Author: kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 75 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಹೆಚ್ ಎಎಲ್ ಏರ್ ಪೋರ್ಟ್ ಮುಖ್ಯ ಗೇಟ್ ಬಳಿ 75 ಪ್ರಯಾಣಿಕರಿದ್ದ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಎಚ್ಚೆತ್ತ ನಿರ್ವಾಹಕರು ಎಲ್ಲಾ ಪ್ರಯಾಣಿಕರನ್ನು ಬಸ್ ನಿಂದ ಕೆಳಗಿಳಿಸಿದ್ದಾರೆ. ಬೆಳಗ್ಗಿನ ಜಾವ 5:10ಕ್ಕೆ ಅಗ್ನಿ ದುರಂತ ಸಂಭವಿಸಿದೆ. ದುರಂತಕ್ಕೀಡಾದ ಬಸ್‌ (ಸಂಖ್ಯೆ KA57 F 4568) ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿತ್ತು. ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಗೆ ಹರಡಿದೆ. ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದೆ. ಹೆಚ್ಎಲ್ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಕಾಮುಕನೊಬ್ಬ ಯುವತಿಯ ಖಾಸಗಿ ಅಂಗ ಮುಟ್ಟಿ ಪರಾರಿಯಾಗಿರುವ ಘಟನೆ ನಡೆದಿದೆ.  ಸೆಪ್ಟೆಂಬರ್ 7 ರಂದು ರಾತ್ರಿ 11.50ರಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಂಜುನಾಥ್ ಎಂಬಾತನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜಕ್ಕೂರು ಮುಖ್ಯ ರಸ್ತೆಯಲ್ಲಿ ಶ್ವಾನವೊಂದು ಅಪಘಾತಕ್ಕೆ ಒಳಗಾಗಿತ್ತು. ಕಾರು ನಿಲ್ಲಿಸಿ ಶ್ವಾನದ ರಕ್ಷಣೆಗೆ ಮುಂದಾಗಿದ್ದ ಯುವತಿಗೆ ಬೈಕ್ ನಲ್ಲಿ ಬಂದ ಆರೋಪಿ ಬ್ಯಾಡ್ ಟಚ್ ಮಾಡಿ ಪರಾರಿಯಾಗಿದ್ದ. ನಾಯಿ ರಕ್ಷಿಸಿದ್ದರಿಂದ ಯುವತಿ ಕೈಗೆ ರಕ್ತ ಆಗಿತ್ತು. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್ ಬಳಿ ಯುವತಿ ಕೈ ತೊಳೆದುಕೊಳ್ಳುತ್ತಿದ್ದರು. ಸ್ವಲ್ಪ ಹೊತ್ತಿನ ಬಳಿಕ ಮತ್ತೆ ಬಂದು ಯುವತಿಯ ಖಾಸಗಿ ಅಂಗ ಮುಟ್ಟಿ ಆರೋಪಿ ಪರಾರಿಯಾಗಿದ್ದ. ಘಟನೆ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Read More

