Author: kannadanewsnow57

ಬೆಂಗಳೂರು : ಆತ್ಮಹತ್ಯೆಯ ಯೋಚನೆ ಬಂದವರಿಗೆ ಎಂದಿಗೂ ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆಯುವ ಹೊಸ ಇಂಜೆಕ್ಷನ್ ಕಂಡುಹಿಡಿಯಲಾಗಿದೆ.  ಹೌದು, ಆತ್ಮಹತ್ಯೆ ತಡೆಗೆ ಇಂಜೆಕ್ಷನ್ ಕಂಡುಹಿಡಿಯಲಾಗಿದ್ದು, ಸದ್ಯ ರಾಜ್ಯ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿದೆ. ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ಬರುವ ರೋಗಿಗಳನ್ನ ವಿವಿಧ ಮಾನಸಿಕ ಮತ್ತು ದೈಹಿಕ ಪ್ರಯೋಗ, ಚಿಕಿತ್ಸೆಗಳಿಗೆ ಒಳಡಿಸಿದ ಬಳಿಕ ಈ ಇಂಜೆಕ್ಷನ್ ನಿಡಲಾಗುತ್ತದೆ. ಒಮ್ಮೆ ಈ ಇಂಜೆಕ್ಷನ್ ತೆಗೆದುಕೊಂಡವರು ಮತ್ತೊಮ್ಮೆ ಆತ್ಮಹತ್ಯೆ ಯೋಚನೆ ಮಾಡವುದಿಲ್ಲ ಎಂದು ಡಾ ರೂಪೇಶ್ ಕುಮಾರ್ ಹೇಳಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಬಂದವರಿಗೆಲ್ಲಾ ಇಂಜೆಕ್ಷನ್ ಕೊಡಲ್ಲ, ಬದಲಿಗೆ ಅವರಿಗೆ ಪರೀಕ್ಷೆ ಮಾಡಿದ ಬಳಿಕ ಅವರಿಗೆ ಇಂಜೆಕ್ಷನ್ ಅಗತ್ಯವಿದ್ರೆ ಮಾತ್ರ ಅವರಿಗೆ ಗೊತ್ತಾಗದ ಹಾಗೆ ಗ್ಲೂಕೋಸ್ ಮೂಲಕ ಇದನ್ನ ನೀಡಲಾಗುತ್ತದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಬೆಲೆ 15-20 ಸಾವಿರ ಇದೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತವಾಗಿ ನೀಡಲಾಗುತ್ತದೆಯಂತೆ.

Read More

ಅತಿಯಾದ ಫೋನ್ ಬಳಕೆಯಿಂದಾಗಿ 20 ವರ್ಷದ ಯುವತಿಯ ಕುತ್ತಿಗೆ 60 ವರ್ಷದ ಮಹಿಳೆಯ ಕುತ್ತಿಗೆಯಂತೆ ಬಾಗಿದ್ದು, ಅವಳನ್ನು ಪರೀಕ್ಷಿಸಿದ ವೈದ್ಯರು. ಇದು ಅತಿಯಾದ ಫೋನ್ ಬಳಕೆಯಿಂದಾಗಿ ಎಂದು ತೀರ್ಮಾನಿಸಿದ್ದಾರೆ. ಪದೇ ಪದೇ ಫೋಣ್ ನೋಡುವ ಯುವತಿಗೆ ಆಗಾಗ್ಗೆ ತಲೆನೋವು ಬರುತ್ತಿತ್ತು. ಜೊತೆಗೆ ಅವಳ ಕುತ್ತಿಗೆ ಬಾಗುತ್ತಿತ್ತು. ವೈದ್ಯರು ತುರ್ತಾಗಿ ಸಿಟಿ ಸ್ಕ್ಯಾನ್ ಮಾಡಿದಾಗ. ಅದು ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿತು. ಅವಳ ಗರ್ಭಕಂಠದ ಬೆನ್ನುಮೂಳೆಯು ತನ್ನ ನೈಸರ್ಗಿಕ ಆಕಾರವನ್ನು ಕಳೆದುಕೊಂಡಿತ್ತು. ಮತ್ತು ಕೆಲವು ಪ್ರದೇಶಗಳಲ್ಲಿ ಕಶೇರುಖಂಡಗಳು ಜಾರಿಬೀಳುವ ಲಕ್ಷಣಗಳನ್ನು ಸಹ ವೈದ್ಯರು ಕಂಡುಕೊಂಡರು. ‘ಟೆಕ್ಸ್ಟ್ ನೆಕ್’ ಎಂದು ಕರೆಯಲ್ಪಡುವ ಅವಳ ಸ್ಥಿತಿಯು ಅಕಾಲಿಕ ಗರ್ಭಕಂಠದ ಕ್ಷೀಣತೆಯ ಮುಂಚಿನ ಎಚ್ಚರಿಕೆ ಸಂಕೇತವಾಗಿದೆ ಎಂದು ಅವರು ಹೇಳಿದರು. ಇದರ ಬಗ್ಗೆ ಮಾತನಾಡುತ್ತಾ, ತೈವಾನೀಸ್ ವೈದ್ಯರು ಅವಳ ಸ್ಥಿತಿ. ಇಂದಿನ ಯುವಜನತೆ ಎದುರಿಸುತ್ತಿರುವ ಸಮಸ್ಯೆಯಾಗಿದೆ. ‘ಅವರು ಪ್ರತಿದಿನ ಗಂಟೆಗಟ್ಟಲೆ ತಮ್ಮ ಫೋನ್‌ಗಳನ್ನು ನೋಡುತ್ತಾ, ಕಾರ್ಯಕ್ರಮಗಳನ್ನು ನೋಡುತ್ತಾ ಮತ್ತು ಆಟಗಳನ್ನು ಆಡುತ್ತಾ ಕಳೆಯುತ್ತಾರೆ. ಆದರೆ ಅವರ ದೇಹವು ನೋವಿನಿಂದ…

