Author: kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಮರ್ಡರ್‌ ಆಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಚಿಕ್ಕಮ್ಮನನ್ನು ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ದೊಮ್ಮಸಂದ್ರ ನಿವಾಸಿ ಚಂದ್ರಮ್ಮ (45) ಹತ್ಯೆಯಾದ ಮಹಿಳೆಯಾಗಿದ್ದು, ಚಂದ್ರಮ್ಮಳನ್ನು ವೆಂಕಟೇಶ್‌ ಎಂಬಾತ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ದೇವಸ್ಥಾನದಿಂದ ಮನೆಗೆ ವಾಪಸ್‌ ಬರುವಾಗಿ ನಡುರಸೆಯಲ್ಲಿ ಚಿಕ್ಕಮ್ಮಳ ಜತೆಗೆ ಜಗಳ ತೆಗೆದ ವೆಂಕಟೇಶ್‌ ಬಳಿಕ ತಲೆಗೆ ದೊಣ್ಣೆಯಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚಂದ್ರಮ್ಮ ಸಾವನ್ನಪ್ಪಿದಾಳೆ

Read More

ಬೆಂಗಳೂರು : ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಹೈಕೋರ್ಟ್‌ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.  ಇಂದು ವಿಚಾರಣೆ ನಡೆಸಿದ ಹೈಕೋರ್ಟ್‌ ಭವಾನಿ ರೇವಣ್ಣ ೮೫ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಎಂದು ಭವಾನಿ ರೇವಣ್ಣೆಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ; ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಮೇಲಿನ ಕಾಯ್ದಿರಿಸಿದ ಆದೇಶವನ್ನು ಹೈಕೋರ್ಟ್ ಇಂದು ಪ್ರಕಟಿಸಿದೆ. ಏನಿದು ಪ್ರಕರಣ?  ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Read More

ಮುಂಬೈ: ಜಾಗತಿಕ ಮಾರುಕಟ್ಟೆಗಳಲ್ಲಿನ ದೃಢ ಪ್ರವೃತ್ತಿಗಳು, ಐಟಿ ಷೇರುಗಳ ಖರೀದಿ ಮತ್ತು ಹೊಸ ವಿದೇಶಿ ನಿಧಿಯ ಒಳಹರಿವು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಬೆಂಚ್ ಮಾರ್ಕ್ ಇಕ್ವಿಟಿ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಹೊಸ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. 30 ಷೇರುಗಳ ಬಿಎಸ್ಇ ಸೆನ್ಸೆಕ್ಸ್ 334.03 ಪಾಯಿಂಟ್ಸ್ ಏರಿಕೆ ಕಂಡು 77,326.80 ಕ್ಕೆ ತಲುಪಿದೆ. ಎನ್ಎಸ್ಇ ನಿಫ್ಟಿ 108.25 ಪಾಯಿಂಟ್ಸ್ ಏರಿಕೆಗೊಂಡು ಸಾರ್ವಕಾಲಿಕ ಗರಿಷ್ಠ 23,573.85 ಕ್ಕೆ ತಲುಪಿದೆ. ಸೆನ್ಸೆಕ್ಸ್ ನ 30 ಕಂಪನಿಗಳಲ್ಲಿ ವಿಪ್ರೋ, ಟೈಟಾನ್, ಮಹೀಂದ್ರಾ & ಮಹೀಂದ್ರಾ, ಟೆಕ್ ಮಹೀಂದ್ರಾ, ಇನ್ಫೋಸಿಸ್, ಭಾರ್ತಿ ಏರ್ ಟೆಲ್ ಮತ್ತು ಹಿಂದೂಸ್ತಾನ್ ಯೂನಿಲಿವರ್ ಅತಿ ಹೆಚ್ಚು ಲಾಭ ಗಳಿಸಿದ ಷೇರುಗಳಾಗಿವೆ. ಮಾರುತಿ, ಕೊಟಕ್ ಮಹೀಂದ್ರಾ ಬ್ಯಾಂಕ್, ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ನಷ್ಟ ಅನುಭವಿಸಿದವು.

