Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮ್ಯಾಜಿಕ್ ಸಂಖ್ಯೆಯನ್ನು ದಾಟುತ್ತಿದ್ದಂತೆ ಮೂರನೇ ಬಾರಿಗೆ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ರಷ್ಯಾದ ವ್ಲಾದಿಮಿರ್ ಪುಟಿನ್ ಬುಧವಾರ ಅಭಿನಂದಿಸಿದ್ದಾರೆ. ಈ ಪ್ರಕ್ರಿಯೆಯನ್ನು ಐತಿಹಾಸಿಕ ಚುನಾವಣೆ ಎಂದು ಕರೆದ ಬೈಡನ್, ಉಭಯ ದೇಶಗಳ ನಡುವಿನ ಸ್ನೇಹವು ಬೆಳೆಯುತ್ತಿದೆ ಎಂದು ಹೇಳಿದರು. ಈ ಐತಿಹಾಸಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ ಮತ್ತು ಸುಮಾರು 650 ಮಿಲಿಯನ್ ಮತದಾರರಿಗೆ ಅಭಿನಂದನೆಗಳು. ಅಪರಿಮಿತ ಸಾಮರ್ಥ್ಯದ ಹಂಚಿಕೆಯ ಭವಿಷ್ಯವನ್ನು ನಾವು ಅನ್ಲಾಕ್ ಮಾಡುವಾಗ ಮಾತ್ರ ನಮ್ಮ ರಾಷ್ಟ್ರಗಳ ನಡುವಿನ ಸ್ನೇಹವು ಬೆಳೆಯುತ್ತಿದೆ” ಎಂದು ಬೈಡನ್ ಹೇಳಿದರು. ಅಧ್ಯಕ್ಷ ಬಿಡೆನ್ ಅವರು ಪ್ರಧಾನಿ ಮೋದಿಯವರಿಗೆ ಕರೆ ಮಾಡಿ ಎನ್ಡಿಎ ಬಹುಮತದ ಬಗ್ಗೆ ಶುಭಾಶಯಗಳನ್ನು ಕೋರಿದರು. “ನನ್ನ ಸ್ನೇಹಿತ ಅಧ್ಯಕ್ಷ @JoeBiden ಅವರಿಂದ ಕರೆ ಸ್ವೀಕರಿಸಲು ಸಂತೋಷವಾಗಿದೆ” ಎಂದು ಪಿಎಂ ಮೋದಿ ಹೇಳಿದ್ದಾರೆ. “ಭಾರತೀಯ ಪ್ರಜಾಪ್ರಭುತ್ವದ…
ನವದೆಹಲಿ:ಬುಧವಾರ (ಜೂನ್ 5) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂಡಿ ಮೈತ್ರಿಕೂಟವು ಸರ್ಕಾರದ ಮೇಲೆ ಹಕ್ಕು ಸಾಧಿಸುವುದಿಲ್ಲ ಮತ್ತು ಮೋದಿ ಸರ್ಕಾರದ ವಿರುದ್ಧ ಹೋರಾಟವನ್ನು ಮುಂದುವರಿಸುತ್ತದೆ ಎಂದು ಘೋಷಿಸಿದರು ಇಂಡಿ ಮೈತ್ರಿಕೂಟವು ಪ್ರತಿಪಕ್ಷದಲ್ಲಿ ಕುಳಿತುಕೊಳ್ಳುತ್ತದೆ ಮತ್ತು ಕೇಂದ್ರದಲ್ಲಿ ಸರ್ಕಾರ ರಚಿಸಲು ಯಾವುದೇ ಪ್ರಯತ್ನಗಳನ್ನು ಮಾಡುವುದಿಲ್ಲ. ಇಂದು ಸಂಜೆ ತಮ್ಮ ನಿವಾಸದಲ್ಲಿ ನಡೆದ ಇಂಡಿ ಮೈತ್ರಿ ಸಭೆಯ ಮುಕ್ತಾಯದ ನಂತರ ಕಾಂಗ್ರೆಸ್ ಅಧ್ಯಕ್ಷರು ಘೋಷಿಸಿದರು. “ನಾವು ರಾಜಕೀಯ ಪರಿಸ್ಥಿತಿಯನ್ನು ವಿವರವಾಗಿ ಚರ್ಚಿಸಿದ್ದೇವೆ ಮತ್ತು ಅಂತಿಮವಾಗಿ ನಾವು ಒಂದೇ ಧ್ವನಿಯಲ್ಲಿ ಹೇಳಬೇಕು ಎಂದು ತೀರ್ಮಾನಿಸಿದ್ದೇವೆ: “ನಮ್ಮ ಮೈತ್ರಿಕೂಟಕ್ಕೆ ದೊರೆತ ಅಪಾರ ಬೆಂಬಲಕ್ಕಾಗಿ ಭಾರತದ ಬಣದ ಘಟಕಗಳು ಭಾರತದ ಜನರಿಗೆ ಧನ್ಯವಾದ ಅರ್ಪಿಸುತ್ತವೆ. ಜನರ ಆದೇಶವು ಬಿಜೆಪಿ ಮತ್ತು ಅವರ ದ್ವೇಷ, ಭ್ರಷ್ಟಾಚಾರ ಮತ್ತು ಅಭಾವದ ರಾಜಕೀಯಕ್ಕೆ ಸೂಕ್ತ ಉತ್ತರವನ್ನು ನೀಡಿದೆ” ಎಂದು ಖರ್ಗೆ ಹೇಳಿದರು. “ಇದು ಭಾರತದ ಸಂವಿಧಾನವನ್ನು ರಕ್ಷಿಸಲು ಮತ್ತು ಬೆಲೆ ಏರಿಕೆ, ನಿರುದ್ಯೋಗ ಮತ್ತು ಕ್ರೋನಿ ಕ್ಯಾಪಿಟಲಿಸಂ ವಿರುದ್ಧ ಮತ್ತು…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವನೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸುವಂತೆ ಸಚಿವ.