Subscribe to Updates
Get the latest creative news from FooBar about art, design and business.
Author: kannadanewsnow57
ಬಳ್ಳಾರಿ : ಬಳ್ಳಾರಿ ತಾಲ್ಲೂಕಿನ ಜಾಲಿಬೆಂಚಿ ಕ್ರಾಸ್ ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಜಿಸಲ್ಪಟ್ಟ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಶನಿವಾರ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದರು. ಘಟಕದಲ್ಲಿ ಉತ್ಪಾದನಾ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರು. ಉತ್ಪಾದನಾ ಘಟಕದ ಕಾರ್ಯನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಅಂಗನವಾಡಿಗಳಿಗೆ ಪೂರೈಕೆ ಮಾಡುವ ಆಹಾರ ಸಾಮಗ್ರಿಗಳಲ್ಲಿ, ಅದರಲ್ಲೂ ಉತ್ಪಾದನೆಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಸಂಬಂಧಪಟ್ಟವರಿಗೆ ಸಚಿವರು ಸೂಚಿಸಿದರು. ಇದೇ ವೇಳೆ, ಪುಷ್ಟಿ ನ್ಯೂಟ್ರಿಮಿಕ್ಸ್, ಗೋಧಿ ನುಚ್ಚು ಹಾಲಿನ ಪುಡಿ, ಅರಿಶಿಣ ಪುಡಿ ಇತ್ಯಾದಿ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರಲ್ಲದೇ, ಉತ್ಪಾದನಾ ಆಹಾರ ಸಮಗ್ರಗಳ ಬಗ್ಗೆ ಸ್ಥಳದಲ್ಲಿದ್ದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಯಿಂದ ಮಾಹಿತಿ ಪಡೆದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ…
ಬೆಂಗಳೂರು : ಕೆಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ನೆಮ್ಮದಿಯ ಸುದ್ದಿ ನೀಡಿದ್ದು, ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ. ಕೆಎಸ್ ಆರ್ ಟಿಸಿ ಸೇರಿದಂತೆ ಉಳಿದ ಮೂರು ನಿಗಮಗಳ ಪ್ರಯಾಣ ದರವನ್ನು 2020 ರಲ್ಲಿ ಹೆಚ್ಚಿಸಲಾಗಿದೆ. ಬಿಎಂಟಿಸಿ ಪ್ರಯಾಣ ದರವನ್ನು2014 ರ ಬಳಿಕ ಜಾಸ್ತಿ ಮಾಡಿಲ್ಲ. ಡೀಸೆಲ್ ಬೆಲೆ, ಸಿಬ್ಬಂದಿ ವೇತನ, ಸೇರಿದಂತೆ ನಿರ್ವಹಣಾ ವೆಚ್ಚ ಜಾಸ್ತಿಯಾಗಿದೆ. ಆದರೆ ಪ್ರಯಾಣ ದರ ಏರಿಕೆ ಸಂಬಂಧ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಸಾರಿಗೆ ನಿಗಮಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಶೀಘ್ರವೇ ಹಂತ ಹಂತವಾಗಿ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನವದೆಹಲಿ:ಸಂಸತ್ತಿನ ಬಜೆಟ್ ಅಧಿವೇಶನವು ಜುಲೈ 22 ರಿಂದ ಆಗಸ್ಟ್ 12 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಪ್ರಕಟಿಸಿದ್ದಾರೆ. ಈ ಅಧಿವೇಶನದಲ್ಲಿ 2024 ರ ಲೋಕಸಭಾ ಚುನಾವಣೆಯ ನಂತರ ಸರ್ಕಾರವು ತನ್ನ ಮೊದಲ ಪೂರ್ಣ ಬಜೆಟ್, ಆರ್ಥಿಕ ಸಮೀಕ್ಷೆ ಮತ್ತು ನಿರ್ಣಾಯಕ ಶಾಸಕಾಂಗ ವ್ಯವಹಾರಗಳನ್ನು ಮಂಡಿಸಲಿದೆ. “ಎಲ್ಲಾ ಸದಸ್ಯರು ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸುವ ಮೂಲಕ ಸದನದ ಘನತೆಯನ್ನು ಎತ್ತಿಹಿಡಿಯಬೇಕು” ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಈ ತಿಂಗಳ ಆರಂಭದಲ್ಲಿ ಪ್ರಸ್ತುತ ಕೆಳಮನೆಯ ಪ್ರಕ್ಷುಬ್ಧ ಉದ್ಘಾಟನಾ ಅಧಿವೇಶನದ ಸಂದರ್ಭದಲ್ಲಿ ಮಾತನಾಡುತ್ತಾ ಹೇಳಿದರು. ಕಳೆದ ಅಧಿವೇಶನದಲ್ಲಿ, ಪ್ರತಿಪಕ್ಷಗಳು