Read More

ಪುಣೆ : ಪುಣೆಯಲ್ಲಿ ಪೋರ್ಷೆ ಸ್ಪೋರ್ಟ್ಸ್ ಕಾರು ದುರಂತದ ಬಳಿಕ ಮತ್ತೊಂದು ಘಟನೆ ಸಂಬಂಧಿಸಿದ್ದು, ಅಪ್ಪನ ಕಾರುನ್ನು ತೆಗೆದುಕೊಂಡ ಬಾಲಕನೊಬ್ಬ ಯದ್ವಾತದ್ವಾ ಕಾರು ಓಡಿಸಿ ಮಹಿಳೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬಾಲಕನೊಬ್ಬ ತನ್ನ ತಂದೆಯ ಕಾರನ್ನು ತೆಗೆದುಕೊಂಡು ರಸ್ತೆಗಿಳಿದಿದ್ದಾನೆ. ಆದರೆ ಡ್ರೈವಿಂಗ್‌ ಬಾರದ ಹಿನ್ನೆಲೆಯಲ್ಲಿ ಯದ್ವಾತದ್ವಾ ಕಾರು ಓಡಿಸಿ ಬಳಿಕ ರಸ್ತೆಯಲ್ಲೇ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. https://twitter.com/punekarnews/status/1802607274130645099?ref_src=twsrc%5Etfw%7Ctwcamp%5Etweetembed%7Ctwterm%5E1802607274130645099%7Ctwgr%5Ead50fd46fa7469b93de093776c2adf5d03b9717d%7Ctwcon%5Es1_c10&ref_url=https%3A%2F%2Fapi-news.dailyhunt.in%2F ಪುಣೆಯ ಆಳಂಡಿಯಲ್ಲಿ ನಡೆದ ಈ ಭಯಾನಕ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಈ ಘಟನೆಯಲ್ಲಿ, 17 ವರ್ಷದ ಇನ್ನೊಬ್ಬ ಬಾಲಕ ಕಾರು ಚಲಾಯಿಸಿ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ.

Read More

ಬೆಂಗಳೂರು : ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಕೆಎಸ್‌ ಆರ್‌ ಟಿಸಿ (KSRTC) ಸಿಹಿಸುದ್ದಿ ನೀಡಿದ್ದು, ಬಸ್‌ ಗಳಲ್ಲಿನ ರಶ್‌ ತಪ್ಪಿಸಲು 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧಾರ ಮಾಡಿದೆ. ಕೆಎಸ್‌ ಆರ್‌ ಟಿಸಿ ಶಾಲೆ-ಕಾಲೇಜುಗಳು ಹೆಚ್ಚಿರುವ ಮಾರ್ಗಗಳನ್ನು ಅಂತಹ ಭಾಗಗಳಿಗೆ ಹೆಚ್ಚುವರಿ ಅಥವಾ ಹೊಸದಾಗಿ ಬಸ್ ಸೇವೆ ಆರಂಭಿಸಲು ಸಿದ್ದತೆ ನಡೆಸಿದೆ. ಕೆಎಸ್ಆರ್​​ಟಿಸಿಗೆ ಸೇರ್ಪಡೆಯಾಗಿರುವ 814 ಬಸ್‌ಗಳ ಪೈಕಿ 500 ಬಸ್​ಗಳನ್ನು ನಿಯೋಜಿಸಲು ನಿರ್ಧಾರ ಮಾಡಲಾಗಿದೆ. ಜನಸಾಮಾನ್ಯರು ಬಳಸುವ ಅಶ್ವಮೇಧ ಬಸ್‌ಗಳಿಗೆ ಉತ್ತಮ ಸ್ಪಂದನೆ ದೊರಕಿದೆ. ಈಗಾಗಲೇ 500ಕ್ಕೂ ಅಧಿಕ ಅಶ್ವಮೇಧ ಬಸ್‌ಗಳಿವೆ. ಎಲ್ಲ ಕಡೆಯಿಂದ ಬೇಡಿಕೆ ಬರುತ್ತಿರುವುದರಿಂದ ಇನ್ನಷ್ಟು ಬಸ್‌ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Read More

