Author: kannadanewsnow57

ಕೊಪ್ಪಳ : ಗಂಗಾವತಿ ನಗರ ವ್ಯಾಪ್ತಿಯಲ್ಲಿ 2024 ರ ಸೆಪ್ಟೆಂಬರ್ 17 ರಂದು ಅಪ್ರಾಪ್ತ ಯುವಕನಿಗೆ ಮದುವೆ ಮಾಡಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ, ಪರಿಶೀಲನೆ ನಂತರ ಇದನ್ನು ಬಾಲ್ಯ ವಿವಾಹವೆಂದು ಪರಿಗಣಿಸಿ, ಬಾಲ್ಯವಿವಾಹಕ್ಕೆ ಬೆಂಬಲ, ಪ್ರೋತ್ಸಾಹ ನೀಡಿದವರು, ಸಹಕರಿಸಿದವರ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ಸಂಖ್ಯೆ: 0187/2025 ರಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2016 ರಡಿಯಲ್ಲಿ ಮಕ್ಕಳ ಸಹಾಯವಾಣಿಯ ಸಂಯೋಜಕರ ಮೂಲಕ ಸೆಪ್ಟೆಂಬರ್ 15 ರಂದು ದೂರು ದಾಖಲಿಸಲಾಗಿದೆ. ಗಂಗಾವತಿ ನಗರ ವ್ಯಾಪ್ತಿಯಲ್ಲಿ 2024 ರ ಸೆಪ್ಟೆಂಬರ್ 17 ರಂದು ಅಪ್ರಾಪ್ತ ಯುವಕನಿಗೆ ವಿವಾಹ ಮಾಡಿದ್ದು, ವಿವಾಹವನ್ನು ಗಂಗಾವತಿ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಾಯಿಸಿ, ವಿವಾಹ ನೋಂದಣಿ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದಾರೆ. ಆದರೆ ವಿವಾಹದ ಸಂದರ್ಭದಲ್ಲಿ ಯುವಕನಿಗೆ 20 ವರ್ಷ, 6 ತಿಂಗಳು ಏಳು ದಿನಗಳು ಆಗಿದ್ದು, ಅಪ್ರಾಪ್ತ ವಯಸ್ಸಿನ ಯುವಕನಿಗೆ ವಿವಾಹವನ್ನು ಮಾಡಿರುತ್ತಾರೆ. ಈ ವಿವಾಹ ಮಾಡಿದವರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿದುವಂತೆ ಕರ್ನಾಟಕ…

Read More

ನಕಲಿ ವೈದ್ಯರ ಪತ್ತೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿನ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆಯಡಿ, ಪ್ರತಿ ತಾಲ್ಲೂಕಿನಲ್ಲಿಯೂ ಪ್ರತ್ಯೇಕ ಜಾರಿ ತಂಡಗಳನ್ನು ರಚಿಸಿ ನಕಲಿ ವೈದ್ಯರ ಪತ್ತೆಗೆ ಶೋಧನೆ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಕೆ.ಪಿ.ಎಂ.ಇ.(ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ ಅಧಿನಿಯಮ) ಕುರಿತು ಜರುಗಿದ ಜಿಲ್ಲಾ ಮಟ್ಟದ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ಅರ್ಹ ವಿದ್ಯಾರ್ಹತೆ ಮತ್ತು ಅಧಿಕೃತ ನೋಂದಣಿ ಇಲ್ಲದೆ ವೈದ್ಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರನ್ನು ಪತ್ತೆ ಹಚ್ಚಿ, ಅವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ನಕಲಿ ವೈದ್ಯರು ಹೆಚ್ಚು ಇರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಈ ಹಿನ್ನಲೆಯಲ್ಲಿ ಪ್ರತಿ ತಾಲ್ಲೂಕು ಹಂತದಲ್ಲಿ ತನಿಖೆಗೆ ಉಪ ಸಮಿತಿ ರಚಿಸಬೇಕು. ದಾಳಿ ನಡೆಸುವ ಮೂಲಕ ದಾಖಲೆಗಳನ್ನು ಪರಿಶೀಲಿಸಬೇಕು. ವಿಶೇಷ ಕಾರ್ಯಪಡೆಯ ಮಾಸಿಕ ವರದಿಯನ್ನು ಕಾಲ ಕಾಲಕ್ಕೆ…

