Subscribe to Updates
Get the latest creative news from FooBar about art, design and business.
Author: kannadanewsnow57
ನಾವೆಲ್ಲರೂ ರಾತ್ರಿಯಲ್ಲಿ ನಿದ್ರಿಸುತ್ತೇವೆ… ಆದರೆ ನಾವು ಮಲಗುವ ಭಂಗಿಯು ನಮ್ಮ ಅಭ್ಯಾಸಗಳು, ಆರೋಗ್ಯ ಮತ್ತು ವ್ಯಕ್ತಿತ್ವದ ಬಗ್ಗೆ ಬಹಳಷ್ಟು ಹೇಳುತ್ತದೆ. ಸಂಶೋಧನೆಯ ಪ್ರಕಾರ, ವಿಭಿನ್ನ ಮಲಗುವ ಭಂಗಿಗಳು (ಯಾವುದು ಅತ್ಯುತ್ತಮ ಮಲಗುವ ಭಂಗಿ?) ನಮ್ಮ ಹೃದಯ, ಮನಸ್ಸು ಮತ್ತು ಮನಸ್ಥಿತಿಯ ಮೇಲೆ ಪರಿಣಾಮ ಬೀರುತ್ತವೆ. ಬೆನ್ನಿನ ಮೇಲೆ ನಿದ್ರಿಸುವ ಪ್ರಯೋಜನಗಳು ಬೆನ್ನಿನ ಮೇಲೆ ನಿದ್ರಿಸುವ ಜನರನ್ನು ಹೆಚ್ಚಾಗಿ ನೇರ ಮತ್ತು ಆತ್ಮವಿಶ್ವಾಸದ ಭಂಗಿ ಎಂದು ಪರಿಗಣಿಸಲಾಗುತ್ತದೆ. ಈ ಭಂಗಿಯು ಬೆನ್ನುಮೂಳೆ ಮತ್ತು ಕುತ್ತಿಗೆಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ, ಆದರೆ ಗೊರಕೆ ಮತ್ತು ಸ್ಲೀಪ್ ಅಪ್ನಿಯಾ ಇರುವ ಜನರು ಈ ಭಂಗಿಯಲ್ಲಿ ಸಮಸ್ಯೆಗಳನ್ನು ಹೊಂದಿರಬಹುದು. ಪಕ್ಕದ ನಿದ್ರೆಯ ಪ್ರಯೋಜನಗಳು ಪಕ್ಕಕ್ಕೆ ನಿದ್ರಿಸುವ ಜನರು ಸಾಮಾನ್ಯವಾಗಿ ಕಾಳಜಿಯುಳ್ಳ ಮತ್ತು ಭಾವನಾತ್ಮಕವಾಗಿರುತ್ತಾರೆ. ಈ ಭಂಗಿಯು ಜೀರ್ಣಕ್ರಿಯೆ ಮತ್ತು ರಕ್ತ ಪರಿಚಲನೆಗೆ ಆರೋಗ್ಯಕರವೆಂದು ಪರಿಗಣಿಸಲಾಗುತ್ತದೆ. ಎಡಭಾಗದಲ್ಲಿ ನಿದ್ರಿಸುವುದು ವಿಶೇಷವಾಗಿ ಹೃದಯ ಮತ್ತು ಗರ್ಭಿಣಿಯರಿಗೆ ಉತ್ತಮವೆಂದು ಪರಿಗಣಿಸಲಾಗುತ್ತದೆ. ಹೊಟ್ಟೆಯ ಮೇಲೆ ನಿದ್ರಿಸುವ ಪರಿಣಾಮಗಳು ಹೊಟ್ಟೆಯ ಮೇಲೆ ನಿದ್ರಿಸುವ ಜನರನ್ನು…
ಪೋಷಕರೇ ನಿಮ್ಮ ಮಕ್ಕಳು ಗಂಟಗಟ್ಟಲೇ ಮೊಬೈಲ್ ನೋಡುತ್ತಿದ್ದರಾ? ಹಾಗಿದ್ರೆ ಈ 7 ಸಲಹೆಗಳನ್ನು ಅನುಸರಿಸಿದ್ರೆ ನಿಮ್ಮ ಮಕ್ಕಳ ಮೊಬೈಲ್ ಚಟವನ್ನು ಬಿಡಿಸಬಹುದು. ಮಕ್ಕಳಿಗಾಗಿ ಒಂದು ವೇಳಾಪಟ್ಟಿಯನ್ನು ಮಾಡಿ ಮಕ್ಕಳಿಗೆ ಮೊಬೈಲ್ ಬಳಸಲು ನಿಗದಿತ ಸಮಯವನ್ನು ನೀಡಿ. ಉದಾಹರಣೆಗೆ, ಅಧ್ಯಯನದ ನಂತರ ಅಥವಾ ದಿನಕ್ಕೆ 1 ಗಂಟೆ. ಇದು ಮಕ್ಕಳು ಮೊಬೈಲ್ ಬಳಕೆಯನ್ನು ಮಿತಿಯೊಳಗೆ ಮಾಡುವಂತೆ ಮಾಡುತ್ತದೆ. ಮಕ್ಕಳನ್ನು ಹೊರಾಂಗಣ ಆಟಗಳಿಗೆ ಅಭ್ಯಾಸ ಮಾಡಿ ಮೊಬೈಲ್ ಬದಲಿಗೆ, ಕ್ರಿಕೆಟ್, ಫುಟ್ಬಾಲ್ ಅಥವಾ ಸೈಕ್ಲಿಂಗ್ನಂತಹ ಹೊರಾಂಗಣ ಆಟಗಳನ್ನು ಆಡಲು ಮಕ್ಕಳನ್ನು ಪ್ರೋತ್ಸಾಹಿಸಿ. ಇದು ಅವರ ಗಮನವನ್ನು ಫೋನ್ನಿಂದ ಬೇರೆಡೆಗೆ ತಿರುಗಿಸುತ್ತದೆ ಮತ್ತು ದೈಹಿಕ ಸದೃಢತೆಯನ್ನು ಸುಧಾರಿಸುತ್ತದೆ. ಪ್ರತಿಫಲವಾಗಿ ಮೊಬೈಲ್ ಬಳಸಿ ಮಗು ಮನೆಕೆಲಸ ಅಥವಾ ಯಾವುದೇ ಕೆಲಸವನ್ನು ಚೆನ್ನಾಗಿ ಮಾಡಿದರೆ, ಅವನು ಮೊಬೈಲ್ ಅನ್ನು ಮಾತ್ರ ಬಳಸಲು ಬಿಡಿ. ಈ ರೀತಿಯಾಗಿ, ಮೊಬೈಲ್ ಅವರಿಗೆ ವ್ಯಸನವಲ್ಲ, ಪ್ರತಿಫಲವಾಗಿ ಪರಿಣಮಿಸುತ್ತದೆ. ಕುಟುಂಬದ ಸಮಯಕ್ಕೆ ಆದ್ಯತೆ ನೀಡಿ ಪ್ರತಿದಿನ ಸ್ವಲ್ಪ ಸಮಯ ಮಕ್ಕಳೊಂದಿಗೆ ಆಟವಾಡಿ, ಮಾತನಾಡಿ ಅಥವಾ…
ನವದೆಹಲಿ : ಭಾರತ, ಅಮೆರಿಕ ಸ್ವಾಭಾವಿಕ ಪಾಲುದಾರರು, ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಲು ತಾವು ಕೂಡ ಎದುರು ನೋಡುತ್ತಿರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತ-ಅಮೆರಿಕ ವ್ಯಾಪಾರ ಮಾತುಕತೆಗಳನ್ನು ಮುಂದುವರಿಸುವ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, “ಭಾರತ ಮತ್ತು ಅಮೆರಿಕ ಆಪ್ತ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಮ್ಮ ವ್ಯಾಪಾರ ಮಾತುಕತೆಗಳು ಭಾರತ-ಅಮೆರಿಕ ಪಾಲುದಾರಿಕೆಯ ಅಪರಿಮಿತ ಸಾಮರ್ಥ್ಯವನ್ನು ಅನ್ಲಾಕ್ ಮಾಡಲು ದಾರಿ ಮಾಡಿಕೊಡುತ್ತವೆ ಎಂದು ನನಗೆ ವಿಶ್ವಾಸವಿದೆ. ನಮ್ಮ ತಂಡಗಳು ಈ ಚರ್ಚೆಗಳನ್ನು ಆದಷ್ಟು ಬೇಗ ಮುಗಿಸಲು ಕೆಲಸ ಮಾಡುತ್ತಿವೆ. ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಎರಡೂ ಜನರಿಗೆ ಉಜ್ವಲ, ಹೆಚ್ಚು ಸಮೃದ್ಧ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಟ್ವೀಟ್ ಮಾಡಿದ್ದಾರೆ. https://twitter.com/ANI/status/1965598682738290910?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು: ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಸೆ.15 ರಿಂದ 3 ದಿನ 3 ದಿನ ಪೂರೈಕೆಯಲ್ಲಿ ನೀರು ವ್ಯತ್ಯಯ ಉಂಟಾಗಲಿದೆ. ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದ್ದಾರೆ. ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆಪ್ಟೆಂಬರ್ 15, 16 ಮತ್ತು 17 ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ. ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲ ವ್ಯತ್ಯಯ ಕಾವೇರಿ 5ನೇ ಹಂತ – ಸೆಪ್ಟೆಂಬರ್ 15 ರ ಬೆಳಗ್ಗೆ 1 ರಿಂದ ಸೆಪ್ಟೆಂಬರ್ 17 ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳು. ಕಾವೇರಿ ಹಂತ 1, 2, 3, 4 ರಲ್ಲಿ – ಸೆಪ್ಟೆಂಬರ್ 16 ರ ಬೆಳಗ್ಗೆ 6ರಿಂದ ಸೆಪ್ಟೆಂಬರ್ 17 ರ ಬೆಳಗ್ಗೆ 6ರವರೆಗೆ ಒಟ್ಟು 24 ಗಂಟೆಗಳು.…
ಬೆಂಗಳೂರು : ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ವಿಕಲಚೇತನರ ಕುಂದು ಕೊರತೆಗಳ ನಿವಾರಣಾಧಿಕಾರಿಯನ್ನು ನೇಮಕ ಮಾಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016ರ ಕಲಂ-23(1) ರಲ್ಲಿ “ಸರ್ಕಾರದ ಪ್ರತಿಯೊಂದು ಸಂಸ್ಥೆಯು, 19ನೇ ಪ್ರಕರಣದ ಉದ್ದೇಶಕ್ಕಾಗಿ ಒಬ್ಬರು ಕುಂದುಕೊರತೆಗಳ ನಿವಾರಣಾಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅಂಥ ಅಧಿಕಾರಿಯ ನೇಮಕದ ಬಗ್ಗೆ ಸಂದರ್ಭಾನುಸಾರ ಚೀಫ್ ಕಮಿಷನರ್ರಿಗೆ ಅಥವಾ ಸ್ಟೇಟ್ ಕಮಿಷನರ್ರಿಗೆ ತಿಳಿಸತಕ್ಕದ್ದು.” ಎಂದು ನಮೂದಿಸಲಾಗಿರುತ್ತದೆ. ಅದರಂತೆ ಸುತ್ತೋಲೆ ಸಂಖ್ಯೆ: ಮಮಇ 131 ಪಿಹೆಚ್ಪಿ 2019, ದಿನಾಂಕ: 10.10.2019, ಮತ್ತು ದಿನಾಂಕ:09.01.2023ರ ಸುತ್ತೋಲೆಗಳಲ್ಲಿ ಎಲ್ಲಾ ಇಲಾಖೆಗಳು, ಸಂಸ್ಥೆ, ನಿಗಮ, ಮಂಡಳಿ ಹಾಗೂ ಆಯೋಗಗಳು ಅಂಗವಿಕಲರ ಕುಂದುಕೊರತೆ ನಿವಾರಿಸಲು ಅಧಿಕಾರಿಯೊಬ್ಬರನ್ನು ನೇಮಿಸುವಂತೆಯೂ ಹಾಗೂ ಈ ರೀತಿ ನೇಮಕ ಮಾಡಿದ ಅಧಿಕಾರಿಗಳ ಹೆಸರು, ಪದನಾಮ, ವಿಳಾಸ ಹಾಗೂ ದೂರವಾಣಿ ಸಂಖ್ಯೆ ಇತ್ಯಾದಿ ವಿವರವನ್ನು ರಾಜ್ಯ ಆಯುಕ್ತರು, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಇವರಿಗೆ ತಿಳಿಸಲು ಕ್ರಮವಹಿಸುವಂತೆ…
