Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : 2023-24ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಸಹಶಿಕ್ಷಕರು, ದೈಹಿಕ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರುಗಳಿಗೆ ಅಂತರ್ ವಿಭಾಗ ಮಟ್ಟದ ಕೋರಿಕೆ/ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ನಿಯಮಗಳಂತೆ, ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮ-2022ರ ಪ್ರಕಾರ ಉಲ್ಲೇಖ-1ರಲ್ಲಿನ ಮಾರ್ಗಸೂಚಿಯನ್ವಯ ಅಂತರ ವಿಭಾಗ ಮಟ್ಟದ ವರ್ಗಾವಣಾ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ವರ್ಗಾವಣಾ ಕೌನ್ಸಿಲಿಂಗ್ ಪ್ರಕ್ರಿಯೆಯು ರೌಂಡ್ ರೋಬಿನ್ ನಂತೆ ನಿಗಧಿತ ದಿನಗಳಂದು ಬೆಳಿಗ್ಗೆ 9-00 ರಿಂದ ಸಂಜೆ 7-00 ಗಂಟೆಯವರೆಗೆ ನಿರಂತರವಾಗಿ ನಡೆಯಲಿದ್ದು ಈಗಾಗಲೇ ಪ್ರಕಟಿಸಲಾಗಿರುವ ಆಧ್ಯತಾ ಪಟ್ಟಿಯಲ್ಲಿರುವ ಶಿಕ್ಷಕರು ಪ್ರಸ್ತುತ ಕರ್ತವ್ಯ ನಿರತ ಜಿಲ್ಲೆಯ ಉಪನಿರ್ದೇಶಕರು(ಆಡಳಿತ) ಇವರ ಕಛೇರಿಯಲ್ಲಿ ನಿಗಧಿತ ದಿನಾಂಕದಂದು ಪೂರಕ ಮೂಲ ದಾಖಲೆಗಳ ಸಹಿತ…
ಬೆಂಗಳೂರು : ಪಡಿತರ ಕಾರ್ಡ್ದಾರರ ಇ-ಕೆವೈಸಿ ಕಾರ್ಯ ಮುಂದುವರೆದಿದ್ದು ಇನ್ನೂ ಮಾಡಿಸದೆ ಬಾಕಿ ಇರುವ ಪಡಿತರ ಚೀಟಿಗಳ ಫಲಾನುಭಾವಿಗಳು ತಪ್ಪದೇ ಇ-ಕೆವೈಸಿ ಮಾಡಿಸುವಂತೆ ಸೂಚನೆ ನೀಡಲಾಗಿದೆ. ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಹತ್ತಿರದ ನ್ಯಾಯ ಬೆಲೆ ಅಂಗಡಿಗೆ ಆಗಸ್ಟ್ 31 ರೊಳಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಇಲ್ಲಿದೆ ಪಡಿತರ ಚೀಟಿ ಇ-ಕೆವೈಸಿ ಮಾಡಿಸುವ ವಿಧಾನ ಪಡಿತರ ಚೀಟಿಯ ಒರಿಜಿನಲ್ ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ ಬ್ಯಾಂಕ್ ಪಾಸ್ಬುಕ್ನ ಫೋಟೋಕಾಪಿ ಕುಟುಂಬದ ಯಜಮಾನನ ಎರಡು ಪಾಸ್ಪೋರ್ಟ್ ಅಳತೆಯ ಪೋಟೋ ಪಡಿತರ ಚೀಟಿ ಮತ್ತು ಆಧಾರ್ ಅನ್ನು ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ ನಿಮ್ಮ ರಾಜ್ಯದ ಅಧಿಕೃತ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ಗೆ ಭೇಟಿ ನೀಡಿ. ಸಕ್ರಿಯ ಕಾರ್ಡ್ನೊಂದಿಗೆ…
