Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಇದೇ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಇಂದು ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು, ಉತ್ತರ ಒಳನಾಡಿನ ಜಿಲ್ಲೆಗಳಾದಂತ ವಿಜಯಪುರ, ಯಾದಗಿರಿ, ಕಲಬುರ್ಗಿ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದಂತ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಯಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ. ಇನ್ನೂ ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಮಂಡ್ಯ, ವಿಜಯನಗರ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ನಗರದಲ್ಲೂ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು: ರಾಜ್ಯ ಸರ್ಕಾರವು ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ‘ಯಶಸ್ವಿನಿ’ ಯೋಜನೆಯಡಿ 200ಕ್ಕೂ ಅಧಿಕ ಚಿಕಿತ್ಸೆಗಳ ದರವನ್ನು ಪರಿಷ್ಕರಣೆ ಮಾಡಿದೆ. ಇದರಿಂದಾಗಿ ಯೋಜನೆಯಡಿ ನೋಂದಣಿಗೆ ಖಾಸಗಿ ಆಸ್ಪತ್ರೆಗಳು ಒಲವು ತೋರುತ್ತಿದ್ದು, ಆಸ್ಪತ್ರೆಗಳ ಜಾಲ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದೆ. ಸಹಕಾರ ಇಲಾಖೆಯಲ್ಲಿ ಜಾರಿಯಲ್ಲಿದ್ದ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು 2022-23 ನೇ ಸಾಲಿಗೆ ಸಹಕಾರ ಸಂಘಗಳ ಸದಸ್ಯರು ಮತ್ತು ಅವರ ಅವಲಂಭಿತ ಕುಟುಂಬ ವರ್ಗದವರಿಗಾಗಿ ಕರ್ನಾಟಕ ರಾಜ್ಯ ಸರ್ಕಾರವು 2022-23 ನೇ ಸಾಲಿಗೆ 2022ರ ನವೆಂಬರ್, 01 ರಿಂದ ಮರು ಜಾರಿಗೊಳಿಸಿದೆ. ಸರ್ಕಾರವು ಹಲವು ಚಿಕಿತ್ಸೆಗಳ ದರವನ್ನು ಪರಿಷ್ಕರಿಸಿ, ಶೇ 300ರವರೆಗೂ ದರ ಹೆಚ್ಚಳ ಮಾಡಿದೆ. ಪರಿಣಾಮ ಯೋಜನೆ ಪ್ರಾರಂಭವಾದಾಗ 370 ಇದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ, ಈಗ 600ರ ಗಡಿ ದಾಟಿದೆ. ಅಂಕಿ-ಅಂಶಗಳು 637 ಯೋಜನೆಯಡಿ ನೋಂದಾಯಿತ ನೆಟ್ವರ್ಕ್ ಆಸ್ಪತ್ರೆಗಳು 602 ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳು 2,128 ಯೋಜನೆಯಡಿ ಲಭ್ಯವಾಗುವ ಚಿಕಿತ್ಸೆಗಳು 206 ದರ ಪರಿಷ್ಕರಣೆಗೆ ಒಳಗಾದ ಚಿಕಿತ್ಸೆಗಳು’ಯಶಸ್ವಿನಿ’ ಯೋಜನೆಯಡಿಯೂ…
ಬೆಂಗಳೂರು:ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ದೈಹಿಕ ಮತ್ತು ಮಾನಸಿಕ ಚಟುವಟಿಕೆಯ ಅಗತ್ಯವನ್ನು ಒತ್ತಿಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಾದ್ಯಂತ ಹೆಚ್ಚಿನ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು. ವಿಧಾನಸೌಧದಲ್ಲಿ ಆರೋಗ್ಯ ಶಿಬಿರವನ್ನು ಉದ್ಘಾಟಿಸಿದ ಅವರು, ನಿಷ್ಕ್ರಿಯತೆಯು ಅನಾರೋಗ್ಯಕ್ಕೆ ಹೇಗೆ ಕಾರಣವಾಗುತ್ತದೆ ಎಂಬುದನ್ನು ಎತ್ತಿ ತೋರಿಸಿದರು ಮತ್ತು ಧೂಮಪಾನವನ್ನು ತ್ಯಜಿಸುವುದು ಸೇರಿದಂತೆ ತಮ್ಮದೇ ಆದ ಆರೋಗ್ಯ ಅಭ್ಯಾಸಗಳನ್ನು ಹಂಚಿಕೊಂಡರು. ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ಒತ್ತಿಹೇಳಿದ ಸಿದ್ದರಾಮಯ್ಯ, ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಲು ಆರಂಭಿಕ ಆರೋಗ್ಯ ರಕ್ಷಣಾ ಪ್ರಯತ್ನಗಳಿಗೆ ಕರೆ ನೀಡಿದರು.
ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್ ಆದೇಶದ ಅನ್ವಯ ಜೂನ್ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ. ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. ವಾಹನ ಮಾಲೀಕರಾದಂತ ನೀವು ನಿಮ್ಮ ಹಳೆಯ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಹೇಗೆ ಎಳವಡಿಸಬೇಕು ಅನ್ನೋ ಬಗ್ಗೆ ಮುಂದೆ ಓದಿ. ಈ ವಿಧಾನ ಅನುಸರಿಸಿ, ನಿಮ್ಮ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿ • https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ,…
ಬೆಂಗಳೂರು : ವಿವಿಧ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಅಧಿಕಾರಿ/ಸಿಬ್ಬಂದಿಯವರ ವೇತನ ಮತ್ತು ವೇತನೇತರ ವೆಚ್ಚಗಳಿಗೆ ಸಂಬಂಧಿಸಿದ ಪಾವತಿಗಳಿಗಾಗಿ ಅನುದಾನವನ್ನು ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2024-25ನೇ ಆರ್ಥಿಕ ಸಾಲಿಗೆ ವಿವಿಧ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಇಲಾಖೆಯ ಅಧಿಕಾರಿ/ಸಿಬ್ಬಂದಿರವರ ವೇತನ ಪಾವತಿಗೆ ಕೊರತೆಯಾಗಿರುವ ಅನುದಾನವನ್ನು TP link documentಅನ್ನು ಪರಿಷ್ಕರಿಸಿ ವ್ಯತ್ಯಾಸದ ಮೊತ್ತವನ್ನು ಬಿಡುಗಡೆ ಮಾಡಲು ಉಲ್ಲೇಖಿತ ಪತ್ರದಲ್ಲಿ ಕೋರಲಾಗಿದೆ. ಪ್ರಸ್ತಾವನೆಯನ್ನು ಪರಿಶೀಲಿಸಿ, ವಿವಿಧ ತಾಲ್ಲೂಕು ಪಂಚಾಯಿತಿಗಳಿಗೆ 2024-25ನೇ ಸಾಲಿನಲ್ಲಿ IP link documenದನ್ವಯ ನಿಗಧಿಯಾದ ಅನುದಾನವನ್ನು ಪರಿಷ್ಕರಿಸಿ ಮೊದಲನೇ ಕಂತಿನ ವ್ಯತ್ಯಾಸದ ಮೊತ್ತ ರೂ.3208.85ಲಕ್ಷಗಳನ್ನು ಸಂಬಂಧಪಟ್ಟ ಲೆಕ್ಕ ಶೀಷಿರ್ಮಿಕೆಯಡಿ ಬಿಡುಗಡೆಗೊಳಿಸಲು ನಿರ್ಣಯಿಸಿ ಈ ಕೆಳಕಂಡಂತೆ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ 2024-25ನೇ ಆರ್ಥಿಕ ಸಾಲಿಗೆ ವಿವಿಧ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಇಲಾಖೆಯ ಅಧಿಕಾರಿ/ಸಿಬ್ಬಂದಿರವರ ವೇತನ ಪಾವತಿಗೆ ಕೊರತಯಾಗಿರುವ ಅನುದಾನವನ್ನು TP link documentಅನ್ನು ಪರಿಷ್ಕರಿಸಿ ವ್ಯತ್ಯಾಸದ ಮೊತ್ತವನ್ನು ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಇಲಾಖೆಗಳ ಅಧಿಕಾರಿ/ಸಿಬ್ಬಂದಿರವರ ವೇತನ ಇಲಾಖೆ…
ನವದೆಹಲಿ:ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ 99 ಸ್ಥಾನಗಳನ್ನು ಗೆಲ್ಲುವ ಮೂಲಕ ಭಾರಿ ಪುನರಾಗಮನ ಮಾಡಿದ ಕಾಂಗ್ರೆಸ್, ಭವಿಷ್ಯದ ಕ್ರಮ ಮತ್ತು ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಜೂನ್ 8 ರಂದು ವಿಸ್ತೃತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯನ್ನು ಕರೆದಿದೆ ಪಕ್ಷದ ನಾಯಕರ ಪ್ರಕಾರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜೂನ್ 