Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಸುಳ್ಳು ಸುದ್ದಿಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು. ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್,…
ಬೆಂಗಳೂರು : 2024-25 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ನಡೆಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯ ಪಠ್ಯಕ್ರಮದ 1ರಿಂದ 10ನೇ ತರಗತಿಶಾಲೆಗಳಿಗೆ2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಶೈಕ್ಷಣಿಕ ಮಾರ್ಗದರ್ಶಿಯನ್ನು ಉಲ್ಲೇಖಗಳನ್ವಯ ಹೊರಡಿಸಲಾಗಿದೆ. ಇದನ್ನು ಆಧರಿಸಿ ಶಾಲೆಗಳಲ್ಲಿ ಪಠ್ಯವಸ್ತು ಬೋಧನೆ ಹಾಗೂ ಮೌಲ್ಯಾಂಕನ ಕುರಿತು ವಹಿಸಬೇಕಾದ ಕ್ರಮಗಳನ್ನು ಈ ಕೆಳಕಂಡಂತೆ ಸೂಚಿಸಿ, ಅದರಂತೆ ಕ್ರಮವಹಿಸಲು ತಿಳಿಸಿದೆ. 1. ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ:29-05-2024 ರಿಂದ ಶೈಕ್ಷಣಿಕ ವರ್ಷವು ಪ್ರಾರಂಭವಾಗಿದೆ. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ’ ಉಪಕ್ರಮವನ್ನು ಮತ್ತು 2023-24 ನೇ ಸಾಲಿನಲ್ಲಿ ‘ಕಲಿಕಾ ಬಲವರ್ಧನೆ’ ಕಾರ್ಯಕ್ರಮದಡಿ ಕಲಿವಿನ ಫಲಾಧಾರಿತ…
ಚೆನ್ನೈ: ಬಿಜೆಪಿಯ ತಮಿಳುನಾಡು ರಾಜ್ಯ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ತಮ್ಮ ರಾಜಕೀಯ ಜೀವನದಿಂದ ಮೂರು ತಿಂಗಳ ವಿರಾಮಕ್ಕೆ ತೆರಳಲು ಸಜ್ಜಾಗಿದ್ದಾರೆ, ಏಕೆಂದರೆ ಅವರು ಯುನೈಟೆಡ್ ಕಿಂಗ್ಡಮ್ ವಿದೇಶಾಂಗ ಕಚೇರಿಯ ಚೆವೆನಿಂಗ್ ಗುರುಕುಲ ಫೆಲೋಶಿಪ್ ಫಾರ್ ಲೀಡರ್ಶಿಪ್ ಅಂಡ್ ಎಕ್ಸಲೆನ್ಸ್ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಫೆಲೋಶಿಪ್ ಕಾರ್ಯಕ್ರಮವು ಸೆಪ್ಟೆಂಬರ್ ಮಧ್ಯದಲ್ಲಿ ಪ್ರಾರಂಭವಾಗುತ್ತದೆ ಮತ್ತು ನವೆಂಬರ್ ನಲ್ಲಿ ಕೊನೆಗೊಳ್ಳುತ್ತದೆ. ಮೂಲಗಳ ಪ್ರಕಾರ, ಅಣ್ಣಾಮಲೈ 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು ಮತ್ತು ಮೇ ತಿಂಗಳಲ್ಲಿ ದೆಹಲಿಯಲ್ಲಿ ನಡೆದ ಸಂದರ್ಶನಕ್ಕೆ ಹಾಜರಾಗಿದ್ದರು. ಅಣ್ಣಾಮಲೈ ಅವರು ಯುಕೆಯಲ್ಲಿ ಕೋರ್ಸ್ ಪೂರ್ಣಗೊಳಿಸುವವರೆಗೆ ಅವರನ್ನು ರಾಜ್ಯ ಅಧ್ಯಕ್ಷರ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ಹೈಕಮಾಂಡ್ಗೆ ವಿನಂತಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಅಣ್ಣಾಮಲೈ ಅವರು ನಾಗರಿಕ ಸೇವೆಗೆ ರಾಜೀನಾಮೆ ನೀಡಿದ ನಂತರ ಪ್ರಾರಂಭಿಸಿದ ‘ವಿ ದಿ ಲೀಡರ್ಸ್’ ಫೌಂಡೇಶನ್ ಎಂಬ ಎನ್ಜಿಒದ ಸ್ಥಾಪಕರಾಗಿ ಚೆವೆನಿಂಗ್ ಗುರುಕುಲ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಕಾರ್ಯಕ್ರಮವನ್ನು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರದ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸಿಎಂ ಬದಲಾವಣೆ, ಡಿಸಿಎಂ ನೇಮಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಮಾಡುವುದು ಹೈಕಮಾಂಡ್, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರದ ಪ್ರಕಾರ ನಾವೆಲ್ಲ ನಡೆದುಕೊಳ್ಳುತ್ತೇವೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದೆ. ಈ ವಿಚಾರಗಳು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದರು. ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಪ್ರಣವಾನಂದ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ (ಎಲ್ಒಪಿ) ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ತಮ್ಮ ಭಾಷಣದಿಂದ ಸಾಕಷ್ಟು ಕೋಲಾಹಲವನ್ನು ಸೃಷ್ಟಿಸಿದ್ದಾರೆ. ಬಿಜೆಪಿಯನ್ನು ಗುರಿಯಾಗಿಸಿಕೊಂಡು, ಕಾಂಗ್ರೆಸ್ ನಾಯಕ ಬಿಜೆಪಿಗೆ ಸವಾಲು ಹಾಕಿದರು ಮತ್ತು ಗುಜರಾತ್ ನಲ್ಲಿ ಇಂಡಿಯಾ ಬಣವು ಖಂಡಿತವಾಗಿಯೂ ಬಿಜೆಪಿಯನ್ನು ಸೋಲಿಸುತ್ತದೆ ಎಂದು ಹೇಳಿದರು. ನನ್ನಿಂದ ಲಿಖಿತವಾಗಿ ತೆಗೆದುಕೊಳ್ಳಿ, ಈ ಬಾರಿ ಗುಜರಾತ್ನಲ್ಲಿ ಬಿಜೆಪಿ ಸೋಲಲಿದೆ” ಎಂದು ರಾಹುಲ್ ಗಾಂಧಿ ಸಂಸತ್ತಿನಲ್ಲಿ ಗುಡುಗಿದರು. “ನಾನು 20+ ಪ್ರಕರಣಗಳು, 2 ವರ್ಷಗಳ ಜೈಲು ಶಿಕ್ಷೆ, ನನ್ನ ಮನೆಯನ್ನು ಕಸಿದುಕೊಳ್ಳುವುದು, ಮಾಧ್ಯಮಗಳಲ್ಲಿ ನಿರಂತರ ದಾಳಿಗಳು ಮತ್ತು ಇಡಿಯಿಂದ 55 ಗಂಟೆಗಳ ವಿಚಾರಣೆಯನ್ನು ಎದುರಿಸಿದ್ದೇನೆ. ಈ ರೀತಿಯ ದಾಳಿ ನಡೆದಾಗ, ನಿಮ್ಮನ್ನು ರಕ್ಷಿಸುವ ಆಶ್ರಯ ಅಥವಾ ಆಲೋಚನೆಗಳು ನಿಮಗೆ ಬೇಕಾಗುತ್ತವೆ. ಶಿವನೇ ನಮ್ಮ ಆಶ್ರಯತಾಣ! ಯಾವುದೇ ದಾಳಿಯನ್ನು ನಿರ್ಭೀತಿಯಿಂದ ಎದುರಿಸಲು ಮತ್ತು ಭಾರತದ ಕಲ್ಪನೆಯನ್ನು ರಕ್ಷಿಸಲು ಅವರು ಇಡೀ ಪ್ರತಿಪಕ್ಷಗಳಿಗೆ ಶಕ್ತಿಯನ್ನು ನೀಡಿದರು” ಎಂದು ರಾಹುಲ್ ತಮ್ಮ ಲೋಕಸಭಾ ಭಾಷಣದಲ್ಲಿ ಆಡಳಿತಾರೂಢ ಬಿಜೆಪಿ…
ಬೆಂಗಳೂರು : ನೈಋತ್ಯ ರೈಲ್ವೆ ಇಲಾಖೆಯು ಕನ್ನಡಿಗ ನೌಕರರಿಗೆ ಬಿಗ್ ಶಾಕ್ ನೀಡಿದೆ. ನೈಋತ್ಯ ರೈಲ್ವೆ ನಡೆಸುತ್ತಿರುವ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೇವಲ ಹಿಂದಿ, ಇಂಗ್ಲಿಷ್ ನಲ್ಲಿ ಬರೆಯುವ ಅವಕಾಶ ನೀಡಿದ್ದು, ಕನ್ನಡಿಗರಿಗೆ ಉನ್ನತ ಹುದ್ದೆಗಳು ಕೈತಪ್ಪುವಂತಾಗಿದೆ. ನೈಋತ್ಯ ರೈಲ್ವೆ ಬೆಂಗಳೂರು ವಿಭಾಗಿಯ ಎಲೆಕ್ಟ್ರಿಕಲ್ ಸೆಕ್ಷನ್ ನಿಂದ ಬಡ್ತಿ ಮೀಸಲಿಗೆ ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಪರೀಕ್ಷೆಗೆ ಅಧಿಸೂಚನೆ ಪ್ರಕಟವಾಗಿದ್ದು, ಪರೀಕ್ಷೆಯು ಕೇವಲ ಹಿಂದಿ, ಇಂಗ್ಲಿಷ್ ನಲ್ಲಿ ಬರೆಯಲು ಮಾತ್ರ ಅವಕಾಶ ನೀಡಲಾಗಿದೆ. ಕನ್ನಡಿಗರಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶವಿಲ್ಲ. ಹೀಗಾಗಿ ಕನ್ನಡಿಗ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಲಾಗಿದೆ. ರೈಲ್ವೆ ಇಲಾಖೆಯೊಳಗೆ ಬಡ್ತಿ ಮೀಸಲು ಹುದ್ದೆಗಳ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತವೆ. ಈ ವೇಳೆ ಕಡಾಯವಾಗಿ ಕನ್ನಡದಲ್ಲಿ ಪರೀಕ್ಷೆ ಬರೆಯುವ ಆಯ್ಕೆ ನೀಡಬೇಕು ಎಂಬ ಒತ್ತಾಯ ಹೆಚ್ಚಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರವು ವಸತಿ ರಹಿತ ಬಡ ಜನತೆಗೆ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 38,000 ಮನೆ ಹಂಚಿಕೆಗೆ ಸಿದ್ಧತೆ ನಡೆಸಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಹೇಳಿದ್ದಾರೆ. ಸೋಮವಾರ ನಡೆದ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರಾಜ್ಯದೆಲ್ಲೆಡೆ ಬಡ ಕುಟುಂಬಗಳಿಗೆ ಎರಡನೇ ಹಂತದಲ್ಲಿ 38,000 ಮನೆಗಳನ್ನು ಜುಲೈ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಹಂಚಿಕೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 