Author: kannadanewsnow57

ನವದೆಹಲಿ: ಕಾಂಗ್ರೆಸ್ ಮತ್ತು ಬಿಜೆಪಿ ನಕಲಿ ಸರಕುಗಳು, ನಕಲಿ ಘೋಷಣೆಗಳು ಮತ್ತು ನಕಲಿ ಭರವಸೆಗಳನ್ನು ವಿತರಿಸುವ “ನಕಲಿ ಕಾರ್ಖಾನೆ” ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಆರೋಪಿಸಿದ್ದಾರೆ. ಸಬರ್ಕಾಂತ ಜಿಲ್ಲೆಯ ಹಿಮ್ಮತ್ನಗರದಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, “ಅವರು ಎಲ್ಲವನ್ನೂ ದಣಿದಿದ್ದಾರೆ ಮತ್ತು ಆದ್ದರಿಂದ ನಕಲಿ ವೀಡಿಯೊದ ಹೊಸ ಕರೋಬಾರ್ (ವ್ಯವಹಾರ) ಅನ್ನು ಪ್ರಾರಂಭಿಸಿದ್ದಾರೆ. ಇಡೀ ವ್ಯವಹಾರವು ನಕಲಿಯಾಗಿದೆ. ಯಾರೂ ಅವರ ಮಾತನ್ನು ಕೇಳುತ್ತಿಲ್ಲ, ಅವರು ಮೋದಿಯವರ ಮುಖವನ್ನು ತೋರಿಸುತ್ತಿದ್ದಾರೆ ಮತ್ತು ಅವರ ಬಾಯಿಗೆ ನಕಲಿ ವಿಷಯಗಳನ್ನು ಹಾಕುತ್ತಿದ್ದಾರೆ” ಎಂದು ಅವರು ಹೇಳಿದರು. ತಾವು ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ನಕಲಿ ವೀಡಿಯೊಗಳನ್ನು ಪ್ರಸಾರ ಮಾಡುವ ಮೂಲಕ ಶಾಂತಿಯುತ ಚುನಾವಣಾ ಪ್ರಕ್ರಿಯೆಯನ್ನು ಭಂಗಗೊಳಿಸಲು ಪ್ರತಿಪಕ್ಷಗಳು ಪಿತೂರಿ ನಡೆಸುತ್ತಿವೆ ಎಂದು ಮೋದಿ ಆರೋಪಿಸಿದ ಎರಡು ದಿನಗಳ ನಂತರ ಈ ಹೇಳಿಕೆಗಳು ಬಂದಿವೆ. “ಕಾಂಗ್ರೆಸ್ ಮತ್ತು ಅದರ ಭಾರತ ಬಣವು ನಕಲಿ ಕಾರ್ಖಾನೆಯಾಗಿ ಮಾರ್ಪಟ್ಟಿದೆ. ಅವರು ತಮ್ಮನ್ನು…

Read More

ನವದೆಹಲಿ : ಏಪ್ರಿಲ್ ನಲ್ಲಿ 2.10 ಲಕ್ಷ ಕೋಟಿ ರೂ. ಸರಕು ಹಾಗೂ ಸೇವಾ ತೆರಿಗೆ (ಜಿಎಸ್ ಟಿ) ಸಂಗ್ರಹವಾಗಿದ್ದು, ಸಾರ್ವಕಾಲಿಕ ದಾಖಲೆ ಸ್ಥಾಪಿಸಿದೆ. ಈ ಬಗ್ಗೆ ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದ್ದು, ದೇಶೀಯ ವಹಿವಾಟು ಮತ್ತು ಆಮದುಗಳ ಬಲವಾದ ಹೆಚ್ಚಳದಿಂದ ಶೇ 12.4 ರಷ್ಟು ಜಿಎಸ್ ಟಿ ಸಂಗ್ರಹ ಏರಿಕೆಯಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇದು 12.4% ಹೆಚ್ಚಳವಾಗಿದ್ದು, ಜಿಎಸ್ಟಿ ಸಂಗ್ರಹವು 1.87 ಲಕ್ಷ ಕೋಟಿ ರೂ.ಗೆ ಆಗಿತ್ತು. ಈ ಹಿಂದೆ ಏಪ್ರಿಲ್ 2023 ರಲ್ಲಿ 1.87 ಲಕ್ಷ ಕೋಟಿ ರೂ.ಗಳ ಸಂಗ್ರಹದೊಂದಿಗೆ ದಾಖಲೆ ನಿರ್ಮಿಸಲಾಗಿತ್ತು. ಜಿಎಸ್ಟಿ ಸಂಗ್ರಹದಲ್ಲಿನ ಬೆಳವಣಿಗೆಯು ಮುಖ್ಯವಾಗಿ ದೇಶೀಯ ವಹಿವಾಟುಗಳಲ್ಲಿ 13.4% ಹೆಚ್ಚಳ ಮತ್ತು ಆಮದುಗಳಲ್ಲಿ 8.3% ಹೆಚ್ಚಳವಾಗಿದೆ ಎಂದು ಸಚಿವಾಲಯ ತಿಳಿಸಿದೆ. ಮರುಪಾವತಿಯನ್ನು ಲೆಕ್ಕಹಾಕಿದ ನಂತರ, ಏಪ್ರಿಲ್ 2024 ರ ನಿವ್ವಳ ಜಿಎಸ್ಟಿ ಆದಾಯವು 1.92 ಲಕ್ಷ ಕೋಟಿ ರೂ.ಗಳಷ್ಟಿದೆ, ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 17.1%…