8 ರಂದು ಬೆಳಿಗ್ಗೆ 11 ಗಂಟೆಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ವಿಸ್ತೃತ ಸಿಡಬ್ಲ್ಯೂಸಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ಕಾಂಗ್ರೆಸ್ ನಾಯಕರು ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ಕೇಂದ್ರದಲ್ಲಿ ಹೊಸ ಎನ್ಡಿಎ ಸರ್ಕಾರವನ್ನು ಎದುರಿಸಲು ಭವಿಷ್ಯದ ಕಾರ್ಯತಂತ್ರದ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲಿದ್ದಾರೆ. ಉತ್ಸಾಹಭರಿತ ಚುನಾವಣಾ ಪ್ರಚಾರವನ್ನು ನಡೆಸಿದ್ದಕ್ಕಾಗಿ ಮತ್ತು ಚುನಾವಣೆಯಲ್ಲಿ ಪಕ್ಷದ ಅದೃಷ್ಟವನ್ನು ಪುನರುಜ್ಜೀವನಗೊಳಿಸಿದ್ದಕ್ಕಾಗಿ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಧನ್ಯವಾದ ಹೇಳಲು ಕಾಂಗ್ರೆಸ್ ನಾಯಕರು ನಿರ್ಣಯವನ್ನು ತರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.…
ಬೆಂಗಳೂರು : ಉತ್ತರಾಖಂಡದ ಶಹಸ್ತ್ರತಾಳ್ ಪ್ರದೇಶದಲ್ಲಿ ಚಾರಣದ ವೇಳೆ ಮೃತಪಟ್ಟಿದ್ದ ಎಲ್ಲಾ 9 ಕನ್ನಡಿಗರ ಶವ ಪತ್ತೆಯಾಗಿದ್ದು, ಇನ್ನೂ ಹಿಮಗಾಳಿಯಲ್ಲಿ ಸಿಲುಕಿ ಬದುಕುಳಿದ 13 ಚಾರಣಿಗರು ಯಶಸ್ವಿ ಕಾರ್ಯಾಚರಣೆ ನಡೆಸಿ ರಕ್ಷಿಸಿದು, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಉತ್ತರಾಖಂಡ್ ಶಹಸ್ತ್ರತಾಳ್ ಪ್ರದೇಶದಲ್ಲಿ ಚಾರಣದ ವೇಳೆ ಹಿಮಪಾತಕ್ಕೆ ಸಿಲುಕಿ ಜೀವನ್ಮರಣದ ಹೋರಾಟದಲ್ಲಿದ್ದ ಕರ್ನಾಟಕದ ಚಾರಣಿಗರ ತಂಡವನ್ನು ರಕ್ಷಿಸಿ ಇಂದು ಬೆಂಗಳೂರಿಗೆ ಕರೆತರಲಾಯಿತು. ಈ ವೇಳೆ ಚಾರಣಿಗರ ಪೋಷಕರು ತಮ್ಮ ಮಕ್ಕಳು ಬಂಧುಮಿತ್ರರನ್ನು ಕಂಡು ನಿಟ್ಟುಸಿರು ಬಿಟ್ಟು ರಾಜ್ಯ ಸರ್ಕಾರದ ಶ್ರಮಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲದೆ, ಸ್ವತಃ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯದ ಉತ್ಸುವಾರಿ ವಹಿಸಿದ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಕರ್ನಾಟಕ ಪರ್ವತಾರೋಹಣ ಸಂಘದ (Karnataka Mountaineering Association) ಸದಸ್ಯರು ಧನ್ಯವಾದಗಳನ್ನು ಅರ್ಪಿಸಿದರು.
ಉಡುಪಿ : ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಗೃಹ ಇಲಾಖೆ ಸೇರಿದಂತೆ ಇತರೆ ಇಲಾಖೆ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಉಡುಪಿಯಲ್ಲಿ ನಡೆದ ಕರ್ನಾಟಕ ರಾಜ್ಯ ಸೀನಿಯರ್ ಮತ್ತು ಯೂತ್ ಮೀಟ್ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಇಲಾಖೆ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಇತ್ತೀಚಿಗೆ ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಶೇ.2 ರಂತೆ 80 ಮಂದಿ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. 