಂಗವಾಗಿಲ್ಲ. ಈ ಸಾವಿನೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಬಲಿಯಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಪಂಚಾಯಿತಿ ವ್ಯಾಪ್ತಿಯ ರತ್ನ ಎಂಬುವರು ಸೋಮವಾರ ಸಂಜೆ ಮೃತಪಟ್ಟಿದ್ದಾರೆ. ಈ ಮೂಲಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಬೆಂಗಳೂರು : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ಉಂಡೆ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭವಾಗಲಿದ್ದು, ಮಾ. 9 ಕ್ಕೆ ಕೊಬ್ಬರಿ ಮಾರಾಟಕ್ಕೆ ನೋಂದಣಿ ಅಂತ್ಯವಾಗಿದ್ದು9 ಜಿಲ್ಲೆಯಿಂದ 58,893 ರೈತರು ನೋಂದಣಿ ಮಾಡಿಸಿದ್ದಾರೆ. ಕೊಬ್ಬರಿ ಖರೀದಿಸಲು ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ನೋಡೆಲ್ ಏಜೆನ್ಸಿಯಾಗಿ ನೇಮಿಸಲಾಗಿದೆ. ಮೈಸೂರು, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾರಾಟ ಮಂಡಳಿಯಿಂದ ಕೊಬ್ಬರಿ ಖರೀದಿ ಸಂಸ್ಥೆಯಾಗಿ ನೇಮಿಸಲಾಗಿದೆ. ಹಾಸನ ಸೇರಿ ಉಳಿದ ಜಿಲ್ಲೆಗಳಲ್ಲಿ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳವನ್ನು ಖರೀದಿ ಸಂಸ್ಥೆಯಾಗಿ ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು : ರಾಜ್ಯ ಪಠ್ಯಕ್ರಮದ 5,8 ಮತ್ತು 9ನೇ ತರಗತಿಗಳ ಮೌಲ್ಯಾಂಕನ ಮೌಲ್ಯಮಾಪನವನ್ನು ಏಪ್ರಿಲ್ 2 ರ ಒಳಗೆ ಪೂರ್ಣಗೊಳಿಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ(Summative Assessment(SA-2) ಕಾರ್ಯವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ದಿನಾಂಕ:11.03.2024 ಮತ್ತು 12.03.2024 ರಂದು ಹಾಗೂ ಉಳಿದ ವಿಷಯಗಳ ಮೌಲ್ಯಾಂಕನವನ್ನು ಉಲ್ಲೇಖ(2) ರನ್ವಯ ದಿನಾಂಕ:25.03.2024 ರಿಂದ 28.03.2024 ರವರೆಗೆ ನಡೆಸಲಾಗುತ್ತಿದೆ. 5,8 ಮತ್ತು 9ನೇ ತರಗತಿಗಳ ಮೌಲ್ಯಾಂಕನಕ್ಕೆ ನೀಡಲಾದ ಪ್ರಶ್ನೆಪತ್ರಿಕೆಗಳಿಗೆ ಸಂಬಂಧಿಸಿದಂತೆ ವಿಷಯವಾರು ಕೀ ಉತ್ತರಗಳ ಪ್ರತಿಗಳನ್ನು ಕ್ಷೇತ್ರಶಿಕ್ಷಣಾಧಿಕಾರಿಗಳ ಲಾಗಿನ್ನಲ್ಲಿ ಲಭ್ಯಮಾಡಲಾಗುತ್ತಿದ್ದು, ಈಗಾಗಲೇ ಉಲ್ಲೇಖ(1) ರ ಸರ್ಕಾರಿ ಆದೇಶದಲ್ಲಿ ತಿಳಿಸಿರುವಂತೆ ಮೌಲ್ಯಮಾಪನ ಕಾರ್ಯವನ್ನು ಬ್ಲಾಕ್…
ಬೆಂಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಮಾರ್ಚ್, 28 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್, 04 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಖಾತರಿಪಡಿಸಿಕೊಳ್ಳುವುದು, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯುವುದು ಇತರೆ ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು/ ಮಾಹಿತಿಯನ್ನು ಪಡೆಯಲು ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಬಹುದಾಗಿದೆ. ಹಾಗೆಯೇ ವೋಟರ್ ಸಹಾಯವಾಣಿ 24*7 ಕಾರ್ಯನಿರ್ವಹಿಸಲಾಗುತ್ತದೆ. ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಮತಗಟ್ಟೆಗಳಿಗೆ ಒಬ್ಬರು ಅಧ್ಯಕ್ಷಾಧಿಕಾರಿ ಮತ್ತು ಮೂವರು ಮತಗಟ್ಟೆ ಅಧಿಕಾರಿಗಳು ಹಾಗೂ ಮೀಸಲು…
ಬೆಂಗಳೂರು : ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು ಸಾರ್ವಜನಿಕರ ಪಾತ್ರ ಅತ್ಯಮೂಲ್ಯವಾಗಿದೆ. ಅದೇರೀತಿಯಾಗಿ ಮುಕ್ತ, ಪಾರದರ್ಶಕ ಚುನಾವಣೆ ನಡೆಸಲು ಮತ್ತು ಚುನಾವಣಾ ಅಕ್ರಮ ತಡೆಯಲು ಭಾರತದ ಚುನಾವಣಾ ಆಯೋಗವು ಸಿ-ವಿಜಿಲ್ (C-Vigil) ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲರ ಬಳಿಯು ಸ್ಮಾರ್ಟ್ಫೋನ್ ಇರುವುದು ಸಹಜ. ಅಂಗೈ ತುದಿಯಲ್ಲಿ ಎಲ್ಲ ವಿಕ್ಷೀಸಬಹುದು ಮತ್ತು ಸೆರೆಹಿಡಿಯಬಹುದು. ಸಿ-ವಿಜಿಲ್ ನೊಂದಿಗೆ, ನಿಮ್ಮ ಸ್ಮಾರ್ಟ್ಫೆÇೀನ್ನಿಂದ ನೇರವಾಗಿ ಮಾದರಿ ನೀತಿ ಸಂಹಿತೆಯ ಯಾವುದೇ ಉಲ್ಲಂಘನೆಗಳನ್ನು ನೀವು ವರದಿ ಮಾಡಬಹುದು. ಅದು ಮತದಾರರ ಯಾವುದೇ ಆಮಿಷಗಳ ಅಥವಾ ಅಕ್ರಮ ಪ್ರಚಾರ ಹಾಗೂ ಸರ್ಕಾರಿ ಸಂಪನ್ಮೂಲಗಳ ದುರುಪಯೋಗ ಅಥವಾ ಯಾವುದೇ ರೀತಿಯ ಉಲ್ಲಂಘನೆಯಾಗಿರಬಹುದು. ನಿಮ್ಮ ವರದಿಯು ನಮ್ಮ ಚುನಾವಣೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ಸಹಾಯ ಮಾಡುತ್ತದೆ. ಮತಕ್ಕಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೋರೆಗಳನ್ನು ಹಂಚುವವರನ್ನು ಪೆÇೀಲಿಸರಿಗೆ ತಿಳಿಸುವುದು ಹೇಗೆ? ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವುದನ್ನು ಹೇಗೆ ತಡೆಗಟ್ಟಬೇಕು ಎಂಬ ಹಲವು ಪ್ರಶ್ನೆಗಳು ಇದ್ದಲ್ಲಿ ಸಿ-ವಿಜಿಲ್ ಆಪ್ (ಸಿಟಿಜನ್-ವಿಜಿಲ್)…
