Author: kannadanewsnow57

ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು. ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಐ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು. ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ…

Read More

ಬೆಂಗಳೂರು: 112 ಸಹಾಯವಾಣಿಗೆ ಅನಗತ್ಯ ಕರೆಗಳನ್ನು ಮಾಡಲು ಬಳಸುವ ಫೋನ್ ಸಂಖ್ಯೆಗಳನ್ನು 24 ಗಂಟೆಗಳ ಕಾಲ ನಿರ್ಬಂಧಿಸಲಾಗುವುದು ಎಂದು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಸೋಮವಾರ ತಿಳಿಸಿದೆ. ಸರಿಯಾದ ಕಾರಣವಿಲ್ಲದೆ ಸಹಾಯವಾಣಿ 112 ಗೆ ಕರೆ ಮಾಡಿ ಹೊಯ್ಸಳ ಸಿಬ್ಬಂದಿಯ ಸಮಯವನ್ನು ವ್ಯರ್ಥ ಮಾಡುವುದರಿಂದ ನಿಜವಾಗಿಯೂ ಅಗತ್ಯವಿರುವವರಿಗೆ ಸಕಾಲದಲ್ಲಿ ಸಹಾಯ ಸಿಗುವುದಿಲ್ಲ” ಎಂದು ಡಿಐಪಿಆರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. “ನಿಮ್ಮ ತಮಾಷೆಯ ಕರೆಗಳಿಂದಾಗಿ ಒಂದು ಜೀವವನ್ನು ಕಳೆದುಕೊಳ್ಳಬಹುದು; ಜಾಗರೂಕರಾಗಿರಿ” ಎಂದಿದೆ.

Read More

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಡಿಬಿಟಿ ಹಣವು ಪ್ರತಿ ತಿಂಗಳ ಅಂತ್ಯದ ಒಳಗೆ ಫಲಾನುಭವಿಗಳ ಖಾತೆಗೆ ಸಂದಾಯವಾಗುವಂತೆ ಕ್ರಮ ತೆಗೆದುಕೊಳ್ಳುಬೇಕು ಎಂದು ಸಚಿವ ಕೆ.ಹೆಚ್.‌ ಮುನಿಯಪ್ಪ ಸೂಚನೆ ನೀಡಿದ್ದಾರೆ. ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಇಲಾಖೆಯಲ್ಲಿ ಪಡಿತರದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ,ರಾಗಿ, ಜೋಳ, ಇವು ಗುಣಮಟ್ಟದಿಂರಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಉಗ್ರಾಣಗಳಲ್ಲಿ ಶುಚಿತ್ವವನ್ನು ಕಾಪಾಡಬೇಕು ಮತ್ತು ವಿಲೇವಾರಿ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಆಹಾರ ಧಾನ್ಯ ಗಳನ್ನು ಸರಬರಾಜು ಮಾಡಬೇಕು. ಉಳಿಕೆ ಇರುವ ಕಾರ್ಡ್ ಗಳಲ್ಲಿ ಎಪಿಲ್ ,ಬಿಪಿಎಲ್ ಕಾರ್ಡ್ ಗಳನ್ನು ಗುರುತಿಸಿ ವಿಲೇವಾರಿ ಮಾಡಬೇಕು. ಇಲಾಖೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Read More

ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಕಳೆದ ವಾರ ಪ್ಯೋಂಗ್ಯಾಂಗ್ಗೆ ಭೇಟಿ ನೀಡಿದಾಗ ಹೃತ್ಪೂರ್ವಕ ಆತಿಥ್ಯವನ್ನು ತೋರಿಸಿದ್ದಕ್ಕಾಗಿ ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್-ಉನ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ, ದ್ವಿಪಕ್ಷೀಯ ಸಂಬಂಧಗಳನ್ನು “ಅಭೂತಪೂರ್ವ ಉನ್ನತ ಮಟ್ಟಕ್ಕೆ” ಹೆಚ್ಚಿಸಲಾಗಿದೆ ಎಂದು ಉತ್ತರ ಕೊರಿಯಾದ ರಾಜ್ಯ ಮಾಧ್ಯಮ ಮಂಗಳವಾರ ವರದಿ ಮಾಡಿದೆ. ಕಿಮ್ ಅವರಿಗೆ ಕಳುಹಿಸಿದ ಸಂದೇಶದಲ್ಲಿ, ಪುಟಿನ್ ತಮ್ಮ ಉತ್ತರ ಪ್ರವಾಸವು ವಿವಿಧ ಕ್ಷೇತ್ರಗಳಲ್ಲಿ ಪ್ರಯೋಜನಕಾರಿ ಸಹಕಾರವನ್ನು ಸಾಧಿಸಲು ಉಭಯ ದೇಶಗಳಿಗೆ ಮಾರ್ಗಗಳನ್ನು ತೆರೆದಿದೆ ಎಂದು ಕೊರಿಯಾದ ಸೆಂಟ್ರಲ್ ನ್ಯೂಸ್ ಏಜೆನ್ಸಿ (ಕೆಸಿಎನ್ಎ) ಉಲ್ಲೇಖಿಸಿ ಯೋನ್ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ. “ಮಾಸ್ಕೋ ಮತ್ತು ಪ್ಯೋಂಗ್ಯಾಂಗ್ ನಡುವಿನ ಸಂಬಂಧಗಳನ್ನು ಅಭೂತಪೂರ್ವ ಉನ್ನತ ಮಟ್ಟದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಿದ್ದರಿಂದ ಡಿಪಿಆರ್ಕೆಗೆ ಅವರ ಇತ್ತೀಚಿನ ಅಧಿಕೃತ ಭೇಟಿ ವಿಶೇಷ ಮಹತ್ವದ್ದಾಗಿದೆ ಎಂದು ಅವರು ಹೇಳಿದರು” ಎಂದು ಉತ್ತರ ಕೊರಿಯಾದ ಅಧಿಕೃತ ಹೆಸರಾದ ಡೆಮಾಕ್ರಟಿಕ್ ಪೀಪಲ್ಸ್ ರಿಪಬ್ಲಿಕ್ ಆಫ್ ಕೊರಿಯಾದ ಸಂಕ್ಷಿಪ್ತ ರೂಪವನ್ನು ಬಳಸಿಕೊಂಡು ಕೆಸಿಎನ್ಎ…

Read More

ಬೆಂಗಳೂರು: ನಗರದಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜೂನ್‌ 25 ರ ಇಂದು, ಜೂನ್‌ 26 ರ ನಾಳೆ  ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯದ ಬಗ್ಗೆ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು,  ದಿನಾಂಕ  25.06.2024 ರ ಇಂದು ಮತ್ತು ಜೂನ್‌ 26 ರ ನಾಳೆ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ತಿಳಿಸಿದೆ. 25.06.2024 ರ ಮಂಗಳವಾರ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ “ಹೆಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮದೇವಸ್ಥಾನದರಸ್ತೆ, ರಾಮದೇವ್‌ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀರ‍್ಸ್ ಕಾಲೋನಿ, ಹೆಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್‌ರಸ್ತೆ, ಸರ್ವೀಸ್‌ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ…

Read More

ನ್ಯೂಯಾರ್ಕ್: ಸೋಮವಾರ (ಜೂನ್ 24) ನಡೆದ ಸೂಪರ್ 8 ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾವನ್ನು 24 ರನ್ಗಳಿಂದ ಸೋಲಿಸಿ 2024 ರ ಟಿ 20 ವಿಶ್ವಕಪ್ನ ಸೆಮಿಫೈನಲ್ಗೆ ಪ್ರವೇಶಿಸಿದೆ. 206 ರನ್ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಲಷ್ಟೇ ಶಕ್ತವಾಯಿತು. ಮೊದಲ ಓವರ್ನಲ್ಲೇ ಡೇವಿಡ್ ವಾರ್ನರ್ ಅವರನ್ನು ಕಳೆದುಕೊಂಡು ಆಸ್ಟ್ರೇಲಿಯಾ ತಂಡ ಗುರಿ ಬೆನ್ನಟ್ಟಿತು. ಮಿಚೆಲ್ ಮಾರ್ಷ್ (37) ಮತ್ತು ಟ್ರಾವಿಸ್ ಹೆಡ್ ಎರಡನೇ ವಿಕೆಟ್ ಗೆ 77 ರನ್ ಸೇರಿಸಿದರೆ, ಕುಲದೀಪ್ ಯಾದವ್ 9ನೇ ಓವರ್ ನಲ್ಲಿ ಈ ಜೊತೆಯಾಟವನ್ನು ಮುರಿದರು. ನಂತರ ಗ್ಲೆನ್ ಮ್ಯಾಕ್ಸ್ವೆಲ್ 12 ಎಸೆತಗಳಲ್ಲಿ 20 ರನ್ ಗಳಿಸಿ ಮೂರನೇ ವಿಕೆಟ್ಗೆ ಹೆಡ್ ಜೊತೆಗೂಡಿ 41 ರನ್ ಸೇರಿಸಿದರು. ಹೆಡ್ 43 ಎಸೆತಗಳಲ್ಲಿ 76 ರನ್ ಗಳಿಸಿದರೂ ಭಾರತೀಯ ಬೌಲರ್ಗಳು ನೆಟ್ ರನ್ ರೇಟ್ ಅನ್ನು ನಿಯಂತ್ರಣದಲ್ಲಿಟ್ಟಿದ್ದರಿಂದ ಆಸ್ಟ್ರೇಲಿಯಾ ನಿಯಮಿತವಾಗಿ ವಿಕೆಟ್ಗಳನ್ನು ಕಳೆದುಕೊಳ್ಳುತ್ತಲೇ ಇತ್ತು. ಭಾರತದ ಪರ ಅರ್ಷ್ದೀಪ್…