18 ಮಂದಿ ಕ್ರೀಡಾಪಟುಗಳನ್ನು ಎಸ್ ಐ ಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು :ರಜೆ ನಗದೀಕರಣವನ್ನು ವಿವೇಚನಾತ್ಮಕ ಕೊಡುಗೆಯಾಗಿ ನೋಡದೆ, ಸಂವಿಧಾನದ ಅಡಿಯಲ್ಲಿ ಜಾರಿಗೊಳಿಸಬಹುದಾದ ಕಾನೂನು ಹಕ್ಕುಗಳು ಎಂದು ಪರಿಗಣಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ. ಎಚ್.ಚನ್ನಯ್ಯ (ಅರ್ಜಿದಾರರು) 1979 ರಿಂದ 2013 ರಲ್ಲಿ ನಿವೃತ್ತರಾಗುವವರೆಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪ್ರತಿವಾದಿ) ಕಚೇರಿಯಲ್ಲಿ ವಾಟರ್ ಮ್ಯಾನ್ ಆಗಿ ಕೆಲಸ ಮಾಡಿದ್ದರು. ಅರ್ಜಿದಾರರ ನಿವೃತ್ತಿಯ ನಂತರ, ಅಕೌಂಟೆಂಟ್ ಜನರಲ್ ಕಚೇರಿ ಅರ್ಜಿದಾರರ ಸೇವಾ ದತ್ತಾಂಶ ಮತ್ತು ಅವರಿಗೆ ಪಾವತಿಸಬೇಕಾದ ಪಿಂಚಣಿಯೊಂದಿಗೆ ವಿವರವಾದ ಹೇಳಿಕೆಯನ್ನು ಸಿದ್ಧಪಡಿಸಿತು. ಇದಲ್ಲದೆ, ಜಿಲ್ಲಾ ಪಂಚಾಯತ್ ಸಿಇಒ ಮತ್ತು ಪಾವಗಡ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹೊರಡಿಸಿದ ನಿರ್ದೇಶನಗಳು ಅರ್ಜಿದಾರರ ಗಳಿಕೆ ರಜೆ ನಗದೀಕರಣವನ್ನು ಇತ್ಯರ್ಥಪಡಿಸುವ ತುರ್ತು ಅಗತ್ಯವನ್ನು ಒತ್ತಿಹೇಳಿವೆ. ಆದಾಗ್ಯೂ, ಸ್ಪಷ್ಟ ನಿರ್ದೇಶನಗಳ ನಂತರವೂ, ಗಳಿಕೆ ರಜೆಯ ಒಂದು ಭಾಗವನ್ನು ಮಾತ್ರ ಅರ್ಜಿದಾರರ ಪರವಾಗಿ ಬಿಡುಗಡೆ ಮಾಡಲಾಗಿದೆ. ಹೀಗಾಗಿ, ಗಳಿಕೆ ರಜೆಯ ನಗದೀಕರಣದಲ್ಲಿ ಬಾಕಿ ಹಣವನ್ನು ಬಡ್ಡಿಯೊಂದಿಗೆ ಬಿಡುಗಡೆ ಮಾಡಲು ಪ್ರತಿವಾದಿಗೆ ನಿರ್ದೇಶನ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿ.ಕೆ.ಸುರೇಶ್ ಅವರ ಸೋಲು ನನ್ನ ವೈಯಕ್ತಿಕ ಸೋಲು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ನಾನು ದಾರಿ ತಪ್ಪಿದೆ… ತುಂಬಾ ಸಮಯ ವ್ಯರ್ಥವಾಯಿತು… ನಾನು ಇತರ ಸ್ಥಾನಗಳು ಮತ್ತು ರಾಜ್ಯಗಳಲ್ಲಿ ಪ್ರಚಾರ ಮಾಡಲು ಹೋಗಿದ್ದೆ” ಎಂದು ಶಿವಕುಮಾರ್ ಹೇಳಿದರು. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ವಿರೋಧಿ ಮತಗಳು ಒಗ್ಗೂಡುತ್ತವೆ ಎಂದು ನನಗೆ ತಿಳಿದಿದೆ ಎಂದು ಶಿವಕುಮಾರ್ ಹೇಳಿದರು. ಅಲ್ಪಸಂಖ್ಯಾತರನ್ನು ಹೊರತುಪಡಿಸಿ ಎಲ್ಲಾ ಬಿಜೆಪಿ ಮತ್ತು ಜೆಡಿಎಸ್ ಮತಗಳು ಒಟ್ಟಿಗೆ ಬರುತ್ತವೆ ಎಂದು ನಮಗೆ ತಿಳಿದಿತ್ತು. ಆದರೆ ಅದು ಈ ರೀತಿ ಆಗುತ್ತದೆ ಎಂದು ನಾವು ನಿರೀಕ್ಷಿಸಿರಲಿಲ್ಲ” ಎಂದು ಬಿಜೆಪಿಯ ಡಾ.ಸಿ.ಎನ್.ಮಂಜುನಾಥ್ 2.69 ಲಕ್ಷ ಮತಗಳ ಅಂತರದಿಂದ ಗೆದ್ದಿರುವುದನ್ನು ಉಲ್ಲೇಖಿಸಿ ಅವರು ಹೇಳಿದರು. ಇದು ನನ್ನ ವೈಯಕ್ತಿಕ ಸೋಲು ಎಂದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಸುರೇಶ್ ಸ್ಪರ್ಧಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಮೊದಲು ಬೆಂಗಳೂರು ಗ್ರಾಮಾಂತರ ಸೋಲಿನಿಂದ ಚೇತರಿಸಿಕೊಳ್ಳಬೇಕು. “ಒಂದು ವಿಷಯ ಸ್ಪಷ್ಟವಾಗಿದೆ. ನಾನು ಸೋತಿದ್ದೇನೆ…












