Subscribe to Updates
Get the latest creative news from FooBar about art, design and business.
Author: kannadanewsnow57
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಪೋಸ್ಟ್ ಮೂಲಕ ಅವರು ಈ ಮಾಹಿತಿಯನ್ನು ನೀಡಿದ್ದಾರೆ. ಉಭಯ ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಬಗ್ಗೆ ಚರ್ಚೆ ನಡೆಯಿತು ಎಂದು ಪ್ರಧಾನಿ ಮೋದಿ ಹೇಳಿದರು. ಯುಕೆ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಿದ್ದೇನೆ. ನಾವು ದ್ವಿಪಕ್ಷೀಯ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಚರ್ಚಿಸಿದ್ದೇವೆ. ಪರಸ್ಪರ ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದದ ಶೀಘ್ರ ತೀರ್ಮಾನಕ್ಕಾಗಿ ಕೆಲಸ ಮಾಡುವ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ ‘ಚಲೋ ಇಂಡಿಯಾ’ ಮತ್ತು ‘ಲಿವಿಂಗ್ ಬ್ರಿಡ್ಜ್’ ಎಂಬ ಎರಡು ಪ್ರಮುಖ ಅಭಿಯಾನಗಳನ್ನು ಪ್ರಾರಂಭಿಸಿದೆ. ‘ಚಲೋ ಇಂಡಿಯಾ’ ಅಭಿಯಾನವು ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಲಿವಿಂಗ್ ಬ್ರಿಡ್ಜಸ್ ಅಭಿಯಾನವು ಯುಕೆಯಲ್ಲಿ ಭಾರತೀಯ ಮೂಲದ ಜನರ ಕೊಡುಗೆಯನ್ನು ಆಚರಿಸಲು. ಭಾರತದ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ತಮ್ಮ…
ಬೆಂಗಳೂರು : 3,064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ (PC – CAR / DAR ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೈಹಿಕ ಪರೀಕ್ಷೆಯನ್ನು ಮುಂದೂಡಿಕೆಯಾಗಿದೆ. ಮಾರ್ಚ್ 15 & 16 ರಂದು ನಡೆಸಲು ಉದ್ದೇಶಿಸಲಾಗಿದ್ದ 3,064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ (PC – CAR / DAR ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೈಹಿಕ ಪರೀಕ್ಷೆ / Physical ನ್ನು (PST & PET) ಕಾರಣಾಂತರಗಳಿಂದ ಮುಂದೂಡಿ ಇದೀಗ ಮಾರ್ಚ್ 18 & 19 ರಂದು ನಡೆಸಲು ಉದ್ದೇಶಿಸಲಾಗಿದೆ.
ಬೆಂಗಳೂರು : ಆಸ್ತಿ ಮೇಲೆ ಸಾಲ ಪಡೆಯುವುದು ಸೇರಿದಂತೆ ಇನ್ನಿತರ ವ್ಯವಹಾರಗಳಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ದಾಖಲಿಸುವ ಮ್ಯುಟೇಷನ್ ಕ್ರಮವನ್ನು ಸ್ವಯಂಚಾಲಿತ ವ್ಯವಸ್ಥೆ ಇಂದಿನಿಂದ ಜಾರಿಯಾಗುತ್ತಿದೆ. ಈ ಕುರಿತಂತೆ ಮಾಹಿತಿ ನೀಡಿದಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಕಂದಾಯ ಇಲಾಖೆಯ ಸೇವೆಯಾಗಿರುವಂತ ಪಹಣಿಯಲ್ಲಿ ರಾಜ್ಯದ ರೈತರ ಬ್ಯಾಂಕ್ ಸಾಲ, ತೀರುವಳಿ ಸೇರಿದಂತೆ ವಿವಿಧ ಮಾಹಿತಿಗಳು ದಾಖಲಾಗೋದಕ್ಕೆ ಗ್ರಾಮಾಧಿಕಾರಿಗಳು ದೃಢೀಕರಣದ ನಂತ್ರ ದಾಖಲಾಗುತ್ತಿದ್ದವು. ಆದ್ರೇ ಇದಕ್ಕೆ ತಿಲಾಂಜನಿ ನೀಡಲಾಗಿದೆ. ಇನ್ಮುಂದೆ ಪಹಣಿಯಲ್ಲಿ ಈ ಎಲ್ಲಾ ವಿವರಗಳು ಸ್ವಯಂಚಾಲಿತವಾಗಿ ದಾಖಲಾಗಲಿದ್ದಾವೆ. ಬ್ಯಾಂಕ್ಗಳಲ್ಲಿ ಸಾಲ ಪಡೆದರೆ, ಸಾಲ ತೀರುವಳಿಯಾದರೆ, ವಿಭಾಗ ಮಾಡಕೊಂಡರೆ, ಆಸ್ತಿಯನ್ನು ಅಡಮಾನ ಇಟ್ಟರೆ, ಎಸಿ ನ್ಯಾಯಾಲಯದ ಆದೇಶಗಳಾಗಿದ್ದರೆ ಹೀಗೆ ಸಣ್ಣಪುಟ್ಟ ಬದಲಾವಣೆಗಳು ಆದಾಗ ಅದರ ವಿವರವನ್ನು ಪಹಣಿಯಲ್ಲಿ ದಾಖಲಿಸುವುದನ್ನು ಸ್ವಯಂಚಾಲಿತ ಮಾಡಲಾಗಿದೆ. ಇದಕ್ಕಾಗಿ ಗ್ರಾಮಾಧಿಕಾರಿಗಳು ಧೃಢೀಕರಣ (ಥಂಬ್ ಕೊಡುವುದು) ಮಾಡುವುದು ಅಗತ್ಯವಿಲ್ಲ ಎಂದು ಹೇಳಿದರು. ಆಯಾ ಪಹಣಿ ಮೇಲೆ ಬ್ಯಾಂಕ್ಗಳು, ನ್ಯಾಯಾಲಯಗಳು ಹೀಗೆ ವಿವಿಧ ಮೂಲಗಳಿಂದ ನೀಡುವ ಮಾಹಿತಿಯನ್ನು ನೇರವಾಗಿ ಪಡೆದು ಅದನ್ನು ಪಹಣಿಯಲ್ಲಿ…
ಬೆಂಗಳೂರು : ರಾಜ್ಯ ಸರ್ಕಾರವು ಸರಳ ವಿವಾಹವಾಗುವ ದಂಪತಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ 50,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ʼಸರಳ ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಅರ್ಹ ದಂಪತಿಗಳು ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ : https://swdservices.karnataka.gov.in/swincentive/HAhome.aspx ಸರಳವಾಗಿ ವಿವಾಹವಾದ ದಂಪತಿಗಳಿಗೆ ರೂ. 50,000/- ಸಾವಿರ ಪ್ರೋತ್ಸಾಹಧನ, ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹಧನ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 2,000/- ಸಾವಿರಗಳನ್ನು ನೀಡಲಾಗುವುದು. ಸರಳ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ನೋಂದಾಯಿತ ಸಂಘ-ಸಂಸ್ಥೆ, ಧಾರ್ಮಿಕ ಸಂಸ್ಥೆಗಳು ಆಯೋಜಿಸುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ದಂಪತಿಗಳು ವಿವಾಹವಾಗಿರಬೇಕು ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕನಿಷ್ಠ 10 ಜೋಡಿಗಳು ವಿವಾಹವಾಗಿರತಕ್ಕದ್ದು ಸರಳ…
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ‘ಸಹಾಯವಾಣಿ’ (Helpline) ಕೌನ್ಸಿಲಿಂಗ್ (counseling) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಪೆÇೀಷಕರ ಅಭಿಲಾμÉಯಾಗಿರುತ್ತದೆ. ವಿದ್ಯಾರ್ಥಿಗಳ ಸಾಮಥ್ರ್ಯ, ಬುದ್ಧಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮ ಇವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಅವರ ಮೇಲೆ ಒತ್ತಡವನ್ನು ಪೆÇೀಷಕರು / ಶಿಕ್ಷಕರು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸಲಾಗದಿರುವುದು, ಏಕಾಗ್ರತೆಯನ್ನು ಕಳೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಈ ಸಮಸ್ಯೆ ನಿವಾರಣೆಯಾಗದೆ ವಿದ್ಯಾರ್ಥಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗಳ ನಿವಾರಣೆ ಮಾಡಿ, ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಫೂರ್ತಿ ನೀಡಬೇಕಾದ ಆವಶ್ಯಕತೆ ಇದೆ. ಈ ರೀತಿಯ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು…
