Subscribe to Updates
Get the latest creative news from FooBar about art, design and business.
Author: kannadanewsnow57
ಸೋಮವಾರ ರಾತ್ರಿ ಈಶಾನ್ಯ ಜಪಾನ್ನಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 30 ಜನರು ಗಾಯಗೊಂಡಿದ್ದಾರೆ ಮತ್ತು ಸುಮಾರು 90,000 ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಜಪಾನ್ ಹವಾಮಾನ ಸಂಸ್ಥೆಯ ಪ್ರಕಾರ, ರಾತ್ರಿ 11.15 ಕ್ಕೆ ಅಮೋರಿ ಪ್ರದೇಶದ ಕರಾವಳಿಯಲ್ಲಿ ನೈಸರ್ಗಿಕ ವಿಕೋಪ ಸಂಭವಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಅಮೋರಿಯ ದಕ್ಷಿಣದಲ್ಲಿರುವ ಇವಾಟೆ ಪ್ರಿಫೆಕ್ಚರ್ನಲ್ಲಿರುವ ಕುಜಿ ಬಂದರಿನಲ್ಲಿ 70 ಸೆಂಟಿಮೀಟರ್ (2 ಅಡಿ 4 ಇಂಚು) ವರೆಗಿನ ಸುನಾಮಿ ದಾಖಲಾಗಿದೆ, ಆದರೆ ಜಪಾನ್ ಹವಾಮಾನ ಸಂಸ್ಥೆಯ ಪ್ರಕಾರ, ಆ ಪ್ರದೇಶದ ಇತರ ಕರಾವಳಿ ಸಮುದಾಯಗಳಿಗೆ 50 ಸೆಂಟಿಮೀಟರ್ಗಳಷ್ಟು ಅಲೆಗಳು ಅಪ್ಪಳಿಸಿವೆ. ಚಳಿಯ ಭೂಕಂಪವನ್ನು ಸೆರೆಹಿಡಿಯುವ ಹಲವಾರು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿವೆ ಮತ್ತು ಒಂದು ವೈರಲ್ ವೀಡಿಯೊವು ವಿಪತ್ತು ಸಂಭವಿಸುವ ಮೊದಲು ಮಹಿಳೆಯೊಬ್ಬರು ತನಗೆ ಬಂದ ಎಚ್ಚರಿಕೆಗಳ ಸರಣಿಯನ್ನು ಪ್ರದರ್ಶಿಸುವುದನ್ನು ಸೆರೆಹಿಡಿಯುತ್ತದೆ. ವೀಡಿಯೊವನ್ನು ಹಂಚಿಕೊಂಡ ಎಕ್ಸ್ ಹ್ಯಾಂಡಲ್ @nexta_tv ಹೀಗೆ ಬರೆದಿದೆ, “ಹುಡುಗಿ ತನ್ನ ಫೋನ್ನಲ್ಲಿ ತುರ್ತು ಎಚ್ಚರಿಕೆಗಳನ್ನು ಸ್ವೀಕರಿಸಲು ಪ್ರಾರಂಭಿಸಿದಳು ಮತ್ತು…
ಬೆಂಗಳೂರು: 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಅವರ ಋತುಚಕ್ರದ ಅವಧಿಯಲ್ಲಿ ಪ್ರತಿ ತಿಂಗಳು ಒಂದು ದಿನದ ಹೆಚ್ಚುವರಿ ರಜೆ ನೀಡಲು ವಿವಿಧ ಸಂಸ್ಥೆಗಳು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರದ ನವೆಂಬರ್ 20 ರ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಬೆಂಗಳೂರು ಹೊಟೇಲ್ ಅಸೋಸಿಯೇಷನ್ ಮತ್ತು ಅವಿರತ ಎಎಫ್ಎಲ್ ಕನೆಕ್ಟಿವಿಟಿ ಸಿಸ್ಟಮ್ಸ್ ಲಿಮಿಟೆಡ್, ಬೆಂಗಳೂರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ಜ್ಯೋತಿ ಎಂ ಈ ಮಧ್ಯಂತರ ಆದೇಶ ನೀಡಿದ್ದಾರೆ. ಋತುಚಕ್ರದ ಸಮಯದಲ್ಲಿ ರಜೆ ನೀಡಲು ಯಾವುದೇ ಅವಕಾಶವಿಲ್ಲ ಎಂದು ಅರ್ಜಿದಾರರು ಅಧಿಸೂಚನೆಯನ್ನು ಪ್ರಶ್ನಿಸಿದ್ದರು. ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಯಾವುದೇ ಶಾಸನ ಸಭೆಯ ಬೆಂಬಲವಿಲ್ಲ ಎಂದು ಅರ್ಜಿದಾರರು ಹೇಳಿದ್ದರು. ಬೆಂಗಳೂರು ಹೊಟೇಲ್ ಅಸೋಸಿಯೇಷನ್ ಮತ್ತು ಅವಿರತ ಎಎಫ್ಎಲ್ ಕನೆಕ್ಟಿವಿಟಿ ಸಿಸ್ಟಮ್ಸ್ ಲಿಮಿಟೆಡ್ನ ಮ್ಯಾನೇಜ್ಮೆಂಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮಧ್ಯಂತರ ಆದೇಶ ನೀಡಲಾಗಿದೆ. 1948ರ ಕಾರ್ಖಾನೆಗಳ ಕಾಯಿದೆಯ ಅಡಿಯಲ್ಲಿ ಬರುವ ಸಂಸ್ಥೆಗಳಲ್ಲಿ 18 ರಿಂದ 52 ವರ್ಷ…
ಹಾವೇರಿ : ರಾಜ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದ್ದು, ಮೊಬೈಲ್ ನಲ್ಲಿ ಹೆಚ್ಚು ಮಾತನಾಡಿದಕ್ಕೆ ಮಹಿಳೆಯೊಬ್ಬರನ್ನು ವ್ಯಕ್ತಿಯೊಬ್ಬರ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಕೂನಬೇವು ಪ್ಲಾಟ್ ರಸ್ತೆಯ ಎಂ.ಜಿ. ಪಾಟೀಲ ಅವರ ಜೀನ್ ಕಾಂಪೌಂಡ್ ಬಳಿ ಲಲಿತಾ ಕರಬಸಪ್ಪ ಬ್ಯಾಡಗಿ (42) ಎಂಬುವವರ ಕೊಲೆ ನಡೆದಿದ್ದು, ಆರೋಪಿ ಚಂದ್ರಪ್ಪ ಶಿವಲಿಂಗಪ್ಪ ಸಣ್ಣಮಲ್ಲಪ್ಪನವರ (36) ಎಂಬುವವರನ್ನು ಬಂಧಿಸಿದ್ದಾರೆ. ಬ್ಯಾಡಗಿ ತಾಲ್ಲೂಕಿನ ಕನವಳ್ಳಿಯ ಲಲಿತಾ ಅವರನ್ನು ಡಿ. 7ರಂದು ಬೆಳಿಗ್ಗೆ ಕೊಲೆ ಮಾಡಲಾಗಿತ್ತು. ಆರೋಪಿ ಚಂದ್ರಪ್ಪ ಹಾವೇರಿ ಜಿಲ್ಲೆ ಕಳ್ಳಿಹಾಳ ನಿವಾಸಿ. ಹೊಟೇಲ್ ನಲ್ಲಿ ಸಹಾಯಕ ಕೆಲಸ ಮಾಡುತ್ತಿದ್ದ. ಕೆಲಸದ ಸ್ಥಳದಲ್ಲಿಯೇ ಆತನಿಗೆ ಲಲಿತಾ ಪರಿಚಯವಾಗಿತ್ತು, ಲಲಿತಾ ಅವರ ಪತಿ 10 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಹೀಗಾಗಿ, ಅವರು ಊರು ಬಿಟ್ಟು ರಾಣೆಬೆನ್ನೂರಿಗೆ ಬಂದು ಹೋಟೆಲ್ ಹಾಗೂ ಮನೆಗಳಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆರೋಪಿ ಚಂದ್ರಪ್ಪ ಸಲುಗೆ ಬೆಳೆಸಿದ್ದ. ಆಗಾಗ ಮನೆಗೂ ಹೋಗಿ ಬರುತ್ತಿದ್ದ.…