2024-25ರ ಆರ್ಥಿಕ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಇನ್ನೂ ತಮ್ಮ ರಿಟರ್ನ್ಸ್ ಸಲ್ಲಿಸದ ಅನೇಕ ತೆರಿಗೆದಾರರು ಕೊನೆಯ ನಿಮಿಷದ ವಿಸ್ತರಣೆಯನ್ನು ಆಶಿಸುತ್ತಿರಬಹುದು. ಆದಾಗ್ಯೂ, ಗಡುವನ್ನು ಮತ್ತಷ್ಟು ವಿಸ್ತರಿಸಲಾಗುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಅಧಿಕೃತ ಕೊನೆಯ ದಿನಾಂಕ ಸೆಪ್ಟೆಂಬರ್ 15, 2025 ಆಗಿದೆ. ಸಾಮಾಜಿಕ ಮಾಧ್ಯಮ ಮತ್ತು ಮೆಸೇಜಿಂಗ್ ಅಪ್ಲಿಕೇಶನ್ಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ನಕಲಿ ಸಂದೇಶದ ಬಗ್ಗೆ ತೆರಿಗೆದಾರರಿಗೆ ಎಚ್ಚರಿಕೆ ನೀಡುವ ಅಧಿಸೂಚನೆಯನ್ನು ಇಲಾಖೆ ಹೊರಡಿಸಿದೆ. ಐಟಿಆರ್ ಸಲ್ಲಿಸುವ ಗಡುವನ್ನು ಸೆಪ್ಟೆಂಬರ್ 30, 2025 ರವರೆಗೆ ವಿಸ್ತರಿಸಲಾಗಿದೆ ಎಂದು ಸುಳ್ಳು ಸಂದೇಶದಲ್ಲಿ ಹೇಳಲಾಗಿದೆ. ಆದಾಯ ತೆರಿಗೆ ಇಲಾಖೆಯು ಈ ತಪ್ಪು ಮಾಹಿತಿಯನ್ನು ದೃಢವಾಗಿ ತಿರಸ್ಕರಿಸಿತು ಮತ್ತು ತೆರಿಗೆದಾರರಿಗೆ @IncomeTaxIndia ಅಧಿಕೃತ ನವೀಕರಣಗಳನ್ನು ಮಾತ್ರ ಅವಲಂಬಿಸುವಂತೆ ನೆನಪಿಸಿತು. ಆನ್ಲೈನ್ನಲ್ಲಿ ಪ್ರಸಾರವಾಗುತ್ತಿರುವ ನಕಲಿ ನೋಟಿಸ್ನಲ್ಲಿ “ಸಿಬಿಡಿಟಿ 15ನೇ ಸೆಪ್ಟೆಂಬರ್ 2025 ರೊಳಗೆ ಐಟಿಆರ್ ಸಲ್ಲಿಸಬೇಕಿದ್ದ ಅಂತಿಮ ದಿನಾಂಕವನ್ನು ವಿಸ್ತರಿಸಿದೆ” ಎಂದು ತಪ್ಪಾಗಿ ಹೇಳಲಾಗಿದೆ. ಇಂತಹ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 75 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಹೆಚ್ ಎಎಲ್ ಏರ್ ಪೋರ್ಟ್ ಮುಖ್ಯ ಗೇಟ್ ಬಳಿ 75 ಪ್ರಯಾಣಿಕರಿದ್ದ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಎಚ್ಚೆತ್ತ ನಿರ್ವಾಹಕರು ಎಲ್ಲಾ ಪ್ರಯಾಣಿಕರನ್ನು ಬಸ್ ನಿಂದ ಕೆಳಗಿಳಿಸಿದ್ದಾರೆ. ಇಂದು ಬೆಳಗ್ಗೆ 5 : 15 ಕ್ಕೆ ಈ ಘಟನೆ ನಡೆದಿದೆ. ಬಸ್ ಮೆಜೆಸ್ಟಿಕ್ ನಿಂದ ಕಾಡುಗೋಡಿಗೆ ತೆರಳುತ್ತಿತ್ತು, ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಗೆ ಹರಡಿದೆ. ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದೆ.