Read More

ನವದೆಹಲಿ:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಪಕ್ಷದ ಪ್ರಧಾನ ಕಚೇರಿಯಲ್ಲಿ ಹತ್ತು ದೇಶಗಳ ಹದಿನೆಂಟು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಬಿಜೆಪಿ ಆಹ್ವಾನಿಸಿದ ನಿಯೋಗವು ಪಕ್ಷದ ಚುನಾವಣಾ ಪ್ರಚಾರದ ಬಗ್ಗೆ ಮೊದಲ ಅನುಭವ ಮತ್ತು ಒಳನೋಟಗಳನ್ನು ಪಡೆಯಲು ಭಾರತಕ್ಕೆ ಆಗಮಿಸಿತು. ಮಾರಿಷಸ್ನ ಮಾರಿಷಸ್ ಉಗ್ರಗಾಮಿ ಚಳವಳಿಯನ್ನು ಪ್ರತಿನಿಧಿಸುವ ವಿಜಯ್ ಮಖಾನ್ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು, ಅವರ ಅನುಭವವು ಅಸಾಧಾರಣವಾಗಿದೆ ಎಂದು ಹೇಳಿದರು. ಅವರು ಸ್ಥಾಪಿಸಿದ ಸಂಸ್ಥೆಯಿಂದ ಪ್ರಭಾವಿತರಾದರು. “ಇದೊಂದು ವಿಶಿಷ್ಟ ಅನುಭವವಾಗಿತ್ತು. ಸಂವಾದಾತ್ಮಕ ಸೆಷನ್ ಗಳು ತುಂಬಾ ಆಸಕ್ತಿದಾಯಕ ಮತ್ತು ಮಾಹಿತಿಯುಕ್ತವಾಗಿದ್ದವು. ಈ ಕಾರ್ಯಕ್ಕಾಗಿ ಯಾವ ರೀತಿಯ ಸಂಘಟನೆಯನ್ನು ಸ್ಥಾಪಿಸಲಾಗಿದೆ ಎಂದು ನಾನು ತುಂಬಾ ಪ್ರಭಾವಿತನಾಗಿದ್ದೇನೆ. ಪಕ್ಷಗಳು ತಮ್ಮನ್ನು ತಾವು ಹೇಗೆ ಪ್ರಸ್ತುತಪಡಿಸಿಕೊಂಡಿವೆ ಎಂಬುದು ಸೇರಿದಂತೆ ಭಾರತದ ಸಂಸ್ಥೆಗಳು ಅತ್ಯುತ್ತಮವಾಗಿವೆ” ಎಂದು ಅವರು ಎಎನ್ಐಗೆ ತಿಳಿಸಿದರು. “ನಾನು ಪತ್ರಿಕೆಗಳ ಮೂಲಕ ಚುನಾವಣೆಗಳನ್ನು ಗಮನಿಸುತ್ತಿದ್ದರೂ, ಬಿಜೆಪಿಯಿಂದ ನಾನು ಪಡೆದ ಅನುಭವವು…

