Author: kannadanewsnow57

ಬಳ್ಳಾರಿ : ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ರೈತರು ತಪ್ಪದೇ ಪಹಣಿ-ಆಧಾರ್ ಜೋಡಣೆ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಜಿಲ್ಲಾಡಳಿತದಿಂದ ನಗರದ ವಿಮ್ಸ್ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಾ ನೆರವೇರಿಸಿ ಅವರು ಮಾತನಾಡಿದರು. ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ಪಹಣಿ-ಆಧಾರ್ ಜೋಡಣೆ ಕೈಗೊಳ್ಳಲಾಗಿದೆ. ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಯೋಜನೆಯಲ್ಲಿ ಈಗಾಗಲೇ ಬಳ್ಳಾರಿ ಜಿಲ್ಲೆಯಲ್ಲಿ ಶೇ.80 ರಷ್ಟು 5,23,542 ರೈತರ ಜಮೀನು ಪೈಕಿ 4,12,084 ಭೂ ಮಾಲೀಕರ ಜಮೀನನ್ನು ಅವರ ಆಧಾರ ಸಂಖ್ಯೆಗೆ ಜೋಡಣೆ ಮಾಡಲಾಗಿದೆ ಎಂದರು. ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕಾö್ಯನ್ ಮಾಡಿ, ಇಂಡೆಕ್ಸ್ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈವರೆಗೆ ಒಟ್ಟು 4,43,27,379 ಕೋಟಿ ಪುಟಗಳನ್ನು ಸ್ಕಾö್ಯನ್ ಮಾಡಲಾಗಿದೆ. 31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಉಳಿದ ತಾಲೂಕುಗಳಲ್ಲೂ ದಾಖಲೆಗಳನ್ನು ಸ್ಕಾö್ಯನ್ ಮಾಡಿ ಡಿಜಿಟಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು…

Read More

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗುರುವಾರ ಹೊಸ ಸಣ್ಣ ಉಪಗ್ರಹ ಉಡಾವಣಾ ವಾಹನ (ಎಸ್ಎಸ್ಎಲ್ವಿ) ರಾಕೆಟ್ನಲ್ಲಿ ಭೂ ವೀಕ್ಷಣಾ ಉಪಗ್ರಹ (ಇಒಎಸ್ -08) ಅನ್ನು ಉಡಾವಣೆ ಮಾಡುವುದಾಗಿ ಘೋಷಿಸಿದೆ.  ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಒಎಸ್ -08 ಉಪಗ್ರಹವನ್ನು ಎಸ್ಎಸ್ಎಲ್ವಿ ಮೇಲೆ ಶುಕ್ರವಾರ ಉಡಾವಣೆ ಮಾಡಲಾಗುವುದು.  ಎಸ್ಎಸ್ಎಲ್ವಿಯ ಮೂರನೇ ಅಭಿವೃದ್ಧಿ ಹಾರಾಟದ ಉಡಾವಣೆಯನ್ನು ಆಗಸ್ಟ್ 16, 2024 ರಂದು ಭಾರತೀಯ ಕಾಲಮಾನ 09:17 ಗಂಟೆಗೆ ಪ್ರಾರಂಭವಾಗುವ ಒಂದು ಗಂಟೆಯ ಉಡಾವಣಾ ವಿಂಡೋದಲ್ಲಿ ನಿಗದಿಪಡಿಸಲಾಗಿದೆ” ಎಂದು ಇಸ್ರೋ X.com ಪೋಸ್ಟ್ನಲ್ಲಿ ತಿಳಿಸಿದೆ.  ಈ ಉಪಗ್ರಹವು ಎಲೆಕ್ಟ್ರೋ ಆಪ್ಟಿಕಲ್ ಇನ್ಫ್ರಾರೆಡ್ ಪೇಲೋಡ್ (ಇಒಐಆರ್), ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್-ರಿಫ್ಲೆಕ್ಟೋಮೆಟ್ರಿ ಪೇಲೋಡ್ (ಜಿಎನ್ಎಸ್ಎಸ್-ಆರ್) ಮತ್ತು ಎಸ್ಐಸಿ ಯುವಿ ಡೋಸಿಮೀಟರ್ ಅನ್ನು ಲೋ ಅರ್ಥ್ ಆರ್ಬಿಟ್ (ಎಲ್ಇಒ) ಗೆ ತಲುಪಿಸಲಿದೆ.  ಸೂಕ್ಷ್ಮ ಉಪಗ್ರಹವನ್ನು ವಿನ್ಯಾಸಗೊಳಿಸುವುದು ಮತ್ತು ಅಭಿವೃದ್ಧಿಪಡಿಸುವುದು, ಮೈಕ್ರೋಸ್ಯಾಟ್ಲೈಟ್ ಬಸ್ಗೆ ಹೊಂದಿಕೆಯಾಗುವ ಪೇಲೋಡ್ ಉಪಕರಣಗಳನ್ನು ರಚಿಸುವುದು ಮತ್ತು ಭವಿಷ್ಯದ ಕಾರ್ಯಾಚರಣೆಯ ಉಪಗ್ರಹಗಳಿಗೆ…