ಫ್ರಾನ್ಸ್ : ಫ್ರಾನ್ಸ್ ರಕ್ಷಣಾ ಸಚಿವ ಸೆಬಾಸ್ಟಿಯನ್ ಲೆಕೋರ್ನು ಈಗ ದೇಶದ ಹೊಸ ಪ್ರಧಾನಿಯಾಗಲಿದ್ದಾರೆ. ಫ್ರಾಂಕೋಯಿಸ್ ಬೇರೂ ಅವರ ರಾಜೀನಾಮೆಯ ನಂತರ, ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮಂಗಳವಾರ ರಾತ್ರಿ ತಡವಾಗಿ ಲೆಕೋರ್ನು ಅವರನ್ನು ಪ್ರಧಾನಿಯಾಗಿ ನೇಮಿಸಿದರು. ಸುಮಾರು ಒಂದು ವರ್ಷದಲ್ಲಿ ಅವರು ದೇಶದ ನಾಲ್ಕನೇ ಪ್ರಧಾನಿ. 39 ವರ್ಷದ ಲೆಕೋರ್ನು ಫ್ರಾನ್ಸ್ ಇತಿಹಾಸದಲ್ಲಿ ಅತ್ಯಂತ ಕಿರಿಯ ರಕ್ಷಣಾ ಸಚಿವರಾಗಿದ್ದರು.ಅಧ್ಯಕ್ಷ ಮ್ಯಾಕ್ರನ್ ಅವರ ಹಿಂದಿನ ಪ್ರಧಾನಿ ಫ್ರಾಂಕೋಯಿಸ್ ಬೇರೂ ಸಂಸತ್ತಿನಲ್ಲಿ ವಿಶ್ವಾಸ ಮತವನ್ನು ಕಳೆದುಕೊಂಡಾಗ ಈ ನೇಮಕಾತಿಯನ್ನು ಮಾಡಿದರು. ಬೇರೂ ಸಾರ್ವಜನಿಕ ವೆಚ್ಚವನ್ನು ಕಡಿತಗೊಳಿಸಲು ಪ್ರಯತ್ನಿಸುತ್ತಿದ್ದರು, ಅದಕ್ಕೆ ಅವರು ಸಂಸತ್ತಿನಲ್ಲಿ ಬೆಂಬಲವನ್ನು ಪಡೆಯಲಿಲ್ಲ. ಈಗ ಲೆಕೋರ್ನು ಸಂಸತ್ತಿನಲ್ಲಿ ಬಜೆಟ್ ಅನ್ನು ಅಂಗೀಕರಿಸುವ ಸವಾಲನ್ನು ಎದುರಿಸಬೇಕಾಗುತ್ತದೆ. ಕಳೆದ ವರ್ಷ ಕನ್ಸರ್ವೇಟಿವ್ ನಾಯಕ ಮತ್ತು ಮಾಜಿ ಬ್ರೆಕ್ಸಿಟ್ ಸಮಾಲೋಚಕ ಮೈಕೆಲ್ ಬಾರ್ನಿಯರ್ ಅವರನ್ನು ಹುದ್ದೆಯಿಂದ ತೆಗೆದುಹಾಕಿದಾಗ ಬೈರೋ ಅವರನ್ನು ಪ್ರಧಾನಿಯನ್ನಾಗಿ ಮಾಡಲಾಯಿತು. ಆದರೆ ಬೇರೋ ಅವರ ವಿವಾದಾತ್ಮಕ 2026 ರ ಬಜೆಟ್ ಯೋಜನೆಯ ಮೇಲೆ ಅಭೂತಪೂರ್ವ…
ಚಿತ್ರದುರ್ಗ : ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮೆರವಣಿಗೆ ಬೃಹತ್ ಶೋಭಾಯಾತ್ರೆಯಲ್ಲಿ 9 ಡಿಜೆ ಗಳು ಭಾಗವಹಿಸಲಿವೆ ಎಂಬುದಾಗಿ ಸುಳ್ಳು ಸುದ್ದಿಯನ್ನು ಫೇಸ್ಬುೋಕ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದಕ್ಕಾಗಿ ಮಂಜುನಾಥ್ ಎಂಬಾತನ ವಿರುದ್ಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಸಂದರ್ಭದಲ್ಲಿ ಘರ್ಜಿಸಲು 9 DJ ಮುಂಬೈ, ಬೆಳಗಾವಿ, ಹುಬ್ಬಳ್ಳಿ ಹಾಗೂ ಇನ್ನೂ ಹೆಸರಾಂತ 9 ಡಿಜೆಗಳು ಭಾಗವಹಿಸಲಿವೆ’ ಎಂದು ಸ್ಟೇಟಸ್ ಹಾಕಿದ್ದನು. ಈಗಾಗಲೇ ಜಿಲ್ಲಾಧಿಕಾರಿಗಳು ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿ.ಜೆ. ಬಳಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಆದರೆ ಮೊಳಕಾಲ್ಮೂರು ತಾಲ್ಲೂಕಿನ ಕೊಂಡ್ಲಹಳ್ಳಿ ಗ್ರಾಮದ ಆರ್.