Read More

ಬೆಂಗಳೂರು : : ಭಾರತದ 3ನೇ ಅತಿ ದೊಡ್ಡ ಗ್ರಾಮೀಣ ಬ್ಯಾಂಕ್ ಆದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಕೆಳಕಂಡ 1425 ಹುದ್ದೆಗಳಿಗೆ ಅರ್ಹ ಪದವೀಧರರಿಂದ ಆನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ: ಹುದ್ದೆಗಳ ಸಂಖ್ಯೆ ಆಫೀಸ್ ಅಸಿಸ್ಟಂಟ್ (ಕ್ಲರ್ಕ್ )- 800 ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 1)- 500 ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 2)- 125 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.09.2025 ನೇಮಕಾತಿ ಪ್ರಕ್ರಿಯೆ ಹಾಗೂ ಹುದ್ದೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು www.ibps.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ 57 ವರ್ಷದ ಮಹಿಳೆ ನೇಪಾಳದ ಕಠ್ಮಂಡುವಿನ ಹೋಟೆಲ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಜೇಶ್ ಗೋಲಾ ಎಂಬ ಮಹಿಳೆ ಸೆಪ್ಟೆಂಬರ್ 7 ರಂದು ತನ್ನ ಪತಿ ರಾಮ್ವೀರ್ ಸಿಂಗ್ ಗೋಲಾ ಅವರೊಂದಿಗೆ ನೇಪಾಳಕ್ಕೆ ಹೋಗಿದ್ದರು ಮತ್ತು ಹಯಾತ್ ರೀಜೆನ್ಸಿಯಲ್ಲಿ ವಾಸಿಸುತ್ತಿದ್ದರು. , “ಜೆನ್ ಝೆಡ್” ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ಮತ್ತು ಪ್ರತಿಭಟನಾಕಾರರು ಸೆಪ್ಟೆಂಬರ್9ರಂದು ಅವರ ಹೋಟೆಲ್ ಗೆ ಬೆಂಕಿ ಹಚ್ಚುತ್ತಿದ್ದಂತೆ, ಅವರು ಕಿಟಕಿಯ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಬೆಂಕಿಯು ತಪ್ಪಿಸಿಕೊಳ್ಳುವ ಮಾರ್ಗಗಳನ್ನು ನಿರ್ಬಂಧಿಸುತ್ತಿದ್ದಂತೆ, ರಕ್ಷಕರು ನೆಲದ ಮೇಲೆ ಹಾಸಿಗೆಗಳನ್ನು ಇರಿಸಿ ಜಿಗಿಯುವಂತೆ ಒತ್ತಾಯಿಸಿದರು. ಶ್ರೀಮತಿ ಗೋಲಾ ಮತ್ತು ಅವರ ಪತಿ ನಾಲ್ಕನೇ ಮಹಡಿಯಿಂದ ಜಿಗಿದು ಹಾಸಿಗೆಯ ಮೇಲೆ ಇಳಿದರು. ಗೋಲಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಸಿನಿ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಚಿತ್ರಮಂದಿರಗಳಲ್ಲಿ 200 ರೂ.ಟಿಕೆಟ್ ಗೆ ಅನುಮೋದನೆ ನೀಡಿದೆ. ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಹೀಗಾಗಿ ರಾಜ್ಯದ ಎಲ್ಲಾ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಗಳಲ್ಲಿ ಇನ್ಮುಂದೆ ಟಿಕೆಟ್ ದರ ಏಕರೂಪವಾಗಿ ಇರಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ರಾಜ್ಯದಲ್ಲಿರುವ ಎಲ್ಲಾ ಮಲ್ಟಿಫ್ಲೆಕ್ಸ್ ಗಳು ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಆದೇಶಿಸಿದೆ. ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಲಾಗಿದೆ. ರೂ.200 ಮೀರದಂತೆ ಆದೇಶ ಹೊರಡಿಸಿದೆ. ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರವನ್ನು ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿನ ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರವನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