ಬಾಗಲಕೋಟೆ : ರಾಜ್ಯಾದ್ಯಂತ ಎಲ್ಲಾ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮಾದರಿ ರಾಜ್ಯವ್ಯಾಪಿ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು . ಇದರಿಂದ ಅನಧಿಕೃತ ನಿವೇಶನಗಳಿಗೆ ಶಾಶ್ವತ ಕಡಿವಾಣ ಬೀಳಲಿದೆ ಎಂದು ತಿಳಿಸಿದ್ದಾರೆ. ನಗರ, ಪಟ್ಟಣ ಪ್ರದೇಶಕ್ಕೆ ಹೊಂದಿಕೊಂಡಿರುವ ಭೂ ಪರಿವರ್ತನೆಯಾಗಿ ಮನೆ, ನಿವೇಶನ ಸೇರಿ ಬಡಾವಣೆ ನಿರ್ಮಿಸಿದ್ದರೂ ಸುಪ್ರೀಂಕೋರ್ಟ್ ಆದೇಶದ ಪರಿಣಾಮ ಕೆಲವು ಕಾರಣಗಳಿಂದ ಅವುಗಳಿಗೆ ಅಧಿಕೃತ ಉತಾರ ದೊರೆಯುತ್ತಿರಲಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಮಂಡಿಸಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು : ಕೃಷಿ ಇಲಾಖೆಯು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಟಾನಗೊಳ್ಳುತ್ತಿದ್ದು, ಬದು, ಕೃಷಿ ಹೊಂಡ, ಕೃಷಿಹೊಂಡದ ಸುತ್ತ ತಂತಿ ಬೇಲಿ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ, ಪಂಪ್ ಸೆಟ್ ಹಾಗೂ ಲಘು ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದೆ. ರೈತರು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕಾಗಿರುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90% ಸಹಾಯಧನ ನೀಡಲು ಅವಕಾಶವಿರುತ್ತದೆ. ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಾಸ್ ಪೋರ್ಟ್ ಸೈಜ್ ಪೋಟೊ, ಪಹಣಿ, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ …
ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಅನರ್ಹ ಬಿಪಿಎಲ್ ಕಾರ್ಡ್ ಸಿಕ್ಕಿಬಿದ್ದರೆ ದಂಡದ ಜೊತೆಗೆ ಕಾನೂನು ಕ್ರಮ ಎದುರಿಸಬೇಕು. ಹೌದು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಆಹಾರ ಇಲಾಖೆ ಮುಂದಾಗಿದೆ. ಈ ಮೂಲಕ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಡವ ಡವ ಶುರುವಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಇದುವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡೆದ ಅಕ್ಕಿ ಹಾಗೂ ಇತರೆ ಧಾನ್ಯಗಳ ಮೊತ್ತವನ್ನು ಮರಳಿಸಬೇಕು ಜೊತೆಗೆ ಕ್ರಿಮಿನಲ್ ಕೇಸ್ ಎದುರಸಬೇಕು ಎನ್ನಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಶೇಕಡ 76.04, ನಗರ ಪ್ರದೇಶದಲ್ಲಿ ಶೇಕಡ 49.36 ಸೇರಿ 3,58,87,666 ಫಲಾನುಭವಿಗಳಿಗೆ 1,03,70,666 ಬಿಪಿಎಲ್ ಕಾರ್ಡ್ ನೀಡಬೇಕೆಂಬ ನಿಯಮವಿದೆ. ಆದರೆ, ರಾಜ್ಯದಲ್ಲಿ 3,93,29,981 ಫಲಾನುಭವಿಗಳಿಗೆ 1,16,51,209 ಬಿಪಿಎಲ್ ಕಾರ್ಡ್ ನೀಡಲಾಗಿದೆ. ನಿಗದಿಗಿಂತ 14 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ಹೆಚ್ಚುವರಿಯಾಗಿ ನೀಡಲಾಗಿದೆ ಎಂದು ಆಹಾರ…
ಹೆರಿಗೆಯ ನಂತರ, ಮಹಿಳೆಯ ದೇಹದಲ್ಲಿ ಅನೇಕ ಬದಲಾವಣೆಗಳಿವೆ. ನಿರ್ದಿಷ್ಟವಾಗಿ, ಹಾರ್ಮೋನುಗಳಲ್ಲಿ ಏರಿಳಿತಗಳಿವೆ. ಈ ಕಾರಣದಿಂದಾಗಿ, ಮಗುವಿಗೆ ಹಾಲುಣಿಸುವಲ್ಲಿ ಅನೇಕ ಸಮಸ್ಯೆಗಳಿವೆ. ಈ ಸಮಸ್ಯೆಯನ್ನು ನಿವಾರಿಸಲು ಮಹಿಳೆಯರು ತೀವ್ರ ತೊಂದರೆಗಳನ್ನು ಎದುರಿಸುತ್ತಾರೆ. ಮಗುವಿಗೆ ಸಾಕಷ್ಟು ಹಾಲು ನೀಡದಿದ್ದರೆ ಅದು ತಾಯಿಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೆರಿಗೆಯ ನಂತರ ಸಾಕಷ್ಟು ಹಾಲು ಸಿಗದಿರುವ ತೊಂದರೆಗಳ ಬಗ್ಗೆ ನಾವೀಗ ಕೆಲವು ವಿಷಯಗಳನ್ನು ಕಲಿಯೋಣ. ಮಹಿಳೆಯರು ಆಹಾರದ ಬಗ್ಗೆ ವಿಶೇಷ ಗಮನ ನೀಡುತ್ತಾರೆ: ಹೆರಿಗೆಯ ನಂತರ ಮಗುವಿಗೆ ಹಾಲುಣಿಸಲು ಮಹಿಳೆಯರಿಗೆ ಸಾಕಷ್ಟು ತೊಂದರೆ ಇದೆ. ಹೆಚ್ಚಿನ ಮಹಿಳೆಯರಿಗೆ ಹಾಲು ಸಿಗುವುದಿಲ್ಲ. ಈ ಕಾರಣದಿಂದಾಗಿ, ಮಗು ಮತ್ತು ತಾಯಿಯ ಆರೋಗ್ಯವು ತೊಂದರೆಗೊಳಗಾಗುತ್ತದೆ. ಹೆರಿಗೆಯ ನಂತರ ತಾಯಂದಿರಿಗೆ ಹಾಲಿನ ಕೊರತೆಗೆ ಮುಖ್ಯ ಕಾರಣವೆಂದರೆ ಪೌಷ್ಠಿಕಾಂಶದ ಕೊರತೆ. ಇದು ಮಗುವಿನ ಸ್ತನ್ಯಪಾನದ ಸಮಯದಲ್ಲಿ ಸಮಸ್ಯೆಗಳನ್ನು ಉಂಟುಮಾಡುತ್ತಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಮಹಿಳೆಯ ದೇಹವು ಒಳಗಿನಿಂದ ದುರ್ಬಲವಾಗಿದ್ದರೂ ಹಾಲು ಸ್ಖಲನ ಮಾಡಲು ಸಮಯ ತೆಗೆದುಕೊಳ್ಳುತ್ತದೆ. ತಾಯಿಗೆ ತುಂಬಾ ಕಡಿಮೆ ಹಾಲು ಇರುವುದರಿಂದ ಹೊಟ್ಟೆ…
