Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಷ್ಟ್ರಕವಿ ಕುವೆಂಪುಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯಾತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು ಅವರಿಗೆ ಕೇಂದ್ರ ಸರ್ಕಾರವು ಭಾರತ ರತ್ನ ಪ್ರಶಸ್ತಿಯನ್ನು ನೀಡುವಂತೆ ಶಿಫಾರಸ್ಸು ಮಾಡುವ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. https://twitter.com/KarnatakaVarthe/status/1966144984320823673?ref_src=twsrc%5Etfw%7Ctwcamp%5Etweetembed%7Ctwterm%5E1966144984320823673%7Ctwgr%5Eabb7e50d919417d215513d675fd938d6362a8b60%7Ctwcon%5Es1_&ref_url=https%3A%2F%2Fkannadadunia.com%2Fbig-news-e0b2b0e0b2bee0b2b7e0b38de0b29fe0b38de0b2b0e0b295e0b2b5e0b2bf-e0b295e0b381e0b2b5e0b386e0b282e0b2aae0b381e0b297e0b386-e0b2ad%2F
ನವದೆಹಲಿ : ದೇಶದ ನೂತನ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಧಾಕೃಷ್ಣನ್ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಅವರನ್ನು ಸೋಲಿಸುವ ಮೂಲಕ ಗೆಲುವು ಸಾಧಿಸಿದ್ದಾರೆ. ಜುಲೈ 21 ರಂದು ಮಾಜಿ ಉಪಾಧ್ಯಕ್ಷ ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯ ನಂತರ ಚುನಾವಣೆ ನಡೆಯಿತು. ಎನ್ಡಿಎ ಅಭ್ಯರ್ಥಿ 452 ಮತಗಳನ್ನು ಪಡೆದರೆ, ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದರು. ಫಲಿತಾಂಶ ಘೋಷಣೆಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸಿಪಿ ರಾಧಾಕೃಷ್ಣನ್ ಅವರನ್ನು ಅಭಿನಂದಿಸಿದರು ಮತ್ತು ಹೊಸದಾಗಿ ಆಯ್ಕೆಯಾದ ಉಪರಾಷ್ಟ್ರಪತಿಗಳು ಭಾರತದ ಸಾಂವಿಧಾನಿಕ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುತ್ತಾರೆ ಮತ್ತು ಸಂಸದೀಯ ಸಂವಾದಕ್ಕೆ ಸಕಾರಾತ್ಮಕ ಕೊಡುಗೆ ನೀಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. https://twitter.com/ANI/status/1966361460587769946?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/ANI/status/1966360191697555957?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/ANI/status/1966362690533863738?ref_src=twsrc%5Etfw%7Ctwcamp%5Etweetembed%7Ctwterm%5E1966362690533863738%7Ctwgr%5E96b585d07fd33a7c4ad047a2f135ea4457b2dab1%7Ctwcon%5Es1_c10&ref_url=https%3A%2F%2Fkannadadunia.com%2Fcp-radhakrishnan-sworn-in-as-the-new-vice-president-of-india-cp-radhakrishnan%2F…
