Author: kannadanewsnow57

ಟೆಲ್ ಅವಿವ್ (ಇಸ್ರೇಲ್): ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಅಂತರಾಷ್ಟ್ರೀಯ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಇಸ್ರೇಲ್ ಮತ್ತು ಭಾರತದ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅವರು ನೀಡಿದ ಅಸಾಧಾರಣ ಕೊಡುಗೆಯನ್ನು ಪರಿಗಣಿಸಿ, ಬುಧವಾರ ಅವರಿಗೆ ಪ್ರತಿಷ್ಠಿತ ‘ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ’ ನೀಡಿ ಗೌರವಿಸಲಾಯಿತು. ಮೊದಲ ಜಾಗತಿಕ ನಾಯಕ ಇಸ್ರೇಲ್ ಸಂಸತ್ತಿನ (ನೆಸ್ಸೆಟ್) ಈ ಅತ್ಯುನ್ನತ ಗೌರವವನ್ನು ಪಡೆದ ವಿಶ್ವದ ಮೊದಲ ಜಾಗತಿಕ ನಾಯಕ ಎಂಬ ಖ್ಯಾತಿಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ.ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಅವರ ಭಾಷಣದ ನಂತರ, ಸ್ಪೀಕರ್ ಅಮೀರ್ ಒಹಾನಾ ಅವರು ಈ ಪದಕವನ್ನು ಪ್ರಧಾನಿಯವರಿಗೆ ಹಸ್ತಾಂತರಿಸಿದರು. ಪ್ರಧಾನಿ ಮೋದಿ ಭಾಷಣದ ಪ್ರಮುಖ ಅಂಶಗಳು: ಈ ಗೌರವವನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಇದು ಕೇವಲ ವೈಯಕ್ತಿಕ ಗೌರವವಲ್ಲ ಎಂದು ಭಾವನಾತ್ಮಕವಾಗಿ ನುಡಿದರು: ನೆಸ್ಸೆಟ್ ಪದಕವನ್ನು ಸ್ವೀಕರಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ. ಇದನ್ನು ನಾನು ಅತ್ಯಂತ ನಮ್ರತೆ ಮತ್ತು ಕೃತಜ್ಞತೆಯಿಂದ ಸ್ವೀಕರಿಸುತ್ತೇನೆ. ಈ ಗೌರವವು…

Read More

ಯಾದಗಿರಿ : ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲೆಯ ಗೋಗಿ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಶಹಾಪುರ ಸಿಡಿಪಿಒ ಮಲ್ಲಣ್ಣ ಉಮಾಪತಿ ದೂರಿನಡಿ ಎಫ್ ಐಆರ್ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ತೋರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಲ್ಲಿಕಾರ್ಜುನ ಮುತ್ಯಾ ವಿರುದ್ದ ಮಕ್ಕಳ ಆಯೋಗದಿಂದ ದೂರು ದಾಖಲು! ಶಹಾಪುರ ತಾಲೂಕಿನ ಮಹಲ್ ರೋಜಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಹೇಳಲಾಗಿರುವ ವಿಡಿಯೋ ತುಣುಕುಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ…

