Author: kannadanewsnow57

ಮಸ್ಕತ್ : ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಬಂದರ್ ಅಬ್ಬಾಸ್ ನಗರದ ಶಾಹಿದ್ ರಾಜೈ ಬಂದರಿನಲ್ಲಿ ಶನಿವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿ, 750 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಫೋಟ ಹೇಗೆ ಸಂಭವಿಸಿತು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಕ್ಷಿಪಣಿ ಪ್ರೊಪೆಲ್ಲಂಟ್‌ಗಳನ್ನು ತಯಾರಿಸಲು ಬಳಸುವ ರಾಸಾಯನಿಕಗಳ ಸಾಗಣೆಗೆ ಈ ಸ್ಫೋಟ ಸಂಬಂಧಿಸಿರಬಹುದು ಎಂದು ನಂಬಲಾಗಿದೆ. ಆದರೆ ಸ್ಫೋಟವು ದಾಳಿಯಿಂದ ಉಂಟಾಗಿದೆಯೇ ಎಂದು ಇರಾನ್‌ನಲ್ಲಿ ಯಾರೂ ನೇರವಾಗಿ ಹೇಳಿಲ್ಲ. ಈ ಸ್ಫೋಟದಿಂದಾಗಿ ಆಕಾಶಕ್ಕೆ ದೊಡ್ಡ ಹೊಗೆಯ ರಾಶಿ ಬಿದ್ದಿದ್ದು, ಹತ್ತಿರದ ಕಟ್ಟಡಗಳು ಮತ್ತು ಕಾರುಗಳಿಗೆ ವ್ಯಾಪಕ ಹಾನಿಯಾಗಿದೆ. ಟೆಹ್ರಾನ್‌ನ ವೇಗವಾಗಿ ಚಲಿಸುತ್ತಿರುವ ಪರಮಾಣು ಕಾರ್ಯಕ್ರಮದ ಕುರಿತು ಮೂರನೇ ಸುತ್ತಿನ ಮಾತುಕತೆಗಾಗಿ ಇರಾನ್ ಮತ್ತು ಅಮೆರಿಕದ ಅಧಿಕಾರಿಗಳು ಒಮಾನ್‌ನಲ್ಲಿ ಶನಿವಾರ ಭೇಟಿಯಾದಾಗ ಈ ಸ್ಫೋಟ ಸಂಭವಿಸಿದೆ. ಆದಾಗ್ಯೂ, ಮಾತುಕತೆಗಳನ್ನು ಮುನ್ನಡೆಸುತ್ತಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಬುಧವಾರ “ನಮ್ಮ ಭದ್ರತಾ ಸೇವೆಗಳು ಹಿಂದಿನ ಉದಾಹರಣೆಗಳನ್ನು ಪರಿಗಣಿಸಿ…

Read More

ನವದೆಹಲಿ : 2025 ರ ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದೆ. ಈ ದಾಳಿಯಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದರು, ಮತ್ತು 17 ಜನರು ಗಾಯಗೊಂಡರು. ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ ಅಂಗಸಂಸ್ಥೆ ಎಂದು ನಂಬಲಾದ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. NIA ತನಿಖಾ ಪ್ರಕ್ರಿಯೆ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ, NIA ಯ ವಿಶೇಷ ತಂಡವು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿರುವ ದಾಳಿಯ ಸ್ಥಳಕ್ಕೆ ಭೇಟಿ ನೀಡಿತು. ತಂಡವು ಘಟನಾ ಸ್ಥಳದಿಂದ ವಿಧಿವಿಜ್ಞಾನ ಸಾಕ್ಷ್ಯಗಳನ್ನು ಸಂಗ್ರಹಿಸಿ, ಸ್ಥಳೀಯ ಪೊಲೀಸರ ಸಹಯೋಗದೊಂದಿಗೆ ತನಿಖೆಯ ಹಾದಿಯನ್ನು ನಿರ್ಧರಿಸಿತು. ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಸ್ಥಳೀಯ ಭಯೋತ್ಪಾದಕರಾದ ಆದಿಲ್ ಗುರಿ ಮತ್ತು ಆಸಿಫ್ ಶೇಖ್ ಅವರ ಹೆಸರುಗಳು ಬಹಿರಂಗಗೊಂಡಿದ್ದು, ಅವರು ದಾಳಿಯಲ್ಲಿ ಭಾಗಿಯಾಗಿರಬಹುದು. NIA ತಂಡವು ಬದುಕುಳಿದ…