Read More

ಬೆಂಗಳೂರು : ಹೊರಗುತ್ತಿಗೆ ಮಹಿಳಾ ನೌಕರರ ಹೆರಿಗೆ ರಜೆ ಕುರಿತಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಜಯನಗರ ಮೂಲದ ಚಾಂದಬಿ ಬಳಿಗಾರ್ ಹೂವಿನಹಡಗಲಿಯ ರೈತ ಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ಇಲ್ಲಿ ಅವರನ್ನು ಜೂನ್ 2014 ರಲ್ಲಿ ಗುತ್ತಿಗೆ (ಗುತ್ತಿಗೆ ನೌಕರರ ಹೆರಿಗೆ ರಜೆ) ಮೇಲೆ ಒಂದು ವರ್ಷದ ಅಕೌಂಟೆಂಟ್ ಆಗಿ ನೇಮಿಸಲಾಯಿತು. ಮಹಿಳೆ ಎರಡನೇ ಮಗುವನ್ನು ಗರ್ಭಧರಿಸಿದಾಗ, ಅವರು ಮೇ 6, 2023 ಮತ್ತು ಆಗಸ್ಟ್ 31, 2023 ರ ನಡುವೆ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 1, 2023 ರಂದು, ಮಹಿಳೆ ಹೂವಿನಹಡಗಲಿ ಕೃಷಿ ಅಧಿಕಾರಿಯ ಮುಂದೆ ಕೆಲಸಕ್ಕೆ ಮರಳಿದಾಗ, ಅವಳ ಸ್ಥಾನದಲ್ಲಿ ಬೇರೊಬ್ಬರಿಗೆ ಕೆಲಸ ನೀಡಲಾಗಿದೆ ಎಂದು ತಿಳಿಸಲಾಯಿತು. ನಂತರ, ಮಹಿಳೆ ತನ್ನ ದೂರಿನೊಂದಿಗೆ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಿದರು. ಅವರು ಅನೇಕ ಅಧಿಕಾರಿಗಳ ಮುಂದೆ ಮನವಿ ಮಾಡಿದರು ಆದರೆ ಸಮಾಧಾನವನ್ನು ಹೊರತುಪಡಿಸಿ ಬೇರೇನೂ ಸಿಗಲಿಲ್ಲ. ಎಲ್ಲಾ ಕಡೆಯಿಂದಲೂ ಮನವಿ ಮಾಡಿ ಸುಸ್ತಾಗಿದ್ದ ಮಹಿಳೆ…