ಉಭಯ ಸದನಗಳಲ್ಲಿ ಕೋಲಾಹಲವನ್ನು ಸೃಷ್ಟಿಸಿದವು, ಒಂದು ಸದನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಪ್ರಧಾನಿಯವರ ಉತ್ತರವನ್ನು ಅಡ್ಡಿಪಡಿಸಿದವು ಮತ್ತು ಪ್ರಧಾನಿಯ ಭಾಷಣದ ಸಮಯದಲ್ಲಿ ವಿರೋಧ ಪಕ್ಷದ ನಾಯಕನಿಗೆ ಮಧ್ಯಪ್ರವೇಶಿಸಲು ಅವಕಾಶ ನೀಡದಿದ್ದಾಗ ಮತ್ತೊಂದು ಸದನದಲ್ಲಿ ಹೊರನಡೆದವು. ಎಲ್ಒಪಿ ರಾಹುಲ್ ಗಾಂಧಿ ನೇತೃತ್ವದ 236 ಸಂಸದರ ದೊಡ್ಡ ವಿರೋಧ…
ಬಳ್ಳಾರಿ : ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದು, ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರವೇ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮೆಯಾಗಲಿದೆ. ಪ್ರಸ್ತಕ ತಿಂಗಳಿನ ಹಣವು ತದನಂತರ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದರು. ರಾಜ್ಯ ಸರ್ಕಾರವು ಸಮಾಜದ ಅಭಿವೃದ್ಧಿಗೆ ಬದ್ಧವಾಗಿದ್ದು, ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣವಾಗುತ್ತಿದೆ. ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಮಹಿಳೆಯು ಮನೆಯ ಯಜಮಾನಿಯಾಗಿದ್ದಾಳೆ. ಇದರ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಅವರು ನುಡಿದರು. ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಈ ಮೂಲಕ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲಾಗುತ್ತದೆ. ಇದರಿಂದ ಮಕ್ಕಳ ಸರ್ವತೋಮುಖ…
ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಗಮನಾರ್ಹ ಚುನಾವಣಾ ವಿಜಯಕ್ಕಾಗಿ ಯುನೈಟೆಡ್ ಕಿಂಗ್ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರನ್ನು ಅಭಿನಂದಿಸಿದರು. ಕೀರ್ ಸ್ಟಾರ್ಮರ್ಗೆ ಬರೆದ ಪತ್ರದಲ್ಲಿ, ಸಮಾನತೆಯೊಂದಿಗೆ ಆರ್ಥಿಕ ಬೆಳವಣಿಗೆ, ಬಲವಾದ ಸಾಮಾಜಿಕ ಸೇವೆಗಳ ಮೂಲಕ ಎಲ್ಲರಿಗೂ ಉತ್ತಮ ಅವಕಾಶಗಳು ಮತ್ತು ಸಮುದಾಯ ಸಬಲೀಕರಣಕ್ಕೆ ಲೇಬರ್ ಪಕ್ಷದ ಒತ್ತು ಯುಕೆ ಜನರನ್ನು ಆಕರ್ಷಿಸಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ನಿಮ್ಮ ಗಮನಾರ್ಹ ಚುನಾವಣಾ ವಿಜಯಕ್ಕಾಗಿ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಇದು ಲೇಬರ್ ಪಕ್ಷಕ್ಕೆ ಮತ್ತು ವೈಯಕ್ತಿಕವಾಗಿ ನಿಮಗೆ ಮಹತ್ವದ ಸಾಧನೆಯಾಗಿದೆ. ಸಮಾನತೆಯೊಂದಿಗೆ ಆರ್ಥಿಕ ಬೆಳವಣಿಗೆ, ಬಲವಾದ ಸಾಮಾಜಿಕ ಸೇವೆಗಳ ಮೂಲಕ ಎಲ್ಲರಿಗೂ ಉತ್ತಮ ಅವಕಾಶಗಳು ಮತ್ತು ಸಮುದಾಯ ಸಬಲೀಕರಣಕ್ಕೆ ನಿಮ್ಮ ಅಭಿಯಾನದ ಒತ್ತು ಯುಕೆ ಜನರನ್ನು ಸ್ಪಷ್ಟವಾಗಿ ಆಕರ್ಷಿಸಿದೆ, ಇದು ಉಜ್ವಲ ಭವಿಷ್ಯಕ್ಕಾಗಿ ಅವರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ” ಎಂದು ರಾಹುಲ್ ಗಾಂಧಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಅವರ ಅಭಿಯಾನದಲ್ಲಿ ಹೇಳಲಾದ ಅದೇ ಆದರ್ಶಗಳನ್ನು ತಾವೂ ನಂಬಿದ್ದೇನೆ…
BREAKING : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿ : ಶಿರಸಿಯಲ್ಲಿ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿನಿ ಸಾವು!