Read More

ಶಿವಮೊಗ್ಗ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಇಂದು ಶಿವಮೊಗ್ಗ ಹಾಗೂ ರಾಯಚೂರಿಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 12 ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಬಳಿಕ 2.30 ಕ್ಕೆ ರಾಯಚೂರಿಗೆ ತೆರಳಿ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

Read More

ದಾವಣಗೆರೆ : ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಸ್ ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಿಲುಕಿರುವ ಪ್ರಜ್ವಲ್ ರೇವಣ್ಣಗೆ ಫಾರಂ -41 ಎ ಜಾರಿಗೊಳಿಸಿದ್ದು, ನೋಟಿಸ್ ಜಾರಿಗೊಂಡ 24 ಗಂಟೆಯಲ್ಲೇ ತನಿಕೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಈ ನಡುವೆ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರ ಪರವಾಗಿ ಅರುಣ್ ಎಸ್ಐಟಿಗೆ ಮನವಿ ಮಾಡಿಕೊಂಡಿದ್ದು 7 ದಿನಗಳ ಕಾಲ ಕಾಲಾವಕಾಶ ನೀಡಿ ಎಂದು ಪ್ರಜ್ವಲ್ ರೇವಣ್ಣ ಪರ ವಕೀಲ ಜಿ ಅರುಣ್ ಅವರು ಎಸ್ಐಟಿಗೆ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಶಾಕ್ ನೀಡಿದೆ. ಮೇ.5ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಬಿಸಿಗಾಳಿ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಡ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೇಂದ್ರ ಹವಾಮಾನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ದಿನ 2 (02.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹೇಳಿದೆ. ದಿನ 3 (03.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು,…

Read More

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರ ಪರವಾಗಿ ಅರುಣ್ ಎಸ್ಐಟಿಗೆ ಮನವಿ ಮಾಡಿಕೊಂಡಿದ್ದು 7 ದಿನಗಳ ಕಾಲ ಕಾಲಾವಕಾಶ ನೀಡಿ ಎಂದು ಪ್ರಜ್ವಲ್ ರೇವಣ್ಣ ಪರ ವಕೀಲ ಜಿ ಅರುಣ್ ಅವರು ಎಸ್ಐಟಿಗೆ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹೊಳೆನರಸೀಪುರದ ಮನೆ ಬಾಗಿಲಿಗೆ ನಿನ್ನೆ ರಾತ್ರಿ ಎಸ್ಐಟಿ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಪ್ರಜ್ವಲ್ ವಿದೇಶದಲ್ಲಿರುವುದರಿಂದ ಕಾಲಾವಕಾಶವನ್ನು ಕೇಳಿದ್ದಾರೆ. ಪ್ರಜ್ವಲ್ ಪರವಾಗಿ ನಾನು ಎಸ್ ಐ ಟಿ ಗೆ ಕಾಲಾವಕಾಶ ಕೇಳಿದ್ದೇನೆ. ಏಳು ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ ಎಂದರು. ಅಲ್ಲದೆ ಪ್ರಕರಣದ ನಂತರ ಮೊದಲ ಬಾರಿಗೆ ಸಂಸದ ಪ್ರಜ್ವಲ್ ರೇವಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು, ವಕೀಲರ ಮೂಲಕ ಏಳು ದಿನ ಕಾಲಾವಕಾಶವನ್ನು ಕೇಳಿದ್ದಾರೆ. ಕಾಲಾವಕಾಶ ಕೇಳಿದ ಬಗ್ಗೆ ಜಾಲತಾಣದಲ್ಲಿ ಪ್ರಜ್ವಲ್ ರೇವಣ್ಣ ಪೋಸ್ಟ್ ಮಾಡಿದ್ದಾರೆ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಬೆಂಗಳೂರಿನಲ್ಲಿ…