ಮಂಗಳೂರು : ನಟ ರಿಶಬ್ ಶೆಟ್ಟಿ ಹರಕೆಯ ಕೋಲ ಇದೀಗ ವಿವಾದಕ್ಕೆ ಕಾರಣವಾಗಿದೆ. ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ ಅದು ದೈವವಲ್ಲ ಬದಲಾಗಿ ನರ್ತಕ ಎಂದು ಸಾಮಾಜಿಕ ಜಾಲತಾಣದಲ್ಲಿ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಹೌದು ಕಾಂತಾರ ಚಾಪ್ಟರ್ 1 ಚಲನಚಿತ್ರ ಯಶಸ್ವಿಯಾದ ಹಿನ್ನೆಲೆ ಹರಕೆ ತೀರಿಸಲು ರಿಷಬ್ ಶೆಟ್ಟಿ ತೆರಳಿದಾಗ, ದೈವ ರಿಷಬ್ ಶೆಟ್ಟಿ ಅವರ ತೊಡೆಯ ಮೇಲೆ ಮಲಗಿರುವ ವಿಡಿಯೋ ವೈರಲ್ ಆಗಿತ್ತು. ಡಿಸೆಂಬರ್ 4ರಂದು ಮಂಗಳೂರಿನ ಬಂಟ ದೇವಸ್ಥಾನದಲ್ಲಿ ಹರಕೆ ಕೋಲ ನಡೆದಿತ್ತು. ಕೋಲದ ವೇಳೆ ರಿಷಬ್ ತೊಡೆಯ ಮೇಲೆ ದೈವ ನರ್ತಕ ಮಲಗಿದ್ದರು. ಈಗ ರಿಷಬ್ ಶೆಟ್ಟಿ ನೀಡಿದ ಹರಕೆಯ ಕೋಲದ ವಿವಾದಕ್ಕೆ ಕಾರಣವಾಗಿದೆ. ಚಿತ್ರತಂಡದ ಭಾಗವಾಗಿದ್ದ ಮುಕೇಶ್ ಪಂಪದ ವಿರುದ್ಧ ಟೀಕೆಗಳು ಬಂದಿವೆ ದೈವರಾದನೆಯಲ್ಲಿ ದೈವಗಳು ಈ ರೀತಿ ವರ್ತಿಸುವುದಿಲ್ಲ ಎಂದು ಟೀಕೆಗಳು ಬರುತ್ತವೆ ವೈರಲ್ ವಿಡಿಯೋ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. https://youtube.com/shorts/bDVXlx03Euo?si=IsmpqybFJA-kvRWo
ಸ್ಟೀಮ್ ಇಸ್ತ್ರಿ ಮಾಡುವುದು ಈಗ ಬಹಳ ಜನಪ್ರಿಯವಾಗಿದೆ. ಆದರೆ, ಇಸ್ತ್ರಿ ಪೆಟ್ಟಿಗೆಗಳು ಸ್ಟೀಮರ್ ನೊಂದಿಗೆ ಬರುತ್ತವೆ. ಈಗ ನಾವು ಇಸ್ತ್ರಿ ಪೆಟ್ಟಿಗೆ ಇಲ್ಲದೆಯೇ ಇಸ್ತ್ರಿ ಮಾಡಬಹುದು. ಭಾರವಾದ ಪಾತ್ರೆ: ಇಸ್ತ್ರಿ ಪೆಟ್ಟಿಗೆಗಳಲ್ಲಿ ವಿದ್ಯುತ್ ಇಲ್ಲದ ಕಾಲದಿಂದಲೂ ನಮ್ಮ ಪೂರ್ವಜರು ಬಳಸುತ್ತಿರುವ ತಂತ್ರ ಇದು. ನೀವು ಭಾರವಾದ ಅಂವಿಲ್ ಅಥವಾ ಯಾವುದೇ ಪಾತ್ರೆಗೆ ತುಂಬಾ ಬಿಸಿ ನೀರನ್ನು ಸುರಿಯುತ್ತೀರಿ. ನೀವು ಇಸ್ತ್ರಿ ಮಾಡಲು ಬಯಸುವ ಉಡುಪನ್ನು ನೆಲದ ಮೇಲೆ ಹರಡಿ. ಈ ಪಾತ್ರೆಯನ್ನು ಅದರ ಮೇಲೆ ಇರಿಸಿ ಮತ್ತು ನೀವು ಇಸ್ತ್ರಿ ಪೆಟ್ಟಿಗೆಯನ್ನು ಬಳಸುತ್ತಿರುವಂತೆ ಚೆನ್ನಾಗಿ ಉಜ್ಜಿಕೊಳ್ಳಿ. ಇದನ್ನು ಒಮ್ಮೆ ಅಥವಾ ಎರಡು ಬಾರಿ ಮಾಡಿ. ನಿಮ್ಮ ಬಟ್ಟೆಗಳು ಇಸ್ತ್ರಿ ಬೋರ್ಡ್ನಲ್ಲಿ ಇಸ್ತ್ರಿ ಮಾಡಿದಂತೆ ಕಾಣುತ್ತವೆ. ಬಟ್ಟೆ ಮೃದುಗೊಳಿಸುವ ಸಾಧನಗಳು: ಸುಕ್ಕುಗಟ್ಟಿದ ಬಟ್ಟೆಗಳನ್ನು ಇಸ್ತ್ರಿ ಮಾಡಿದಂತೆ ಕಾಣುವಂತೆ ದ್ರವವನ್ನು ಬಳಸಬಹುದು ಎಂದು ನೀವು ನಂಬುತ್ತೀರಾ? ಹೌದು. ಇತ್ತೀಚಿನ ದಿನಗಳಲ್ಲಿ, ಬಟ್ಟೆ ಮೃದುಗೊಳಿಸುವ ಸಾಧನಗಳನ್ನು ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ನೀವು ಅವುಗಳನ್ನು ಖರೀದಿಸಿ ಬಳಸಬಹುದು.…