ಕಾರವಾರ : ರಾಜ್ಯದಲ್ಲಿ ಡೆಂಗ್ಯೂ ಮಹಮಾರಿಗೆ ಮತ್ತೊಂದು ಬಲಿಯಾಗಿದ್ದು, ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಕನ್ನಡ ಶಿರಸಿಯ ಕಸ್ತೂರಬಾ ನಗರದ ಸುಹಾನಾ ಮಹ್ಮದ್ ಶಫಿ (12) ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಡೆಂಗ್ಯೂ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಜ್ವರಕ್ಕೆ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಡೆಂಗ್ಯೂ ಜ್ವರದ ಅಬ್ಬರ ಹೆಚ್ಚಳವಾಗಿದ್ದು, ಇದುವರೆಗೆ 122 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏಳು ಸಾವಿರದ ಗಡಿ ದಾಟಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಹದಗೆಡುತ್ತಿದ್ದು, ಶುಕ್ರವಾರ 30 ಜಿಲ್ಲೆಗಳಲ್ಲಿ 24 ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ, ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಭೂಕುಸಿತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಬುಲೆಟಿನ್ ತಿಳಿಸಿದೆ. ಕಮ್ರೂಪ್ ಮೆಟ್ರೋಪಾಲಿಟನ್ ಜಿಲ್ಲೆಯ ದಿಸ್ಪುರ್ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಪ್ರವಾಹದಿಂದಾಗಿ ನಿರ್ದಿಷ್ಟವಾಗಿ ಯಾವುದೇ ಹೊಸ ಸಾವುನೋವುಗಳು ವರದಿಯಾಗಿಲ್ಲ, ಪ್ರವಾಹ ಸಂಬಂಧಿತ ಸಾವುಗಳ ಸಂಖ್ಯೆ 52 ರಷ್ಟಿದೆ. ಈ ವರ್ಷದ ಪ್ರವಾಹ, ಭೂಕುಸಿತ ಮತ್ತು ಬಿರುಗಾಳಿಯಿಂದ ಒಟ್ಟಾರೆ ಸಾವಿನ ಸಂಖ್ಯೆ 64 ಆಗಿದೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಎಸ್ಡಿಎಂಎ) ಬುಲೆಟಿನ್ ಪ್ರಕಾರ, 30 ಜಿಲ್ಲೆಗಳಲ್ಲಿ ಒಟ್ಟು 24,20,722 ಜನರು ಬಾಧಿತರಾಗಿದ್ದಾರೆ ಮತ್ತು 63,490.97 ಹೆಕ್ಟೇರ್ ಬೆಳೆ ಭೂಮಿ ಜಲಾವೃತವಾಗಿದೆ. 29 ಜಿಲ್ಲೆಗಳಲ್ಲಿ ಒಟ್ಟು 21,13,204 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 57,018 ಹೆಕ್ಟೇರ್ ಬೆಳೆ ಭೂಮಿ ಗುರುವಾರ ಜಲಾವೃತವಾಗಿದೆ. ಧುಬ್ರಿ (7,75,721),…
ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಇಲಾಖೆಯಲ್ಲಿ ಶೀಘ್ರವೇ 400ಕ್ಕೂ ಹೆಚ್ಚಿನ ಸಬ್ ಇನ್ಸ್ಪೆಕ್ಟರ್ ಗಳ (PSI) ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ರಾಜ್ಯದಲ್ಲಿ 400ಕ್ಕೂ ಹೆಚ್ಚಿನ ಪಿಎಸ್ ಐಗಳ ನೇಮಕಾತಿ ಸಂಬಂಧ ಗೃಹ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರವೇ ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ತಿಳಿಸಿದ್ದಾರೆ. ಇನ್ನು 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ. ಈ ನೇಮಕಾತಿ ವಿಚಾರವಾಗಿ ಹೈದರಾಬಾದ್ ಕರ್ನಾಟಕ ಮೀಸಲು ಸಂಬಂಧ ತಾಂತ್ರಿಕ ಅಡಚರಣೆ ಎದುರಾಗಿತ್ತು. ಈ ಬಗ್ಗೆ ಡಿಐಪಿಆರ್ನಿಂದ ಅಭಿಪ್ರಾಯ ಕೋರಲಾಗಿದೆ ಎಂದು ಹೇಳಿದ್ದಾರೆ.
