Author: kannadanewsnow57

ಈ ವರ್ಷದ ಮೊದಲ ಸೂರ್ಯಗ್ರಹಣವು ಮೆಕ್ಸಿಕೊ ಮತ್ತು ಅಮೆರಿಕದಲ್ಲಿ ಪ್ರಾರಂಭವಾಗಿತ್ತು. ಸಂಪೂರ್ಣ ಸೂರ್ಯಗ್ರಹಣವು ಮೊದಲು ಮೆಕ್ಸಿಕೊದ 603 ಕಿಲೋಮೀಟರ್ ಇಸ್ಲಾ ಸೊಕೊರೊ ದ್ವೀಪವನ್ನು ಪ್ರವೇಶಿಸಿತು. ಈ ವೇಳೆ ಸಂಪೂರ್ಣ ಕತ್ತಲೆ ಆವರಿಸಿತ್ತು. ಸೂರ್ಯ ಗ್ರಹಣವು ಕೆನಡಾದಲ್ಲಿಯೂ ಗೋಚರಿಸುತ್ತದೆ. ಯುಎಸ್ನಲ್ಲಿ, ಗ್ರಹಣದ ಹಾದಿಯಲ್ಲಿರುವ ಕನಿಷ್ಠ 12 ರಾಜ್ಯಗಳು ಸುಮಾರು 4 ನಿಮಿಷ 28 ಸೆಕೆಂಡುಗಳ ಕಾಲ ಕತ್ತಲೆಯಲ್ಲಿ ಆವರಿಸಿದ್ದವು. ಅದೇ ಸಮಯದಲ್ಲಿ, 54 ದೇಶಗಳಲ್ಲಿ ಭಾಗಶಃ ಸೂರ್ಯಗ್ರಹಣ ಸಂಭವಿಸಿದೆ. ಭಾರತದಲ್ಲಿ ಈ ಸೂರ್ಯಗ್ರಹಣ ಗೋಚರಿಸಿಲ್ಲ, ಏಕೆಂದರೆ ಗ್ರಹಣ ಪ್ರಾರಂಭವಾದಾಗ, ಇಲ್ಲಿ ರಾತ್ರಿಯಾಗಿತ್ತು. ಇದು ಕಳೆದ ಹಲವು ವರ್ಷಗಳ ಅತ್ಯಂತ ವಿಶಿಷ್ಟ ಖಗೋಳ ಘಟನೆಯಾಗಲಿದೆ. ಯುಎಸ್ ಬಾಹ್ಯಾಕಾಶ ಸಂಸ್ಥೆ ನಾಸಾ (ನಾಸಾ) ತನ್ನ ಯೂಟ್ಯೂಬ್ ಚಾನೆಲ್ನಲ್ಲಿ ವರ್ಷದ ಮೊದಲ ಸಂಪೂರ್ಣ ಸೂರ್ಯಗ್ರಹಣವನ್ನು ಲೈವ್ ಸ್ಟ್ರೀಮ್ ಮಾಡಿದ್ದು, ಸೂರ್ಯ ಗ್ರಹಣದ ಅನೇಕ ವಿಡಿಯೋಗಳನ್ನು ಹಂಚಿಕೊಂಡಿದೆ. https://twitter.com/NASA/status/1777399079124742451?ref_src=twsrc%5Etfw%7Ctwcamp%5Etweetembed%7Ctwterm%5E1777399079124742451%7Ctwgr%5E46a306f5a40a4bf274ff60f682d5125374d10589%7Ctwcon%5Es1_c10&ref_url=https%3A%2F%2Fapi-news.dailyhunt.in%2F https://twitter.com/VishalVerma_9/status/1777404114592243999?ref_src=twsrc%5Etfw%7Ctwcamp%5Etweetembed%7Ctwterm%5E1777404114592243999%7Ctwgr%5E46a306f5a40a4bf274ff60f682d5125374d10589%7Ctwcon%5Es1_c10&ref_url=https%3A%2F%2Fapi-news.dailyhunt.in%2F https://twitter.com/queeenthang/status/1777407233514439114?ref_src=twsrc%5Etfw%7Ctwcamp%5Etweetembed%7Ctwterm%5E1777407233514439114%7Ctwgr%5E46a306f5a40a4bf274ff60f682d5125374d10589%7Ctwcon%5Es1_c10&ref_url=https%3A%2F%2Fapi-news.dailyhunt.in%2F https://twitter.com/patel_Hardik_0/status/1777412071522717772?ref_src=twsrc%5Etfw%7Ctwcamp%5Etweetembed%7Ctwterm%5E1777412071522717772%7Ctwgr%5E46a306f5a40a4bf274ff60f682d5125374d10589%7Ctwcon%5Es1_c10&ref_url=https%3A%2F%2Fapi-news.dailyhunt.in%2F https://twitter.com/VishalVerma_9/status/1777410654661640488?ref_src=twsrc%5Etfw%7Ctwcamp%5Etweetembed%7Ctwterm%5E1777410654661640488%7Ctwgr%5E46a306f5a40a4bf274ff60f682d5125374d10589%7Ctwcon%5Es1_c10&ref_url=https%3A%2F%2Fapi-news.dailyhunt.in%2F

