Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ‘ಮಾತೃತ್ವದ ರಜೆ ಮಹಿಳೆಯರ ಸಾಂವಿಧಾನಿಕ ಹಕ್ಕು. ಆದ್ದರಿಂದ 3ನೇ ಮಗುವಿಗೂ ಅದನ್ನು ನೀಡಬೇಕು’ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭೂಯಾನ್ ಅವರ ಪೀಠವು ಯಾವುದೇ ಸಂಸ್ಥೆಯು ಮಹಿಳೆಯ ಹೆರಿಗೆ ರಜೆಯ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ಎರಡನೇ ಮದುವೆಯಿಂದ ಮಗು ಜನಿಸಿದ ನಂತರ ಹೆರಿಗೆ ರಜೆ ನಿರಾಕರಿಸಲ್ಪಟ್ಟ ತಮಿಳುನಾಡು ಸರ್ಕಾರಿ ಮಹಿಳಾ ಶಿಕ್ಷಕಿಯೊಬ್ಬರು ಸಲ್ಲಿಸಿದ ಅರ್ಜಿಯ ಮೇರೆಗೆ ಈ ಮಹತ್ವದ ಆದೇಶ ಬಂದಿದೆ. ತನ್ನ ಮೊದಲ ಮದುವೆಯಿಂದ ಇಬ್ಬರು ಮಕ್ಕಳಿದ್ದಾರೆ ಎಂಬ ಕಾರಣಕ್ಕೆ ತನ್ನ ಹೆರಿಗೆ ರಜೆ ನಿರಾಕರಿಸಲಾಗಿದೆ ಎಂದು ಮಹಿಳೆ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ತಮಿಳುನಾಡು ಮೊದಲ ಎರಡು ಮಕ್ಕಳಿಗೆ ಮಾತ್ರ ಹೆರಿಗೆ ರಜೆ ಅಥವಾ ಪ್ರಯೋಜನಗಳನ್ನು ವಿಸ್ತರಿಸುತ್ತದೆ ಎಂಬ ನಿಯಮವನ್ನು ಹೊಂದಿದೆ. ಅರ್ಜಿದಾರರು ತಮ್ಮ ಮೊದಲ ಮದುವೆಯಿಂದ ತಮ್ಮ ಇಬ್ಬರು ಮಕ್ಕಳಿಗೆ ಯಾವುದೇ ಹೆರಿಗೆ ರಜೆ ಅಥವಾ ಪ್ರಯೋಜನಗಳನ್ನು ಪಡೆದಿಲ್ಲ ಎಂದು…
ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆಯು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಮೇ 29ಕ್ಕೆ ಶಾಲೆಗಳು ಆರಂಭವಾಗಲಿದ್ದು, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಅಂದು ಶಾಲೆಗೆ ಹಾಜರಾಗಿ ಆರಂಭೋತ್ಸವದಲ್ಲಿ ಪಾಲ್ಗೊಳ್ಳಬೇಕು. ಶಾಲೆ ಗಳಲ್ಲಿನ ಪಿಎಂ ಪೋಷಣ್, ಕ್ಷೀರಭಾಗ್ಯ, ಪಠ್ಯಪುಸ್ತಕ, ಸಮವಸ್ತ್ರಗಳ ವಿತರಣೆ ಮುಂತಾದ ಕಾರ್ಯಕ್ರಮಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಕ್ರಿಸ್ಮಸ್ ಸಂದರ್ಭದಲ್ಲಿ ರಜೆ ನೀಡುವ ಉದ್ದೇಶ ಹೊಂದಿರುವ ಶಿಕ್ಷಣ ಸಂಸ್ಥೆಗಳು ಈ ಬಗ್ಗೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸ ಬೇಕು. ಉಪನಿರ್ದೇಶಕರು ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಕ್ರಿಸ್ಮಸ್ ಸಂದರ್ಭದಲ್ಲಿ ನೀಡುವ ರಜೆಯನ್ನು ಅಕ್ಟೋಬರ್ ತಿಂಗಳ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.
