Author: kannadanewsnow57

ನವದೆಹಲಿ: ಸುಪ್ರೀಂ ಕೋರ್ಟ್ ಶುಕ್ರವಾರ ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE)ಗೆ ಆಗಸ್ಟ್ 3 ರಂದು NEET-PG 2025 ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಪರೀಕ್ಷೆ ನಡೆಸಲು NBE ಎರಡು ತಿಂಗಳಿಗಿಂತ ಹೆಚ್ಚು ಸಮಯ ಕೋರಿದ್ದನ್ನು ಆರಂಭದಲ್ಲಿ ಪ್ರಶ್ನಿಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು, ಆಗಸ್ಟ್ 3 ರಂದು NEET-PG 2025 ಪರೀಕ್ಷೆಯನ್ನು ನಡೆಸಲು ಉಲ್ಲೇಖಿಸಲಾದ ಕಾರಣಗಳು ಸರಿಯಾಗಿವೆ ಎಂದು ಹೇಳಿದೆ. ಆದಾಗ್ಯೂ, NEET-PG 2025 ಪರೀಕ್ಷೆಯನ್ನು ನಡೆಸಲು NBE ಗೆ ಹೆಚ್ಚಿನ ಸಮಯವನ್ನು ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಮೇ 30 ರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಬೇಕಾಗಿದೆ ಮತ್ತು ಆದ್ದರಿಂದ, ಒಂದೇ ಬಾರಿಗೆ ಪರೀಕ್ಷೆಯನ್ನು ನಡೆಸಲು ಸುಮಾರು 1,000 ಪರೀಕ್ಷಾ ಕೇಂದ್ರಗಳು ಬೇಕಾಗುತ್ತವೆ ಎಂದು NBE ವಾದಿಸಿತು. ಜೂನ್ 15 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಆಗಸ್ಟ್ 3 ರಂದು…

Read More

ಬೆಂಗಳೂರು : ಆಧಾರ್ ಕಾರ್ಡ್ 10 ವರ್ಷಗಳಷ್ಟು ಹಳೆಯದಾಗಿದ್ದರೆ ಅಥವಾ ಅದರಲ್ಲಿ ದಾಖಲಾಗಿರುವ ಮಾಹಿತಿಯನ್ನು ಈಗ ನವೀಕರಿಸಬೇಕಾದರೆ, ಈ ಸುದ್ದಿ ನಿಮಗೆ ಬಹಳ ಮುಖ್ಯವಾಗಿದೆ. ಜನರಿಗೆ ಹೆಚ್ಚಿನ ಪರಿಹಾರವನ್ನು ನೀಡುತ್ತಾ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಉಚಿತ ಆಧಾರ್ ನವೀಕರಣಕ್ಕಾಗಿ ಗಡುವನ್ನು ಜೂನ್ 14, 2025 ರವರೆಗೆ ವಿಸ್ತರಿಸಿದೆ. ಅಂದರೆ, ಈಗ ನಿಮಗೆ ಇನ್ನೂ ಕೆಲವು ವಾರಗಳಿವೆ, ಆಗ ನೀವು ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಅಗತ್ಯ ಮಾಹಿತಿಯನ್ನು ಯಾವುದೇ ಶುಲ್ಕವಿಲ್ಲದೆ ಆನ್‌ಲೈನ್‌ನಲ್ಲಿ ನವೀಕರಿಸಬಹುದು. ಸರ್ಕಾರಿ ಮತ್ತು ಖಾಸಗಿ ಸೇವೆಗಳನ್ನು ಬಳಸುವಲ್ಲಿ ನೀವು ಯಾವುದೇ ಸಮಸ್ಯೆಯನ್ನು ಎದುರಿಸದಂತೆ ಆಧಾರ್‌ನ ನಿಖರತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವುದು ಯುಐಡಿಎಐನ ಈ ನಿರ್ಧಾರದ ಉದ್ದೇಶವಾಗಿದೆ. ಉಚಿತವಾಗಿ ಏನು ನವೀಕರಿಸಬಹುದು? ಈ ಸೌಲಭ್ಯದ ಅಡಿಯಲ್ಲಿ, ನೀವು ನಿಮ್ಮ ಜನಸಂಖ್ಯಾ ವಿವರಗಳನ್ನು ಉಚಿತವಾಗಿ ನವೀಕರಿಸಬಹುದು, ಉದಾಹರಣೆಗೆ: ಹೆಸರು ವಿಳಾಸ ಜನ್ಮ ದಿನಾಂಕ ಲಿಂಗ ಮೊಬೈಲ್ ಸಂಖ್ಯೆ ಇಮೇಲ್ ಐಡಿ ಸೂಚನೆ: ಫಿಂಗರ್‌ಪ್ರಿಂಟ್, ಫೋಟೋ ಅಥವಾ ಐರಿಸ್ ಸ್ಕ್ಯಾನ್‌ನಂತಹ ಬಯೋಮೆಟ್ರಿಕ್…

