Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸುದ್ದಿಗಾರರಿಗೆ ತಿಳಿಸಿದರು. ಒಟ್ಟು ಈ 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದಿದ್ದಾರೆ. 11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ, ವಾಯು ಅಸೆಟ್ಸ್ 1,251 ಕೋಟಿ ರೂ, ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ, ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ, ಗ್ರಾಸಿಂ ಇಂಡಸ್ಟ್ರೀಸ್1,386 ಕೋಟಿ ರೂ, ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ, ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ…
ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಹಿಳೆಯ ತಲೆಕೂದಲು ಕತ್ತರಿಸಿ ಅರೆನಗ್ನಗೊಳಿಸಿ ಖಾರ ಎರಚಿ ವಿಕೃತ ಹಿಂಸೆ ನೀಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ತಾಂಡಾವೊಂದರಲ್ಲಿ ಅನೈತಿಕ ಸಂಬಂಧದ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಆಕೆಯ ಸಂಬಂಧಿಕರು, ತಲೆಗೂದಲು ಕತ್ತರಿಸಿ, ಸುಣ್ಣ ಹಚ್ಚಿ, ಕಾರದ ಪುಡಿ ಎರಚಿದ್ದಲ್ಲದೆ, ಬಟ್ಟೆ ಹರಿದು ಅರೆನಗ್ನವಾಗಿಸಿ ಕೊಲೆಗೆ ಯತ್ನಿಸಿದ ಅಮಾನವೀಯ ಕೃತ್ಯ ನಡೆದಿದೆ. ಈ ಬಗ್ಗೆ ಕೆಂಭಾವಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಎಂದು ತಿಳಿದುಬಂದಿದೆ.
ನವದೆಹಲಿ :ನವೆಂಬರ್-ಡಿಸೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಹಾಕಿ ವಿಶ್ವಕಪ್ ನಿಂದ ಪಾಕಿಸ್ತಾನ ಹಿಂದೆ ಸರಿದಿದೆ. ಹಾಕಿಯ ಆಡಳಿತ ಮಂಡಳಿಯಾದ ಎಫ್ಐಎಚ್ ಇದನ್ನು ದೃಢಪಡಿಸಿದೆ. ಉದ್ಘಾಟನಾ ಪಂದ್ಯಕ್ಕೆ ಕೇವಲ ಒಂದು ತಿಂಗಳ ಮೊದಲು, ಪಾಕಿಸ್ತಾನ ಎಫ್ಐಎಚ್ ಪುರುಷರ ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಮೆಂಟ್ನಿಂದ ಹಿಂದೆ ಸರಿದಿದೆ. ನವೆಂಬರ್ 28 ರಿಂದ ಡಿಸೆಂಬರ್ 10 ರವರೆಗೆ ಚೆನ್ನೈ ಮತ್ತು ಮಧುರೈನಲ್ಲಿ ಪಂದ್ಯಾವಳಿ ನಡೆಯಲಿದೆ. ಭಾರತದೊಂದಿಗಿನ ರಾಜಕೀಯ ಉದ್ವಿಗ್ನತೆಯನ್ನು ಉಲ್ಲೇಖಿಸಿ ಪಾಕಿಸ್ತಾನ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಟೆಲಿಕಾಂ ಏಷ್ಯಾ ಸ್ಪೋರ್ಟ್ನ ವರದಿಯ ಪ್ರಕಾರ, ಪಾಕಿಸ್ತಾನ ಹಾಕಿ ಫೆಡರೇಶನ್ (ಪಿಎಚ್ಎಫ್) ತನ್ನ ಸರ್ಕಾರದೊಂದಿಗೆ ಚರ್ಚಿಸಿದ ನಂತರ ಎಫ್ಐಎಚ್ಗೆ ಅಧಿಕೃತ ಅಧಿಸೂಚನೆಯನ್ನು ಕಳುಹಿಸಿದೆ. ಹಾಕಿ ಇಂಡಿಯಾಕ್ಕೆ ಇದರ ಬಗ್ಗೆ ತಿಳಿಸಲಾಗುವುದು. ಭಾರತದಲ್ಲಿ ಪಾಕಿಸ್ತಾನ ಹಿಂದೆ ಸರಿದ ಎರಡನೇ ಕಾರ್ಯಕ್ರಮ ಇದಾಗಿದೆ. ಇದಕ್ಕೂ ಮೊದಲು, ಬಿಹಾರದ ರಾಜ್ಗಿರ್ನಲ್ಲಿ ನಡೆದ ಪುರುಷರ ಏಷ್ಯಾ ಕಪ್ನಿಂದಲೂ ಪಾಕಿಸ್ತಾನ ಹಿಂದೆ ಸರಿದಿತ್ತು.