ನವದೆಹಲಿ: ಬೆಟ್ಟಿಂಗ್ ಅಥವಾ ಜೂಜಾಟದ ಯಾವುದೇ ಅಂಶವಿಲ್ಲದೆ, ಕೇವಲ ಮೋಜು ಮತ್ತು ಮನರಂಜನೆಗಾಗಿ ಇಸ್ಪೀಟೆಲೆಗಳನ್ನು ಆಡುವುದು ನೈತಿಕ ತಪ್ಪಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಕರ್ನಾಟಕದಲ್ಲಿ ಸಹಕಾರಿ ವಸತಿ ಸಂಘದ ಸದಸ್ಯರ ಚುನಾವಣೆಗೆ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿರುವಾಗ ಈ ತೀರ್ಪು ಬಂದಿದೆ. ಕರ್ನಾಟಕದ ಸರ್ಕಾರಿ ಪಿಂಗಾಣಿ ಕಾರ್ಖಾನೆ ನೌಕರರ ವಸತಿ ಸಹಕಾರ ಸಂಘ ಲಿಮಿಟೆಡ್ನ ನಿರ್ದೇಶಕರ ಮಂಡಳಿಗೆ ಆಯ್ಕೆಯಾದ ಹನುಮಂತರಾಯಪ್ಪ ವೈಸಿ ಅವರಿಗೆ ಈ ಪ್ರಕರಣ ಸಂಬಂಧಿಸಿದೆ. ಹಲವು ವರ್ಷಗಳ ಹಿಂದೆ, ರಸ್ತೆಬದಿಯಲ್ಲಿ ಇತರ ಜನರೊಂದಿಗೆ ಇಸ್ಪೀಟೆಲೆಗಳನ್ನು ಆಡಿದ್ದಕ್ಕಾಗಿ ಅವರಿಗೆ ₹200 ದಂಡ ವಿಧಿಸಲಾಗಿತ್ತು ಎಂಬ ಕಾರಣಕ್ಕೆ ಅವರ ಆಯ್ಕೆಯನ್ನು ಪ್ರಶ್ನಿಸಲಾಯಿತು. ಮುಖ್ಯವಾಗಿ, ಯಾವುದೇ ವಿಚಾರಣೆ ನಡೆಯಲಿಲ್ಲ, ಮತ್ತು ಬೆಟ್ಟಿಂಗ್ ಅಥವಾ ಜೂಜಾಟ ಒಳಗೊಂಡಿತ್ತು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಜೂಜಾಟ ಅಥವಾ ಬೆಟ್ಟಿಂಗ್ ಇಲ್ಲದೆ ಸಾರ್ವಜನಿಕವಾಗಿ ಇಸ್ಪೀಟೆಲೆಗಳನ್ನು ಆಡುವುದು ಸಾರ್ವಜನಿಕ ಹುದ್ದೆಗಳು ಅಥವಾ ವಿಶ್ವಾಸಾರ್ಹ ಸ್ಥಾನಗಳಿಂದ ಅನರ್ಹತೆಗೆ ಕಾರಣವಾಗುವ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್…
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ಗೆ ವ್ಯಕ್ತಿಯೊಬ್ಬರು ಬಲಿಯಾದ ಬೆನ್ನಲ್ಲೇ, ಸೋಂಕಿನ ಲಕ್ಷಣ ಹೊಂದಿರುವವರನ್ನು ಪರೀಕ್ಷೆಗೊಳಪಡಿಸಲು ಸರ್ಕಾರ ಸೂಚಿಸಿದೆ. ಈ ನಡುವೆ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 47ಕ್ಕೆ ಏರಿಕೆ ಆಗಿರುವುದು ಕೊಂಚ ಆತಂಕ ಮೂಡಿಸಿರುವ ನಡುವೆಯೇ ಬೆಂಗಳೂರು ಸೇರಿ 10 ಕಡೆ ಕೋವಿಡ್ ಟೆಸ್ಟಿಂಗ್ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ 47 ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಬೆಂಗಳೂರು ಒಂದರಲ್ಲೇ 32 ಪ್ರಕರಣ ದಾಖಲಾಗಿವೆ. ಕೋವಿಡ್ -19 ರ ತಪಾಸಣಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಮತ್ತು ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸುವ ಕುರಿತು ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ. ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, RT-PCR & RAT ಕೋವಿಡ್-19 ರ ಪರೀಕ್ಷೆ ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದ್ದು, ಎಲ್ಲಾ SARI ಪ್ರಕರಣಗಳಿಗೆ…
ಬೆಂಗಳೂರು : ಮುಂಗಾರು ಕರ್ನಾಟಕ ಪ್ರವೇಶಿಸಿದ ಒಂದೇ ದಿನದಲ್ಲಿ ರಾಜ್ಯದ ವಿವಿಧೆಡೆ ಮಳೆ ಆರ್ಭಟ ತೀವ್ರಗೊಂಡಿದೆ. ಕರಾವಳಿ, ಮಲೆನಾಡು ಹಾಗೂ ಕೊಡಗಿನ ವ್ಯಾಪ್ತಿಯಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲೆಯ ಶಾಲೆ, ಕಾಲೇಜಿಗೆ 2 ದಿನ ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ವಿವಿ ವ್ಯಾಪ್ತಿಯ ಎಲ್ಲ ಘಟಕ, ಸರ್ಕಾರಿ, ಸಂಯೋಜಿತ ಮಹಾ ವಿದ್ಯಾಲಯಗಳಿಗೂ ಮೇ 26 – 27 ರಜೆ ಘೋಷಣೆ ಮಾಡಲಾಗಿದೆ. ಇಂದಿನಿಂದ ಮುಂದಿನ ಮೂರು ದಿನಕ್ಕೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್, ಮೈಸೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮುಂಗಾರು ಮಳೆ ಪದಾರ್ಪಣೆಯಾಗಿ ಒಂದೇ ದಿನಕ್ಕೆ ಕರಾವಳಿ, ಮಲೆನಾಡು ಸೇರಿ ಒಳನಾಡಿನ ವಿವಿಧ ಜಿಲ್ಲೆಗಳನ್ನು ಪ್ರವೇಶಿಸಿದ್ದು, ಉತ್ತಮ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಿನ್ನೆ ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ…