ಕೈ ರೇಖೆಗಳು ಮತ್ತು ಅಂಗೈ ಮುದ್ರೆಗಳ ಮೂಲಕ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿಯಬಹುದು ಎಂದು ಅನೇಕ ಜನರಿಗೆ ತಿಳಿದಿದೆ. ಆದರೆ ನಮ್ಮ ದೇಹದ ಭಾಗಗಳ ಆಕಾರವನ್ನು ಆಧರಿಸಿ ನಾವು ಇನ್ನೊಬ್ಬರ ವ್ಯಕ್ತಿತ್ವವನ್ನು ನಿರ್ಣಯಿಸಬಹುದು ಎಂದು ನಿಮಗೆ ತಿಳಿದಿದೆಯೇ? ಹೌದು, ನಮ್ಮ ಕಣ್ಣುಗಳು, ಕಿವಿಗಳು, ಮೂಗು, ಪಾದಗಳು ಇತ್ಯಾದಿಗಳು ನಮ್ಮ ವ್ಯಕ್ತಿತ್ವದ ಬಗ್ಗೆಯೂ ನಮಗೆ ಹೇಳಬಹುದು. ಉದ್ದವಾದ ಹಣೆ: ನೀವು ದೊಡ್ಡ ಹಣೆಯನ್ನು ಹೊಂದಿದ್ದರೆ, ನೀವು ಒಂದೇ ಬಾರಿಗೆ ಅನೇಕ ಕೆಲಸಗಳನ್ನು ಮಾಡುವ ಸಾಮರ್ಥ್ಯವನ್ನು ಹೊಂದಿದ್ದೀರಿ ಎಂದರ್ಥ. ನಿಮ್ಮ ಬುದ್ಧಿವಂತಿಕೆಯಿಂದ ನೀವು ಬಯಸಿದ ಕೆಲಸವನ್ನು ಸಾಧಿಸುತ್ತೀರಿ. ಅಲ್ಲದೆ, ನೀವು ಯಾವಾಗಲೂ ಹೊಸ ಅವಕಾಶಗಳನ್ನು ಹುಡುಕುತ್ತಿರುತ್ತೀರಿ. ನೀವು ಎಲ್ಲರೊಂದಿಗೆ ಮುಕ್ತವಾಗಿ ಬೆರೆಯುತ್ತೀರಿ. ನೀವು ಮಾತನಾಡುತ್ತೀರಿ. ಆದರೆ ಕೆಲವು ಸಂದರ್ಭಗಳಲ್ಲಿ, ನೀವು ತುಂಬಾ ಕೋಪಗೊಳ್ಳುತ್ತೀರಿ. ಸಣ್ಣ ಹಣೆ: ಸಣ್ಣ ಹಣೆಯಿರುವ ಜನರು ಸಾಮಾನ್ಯವಾಗಿ ಒಂಟಿಯಾಗಿರಲು ಬಯಸುತ್ತಾರೆ. ಅವರು ಭಾವನೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಅವರು ತಮ್ಮ ಸುತ್ತಲಿನ ಜನರನ್ನು ಸಹ ಸುಲಭವಾಗಿ ಅರ್ಥಮಾಡಿಕೊಳ್ಳುತ್ತಾರೆ. ಆದರೆ ಕೆಲವೊಮ್ಮೆ ಅವರು…
ಬೆಳಗಾವಿ: 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಚಿದಾನಂದ್ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ರಕ್ತದಲ್ಲಿ ಕನ್ನಡವಿದೆ ಹಾಗಾಗಿ ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಬಜೆಟ್ನಲ್ಲಿ 500 ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದ್ದೇವೆ ಎಂದ ಸಚಿವರು, 2025-26ನೇ ಸಾಲಿನಲ್ಲಿ ಈಗಾಗಲೇ ಕಾರ್ಯಾಚರಣೆಯಲ್ಲಿರುವ 309 ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ತರಗತಿವರೆಗೆ ಒಟ್ಟು 2,72,464 ವಿದ್ಯಾರ್ಥಿಗಳು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಕೆ.ಪಿ.ಎಸ್. ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಿಕ್ಷಕರ ಕೋರಿಕೆ…