ಬಳ್ಳಾರಿ ನಗರ ಉಪವಿಭಾಗ-1 ಜೆಸ್ಕಾಂ ವ್ಯಾಪ್ತಿಯಲ್ಲಿ ಕಂಪನಿಯ ನಿಯಮಾನುಸಾರ ಎಲ್ಲಾ ಸ್ಥಾವರದಲ್ಲಿರುವ ಮೀಟರ್ಗಳನ್ನು ಆಪ್ಟಿಕಲ್ ಪ್ರೋಬ್ ಡಿವೈಸ್ ಮೂಲಕವೇ ರೀಡಿಂಗ್ ಮಾಡಬೇಕಾಗಿದ್ದು, ವಿದ್ಯುತ್ ಗ್ರಾಹಕರು ತಮ್ಮ ಸ್ಥಾವರದ ವಿದ್ಯುತ್ ಮಾಪಕವನ್ನು ಕಡ್ಡಾಯವಾಗಿ ನೆಲದಿಂದ 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯುತ್ ಮಾಪಕಗಳು ಗೋಚರಿಸುವ ಹಾಗೂ ಓದಲು ಅನುಕೂಲವಾಗುವ ಸ್ಥಳದಲ್ಲಿ ಇರಬೇಕು. ಮೀಟರ್ ಓದುವವರಿಗೆ ಸ್ಥಳವಿಲ್ಲದಿದ್ದಲ್ಲಿ ಸ್ಥಳವಿರುವ ಜಾಗದಲ್ಲಿ ಇರಿಸಬೇಕು. ಅ.25 ರೊಳಗಾಗಿ ನಿಗದಿತ ಎತ್ತರದ ಜಾಗದಲ್ಲಿ ಅಳವಡಿಸಿಕೊಳ್ಳಬೇಕು. ಈ ನಿಯಮ ಪಾಲನೆ ಮಾಡದಿದ್ದಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿಭತ್ಯೆಯ ದರಗಳನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 55 ರಿಂದ ಶೇಕಡ 58ಕ್ಕೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ. 2. ಈ ಆದೇಶದ ಉದ್ದೇಶಗಳಿಗಾಗಿ ‘ಮೂಲ ವೇತನ’ ಎಂದರೆ ಸರ್ಕಾರಿ ನೌಕರನು ಧಾರಣೆ ಮಾಡಿರುವ ಹುದ್ದೆಗೆ ಅನ್ವಯವಾಗುವ 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಪಡೆಯುತ್ತಿರುವ ಮೂಲ ವೇತನ. 3. ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು, ಸರ್ಕಾರಿ/ಅನುದಾನಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಪೂರ್ಣಕಾಲಿಕ ನೌಕರರಿಗೆ ಈ ಆದೇಶಗಳು ಅನ್ವಯಿಸುತ್ತವೆ. 4. ವೇತನ ಎಂದು ಪರಿಗಣಿಸಲ್ಪಡದ ಯಾವುದೇ ಉಪಲಬ್ಧಗಳನ್ನು ಮೂಲ ವೇತನಕ್ಕೆ ಸೇರಿಸತಕ್ಕದ್ದಲ್ಲ. 5. ಈ…
ಬೆಂಗಳೂರು : 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿಭತ್ಯೆಯ ದರಗಳನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 55 ರಿಂದ ಶೇಕಡ 58ಕ್ಕೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ. 2. ಈ ಆದೇಶದ ಉದ್ದೇಶಗಳಿಗಾಗಿ ‘ಮೂಲ ವೇತನ’ ಎಂದರೆ ಸರ್ಕಾರಿ ನೌಕರನು ಧಾರಣೆ ಮಾಡಿರುವ ಹುದ್ದೆಗೆ ಅನ್ವಯವಾಗುವ 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಪಡೆಯುತ್ತಿರುವ ಮೂಲ ವೇತನ. 3. ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು, ಸರ್ಕಾರಿ/ಅನುದಾನಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಪೂರ್ಣಕಾಲಿಕ ನೌಕರರಿಗೆ ಈ ಆದೇಶಗಳು ಅನ್ವಯಿಸುತ್ತವೆ. 4. ವೇತನ ಎಂದು ಪರಿಗಣಿಸಲ್ಪಡದ ಯಾವುದೇ ಉಪಲಬ್ಧಗಳನ್ನು ಮೂಲ ವೇತನಕ್ಕೆ ಸೇರಿಸತಕ್ಕದ್ದಲ್ಲ. 5. ಈ…
ಬೆಂಗಳೂರು : 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿಭತ್ಯೆಯ ದರಗಳನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 55 ರಿಂದ ಶೇಕಡ 58ಕ್ಕೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ. 2. ಈ ಆದೇಶದ ಉದ್ದೇಶಗಳಿಗಾಗಿ ‘ಮೂಲ ವೇತನ’ ಎಂದರೆ ಸರ್ಕಾರಿ ನೌಕರನು ಧಾರಣೆ ಮಾಡಿರುವ ಹುದ್ದೆಗೆ ಅನ್ವಯವಾಗುವ 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಪಡೆಯುತ್ತಿರುವ ಮೂಲ ವೇತನ. 3. ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು, ಸರ್ಕಾರಿ/ಅನುದಾನಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಪೂರ್ಣಕಾಲಿಕ ನೌಕರರಿಗೆ ಈ ಆದೇಶಗಳು ಅನ್ವಯಿಸುತ್ತವೆ. 4. ವೇತನ ಎಂದು ಪರಿಗಣಿಸಲ್ಪಡದ ಯಾವುದೇ ಉಪಲಬ್ಧಗಳನ್ನು ಮೂಲ ವೇತನಕ್ಕೆ ಸೇರಿಸತಕ್ಕದ್ದಲ್ಲ. 5. ಈ…