Read More

ಹಾವೇರಿ : ಇತ್ತೀಚಿಗೆ ಈ ಸಂಬಂಧ ಎನ್ನುವುದಕ್ಕೆ ಅರ್ಥವೇ ಇಲ್ಲದಂತಾಗಿದೆ. ಏಕೆಂದರೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಹಿರಿದ ಹಾವೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಮನೆ ಮುಂದೆ ಆಟ ಆಡುತ್ತಿದ್ದ 7 ವರ್ಷದ ಬಾಲಕಿಯ ಮೇಲೆ ವೃದ್ಧ ಒಬ್ಬ ಲೈಂಗಿಕ ದೌರ್ಜನ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಜಿಲ್ಲೆಯ ಶಿಗ್ಗಾವಿ ತಾಲೂಕು ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಘಟನೆ ನಡೆದಿದೆ. ಬಾಲಕಿಗೆ ಮಾವಿನಹಣ್ಣು ಕೊಡುವುದಾಗಿ ಆಮಿಷವೊಡ್ಡಿರುವ ಆರೋಪಿ, ಆಕೆಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ. ಹುಲಗೂರು ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿತ್ತು. ಚಾಕ್ಲೇಟ್ ಕೊಡಿಸುವ ನೆಪದಲ್ಲಿ ಬಿಹಾರ್ ಮೂಲದ ಪ್ರತಿಯೊಬ್ಬ ಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಬಳಿಕ…

Read More

ಬೆಂಗಳೂರು : ಬಿಪಿಎಲ್ ಸೇರಿ ರಾಜ್ಯದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜತೆಗೆ ರಾಗಿ ಮತ್ತು ಜೋಳವನ್ನು ವಿತರಿಸಲು ನಿರ್ಧರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಪ್ರತಿ ವ್ಯಕ್ತಿಗೆ ರಾಜ್ಯದಿಂದ 5 ಕೆಜಿ, ಕೇಂದ್ರದಿಂದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಈ ಪೈಕಿ ಪಡಿತರ ಚೀಟಿದಾರರಿಗೆ ಎರಡು ಅಥವಾ ಮೂರು ಕೆಜಿ ರಾಗಿ ಅಥವಾ ಜೋಳ ನೀಡಲು ಆಹಾರ ಇಲಾಖೆ ನಿರ್ಧರಿಸಿದೆ ಎನ್ನಲಾಗಿದ್ದು, ಫಲಾನುಭವಿಗಳಿಗೆ ನೀಡುತ್ತಿರುವ ಒಟ್ಟು ಪ್ರಮಾಣದಲ್ಲಿ ಪದಾರ್ಥಗಳನ್ನು ಬದಲಾವಣೆ ಮಾಡಲಾಗುತ್ತದೆ. ಕೆಲವು ಭಾಗದಲ್ಲಿ ರಾಗಿ ಮತ್ತೆ ಕೆಲವು ಕಡೆ ಜೋಳ ನೀಡಲಾಗುವುದು ಎಂದು ಹೇಳಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಜನರಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ ವಿತರಿಸುತ್ತಿದ್ದು, ಇದರೊಂದಿಗೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ಕೆಜಿ ರಾಗಿ ಹಾಗೂ 2 ಕೆಜಿ ಅಕ್ಕಿ,…