Read More

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜುಲೈ1 ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಘಟನೆ ಸಂಭವಿಸಿದ 30 ದಿನಗಳ ಒಳಗಾಗಿ ನೋಂದಣಿ ಮಾಡಿ ಪ್ರಮಾಣ ಪತ್ರವನ್ನು ವಿತರಿಸುವ ಅಧಿಕಾರವನ್ನು ಗ್ರಾಮಪಂಚಾಯಿತಿ ಕಾರ್ಯದರ್ಶಿಗಳಿಗೆ ನೀಡಲಾಗಿದೆ. ಈ ಕುರಿತಂತೆ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಹಾಗೂ ಅಪರ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ದೇಶಾದ್ಯಂತ ಜನನ, ಮರಣ ನೋಂದಣಿ ಅಧಿನಿಯಮ, 1969 ಜಾರಿಯಲ್ಲಿರುತ್ತದೆ. ಕರ್ನಾಟಕ ಜನನ, ಮರಣಗಳ ನೋಂದಣಿ ನಿಯಮಗಳು, 1999ರ ಮೂಲಕ ಪುನರ್ ರಚಿತ ನಾಗರಿಕ ನೋಂದಣಿ ಪದ್ಮತಿಯನ್ನು ದಿನಾಂಕ: 01-01-2000 ರಿಂದ ರಾಜ್ಯಾದ್ಯಂತ ಏಕೀಕರಿಸಿ ಜನನ, ಮರಣ ನೋಂದಣಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ ಎಂದಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಲೆಕ್ಕಿಗರನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿರುತ್ತದೆ. ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಘಟಿಸುವ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಜನನ, ಮರಣ ನೋಂದಣಿ ಅಧಿನಿಯಮ 1969ರ…

Read More

ನವದೆಹಲಿ:ಹೊಸ ಲೋಕಸಭಾ ಸ್ಪೀಕರ್ ನೇಮಕದ ಬಗ್ಗೆ ಊಹಾಪೋಹಗಳ ಮಧ್ಯೆ, ಓಂ ಬಿರ್ಲಾ ಎರಡನೇ ಅವಧಿಗೆ ಈ ಹುದ್ದೆಯಲ್ಲಿ ಮುಂದುವರಿಯುವ ಬಗ್ಗೆ ಬಿಜೆಪಿ ಮೂಲಗಳು ಸುಳಿವು ನೀಡಿವೆ. ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಮಾತನಾಡಲಾಗುತ್ತಿದ್ದರೂ, ಓಂ ಬಿರ್ಲಾ ಅವರ ಮುಂದುವರಿಕೆಯ ಬಗ್ಗೆ ಒಮ್ಮತ ಮೂಡುತ್ತಿದೆ ಎಂದು ವರದಿಯಾಗಿದೆ. ಬಿರ್ಲಾ ಅವರ ಬಗ್ಗೆ ಒಮ್ಮತದ ಅನುಪಸ್ಥಿತಿಯಲ್ಲಿ, ಬಿಹಾರದಿಂದ ಏಳು ಬಾರಿ ಸಂಸದರಾಗಿರುವ ರಾಧಾ ಮೋಹನ್ ಸಿಂಗ್ ಅಥವಾ ಆಂಧ್ರ ಬಿಜೆಪಿ ಮುಖ್ಯಸ್ಥ ಡಿ ಪುರಂದರೇಶ್ವರಿ ಅವರನ್ನು ಪರಿಗಣಿಸಬಹುದು ಎಂದು ಬಿಜೆಪಿ ಮೂಲಗಳು ಸೂಚಿಸಿವೆ. ಸ್ಪೀಕರ್ ಚುನಾವಣೆ ಜೂನ್ 26 ರಂದು ನಡೆಯಲಿದ್ದು, ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರರ ಮೂಲಕ ಬಿಜೆಪಿ ಸ್ಪೀಕರ್ ನೇಮಕದ ಬಗ್ಗೆ ಸಲಹೆಗಳನ್ನು ಕೋರಿದೆ ಎಂದು ಮೂಲಗಳು ತಿಳಿಸಿವೆ