ಹಾಸನ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಮಗಳನ್ನು ತವರು ಮನೆಗೆ ಕರೆದೊಯ್ದಿದ್ದಕ್ಕೆ ಅತ್ತೆಯನ್ನೇ ಅಳಿಯ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ನಡೆದಿದೆ. ರಾಮನಾಥಪುರದಲ್ಲಿ ರಸೂಲ್ ಎಂಬಾತ ಚಾಕುವಿನಿಂದ ಇರಿದು ಫೈರೋಜಾ ಬಾನು (55) ಕೊಲೆಗೈದಿದ್ದಾನೆ.9 ವರ್ಷದ ಹಿಂದೆ ರಸೂಲ್ ಸಮೀರಾ ಬಾನು ಜೊತೆಗೆ ಮದುವೆಯಾಗಿದ್ದ. ಪದೇಪದೆ ಪತ್ನಿ ಸಮೀರಾ ಬಾನುಗೆ ರಸೂಲ್ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ನಿನ್ನೆ ಮಗಳನ್ನು ತವರು ಮನೆಗೆ ಫೈರೋಜಾ ಬಾನು ಕರೆತಂದಿದ್ದರು. ಇದರಿಂದ ಕೋಪಗೊಂಡ ರಸೂಲ್ ಅತ್ತೆಯನ್ನೇ ಕೊಲೆ ಮಾಡಿದ್ದಾನೆ. ಗಾಯಗೊಂಡ ಪತ್ನಿ ಸಮೀರಾಗೆ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಾಯಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ಮಾಡುವುದನ್ನು ಕಾಣಲಾಗಿದೆ. ಇದರ ನಿಯಂತ್ರಣಕ್ಕಾಗಿ ನಾಯಿಗಳು ಹೆಚ್ಚಾಗದಂತೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು. ಬುಧವಾರ(ಸೆ.10) ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಣಿ ಜನನ ನಿಯಂತ್ರಣ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ನಾಯಿ ಕಚ್ಚಿದಾಗ ಲಸಿಕೆ ನೀಡಲು ಸಾರ್ವಜನಿಕರಿಗೆ ಸಹಾಯವಾಗುವಂತೆ 108 ಇಲ್ಲವೇ 1098 ಸಹಾಯವಾಣಿ ರಚನೆ ಮಾಡಿ, ಕರೆ ಬಂದ ಕೂಡಲೇ ಅವರ ಮನೆಗೆ ತೆರಳಿ ಚಿಕಿತ್ಸೆ ನೀಡಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಬೀದಿನಾಯಿ, ಸಾಕು ನಾಯಿಗಳಿಗೆ ಎಆರ್ಯು ಲಸಿಕೆ ನೀಡಲು ಕ್ರಮಕೈಗೊಳ್ಳುವಂತೆ ತಿಳಿಸಿದರು. ಮನೆ ಮನೆಗೆ ತೆರಳಿ ಸಾಕು ಪ್ರಾಣಿಗಳಿಗೆ ವ್ಯಾಕ್ಸಿನ್ ನೀಡಬೇಕು. ಎಬಿಸಿ ಕಾರ್ಯಕ್ರಮ ಮಾಡಲು ನಗರಾಭಿವೃದ್ದಿ ಕೋಶ, ಮಹಾನಗರಪಾಲಿಕೆ ಸಂಬಂಧಿಸಿದ ಟೆಂಡರ್ ಮೂಲಕ ಸಂಸ್ಥೆಗಳನ್ನು ಗುರುತಿಸಿ ಎಲ್ಲಾ ನಾಯಿಗಳಿಗೆ ಪಶುಪಾಲನಾ ಸಹಯೋಗದೊಂದಿಗೆ ಸಂತಾನ…
ಬೆಂಗಳೂರು :ಬೆಂಗಳೂರಿನ ಪೋಥಿಸ್ ಶೋ ರೂಮ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮೈಸೂರು ರಸ್ತೆಯ ಗಾಂಧಿ ನಗರದಲ್ಲಿರುವ ಫೋಥಿಸ್ ಬಟ್ಟೆ ಶೋ ರೂಮ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 30 ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಚೆನ್ನೈನಿಂದ ಬಂದಿದ್ದು, ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಟೆಂಬರ್ ಲೇಔಟ್ ನಲ್ಲಿರುವ ಶೋ ರೂಮ್ ಮೇಲೆ ಈ ದಾಳಿ ನಡೆದಿದೆ. ಆದಾಯ ತೆರಿಗೆ ವಂಚನೆ ಆರೋಪದ ಮೇಲೆ ಈ ದಾಳಿ ನಡೆದಿದೆ. ತಮಿಳುನಾಡಿನ ಉದ್ಯಮಿಯೊಬ್ಬರಿಗೆ ಸೇರಿದ ಶೂ ರೂಮ್ ಇದಾಗಿದೆ.