Read More

ಬೆಂಗಳೂರು : 2023-24ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಸಹಶಿಕ್ಷಕರು, ದೈಹಿಕ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರುಗಳಿಗೆ ಅಂತರ್ ವಿಭಾಗ ಮಟ್ಟದ ಕೋರಿಕೆ/ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ನಿಯಮಗಳಂತೆ, ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮ-2022ರ ಪ್ರಕಾರ ಉಲ್ಲೇಖ-1ರಲ್ಲಿನ ಮಾರ್ಗಸೂಚಿಯನ್ವಯ ಅಂತರ ವಿಭಾಗ ಮಟ್ಟದ ವರ್ಗಾವಣಾ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ವರ್ಗಾವಣಾ ಕೌನ್ಸಿಲಿಂಗ್ ಪ್ರಕ್ರಿಯೆಯು ರೌಂಡ್ ರೋಬಿನ್ ನಂತೆ ನಿಗಧಿತ ದಿನಗಳಂದು ಬೆಳಿಗ್ಗೆ 9-00 ರಿಂದ ಸಂಜೆ 7-00 ಗಂಟೆಯವರೆಗೆ ನಿರಂತರವಾಗಿ ನಡೆಯಲಿದ್ದು ಈಗಾಗಲೇ ಪ್ರಕಟಿಸಲಾಗಿರುವ ಆಧ್ಯತಾ ಪಟ್ಟಿಯಲ್ಲಿರುವ ಶಿಕ್ಷಕರು ಪ್ರಸ್ತುತ ಕರ್ತವ್ಯ ನಿರತ ಜಿಲ್ಲೆಯ ಉಪನಿರ್ದೇಶಕರು(ಆಡಳಿತ) ಇವರ ಕಛೇರಿಯಲ್ಲಿ ನಿಗಧಿತ ದಿನಾಂಕದಂದು ಪೂರಕ ಮೂಲ ದಾಖಲೆಗಳ ಸಹಿತ…

Read More

ನವದೆಹಲಿ : ಒಡಿಶಾ ಸರ್ಕಾರವು ಗುರುವಾರ ರಾಜ್ಯ ಸರ್ಕಾರ ಮತ್ತು ಖಾಸಗಿ ವಲಯದಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಒಂದು ದಿನದ ಮುಟ್ಟಿನ ರಜೆ ನೀತಿಯನ್ನು ಪರಿಚಯಿಸಿದೆ. ಕಟಕ್ನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಒಡಿಶಾ ಉಪಮುಖ್ಯಮಂತ್ರಿ ಪಾರ್ವತಿ ಪರಿದಾ ಈ ಘೋಷಣೆ ಮಾಡಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ, ಈ ನೀತಿಯು ಮಹಿಳಾ ಉದ್ಯೋಗಿಗಳಿಗೆ ತಮ್ಮ ಋತುಚಕ್ರದ ಮೊದಲ ಅಥವಾ ಎರಡನೇ ದಿನದಂದು ರಜೆ ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ, ಇದು ಮಹಿಳೆಯರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತಮವಾಗಿ ಬೆಂಬಲಿಸುವ ಗುರಿಯನ್ನು ಹೊಂದಿದೆ. ಈ ಕ್ರಮವು ಭಾರತದಲ್ಲಿ ಮುಟ್ಟಿನ ರಜೆ ನೀತಿಗಳ ಬಗ್ಗೆ ವ್ಯಾಪಕ ಸಂಭಾಷಣೆಯೊಂದಿಗೆ ಹೊಂದಿಕೆಯಾಗುತ್ತದೆ. ಋತುಸ್ರಾವದ ರಜೆಯ ಮಹಿಳೆಯರ ಹಕ್ಕು ಮತ್ತು ಮುಟ್ಟಿನ ಆರೋಗ್ಯ ಉತ್ಪನ್ನಗಳಿಗೆ ಉಚಿತ ಪ್ರವೇಶ ಮಸೂದೆ, 2022, ಮುಟ್ಟಿನ ಸಮಯದಲ್ಲಿ ಮಹಿಳೆಯರು ಮತ್ತು ಟ್ರಾನ್ಸ್ ವುಮೆನ್ ಗಳಿಗೆ ಮೂರು ದಿನಗಳ ವೇತನ ಸಹಿತ ರಜೆಯನ್ನು ಪ್ರಸ್ತಾಪಿಸುತ್ತದೆಯಾದರೂ, ಮಸೂದೆಯನ್ನು ಇನ್ನೂ ಜಾರಿಗೆ ತರಲಾಗಿಲ್ಲ. ಮಹಿಳಾ…

Read More

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಶಾಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿಷಯಾನ್ಮಯವಾಗಿ, ರಾಜ್ಯದಲ್ಲಿ ಡೆಂಗ್ಯೂ, ಚಿಕೂನ್ ಗುನ್ಯ ಹಾಗೂ ಜಿಕಾ ಮುಂತಾದ ರೋಗಗಳು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ನಿರ್ದೇಶನದಂತೆ ಶಾಲೆಗಳಲ್ಲಿ ವಹಿಸಬೇಕಾದ ಮುಂಜಾಗ್ರತ ಕ್ರಮಗಳ ಕುರಿತು ಇಲಾಖಾವತಿಯಿಂದ ಈಗಾಗಲೇ ಉಲ್ಲೇಖ-1 ರನ್ವಯ ಅಗತ್ಯ ನಿರ್ದೇಶನ ನೀಡಲಾಗಿರುತ್ತದೆ. ಪ್ರಸ್ತುತ, 2024ನೇ ಸಾಲಿನಲ್ಲಿ ದಿನಾಂಕ: 28.7.2024ರ ವರೆಗೆ ರಾಜ್ಯದಲ್ಲಿ ವರದಿಯಾಗಿರುವ ಒಟ್ಟು 17,227 ಡೆಂಗೂ ಪ್ರಕರಣಗಳ ಪೈಕಿ 25% ಡೆಂಗ್ಯೂ ಪ್ರಕರಣಗಳು 6 ರಿಂದ 16 ವರ್ಷ ವಯಸ್ಸಿನ ಮಕ್ಕಳಲ್ಲಿ ಕಂಡುಬಂದಿರುತ್ತದೆ. ಈ ಹಿನ್ನಲೆಯಲ್ಲಿ 6 ರಿಂದ 16 ವರ್ಷ ವಯಸ್ಸಿನ ಮಕ್ಕಳಲ್ಲಿ ಇಂತಹ ರೋಗಗಳನ್ನು ತಡೆಗಟ್ಟಲು ವಹಿಸಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಹಾಗೂ ಶಾಲಾ ಮಕ್ಕಳು ಈ ರೋಗಗಳಿಗೆ ಈಡಾದಲ್ಲಿ ಸೂಕ್ತ ಚಿಕಿತ್ಸೆಯನ್ನು ಪಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಉಲ್ಲೇಖ-02ರಲ್ಲಿ…

Read More

ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾಥಾವತ್ ಮುಂದುವರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಣೆಕ್ ಷಾ ಮೈದಾನದಲ್ಲಿ 78 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾಥಾವತ್ ಮುಂದುವರೆಯಲಿದೆ ಎಂದು ಹೇಳುವ ಮೂಲಕ ಪರಿಷ್ಕರಣೆ ಕುರಿತ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಕಳೆದ ವರ್ಷ ನಾವು 36 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿದ್ದೇವೆ. ಈ ವರ್ಷ ಈ ಯೋಜನೆಗಳಿಗೆ 52 ಸಾವಿರ ಕೋಟಿ ರೂಪಾಯಿ ನಿಗದಿಪಡಿಸಿದ್ದೇವೆ. ಕರ್ನಾಟಕದ ಈ ಯೋಜನೆ ದೇಶಕ್ಕೆ ಮಾದರಿ ಎಂದರೆ ಖಂಡಿತಾ ಅತಿಶಯೋಕ್ತಿಯಾಗಲಾರದು. ಕಳೆದ ವರ್ಷ ಅನಾವೃಷ್ಟಿಯಿಂದಾಗಿ ನಮ್ಮ ರೈತರು ಸಂಕಷ್ಟ ಎದುರಿಸಬೇಕಾಯಿತು. ಕೇಂದ್ರ ಸರ್ಕಾರ ನೆರವು ನೀಡದಿದ್ದರೂ, ರೈತರ ನೆರವಿಗೆ ನಾವು ಕೈಜೋಡಿಸಿದ್ದೇವೆ. ಬೆಳೆ ನಷ್ಟ ಅನುಭವಿಸಿದ 38,58,737 ರೈತರಿಗೆ ಒಟ್ಟಾರೆಯಾಗಿ 3454.22 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ವಿತರಿಸಲಾಗಿದೆ. ಪ್ರಸ್ತುತ ಅತಿ…