Read More

ಬೆಂಗಳೂರು: ಲೋಕಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ನಿನ್ನೆ ಕೊನೆಯ ದಿನವಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಕಣದಿಂದ 53 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದ್ರೆ, ಕಣದಲ್ಲಿ ಬರೋಬ್ಬರಿ 247 ಅಭ್ಯರ್ಥಿಗಳಿದ್ದಾರೆ. ಈ ಕುರಿತಂತೆ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಇಂದು ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಏಪ್ರಿಲ್.6ರಂದು ಒಬ್ಬರು ಹಾಗೂ ಇಂದು 52 ಸೇರಿದಂತೆ 53 ಅಭ್ಯರ್ಥಿಗಳು ನಾಮಪತ್ರವನ್ನು ಹಿಂಪಡೆದಿದ್ದಾರೆ ಎಂದು ತಿಳಿಸಿದೆ. ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆ ಕಣದಲ್ಲಿ ಒಟ್ಟು 247 ಅಭ್ಯರ್ಥಿಗಳಿದ್ದಾರೆ. ಇವರಲ್ಲಿ 226 ಪುರುಷ ಅಭ್ಯರ್ಥಿಗಳು ಹಾಗೂ 21 ಮಹಿಳಾ ಅಭ್ಯರ್ಥಿಗಳು ಆಗಿದ್ದಾರೆ ಎಂದು ಹೇಳಿದೆ. ಮೊದಲ ಹಂತದ ಲೋಕಸಭಾ ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ.? ಉಡುಪಿ-ಚಿಕ್ಕಮಗಳೂರು: 10 ಹಾಸನ: 15 ದಕ್ಷಿಣ ಕನ್ನಡ: 9 ಚಿತ್ರದುರ್ಗ: 20 ತುಮಕೂರು: 18 ಮಂಡ್ಯ: 14 ಮೈಸೂರು: 18 ಚಾಮರಾಜನಗರ: 14 ಬೆಂಗಳೂರು ಗ್ರಾಮೀಣ: 15 ಬೆಂಗಳೂರು…

Read More

54 ವರ್ಷಗಳ ಬಳಿಕ ಯುರೋಪ್ನಲ್ಲಿ ಅತಿ ಉದ್ದದ ಸೂರ್ಯಗ್ರಹಣ ಗೋಚರಿಸಿದೆ. ಬಾಹ್ಯಾಕಾಶ ಸಂಸ್ಥೆ ಸೌರ ಗ್ರಹಣದ ಫೋಟೋಗಳನ್ನು ಹಂಚಿಕೊಂಡಿದೆ. ಯುರೋಪಿನ ಅನೇಕ ನಗರಗಳು ಹಗಲಿನಲ್ಲಿ ಕತ್ತಲೆಯಲ್ಲಿ ಮುಳುಗಿದ್ದವು. ಭಾರತೀಯ ಕಾಲಮಾನ ರಾತ್ರಿ 9:12 ಕ್ಕೆ ಪ್ರಾರಂಭವಾದ ಸೂರ್ಯಗ್ರಹಣವು 5 ಗಂಟೆ 10 ನಿಮಿಷಗಳ ಕಾಲ ನಡೆಯಿತು. ಈ ಸಮಯದಲ್ಲಿ, ಜನರು ಈ ಅಪರೂಪದ ಖಗೋಳ ಘಟನೆಯ ಚಿತ್ರಗಳನ್ನು ತೀವ್ರವಾಗಿ ಕ್ಲಿಕ್ಕಿಸಿದರು. ಬಾಹ್ಯಾಕಾಶ ಸಂಸ್ಥೆ ನಾಸಾ ಸೂರ್ಯಗ್ರಹಣದ ಕೆಲವು ವಿಶೇಷ ಚಿತ್ರಗಳನ್ನು ಹಂಚಿಕೊಂಡಿದೆ. ಇದರಲ್ಲಿ ಗ್ರಹಣದ ಉದಯಿಸುತ್ತಿರುವ ಸ್ಥಿತಿಯನ್ನು ತೋರಿಸಲಾಗಿದೆ. ಇದಲ್ಲದೆ, ಅಂತಹ ಅನೇಕ ಚಿತ್ರಗಳನ್ನು ಸಹ ಸೆರೆಹಿಡಿಯಲಾಗಿದೆ, https://twitter.com/NASA/status/1777465163777470865

Read More

ಯುಗಾದಿ ಹಬ್ಬವನ್ನು ದೇಶದ ವಿವಿಧ ಭಾಗದಲ್ಲಿ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ. ಈ ಹಬ್ಬವನ್ನು ವಿವಿಧೆಡೆ ವಿವಿಧ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ಈ ಹಬ್ಬವನ್ನು ಹೆಚ್ಚಾಗಿ ಕರ್ನಾಟಕ, ಆಂಧ್ರ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಾಡ್ವ. ಹಬ್ಬಗಳ ಹೆಸರು ಬೇರೆ ಬೇರೆ ಆದರೂ ಎಲ್ಲೆಡೆ ಅದರ ಮಹತ್ವ ಏಲ್ಲಾ ಕಡೆ ಒಂದೇ. ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಯುಗಾದಿ ದಿನದಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು. ಈ ದಿನ ತಳಿರು ತೋರಣವನ್ನು ಅಂದರೆ ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲುಗಳಿಂದ ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ಕಟ್ಟುವರು. ಆ ಮೂಲಕ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸುತ್ತಾರೆ. ಇವೆಲ್ಲವುಗಳ ಜೊತೆಗೆ ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ…

Read More

“ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷದ ಹೊಸತು ಹೊಸತು ತರುತಿದೆ’ ಎಂದು ವರಕವಿ ದ.ರಾ.ಬೇಂದ್ರೆಯವರ ಯುಗಾದಿ ಬಗೆಗಿನ ಸುಂದರ ಗೀತೆಯನ್ನು ರಚಿಸಿದ್ದಾರೆ. ಪ್ರತಿ ಯುಗಾದಿ ಬಂದಾಗ ಈ ಹಾಡು ಮನಸಿನಲಿ ಗುನುಗುತ್ತದೆ. ಇದೀಗ ಮತ್ತೆ ಯುಗಾದಿ ಮನೆಮನೆಗಳಲ್ಲಿ ಬಂದಿದೆ… ಯುಗಾದಿ ಅಥವಾ ಉಗಾದಿ ಎಂದರೆ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು ಅರ್ಥ. . ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ. ಇದು ಬ್ರಹ್ಮದೇವನ ಸೃಷ್ಟಿಯ ದಿನ. ಚೈತ್ರಶುದ್ಧ ಪಾಡ್ಯದಂದು ಸೂರ್ಯೋದಯವಾಗುತ್ತಿರುವಾಗ ಬ್ರಹ್ಮನು ವಿಶ್ವವನ್ನು ಸೃಷ್ಟಿಸಿದನೆಂದೂ, ಅಂದಿನಿಂದ ಕಾಲಗಣನೆಗಾಗಿ ಗ್ರಹ-ನಕ್ಷತ್ರ-ಮಾಸ-ಋತು-ವರ್ಷ ಇವುಗಳನ್ನು ಏರ್ಪಡಿಸಿದನೆಂದೂ ವ್ರತಖಂಡದಲ್ಲೂ ಪುರಾಣಗಳಲ್ಲೂ ಉಲ್ಲೇಖವಿದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ…