ಕೆಎನ್ಎನ್ಡಿಜಿಟಲ್ಡೆಸ್ಕ್: ನಮ್ಮ ಕಣ್ಣುಗಳ ಆಕಾರದಿಂದ ಹಿಡಿದು ನಮ್ಮ ಕೂದಲಿನ ಉದ್ದದವರೆಗೆ, ನಮ್ಮ ದೇಹದ ಬಗ್ಗೆ ಸಂಕೀರ್ಣ ವಿವರಗಳು ನಮ್ಮ ಬಗ್ಗೆ ಹೇಳಲು ವಿಷಯಗಳನ್ನು ಹೊಂದಿವೆ. ಇದಲ್ಲದೇ ನಮ್ಮ ದೇಹದ ಆಕಾರವನ್ನು ಒಳಗೊಂಡಿದೆ, ನಮ್ಮ ವ್ಯಕ್ತಿತ್ವದ ಬಗ್ಗೆ ಟನ್ ಗಟ್ಟಲೆ ಹೇಳುತ್ತದೆ ಎನ್ನಲಾಗಿದೆ. ಈ ಒಳನೋಟಗಳು ನಮ್ಮ ಭಾವನೆಗಳು ಮತ್ತು ವ್ಯಕ್ತಿತ್ವದ ಗುಣಲಕ್ಷಣಗಳ ಬಗ್ಗೆ ಹೇಳುವುದಲ್ಲದೆ, ನಮ್ಮ ಆಹಾರದ ಬಗ್ಗೆ ವಿವರವಾದ ವಿವರಣೆಗಳನ್ನು ನೀಡುತ್ತವೆ ಮತ್ತು ಈ ಮಾಹಿತಿಗಳು ನಮ್ಮ ಆರೋಗ್ಯದ ಸುತ್ತ ಸುತ್ತುತ್ತವೆ. ನಿಮ್ಮ ದೇಹದ ಆಕಾರವು ನಿಮ್ಮ ಬಗ್ಗೆ ಏನು ಹೇಳುತ್ತದೆ ಎಂದು ನೋಡೋಣ ಹಾಗಾದ್ರೆ. ಸೇಬಿನ ಆಕಾರದ ದೇಹ: ನೀವು ಸೇಬಿನ ಆಕಾರದ ದೇಹವನ್ನು ಹೊಂದಿದ್ದರೆ, ನಿಮ್ಮ ದೇಹದ ಕೊಬ್ಬನ್ನು ನಿಮ್ಮ ಸೊಂಟ ಮತ್ತು ಹೊಟ್ಟೆಯ ಸುತ್ತಲೂ ಸಂಗ್ರಹಿಸುತ್ತಿದ್ದೀರಿ, ಮತ್ತು ನೀವು ಸೊಂಟದ ಕಳಪೆ ವ್ಯಾಖ್ಯಾನವನ್ನು ಹೊಂದಿದ್ದೀರಿ. ನಿಮ್ಮ ಜೀವನಶೈಲಿಯಲ್ಲಿ ನೀವು ಅಸಮತೋಲನವನ್ನು ಹೊಂದಿದ್ದೀರಿ ಮತ್ತು ಸರಿಯಾದ ವ್ಯಾಯಾಮ ದಿನಚರಿಯೊಂದಿಗೆ ಉತ್ತಮ ಆಹಾರದ ಅಗತ್ಯವಿದೆ ಮತ್ತು ಕಡಿಮೆ ಪ್ರಮಾಣದ…
ಮುಂಬೈ : ‘ರಾಗಿಣಿ ಎಂಎಂಎಸ್ ರಿಟರ್ನ್ಸ್’ ಮತ್ತು ‘ಪ್ಯಾರ್ ಕಾ ಪಂಚನಾಮ’ ಚಿತ್ರಗಳಲ್ಲಿ ನಟಿಸಿರುವ ಟಿವಿ ನಟಿ ಕರಿಷ್ಮಾ ಶರ್ಮಾ ಅವರು ಚಲಿಸುತ್ತಿದ್ದ ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯ ಬಗ್ಗೆ ಅವರೇ ಸಾಮಾಜಿಕ ಮಾಧ್ಯಮದ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ. ಮುಂಬೈ ಲೋಕಲ್ ರೈಲಿನಲ್ಲಿ ಚರ್ಚ್ಗೇಟ್ಗೆ ಹೋಗುವಾಗ ಚಲಿಸುವ ರೈಲಿನಿಂದ ಜಿಗಿದು ಗಂಭೀರ ಗಾಯಗೊಂಡಿದ್ದೇನೆ ಎಂದು ಕರಿಷ್ಮಾ ಹೇಳಿದ್ದಾರೆ. ಕರಿಷ್ಮಾ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹೀಗೆ ಬರೆದಿದ್ದಾರೆ, “ನಿನ್ನೆ, ನಾನು ಶೂಟಿಂಗ್ಗಾಗಿ ಚರ್ಚ್ಗೇಟ್ಗೆ ಹೋಗುತ್ತಿದ್ದೆ ಮತ್ತು ನಾನು ಸೀರೆ ಧರಿಸಿ ಸ್ಥಳೀಯ ರೈಲಿನಲ್ಲಿ ಹೋಗಲು ನಿರ್ಧರಿಸಿದೆ. ನಾನು ರೈಲು ಹತ್ತಿದ ತಕ್ಷಣ, ಅದರ ವೇಗ ಹೆಚ್ಚಾಗಲು ಪ್ರಾರಂಭಿಸಿತು. ನನ್ನ ಸ್ನೇಹಿತರು ರೈಲು ಹಿಡಿಯಲು ಸಾಧ್ಯವಾಗಲಿಲ್ಲ ಎಂದು ನಾನು ನೋಡಿದೆ.” ನಟಿ ಹೇಳಿದರು, “ಭಯದಿಂದ, ನಾನು ಚಲಿಸುವ ರೈಲಿನಿಂದ ಹಾರಿ ನನ್ನ ಬೆನ್ನಿನ ಮೇಲೆ ಬಿದ್ದೆ. ಇದರಿಂದ ತಲೆಗೆ ಬಹಳಷ್ಟು ಗಾಯಗಳಾಗಿವೆ ಎಂದು ಬರೆದುಕೊಂಡಿದ್ದಾರೆ. ಈ ಅಪಘಾತದಲ್ಲಿ, ಕರಿಷ್ಮಾ ಅವರ…
ಬೆಂಗಳೂರು : ಪ್ರಮುಖ ಹಬ್ಬಗಳಲ್ಲಿ ಒಂದಾದ ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಒಂದು ಟ್ರಿಪ್ ಈ ಕೆಳಗಿನ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲುಗಳ ವಿವರಗಳು ಹೀಗಿವೆ: 1. ರೈಲು ಸಂಖ್ಯೆ 06249/06250 ಯಶವಂತಪುರ-ಮಡಗಾಂವ್-ಯಶವಂತಪುರ ಎಕ್ಸ್ಪ್ರೆಸ್ ವಿಶೇಷ ರೈಲು (1 ಟ್ರಿಪ್): ರೈಲು ಸಂಖ್ಯೆ 06249 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್ಪ್ರೆಸ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 05:30 ಗಂಟೆಗೆ ಮಡಗಾಂವ್ ತಲುಪಲಿದೆ.ಮತ್ತೆ ಮರಳುವಾಗ, ರೈಲು ಸಂಖ್ಯೆ 06250 ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 1, 2025 ರಂದು ಬೆಳಿಗ್ಗೆ 06:30 ಗಂಟೆಗೆ ಮಡಗಾಂವ್ನಿಂದ ಹೊರಟು, ಅದೇ ದಿನ ರಾತ್ರಿ 11:40 ಗಂಟೆಗೆ ಯಶವಂತಪುರ ತಲುಪಲಿದೆ. ಈ ರೈಲು 16 ಬೋಗಿಗಳನ್ನು (10 ಸ್ವೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು) ಒಳಗೊಂಡಿರಲಿದೆ. ಈ ರೈಲು ಎರಡೂ…