Read More

ಹೈದರಾಬಾದ್ : ಹೈದರಾಬಾದ್ ನ ಭಾಗ್ಯನಗರದಲ್ಲಿ ಮಾರಕ ಸ್ಕ್ರಬ್ ಟೈಫಸ್ ಕಾಯಿಲೆ ಹರಡುತ್ತಿದೆ. ಮಕ್ಕಳ ಮೇಲೆ ಇದು ಗಂಭೀರ ಪರಿಣಾಮ ಬೀರುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ನಿಲೋಫರ್ ಆಸ್ಪತ್ರೆಯಲ್ಲಿ ಇದೇ ರೀತಿಯ ಕಾಯಿಲೆಯ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ, ನಗರದ ಜನರು ಜಾಗರೂಕರಾಗಿರಲು ವೈದ್ಯರು ಸಲಹೆ ನೀಡುತ್ತಿದ್ದಾರೆ. ರೋಗದ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಚಿಕಿತ್ಸೆ ಪಡೆಯಬೇಕು ಎಂದು ಅವರು ವಿವರಿಸುತ್ತಿದ್ದಾರೆ. ಮತ್ತೊಂದೆಡೆ, ಆಂಧ್ರಪ್ರದೇಶದ ಜಂಟಿ ಅನಂತಪುರ ಜಿಲ್ಲೆಯಲ್ಲಿ ಸ್ಕ್ರಬ್ ಟೈಫಸ್ ಜ್ವರದಿಂದ ಗವ್ವಲ ಮಧು ಎಂಬ ಬಾಲಕ ಸಾವನ್ನಪ್ಪಿರುವುದು ಸಂಚಲನ ಮೂಡಿಸುತ್ತಿದೆ. ಹೊಸ ರೀತಿಯ ಜ್ವರದಿಂದ ಬಾಲಕನೊಬ್ಬ ಸಾವನ್ನಪ್ಪಿರುವುದು ಸ್ಥಳೀಯ ಜನರಲ್ಲಿ ಆತಂಕ ಮೂಡಿಸುತ್ತಿದೆ. ಚಿಕ್ಕ ಮಕ್ಕಳನ್ನು ಗುರಿಯಾಗಿಸಿಕೊಂಡು ಮಾರಕ ಸ್ಕ್ರಬ್ ಟೈಫಸ್ ಕಾಯಿಲೆ ಹರಡುತ್ತಿದೆ. ರೋಗದ ತೀವ್ರತೆ ಹೆಚ್ಚಾದಂತೆ, ನಗರದ ಆಸ್ಪತ್ರೆಗಳು ತುಂಬುತ್ತಿವೆ. ಬಹುತೇಕ ಎಲ್ಲಾ ಅಂತಹ ಪ್ರಕರಣಗಳು ವರದಿಯಾಗುತ್ತಿವೆ. ನಿಲೋಫರ್ ಆಸ್ಪತ್ರೆಯಲ್ಲಿ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿವೆ ಎಂದು ಅಲ್ಲಿನ ವೈದ್ಯರು ಹೇಳುತ್ತಾರೆ. ಈ ಕಾಯಿಲೆಗೆ ತುತ್ತಾದ…

Read More

ಇತ್ತೀಚೆಗೆ ವೈವಾಹಿಕ ಹಿಂಸಾಚಾರದ ಅನೇಕ ಘಟನೆಗಳು ಸುದ್ದಿಯಲ್ಲಿವೆ. ವಿಶೇಷವಾಗಿ ಕೆಲವು ಸ್ಥಳಗಳಲ್ಲಿ, ಹೆಂಡತಿಯರು ತಮ್ಮ ಗಂಡಂದಿರನ್ನು ಕಿರುಕುಳ ನೀಡುತ್ತಿದ್ದರೆ, ಇತರ ಸ್ಥಳಗಳಲ್ಲಿ, ಗಂಡಂದಿರು ತಮ್ಮ ಹೆಂಡತಿಯರ ಮೇಲೆ ಸೈಕೋಗಳಂತೆ ವರ್ತಿಸುತ್ತಿದ್ದಾರೆ. ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ತರ್ಲುಪಾಡು ಮಂಡಲದ ಕಲುಜುವ್ವಲಪಾಡುವಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಸ್ಥಳೀಯ ಎಸ್ಸಿ ಕಾಲೋನಿಯಲ್ಲಿ ವಾಸಿಸುವ ಗುರುನಾಥಮ್ ತನ್ನ ಹೆಂಡತಿಯನ್ನು ಕ್ರೂರವಾಗಿ ಹೊಡೆದನು. ಮನೆಯಲ್ಲಿ ಎರಡು ತೊಲೆಗಳಿಗೆ ಕಟ್ಟಿ ಚಿತ್ರಹಿಂಸೆ ನೀಡಿದನು. ಅವಳನ್ನು ಬೆಲ್ಟ್ನಿಂದ ಹೊಡೆದನು ಮತ್ತು ತನ್ನ ಕಾಲುಗಳಿಂದ ಒದ್ದು ಹಲ್ಲೆ ಮಾಡಿದ್ದಾನೆ. ಗುರುನಾಥಮ್ ಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಅವನಿಗೆ ಒಬ್ಬ ಮಗನಿದ್ದಾನೆ. ಅವನು ಪ್ರಸ್ತುತ ಹೈದರಾಬಾದ್ನಲ್ಲಿ ಇನ್ನೊಬ್ಬ ಮಹಿಳೆಯೊಂದಿಗೆ ವಾಸಿಸುತ್ತಿದ್ದಾನೆ. ಅವನ ಹೆಂಡತಿ ಕಲುಜುವ್ವಲಪಾಡುವಿನ ಬೇಕರಿಯಲ್ಲಿ ಕೆಲಸ ಮಾಡುತ್ತಾಳೆ ಮತ್ತು ಮಕ್ಕಳು ಮತ್ತು ಕುಟುಂಬವನ್ನು ಪೋಷಿಸುತ್ತಾಳೆ. ಸ್ಥಳೀಯರು ಹೇಳುವಂತೆ, ಅವನು ಹೈದರಾಬಾದ್ನಿಂದ ಬಂದಾಗಲೆಲ್ಲಾ, ಗಾಂಜಾ ಕುಡಿದು ಬೇಕರಿಯಲ್ಲಿ ಕೆಲಸ ಮಾಡಿದ ಹಣವನ್ನು ನೀಡುವಂತೆ ಒತ್ತಾಯಿಸಿ ಅವನನ್ನು ಥಳಿಸಿ ಕಿರುಕುಳ ನೀಡುತ್ತಿದ್ದ. ಈ ಅನುಕ್ರಮದಲ್ಲಿ,…

Read More

ಬೆಂಗಳೂರು : ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ ಮಾಡುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1) ರಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-110ರಲ್ಲಿ ಘೋಷಿಸಿರುವಂತೆ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಸಂಬಂಧ ಸರ್ಕಾರದ ಹಂತದಲ್ಲಿ ಪರಿಶೀಲಿಸಲಾಗಿ, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 147 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಿ ಆದೇಶಿಸಲಾಗಿದೆ. ಸದರಿ 147 ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಗಳ ಪೈಕಿ CSR ಬೆಂಬಲಿತ ಒಟ್ಟು 65 ಸರ್ಕಾರಿ ಶಾಲೆಗಳನ್ನು, ಆಯವ್ಯಯ ಘೋಷಣೆಯಂತೆ ರಾಜ್ಯ ಅನುದಾನದಡಿ 76 (Non-CSR) ಸರ್ಕಾರಿ ಶಾಲೆಗಳನ್ನು ಹಾಗೂ ಕೇಂದ್ರ ಶಿಕ್ಷಣ ಮಂತ್ರಾಲಯ, ನವದೆಹಲಿ, ಇಲ್ಲಿನ PAB ಯಲ್ಲಿನ ಅನುಮೋದನೆಯಂತೆ 6 ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಿ ಆದೇಶಿಸಲಾಗಿದೆ ಕ್ರಮಾಂಕ (2) ರಲ್ಲಿ ಮಾನ್ಯ ಇಲಾಖಾ ಸಚಿವರ ಸೂಚನೆಯಂತೆ ರಾಜ್ಯ ಅನುದಾನದಡಿ ಈ ಕೆಳಕಂಡ ಒಟ್ಟು 35 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು…