Read More

ಬೆಂಗಳೂರು : ಲೋಕಸಭೆ ಕ್ಷೇತ್ರ ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ನಮೂನೆ-12 ಎ ಭರ್ತಿ ಮಾಡಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಇದೇ ಏಪ್ರಿಲ್ 26ರ ಶುಕ್ರವಾರ ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರ ಮಂಗಳವಾರ ನಡೆಸುತ್ತಿದೆ. ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಮೂನೆ 12 ಎ ಫಾರಂ ಅನ್ನು ಭರ್ತಿ ಮಾಡಿ ಕಡ್ಡಾಯವಾಗಿ ಸಲ್ಲಿಸಬೇಕಾಗಿರುತ್ತದೆ ಎಂದು ತಿಳಿಸಲಾಗಿದೆ. ಈ ಫಾರಂ ಅನ್ನು ಮತದಾನ ದಿನದಂದು ನಿಯೋಜನೆಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ತಾವು ಕರ್ತವ್ಯ ನಿರ್ವಹಿಸಬಹುದಾದ ಮತಗಟ್ಟೆಯಲ್ಲಿ ಮತ ಚಲಾಯಿಸಲು ಅನುವು ಮಾಡಿಕೊಡಲು ಈ ನಮೂನೆಯನ್ನು ನೀಡಬೇಕಾಗಿದ್ದು, ಬಳಿಕ ನಮೂನೆ 12 ಬಿ ಚುನಾವಣಾ ಕರ್ತವ್ಯ ಪ್ರಮಾಣ ಪತ್ರ ನೀಡಲಾಗುತ್ತದೆ. ನಮೂನೆ 12 ಎ ನಲ್ಲಿ ತಾವು ಕರ್ತವ್ಯ ನಿರ್ವಹಿಸುವ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯವರಿಗೆ ನೀಡಬೇಕಾಗಿದ್ದು, ತಮ್ಮ ಮತದಾರರ ಗುರುತಿನ…

Read More

ಬೆಂಗಳೂರು: ರಾಜ್ಯದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ 364 ಭೂಮಾಪಕರ ಹುದ್ದೆಗಳ ( Land Surveyors Recruitment ) ಭರ್ತಿಗೆ ಕೆಪಿಎಸ್ಸಿಯಿಂದ ( KPSC ) ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ 364 ಭೂಮಾಪಕರ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ಹುದ್ದೆಗಳ ವಿವರ ಉಳಿಕೆ ಮೂಲ ವೃಂದ – 264 ಹುದ್ದೆಗಳು ಹೈದರಾಬಾದ್-ಕರ್ನಾಟಕ ಸ್ಥಳೀಯ ವೃಂದ – 100 ಹುದ್ದೆಗಳು ವೇತನ ಶ್ರೇಣಿ – ರೂ.23,500 ರಿಂದ ರೂ.47,650 ಪ್ರಮುಖ ದಿನಾಂಕಗಳು ಭೂಮಾಪಕರ 100 ಹುದ್ದೆಗಳಿಗೆ ದಿನಾಂಕ 11-03-2024ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2024 ಆಗಿದೆ. ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷೆಯು ಕನ್ನಡ ಭಾಷಾ ಪರೀಕ್ಷೆ ದಿನಾಂಕ 06-07-2024, ಸ್ಪರ್ಧಾತ್ಮಕ ಪರೀಕ್ಷೆಯು ದಿನಾಂಕ 07-07-2024ರಂದು ನಡೆಸಲು…