Read More

ತುಮಕೂರು: ಜಿಲ್ಲೆಯಲ್ಲಿ ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಇಂದು ತುಮಕೂರು ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ಇಂದಿನ ತುಮಕೂರು ಬಂದ್ ಗೆ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದಾವೆ. ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಹೋರಾಟ ಸಮಿತಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೆ ರೈತಪರ, ಕನ್ನಡಪರ ಸಂಘಟನೆಗಳು, ವಕೀಲರ ಸಂಘ, ಹೋಟೆಲ್ ಅಸೋಷಿಯೇಷನ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದಾವೆ. ಇಂದು ಬೆಳಿಗ್ಗೆ 10 ಗಂಟೆಗೆ ಟೌನ್ ಹಾಲ್ ನಿಂದ ಪ್ರತಿಭಟನೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಕಾರರು ತೆರಳಲಿದ್ದಾರೆ. ತುಮಕೂರು ಜಿಲ್ಲೆಯ 10 ತಾಲ್ಲೂಕುಗಳಲ್ಲೂ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗೋ ಸಾಧ್ಯತೆ ಇದೆ. ಅದರಲ್ಲೂ ಹೇಮಾವತಿ ಲಿಂಕ್ ನಾಲಾ ವ್ಯಾಪ್ತಿಯ ಗುಬ್ಬಿ, ತುರುವೇಕೆರೆ ತಾಲೂಕು ಹಾಗೂ ತುಮಕೂರು ನಗರದಲ್ಲಿ ಇಂದಿನ ಬಂದ್ ಗೆ ಅತಿಹೆಚ್ಚು ಬೆಂಬಲ ವ್ಯಕ್ತವಾಗೋ ಸಾಧ್ಯತೆ ಇದೆ. ಇಂದು ತುಮಕೂರು ನಗರ ಸೇರಿದಂತೆ 10 ತಾಲ್ಲೂಕಿನಲ್ಲಿ ಹೇಮಾವತಿ ಲಿಂಕ್ ವಿರೋಧಿಸಿ ಬಂದ್…

Read More

ಬೆಂಗಳೂರು : ಅನುಕಂಪದ ಆಧಾರದ ಮೇಲೆ ಗ್ರೂಪ್‌ ಡಿ ಹುದ್ದೆಗಳಿಗೆ ನೇಮಕಾತಿ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಪನಿರ್ದೇಶಕರುಗಳ ಮುಖಾಂತರ ಅನುಕಂಪದ ಆಧಾರದ ಮೇಲೆ ಗ್ರೂಪ್ “ಡಿ” ಹುದ್ದೆಗಳಿಗೆ ನೇಮಕಾತಿ ನೀಡುವ ಕುರಿತು ಪ್ರಸ್ತಾವನೆಗಳು ಸ್ವೀಕೃತಿಯಾಗಿರುತ್ತವೆ. ನೇಮಕಾತಿ ಕೋರಿದ ಸಮಯದಲ್ಲಿ ಅಭ್ಯರ್ಥಿಗಳು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಲು ಹಾಗೂ ಕೌನ್ಸೆಲಿಂಗ್‌ಗಾಗಿ ಕೆಳಕಂಡ ನಿಮ್ಮ ಜಿಲ್ಲೆಯ ಅಭ್ಯರ್ಥಿಗಳನ್ನು ದಿನಾಂಕ: 26.06.2024 ರಂದು ಬೆಳಿಗ್ಗೆ 11.00 ಗಂಟೆಗೆ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು-560001. ಈ ಕಛೇರಿಗೆ ತಪ್ಪದೇ ಖುದ್ದು ಹಾಜರಾಗಲು ಅಭ್ಯರ್ಥಿಗಳಿಗೆ ಸೂಚನೆ ನೀಡಿ ಅಗತ್ಯ ಕ್ರಮ ವಹಿಸಲು ತಿಳಿಸಿದೆ.‌            

Read More