Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಇಂದು ಬೆಳ್ಳಂಬೆಳಗ್ಗೆ ಬಿಗಿ ಭದ್ರತೆ ನಡುವೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನಿಂದ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ನಟ ದರ್ಶನ್ ಅವರನ್ನು ಮುಂಜಾನೆ 4 ಗಂಟೆ ಸುಮಾರಿಗೆ ಬೋಲೇರೋ ವಾಹನದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಕರೆದುಕೊಂಡು ಹೋಗಲಾಗುತ್ತಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ರನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಬಳ್ಳಾರಿ ಜೈಲು ತಲುಪಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದರಂತೆ ಮಾಹಿತಿಗಳು ಬಹಿರಂಗವಾಗುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಬರೆದ ಪತ್ರದಲ್ಲಿನ ಸಹಿಯೇ ನಕಲಿ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ಬಿಜೆಪಿ ಟ್ವೀಟ್ ಮಾಡಿದ್ದು, ನಾನೇ ಸತ್ಯ ಹರಿಶ್ಚಂದ್ರರ ಕೊನೆಯ ತುಂಡು ಎನ್ನುವ ರೀತಿ ಲಜ್ಜೆಬಿಟ್ಟು ಭ್ರಷ್ಟಾಚಾರವನ್ನು ಸಮರ್ಥಿಸಿಕೊಳ್ಳುವ ಭಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಗತ್ತಿನ ಮುಂದೆ ಸತ್ಯವನ್ನು ಮರೆಮಾಚಲು ಹೋಗಿ ಇದೀಗ ಬೆತ್ತಲಾಗಿದ್ದಾರೆ ಎಂದು ಹೇಳಿದೆ. ಮಾಹಿತಿ ಹಕ್ಕಿನಡಿ ಆರ್ಟಿಐ ಕಾರ್ಯಕರ್ತ ಪಡೆದ ಶ್ರೀಮತಿ ಪಾರ್ವತಿಯವರು ಮುಡಾಗೆ ಬರೆದ ಪತ್ರದಲ್ಲಿನ ಸಹಿಯೇ ಬೇರೆ ಇದೆ. ನಕಲಿರಾಮಯ್ಯನವರು ಟಾರ್ಚ್ ಬಿಟ್ಟು ತೋರಿಸಿದ ವೈಟ್ನರ್ ಹಿಂದಿನ ಸಾಲಿನ ಪತ್ರದ ಸಹಿಯೇ ಬೇರೆ ಇದೆ. ಭ್ರಷ್ಟ ಮುಖ್ಯಮಂತ್ರಿಗಳೇ, ಒಂದು ಸತ್ಯವನ್ನು ಮರೆಮಾಚಲು ಹೋಗಿ ಹಲವು ಸುಳ್ಳುಗಳನ್ನು ಹೇಳಿದ್ದೀರಿ. ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಂತೆ ಸುಳ್ಳು ಸುದ್ದಿ ಹರಡುವುದಕ್ಕೆ ನಾಚಿಕೆ ಆಗುವುದಿಲ್ಲವೇ? ಮೊದಲು ರಾಜೀನಾಮೆ ಕೊಟ್ಟು ತೊಲಗಿ ಎಂದು ಆಗ್ರಹಿಸಿದೆ.
ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ 7000 ಕ್ಕೂ ಹೆಚ್ಚು ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಶಾರ್ಟ್ ನೋಟಿಸ್ ನೀಡಿದೆ. 7934 ಹುದ್ದೆಗಳಿಗೆ ಕೇಂದ್ರ ಉದ್ಯೋಗ ಅಧಿಸೂಚನೆ ಹೊರಡಿಸಲಾಗಿದೆ. ಇದರ ಅಡಿಯಲ್ಲಿ, ಅಭ್ಯರ್ಥಿಗಳನ್ನು ವಿವಿಧ ಇಲಾಖೆಗಳಲ್ಲಿ ಜೆಇ ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ. ರೈಲ್ವೆ ನೇಮಕಾತಿ ಮಂಡಳಿಯ ಜೆಇ ಹುದ್ದೆಗಳಿಗೆ ಸಂಕ್ಷಿಪ್ತ ನೋಟಿಸ್ ಮಾತ್ರ ನೀಡಲಾಗಿದೆ. ಅರ್ಜಿ ಪ್ರಕ್ರಿಯೆಯು ಜುಲೈ 30, 2024 ರಂದು ಪ್ರಾರಂಭವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 29, 2024 ಆಗಿದೆ. ಅಭ್ಯರ್ಥಿಗಳು ಈ ದಿನಾಂಕಗಳನ್ನು ಬರೆದಿಟ್ಟುಕೊಳ್ಳಬೇಕು ಮತ್ತು ಅಪ್ಲಿಕೇಶನ್ ಲಿಂಕ್ ಸಕ್ರಿಯಗೊಳಿಸಿದ ಕೂಡಲೇ ಅರ್ಜಿ ಸಲ್ಲಿಸಬೇಕು. ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ ಆಗಸ್ಟ್ 29 ಆಗಿದೆ. ಈ ವೆಬ್ ಸೈಟ್ ನಿಂದ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಆರ್ಆರ್ಬಿಯ ಅಧಿಕೃತ ವೆಬ್ಸೈಟ್ಗೆ ಹೋಗಬೇಕು, ಅದರ ವಿಳಾಸ – rrbapply.gov.in. ಫಾರ್ಮ್ ಅನ್ನು ಇಲ್ಲಿಂದ ಭರ್ತಿ ಮಾಡಬಹುದು. ಈ ಪೋಸ್ಟ್ಗಳ ವಿವರಗಳು ಅಥವಾ ಇದರ…
ನವದೆಹಲಿ : ಎಸ್ ಸಿ, ಎಸ್ ಟಿ ಪಟ್ಟಿ ಬದಲಾವಣೆ ಆಗಿದ್ದರೂ ಮೀಸಲಾತಿಯಡಿ ನೇಮಕಗೊಂಡಿದ್ದ ಸಿಬ್ಬಂದಿಯನ್ನು ಮುಂದುವರೆಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಹಿಂದೆ ಎಸ್ ಸಿ, ಎಸ್ ಟಿಯಾಗಿ ಪರಿಗಣಿಸಲ್ಪಟ್ಟಿದ್ದ ಕೆಲ ಜಾತಿಗಳನ್ನು ನಂತರ ಆ ಪಟ್ಟಿಯಿಂದ ಹೊರಗಿಟ್ಟು ಕರ್ನಾಟಕ ಸರ್ಕಾರದ ಕ್ರಮದಿಂದ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ ಕೇಂದ್ರ ಸರ್ಕಾರಿ ಸ್ವಾಮದ್ಯದ ಬ್ಯಾಂಕ್, ಸಂಸ್ಥೆಗಳ ನೌಕರರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸುಪ್ರೀಂಕೋರ್ಟ್ ನಲ್ಲಿ ಈ ಕುರಿತು ವಿಚಾರಣೆ ನಡೆದಿದ್ದು, ನ್ಯಾಯಮೂರ್ತಿ ಹಿಮಾ ಕೊಹ್ಲಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠವು ಎಸ್ ಸಿ, ಎಸ್ ಟಿ ಮೀಸಲಾತಿಯಡಿ ನೇಮಕವಾದ ಈ ಸಿಬ್ಬಂದಿಗಲು ಅವರು ಕೆಲಸ ಮಾಡುತ್ತಿರುವ ಸರ್ಕಾರಿ ಸಂಸ್ಥೆಗಳು ನೀಡಿದ್ದ ನೋಟಿಸ್ ರದ್ದು ಮಾಡಿದೆ. ಈ ಮೂಲಕ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ ಸರ್ಕಾರಿ ನೌಕರರಿಗೆ ಸುಪ್ರೀಂಕೋರ್ಟ್ ರಕ್ಷಣೆ ನೀಡಿದೆ.