Read More

ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ, ಎನ್​​ಇಪಿ ಕರಡು ಸಮಿತಿ ಅಧ್ಯಕ್ಷರಾಗಿದ್ದ ಪದ್ಮವಿಭೂಷಣ ಡಾ.ಕೆ.ಕಸ್ತೂರಿರಂಗನ್ ಅವರ ಅವರ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಹಾಗಾಗಿ ಇಂದು ನಡೆಯಲಿರುವ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೇರವೇರಿಸಲು ಸರ್ಕಾರ ಆದೇಶ ಹೊರಡಿಸಿದೆ. ಕಸ್ತೂರಿರಂಗನ್ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆವರೆಗೆ ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. 1940ರ ಅಕ್ಟೋಬರ್ 24ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದ ಕಸ್ತೂರಿರಂಗನ್ ಅವರು ಮೂರು ದಶಕಗಳ ಕಾಲ ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕೇವಲ ಬಾಹ್ಯಾಕಾಶ ಕ್ಷೇತ್ರದಲ್ಲಷ್ಟೇ ಅಲ್ಲದೆ, ಪರಿಸರ, ಶಿಕ್ಷಣ ಮತ್ತು ಯೋಜನಾ ಆಯೋಗದಲ್ಲಿಯೂ ಇವರ ಕೊಡುಗೆ ಸ್ಮರಣೀಯವಾದದ್ದು. ಕಸ್ತೂರಿರಂಗನ್ 2003ರವರೆಗೆ ೯ಕ್ಕೂ ಹೆಚ್ಚು ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ನೇತೃತ್ವ ವಹಿಸಿದ್ದರು. ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯಲ್ಲಿ ಭಾರತ ಸರ್ಕಾರಕ್ಕೆ ಕಾರ್ಯದರ್ಶಿಯಾಗಿ ಭಾರತೀಯ…

Read More

ಬೆಂಗಳೂರು : ಪೋಡಿ ದುರಸ್ತಿಯನ್ನು ಆನ್‌ಲೈನ್‌ ಮೂಲಕ ಮಾಡಿಕೊಡಲಾಗುತ್ತಿದೆ. ಪ್ರತಿ ತಿಂಗಳು 5,000 ಪೋಡಿ ಮಾಡಿಕೊಡುವ ಗುರಿ ನಿಗದಿ ಮಾಡಿಕೊಳ್ಳಲಾಗಿದ್ದು, ಇದನ್ನು ಆಂದೋಲನದ ರೂಪದಲ್ಲಿ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ತಿಂಗಳ 5 ಸಾವಿರ ಪೋಡಿ ದುರಸ್ತಿ ಮಾಡಿಕೊಡುವ ಗುರಿ ನಿಗದಿ ಮಾಡಲಾಗಿದ್ದು, ಆಂದೋಲನ ರೂಪದಲ್ಲಿ ಕೈಗೊಳ್ಳಲಾಗಿದೆ. ಸರಳೀಕೃತ ರೂಪದಲ್ಲಿ ಪೋಡೊ ದುರಸ್ತಿ ಮಾಡಿಕೊಡಲಿದ್ದು, ಇದರಿಂದ ರೈತರು ಕಚೇರಿಗಳಿಗೆ ವಿನಾಕಾರಣ ಅಲೆಯುವುದು ತಪ್ಪುತ್ತದೆ. ನಾವೇ ಮನೆಗಳಿಗೆ ಹೋಗಿ 1-5 ದಾಖಲೆಗಳನ್ನು ಸಿದ್ಧಪಡಿಸುತ್ತೇವೆ. ಇವುಗಳ ಪೈಕಿ 30,476 ಪ್ರಕರಣಗಳಲ್ಲಿ ಸರ್ವೆ ಇಲಾಖೆಯಿಂದ ಭೂಮಾಪನ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ತಹಶೀಲ್ದಾರ್ ಕಚೇರಿಗಳಲ್ಲಿರುವ ಎ ಮತ್ತು ಬಿ ದರ್ಜೆಯ ಕಡತಗಳನ್ನು ಭೂ ಸುರಕ್ಷಾ ಯೋಜನೆ ಅಡಿ ಗಣಕೀಕರಣ ಮಾಡಿ ಇಂಡೆಕ್ಸ್ ಕ್ಯಾಟಲಾಗ್ ಮಾಡಿ ಸ್ಕ್ಯಾನ್ ಮಾಡಲಾಗುತ್ತಿದೆ. ಇದುವರೆಗೆ 18.28 ಕೋಟಿ…