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕರೋನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ ಯಾಗಿ, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಮಹಾಮಾರಿ ಕರೋನಾಗೆ ರಾಜ್ಯದಲ್ಲಿ ಎರಡನೇ ಬಲಿಯಾದಂತಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆಯು ಟೆಸ್ಟ್ ಕಡ್ಡಾಯಗೊಳಿಸಿದೆ. ರಾಜ್ಯದಲ್ಲಿ ಸದ್ಯ ಕರೋನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 46 ಮಂದಿ ಹೋಮ್ ಐಸೋಲೇಶನಲ್ಲಿದ್ದು, ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ 24 ಗಂಟೆಯಲ್ಲಿ 104 ಮಂದಿಯನ್ನು ಕರೋನಾ ಪರೀಕ್ಷೆಗೆ ಒಳಪಡಿಸಿದ್ದು, 9 ಹೊಸ ಪ್ರಕರಣ ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಪಾಸಿಟಿವಿ ದರ ಶೇ.8.65 ನಷ್ಟಿದೆ. ಕೇರಳ ಮತ್ತು ಆಂಧ್ರಪ್ರದೇಶದಲ್ಲೂ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿವೆ. ರಾಜ್ಯದಲ್ಲಿ ಯಾವುದೇ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : 2025-26ನೇ ಸಾಲಿನ `ವರ್ಗಾವಣೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!
ಬೆಂಗಳೂರು : 2025-26ನೇ ಸಾಲಿಗೆ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸುವ ಸಲುವಾಗಿ ಈ ಕೆಳಕಂಡಂತೆ ಆದೇಶಿಸಲಾಗಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಗಾಗಿ 2025-26ನೇ ಸಾಲಿನ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಚಿಸುತ್ತದೆ. ಈ ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ. 2. ವಿವರಣೆ:-ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು,- (1) “ಸಕ್ಷಮ ಪ್ರಾಧಿಕಾರ” ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ. (2) “ವರ್ಗಾವಣೆ” ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಛೇರಿಯ ಪ್ರಸ್ತುತ ಇರುವ ಕೇಂದ್ರ ಸ್ನಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ ಕಛೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ. (3) “ಚಲನವಲನ” ಎಂದರೆ ನಗರ…
ಬೆಂಗಳೂರು : ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲ್ಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮೇ.26ರ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ…
ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದು ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮುಂದಿನ ಮೂರು ದಿನಕ್ಕೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್, ಮೈಸೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮುಂಗಾರು ಮಳೆ ಪದಾರ್ಪಣೆಯಾಗಿ ಒಂದೇ ದಿನಕ್ಕೆ ಕರಾವಳಿ, ಮಲೆನಾಡು ಸೇರಿ ಒಳನಾಡಿನ ವಿವಿಧ ಜಿಲ್ಲೆಗಳನ್ನು ಪ್ರವೇಶಿಸಿದ್ದು, ಉತ್ತಮ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಿನ್ನೆ ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ ಸೇರಿ ಮೊದಲಾದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಮುಂಗಾರು ಮಾರುತಗಳು ಪ್ರಬಲವಾಗಿರುವುದರಿಂದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.