Read More

ನವದೆಹಲಿ : ವೈಷ್ಣೋದೇವಿ ಭಕ್ತರಿಗೆ ಸಿಹಿಸುದ್ದಿ ಸಿಕ್ಕಿದ್ದು, ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ವೈಷ್ಣೋದೇವಿ ಯಾತ್ರೆ ಸೆಪ್ಟೆಂಬರ್ 14 ರಿಂದ ಪುನಾರರಂಭವಾಗಲಿದೆ. ಪ್ರತಿಕೂಲ ಹವಾಮಾನ ಮತ್ತು ಹಳಿಯ ಅಗತ್ಯ ನಿರ್ವಹಣೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾದ ನಂತರ, ಅನುಕೂಲಕರ ಹವಾಮಾನ ಪರಿಸ್ಥಿತಿಗಳಿಗೆ ಒಳಪಟ್ಟು ಶ್ರೀ ಮಾತಾ ವೈಷ್ಣೋದೇವಿ ಯಾತ್ರೆ ಸೆಪ್ಟೆಂಬರ್ 14 (ಭಾನುವಾರ) ರಿಂದ ಪುನರಾರಂಭಗೊಳ್ಳಲಿದೆ ಎಂದು ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿ ತಿಳಿಸಿದೆ. https://twitter.com/ANI/status/1966390990811611166?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಬೆಂಗಳೂರು : ರಾಜ್ಯದಲ್ಲಿ ಶಿಕ್ಷಕರನ್ನು ಬಳಸಿಕೊಂಡು ಮತ್ತೊಮ್ಮೆ ಜಾತಿ ಗಣತಿ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 10 ವರ್ಷದ ಹಿಂದೆ ಜಾತಿಗಣತಿ ನಡೆಸಲಾಗಿತ್ತು. ಈಗ ಮತ್ತೆ ಜಾತಿಗಣತಿ ನಡೆಸಲಾಗುತ್ತಿದೆ, ಅಸಮಾನತೆ ಉಳಿಯಲು ನಾವು ಬಿಡಬಾರದು. ಹೀಗಾಗಿ ಸಾಮಾಜಿಕ, ಶೈಕ್ಷಣಿಕ ವಲಯದಲ್ಲಿ ಸಮಾನ ಅವಕಾಶ ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ಈ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು. ಎಲ್ಲಾ ಜನರಲ್ಲೂ ನಾನು ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಲಾಗುವುದು, ಡಿಸೆಂಬ‌ರ್ ಒಳಗಾಗಿ ಸಮೀಕ್ಷೆ ಪೂರ್ಣಗೊಳ್ಳಲಿದೆ. 1.75 ಲಕ್ಷ ಮಂದಿ ಶಿಕ್ಷಕರನ್ನು ಈ ಸಮೀಕ್ಷೆಗೆ ಬಳಸಿಕೊಳ್ಳಲಾಗುತ್ತಿದೆ. ಒಂದು ವೇಳೆ ಸಮೀಕ್ಷೆ ಸಮಯದಲ್ಲಿ ಮನೆಯಲ್ಲಿ ಇಲ್ಲದಿದ್ದರೆ ಆಯೋಗದ ಸಹಾಯವಾಣಿ 8050770004 ನ್ನು ಸಂಪರ್ಕಿಸಿ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ಆಯೋಗದ ವೆಬ್ ಸೈಟ್ ವಿಳಾಸ www.ksdckarnatakagovt.in ಮೂಲಕವೂ ಸಹ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶಿಕ್ಷಕರು ಸಮೀಕ್ಷೆ ಮಾಡುವ ಮೊದಲೇ…