Read More

ಉದಯಪುರ: ದಕ್ಷಿಣ ಭಾರತದ ಮೋಸ್ಟ್ ಹ್ಯಾಪನಿಂಗ್ ಜೋಡಿ ಎಂದೇ ಖ್ಯಾತರಾಗಿರುವ ‘ನ್ಯಾಷನಲ್ ಕ್ರಷ್’ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ರೌಡಿ ಸ್ಟಾರ್ ವಿಜಯ್ ದೇವರಕೊಂಡ ಅವರ ಮದುವೆಗೆ ಕ್ಷಣಗಣನೆ ಆರಂಭವಾಗಿದೆ. ಅಭಿಮಾನಿಗಳ ಅಚ್ಚುಮೆಚ್ಚಿನ ‘ವಿರೋಶ್’ (ViRash) ಜೋಡಿ ಇಂದು ರಾಜಸ್ಥಾನದ ಅರಾವಳಿ ಬೆಟ್ಟಗಳ ತಪ್ಪಲಿನಲ್ಲಿ ರಾಜವೈಭವದ ನಡುವೆ ಹಸೆಮಣೆ ಏರಲಿದ್ದಾರೆ. 10 ಕೋಟಿ ರೂಪಾಯಿ ವೆಚ್ಚದ ಐಷಾರಾಮಿ ರೆಸಾರ್ಟ್! ಈ ಅದ್ದೂರಿ ವಿವಾಹಕ್ಕೆ ಉದಯಪುರದ ಅತ್ಯಂತ ಸುಂದರವಾದ ‘ಐಟಿಸಿ ಮೆಮೆಂಟೋಸ್’ (ITC Mementos) ಲಕ್ಸುರಿ ರೆಸಾರ್ಟ್ ಸಾಕ್ಷಿಯಾಗುತ್ತಿದೆ. ಈ ಮದುವೆಯ ವೈಭವದ ಕೆಲವು ಮುಖ್ಯಾಂಶಗಳು ಇಲ್ಲಿವೆ: ಬಾಡಿಗೆ ವಿವರ: ಈ ರೆಸಾರ್ಟ್‌ನ ಒಂದು ದಿನದ ಬಾಡಿಗೆ ಸುಮಾರು 2 ಕೋಟಿ ರೂ. ಎನ್ನಲಾಗುತ್ತಿದ್ದು, ಐದು ದಿನಗಳ ಕಾಲ ಸಂಪೂರ್ಣವಾಗಿ ಬುಕ್ ಮಾಡಲಾಗಿದೆ. ಕೇವಲ ವಾಸ್ತವ್ಯಕ್ಕಾಗಿಯೇ ಸುಮಾರು 10 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ ಎಂಬ ಮಾಹಿತಿ ಕೇಳಿಬರುತ್ತಿದೆ. ರಾಯಲ್ ವಿಲ್ಲಾಗಳು: ಇಲ್ಲಿರುವ 120 ಐಷಾರಾಮಿ ವಿಲ್ಲಾಗಳು ಅತಿಥಿಗಳಿಗೆ ರಾಜವೈಭವದ ಅನುಭವ ನೀಡಲಿವೆ.…

Read More

ಮೈಸೂರು: ರಾಜ್ಯದ ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಹಂತ ಹಂತವಾಗಿ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಮಕಾತಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ವಿಷಯಗಳನ್ನು ಹಂಚಿಕೊಂಡರು.ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿ ಹಂಚಿಕೆಯ ಸಮಸ್ಯೆಯಿಂದಾಗಿ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿತ್ತು. ಆದರೆ ಈಗ ಈ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಆದಷ್ಟು ಬೇಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಈ ಬಗ್ಗೆ ಮುಂಬರುವ ಬಜೆಟ್‌ನಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು. ಬಿಜೆಪಿ ವಿರುದ್ಧ ವಾಗ್ದಾಳಿ ವಿರೋಧ ಪಕ್ಷವಾದ ಬಿಜೆಪಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿಗಳು, ಈ ಕೆಳಗಿನ ಅಂಶಗಳನ್ನು ಪ್ರಸ್ತಾಪಿಸಿದರು: ನೈತಿಕತೆ ಇಲ್ಲ: “ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಯಾವುದೇ ಉದ್ಯೋಗ ನೀಡಲಿಲ್ಲ. ಈಗ ವಿರೋಧ ಪಕ್ಷದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲಿ ನಿರತರಾಗಿದ್ದಾರೆ. ನಮ್ಮನ್ನು ಪ್ರಶ್ನಿಸಲು ಅವರಿಗೆ ನೈತಿಕತೆ ಇಲ್ಲ,” ಎಂದರು. ಕೇಂದ್ರದ ಭರವಸೆ…

Read More

ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಹೆಸರಿಗೆ ಹಣ ವರ್ಗಾವಣೆಯಾಗುತ್ತಿದ್ದು, ಮನೆಯ ಮುಂದಿನ ಯಜಮಾನಿಯರು ಈ ಬಗ್ಗೆ ತಿಳಿಸಿ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಮಧು ಹೆಚ್ ಎಂ ತಿಳಿಸಿದರು. ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮರಣ ಹೊಂದಿರುವ ಫಲಾನುಭವಿಗಳ ಖಾತೆಯ ಕುರಿತು ಮಾಹಿತಿ ನೀಡಿ, ಮನೆಯ ಮುಂದಿನ ಯಜಮಾನಿಯರು ಸೌಲಭ್ಯ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಬೇಕು. ಮರಣ ಹೊಂದಿರುವ ವ್ಯಕ್ತಿಯ ಜೀವಂತ ಪ್ರಮಾಣ ಪತ್ರ ಸಲ್ಲಿಸುವ ಬಗ್ಗೆ ಯಾವುದೇ ರೀತಿಯ ಆತಂಕ ಬೇಡ. ಸರ್ಕಾರದ ಆದೇಶ/ಸುತ್ತೋಲೆ ಬಂದ ನಂತರ ಕ್ರಮ ವಹಿಸಬಹುದು ಎಂದರು. ಯೋಜನೆಯಡಿ ತಾಲ್ಲೂಕಿನಲ್ಲಿ ಜನವರಿ ಮಾಹೆವರೆಗೆ 107841 ಮಹಿಳೆಯರು ನೋಂದಣಿಯಾಗಿದ್ದು, 2044 ಫಲಾನುಭವಿಗಳು ಐಟಿ/ಜಿಎಸ್ಟಿ ಎಂದು ಪರಿಣಗಣಿಸಲಾಗಿದೆ. ಈ ಬಗ್ಗೆ ಪರಿಶೀಲಿಸಲು 304 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಹಾಗೂ 42 ಫಲಾನುಭವಿಗಳಿಗೆ ಎನ್ಪಿಸಿಐ ಬಾಕಿ ಇದ್ದು…