ಭಟ್ಕಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಭಟ್ಕಳದಲ್ಲಿ ನೂರಾರು ಹಸುಗಳ ಎಲುಬುಗಳು ಪತ್ತೆಯಾಗಿದ್ದು, ಗೋವುಗಳ ನರಮೇಧ ನಡೆದಿರುವ ಶಂಕೆ ವ್ಯಕ್ತವಾಗಿದೆ. ಉತ್ತರ ಕರ್ನಾಟಕ ಜಿಲ್ಲೆಯ ಭಟ್ಕಳ ಪಟ್ಟಣದ ಮುಗ್ಗುಮ್ ಕಾಲನಿಯ ಗುಡ್ಡದ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಹಲವು ಜಾನುವಾರುಗಳ ಮೂಳೆಗಳು, ಅಸ್ಥಿಪಂಜರಗಳು ಪತ್ತೆ ಆಗಿವೆ. ಈ ಸ್ಥಳದಲ್ಲಿ ಹಲವು ದಿನಗಳಿಂದ ಜಾನುವಾರು ಹತ್ಯೆ ನಡೆಯುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಭಟ್ಕಳಕ್ಕೆ ತಂದು ಹತ್ಯೆ ಮಾಡಲಾಗುತ್ತಿದೆ. ಕೂಡಲೇ ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಹಿಂದೂ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಗುಡ್ಡದಲ್ಲಿ ಜಾನುವಾರುಗಳ ಮೂಳೆಗಳು ಮತ್ತು ಅಸ್ಥಿಪಂಜರದ ವಿಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಸ್ಥಳದಲ್ಲಿ ಜೆಸಿಬಿ ಯಂತ್ರದ ಮೂಲಕ ಸ್ವಚ್ಛಗೊಳಿಸಿ ಘಟನೆಯನ್ನು ಸಂಪೂರ್ಣ ಮುಚ್ಚಿ ಹಾಕುವ…
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಿನ್ನೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ನಿನ್ನೆ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮದ್ದೂರು ಠಾಣೆ ಪಿಎಸ್ ಐ ಮಂಜುನಾಥ್ ದೂರಿನನ್ವಯ ಎಫ್ ಐಆರ್ ದಾಖಲಿಸಲಾಗಿದೆ. ಬಿಎನ್ ಎಸ್ 196 (1)(a), 299, 353(2) ಅಡಿ ಶಾಸಕ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಹಿಂದೂ ಪಕ್ಷ ಪಕ್ಷ ಕಟ್ಟುವುದಾಗಿ ಯತ್ನಾಳ್ ಘೋಷಣೆ ಬಿಜೆಪಿಯವರು ನಮ್ಮನ್ನು ಗೌರವಯುತವಾಗಿ ತೆಗೆದುಕೊಳ್ಳದಿದ್ದರೆ ಜೆಸಿಬಿ ಗುರುತಿನ ಕರ್ನಾಟಕ ಹಿಂದೂ ಪಕ್ಷ ಹೆಸರಿನಲ್ಲಿ ಹೊಸ ಪಕ್ಷ ಕಟ್ಟುತ್ತೇನೆ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಘೋಷಿಸಿದ್ದಾರೆ. ಮದ್ದೂರು ತಾಲೂಕಿನ ಸೋಮನಹಳ್ಳಿ ಬಳಿ ಜಾಥಾ ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, ನಮ್ಮ ಪಕ್ಷ…