ಬಿ.ನಾಗೇಂದ್ರಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಬುಧವಾರ ತಡರಾತ್ರಿ ಹಿರಿಯ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಈ ಸಭೆಗೆ ನಾಗೇಂದ್ರ ಅವರನ್ನೂ ಕರೆಸಿಕೊಂಡಿದ್ದರು. ಈ ವೇಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಸ್ ಐಟಿ ಈಗಾಗಲೇ ತನಿಖೆ ನಡೆಸುತ್ತಿದೆ. ಅದರ ಜೊತೆಗೆ 50 ಕೋಟಿ ರೂ. ಗೂ ಹೆಚ್ಚಿನ ಹಣ ದುರಪಯೋಗವಾಗಿರುವ ಕಾರಣದಿಂದ ಸಿಬಿಐ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ.
ಉಡುಪಿ : ಹೃದಯಾಘಾತವಾದರೂ ಸಮಯ ಪ್ರಜ್ಞೆ ಮೆರೆದ ಶಾಲಾ ಬಸ್ ಚಾಲಕನೊಬ್ಬ ಸುರುಕ್ಷಿತವಾಗಿ ಮಕ್ಕಳ ಶಾಲಾ ಬಸ್ ನಿಲ್ಲಸಿ ಮಕ್ಕಳ ಜೀವ ಉಳಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಪೆರಂಪಳ್ಳಿ ಸಮೀಪ ಶಾಲಾ ಬಸ್ ಚಲಾಯಿಸುತ್ತಿದ್ದಾಗಲೇ ಲಘು ಹೃದಯಾಘಾತವಾಗಿದೆ. ಈ ವೇಳೆ ಸಮಯಪ್ರಜ್ಞೆ ಮೆರೆದ ಚಾಲಕ ಮೆಲ್ವಿನ್ ಡಿಸೋಜಾ ಬಸ್ ಅನ್ನು ಸುರಕ್ಷಿತವಾಗಿ ನಿಲ್ಲಿಸಿ ಮಕ್ಕಳ ಜೀವ ಉಳಿಸಿದ್ದಾರೆ. ಬ್ರಹ್ಮಾವರದ ಖಾಸಗಿ ಶಾಲೆ ಬಸ್ಸಿನ ಚಾಲಕ ಮೆಲ್ವಿನ್ ಡಿಸೋಜಾ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಲೆ ದೀಢೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಬಸ್ ನಿಯಂತ್ರಣ ತಪ್ಪಿದ್ದರೂ ಸಾವರಿಸಿಕೊಂಡು ಬಸ್ ನ್ನು ರಸ್ತೆ ಬದಿ ನಿಲ್ಲಿಸಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಉತ್ತರಾಖಂಡದ ಸಹಸ್ರತಾಲ್ ಗೆ ಟ್ರೆಕ್ಕಿಂಗ್ ಗೆಂದು ತೆರಳಿದ್ದಾಗ ಪ್ರತಿಕೂಲ ಹವಾಮಾನದಿಂದಾಗಿ ರಾಜ್ಯದ 9 ಜನ ಚಾರಣಿಗರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಉಳಿದ 13 ಮಂದಿಯನ್ನು ಭಾರತೀಯ ವಾಯುಪಡೆಯು ಕಾರ್ಯಾಚರಣೆ ನಡೆಸಿ ರಕ್ಷಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಸಾವಿಗೀಡಾದವರ ಮೃತದೇಹಗಳನ್ನು ಆದಷ್ಟು ಶೀಘ್ರ ಕುಟುಂಬದವರಿಗೆ ತಲುಪಿಸಲಾಗುವುದು ಮತ್ತು ರಕ್ಷಿಸಲ್ಪಟ್ಟಿರುವ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು. ಇದಕ್ಕಾಗಿ ನಮ್ಮ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದೆ. ಮೃತರ ಸಂಖ್ಯೆ 9ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ನನ್ನ ಸಾಂತ್ವನಗಳು ಎಂದು ತಿಳಿಸಿದ್ದಾರೆ. ಡೆಹ್ರಾಡೋನ್ ನಲ್ಲಿ ರಕ್ಷಣಾ ಕಾರ್ಯದ ಉಸ್ತುವಾರಿ ನಿರ್ವಹಿಸುತ್ತಿರುವ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿ, ಧೈರ್ಯ ತುಂಬಿದ್ದೇನೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು.…