Read More

ನಿಮ್ಮ ಬಿಪಿಎಲ್ ಪಡಿತರ ಚೀಟಿ ರದ್ದಾಗಿದ್ರೆ ತಪ್ಪದೇ ಈ ಪ್ರಮುಖ ದಾಖಲೆಗಳ ಜೊತೆಗೆ ಅರ್ಜಿ ಸಲ್ಲಿಸಿ ಮತ್ತೆ ಬಿಪಿಎಲ್ ಕಾರ್ಡ್ ಪಡೆಯಬಹುದು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಮಧು ಹೆಚ್ ಎಂ ಹೇಳಿದ್ದಾರೆ. ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.5 ವರ್ಷದಿಂದ ಇಕೆವೈಸಿ ಮಾಡಿಸದೇ ಇರುವ ಪಡಿತರದಾರರು ಇಕೆವೈಸಿ ಮಾಡಿಸಿ ಪಡಿತರ ಪಡೆಯಬೇಕು. ಬಿಪಿಎಲ್ ಕಾರ್ಡ್ ರದ್ದಾಗಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆಯಾಗಿರುವ ಪಡಿತರದಾರರು ನಿಗದಿತ ದಾಖಲೆಗಳಾದ 2 ರಿಂದ 3 ವರ್ಷಗಳ ಐಟಿ ರಿಟರ್ನ್ಸ್ ದಾಖಲೆ, ಪಡಿತರ ಚೀಟಿ ಜೆರಾಕ್ಸ್, ಆದಾಯ ಪ್ರಮಾಣ ಪತ್ರಗಳನ್ನು ನೀಡಿ ಮರು ಅರ್ಜಿ ಸಲ್ಲಿಸಬಹುದಾಗಿದ್ದು, ಇದನ್ನು 1 ರಿಂದ 2 ವಾರದಲ್ಲಿ ಪರಿಶೀಲಿಸಲಾಗುವುದು ಎಂದ ಅವರು ಇತ್ತೀಚಿಗೆ 15 ರಿಂದ 20 ಎಪಿಎಲ್ ಕಾರ್ಡ್ಗಳನ್ನು ಬಿಪಿಎಲ್ ಗೆ ಪರಿವರ್ತಿಸಲಾಗಿದೆ ಎಂದು ತಿಳಿಸಿದರು. ಮರಣ ಹೊಂದಿರುವ ಫಲಾನುಭವಿಗಳ ಖಾತೆಯ…