Read More

ಬೆಂಗಳೂರು : ರಾಜ್ಯದ್ಯಾಂತ ಅರಣ್ಯ ಭೂಮಿ ಒತ್ತುವರಿ ಪತ್ತೆಗೆ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡಗಳನ್ನು (SIT) ರಚಿಸಿ ಆದೇಶ ಹೊರಡಿಸಿದೆ. ಹೌದು, ಕಂದಾಯ ಇಲಾಖೆಯ ಸ್ವಾಧೀನದಲ್ಲಿದ್ದ ಅರಣ್ಯ ಪ್ರದೇಶವನ್ನು ಅರಣ್ಯೇತರ ಉದ್ದೇಶಗಳಿಗಾಗಿ ಮಂಜೂರು ಮಾಡಲಾಗಿದೆಯೇ ಎಂಬುದನ್ನು ಪತ್ತೆ ಹಚ್ಚಿ, ಅಂತಹ ಭೂಮಿಯನ್ನು ಮರುವಶಕ್ಕೆ ಪಡೆಯಲು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಎಸ್ ಐಟಿ ರಚಿಸಿ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ ಅರಣ್ಯ ಇಲಾಖೆಯು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಎಸ್ಐಟಿ ರಚಿಸಿದೆ. ನಾಲ್ಕು ತಿಂಗಳಲ್ಲಿ ಈ ಕುರಿತ ವರದಿ ನೀಡಬೇಕೆಂದು ಜಿಲ್ಲಾ ಎಸ್ಐಟಿಗೆ ನಿರ್ದೇಶಿಸಲಾಗಿದೆ. ಕಂದಾಯ ಇಲಾಖೆ ಸ್ವಾಧೀನದಲ್ಲಿರುವ ಅರಣ್ಯ ಭೂಮಿಯನ್ನು ಖಾಸಗಿ ವ್ಯಕ್ತಿಗಳು ಇಲ್ಲವೇ ಸಂಸ್ಥೆಗಳಿಗೆ ಹಂಚಿಕೆ ಮಾಡಿದ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಬಳಕೆ ಮಾಡಲಾಗಿದೆಯೇ ಎನ್ನುವುದನ್ನು ವಿಶೇಷ ತನಿಖಾ ತಂಡಗಳು ಪತ್ತೆ ಮಾಡಬೇಕು. ಹೀಗೆ ಹಂಚಿಕೆ ಮಾಡಿದ ಭೂಮಿಯನ್ನು ರಾಜ್ಯ ಸರ್ಕಾರವು ವಾಪಸ್ ಪಡೆದು ಅರಣ್ಯ ಇಲಾಖೆಗೆ ಹಿಂದಿರುಗಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು…