Read More

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿ ಹೈಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದೆಹಲಿ ಹೈಕೋರ್ಟ್‌ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ನ್ಯಾಯಾಧೀಶರು, ವಕೀಲರು ಆವರಣ ತೊರೆದಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಸಿನಿಮಾ ಹಾಲ್ ನಲ್ಲಿ ನಡೆದ ಘಟನೆಯೊಂದು ಭಾರೀ ವೈರಲ್ ಆಗಿದ್ದು, ಅನೇಕ ಯುವ ವೃತ್ತಿಪರರು ಬಿಡುವಿನ ಸಮಯದಲ್ಲೂ ಕೆಲಸದಲ್ಲಿ ಮಗ್ನರಾಗಿರುತ್ತಾರೆ. ಹೌದು, ಬೆಂಗಳೂರಿನ ಸ್ಥಳೀಯ ಚಿತ್ರಮಂದಿರದಲ್ಲಿ ಇತ್ತೀಚೆಗೆ ನಡೆದ ಘಟನೆಯು ನಗರದ ಕೆಲಸದ ಸಂಸ್ಕೃತಿ ಎಷ್ಟು ತೀವ್ರವಾಗಿದೆ ಎಂಬುದರ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ. r/ಬೆಂಗಳೂರಿನ ರೆಡ್ಡಿಟರ್ ಒಬ್ಬರು “ಲೋಕಾ” ಚಿತ್ರದ ಪ್ರದರ್ಶನದ ಸಮಯದಲ್ಲಿ, “ಮುಂದಿನ ಸಾಲಿನಲ್ಲಿ ಒಬ್ಬ ಮಹಿಳೆ ತನ್ನ ಲ್ಯಾಪ್‌ಟಾಪ್ ಅನ್ನು ತೆರೆದು ಥಿಯೇಟರ್‌ನಲ್ಲಿ ಕಚೇರಿಯಲ್ಲಿ ಟೈಪ್ ಮಾಡುವಂತೆ ಕೆಲಸ ಮಾಡುತ್ತಿರುವ ಫೋಟೋವೊಂದನ್ನು” ಹಂಚಿಕೊಂಡಿದ್ದಾರೆ. ಸದ್ಯ ಪೋಸ್ಟ್ ವೈರಲ್ ಆಗಿ, ಬೆಂಗಳೂರಿನ ಕಾರ್ಪೊರೇಟ್ ಜಂಜಾಟದ ಬಗ್ಗೆ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.

Read More

ಮೈಸೂರು : ಆಸ್ಪತ್ರೆ ಚಿಕಿತ್ಸಾ ಹಣಕ್ಕಾಗಿ ಗ್ರಾಮದಲ್ಲಿ ಭಿಕ್ಷೆ ಬೇಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಪಘಾತದಲ್ಲಿ ಗಾಯಗೊಂಡಿದ್ದ 5 ವರ್ಷದ ಬಾಲಕಿ ಆದ್ಯಾ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.  ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆ ಹಣಕ್ಕಾಗಿ ಗ್ರಾಮದ ಯುವಕರು, ಸಂಬಂಧಿಗಳ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ. ಇದೇ ತಿಂಗಳ 2ನೇ ತಾರೀಖು ಬದನವಾಳು ಬಳಿ 2 ಬೈಕ್ ನಡುವೆ ಅಪಘಾತ ಆಗಿದ್ದು, 6 ಜನ ಗಾಯಗೊಂಡಿದ್ದರು. ಅದರಲ್ಲಿ ಒಂದೇ ಕುಟುಂಬದ ತಂದೆ ಮಹೇಶ್ (38) ತಾಯಿ ರಾಣಿ (32) ಹಾಗೂ ಮಗಳು ಆದ್ಯ (5) ಗಾಯಗೊಂಡಿದ್ರು. ಚಿಕಿತ್ಸೆ ಫಲಿಸದೇ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಆದ್ಯ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

Read More