Author: kannadanewsnow57

ಬೆಂಗಳೂರು : ರಾಜ್ಯ ಸರ್ಕಾರದಿಂದಲೇ ಆಂಬುಲೆನ್ಸ್ ಕಂಟ್ರೋಲ್ ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಕುರಿತು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದು, ಒಡಂಬಡಿಕೆಯ ಪಾಲುದಾರರಾದ ಮೆ. ಇ.ಎಂ.ಆರ್.ಐ ಗ್ರೀನ್ ಹೆಲ್ತ್ ಸರ್ವೀಸಸ್ ಅವರಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲು ಸರ್ಕಾರದ ವತಿಯಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ತಂತ್ರಾಂಶ ಬಳಸಿಕೊಂಡು ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲು ಹಾಗೂ ಜಿಲ್ಲಾಡಳಿತದ ಮುಖಾಂತರ ಆಂಬುಲೆನ್ಸ್‌ಗಳ ನಿರ್ವಹಣೆ ಮಾಡಲು ಅನುಮೋದನೆ ನೀಡಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ. ಕೆಜಿಟಿಟಿಐಗಳು ಕೆಎಸ್‌ಡಿಎ ಮತ್ತು ಜೆಟಿಎಸ್ ಉಪಕ್ರಮ ಪ್ರಸ್ತಾವನೆ ಬಲಪಡಿಸುವ ಕಾರ್ಯವನ್ನು 5 ವರ್ಷಗಳಲ್ಲಿ ಎಡಿಬಿಯಿಂದ 970.00 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 416.00 ಕೋಟಿಗಳ ಬಾಹ್ಯ ನಿಧಿಯ ಮೂಲಕ ಕಾರ್ಯಗತಗೊಳಿಸಲು ಎಡಿಬಿಗೆ ಪ್ರಸ್ತಾವನೆ ಸಲ್ಲಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತಕ್ಕೆ ಕಾರಣವಾದವರ ಬಂಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಖಡಕ್ ಆದೇಶ ಹೊರಡಿಸಿದ್ದಾರೆ. ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ. ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ·ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ…

Read More

ಬೆಂಗಳೂರು : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಶೇ.5ರ ಬಡ್ಡಿ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್. ಕೆ. ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್. ಕೆ. ಪಾಟೀಲ್, ಒಂದು ಲಕ್ಷ ಬಹುಮಹಡಿ ವಸತಿ ಯೋಜನೆ ಬೆಂಗಳೂರು ನಗರದಲ್ಲಿ ಜಾರಿಯಲ್ಲಿದ್ದು, ಈ ಯೋಜನೆ ಯಡಿ ಸಾಲ ಪಡೆದು ಮನೆ ಖರೀದಿಸುವವರ ಫಲಾನುಭವಿಗಳಿಗೆ ಶೇ.5ರ ಬಡ್ಡಿ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ. 1 ಲಕ್ಷ ಬಹುಮಹಡಿ ವಸತಿ ಯೋಜನೆಯಲ್ಲಿ ನಿರ್ಮಿಸುತ್ತಿರುವ 45,124 ಒಂದು ಬಿಎಚ್‌ ಮನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು, ಫಲಾನುಭವಿಗಳ ಹಣಕಾಸಿನ ಸಾಮರ್ಥ್ಯದ ಕೊರತೆಯಿರುವುದು ತಿಳಿದುಬಂದಿದೆ. ಆದ್ದರಿಂದ ಈ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಫಲಾನುಭವಿಗಳು ಪಾವತಿಸುವ ಮಾಸಿಕ ಸಾಲದ ಕಂತಿನ ಹೊರೆಯನ್ನು ಕಡಿಮೆ ಮಾಡಲು ಸಾಲದ ಬಡ್ಡಿಯಲ್ಲಿ ಶೇ.3 ರಿಂದ 5 ರಷ್ಟು ಮೊತ್ತವನ್ನು ಸಹಾಯಧನವಾಗಿ ಸರಕಾರದಿಂದ ಪಾವತಿಸಿ, ಬಡ್ಡಿ ಸಬ್ಸಿಡಿಯೆಂದು ನೀಡಲು ಪ್ರಸ್ತಾಪಿಸಲಾಗಿದೆ. ಆದ್ದರಿಂದ ಬಡ್ಡಿ…