ಬೆಂಗಳೂರು : ಬೆಂಗಳೂರು ಕಳೆದ ಕೆಲವು ತಿಂಗಳುಗಳಿಂದ ವಿವಿಧ ಕಾರಣಗಳಿಗಾಗಿ ಸುದ್ದಿಯಲ್ಲಿದೆ, ಆದರೆ ಅದಕ್ಕಿಂತ ಹೆಚ್ಚಾಗಿ, ಬೆಂಗಳೂರು ನೀರಿನ ಬಿಕ್ಕಟ್ಟು ಮತ್ತು ಬೆಂಗಳೂರು ಬಿಸಿಗಾಳಿಯಿಂದಾಗಿ, ಇದು ನಗರದ ನಿವಾಸಿಗಳಿಗೆ ಸಾಕಷ್ಟು ಸಮಸ್ಯೆಗಳನ್ನು ಉಂಟುಮಾಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಎಸ್ಡಬ್ಲ್ಯೂಬಿ) ಜೂನ್ 6 ಮತ್ತು ಜೂನ್ 7, 2024 ರಂದು ಎರಡು ದಿನಗಳ ಕಾಲ ಬೆಂಗಳೂರು ನೀರು ಸರಬರಾಜು ಕಡಿತವನ್ನು ಘೋಷಿಸಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಎಸ್ ಡಬ್ಲ್ಯೂಬಿ) ಜೂನ್ 6 ಮತ್ತು ಜೂನ್ 7, 2024 ರಂದು ನೀರಿನ ಕಡಿತವನ್ನು ಘೋಷಿಸಿದೆ. ಕಾವೇರಿ 5ನೇ ಹಂತದ ಯೋಜನೆಯಲ್ಲಿ ಮಂಡಳಿಯ ಕಾಮಗಾರಿಯೇ ನೀರಿನ ಕಡಿತಕ್ಕೆ ಮುಖ್ಯ ಕಾರಣ. ಇದೇ ಕಾರಣಕ್ಕಾಗಿ, ಮಂಡಳಿಯು ಜೂನ್ 6 ರಂದು ತನ್ನ ಎಲ್ಲಾ ಪಂಪಿಂಗ್ ಕೇಂದ್ರಗಳನ್ನು ಮುಚ್ಚುತ್ತದೆ ಮತ್ತು ಈ ಬಗ್ಗೆ ಈಗಾಗಲೇ ಆ ಪ್ರದೇಶಗಳ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಆರಂಭದಲ್ಲಿ ಜೂನ್ 4 ಮತ್ತು ಜೂನ್ 5…
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮಳೆ ಸಂಬಂಧಿ ಅನಾಹುತಕ್ಕೆ ರಾಜ್ಯಾದ್ಯಂತ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮಳೆ ಸಂಬಂಧಿ ಅನಾಹುತಕ್ಕೆ ನಾಲ್ವರು ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಧ್ಯಾವಮ್ಮ (೫೦) ಹಾಗೂ ಪುಟ್ಟಮ್ಮ (೫೦) ಸಿಡಿಲಿಗೆ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿಯಲ್ಲಿ ಕುರಿ ಕಾಯುತ್ತಿದ್ದ ಡಾಬಗಲ್ ಮುದ್ದಾನೆ (೧೫) ಹಾಗೂ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಿಕಿ ಗ್ರಾಮದಲ್ಲಿ ಅಮಘೋ ಶಿವನಿಂಗ (೪೦) ಸಿಡಿಲಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಶುರುವಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಬೆಂಗಳೂರು, ಹಾಸನ, ಮೈಸೂರು, ತುಮಕೂರು, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಇನ್ನೂ ನಾಲ್ಕು…