ಬೆಂಗಳೂರು : ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು (ಗ್ರೇಡ್-1) ಗ್ರೂಪ್-ಎ ಉಳಿಕೆ ಮೂಲ ವೃಂದದ 30 (29+01 ಸೇವಾನಿರತ) ಮತ್ತು ಹೈದ್ರಾಬಾದ್-ಕರ್ನಾಟಕ ವೃಂದದ 12 (11+01 ಸೇವಾನಿರತ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಕರ್ನಾಟಕ ಲೋಕಸೇವಾ ಆಯೋಗವು ರದ್ದುಗೊಳಿಸಿದೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು (ಗ್ರೇಡ್-1) ಗ್ರೂಪ್-ಎ ಉಳಿಕೆ ಮೂಲ ವೃಂದದ 30 (29+01 ಸೇವಾನಿರತ) ಮತ್ತು ಹೈದ್ರಾಬಾದ್-ಕರ್ನಾಟಕ ವೃಂದದ 12 (11+01 ಸೇವಾನಿರತ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಸಂಖ್ಯೆ: 1640/ಇ(1)/2024-25, ದಿನಾಂಕ:18-09-2024, ತಿದ್ದುಪಡಿ ಅಧಿಸೂಚನೆ: ಸಂಖ್ಯೆ ಪಿಎಸ್ಸಿ 2441/ ಇ(1)/ 2024-25, ದಿನಾಂಕ:20-01-2025 ಹಾಗೂ ಅಧಿಸೂಚನೆ ಸಂಖ್ಯೆ: ಪಿಎಸ್ಸಿ 1639/ಇ(1)/2024-25, ದಿನಾಂಕ:18-09-2024 ಹಾಗೂ ತಿದ್ದುಪಡಿ ಅಧಿಸೂಚನೆ: ಸಂಖ್ಯೆ ಪಿಎಸ್ಸಿ 2440/ಇ/(1)/2024-25, ದಿನಾಂಕ:20-01-2025 ಗಳನ್ನು ಆಯೋಗದಿಂದ ಹೊರಡಿಸಲಾಗಿದ್ದು, ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ (ಲಿಖಿತ) ಪರೀಕ್ಷೆಗಳನ್ನು ದಿನಾಂಕ:24-02-2025, 25-02-2025, 27-02-2025 & 28-02-2025 ರವರೆಗೆ ಹಾಗೂ ಹೈದ್ರಾಬಾದ್-ಕರ್ನಾಟಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ (ಲಿಖಿತ) ಪರೀಕ್ಷೆಗಳನ್ನು…
ಬೆಂಗಳೂರು : 2022-23ನೇ ಸಾಲಿನ “ನಮ್ಮ ಹೊಲ ನಮ್ಮ ದಾರಿ” ಯೋಜನೆಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಜ್ಯ ಸರ್ಕಾರದ ಲೆ.ಶೇ.3054 ಯೋಜನೆಯಡಿ ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಗ್ರಾಮೀಣ ಪ್ರದೇಶಗಳಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ನರೇಗಾ ಯೋಜನೆಯಡಿ ಈ ಹಿಂದೆ ಗ್ರಾಮೀಣ ಸರ್ವಋತು ಸಂಪರ್ಕ ರಸ್ತೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಸದರಿ ಯೋಜನೆಯಡಿ ರಸ್ತೆಗಳನ್ನು ಕೊನೆಯ ಆದ್ಯತೆಯಾಗಿ ಪರಿಗಣಿಸಿ ಶೇ10ರ ಮಿತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿತ್ತು. ರಾಜ್ಯಾದ್ಯಂತ ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸಲು ವ್ಯಾಪಕವಾಗಿ ಕ್ರಮ ಕೈಗೊಳ್ಳಲು ಸಾಧ್ಯವಾಗದ ಕಾರಣ, ಹಾಗೂ ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಸಕಾಲದಲ್ಲಿ ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗುವಂತೆ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಅತ್ಯಗತ್ಯವಾಗಿರವುದನ್ನು ಮನಗಂಡು ಸನ್ಮಾನ ಮುಖ್ಯಮಂತ್ರಿಗಳು 2022-23ನೇ ಆಯವ್ಯಯ ಭಾಷಣದಲ್ಲಿ ಓದಲಾದ-1 ಕಿ ಆಯನ್ವಯದ ಕಂಡಿಕೆ ಸಂ:211 ರಲ್ಲಿ “2021-22ನೇ ಸಾಲಿಗೆ ಮಹಾತ್ಮ ಗಾಂಧಿ ಗ್ರಾಮೇಣ…
ಹಾವೇರಿ : ರಾಜ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದ್ದು, ಮೊಬೈಲ್ ನಲ್ಲಿ ಹೆಚ್ಚು ಮಾತನಾಡಿದಕ್ಕೆ ಮಹಿಳೆಯೊಬ್ಬರನ್ನು ವ್ಯಕ್ತಿಯೊಬ್ಬರ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಕೂನಬೇವು ಪ್ಲಾಟ್ ರಸ್ತೆಯ ಎಂ.ಜಿ. ಪಾಟೀಲ ಅವರ ಜೀನ್ ಕಾಂಪೌಂಡ್ ಬಳಿ ಲಲಿತಾ ಕರಬಸಪ್ಪ ಬ್ಯಾಡಗಿ (42) ಎಂಬುವವರ ಕೊಲೆ ನಡೆದಿದ್ದು, ಆರೋಪಿ ಚಂದ್ರಪ್ಪ ಶಿವಲಿಂಗಪ್ಪ ಸಣ್ಣಮಲ್ಲಪ್ಪನವರ (36) ಎಂಬುವವರನ್ನು ಬಂಧಿಸಿದ್ದಾರೆ. ಬ್ಯಾಡಗಿ ತಾಲ್ಲೂಕಿನ ಕನವಳ್ಳಿಯ ಲಲಿತಾ ಅವರನ್ನು ಡಿ. 7ರಂದು ಬೆಳಿಗ್ಗೆ ಕೊಲೆ ಮಾಡಲಾಗಿತ್ತು. ಆರೋಪಿ ಚಂದ್ರಪ್ಪ ಹಾವೇರಿ ಜಿಲ್ಲೆ ಕಳ್ಳಿಹಾಳ ನಿವಾಸಿ. ಹೊಟೇಲ್ ನಲ್ಲಿ ಸಹಾಯಕ ಕೆಲಸ ಮಾಡುತ್ತಿದ್ದ. ಕೆಲಸದ ಸ್ಥಳದಲ್ಲಿಯೇ ಆತನಿಗೆ ಲಲಿತಾ ಪರಿಚಯವಾಗಿತ್ತು, ಲಲಿತಾ ಅವರ ಪತಿ 10 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಹೀಗಾಗಿ, ಅವರು ಊರು ಬಿಟ್ಟು ರಾಣೆಬೆನ್ನೂರಿಗೆ ಬಂದು ಹೋಟೆಲ್ ಹಾಗೂ ಮನೆಗಳಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆರೋಪಿ ಚಂದ್ರಪ್ಪ ಸಲುಗೆ ಬೆಳೆಸಿದ್ದ. ಆಗಾಗ ಮನೆಗೂ ಹೋಗಿ ಬರುತ್ತಿದ್ದ.…