Read More

ಬೆಂಗಳೂರು : ದೇಶಾದ್ಯಂತ ಇಂದು 78 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಇಂದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ಮಾತನಾಡಿನ ಸಿಎಂ ಸಿದ್ದರಾಮಯ್ಯ, ನಾಡಿನ ಜನತೆಗೆ 78 ನೇ ಸ್ವಾತಂತ್ರ್ಯೋತ್ಸವದ ಶುಭಾಷಯಗಳನ್ನು ಕೋರಿದ್ದಾರೆ. ಕಳೆದ 77 ವರ್ಷಗಳಲ್ಲಿ ಕರ್ನಾಟಕ ಮಹತ್ವದ ಪಾತ್ರ ಹೊಂದಿದೆ. ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಜನರ ಜೀವನ ಮಟ್ಟ ಸುದಾರಿಸುವಂತೆ ಮಾಡಿದೆ. ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 1.20 ಕೋಟಿ ಮಹಿಳೆಯರಿಗೆ ಅನುಕೂಲ , ಈವರೆಗೆ 25,258 ಕೊಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಈವರೆಗೆ 4.08 ಕೋಟಿ ಅನ್ನಭಾಗ್ಯ ಫಲಾನುಭವಿಗಳಿಗೆ ಪ್ರಯೋಜನೆ ಪಡೆದಿದ್ದಾರೆ. ಗೃಹಜ್ಯೋತಿ ಯೋಜನೆಗೆ 8,844 ಕೋಟಿ ರೂ. ನೀಡಲಾಗಿದೆ. ಯುವನಿಧಿ ಯೋಜನೆಗೆ 1.31 ಲಕ್ಷ ಪದವೀಧರ, ಡಿಪ್ಲೋಮಾ ನಿರುದ್ಯೋಗಿಗಳಿಗೆ ಸಹಾಯಧನ ನೀಡಲಾಗಿದೆ ಎಂದು ಹೇಳಿದ್ದಾರೆ.…

Read More

ನವದೆಹಲಿ:  ಒಂದೆಡೆ, ಆಗಸ್ಟ್ 15 ರ ದೃಷ್ಟಿಯಿಂದ, ದೇಶಾದ್ಯಂತ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಗುತ್ತಿದೆ. ಮತ್ತೊಂದೆಡೆ, ಗುಜರಾತ್ನಲ್ಲಿ ಶಾಲಾ ಮಕ್ಕಳ ಟೀ ಶರ್ಟ್ಗಳ ಮೇಲೆ ವೀರ್ ಸಾವರ್ಕರ್ ಅವರ ಚಿತ್ರವನ್ನು ಮುದ್ರಿಸಿದ್ದರಿಂದ ವಿವಾದ ಪ್ರಾರಂಭವಾಗಿದೆ. ಸುರೇಂದ್ರ ನಗರ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸಾವರ್ಕರ್ ಅವರ ಚಿತ್ರವಿರುವ ಫೋಟೋ ಧರಿಸಿ ತಿರಂಗಾ ಯಾತ್ರೆ ಕೈಗೊಂಡಿದ್ದರು. ಇದನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಶಾಲೆಯು ಟೀ ಶರ್ಟ್ ಗಳನ್ನು ಮುದ್ರಿಸಿ ಮಕ್ಕಳನ್ನು ಧರಿಸುವಂತೆ ಮಾಡುವುದು ತಪ್ಪು ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಗಾಂಧಿ ಹತ್ಯೆಗೆ ಸಂಚು ರೂಪಿಸಿದ ಆರೋಪ ಸಾವರ್ಕರ್ ಮೇಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಸಾವರ್ಕರ್ ಅವರ ಫೋಟೋ ಧರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. https://twitter.com/sanghaviharsh/status/1823733724619452550?ref_src=twsrc%5Etfw%7Ctwcamp%5Etweetembed%7Ctwterm%5E1823733724619452550%7Ctwgr%5Ed83007fb27fbb91279954ea402be673aa2e3240c%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Ftelugu%2Fnewtelugunewscom-epaper-dhfd99789337c2442eaca576b6dd053f20%2Fsekstaayluvaadatamtappukaadutappugavaaditeedojarugutundi-newsid-n626599247 ಈ ಬಗ್ಗೆ ವಿವಾದ ಉಂಟಾದಾಗ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಾಯಿತು. ಈ ಬಗ್ಗೆ ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್ ಅಥವಾ ವೀಡಿಯೊದಲ್ಲಿ ಕಂಡುಬರುವ ನಾಯಕ ವೀರ್ ಸಾವರ್ಕರ್ ಮತ್ತು ನೇತಾಜಿ ಅವರ…