ಮಂಜುನಾಥ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ಐಡಿ manju achar prince ನಲ್ಲಿ ‘ಇತಿಹಾಸ ಸೃಷ್ಠಿಸಲು ಸಿದ್ದವಾಗಿದೆ ಚಿತ್ರದುರ್ಗ ಬೃಹತ್ ಶೋಭಾಯಾತ್ರೆ, 13-09-2025 ಶನಿವಾರ ಪ್ರಪಥಮ ಬಾರಿಗೆ ಚಿತ್ರದುರ್ಗ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ…
ಬೆಂಗಳೂರು: ಬೆಂಗಳೂರಿನ ಜನತೆಗೆ ಸಿಹಿಸುದ್ದಿ ಸಿಕ್ಕಿದ್ದು, ಇಂದಿನಿಂದ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಆರ್.ವಿ. ರಸ್ತೆ- ಬೊಮ್ಮಸಂದ್ರ ಮಾರ್ಗದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ನಾಲ್ಕನೇ ರೈಲು ಸಂಚಾರ ಆರಂಭಿಸಲಿದೆ. ರೈಲುಗಳ ಸಂಚಾರದ ವೇಳಾಪಟ್ಟಿ ಬದಲಾವಣೆಯಾಗಿದ್ದು, ರೈಲುಗಳ ನಡುವಿನ ಅಂತರ 25 ನಿಮಿಷದಿಂದ 19 ನಿಮಿಷಕ್ಕೆ ಇಳಿಕೆಯಾಗಿದೆ. ಆಗಸ್ಟ್ 10 ರಿಂದ ಮೂರು ರೈಲುಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. ಮೂರು ವಾರದ ಹಿಂದೆ ಕೊಲ್ಕತ್ತಾದ ತೀತಾಗಢ್ ರೈಲು ಫ್ಯಾಕ್ಟರಿಯಿಂದ ಈ ರೈಲು ಸೆಟ್ ಗಳು ಬೆಂಗಳೂರಿಗೆ ಬಂದು ಹೆಬ್ಬಗೋಡಿ ಡಿಪೋದಲ್ಲಿ ಜೋಡಣೆ ಮಾಡಲಾಗಿದೆ. ಕಳೆದ ವಾರದಿಂದ ರಾತ್ರಿ ರೈಲುಗಳ ಪ್ರಾಯೋಗಿಕ ಸಂಚಾರ ನಡೆಸಿ ಇದೀಗ ಪ್ರಯಾಣಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಹಳದಿ ಮಾರ್ಗದಲ್ಲಿ ಸೋಮವಾರದಿಂದ ಶನಿವಾರದವರೆಗೆ ಮೊದಲ ವಾಣಿಜ್ಯ ಸೇವೆ ಬೆಳಗ್ಗೆ 6 ಗಂಟೆಗೆ ಆರಂಭವಾಗಲಿದೆ. ಭಾನುವಾರ ಮೊದಲ ರೈಲು ಸೇವೆ ಬೆಳಗ್ಗೆ 7 ಗಂಟೆಗೆ ಶುರುವಾಗಲಿದೆ. ರಾತ್ರಿ ಕೊನೆಯ ರೈಲು ಸಮಯ ಎಂದಿನಂತೆ ಇರಲಿದ್ದು, ಆರ್.ವಿ. ರಸ್ತೆಯಿಂದ ರಾತ್ರಿ 11:55 ಕ್ಕೆ, ಬೊಮ್ಮಸಂದ್ರದಿಂದ ರಾತ್ರಿ…
ಬೆಂಗಳೂರು: ನೂತನವಾಗಿ ರಚಿಸಿದ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 1,200 ಚದರ ಅಡಿ ವಿಸ್ತೀರ್ಣಗಳಲ್ಲಿ ನೆಲ ಮತ್ತು ಎರಡು ಅಂತಸ್ತು ಕಟ್ಟಡಕ್ಕೆ ಸ್ವಾಧೀನಾನುಭವ ಪತ್ರ(ಒಸಿ)ಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (1)ರಂತೆ ಮಾನ್ಯ ಮುಖ್ಯ ಮಂತ್ರಿಯವರು ಅಧ್ಯಕ್ಷತೆ ಹಾಗೂ ಮಾನ್ಯ ಉಪ ಮುಖ್ಯಮಂತ್ರಿಯವರು ಮತ್ತು ಸಂಬಂಧಿಸಿದ ಇತರೆ ಮಾನ್ಯ ಸಚಿವರುಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ, ಅನ್ವಯವಾಗುವ ಎಲ್ಲಾ ಕಾಯ್ದೆಗಳಲ್ಲಿಯೂ ಕೆಲವೊಂದು ವರ್ಗದ ನಿವೇಶನಗಳಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ, ಸಮಾನ ಅವಕಾಶಗಳಿರುವುದು ಸೂಕ್ತವೆಂದು ಅಭಿಪ್ರಾಯಿಸಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಸೂಚಿಸಲಾಗಿತ್ತು. ಮೇಲೆ ಓದಲಾದ ಕ್ರಮ ಸಂಖ್ಯೆ (2) ರನ್ವಯ, ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7), ಕರ್ನಾಟಕ ಮುನಿಸಿಪಲ್ ಕಾಯ್ದೆ, 1976 ಹಾಗೂ ಗ್ರಾಮೀಣಾಭಿವೃದ್ಧಿ…
ಬೆಂಗಳೂರು : ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು. ಸುಟ್ಟ ಗಾಯ, ವಿಷಪ್ರಾಶನ, ಹಲ್ಲೆಯಿಂದಾದ ಗಾಯ ಸೇರಿ ಇತರೆ ತುರ್ತು ಸಂದರ್ಭದಲ್ಲಿಯೂ ವೈದ್ಯಕೀಯ ಸಂಸ್ಥೆ ಅಥವಾ ವೈದ್ಯರು ಮುಂಗಡ ಹಣ ಪಾವತಿಗೆ ಬೇಡಿಕೆ ಇಡದೆ, ಸಂತ್ರಸ್ತರಿಗೆ ತುರ್ತು ಚಿಕಿತ್ಸೆ ನೀಡಬೇಕು. ಇದನ್ನು ಉಲ್ಲಂಘಿಸಿದಲ್ಲಿ ₹1 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಗಾಯಗೊಂಡ ವ್ಯಕ್ತಿಯ ಆರೋಗ್ಯ ಸ್ಥಿತಿ ಸುಧಾರಿಸಲು ಪ್ರತಿಯೊಂದು ಆಸ್ಪತ್ರೆಯೂ ತಕ್ಷಣದ ವೈದ್ಯಕೀಯ ತಪಾಸಣೆ ಸೇವೆ ಮತ್ತು ಪ್ರಾಥಮಿಕ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಅಗತ್ಯವೆಂದು ಪರಿಗಣಿಸಿ ಒದಗಿಸಬೇಕು. ಸೌಲಭ್ಯಗಳ ಕೊರತೆಯಿರುವ ಆಸ್ಪತ್ರೆಗಳು, ರೋಗಿಯನ್ನು ಇತರೆ ಆಸ್ಪತ್ರೆಗಳಿಗೆ ವರ್ಗಾವಣೆ ಮಾಡುವ ಮೊದಲು ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ವಿವರಗಳೊಂದಿಗೆ ಸ್ಥಳಾಂತರಿಸಬೇಕು ಎಂದು ಆದೇಶಿಸಿದೆ. ರಸ್ತೆ ಅಪಘಾತದ ಸಂತ್ರಸ್ತರು, ಅಪಘಾತದ ದಿನಾಂಕದಿಂದ ಏಳು ದಿನಗಳವರೆಗೆ ₹1.50 ಲಕ್ಷದವರೆಗೆ ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ರಾಜ್ಯ ರಸ್ತೆ…