Read More

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಸರ್ಕಾರಿ ಆಸ್ಪತ್ರೆಯ ಶೌಚಗೃಹದ ಬಕೆಟ್ ನಲ್ಲಿ ಮಂಗಳವಾರ ನವಜಾತ ಹೆಣ್ಣು ಶಿಶುವೊಂದು ಪತ್ತೆ ಆಗಿದೆ. ಹೊನ್ನಾಳಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಮಗುವನ್ನು ರಕ್ಷಿಸಿದ್ದಾರೆ. ಆಗ ತಾನೆ ಹುಟ್ಟಿದ ಶಿಶುವನ್ನು ಯಾರೋ ಬಟ್ಟೆಯಲ್ಲಿ ಸುತ್ತಿ ಶೌಚಗೃಹದ ಬಕೆಟ್ನಲ್ಲಿ ಹಾಕಿ ಹೋಗಿದ್ದು, ಮಗು ಅಳುವ ಶಬ್ದ ಕೇಳಿದ ಸ್ವಚ್ಛತಾ ಸಿಬ್ಬಂದಿ ಮೇಲಧಿಕಾರಿಗಳಿಗೆ ತಿಳಿಸಿದ್ದಾರೆ. ವೈದ್ಯರು ಹಾಗೂ ಇತರ ಸಿಬ್ಬಂದಿ ಬಂದು ನೋಡಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಹೊನ್ನಾಳಿ ಠಾಣೆಯಲ್ಲಿ ದೂರು ನೀಡಲಾಗಿದೆ.

Read More

ನವದೆಹಲಿ: ದೇಶದಲ್ಲಿ, ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಎರಡು ರಾಷ್ಟ್ರೀಯ ಶಾಲಾ ಮಂಡಳಿಗಳಿವೆ, ಅವುಗಳೆಂದರೆ CBSE ಮತ್ತು NIOS. CBSE ಮುಖಾಮುಖಿ ಶಿಕ್ಷಣದ ಮೂಲಕ ಶಿಕ್ಷಣವನ್ನು ನೀಡುತ್ತಿದ್ದರೆ, NIOS ಮುಕ್ತ ಮತ್ತು ದೂರ ಶಿಕ್ಷಣದ ಮೂಲಕ ಶಿಕ್ಷಣವನ್ನು ನೀಡುತ್ತಿದೆ. CBSE ನಡೆಸುವ ಮಂಡಳಿ ಪರೀಕ್ಷೆಗಳಲ್ಲಿ ಹಾಜರಾಗಲು ಅಗತ್ಯವಾದ ಅವಶ್ಯಕತೆಗಳು ಈ ಕೆಳಗಿನಂತಿವೆ. 1. X ತರಗತಿ ಮತ್ತು XII ತರಗತಿಗಳು ಕ್ರಮವಾಗಿ IX ಮತ್ತು X ತರಗತಿ ಮತ್ತು XII ಮತ್ತು XII ತರಗತಿಗಳನ್ನು ಒಳಗೊಂಡಿರುವ ಎರಡು ವರ್ಷಗಳ ಕಾರ್ಯಕ್ರಮವಾಗಿದೆ. ಅದರಂತೆ, ಪರೀಕ್ಷೆಗಳಿಗೆ ಹಾಜರಾಗಲು ಅರ್ಹತೆ ಪಡೆಯಲು ಎಲ್ಲಾ ವಿಷಯಗಳು ವಿದ್ಯಾರ್ಥಿಯು 2 ವರ್ಷಗಳ ಕಾಲ ಅಧ್ಯಯನ ಮಾಡಿರಬೇಕು. 2. ವಿದ್ಯಾರ್ಥಿಗಳು ಕನಿಷ್ಠ 75% ಹಾಜರಾತಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. 3. CBSE ನೀಡುವ ಎಲ್ಲಾ ವಿಷಯಗಳಲ್ಲಿ, ಆಂತರಿಕ ಮೌಲ್ಯಮಾಪನವು NEP-2020 ರ ಪ್ರಕಾರ ಮೌಲ್ಯಮಾಪನದ ಕಡ್ಡಾಯ ಅವಿಭಾಜ್ಯ ಅಂಗವಾಗಿದೆ. ಇದು 2 ವರ್ಷಗಳ ದೀರ್ಘ ಪ್ರಕ್ರಿಯೆಯಾಗಿದೆ. ಒಬ್ಬ ವಿದ್ಯಾರ್ಥಿ ಶಾಲೆಗೆ ಹೋಗದಿದ್ದರೆ,…