Read More

ಬೆಂಗಳೂರು : ರಾಜ್ಯದಲ್ಲಿ ಕಣ್ತಪ್ಪಿನಿಂದ ಕಂದಾಯ ಗ್ರಾಮದ ಪಟ್ಟಿಯಿಂದ ಬಿಟ್ಟು ಹೋಗಿರುವ ತಾಂಡಾ, ಹಟ್ಟಿ, ಹಾಡಿ, ಗೊಲ್ಲರಹಟ್ಟಿಗಳನ್ನು ಗುರುತಿಸಿ ಶೀಘ್ರದಲ್ಲಿ ಕಂದಾಯ ಗ್ರಾಮಗಳಾಗಿ ಘೋಷಿಸಿ ಪ್ರಾಥಮಿಕ ಅಧಿಸೂಚನೆ ಹೊರಡಿಸುವಂತೆ ಕಂದಾಯ ಸಚಿವ. ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ಕಂದಾಯ ಗ್ರಾಮಗಳ ಘೋಷಣೆ ಬಡವರ ಕೆಲಸವಾಗಿದ್ದು, ಅದರ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಕೂಡಲೇ ಗೊಲ್ಲರಹಟ್ಟಿ, ತಾಂಡಾ, ಹಟ್ಟಿ, ಹಾಡಿಗಳನ್ನು ಗುರುತಿಸಿ ಕಂದಾಯ ಗ್ರಾಮದ ಸ್ಥಾನಮಾನ ನೀಡಿ ಅಧಿಸೂಚನೆ ಪ್ರಕಟಿಸಬೇಕು. ನಿಯಮದಂತೆ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಿದ್ದಾರೆ. ಕಂದಾಯ ಗ್ರಾಮದ ಸೌಲಭ್ಯ ಪಡೆಯಲು ಅರ್ಹವಾಗಿರುವ ತಾಂಡಾ, ಹಟ್ಟಿ, ಗೊಲ್ಲರಹಟ್ಟಿಗಳನ್ನು ಗುರುತಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ತಿಂಗಳು ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 1.11 ಲಕ್ಷ ಹಾಡಿ, ಹಟ್ಟಿ, ತಾಂಡಾ ನಿವಾಸಿಗಳಿಗೆ ರಾಜ್ಯ ಸರ್ಕಾರ ಹಕ್ಕುಪತ್ರ ನೀಡಿದೆ. ಹಾಗೆಯೇ, ಮುಂದಿನ ಒಂದು…

Read More

ಬೆಂಗಳೂರು : ಅನರ್ಹ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಅನರ್ಹರರ ಪತ್ತೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ಹೌದು, ರಾಷ್ಟ್ರೀಯ ಆಹಾರ ಕಾಯ್ದೆ ಉಲ್ಲಂಘಿಸಿರುವ ಮತ್ತು ಅನರ್ಹ ಪಡಿತರ ಚೀಟಿ ಪತ್ತೆ ಸಲುವಾಗಿ ಖಾಸಗಿ (ಥರ್ಡ್ ಪಾರ್ಟಿ) ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ಅನರ್ಹರನ್ನು ಹೊರ ಹಾಕಲು ತಂತ್ರ ರೂಪಿಸಿದೆ. 2011ರ ಜನ ಸಂಖ್ಯೆ ದತ್ತಾಂಶದ ಪ್ರಕಾರ ರಾಜ್ಯದಲ್ಲಿ 11,99,700 ಅಂತ್ಯೋದಯ (ಎಎವೈ) 4,01, 93,130 ಸ್ವೀಕೃತದಾರರ ಮಿತಿ ನಿಗದಿ ಮಾಡಿದೆ. ಆದಾಗ್ಯೂ ರಾಜ್ಯದಲ್ಲಿ ಆದ್ಯತಾ ಕುಟುಂಬ (ಪಿಎಚ್‌ಎಚ್) ಮತ್ತು ಎಎವೈ 44 ಲಕ್ಷಕ್ಕೂ ಹೆಚ್ಚು ಇರುವುದು ಕಂಡುಬಂದಿದೆ. ರಾಜ್ಯ ಸರ್ಕಾರದ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬಿದ್ದಿದೆ. ಆದರೆ, ದೇಶದಲ್ಲಿ ಅತಿಹೆಚ್ಚು ತೆರಿಗೆ ಸಂಗ್ರಹವಾಗುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಅನರ್ಹತೆಗೆ ಮಾನದಂಡಗಳು ವಾರ್ಷಿಕ ಆದಾಯ 1.20 ಲಕ್ಷಗಿಂತ ಹೆಚ್ಚಿರುವ ಕುಟುಂಬ 3 ಹೆಕ್ಟೇರ್‌ಗಿಂತ ಹೆಚ್ಚಿನ ಭೂಮಿ ಹೊಂದಿದವರು ಸರ್ಕಾರಿ,…