ಬೆಂಗಳೂರು : ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಸಂಭವಿಸಿದ ಖಾಸಗಿ ಬಸ್ ಅಗ್ನಿ ದುರಂತದಲ್ಲಿ ಬೆಂಗಳೂರಿನ 22 ವರ್ಷದ ಯುವತಿ ಸಜೀವ ದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಯಾದ್ರಾದಿಯ ನಿವಾಸಿ 22 ವರ್ಷದ ಅನುಷಾ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗಿ ನಿನ್ನೆ ರಾತ್ರಿ ಬಸ್ ಹತ್ತಿದ್ದರು. ಇಂದು ಮುಂಜಾನೆ ಕರ್ನೂಲ್ ಹೊರವಲಯದ ಉಳಿಂದಪಾಡು ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಬೆಂಕಿಗೆ ಆಹುತಿಯಾಗಿದ್ದು, ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಮೃತಪಟ್ಟ 11 ಜನರ ಗುರುತು ಪತ್ತೆ ಹಚ್ಚಲಾಗಿದೆ. ಎಂದು ಜಿಲ್ಲಾಧಿಕಾರಿ ಡಾ. ಎ. ಸಿರಿ ದೃಢಪಡಿಸಿದ್ದಾರೆ, ಇಬ್ಬರೂ ಚಾಲಕರು ಬಸ್ನಿಂದ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು ಮತ್ತು ಎಲ್ಲಾ 11 ಶವಗಳನ್ನು ಗುರುತಿಸಲಾಗಿದೆ. ಅಪಘಾತ ಸಂಭವಿಸಿದಾಗ ವಿ ಕಾವೇರಿ ಟ್ರಾವೆಲ್ಸ್ ಬಸ್ ಸುಮಾರು 40 ಪ್ರಯಾಣಿಕರು ಮತ್ತು ಇಬ್ಬರು ಚಾಲಕರೊಂದಿಗೆ ಹೈದರಾಬಾದ್ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. ಡಿಕ್ಕಿಯ ಪರಿಣಾಮವಾಗಿ…
ಹೈದರಾಬಾದ್ : ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಸಂಭವಿಸಿದ ಖಾಸಗಿ ಬಸ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸರ್ಕಾರ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದೆ. ಶುಕ್ರವಾರ ಮುಂಜಾನೆ ಆಂಧ್ರಪ್ರದೇಶದ ಕರ್ನೂಲ್ ಹೊರವಲಯದ ಉಳಿಂದಪಾಡು ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಬೆಂಕಿಗೆ ಆಹುತಿಯಾಗಿದ್ದು, ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಮೃತಪಟ್ಟ 11 ಜನರ ಗುರುತು ಪತ್ತೆ ಹಚ್ಚಲಾಗಿದೆ. ಎಂದು ಜಿಲ್ಲಾಧಿಕಾರಿ ಡಾ. ಎ. ಸಿರಿ ದೃಢಪಡಿಸಿದ್ದಾರೆ, ಇಬ್ಬರೂ ಚಾಲಕರು ಬಸ್ನಿಂದ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು ಮತ್ತು ಎಲ್ಲಾ 11 ಶವಗಳನ್ನು ಗುರುತಿಸಲಾಗಿದೆ. ಅಪಘಾತ ಸಂಭವಿಸಿದಾಗ ವಿ ಕಾವೇರಿ ಟ್ರಾವೆಲ್ಸ್ ಬಸ್ ಸುಮಾರು 40 ಪ್ರಯಾಣಿಕರು ಮತ್ತು ಇಬ್ಬರು ಚಾಲಕರೊಂದಿಗೆ ಹೈದರಾಬಾದ್ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. ಡಿಕ್ಕಿಯ ಪರಿಣಾಮವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಹಲವರು ಒಳಗೆ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಪ್ರಯಾಣಿಕರು 35…
ಬೆಂಗಳೂರು: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಈಗ ಮತ್ತೆ ಅವಕಾಶ ನೀಡಲಾಗಿದೆ. ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಫಲಾನುಭವಿಗಳು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ahara.kar.nic.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಇನ್ನು ಯಾರೆಲ್ಲಾ ಅರ್ಹರನ್ನು ಎಪಿಎಲ್ಗೆ ಸೇರಿಸಲಾಗಿದೆಯೋ ಅವರು ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪರಿಶೀಲನೆ ಬಳಿಕ ಅರ್ಹರು ಎಂದು ತಿಳಿದರೆ ಮಾತ್ರ ಅವರಿಗೆ ಮತ್ತೆ ಬಿಪಿಎಲ್ ಕಾರ್ಡನ್ನು…