1,80,253 ಮನೆಗಳ ನಿರ್ಮಾಣ ಮಾಡಲಾಗುತ್ತಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ೩೬,೭೮೯ ಮನೆಗಳನ್ನು ಸಿಎಂ ಸಿದ್ದರಾಮಯ್ಯ ಹಂಚಿಕೆ ಮಾಡಿದ್ದರು, ಇದೀಗ ಎರಡನೇ ಹಂತದಲ್ಲಿ 38,000 ಮನೆ ಮುಖ್ಯಮಂತ್ರಿಯವರಿಂದಲೇ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರು : ಹಿಂದೆ ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಸಿಗರೇಟ್ ಸೇವನೆ ಬಿಟ್ಟು ದಶಕಗಳು ಕಳೆದರೂ ಹಿಂದೆ ಸೇದಿದ್ದರ ಪರಿಣಾಮದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಳ್ಳಬೇಕಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ‘ರಾಷ್ಟ್ರೀಯ ವೈದ್ಯರ ದಿನಾಚರಣೆ’ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿಗರೇಟ್ ಆರೋಗ್ಯಕ್ಕೆ ಮಾರಕ ಎಂದರೂ ಕೂಡ ಸಿಗರೇಟ್ ಸೇದುತ್ತಾರೆ. ಜನರು ಕೂಡ ಜಾಗೃತರಾಗಬೇಕು. ದುಶ್ಚಟಗಳಿಂದ ದೂರವಿರಬೇಕು. ಹಿಂದೆ ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಸಿಗರೇಟ್ ಸೇವನೆ ಬಿಟ್ಟು ದಶಕಗಳು ಕಳೆದರೂ ಹಿಂದೆ ಸೇದಿದ್ದರ ಪರಿಣಾಮದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಳ್ಳಬೇಕಾಯಿತು. ನಮ್ಮ ಆಹಾರ ಪದ್ಧತಿ ಹಾಗೂ ಜೀವನಶೈಲಿ ಬದಲಾಯಿಸಿಕೊಂಡರೆ ಅನೇಕ ರೋಗಗಳನ್ನು ತಡೆಗಟ್ಟಬಹುದಾಗಿದೆ ಎಂದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅತ್ಯಂತ ಅವಶ್ಯಕ. ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ. ತಮ್ಮ ವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ವೈದ್ಯರು…
ಬೆಂಗಳೂರು : ಡೆಂಗ್ಯೂ ಜ್ವರ ಹೆಚ್ಚಾಗುತ್ತಿದ್ದು, ಇದರ ಮೂಲೋಚ್ಚಾಟನೆ ಮಾಡಬೇಕು. ಈ ಬಗ್ಗೆ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ಸಾರ್ವಜನಿಕರೂ ಸಹ ಸರ್ಕಾರದೊಂದಿಗೆ ಕೈಜೋಡಿಸಬೇಕು. ಆಗ ಮಾತ್ರ ಇದರ ನಿವಾರಣೆ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ‘ರಾಷ್ಟ್ರೀಯ ವೈದ್ಯರ ದಿನಾಚರಣೆ’ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅತ್ಯಂತ ಅವಶ್ಯಕ. ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ. ತಮ್ಮ ವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ವೈದ್ಯರು ನಿರ್ಲಕ್ಷ್ಯ ತೋರಬಾರದು. ಸ್ವಲ್ಪ ನಿರ್ಲಕ್ಷ್ಯ ತೋರಿದರೂ ಅನಾಹುತವಾಗುತ್ತದೆ ಎಂಬ ಎಚ್ಚರವಿರಬೇಕು. ರೋಗಿಗಳ ಸೇವೆಯನ್ನು ದೇವರ ಕೆಲಸ ಎಂದು ಮಾಡಿದರೆ ಸಮಾಜದಲ್ಲಿ ರೋಗಗಳನ್ನು ತಡೆಗಟ್ಟುವ ಜೊತೆಗೆ ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು. ರೋಗಗಳನ್ನು ತಡೆಗಟ್ಟುವುದನ್ನು ಕೂಡ ಆರೋಗ್ಯ ಇಲಾಖೆ ಗಮನದಲ್ಲಿರಿಸಿಕೊಂಡು ಕಾರ್ಯನಿರ್ವಹಿಸಬೇಕು. ವೈದ್ಯರ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು…
ನವದೆಹಲಿ:ಬಾಹ್ಯಾಕಾಶಕ್ಕೆ ಪ್ರವಾಸೋದ್ಯಮ ವಿಮಾನಯಾನವನ್ನು ಪ್ರಾರಂಭಿಸಿದ ಮೂರು ವರ್ಷಗಳ ನಂತರ, ಜೆಫ್ ಬೆಜೋಸ್ ನೇತೃತ್ವದ ಬ್ಲೂ ಒರಿಜಿನ್ ಬಾಹ್ಯಾಕಾಶ ಪರಿಶೋಧನೆ ಮತ್ತು ಸಂಶೋಧನಾ ಸಂಸ್ಥೆ (ಎಸ್ಇಆರ್ಎ) ಯೊಂದಿಗೆ ಪಾಲುದಾರಿಕೆ ಹೊಂದಿದ್ದು, ಸಾಮಾನ್ಯ ಭಾರತೀಯ ನಾಗರಿಕರಿಗೆ ಬಾಹ್ಯಾಕಾಶಕ್ಕೆ ಹೋಗಲು ಅವಕಾಶವನ್ನು ನೀಡುತ್ತದೆ. ಆಯ್ಕೆಯಾದ ಗಗನಯಾತ್ರಿಗಳು ಬ್ಲೂ ಒರಿಜಿನ್ ನ ನ್ಯೂ ಶೆಪರ್ಡ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಸಂಕ್ಷಿಪ್ತ ಹಾರಾಟದಲ್ಲಿ ಪ್ರಯಾಣಿಸಲಿದ್ದಾರೆ. ಭೂಮಿ ಮತ್ತು ಬಾಹ್ಯಾಕಾಶದ ನಡುವಿನ ಅಂತರರಾಷ್ಟ್ರೀಯ ಗಡಿಯಾದ ಕರಮನ್ ರೇಖೆಯನ್ನು ದಾಟಿ ಬಾಹ್ಯಾಕಾಶ ನೌಕೆಯು ಭೂಮಿಯ ಮೇಲ್ಮೈಯಿಂದ 100 ಕಿಲೋಮೀಟರ್ ಗಿಂತ ಹೆಚ್ಚು ಎತ್ತರಕ್ಕೆ ಉಡಾವಣೆಯಾಗುತ್ತಿದ್ದಂತೆ ಅವು ತೂಕವಿಲ್ಲದ ಅನುಭವವನ್ನು ಅನುಭವಿಸುತ್ತವೆ. ನ್ಯೂ ಶೆಪರ್ಡ್ ಎಂದರೇನು? ಬ್ಲೂ ಒರಿಜಿನ್ ನ ನ್ಯೂ ಶೆಪರ್ಡ್ ಬಾಹ್ಯಾಕಾಶ ನೌಕೆಯು ಸಬ್ ಆರ್ಬಿಟಲ್ ಬಾಹ್ಯಾಕಾಶ ಪ್ರಯಾಣ ವಾಹನವಾಗಿದ್ದು, ವೈಜ್ಞಾನಿಕ ಸಂಶೋಧನೆ ಮತ್ತು ಬಾಹ್ಯಾಕಾಶ ಪ್ರವಾಸೋದ್ಯಮ ಎರಡಕ್ಕೂ ವಿಶಿಷ್ಟ ಅನುಭವವನ್ನು ನೀಡುತ್ತದೆ. ಬಾಹ್ಯಾಕಾಶಕ್ಕೆ ಹೋದ ಮೊದಲ ಅಮೆರಿಕನ್ ಅಲನ್ ಶೆಪರ್ಡ್ ಅವರ ಹೆಸರನ್ನು ಹೊಂದಿರುವ ನ್ಯೂ ಶೆಪರ್ಡ್ ಮಾನವ…