ಜರ್ಮನಿ : ಜರ್ಮನಿಯ ಅಧಿಕಾರಿಗಳು ಸೋಮವಾರ (ಜೂನ್ 17) ಹಲವಾರು ಕಂಟೇನರ್ ಹಡಗುಗಳಿಂದ 2.6 ಬಿಲಿಯನ್ ಯುರೋ (2.78 ಬಿಲಿಯನ್ ಡಾಲರ್) ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ದೇಶದಲ್ಲಿ ಅತಿದೊಡ್ಡ ಕೊಕೇನ್ ಪತ್ತೆಯಾದ ಪ್ರಕರಣದಲ್ಲಿ ಏಳು ಜನರನ್ನು ಬಂಧಿಸಿದ್ದಾರೆ ಎಂದು ಘೋಷಿಸಿದರು. ಕೊಲಂಬಿಯಾ ಅಧಿಕಾರಿಗಳು ನೀಡಿದ ಸುಳಿವಿನ ಮೇರೆಗೆ ಕಳೆದ ವರ್ಷ 35.5 ಮೆಟ್ರಿಕ್ ಟನ್ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡ್ಯೂಸೆಲ್ಡಾರ್ಫ್ನ ಪ್ರಾಸಿಕ್ಯೂಟರ್ಗಳು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಉತ್ತರ ನಗರ ಹ್ಯಾಂಬರ್ಗ್ ಬಂದರಿನಲ್ಲಿ 25 ಟನ್, ಡಚ್ ಬಂದರು ರೋಟರ್ಡ್ಯಾಮ್ನಲ್ಲಿ 8 ಟನ್ ಮತ್ತು ಕೊಲಂಬಿಯಾದಲ್ಲಿ ಸುಮಾರು 3 ಟನ್ ಕೊಕೇನ್ ಪತ್ತೆಯಾಗಿದೆ ಎಂದು ಪ್ರಾಸಿಕ್ಯೂಟರ್ಗಳು ತಿಳಿಸಿದ್ದಾರೆ. ಮಾದಕವಸ್ತು ವಶಪಡಿಸಿಕೊಳ್ಳುವಿಕೆಯನ್ನು ಈ ಹಿಂದೆ ಘೋಷಿಸಲಾಗಿಲ್ಲ. ಕೊಕೇನ್ ಹೇಗೆ ಸಿಕ್ಕಿತು? ಕೊಕೇನ್ ಅನ್ನು ತರಕಾರಿಗಳು ಮತ್ತು ಹಣ್ಣುಗಳ ನಡುವೆ ಅಡಗಿಸಿಡಲಾಗಿತ್ತು ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ತಿಳಿಸಿದೆ. 30 ರಿಂದ 54 ವರ್ಷದೊಳಗಿನ ಶಂಕಿತರನ್ನು…

Read More

ಉಡುಪಿ : ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ ಪ್ರಕರಣ ಬೆಳಕಿಗೆ ಬಂದಿದ್ದು, ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್‌ ಬಳಿ ಎರಡು ಗುಂಡುಪುಗಳ ನಡುವೆ  ಮಾರಾಮಾರಿ ನಡೆದಿದೆ. ಪುತ್ತೂರು ಸಲೂನ್‌ ನೌಕರ ಚರಣ್‌, ಶಬರಿ ಎಂಬಾತನಿಗೆ ಬೈದ ಹಿನ್ನೆಲೆಯಲ್ಲಿ ಇದೇ ವಿಚಾರವಾಗಿ ಪ್ರವೀನ್‌ ಹಾಗೂ ಗ್ಯಾಂಗ್‌ ಚರಣ್‌ ನನ್ನು ಮಾತುಕತೆಗೆಂದು ಪುತ್ತೂರಿನ ಬಿರಿಯಾನಿ ಪಾಯಿಂಟ್‌ ಬಳಿ ಕರೆದಿದೆ. ಈ ವೇಳೆ ಚರಣ್‌ ತನ್ನ ಮೂವರು ಸ್ನೇಹಿತರೊಂದಿಗೆ ಬಂದಿದ್ದ. ಇದೇ ವೇಳೆ ಪ್ರವೀಣ್‌ ಹಾಗೂ ಗ್ಯಾಂಗ್‌ ಚರಣ್‌ & ಸ್ನೇಹಿತರ ಮೇಲೆ ತಲವಾರಿನಿಂದ ದಾಳಿ ನಡೆಸಿದೆ. ಘಟನೆ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಶರು ಬಲೆ ಬೀಸಿದ್ದಾರೆ.