Read More

ಶ್ರೀನಗರ : ಪ್ರಧಾನಿ ನರೇಂದ್ರ ಮೋದಿ ಜೂನ್ 6 ರ ಇಂದು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ₹46,000 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಮತ್ತು ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಅವರು ಕತ್ರಾ ಮತ್ತು ಶ್ರೀನಗರ ನಡುವಿನ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು, ಹೆಚ್ಚಾಗಿ ಪ್ರವಾಸಿಗರು ಸಾವನ್ನಪ್ಪಿದ ಘಟನೆಗೆ ಪ್ರತಿಕ್ರಿಯೆಯಾಗಿ ಮೇ 7 ರಂದು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ‘ಆಪರೇಷನ್ ಸಿಂಧೂರ್’ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿ ಇದಾಗಿದೆ. ನಾಳೆ, ಜೂನ್ 6 ನಿಜಕ್ಕೂ ಜಮ್ಮು ಮತ್ತು ಕಾಶ್ಮೀರದ ನನ್ನ ಸಹೋದರಿಯರು ಮತ್ತು ಸಹೋದರರಿಗೆ ವಿಶೇಷ ದಿನವಾಗಿದೆ” ಎಂದು ಪ್ರಧಾನಿ ಮೋದಿ ಜೂನ್ 5 ರಂದು X…

Read More

ಬೆಂಗಳೂರು: ಉನ್ನತ ಪೊಲೀಸ್ ಅಧಿಕಾರಿ ಬಿ. ದಯಾನಂದ ಮತ್ತು ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿದ ನಂತರ ಕರ್ನಾಟಕ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಬೆಂಗಳೂರು ಮಹಾನಗರ ಕಾರ್ಯಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಶ್ರೀ. ಸೀಮಂತ್ ಕುಮಾರ್ ಸಿಂಗ್, ಐಪಿಎಸ್ (ಕೆಎನ್: 1996), ಬೆಂಗಳೂರಿನವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮುಂದಿನ ಆದೇಶದವರೆಗೆ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಆಯುಕ್ತರಾಗಿ ನೇಮಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ಹಲವಾರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.

Read More

ನವದೆಹಲಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC), ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗಾಗಿ 5,293 ಕಾನ್ಸ್‌ಟೇಬಲ್ (ಕಾರ್ಯನಿರ್ವಾಹಕ) ಹುದ್ದೆಗಳ ನೇಮಕಾತಿಗಾಗಿ 2025 ರ ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆಯನ್ನು ನಡೆಸಲಿದೆ. ಅಧಿಕೃತ ಅಧಿಸೂಚನೆಯನ್ನು ಜುಲೈ ಮತ್ತು ಸೆಪ್ಟೆಂಬರ್ 2025 ರ ನಡುವೆ ಬಿಡುಗಡೆ ಮಾಡುವ ನಿರೀಕ್ಷೆಯಿದೆ, ನಂತರ ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಅಧಿಸೂಚನೆ 2025 ಕ್ಕೆ ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಅರ್ಹತಾ ಮಾನದಂಡಗಳೊಂದಿಗೆ ಪರಿಚಿತರಾಗಿರಬೇಕು, ಅದರ ಪ್ರಕಾರ 18 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ 2025 ಅಧಿಸೂಚನೆ PDF ಅನ್ನು ಡೌನ್‌ಲೋಡ್ ಮಾಡುವ ಲಿಂಕ್ ಅನ್ನು ಜುಲೈ ಮತ್ತು ಸೆಪ್ಟೆಂಬರ್ 2025 ರ ನಡುವೆ ಇಲ್ಲಿ ಒದಗಿಸಲಾಗುತ್ತದೆ. ಅಧಿಸೂಚನೆ PDF ಅರ್ಜಿ ಪ್ರಕ್ರಿಯೆ, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಪರೀಕ್ಷಾ ಮಾದರಿ ಮತ್ತು ಪಠ್ಯಕ್ರಮದಂತಹ ಎಲ್ಲಾ ವಿವರಗಳನ್ನು ಒಳಗೊಂಡಿದೆ.…

Read More

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಸಮರ್ಪಕ ವಿದ್ಯುತ್ ಪೂರೈಕೆಗೆ ರಾಜ್ಯದಲ್ಲಿ 100 ವಿದ್ಯುತ್‌ ಉಪಕೇಂದ್ರ (ಸಬ್‌ ಸ್ಟೇಷನ್‌) ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ವಿದ್ಯುತ್‌ ಪ್ರಸರಣ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ 100 ವಿದ್ಯುತ್‌ ಉಪಕೇಂದ್ರ (ಸಬ್‌ ಸ್ಟೇಷನ್‌) ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು, ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ 4 ಲಕ್ಷ ಅಕ್ರಮ ಪಂಪ್ಸೆಟ್ ಗಳ ಪೈಕಿ 2.5 ಲಕ್ಷ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಫೀಡರ್ ಗಳಿಂದ 500 ಮೀಟರ್ ಒಳಗಿನ ಪಂಪ್ಸೆಟ್ ಗಳಿಗೆ ಟ್ರಾನ್ಸ್ಫಾರ್ಮರ್ ಒದಗಿಸಲಾಗುವುದು. 500 ಮೀಟರ್ ನಿಂದ ಹೊರಗಿನ ಪಂಪ್ಸೆಟ್ ಗಳಿಗೆ ಕುಸುಮ್ -ಬಿ ಯೋಜನೆಯಡಿ ಸೋಲಾರ್ ಪಂಪ್ಸೆಟ್ ಗಳನ್ನು ಒದಗಿಸಲಾಗುವುದು. ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಕುಸುಮ್ -ಸಿ…

Read More

ಕರ್ನಾಟಕ ಸವಿತಾ ಸಮಾಜದ ಅಭಿವೃದ್ಧಿ ನಿಗಮದಿಂದ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಸವಿತಾ ಸಮಾಜ ಮತ್ತು ಅದರ ಉಪಜಾತಿಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಮೇಲಿನ ಎಲ್ಲಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಮತ್ತು ಇತರೆ ದಾಖಾಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ…

Read More

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ: ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷ ಒಳಗಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಸಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98 ಸಾವಿರ…

Read More

ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸುವ ಕುರಿತು. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ 90 ದಿನಗಳ ವಸತಿಯುತ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪುರುಷ & ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ತರಬೇತಿ ನೀಡಲು ಅರ್ಜಿಯನ್ನು ಸಲ್ಲಿಸಲು ಸೇವಾಸಿಂಧು ಪೋರ್ಟಲ್‌ ನಲ್ಲಿ ಸೇವೆಯನ್ನು ಸಕ್ರಿಯಗೊಳಿಸಿ ದಿನಾಂಕ: 10.05.2025 ರಿಂದ ಪ್ರಾರಂಭಿಸಿ ದಿನಾಂಕ:05.06.2025 ರವರೆಗೆ ಮುಕ್ತಾಯಗೊಳಿಸಲು ಕೋರಲಾಗಿತ್ತು. ಮುಂದುವರೆದು ಅಭ್ಯರ್ಥಿಗಳ ಕೋರಿಕೆ ಮತ್ತು ಸಹಾಯವಾಣಿಗೆ ಕರೆಗಳು ಬರುತ್ತಿರುವ ಕಾರಣ ದಿನಾಂಕ: 15.06.2025 ರವರೆಗೆ ಸೇವಾಸಿಂಧು ತಂತ್ರಾಂಶದಲ್ಲಿ ಸೇವೆಯನ್ನು ಮುಂದುವರೆಸಲು ಕೋರಿದೆ.

Read More