ಚಾಮರಾಜನಗರ : ರಾಜ್ಯ ಕಾಂಗ್ರೆಸ್ ಸರ್ಕಾರವು ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅಧಿಕಾರ ಮತ್ತು ಸಂಪತ್ತು ಸಮಾಜದ ಎಲ್ಲರಲ್ಲೂ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯ. ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ, ಗ್ಯಾರಂಟಿಗಳನ್ನು ಕೊಟ್ಟಿದೆ. ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಏಕೈಕ ಸರ್ಕಾರ ನಮ್ಮದು ಎಂದರು. ನಮ್ಮ ಐದು ಗ್ಯಾರಂಟಿಗಳಿಗೆ ನಾಲ್ಕೂವರೆ ಕೋಟಿ ಜನರು ಫಲಾನುಭವಿಗಳಾಗಿದ್ದಾರೆ. ರಾಜ್ಯದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 45 ಸಾವಿರದಿಂದ 50 ಸಾವಿರ…
ಬೆಂಗಳೂರು : 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ. 2023-24ನೇ ಸಾಲಿಗೆ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆಯು ಅನುಷ್ಠಾನಗೊಂಡಿದ್ದು, ಈ ಯೋಜನೆಯಡಿ ಸದಸ್ಯರನ್ನು ನೊಂದಾಯಿಸು ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಈ ಪ್ರಯುಕ್ತ ಗ್ರಾಮೀಣ ಹಾಗೂ ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರು ಇನ್ನೂ ಹೆಚ್ಚಿನ ಸದಸ್ಯರನ್ನು ನೊಂದಾಯಿಸಿಕೊಳ್ಳಲು ಮಾರ್ಚ್ 31 ರವರೆಗೆ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ. ಈ ಸದಾವಕಾಶವನ್ನು ಎಲ್ಲಾ ಗ್ರಾಮಾಂತರ ರೈತ ಸಹಕಾರಿ ಸದಸ್ಯರು ಹಾಗೂ ನಗರ ಸಹಕಾರಿ ಸದಸ್ಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.
ನವದೆಹಲಿ:ಭಾರತದ ಅತ್ಯಂತ ಕಿರಿಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಗ್ನಾನಂದ ಅವರು ಮಾರ್ಚ್ 12 ರಂದು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ ತಮ್ಮ ಹೆತ್ತವರಿಗೆ ಎಲೆಕ್ಟ್ರಿಕ್ ಕಾರನ್ನು ಉಡುಗೊರೆಯಾಗಿ ನೀಡಿದ್ದಕ್ಕಾಗಿ ಉದ್ಯಮಿ ಆನಂದ್ ಮಹೀಂದ್ರಾ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಮಹಿಳಾ ಸಬಲೀಕರಣದ ಬಗ್ಗೆ ನಾನು ಕೆಂಪು ಕೋಟೆಯಿಂದ ಮಾತನಾಡಿದಾಗಲೆಲ್ಲಾ ಕಾಂಗ್ರೆಸ್ ನನ್ನನ್ನು ಗೇಲಿ ಮಾಡುತ್ತಿದೆ: ಪ್ರಧಾನಿ ಮೋದಿ ಜನವರಿ 16 ರಂದು ಹಾಲಿ ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ವಿರುದ್ಧ ವಿಜಯವನ್ನು ಸಾಧಿಸಿದ್ದಕ್ಕಾಗಿ ಈ ಉಡುಗೊರೆ ಬಂದಿದೆ. ಪ್ರಗ್ನಾನಂದ ಅವರ ಗೆಲುವು ಚೆಸ್ ಜಗತ್ತಿನಲ್ಲಿ ಮಹತ್ವದ ಸಾಧನೆ ಎಂದು ಶ್ಲಾಘಿಸಲ್ಪಟ್ಟಿದೆ, ಇದು ಅವರನ್ನು ಕ್ರೀಡೆಯಲ್ಲಿ ಉದಯೋನ್ಮುಖ ತಾರೆ ಎಂದು ಗುರುತಿಸುತ್ತದೆ. “ಎಕ್ಸ್ ಯುವಿ 400 ಸ್ವೀಕರಿಸಲಾಗಿದೆ. ನನ್ನ ಪೋಷಕರು ತುಂಬಾ ಸಂತೋಷವಾಗಿದ್ದಾರೆ. ತುಂಬಾ ಧನ್ಯವಾದಗಳು ಆನಂದ್ ಮಹೀಂದ್ರಾ, ಸರ್” ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಈ ಹಿಂದೆ ಆಗಸ್ಟ್ 28, 2023 ರಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಆನಂದ್ ಮಹೀಂದ್ರಾ, ಪೋಷಕರು ತಮ್ಮ…