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಬೆಂಗಳೂರು : ಪಿಎಸ್‌ ಐ ನೇಮಕಾತಿ ವಿಚಾರ ಅಂತಿಮ ಹಂತದಲ್ಲಿದ್ದು, ಈ ವಾರ ಅಥವಾ ಮುಂದಿನ ವಾರದಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ತಾಂತ್ರಿಕ ಪ್ರಶ್ನೆಗಳನ್ನು ತೆಗೆಯಲಾಗಿದೆ. ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುತ್ತೇವೆ. ಈ ಸಂಬಂಧ ನಾನು ಎರಡು-ಮೂರು ಸಭೆ ನಡೆಸಿದ್ದೇನೆ. ಈ ವಾರ ಅಥವಾ ಮುಂದಿನ ವಾರ ಅಂತಿಮ ತೀರ್ಮಾಣ ಕೈಗೊಳ್ಳಾಗುವುದು ಎಂದು ಹೇಳಿದ್ದಾರೆ. ಇನ್ನು ದರ್ಶನ್‌ & ಗ್ಯಾಂಗ್‌ ನಿಂದ ಹತ್ಯೆಯಾದ ಚಿತ್ರುದರ್ಗದ ರೇಣುಕಾಸ್ವಾಮಿ ಮನೆಗೆ ಇಂದು ಸಚಿವ ಡಾ.ಜಿ.ಪರಮೇಶ್ವರ್‌ ಅವರು ಭೇಟಿ ನೀಡಲಿದ್ದು, ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.

Read More

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಮರು ಮತ್ತು ಯಾದವರು ನನಗೆ ಮತ ಚಲಾಯಿಸಲಿಲ್ಲ ಎಂದು ಆರೋಪಿಸಿದ ಬಿಹಾರದ ಸೀತಾಮರ್ಹಿಯಿಂದ ಹೊಸದಾಗಿ ಆಯ್ಕೆಯಾದ ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಸೋಮವಾರ “ಅವರಿಗಾಗಿ ಯಾವುದೇ ಕೆಲಸ ಮಾಡುವುದಿಲ್ಲ” ಎಂದು ಹೇಳಿದರು. ಇತ್ತೀಚೆಗೆ ಬಿಹಾರ ವಿಧಾನ ಪರಿಷತ್ತಿನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಠಾಕೂರ್ ಅವರ ಹೇಳಿಕೆಗಳು ಪ್ರತಿಸ್ಪರ್ಧಿ ಆರ್ಜೆಡಿಯಿಂದ ಮಾತ್ರವಲ್ಲದೆ ತಮ್ಮದೇ ಪಕ್ಷದ ಬಂಕಾ ಸಂಸದರಿಂದ ತೀವ್ರ ಟೀಕೆಗೆ ಗುರಿಯಾದವು. ಸೀತಾಮರ್ಹಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಠಾಕೂರ್, ಸೀತಾಮರ್ಹಿ ಸಂಸದೀಯ ಕ್ಷೇತ್ರದಲ್ಲಿ ಆರ್ಜೆಡಿಯ ಅರ್ಜುನ್ ರಾಯ್ ಅವರನ್ನು ಸೋಲಿಸಿದ ಠಾಕೂರ್, ಚುನಾವಣೆಯಲ್ಲಿ ಯಾದವರು ಮತ್ತು ಮುಸ್ಲಿಮರು ನನಗೆ ಮತ ಚಲಾಯಿಸಲಿಲ್ಲ ಎಂದು ಹೇಳಿದರು. “ನನ್ನ ಬಳಿಗೆ ಬರುವ ಯಾದವರು ಮತ್ತು ಮುಸ್ಲಿಮರನ್ನು ಸ್ವಾಗತಿಸುತ್ತೇವೆ. ಅವರು ಚಹಾ ಮತ್ತು ಸಿಹಿತಿಂಡಿಗಳನ್ನು ಸೇವಿಸಬಹುದು. ಆದರೆ ನಾನು ಅವರಿಗಾಗಿ ಯಾವುದೇ ಕೆಲಸ ಮಾಡುವುದಿಲ್ಲ” ಎಂದು ಅವರು ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಠಾಕೂರ್, “ನಾನು ಹೇಳಿದ್ದಕ್ಕೆ ಬದ್ಧನಾಗಿದ್ದೇನೆ. ನಾನು ಇದನ್ನು…

Read More