Read More

ಬೆಂಗಳೂರು : ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ-2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಇದೇ ಏಪ್ರಿಲ್ 26ರ ಶುಕ್ರವಾರ ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರ ಮಂಗಳವಾರ ನಡೆಸುತ್ತಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ವಾಣಿಜ್ಯ ಉದ್ದಿಮೆಗಳಲ್ಲಿ, ಕೈಗಾರಿಕಾ ಘಟಕ ಸೇರಿದಂತೆ ಸಣ್ಣ ಮತ್ತು ದೊಡ್ಡ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕ ಹಾಗೂ ಸಿಬ್ಬಂದಿಗಳಿಗೆ ಮತದಾನದ ದಿನದಂದು ವೇತನ ಸಹಿತ ರಜೆಯನ್ನು ನೀಡುವಂತೆ ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ. ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡಬೇಕು. ಈ ಆದೇಶ ಉಲ್ಲಂಘನೆ ಮಾಡಿದರೆ ಸಂಬಂಧಪಟ್ಟ ಸಂಸ್ಥೆ, ನಿಯೋಜಕರು, ವ್ಯವಸ್ಥಾಪಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ಅರ್ಹ ಮತದಾರ ಮತದಾನದ…

Read More

ಬೆಂಗಳೂರು : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಎಲ್ಲಾ ನ್ಯಾಯಾಲಯಗಳು ತಮ್ಮ ವ್ಯಾಪ್ತಿಯಲ್ಲಿ ಲೋಕ್ ಅದಾಲತ್‍ನ್ನು ಆಯೋಜಿಸಲಿವೆ. ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್‍ನ ಸದುಪಯೋಗ ಪಡೆದುಕೊಳ್ಳಬೇಕು. ಈ ಲೋಕ್ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾಜಿಯಾಗಬಲ್ಲ, ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿ ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹÅದು. ಕೌಟುಂಬಿಕ…

Read More

ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಕಾಲರಾ ಮತ್ತು ವಾಂತಿ, ಬೇದಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ನೀರಿನ ಅಭಾವ ಉಂಟಾಗಿದ್ದು, ಎಲ್ಲಾ ರಸ್ತೆಬದಿ ವ್ಯಾಪಾರಿಗಳು, ಡಾಬಾ, ಸ್ವೀಟ್ ಸ್ಟಾಲ್, ಬೇಕರಿ,ಚಾಟ್ಸ್, ಮೆಸ್, ಕ್ಯಾಂಟೀನ್, ಕ್ಯಾಟರಿಂಗ್, ಸಮುದಾಯ ಭವನ, ಕಲ್ಯಾಣ ಮಂಟಪದವರು, ಪೇಯಿಂಗ್‍ಗೆಸ್ಟ್, ಹೋಮ್-ಸ್ಟೇ, ಹೊಟೇಲ್, ಬಾರ್ ಅಂಡ್ ರೆಸ್ಟೋರೆಂಟ್, ರೆಸಾರ್ಟ್, ಅಂಗನವಾಡಿ, ಮದ್ಯಾಹ್ನದ ಬಿಸಿಯೂಟ ಕಾರ್ಯಕ್ರಮ, ಸರ್ಕಾರಿ ಮತ್ತು ಸರ್ಕಾರೇತರ ವಸತಿನಿಲಯ ಮತ್ತು ಎಲ್ಲಾ ಆಹಾರ ತಯಾರಿಕಾದಾರರು ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಕಡ್ಡಾಯವಾಗಿ ಗ್ರಾಹಕರಿಗೆ ಕುದಿಸಿದ ಶುದ್ಧವಾದ ನೀರನ್ನು ನೀಡುವಂತೆ ಸೂಚಿಸಿದೆ. ಆಹಾರ ತಯಾರಿಕಾ ಮತ್ತು ಸಂಗ್ರಹಣಾ ಸ್ಥಳಗಳಲ್ಲಿ ನೊಣಗಳು, ಸೊಳ್ಳೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವಂತೆ, ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವುದು ಮತ್ತು ತಯಾರಿಸಿರುವ ಎಲ್ಲಾ ಆಹಾರ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚಿಟ್ಟು ಸ್ವಚ್ಚವಾದ ವಿಧಾನದ ಮೂಲಕ ತಯಾರಿಕೆ ಮತ್ತು ವಿತರಣೆಯನ್ನು ಮಾಡುವಂತೆ ತಿಳಿಸಿದೆ. ಹಾಗೆಯೇ ಎಲ್ಲಾ ಆಹಾರ ಉದ್ದಿಮೆದಾರರು ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಒಳಗೊಂಡಂತೆ ಆಹಾರ ಪದಾರ್ಥ…

Read More