Read More

ನವದೆಹಲಿ : ಶನಿವಾರ ಬೆಳಿಗ್ಗೆ ಗ್ರೇಟರ್ ನೋಯ್ಡಾ ಪಶ್ಚಿಮದಲ್ಲಿರುವ ಏಸ್ ಸಿಟಿ ಸೊಸೈಟಿಯಲ್ಲಿ 13 ನೇ ಮಹಡಿಯಿಂದ ಹಾರಿ ಮಹಿಳೆಯೊಬ್ಬರು ತನ್ನ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ಸಾಕ್ಷಿ ಚಾವ್ಲಾ (37) ಮತ್ತು ಮಗ ದಕ್ಷ ಚಾವ್ಲಾ (11) ಸಾವನ್ನಪ್ಪಿದ್ದಾರೆ. ಬಿಸ್ರಾಖ್ ಪೊಲೀಸರು ಫ್ಲಾಟ್‌ನಲ್ಲಿ ದೊರೆತ ಡೈರಿಯಿಂದ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ತಾನೇ ಕಾರಣ ಎಂದು ಹೇಳಿಕೊಂಡು, ಮಹಿಳೆ ತನ್ನ ಏಕೈಕ ಮಗನ ಅನಾರೋಗ್ಯದ ತೊಂದರೆಯನ್ನು ಉಲ್ಲೇಖಿಸಿದ್ದಾರೆ. ಮಗ ಮಾನಸಿಕ ಅಸ್ವಸ್ಥ ಎಂದು ತನಿಖೆಯಿಂದ ತಿಳಿದುಬಂದಿದೆ. ಮೂಲತಃ ಉತ್ತರಾಖಂಡದ ಕಾಶಿಪುರ ನಿವಾಸಿ ದರ್ಪಣ್ ಚಾವ್ಲಾ, ಗುರುಗ್ರಾಮ್ ಮೂಲದ ಕಂಪನಿಯಲ್ಲಿ ಸಿಎ ಆಗಿದ್ದಾರೆ. ಅವರು ಏಸ್ ಸಿಟಿ ಸೊಸೈಟಿಯ ಇ-ಟವರ್‌ನಲ್ಲಿ ವಾಸಿಸುತ್ತಿದ್ದಾರೆ. ಪತ್ನಿ ಸಾಕ್ಷಿ ಮತ್ತು ಮಗ ದಕ್ಷ ಕೂಡ ಒಟ್ಟಿಗೆ ವಾಸಿಸುತ್ತಿದ್ದರು. ದಕ್ಷ ಬಾಲ್ಯದಿಂದಲೂ ಮಾನಸಿಕ ಅಸ್ವಸ್ಥರಾಗಿದ್ದರು. ಸಾಕ್ಷಿ ಈ ಬಗ್ಗೆ ಚಿಂತಿತರಾಗಿದ್ದರು. ದಕ್ಷ ಕೂಡ ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯರ ಸಲಹೆಯ ಮೇರೆಗೆ, ಬೆಳಿಗ್ಗೆ 9:30 ರ ಸುಮಾರಿಗೆ ಮಗನಿಗೆ…

Read More

ನವದೆಹಲಿ : ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಉಪಕಾರ್ಯದರ್ಶಿ ನವಜೋತ್ ಸಿಂಗ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ BMW ಕಾರು ಡಿಕ್ಕಿ ಹೊಡೆದಿದೆ. ಅವರು ತಮ್ಮ ಪತ್ನಿಯೊಂದಿಗೆ ಬಾಂಗ್ಲಾ ಸಾಹಿಬ್ ಗುರುದ್ವಾರದಿಂದ ಮನೆಗೆ ಹಿಂತಿರುಗುತ್ತಿದ್ದರು ಎಂದು ಹೇಳಲಾಗುತ್ತಿದೆ.ಈ ಅಪಘಾತದಲ್ಲಿ ಅವರ ಪತ್ನಿಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಧೌಲಾ ಕುವಾನ್, ಕಂಬ ಸಂಖ್ಯೆ 57 ರಿಂದ ರಾಜಾ ಗಾರ್ಡನ್ ಬಳಿ ಅಪಘಾತ ಸಂಭವಿಸಿದೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವ ಬದಲು, ಅವರನ್ನು 17 ಕಿ.ಮೀ ದೂರದಲ್ಲಿರುವ ಜಿಟಿಬಿ ನಗರದಲ್ಲಿರುವ ನ್ಯೂಲೈಫ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಆಸ್ಪತ್ರೆ ತಲುಪುವ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಅಪಘಾತಕ್ಕೆ ಕಾರಣವಾದ BMW ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. https://twitter.com/CSSforum_/status/1967279154585612769?ref_src=twsrc%5Etfw%7Ctwcamp%5Etweetembed%7Ctwterm%5E1967279154585612769%7Ctwgr%5Ede983cbb80f279c108d3dc8101220259071c2d76%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fhindi%2Fnews24hindi-epaper-dh7ff60505e8854d7dbdfe58abbc421d2f%2Fvittmantralaykediptisekretarikisadakdurghatanamemautbmwkarnemaritakkarpatnikihalatgambhir-newsid-n681062614