ಈಗ ಮಳೆಗಾಲ ನಡೆಯುತ್ತಿದೆ. ನೀವು ಪ್ರತಿ ಮೂಲೆಯಲ್ಲಿ ಸೊಳ್ಳೆಗಳ ಹಿಂಡುಗಳನ್ನು (ಸೊಳ್ಳೆ ಕಡಿತ) ಕಾಣಬಹುದು. ಸೊಳ್ಳೆಗಳು ಹೆಚ್ಚು ಅಥವಾ ಕಡಿಮೆ ಇರಲಿ. ಅವು ಕೆಲವು ಜನರನ್ನು ಹೆಚ್ಚು ಕುಡಿಯುತ್ತವೆ ಎಂದು ನೀವು ಎಂದಾದರೂ ಗಮನಿಸಿದ್ದೀರಾ? ಅವರು ಸೊಳ್ಳೆಗಳನ್ನು ಆಯಸ್ಕಾಂತದಂತೆ ಆಕರ್ಷಿಸುತ್ತಾರೆ. ಈ ಜನರು ಯಾರು? ಇದಕ್ಕೆ ಕಾರಣವೇನು ಎಂಬುದನ್ನು ತಿಳಿದುಕೊಳ್ಳೋಣ. O+ ರಕ್ತದ ಗುಂಪು ಹೊಂದಿರುವ ಜನರು ಸೊಳ್ಳೆಗಳು O+ ರಕ್ತದ ಗುಂಪು ಹೊಂದಿರುವ ಜನರಿಗೆ ಹೆಚ್ಚು ಆಕರ್ಷಿತವಾಗುತ್ತವೆ. ಏಕೆಂದರೆ ಈ ರಕ್ತದ ಗುಂಪಿನ ಜನರಲ್ಲಿ ಚಯಾಪಚಯ ದರವು ತುಂಬಾ ಹೆಚ್ಚಾಗಿರುತ್ತದೆ. ಇದಲ್ಲದೆ, ಈ ರಕ್ತವು ಸೊಳ್ಳೆಗಳ ಬೆಳವಣಿಗೆಗೆ ಸಹ ಅಗತ್ಯವಾಗಿದೆ. ಇಂಗಾಲದ ಡೈಆಕ್ಸೈಡ್ ವಾಸನೆ ಸೊಳ್ಳೆಗಳು ರಾತ್ರಿಯಲ್ಲಿ ಮಲಗಿರುವಾಗ ಹೆಚ್ಚು ಕಚ್ಚುತ್ತವೆ ಏಕೆಂದರೆ ಮನುಷ್ಯರು ಹೆಚ್ಚಿನ ಪ್ರಮಾಣದ ಇಂಗಾಲದ ಡೈಆಕ್ಸೈಡ್ ಅನ್ನು ಹೊರಸೂಸುತ್ತಾರೆ. ಕಾರ್ಬನ್ ಡೈಆಕ್ಸೈಡ್ ವಾಸನೆಯು ಸೊಳ್ಳೆಗಳನ್ನು ತ್ವರಿತವಾಗಿ ಆಕರ್ಷಿಸುತ್ತದೆ. ಇದಲ್ಲದೆ, ಸೊಳ್ಳೆಗಳು ಲ್ಯಾಕ್ಟಿಕ್ ಆಮ್ಲ, ಯೂರಿಕ್ ಆಸಿಡ್ ಮತ್ತು ಅಮೋನಿಯಾದಿಂದ ಕೂಡ ಆಕರ್ಷಿತವಾಗುತ್ತವೆ. ಗಾಢ ಬಣ್ಣ ಜನರು…
ಬೆಂಗಳೂರು : ಗ್ಯಾರಂಟಿ ಯೋಜನೆಗಳ ಕುರಿತು ಸಹಾಯಕ್ಕಾಗಿ ಬಿಬಿಎಂಪಿ ಸಹಾಯವಾಣಿ ಆರಂಭಿಸಿದ್ದು, ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿ ಗ್ಯಾರಂಟಿ ಯೋಜನೆಗಳ ಕುರಿತು ಸಮಸ್ಯೆಗಳಿದ್ದರೆ ಈ ಕೆಳಗಿನ ಸಂಖ್ಯೆಗೆ ಕರೆ ಮಾಡಬಹುದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು ಸಹಾಯವಾಣಿ ಆರಂಭಿಸಲಾಗಿದ್ದು, ಸಮಸ್ಯೆಗಳಿದ್ದರೆ 9480683972 ಸಂಖ್ಯೆಗೆ ಕರೆ ಮಾಡುವಂತೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೃಷ್ಣಪ್ಪ ತಿಳಿಸಿದ್ದಾರೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದಲ್ಲಿನ ಜನರಿಗೆ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಕೆಗೆ ಸಹಾಯವಾಣಿ ಸಂಖ್ಯೆ ಆರಂಭಿಸಲಾಗಿದ್ದು, 9480683972 ಸಂಖ್ಯೆಗೆ ಕರೆ ಮಾಡಿ ಸಮಸ್ಯೆ ದಾಖಲಿಸಬಹುದಾಗಿದೆ. ಸಂಬಂಧ ಪಟ್ಟ ಅಧಿಕಾರಿಗೆ ಈ ಬಗ್ಗೆ ಮಾಹಿತಿ ನೀಡಿ ಪರಿಹಾರ ಮಾಡುವ ಕೆಲಸವನ್ನು ಮಾಡಲಾಗುತ್ತದೆ.
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಇಂದು ಬೆಳ್ಳಂಬೆಳಗ್ಗೆ ಬಿಗಿ ಭದ್ರತೆ ನಡುವೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನಿಂದ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ನಟ ದರ್ಶನ್ ಅವರನ್ನು ತಡರಾತ್ರಿ ಬೋಲೇರೋ ವಾಹನದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ರನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ.