ನವದೆಹಲಿ : ಆಗಸ್ಟ್ 15 ರಂದು ಭಾರತವು ತನ್ನ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಇದಕ್ಕಾಗಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಐತಿಹಾಸಿಕ ಕೆಂಪು ಕೋಟೆಯಿಂದ ಸತತ 11 ನೇ ಬಾರಿಗೆ ರಾಷ್ಟ್ರಧ್ವಜವನ್ನು ಹಾರಿಸಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಸುಮಾರು 6,000 ಅತಿಥಿಗಳನ್ನು ಆಹ್ವಾನಿಸಲಾಗಿದೆ. ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯ ಥೀಮ್ ಅನ್ನು ವಿಕಸಿತ ಭಾರತ@2047 ನಲ್ಲಿ ಇಡಲಾಗಿದೆ. ಈ ಸಮಾರಂಭವನ್ನು ಭವ್ಯವಾಗಿ ಮಾಡಲು ಸರ್ಕಾರವು ಅನೇಕ ಅತಿಥಿಗಳನ್ನು ಆಹ್ವಾನಿಸಿದೆ. ಇದು ಭಾರತದಿಂದ ವಿದೇಶಕ್ಕೆ ಅತಿಥಿಗಳ ಪಟ್ಟಿಯನ್ನು ಒಳಗೊಂಡಿದೆ. ಅದನ್ನು ಕಂಡುಹಿಡಿಯೋಣ ವಿಶೇಷ ಅತಿಥಿಗಳು ಯಾರು? ಅಟಲ್ ಇನ್ನೋವೇಶನ್ ಮಿಷನ್ ಮತ್ತು ಪಿಎಂ ಶ್ರೀ (ಪ್ರೈಮ್ ಮಿನಿಸ್ಟರ್ಸ್ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ) ಯೋಜನೆಯಿಂದ ಪ್ರಯೋಜನ ಪಡೆಯುತ್ತಿರುವ ವಿದ್ಯಾರ್ಥಿಗಳು ಮತ್ತು ‘ಮೇರಿ ಮತಿ ಮೇರಾ ದೇಶ್’ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ಮೇರಾ ಯುವ ಇಂಡಿಯಾ (ಮೈ…
ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾತಂತ್ರ್ಯ ದಿನದಂದು ಜನತೆಗೆ ಶುಭ ಕೋರಿದ್ದಾರೆ. “ನಮ್ಮ ಎಲ್ಲಾ ನಾಗರಿಕರು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ತಯಾರಿ ನಡೆಸುತ್ತಿರುವುದನ್ನು ನೋಡಿ ನನಗೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿ, ಆಗಸ್ಟ್ 14 ರಂದು, ನಮ್ಮ ದೇಶವು ವಿಭಜನೆಯ ಭಯಾನಕ ಸ್ಮರಣೆ ದಿನವನ್ನು ಆಚರಿಸುತ್ತಿದೆ. ಇದು ವಿಭಜನೆಯ ಭೀಕರತೆಯನ್ನು ನೆನಪಿಸಿಕೊಳ್ಳುವ ದಿನ. ನಮ್ಮ ಮಹಾನ್ ರಾಷ್ಟ್ರ ವಿಭಜನೆಯಾದಾಗ, ಲಕ್ಷಾಂತರ ಜನರು ವಲಸೆ ಹೋಗಬೇಕಾಯಿತು. ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡರು. ಸ್ವಾತಂತ್ರ್ಯ ದಿನವನ್ನು ಆಚರಿಸುವ ಒಂದು ದಿನ ಮೊದಲು, ನಾವು ಅಭೂತಪೂರ್ವ ಮಾನವ ದುರಂತವನ್ನು ನೆನಪಿಸಿಕೊಳ್ಳುತ್ತೇವೆ ಮತ್ತು ಛಿದ್ರಗೊಂಡ ಕುಟುಂಬಗಳೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ. “ಸ್ವಾತಂತ್ರ್ಯ ದಿನವು ದೇಶಕ್ಕಾಗಿ ಅನೇಕ ಜನರು ತ್ಯಾಗ ಮಾಡಿದ ದಿನಗಳನ್ನು ನೆನಪಿಸುತ್ತದೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ನಮಗೆ ಹೊಸ ಅಭಿವ್ಯಕ್ತಿಯನ್ನು ನೀಡಿದರು. ಸರ್ದಾರ್ ಪಟೇಲ್, ಬೋಸ್, ಭಗತ್ ಸಿಂಗ್, ಬಾಬಾ ಸಾಹೇಬ್ ಅಂಬೇಡ್ಕರ್ ಅವರಂತಹ ಇನ್ನೂ ಅನೇಕರ…