Read More

ಬೆಂಗಳೂರು : ತನ್ನ ಸಹ ಕಲಾವಿದಯ ಮೇಲೆ ಅತ್ಯಾಚಾರ ಎಸೆಗಿರುವ ಆರೋಪದ ಮೇಲೆ ಜೈಲು ಸೇರಿದ್ದ ಕಿರುತೆರೆ ನಟ ಮಡೇನೂರು ಮನುಗೆ ಜಾಮೀನು ಸಿಕ್ಕಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಡೆನೂರು ಮನುಗೆ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಲಾಗಿದೆ. ಇಂದು ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಮಾಡಿದ್ದರು. ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ಮಡೆನೂರು ಮನು ನಾಯಕನಾಗಿ ನಟಿಸಿದ್ದಾರೆ. ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಬಿಡುಗಡೆಯಾಗುವ ಒಂದು ದಿನ ಮೊದಲು ಅವರು ಬಂಧಿತರಾಗಿದ್ದರು.

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜೂನ್ 11ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಜೂ.11ರಿಂದ ಮತ್ತೆ ಮುಂಗಾರು ಮಳೆಯ ಆರ್ಭಟ ಶುರುವಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂ.11ಕ್ಕೆ ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಜೂ.12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ. ಮುಂಗಾರು ಆರಂಭದ ಜೂನ್ ಮೊದಲ ವಾರವೇ ಮಳೆ ಕೊರತೆ ಕಾಣಿಸಿಕೊಂಡಿದೆ. ಜೂ.1 ರಿಂದ 4 ವರೆಗಿನ ಅವಧಿಯಲ್ಲಿ ರಾಜ್ಯದಲ್ಲಿ 18.9 ಮಿ.ಮೀ. ನಷ್ಟು ವಾಡಿಕೆ ಮಳೆಯಾಗಬೇಕು. ಆದರೆ 11.6 ಮಿ.ಮೀ. ಅಷ್ಟೇ ಮಳೆಯಾಗಿದೆ. ಈ ಮೂಲಕ ಶೇ.39ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More

ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರ ಘೋಷಣೆಯಂತೆ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದ್ದು ಈ ಯೋಜನೆಯನ್ನು 2025-26ನೇ ಸಾಲಿನಲ್ಲಿ ಮುಂದುವರೆಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ. *ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ.” ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2021-22ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಗೆ ಸಂಬಂಧಿಸಿದ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾದ ಕೇಂದ್ರ ಸರ್ಕಾರದ ಪಿ.ಎ.ಬಿ ಸಭಾ ನಡವಳಿಯಲ್ಲಿ…

Read More

ಶಾಲಾ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ 2025-26ನೇ ಸಾಲಿಗೆ ಪ್ರವೇಶಾತಿ ಸಂದರ್ಭದಲ್ಲಿ ಪಡೆಯುವ ಶುಲ್ಕವನ್ನು ಇಲಾಖೆ ಜಾಲತಾಣದಲ್ಲಿ ಹಾಗೂ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೊಟ್ರೇಶ್.ಜಿ ತಿಳಿಸಿದ್ದಾರೆ. ಶಿಕ್ಷಣ ಹಕ್ಕು ಕಾಯ್ದೆ-2009 ಹಾಗೂ ಕರ್ನಾಟಕ ಎಜುಕೇಷನ್ ಇನ್‌ಸ್ಟçಕ್ಷನ್ಸ್ ರೂಲ್ಸ್-1985 ನಿಯಮಾನುಸಾರ ಮಾನ್ಯತೆ ಪಡೆದಿರುವ ಎಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಸಾರ್ವಜನಿಕರಿಗೆ, ಪೋಷಕರಿಗೆ ಗಮನಕ್ಕೆ ಬರುವಂತೆ ಇಲಾಖೆ ಜಾಲತಾಣದಲ್ಲಿ ಹಾಗೂ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು. ಒಂದು ವೇಳೆ ಕ್ರಮವಹಿಸದಿದ್ದ ಪಕ್ಷದಲ್ಲಿ ಆಡಳಿತ ಮಂಡಳಿ ವಿರುದ್ಧ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದಿಂದ ಸೂಕ್ತ ಕ್ರಮಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು, ಖಾಸಗಿ ಅನುದಾನ ರಹಿತ ಶಾಲೆಗಳು ಇಲಾಖೆ ನಿಯಮಗಳನ್ನು ಪಾಲಿಸುತ್ತಿರುವ ಕುರಿತು ಪರಿಶೀಲಿಸಬೇಕು. ಕ್ರಮವಹಿಸದ ಶಾಲೆಗಳ ಮಾಹಿತಿಯನ್ನು ಇಲಾಖೆ ಗಮನಕ್ಕೆ ತರಬೇಕೆಂದು ತಿಳಿಸಿದ್ದಾರೆ.