Read More

ನವದೆಹಲಿ : ಜಿಎಸ್ಟಿ ಕಡಿತದ ವಿವರಗಳ ಕುರಿತು ಅಂಗಡಿಗಳಲ್ಲಿ ಫಲಕಗಳಗಳನ್ನು ಸ್ಥಾಪಿಸುವುದು ಕಡ್ಡಾಯ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅವರು ಭಾನುವಾರ ಚೆನ್ನೈನಲ್ಲಿ ‘ಅಭಿವೃದ್ಧಿ ಹೊಂದಿದ ಭಾರತದ ಕಡೆಗೆ ತೆರಿಗೆ ಸುಧಾರಣೆಗಳು’ ಎಂಬ ವಿಷಯದ ಕುರಿತು ನಡೆದ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಅಂಗಡಿಗಳಲ್ಲಿ ಜಿಎಸ್ ಟಿ ಕಡಿತದ ಫಲಕಗಳನ್ನು ಸ್ಥಾಪಿಸುವುದು ಕಡ್ಡಾಯ. ಈ ಸಂಬಂಧ ಎಲ್ಲಾ ರಾಜ್ಯಗಳಿಗೆ ಆದೇಶಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು. ಕೇಂದ್ರ ಸರ್ಕಾರದ ನಿರ್ಧಾರದಂತೆ, ಈ ತಿಂಗಳ 22 ರಿಂದ ದೇಶಾದ್ಯಂತ ಜಿಎಸ್ಟಿ ತೆರಿಗೆ ಕಡಿತ ಜಾರಿಗೆ ಬರಲಿದೆ. ಸಾರ್ವಜನಿಕ ಕಲ್ಯಾಣವನ್ನು ಗುರಿಯಾಗಿಟ್ಟುಕೊಂಡು 350 ಕ್ಕೂ ಹೆಚ್ಚು ವಸ್ತುಗಳ ಬೆಲೆಗಳನ್ನು ಗಣನೀಯವಾಗಿ ಕಡಿಮೆ ಮಾಡಲಾಗಿದೆ. ರಾಜ್ಯ ಸರ್ಕಾರಗಳು ಅದರ ಸಂಪೂರ್ಣ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಸೂಚಿಸಿದರು. ಈ ಹಿಂದೆ ನಾಲ್ಕು ವರ್ಗಗಳಲ್ಲಿ (5, 12, 18, 28) ವಿಧಿಸಲಾಗಿದ್ದ ತೆರಿಗೆಗಳನ್ನು ಎರಡು ವರ್ಗಗಳಿಗೆ (5, 18…

Read More

ದುಬೈ : ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ್ದು, ಪಂದ್ಯ ಮುಗಿದ ನಂತರ ಆಟಗಾರರು ಪರಸ್ಪರ ಮಾತನಾಡಲಿಲ್ಲ ಮತ್ತು ಕೈಕುಲುಕಲಿಲ್ಲ. ಹೌದು, ಸಾಮಾನ್ಯವಾಗಿ ಕ್ರಿಕೆಟ್ ಪಂದ್ಯ ಮುಗಿದ ನಂತರ ಎರಡೂ ತಂಡಗಳ ಆಟಗಾರರು ಕೈಕುಲುಕುತ್ತಾರೆ ಮತ್ತು ಚರ್ಚೆಗಳಲ್ಲಿ ತೊಡಗುತ್ತಾರೆ. ಆದರೆ ಭಾನುವಾರ, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನಿ ಆಟಗಾರರು ನೇರವಾಗಿ ತಮ್ಮ ಡ್ರೆಸ್ಸಿಂಗ್ ಕೋಣೆಗಳಿಗೆ ಹೋದರು. ಸದ್ಯ ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಾಕಿಸ್ತಾನ ವಿರುದ್ಧ ಭಾರತ ತಂಡದ ಗೆಲುವನ್ನು ಭಾರತೀಯ ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಅರ್ಪಿಸಿದ್ದಾರೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ 7 ವಿಕೆಟ್ ಗಳಿಂದ ಪಾಕಿಸ್ತಾನವನ್ನು ಮಣಿಸಿತು. ಭಾರತ ಮತ್ತೊಂದು ಪ್ರಭಾವಶಾಲಿ ಆಲ್ ರೌಂಡ್ ಪ್ರದರ್ಶನ ನೀಡಿ…