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಇಂದ ಬೆಳ್ಳಂಬೆಳಗ್ಗೆ ಬಿಗಿ ಭದ್ರತೆ ನಡುವೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನಿಂದ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ನಟ ದರ್ಶನ್ ಅವರನ್ನು ತಡರಾತ್ರಿ ಬೋಲೇರೋ ವಾಹನದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ರನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ.
ಬೆಂಗಳೂರು : ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ನಿವೃತ್ತಿ ವೇತನ, ಇತರೆ ಭತ್ಯೆಗಳನ್ನು ಪರಿಷ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ, ಮೇಲೆ (2)ರಲ್ಲಿ ಓದಲಾದ ದಿನಾಂಕ: 22.07.2024ರ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳು ಮತ್ತು ಪಿಂಚಣಿಯನ್ನು ಪರಿಷ್ಕರಿಸಿ ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಮುಂದುವರೆದು, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ರ ಅವಕಾಶಗಳಂತೆ ಪರಿಷ್ಕೃತ ವೇತನ ಶ್ರೇಣಿಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಲು ಮೇಲೆ (4)ರಲ್ಲಿ ಓದಲಾದ ದಿನಾಂಕ: 23.08.2024ರಲ್ಲಿ ವಿಸ್ತ್ರತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ. ರಾಜ್ಯ ಸರ್ಕಾರವು ರಚಿಸಿದ 7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಲಭ್ಯವಿರುವ ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯನ್ನು ಈ ಕೆಳಕಂಡಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ. 1. ಕನಿಷ್ಠ ನಿವೃತ್ತಿ ವೇತನ: ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು ಮತ್ತು ಕರ್ನಾಟಕ…
ಬೆಂಗಳೂರು: ವಿದ್ಯುತ್ ಮೂಲಸೌಕರ್ಯಗಳ ಅಗತ್ಯ ನಿರ್ವಹಣೆಯಿಂದಾಗಿ ಆಗಸ್ಟ್ 29 ರ ಇಂದಿನಿಂದ ಆಗಸ್ಟ್ 31 ರ ಶನಿವಾರದವರೆಗೆ ಬೆಂಗಳೂರಿನ ಹಲವು ಭಾಗಗಳಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಘೋಷಿಸಿವೆ. ನಿರ್ವಹಣಾ ಕಾರ್ಯವು ಸ್ವೀಕರಿಸುವ ಕೇಂದ್ರಗಳು ಮತ್ತು ವಿತರಣಾ ಟ್ರಾನ್ಸ್ಫಾರ್ಮರ್ಗಳ ಮೇಲೆ ಪರಿಣಾಮ ಬೀರುತ್ತದೆ, ಇದರ ಪರಿಣಾಮವಾಗಿ ವಿವಿಧ ಪ್ರದೇಶಗಳಲ್ಲಿ ದಿನವಿಡೀ ವಿದ್ಯುತ್ ಕಡಿತವಾಗುತ್ತದೆ. ಕೆಳಗೆ ಪಟ್ಟಿ ಮಾಡಲಾದ ಪ್ರದೇಶಗಳು ಗುರವಾರದಿಂದ ಶನಿವಾರದವರೆಗೆ ಪರಿಣಾಮ ಬೀರುತ್ತವೆ. ಆಗಸ್ಟ್ 29 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಎಲ್.ಜಿ. ಹಳ್ಳಿ, ಆರ್.ಎಮ್.ವಿ 2ನೇ ಹಂತ, ಸಂಜೀವಪ್ಪ ಕಾಲೋನಿ, ನ್ಯೂ ಬಿ.ಇ.ಎಲ್ ರಸ್ತೆ, ಎಂ.ಎಸ್. ಆರ್ ನಗರ, ಮೋಹನ್ ಕುಮಾರ ನಗರ, ಪಂಪಾ ನಗರ, ಬಿ.ಕೆ. ನಗರ,ಬಾಂಬೆ ಡೈಯಿಂಗ್ ರಸ್ತೆ, ಯಶವಂತಪುರ ಮೊದಲನೆ ಮುಖ್ಯ ರಸ್ತೆ, ಗೋಕುಲ, ಹೆಚ್.ಎಂ.ಟಿ. ಮುಖ್ಯ ರಸ್ತೆ, ಹೆಚ್.ಎಂ.ಟಿ. ಲೇ ಔಟ್, ಬೃಂದಾವನ ನಗರ, ಎಸ್.ಬಿ.ಎಮ್ ಕಾಲೋನಿ, ಎಂ.ಆರ್.ಜೆ ಕಾಲೋನಿ, ವಿ.ಆರ್.ಲೇ ಔಟ್, ಜೆ.ಪಿ ಪಾರ್ಕ್ ರಸ್ತೆಗಳಲ್ಲಿ…