Read More

ಬೆಂಗಳೂರು: ನೀವು ನ್ಯಾಯದ ಭರವಸೆಯೊಂದಿಗೆ ಪೊಲೀಸ್ ಠಾಣೆಯ ಮೆಟ್ಟಿಲೇರಿದಾಗ ಅಲ್ಲಿನ ಅಧಿಕಾರಿಗಳು ನಿಮ್ಮ ದೂರು ದಾಖಲಿಸಿಕೊಳ್ಳಲು ನಿರಾಕರಿಸುತ್ತಿದ್ದಾರೆಯೇ? ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿದು ಗಂಭೀರ ಪ್ರಕರಣವನ್ನು ಕ್ಷುಲ್ಲಕ ಪ್ರಕರಣವೆಂದು ಬಿಂಬಿಸುತ್ತಿದ್ದಾರೆಯೇ? ಹಾಗಿದ್ದರೆ ಚಿಂತಿಸಬೇಡಿ. ಹೊಸ ಕಾನೂನುಗಳಾದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಸಾಮಾನ್ಯ ಜನರಿಗೆ ಬಲಿಷ್ಠ ಅಧಿಕಾರ ನೀಡಲಾಗಿದೆ. ಪೊಲೀಸರು ದೂರು ಪಡೆಯದಿದ್ದರೆ ನೀವು ಬಳಸಬಹುದಾದ ಆ 3 ಪ್ರಮುಖ ಕಾನೂನು ಮಾರ್ಗಗಳು ಇಲ್ಲಿವೆ: 1. ಹಿರಿಯ ಅಧಿಕಾರಿಗಳಿಗೆ ಲಿಖಿತ ದೂರು (BNSS ಸೆಕ್ಷನ್ 173(4)) ಒಂದು ವೇಳೆ ಪೊಲೀಸ್ ಠಾಣಾಧಿಕಾರಿ (SHO) ನಿಮ್ಮ ಎಫ್ಐಆರ್ ದಾಖಲಿಸಲು ನಿರಾಕರಿಸಿದರೆ, BNSS ನ ಸೆಕ್ಷನ್ 173(4) ರ ಅಡಿಯಲ್ಲಿ ನೀವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಥವಾ ಡಿಸಿಪಿ (DCP) ಅವರಿಗೆ ಲಿಖಿತ ದೂರನ್ನು ಸಲ್ಲಿಸಬಹುದು. ಈ ದೂರನ್ನು ನೀವು ಖುದ್ದಾಗಿ ಅಥವಾ ನೋಂದಾಯಿತ ಅಂಚೆ (Registered Post) ಮೂಲಕ ಕಳುಹಿಸಬಹುದು. ಪ್ರಕರಣವು ಗಂಭೀರವಾಗಿದೆ ಎಂದು ಅಧಿಕಾರಿಗೆ ಮನವರಿಕೆಯಾದರೆ, ಅವರು…

Read More

ಬೆಂಗಳೂರು: ರಾಜ್ಯದ ರೈತರಿಗೆ ಮತ್ತು ಆಸ್ತಿ ಮಾಲೀಕರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಜಮೀನಿನ ಪಹಣಿ ತಿದ್ದುಪಡಿ ಅಥವಾ ಮ್ಯುಟೇಷನ್ (Mutation) ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಮತ್ತು ವಿಳಂಬವನ್ನು ತಪ್ಪಿಸಲು ‘ಸ್ವಯಂಚಾಲಿತ ಮ್ಯುಟೇಷನ್’ (Auto Mutation) ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಹೊಸ ಪದ್ಧತಿಯ ಮುಖ್ಯಾಂಶಗಳು: ಮಾನವ ಹಸ್ತಕ್ಷೇಪ ಮುಕ್ತ: ಈ ಹಿಂದೆ ನೋಟೀಸು ಅವಧಿ ಮುಗಿದ ನಂತರ ಕಂದಾಯ ನಿರೀಕ್ಷಕರು (RI) ಡಿಜಿಟಲ್ ಸಹಿ ಮಾಡುವವರೆಗೆ ಕಾಯಬೇಕಿತ್ತು. ಆದರೆ ಹೊಸ ಪದ್ಧತಿಯಲ್ಲಿ ಯಾವುದೇ ಅಧಿಕಾರಿಯ ಹಸ್ತಕ್ಷೇಪವಿಲ್ಲದೆ, ಸಾಫ್ಟ್ವೇರ್ ಮೂಲಕವೇ ಸ್ವಯಂಚಾಲಿತವಾಗಿ ಅನುಮೋದನೆ ದೊರೆಯಲಿದೆ. ನೋಟೀಸು ಅವಧಿ:  ನೋಂದಾಯಿತ ದಾಖಲೆಗಳಿಗೆ (ಕ್ರಯ, ವಿಭಾಗ, ದಾನ ಇತ್ಯಾದಿ) 7 ದಿನಗಳ ಕಾಲಾವಕಾಶ. ನೋಂದಾಯಿತವಲ್ಲದ ದಾಖಲೆಗಳಿಗೆ (ವಂಶವೃಕ್ಷ, ಮರಣ ನಂತರದ ಖಾತೆ ಬದಲಾವಣೆ) 15 ದಿನಗಳ ಕಾಲಾವಕಾಶ. ಆಕ್ಷೇಪಣೆ ಸಲ್ಲಿಸಲು ಅವಕಾಶ: ಒಂದು ವೇಳೆ ನಿಗದಿತ 7 ಅಥವಾ 15 ದಿನಗಳ ಒಳಗೆ ಸಾರ್ವಜನಿಕರು ಅಥವಾ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಿದರೆ ಮಾತ್ರ ಅಂತಹ ಪ್ರಕರಣಗಳನ್ನು…