Read More

ಬೀದರ್ : ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಈ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.  ಬೀದರ ಜಿಲ್ಲೆಯ ಮಹಾರಾಷ್ಟ್ರ ಗಡಿಭಾಗಕ್ಕೆ ಹೊಂದಿಕೊಂಡಿರುವ ಕೆಲವು ಗ್ರಾಮಗಳ ಜಾನುವಾರುಗಳಲ್ಲಿ ಚರ್ಮಗಂಟು (Lumpy Disease) ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವಿಶೇಷ ನಿಗಾವಹಿಸಲು ಹಾಗೂ ತುರ್ತು ಕ್ರಮ ಕೈಗೊಳ್ಳುವಂತೆ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜಾನುವಾರುಗಳಲ್ಲಿ ಚರ್ಮಗಂಟು ರೋಗ ತಡೆಗಟ್ಟಲು ಎಚ್ಚರಿಕೆ  ಬೀದರ ಜಿಲ್ಲೆಯ ಮಹಾರಾಷ್ಟ್ರ ಗಡಿಭಾಗಕ್ಕೆ ಹೊಂದಿಕೊಂಡಿರುವ ಕೆಲವು ಗ್ರಾಮಗಳ ಜಾನುವಾರುಗಳಲ್ಲಿ ಚರ್ಮಗಂಟು (Lumpy Disease) ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವಿಶೇಷ ನಿಗಾವಹಿಸಲು ಹಾಗೂ ತುರ್ತು ಕ್ರಮ ಕೈಗೊಳ್ಳುವಂತೆ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ✅ ಗಡಿಭಾಗದ ಗ್ರಾಮಗಳಲ್ಲಿ ಪಶುವೈದ್ಯಕೀಯ ಇಲಾಖೆಯ ಮೂಲಕ ತಕ್ಷಣವೇ ಲಸಿಕೆ ಹಾಕಿಸುವ ಕಾರ್ಯ ಕೈಗೊಳ್ಳಬೇಕು. ✅ ರೋಗದ ಲಕ್ಷಣಗಳು (ಚರ್ಮದಲ್ಲಿ ಗುಳ್ಳೆಗಳು, ಜ್ವರ, ಹಾಲು ಉತ್ಪಾದನೆ ಕಡಿಮೆಯಾಗುವುದು, ತಿನ್ನದಿರುವುದು) ಕಂಡುಬಂದ ತಕ್ಷಣ ಪಶುವೈದ್ಯರಿಗೆ ಮಾಹಿತಿ ನೀಡಬೇಕು. ✅ ಸೋಂಕಿತ…

Read More

ಬೆಂಗಳೂರು : ರಾಜ್ಯಾದ್ಯಂತ ಕಳೆದ ಸೆ.13ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ ನಲ್ಲಿ ದಾಖಲೆಯ ಒಟ್ಟು 1.11 ಕೋಟಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ ಎಸ್‌ಎ) ಕಾರ್ಯನಿರ್ವಾಹಕ ಅಧ್ಯಕ್ಷ, ಹೈಕೋರ್ಟ್ ನ್ಯಾ| ಅನು ಸಿವರಾಮನ್, ಲೋಕ ಅದಾಲತ್‌ಗಾಗಿ ಹೈಕೋರ್ಟ್‌ ಒಟ್ಟು 989 ಪೀಠಗಳನ್ನು ಸ್ಥಾಪಿಸಲಾಗಿತ್ತು, ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳೂ ಸೇರಿ ದಾಖಲೆಯ ಒಟ್ಟು 1.11 ಕೋಟಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿ, ಸಂಬಂಧಪಟ್ಟವರಿಗೆ 3,997 ಕೋಟಿ ರೂ.ಪರಿಹಾರ ಕೊಡಿಸಲಾಗಿದೆ ಎಂದು ಹೇಳಿದ್ದಾರೆ.

Read More