Read More

ಬೆಂಗಳೂರು : ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸಿ ಸ್ವದೇಶಕ್ಕೆ ವಾಪಸ್ ಕರೆಸಲು ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಮಹಿಳಾ ದೌರ್ಜನ್ಯದಂತಹ ಗುರುತರ ಆರೋಪ ಹೊತ್ತಿರುವ ಹಾಲಿ‌ ಸಂಸದ ಹಾಗೂ ಎನ್‌ಡಿಎ ಮೈತ್ರಿಕೂಟದ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ ರಚಿಸಿದೆ. ಈ ನಡುವೆ ಆರೋಪಿಯು ರಾಜತಾಂತ್ರಿಕ ಪಾಸ್‌ಪೋರ್ಟನ್ನು ಬಳಕೆ ಮಾಡಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. ಎಸ್.ಐ.ಟಿ ಯು ತನಿಖೆಯನ್ನು ಮುಂದುವರೆಸಬೇಕಾದರೆ ಆರೋಪಿಯ ವಿಚಾರಣೆ ನಡೆಸುವ ಅಗತ್ಯವಿದೆ. ಹಾಗಾಗಿ ವಿದೇಶಾಂಗ ಸಚಿವಾಲಯ ಮತ್ತು ಗೃಹ ಸಚಿವಾಲಯಗಳು ತಕ್ಷಣ ಕಾರ್ಯಪ್ರವೃತ್ತವಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್ ಹಿಂಪಡೆಯುವ ಜೊತೆಗೆ ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿಗಳನ್ನು ಬಳಸಿಕೊಂಡು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರನ್ನು ಮರಳಿ ಭಾರತಕ್ಕೆ ಕರೆತರಲು ನೆರವಾಗಬೇಕು ಎಂದು ಪ್ರಧಾನಿ ಮೋದಿ ಅವರಿಗೆ ಪತ್ರ…

Read More

ಬೆಂಗಳೂರು : ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದ್ದು, ಮೇ.8ರಂದು ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟವಾಗುವ ನಿರೀಕ್ಷೆಯಿದೆ. ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ಧತೆಗಳನ್ನು ತೆಗೆದುಕೊಂಡಿದ್ದು ಎಲ್ಲವೂ ಮೇ 8ರಂದು ಫಲಿತಾಂಶ ಹೊರಬೀಳಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ. 2024ನೇ ಸಾಲಿನ ಎಸ್ ಎಸ್ ಎಲ್ಲಿ ಪರೀಕ್ಷೆಯಲ್ಲಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು 41,375 ಮರು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಹೆಚ್ಚಾಗಿದ್ದು, ಅತಿಸಾರ ಬೇದಿ/ ಕಾಲರಾ ಸೋಂಕು ಪ್ರಕರಣಗಳ Outbreak ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳು ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಬೇಸಿಗೆ ಕಾಲದಲ್ಲಿ ಅತಿಸಾರ ಬೇದಿ / ಕಾಲರ ಸೋಂಕುಗಳ ಪ್ರಕರಣಗಳು ಸಾಮಾನ್ಯವಾಗಿದ್ದು ಯಾವುದೇ Outbreakಗಳು ಸಂಭವಿಸದಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸುವುದು ಆದ್ಯ ಕರ್ತವ್ಯವಾಗಿರುತ್ತದೆ. ಆದರೂ ಸಹ Outbreak ಸಂಭವಿಸಿದಲ್ಲಿ ಅದನ್ನು ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳು ಸಮರ್ಪಕವಾಗಿ ನಿಭಾಯಿಸಲು ಸಿದ್ಧರಾಗಿರುವುದು ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಇಂತಹ ಪ್ರಕರಣಗಳ ಹರಡುವಿಕೆಯನ್ನು ತಗ್ಗಿಸಲು ಮತ್ತು ಔಟ್ ಬ್ರೇಕ್ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಈ ಕೆಳಕಂಡಂತಿದೆ: 1. 24/7 ತಾತ್ಕಾಲಿಕ ಚಿಕಿತ್ಸಾಲಯಗಳ ಸ್ಥಾಪನೆ ಸಕ್ರಿಯ ಪ್ರಕರಣಗಳ ನಿರ್ವಹಣೆ ಮತ್ತು ತುರ್ತು ಔಷಧಿಗಳ ದಾಸ್ತಾನು: ರೋಗ ನಿಯಂತ್ರಣಕ್ಕಾಗಿ 24/7 ತಾತ್ಕಾಲಿಕ ಚಿಕಿತ್ಸಾಲಯಗಳ ಸ್ಥಾಪನೆ, ತುರ್ತು ಔಷಧಿಗಳ (IV fluids, ORS, antibiotics etc) ದಾಸ್ತಾನುಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು. ನಿರ್ಜಲೀಕರಣದ…

Read More