Read More

ಬೆಂಗಳೂರು: ಪಾಸ್ಪೋರ್ಟ್ ಪೊಲೀಸ್ ಪರಿಶೀಲನೆ (Passport Verification) ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಮತ್ತು ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಹೊಸ ನಿಯಮದ ಪ್ರಕಾರ, ಇನ್ನು ಮುಂದೆ ಪಾಸ್ಪೋರ್ಟ್ ಪರಿಶೀಲನೆಗಾಗಿ ಅರ್ಜಿದಾರರನ್ನು ಯಾವುದೇ ಕಾರಣಕ್ಕೂ ಪೊಲೀಸ್ ಠಾಣೆಗೆ ಕರೆಯಿಸುವಂತಿಲ್ಲ. ಬದಲಾಗಿ ಅಧಿಕಾರಿಗಳೇ ಅರ್ಜಿದಾರರ ಮನೆಗೆ ಭೇಟಿ ನೀಡಬೇಕು. ಹೊಸ ಮಾರ್ಗಸೂಚಿಗಳ ಮುಖ್ಯಾಂಶಗಳು: ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ಪೋರ್ಟ್ ಪರಿಶೀಲನೆಗೆ ತೆರಳುವ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕಡ್ಡಾಯವಾಗಿ ಬಾಡಿ ವೋರ್ನ್ ಕ್ಯಾಮೆರಾ (Body-worn camera) ಧರಿಸಿರಬೇಕು. ಪರಿಶೀಲನೆಯ ಆರಂಭದಿಂದ ಅಂತ್ಯದವರೆಗೆ ಸಂಪೂರ್ಣ ಪ್ರಕ್ರಿಯೆ ಇದರಲ್ಲಿ ದಾಖಲಾಗಬೇಕು. ಠಾಣೆಗೆ ಕರೆಸುವಂತಿಲ್ಲ: ಅರ್ಜಿದಾರರನ್ನು ಠಾಣೆಗೆ ಬರುವಂತೆ ಒತ್ತಾಯಿಸುವಂತಿಲ್ಲ ಅಥವಾ ಅನಗತ್ಯವಾಗಿ ಅಲೆದಾಡಿಸುವಂತಿಲ್ಲ. ಪೂರ್ವ ಮಾಹಿತಿ ನೀಡುವುದು: ಅಧಿಕಾರಿಯು ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡುವ ಕನಿಷ್ಠ 24 ಗಂಟೆಗಳ ಮೊದಲು ಎಸ್ಎಂಎಸ್ ಅಥವಾ ಕರೆ ಮೂಲಕ ಮಾಹಿತಿ ನೀಡಬೇಕು. ಕಿರುಕುಳಕ್ಕೆ ಬ್ರೇಕ್:…

Read More

ಬೇಸಿಗೆ ಆರಂಭವಾಗಲಿದ್ದು, ಬಿಸಲಿನ ತಾಪಮಾನದ ಅಲೆ ಹೆಚ್ಚಾಗುವ ಸಂಭವವಿದೆ ಎಂದು ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆ ಇರುವುದರಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ಅವುಗಳ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಸಲಹೆ ನೀಡಿದ್ದಾರೆ. ಸಾರ್ವಜನಿಕರು ಬಿಸಿಲಿನ ತಾಪಮಾನದಿಂದ ಹೇಗೆ ರಕ್ಷಿಸಿಕೊಳ್ಳಬೇಕು ಮತ್ತು ಬಿಸಿಲಿನ ಬೇಗೆಯಿಂದ ಮನುಷ್ಯ ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಕೆಳಕಂಡAತೆ ತಿಳಿಸಿದ್ದಾರೆ. *ಏನು ಮಾಡಬೇಕು:* ಸಡಿಲವಾದ, ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸಬೇಕು. ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಿ. ಆಗಾಗ್ಗೆ ನಿಧಾನವಾಗಿ ಧಾರಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರನ್ನು ಕುಡಿಯಿರಿ. ಹಣ್ಣಿನ ರಸ, ಪಾನಕಗಳನ್ನು ಕುಡಿಯಿರಿ. ಹತ್ತಿಯ ನುಣುಪಾದ ಬಟ್ಟೆ, ಟಿಶ್ಯೂ ಕರವಸ್ತçದಿಂದ ಬೆವರನ್ನು ಒರೆಸಿರಿ. ನೀರು, ಮಜ್ಜಿಗೆ, ಎಳೆನೀರು ಕುಡಿಯಬಹುದು. ಬೆಚ್ಚಗಿನ, ಮಸಾಲೆ ರಹಿತ, ಶುದ್ದ ಸಾತ್ವಿಕ ಆಹಾರ ಸೇವಿಸಬೇಕು. ಗಾಳಿಯಾಡುವಂತಹ ಪಾದರಕ್ಷೆ ಧರಿಸಿರಿ. ಮನೆಯಿಂದ…

Read More