Read More

ನವದೆಹಲಿ : ಸರ್ಕಾರಿ ಉದ್ಯೋಗ ಅರ್ಜಿಗಳನ್ನು ಸುಲಭ ಮತ್ತು ಹೆಚ್ಚು ಸುಲಭವಾಗಿಸುವ ನಿಟ್ಟಿನಲ್ಲಿ, ಸಿಬ್ಬಂದಿ ಆಯ್ಕೆ ಆಯೋಗ (SSC) ತನ್ನ mySSC ಮೊಬೈಲ್ ಅಪ್ಲಿಕೇಶನ್‌ನ ಸಂಪೂರ್ಣ ಅಪ್‌ಗ್ರೇಡ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಈಗ Google Play Store ನಲ್ಲಿ ಲಭ್ಯವಿರುವ ಈ ಅಪ್ಲಿಕೇಶನ್, ಅಭ್ಯರ್ಥಿಗಳು – ವಿಶೇಷವಾಗಿ ಗ್ರಾಮೀಣ ಪ್ರದೇಶದವರು – SSC ಪರೀಕ್ಷೆಗಳಿಗೆ ತಮ್ಮ ಅರ್ಜಿಗಳನ್ನು ಸಂಪೂರ್ಣವಾಗಿ ತಮ್ಮ ಮೊಬೈಲ್ ಫೋನ್‌ಗಳ ಮೂಲಕ ಭರ್ತಿ ಮಾಡಲು ಮತ್ತು ಸಲ್ಲಿಸಲು ಅನುವು ಮಾಡಿಕೊಡುತ್ತದೆ. ಈ ಕ್ರಮವು ಕಂಪ್ಯೂಟರ್ ಕೇಂದ್ರಗಳಿಗೆ ಭೇಟಿ ನೀಡುವ ಅಥವಾ ಸೈಬರ್ ಕೆಫೆಗಳನ್ನು ಅವಲಂಬಿಸುವ ಅಗತ್ಯವನ್ನು ಕಡಿಮೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ, ಇದನ್ನು ಅನೇಕ ಅಭ್ಯರ್ಥಿಗಳು, ವಿಶೇಷವಾಗಿ ದೂರದ ಪ್ರದೇಶಗಳಲ್ಲಿ, ಇಲ್ಲಿಯವರೆಗೆ ಅವಲಂಬಿಸಬೇಕಾಗಿತ್ತು. “ಅಭ್ಯರ್ಥಿಗಳು ಈಗ ಆಧಾರ್ ಆಧಾರಿತ OTP ಮತ್ತು ಮುಖ ದೃಢೀಕರಣ ಸೇರಿದಂತೆ ಅಪ್ಲಿಕೇಶನ್‌ನಲ್ಲಿ ಸಂಪೂರ್ಣ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು” ಎಂದು SSC ಅಧ್ಯಕ್ಷ ಎಸ್ ಗೋಪಾಲಕೃಷ್ಣನ್ ಹೇಳಿದರು. “ಇದು ವೆಚ್ಚವನ್ನು ಕಡಿಮೆ ಮಾಡಲು ಮತ್ತು…

Read More

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣದೋಷ/ದೃಷ್ಟಿದೋಷ) ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ  ರೂ.1000/- ಗಳ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಗುತ್ತಿದ್ದು, ವಿಕಲಚೇತನರ ಆರೈಕೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಸೆರೆಬ್ರಲ್ ಪಾಲ್ಸಿ, ಮಸ್ಕುö್ಯಲರ್ ಡಿಸ್ಟೊçÃಫಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಕೆ÷್ಲರೋಸಿಸ್ ಖಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000/-ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅರ್ಜಿದಾರರು ಯು.ಡಿ.ಐ.ಡಿ. ಕಾರ್ಡ್, ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, 2 ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ನೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಕೊಪ್ಪಳ ಇವರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಶೇ.75 ರಷ್ಟು ಮತ್ತು ಅದಕ್ಕಿಂತ ಮೇಲ್ಪಟ್ಟ, ತೀವ್ರತೆರನಾದ ವಿಕಲತೆ ಹೊಂದಿದವರಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ…

Read More