ಚೆನ್ನೈ: ಆಡಳಿತಾರೂಢ ಡಿಎಂಕೆ ಸರ್ಕಾರದ ಆಕ್ಷೇಪದ ಹೊರತಾಗಿಯೂ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ತನ್ನ ತಮಿಳುನಾಡು ಮುಖ್ಯಸ್ಥ ಆರ್ಮ್ಸ್ಟ್ರಾಂಗ್ ಅವರ ಪಾರ್ಥಿವ ಶರೀರವನ್ನು ಪಕ್ಷದ ಕಚೇರಿಯಲ್ಲಿ ಸಮಾಧಿ ಮಾಡುವಂತೆ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. ನ್ಯಾಯಮೂರ್ತಿ ವಿ ಭವಾನಿ ಸುಬ್ಬರಾಯನ್ ಅವರು ತುರ್ತು ವಿಚಾರಣೆಗೆ ಅನುಮತಿ ನೀಡಿದ ನಂತರ ಭಾನುವಾರ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ. ಆರಂಭದಲ್ಲಿ, ಈ ವಿಷಯವನ್ನು ಜನರಲ್ ವಿವಿಧ ಖಾತೆಗಳನ್ನು ನಿರ್ವಹಿಸುವ ನ್ಯಾಯಮೂರ್ತಿ ಅನಿತಾ ಸುಮಂತ್ ಅವರಿಗೆ ವಹಿಸಲಾಯಿತು. ಆದಾಗ್ಯೂ, ಕೆಲವು ವಕೀಲರು ಸ್ಥಳೀಯ ಪ್ರಾಧಿಕಾರದ ವಿಷಯಗಳ ಮೇಲೆ ಅವರ ಅಧಿಕಾರ ವ್ಯಾಪ್ತಿಯನ್ನು ಉಲ್ಲೇಖಿಸಿ ಮನವಿಯನ್ನು ಆಲಿಸುವಂತೆ ನ್ಯಾಯಮೂರ್ತಿ ಭವಾನಿ ಅವರನ್ನು ವಿನಂತಿಸಿದರು. ಮಾಯಾವತಿ ಅವರ ಪಕ್ಷದ ನಾಯಕ ಆರ್ಮ್ಸ್ಟ್ರಾಂಗ್ ಅವರನ್ನು ಹಿಂದಿನ ದ್ವೇಷದಿಂದಾಗಿ ಶುಕ್ರವಾರ ಹತ್ಯೆ ಮಾಡಲಾಗಿದೆ. ಎಂಟು ಶಂಕಿತರನ್ನು ಶನಿವಾರ ಬಂಧಿಸಲಾಗಿದೆ. ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಬಿಎಸ್ಪಿ ಕಾರ್ಯಕರ್ತರು ಶನಿವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಕಳೆದ ವರ್ಷ ಚೆನ್ನೈನಲ್ಲಿ ಆರ್ಕಾಟ್ ಸುರೇಶ್ ಕೊಲೆ…
ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ತುರ್ತು ಸ್ಥಿತಿ ಘೋಷಿಸುವಂತೆ ಸಂಸದ ಡಾ.ಸಿ.ಎನ್. ಮಂಜುನಾಥ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ ಆಗಬೇಕು. ಹೀಗಾಗಿ ವೈದ್ಯಕೀಯ ತುರ್ತು ಸ್ಥಿತಿ ಘೋಷಿಸಬೇಕು. ಡೆಂಗ್ಯೂ ಜ್ವರ ನಿಯಂತ್ರಣ ಎಂದರೆ ಸೊಳ್ಳೆಗಳ ನಿಯಂತ್ರಣ, ಡೆಂಗ್ಯೂ ಕಾಯಿಲೆಗೆ ನಿಖರವಾದ ಚಿಕಿತ್ಸೆ ಇಲ್ಲ. ಸೊಳ್ಳೆಗಳ ನಿಯಂತ್ರಣ ಬಹಳ ಮುಖ್ಯವಾಗಿದೆ. ಡೆಂಗ್ಯೂ ಜ್ವರ ನಿಯಂತ್ರಣ ಆಗದೇ ಇದ್ದಲ್ಲಿ ಮಾರಕ ಕಾಯಿಲೆಗಳಾದ ಚಿಕೂನ್ ಗುನ್ಯಾ, ಝೀಕಾ ವೈರಸ್ ಬರಬಹುದು ಎಂದು ಹೇಳಿದ್ದಾರೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಶನಿವಾರ ಒಂದೇ ದಿನ 175 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,000 ಗಡಿ ದಾಟಿದೆ. ಒಂದೇ ತಿಂಗಳಲ್ಲಿ ಆರು ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈ ವರ್ಷ 93012 ಡೆಂಗೆ ಶಂಕಿತರನ್ನು ಗುರುತಿಸಿ,…