ಶಿವಮೊಗ್ಗ : ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ. ದೂರುದಾರರಾದ ಉಪ ವಲಯ ಅರಣ್ಯಾಧಿಕಾರಿ, ಗೆಜ್ಜೇನಹಳ್ಳಿ ಶಾಖೆ, ಶಂಕರ ವಲಯ, ಶಿವಮೊಗ್ಗ ಇವರು ದೂರು ನೀಡಿದ ಅನ್ವಯ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಈ ಪ್ರಕರಣವನ್ನು ಎಲ್ಜಿಸಿ(ಸಿ) ಸಂಖ್ಯೆ 1726/2019 ಎಂದು ದಾಖಲಿಸಿಕೊಂಡು ಸಂಪೂರ್ಣ ಸಾಕ್ಷö್ಯ ವಿಚಾರಣೆಯನ್ನು ನಡೆಸಿದ ನಂತರ ಆರೋಪಿಯು ಅರಣ್ಯ ಜಮೀನನ್ನು ಭೂ ಕಬಳಿಕೆ ಮಾಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10,000/- ದಂಡವನ್ನು ವಿಧಿಸಿ, ದಂಡ ಪಾವತಿಸಲು ತಪ್ಪಿದಲ್ಲಿ 03 ತಿಂಗಳ…
ಬೆಂಗಳೂರು : ಹೊರಗುತ್ತಿಗೆ ಮಹಿಳಾ ನೌಕರರ ಹೆರಿಗೆ ರಜೆ ಕುರಿತಂತೆ ಕರ್ನಾಟಕ ಹೈಕೋರ್ಟ್ ಪೀಠ ಮಹತ್ವದ ತೀರ್ಪು ನೀಡಿದೆ. ವಿಜಯನಗರ ಮೂಲದ ಚಾಂದಬಿ ಬಳಿಗಾರ್ ಹೂವಿನಹಡಗಲಿಯ ರೈತ ಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ಇಲ್ಲಿ ಅವರನ್ನು ಜೂನ್ 2014 ರಲ್ಲಿ ಗುತ್ತಿಗೆ (ಗುತ್ತಿಗೆ ನೌಕರರ ಹೆರಿಗೆ ರಜೆ) ಮೇಲೆ ಒಂದು ವರ್ಷದ ಅಕೌಂಟೆಂಟ್ ಆಗಿ ನೇಮಿಸಲಾಯಿತು. ಮಹಿಳೆ ಎರಡನೇ ಮಗುವನ್ನು ಗರ್ಭಧರಿಸಿದಾಗ, ಅವರು ಮೇ 6, 2023 ಮತ್ತು ಆಗಸ್ಟ್ 31, 2023 ರ ನಡುವೆ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 1, 2023 ರಂದು, ಮಹಿಳೆ ಹೂವಿನಹಡಗಲಿ ಕೃಷಿ ಅಧಿಕಾರಿಯ ಮುಂದೆ ಕೆಲಸಕ್ಕೆ ಮರಳಿದಾಗ, ಅವಳ ಸ್ಥಾನದಲ್ಲಿ ಬೇರೊಬ್ಬರಿಗೆ ಕೆಲಸ ನೀಡಲಾಗಿದೆ ಎಂದು ತಿಳಿಸಲಾಯಿತು. ನಂತರ, ಮಹಿಳೆ ತನ್ನ ದೂರಿನೊಂದಿಗೆ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಿದರು. ಅವರು ಅನೇಕ ಅಧಿಕಾರಿಗಳ ಮುಂದೆ ಮನವಿ ಮಾಡಿದರು ಆದರೆ ಸಮಾಧಾನವನ್ನು ಹೊರತುಪಡಿಸಿ ಬೇರೇನೂ ಸಿಗಲಿಲ್ಲ. ಎಲ್ಲಾ ಕಡೆಯಿಂದಲೂ ಮನವಿ ಮಾಡಿ ಸುಸ್ತಾಗಿದ್ದ…