Read More

ಬೆಂಗಳೂರು : ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, 18ನೇ ಅಡ್ಡರಸ್ತೆ, ಮಲ್ಲೇಶ್ವರ, ಬೆಂಗಳೂರು, ಇವರ ಪತ್ರದಲ್ಲಿ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕರು, ಗ್ರೇಡ್-2 ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆಯ ನಾಲ್ಕೂ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹಶಿಕ್ಷಕರುಗಳ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಸಲ್ಲಿಸಲು ಕೋರಿರುತ್ತಾರೆ. ಪ್ರಸ್ತುತ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ರವರ ಜೇಷ್ಠತಾ ಪಟ್ಟಿಯನ್ನು ವಿಭಾಗವಾರು ಸಿದ್ಧಪಡಿಸಲಾಗುತ್ತಿದೆ. ಆದ್ದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೋರಿಕೆಯಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ಸಂಬಂಧ ಸ್ನಾತಕೋತ್ತರ…

Read More

ಬೆಂಗಳೂರು : ರಾಜ್ಯದಲ್ಲಿ ಕೆಲ ದಿನಗಳ ಕಾಲ ವಿರಾಮ ನೀಡಿದ್ದ ಬೇಸಿಗೆ ಮಳೆ ನಾಳೆಯಿಂದ ಮತ್ತೆ ಹೆಚ್ಚಾಗುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು, ನಾಳೆಯಿಂದ ಮಳೆ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇಂದು ಕೊಡಗು ಹಾಗೂ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ, ದಾವಣಗೆರೆ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏ.30 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ವಿಜಯಪುರ,…

Read More

ಮೇ 1, 2025 ರಿಂದ ಭಾರತದಲ್ಲಿ ಬ್ಯಾಂಕಿಂಗ್, ತೆರಿಗೆ ಮತ್ತು ದೈನಂದಿನ ಹಣಕಾಸು ಸೇವೆಗಳಿಗೆ ಸಂಬಂಧಿಸಿದ ಹಲವು ಹೊಸ ನಿಯಮಗಳನ್ನು ಜಾರಿಗೆ ತರಲಾಗುವುದು. ಈ ಬದಲಾವಣೆಗಳು ಸಾಮಾನ್ಯ ಮನುಷ್ಯನ ಜೇಬು ಮತ್ತು ಅವನ ಸೇವೆಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ವ್ಯವಸ್ಥೆಯನ್ನು ಹೆಚ್ಚು ಸುರಕ್ಷಿತ, ಪಾರದರ್ಶಕ ಮತ್ತು ಡಿಜಿಟಲ್ ಮಾಡುವ ಗುರಿಯನ್ನು ಹೊಂದಿರುವ ಬ್ಯಾಂಕ್ ಖಾತೆ, ಎಟಿಎಂ ವಹಿವಾಟುಗಳು, ಜಿಎಸ್‌ಟಿ ನಿಯಮಗಳು ಮತ್ತು ಇತರ ಹಲವು ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಈ ಹೊಸ ನಿಯಮಗಳ ಅನುಷ್ಠಾನದೊಂದಿಗೆ, ನಿಮ್ಮ ಬ್ಯಾಂಕಿಂಗ್ ಪದ್ಧತಿಗಳು, ವೆಚ್ಚಗಳು ಮತ್ತು ತೆರಿಗೆ ಯೋಜನೆಯಲ್ಲಿ ನೀವು ಬದಲಾವಣೆಗಳನ್ನು ಮಾಡಬೇಕಾಗಬಹುದು. ಈ ಬದಲಾವಣೆಗಳ ಪರಿಣಾಮವು ಮೆಟ್ರೋ ನಗರಗಳಿಗೆ ಮಾತ್ರ ಸೀಮಿತವಾಗಿರದೆ, ಗ್ರಾಮೀಣ ಪ್ರದೇಶದ ಖಾತೆದಾರರು ಮತ್ತು ಸಣ್ಣ ಉದ್ಯಮಿಗಳ ಮೇಲೂ ಪರಿಣಾಮ ಬೀರುತ್ತದೆ. ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸಲು, ವಂಚನೆಯನ್ನು ತಡೆಗಟ್ಟಲು ಮತ್ತು ಗ್ರಾಹಕರ ಅನುಭವವನ್ನು ಸುಧಾರಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನೀವು ಬ್ಯಾಂಕಿಂಗ್, ಎಟಿಎಂ ಅಥವಾ ಜಿಎಸ್‌ಟಿಯಂತಹ ಸೇವೆಗಳನ್ನು ಸಹ ಬಳಸುತ್ತಿದ್ದರೆ,…

Read More

ಬೆಂಗಳೂರು : ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,.ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗುವುದು. ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ? ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು.…

Read More