ಬೆಂಗಳೂರು : ಮೇಲ್ಮನೆಯ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದೆ. ಇಂದು ಬೆಳಗ್ಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಚುನಾವಣಾ ಕಣದಲ್ಲಿ ಒಟ್ಟು 78 ಅಭ್ಯರ್ಥಿಗಳಿದ್ದು, ಇಂದು ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಈಶಾನ್ಯ ಪದವೀಧರರ, ಬೆಂಗಳೂರು ಪದವೀಧರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ, ಆಗ್ನೇಯ ಶಿಕ್ಷಕರ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಬುಧವಾರ ಪುರುಷತ್ವ ಪರೀಕ್ಷೆಗೊಳಪಡಿಸಿದೆ. ಪ್ರಜ್ವಲ್ ರೇವಣ್ಣ ಅವರ ವೀರ್ಯ, ರಕ್ತ ಮಾದರಿ ಸಂಗ್ರಹಿಸಲಾಗಿದೆ. ಅವರು ಲೈಂಗಿಕ ಕ್ರಿಯೆ ನಡೆಸುವ ಸಾಮರ್ಥ್ಯ ಖಚಿತಪಡಿಸಿಕೊಳ್ಳಲು ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಆವರಣದ ಆಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ವೈದ್ಯಕೀಯ ತಪಾಸಣೆ ನಡೆದಿದೆ. ಈ ಪರೀಕ್ಷಾ ವರದಿ ಇನ್ನೊಂದು ವಾರದಲ್ಲಿ ಎಸ್ ಐಟಿ ಗೆ ಸಲ್ಲಿಕೆಯಾಗಲಿದೆ ಎಂದು ತಿಳಿದುಬಂದಿದೆ. ಎಸ್ ಐಟಿ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಪ್ರಜ್ವಲ್ ರೇವಣ್ಣ ಅವರನ್ನು ಪರುಷತ್ವ ಪರೀಕ್ಷೆಗೆ ಒಳಪಡಿಸಿದೆ. ಇದಕ್ಕಾಗಿ ತಜ್ಞರ ತಂಡ ರಚಿಸಲಾಗಿದೆ, ಈ ತಜ್ಞರ ತಂಡ ತನ್ನ ವರದಿಯನ್ನು ಎಸ್ ಐಟಿಗೆ ಸಲ್ಲಿಸಲಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಲೈಂಗಿಕ ಕ್ರಿಯೆ ನಡೆಸಲು ದೈಹಿಕವಾಗಿ ಆರೋಪಿ ಸಾಮರ್ಥ್ಯ ಹೊಂದಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಪುರುಷತ್ವ ಪರೀಕ್ಷೆ ಅಗತ್ಯವಾಗಿದೆ. ಈ ಕಾರಣಕ್ಕೆ ಎಸ್ ಐಟಿ…
ಬೆಂಗಳೂರು : 2024-25ನೇ ಸಾಲಿಗೆ ಶಿಕ್ಷಣ ಹಕ್ಕು ಕಾಯಿದೆ-2009ರ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ ಪ್ರವೇಶ ಪ್ರಕ್ರಿಯೆಯ ದಿನಾಂಕ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2024-25ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ ಪ್ರವೇಶ ಪ್ರಕ್ರಿಯೆ ನಡೆಸಲು ಉಲ್ಲೇಖ-04ರ ಸುತ್ತೋಲೆಯನ್ವಯ ಕ್ರಮವಹಿಸಲಾಗಿದೆ. ಕಾರ್ಯಸೂಚಿಯನ್ವಯ ಆರ್.ಟಿ.ಇ ಅಡಿ ಮೊದಲ ಸುತ್ತಿನ ಆನ್ಲೈನ್ ಲಾಟರಿ ಪ್ರಕ್ರಿಯೆಯನ್ನು 05.06.2024 ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಆರ್.ಟಿ.ಇ ಮೊದಲ ಸುತ್ತಿನ ಆನ್ಲೈನ್ ಲಾಟರಿ ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ದಿನಾಂಕ 07.06.2024 ನಡೆಸಲಾಗುವುದು. ಪರಿಷ್ಕೃತ ವೇಳಾಪಟ್ಟಿಯನ್ನು ಲಗತ್ತಿಸಿದೆ.