ನವದೆಹಲಿ:ವೆಚ್ಚವನ್ನು ಕಡಿತಗೊಳಿಸಲು ತನ್ನ ಉದ್ಯೋಗಿಗಳನ್ನು ಕಡಿಮೆ ಮಾಡುವುದನ್ನು ಡೆಲ್ ದೃಢಪಡಿಸಿದೆ. ಉದ್ಯೋಗಿಗಳನ್ನು ಕಡಿಮೆ ಮಾಡುವುದರ ಹೊರತಾಗಿ, ಡೆಲ್ ಸೀಮಿತ ಬಾಹ್ಯ ನೇಮಕಾತಿಯನ್ನು ಹೊಂದಿದೆ ಎಂದು ಫೈಲಿಂಗ್ನಲ್ಲಿ ಬಹಿರಂಗಪಡಿಸಿದೆ. ರಾಯಿಟರ್ಸ್ ವರದಿಯ ಪ್ರಕಾರ, ಫೆಬ್ರವರಿ 2, 2024 ರ ಹೊತ್ತಿಗೆ ಡೆಲ್ ಸುಮಾರು 120,000 ಉದ್ಯೋಗಿಗಳನ್ನು ಹೊಂದಿತ್ತು, ಇದು ಈ ಹಿಂದೆ ಹೊಂದಿದ್ದ ಒಟ್ಟು 1,26,000 ಉದ್ಯೋಗಿಗಳಗಿಂತ ಕಡಿಮೆಯಾಗಿದೆ. ಸುಮಾರು ಎರಡು ವರ್ಷಗಳಿಂದ ಹೆಚ್ಚಿನ ಜನರು ತನ್ನ ಕಂಪ್ಯೂಟರ್ಗಳನ್ನು ಖರೀದಿಸದ ಕಾರಣ ಉದ್ಯೋಗಗಳನ್ನು ಕಡಿತಗೊಳಿಸುತ್ತಿರುವುದಾಗಿ ಡೆಲ್ ತನ್ನ ಫೈಲಿಂಗ್ನಲ್ಲಿ ತಿಳಿಸಿದೆ. ಈ ಬೇಡಿಕೆಯ ಕೊರತೆಯು ಕಂಪನಿಯು ಗಳಿಸುವ ಹಣದಲ್ಲಿ ಶೇಕಡಾ 11 ರಷ್ಟು ಇಳಿಕೆಗೆ ಕಾರಣವಾಗಿದೆ, ಇದು ವರ್ಷದ ಕೊನೆಯ ಮೂರು ತಿಂಗಳ ಹಣಕಾಸು ಫಲಿತಾಂಶಗಳಲ್ಲಿ ವರದಿಯಾಗಿದೆ ಮತ್ತು ಈ ಫಲಿತಾಂಶಗಳನ್ನು ಕಳೆದ ತಿಂಗಳು ಘೋಷಿಸಲಾಯಿತು. ಆದ್ದರಿಂದ, ಅವರು ಹೆಚ್ಚು ಕಂಪ್ಯೂಟರ್ ಗಳನ್ನು ಮಾರಾಟ ಮಾಡದ ಕಾರಣ, ಕಂಪನಿಯು ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿದೆ ಮತ್ತು ಅದರ ಕೆಲವು ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ. ಫೈಲಿಂಗ್ ಪ್ರಕಾರ,…
ನವದೆಹಲಿ. ಭಾರತದ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ. ವಿಶ್ವದಾದ್ಯಂತದ ಏಜೆನ್ಸಿಗಳು ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜುಗಳನ್ನು ಪರಿಷ್ಕರಿಸಲು ಮತ್ತು ಹೆಚ್ಚಿಸಲು ಇದು ಕಾರಣವಾಗಿದೆ. ಈಗ ಅಮೆರಿಕದ ಕ್ರೆಡಿಟ್ ರೇಟಿಂಗ್ ಏಜೆನ್ಸಿ ಎಸ್ &ಪಿ ಗ್ಲೋಬಲ್ ರೇಟಿಂಗ್ಸ್ ಹೆಸರನ್ನು ಸಹ ಈ ಪಟ್ಟಿಗೆ ಸೇರಿಸಲಾಗಿದೆ. 2024-25ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 6.8 ರಷ್ಟು ಬೆಳೆಯುತ್ತದೆ ಎಂದು ಎಸ್ & ಪಿ ಅಂದಾಜಿಸಿದೆ. ಕಳೆದ ವರ್ಷ ನವೆಂಬರ್ನಲ್ಲಿ ರೇಟಿಂಗ್ ಏಜೆನ್ಸಿ ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಬೆಳವಣಿಗೆಯು ಶೇಕಡಾ 6.4 ರಷ್ಟಿರುತ್ತದೆ ಎಂದು ಅಂದಾಜಿಸಿತ್ತು. ಆದಾಗ್ಯೂ, ಎಸ್ &ಪಿ 2025-26 ಮತ್ತು 2026-27ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ಹಿಂದಿನ ಅಂದಾಜನ್ನು ಉಳಿಸಿಕೊಂಡಿದೆ. ಈ ಎರಡೂ ಹಣಕಾಸು ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಶೇಕಡಾ 5-5 ರ ದರದಲ್ಲಿ ಬೆಳೆಯುತ್ತದೆ ಎಂದು ರೇಟಿಂಗ್ ಏಜೆನ್ಸಿ ನಂಬಿದೆ. ರೇಟಿಂಗ್ ಏಜೆನ್ಸಿಯ ಪ್ರಕಾರ, ಭಾರತ, ಜಪಾನ್ ಮತ್ತು ಆಸ್ಟ್ರೇಲಿಯಾದಂತಹ ಆರ್ಥಿಕತೆಗಳು ದೇಶೀಯ ಬೇಡಿಕೆಯ ದೊಡ್ಡ ನೆಲೆಯನ್ನು…