ನವದೆಹಲಿ: ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಆರು ಅಲ್ಪಸಂಖ್ಯಾತ ಸಮುದಾಯಗಳಾದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರ ಧಾರ್ಮಿಕ ಆಧಾರದ ಮೇಲೆ ಕಿರುಕುಳಕ್ಕೊಳಗಾದ ವ್ಯಕ್ತಿಗಳು ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬಹುದು. ಕೇಂದ್ರ ಗೃಹ ಸಚಿವಾಲಯ (ಎಂಎಚ್ಎ) ವೆಬ್ ಪೋರ್ಟಲ್ (https://indiancitizenshiponline.nic.in) ಅನ್ನು ಪ್ರಾರಂಭಿಸಿದೆ. ಈ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಉಪಕ್ರಮವು ಸೋಮವಾರ ಎಂಎಚ್ಎ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (ಸಿಎಎ -2019) ಅಡಿಯಲ್ಲಿ ನಿಯಮಗಳ ಅಧಿಸೂಚನೆಯನ್ನು ಅನುಸರಿಸುತ್ತದೆ. ಈಗ ಪೌರತ್ವ (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯಲ್ಪಡುವ ಈ ನಿಯಮಗಳು, 2014 ರ ಡಿಸೆಂಬರ್ 31 ಕ್ಕಿಂತ ಮೊದಲು ಭಾರತದಲ್ಲಿ ಆಶ್ರಯ ಪಡೆದ ಮೇಲೆ ತಿಳಿಸಿದ ಸಮುದಾಯಗಳಿಗೆ ಸೇರಿದ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ನೀಡಲು ಅನುಕೂಲ ಮಾಡಿಕೊಡುತ್ತದೆ. ನರೇಂದ್ರ ಮೋದಿ ಸರ್ಕಾರವು ಮಾರ್ಚ್ 11, 2024 ರಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ನಿಯಂತ್ರಿಸುವ ನಿಯಮಗಳನ್ನು ಜಾರಿಗೆ ತರುವುದಾಗಿ ಅಧಿಕೃತವಾಗಿ ಘೋಷಿಸಿತ್ತು. ವ್ಯಾಪಕ ಪ್ರತಿಭಟನೆಗಳ…
ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-01-2024ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಕುರಿತಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ. ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ಕರ್ನಾಟಕ ರಾಜ್ಯ ಸರ್ಕಾರವೂ ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಈ ಹಿಂದಿನಿಂದಲೂ ಮಂಜೂರು ಮಾಡಿರುತ್ತದೆ ಹಾಗೂ ಉಲ್ಲೇಖದ ಆದೇಶದಂತೆ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ದಿನಾಂಕ: 01-01-2024ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4% ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿರುತ್ತದೆ. ಅದರಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ: 01-01-2024 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ಕೋರಲಾಗಿದೆ.