Read More

ಬೆಂಗಳೂರು: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಗುತ್ತಿದ್ದು,ನಾಡಿನ ಜನತೆಗೆ ಮುಖ್ಯಮಂತ್ರಿ ಮಹತ್ವದ  ಸಂದೇಶ ನೀಡಿದ್ದಾರೆ. 78 ನೇ ಸ್ವಾತಂತ್ರ್ಯೋತ್ಸವದಲ್ಲಿ ‘ಸಿಎಂ ಸಿದ್ದರಾಮಯ್ಯ’ ಭಾಷಣ ಮುಖ್ಯಾಂಶಗಳು! ಆತ್ಮೀಯ ಬಂಧುಗಳೆ, ನಾಡಿನ ಸಮಸ್ತ ಜನತೆಗೆ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ಸ್ವಾತಂತ್ರ್ಯದ ಅರಿವು ಮತ್ತು ದೇಶದ ಮೇಲಿನ ಅಭಿಮಾನದ ಕಿಚ್ಚನ್ನು ಹೊತ್ತಿಸಿದ್ದು ರಾಷ್ಟ್ರೀಯ ಚಳುವಳಿ. ಅದರ ನೇತೃತ್ವವನ್ನು ಹೊತ್ತಿದ್ದು ಮಹಾತ್ಮ ಗಾಂಧೀಜಿಯವರ ಮುಂದಾಳತ್ವದ ರಾಷ್ಟ್ರೀಯ ಕಾಂಗ್ರೆಸ್. ಈ ರಾಷ್ಟ್ರೀಯ ಚಳುವಳಿಯ ಭದ್ರ ಬುನಾದಿ ಮೇಲೆ ರೂಪುಗೊಂಡಿದ್ದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ್ದ ಭಾರತದ ಸಂವಿಧಾನ ಮತ್ತು ಅದನ್ನು ಆಧರಿಸಿದ ಪ್ರಜಾಪ್ರಭುತ್ವ. ಸ್ವಾತಂತ್ರ್ಯೋತ್ಸವ ಎನ್ನುವುದು ಕೇವಲ ಸಂಭ್ರಮಾಚರಣೆಯ ದಿನ ಆಗಬಾರದು, ಇದು ಪ್ರಜೆಗಳಾದ ನಮ್ಮೆಲ್ಲರ ಕರ್ತವ್ಯವನ್ನು ನೆನಪು ಮಾಡಿಕೊಳ್ಳುವ ದಿನವೂ ಆಗಬೇಕು. ಪ್ರಜೆಗಳಾಗಿ ನಾವು ಪ್ರತಿಕ್ಷಣವೂ ಜಾಗೃತರಾಗಿದ್ದು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದಮನ ಮಾಡುವ ದುಷ್ಟಶಕ್ತಿಗಳ ಕುಟಿಲ ಪ್ರಯತ್ನವನ್ನು  ವಿಫಲಗೊಳಿಸಿ ಅದನ್ನು ರಕ್ಷಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ. ಈ ಕರ್ತವ್ಯದ ಪಾಲನೆಯೇ ನಿಜವಾದ ದೇಶಭಕ್ತಿ, ಇದು  ತ್ಯಾಗ-ಬಲಿದಾನದ ಮೂಲಕ…

Read More