Read More

ಹೊನ್ನಾವರ : ಕರ್ನಾಟಕದ ಪ್ರಸಿದ್ಧ ಜನಪದ ವಿದ್ವಾಂಸ, ಸಂಶೋಧಕ ಡಾ. ಎನ್.ಆರ್. ನಾಯಕ (90) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಎನ್.ಆರ್. ನಾಯಕ ಅವರು, ಅಂಕೋಲಾ ತಾಲೂಕು ಬಾವಿಕೇರಿ ಮೂಲದ ಅವರು ಹೊನ್ನಾವರದ ಎಸ್ಡಿಎಂ ಕಾಲೇಜಿನಲ್ಲಿ ಪ್ರಾಧ್ಯಾಪಕ, ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ, ಕನ್ನಡ ಪ್ರಾಧಿಕಾರ, ಕನ್ನಡ ಅಭ್ಯಾಸ ಮಂಡಳಿ ಸೇರಿ ವಿವಿಧ ಸಮಿತಿಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಪಡುಕೋಗಿಲೆ, ಕನ್ನಡ ಬಯಲಾಟ ಪರಂಪರೆ, ಜೇಂಗೊಡ, ಹಾಲಕ್ಕಿ ಒಕ್ಕಲಿಗರ ಜನಪದ ಗೀತೆಗಳು, ಸುಗ್ಗಿಯ ಪದಗಳು, ಗಾಮೊಕ್ಕಲ ಮಹಾಭಾರತ, ಮುಕ್ರಿಗಳ ಜನಪದ ಗೀತೆ ಮತ್ತು ಕಥೆಗಳು ಸೇರಿ ನೂರಾರು ಕೃತಿಗಳನ್ನು ಪ್ರಕಟಿಸಿದ್ದರು. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯಿಂದ ‘ಜಾನಪದ ತಜ್ಞ’(1993), ಕರ್ನಾಟಕ ಸರಕಾರ ರಾಜ್ಯೋತ್ಸವ ಪ್ರಶಸ್ತಿ(2003), ಗೌರೀಶ ಕಾಯ್ಕಿಣಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯಿಂದ ಪ್ರಶಸ್ತಿ, ದೆಹಲಿಯ ಕರ್ನಾಟಕ ಸಂಘದಿಂದ ಪ್ರಶಸ್ತಿ, ಗೊರುಚ ಪ್ರಶಸ್ತಿ, ವಿ.ಸಿ.ಸನ್ಮಾನ, ಗೋವಿಂದ ಪೈ ಸಂಶೋಧನಾ ಕೇಂದ್ರ ಉಡುಪಿಯಿಂದ, ಜಿ.…

Read More

ಬೆಂಗಳೂರು: ಕುರುಬ ಸಮುದಾಯದ ಎಸ್ ಟಿ ಸೇರ್ಪಡೆ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದ್ದು, ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸುವ ಕುರಿತು ಸೆಪ್ಟೆಂಬರ್ 16 ರ ನಾಳೆ ಮಹತ್ವದ ಸಭೆ ನಿಗದಿಯಾಗಿದೆ.  ಎಸ್ಟಿಗೆ ಸೇರಿಸುವ ಕುರಿತು ಪರಿಶಿಷ್ಟ ಪಂಗಡಗಳ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸೆ.16ರಂದು ಸಭೆ ಜಿಲ್ಲೆಗಳಲ್ಲಿರುವ ಕುರುಬ ಸಮುದಾಯವನ್ನು ನಿಗದಿಯಾಗಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿರುವ ಕುರುಬ ಸಮುದಾಯವನ್ನು ಸಮಾನಾರ್ಥಕವಾದ ಗೊಂಡ ಸಮುದಾಯಕ್ಕೆ ಸೇರ್ಪಡೆ ಕುರಿತು ಈ ಸಭೆ ಚರ್ಚಿಸಲಿದೆ. ಸಭೆಯಲ್ಲಿ ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕರು ಹಾಗೂ ಸಮಾಜ ಕಲ್ಯಾಣ ಇಲಾಖೆ ಎಸ್ಸಿಎಸ್ಪಿ, ಟಿಎಸ್ಪಿ ನೋಡಲ್ ಏಜನ್ಸಿ ಸಲಹೆಗಾರರು ಭಾಗವಹಿಸಲಿದ್ದಾರೆ.

Read More