Author: kannadanewsnow57

ನವದೆಹಲಿ:ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಮಾರ್ಚ್ 11, 2020 ರಂದು ಕರೋನವೈರಸ್ ಎಂದೂ ಕರೆಯಲ್ಪಡುವ ಕೋವಿಡ್ -19 ಅನ್ನು ಜಾಗತಿಕ ಸಾಂಕ್ರಾಮಿಕ ರೋಗವೆಂದು ಘೋಷಿಸಿ 4 ವರ್ಷಗಳು ಕಳೆದಿವೆ. ಅದರ ಪರಿಣಾಮ ಕಡಿಮೆಯಾಗಿದ್ದರೂ, ಯಾವುದೇ ಸಮಯದಲ್ಲಿ ಮತ್ತೊಂದು ಸಾಂಕ್ರಾಮಿಕ ರೋಗ ಹೊರಹೊಮ್ಮಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಸ್ಕೈ ನ್ಯೂಸ್ನ ವರದಿಯ ಪ್ರಕಾರ, ಯುಕೆಯ ಸಾಂಕ್ರಾಮಿಕ ರೋಗ ತಜ್ಞರು ವೈರಸ್ಗಳು ಪ್ರಾಣಿಗಳಿಂದ ಮನುಷ್ಯರಿಗೆ ವರ್ಗಾವಣೆಯಾಗುವ ಮತ್ತು ಮತ್ತೊಂದು ಸಾಂಕ್ರಾಮಿಕ ರೋಗಕ್ಕೆ ಕಾರಣವಾಗುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಮುಂದಿನ ಸಾಂಕ್ರಾಮಿಕ ರೋಗವು ಹತ್ತಿರದಲ್ಲಿದೆ – ಅದು ಎರಡು ವರ್ಷಗಳಾಗಿರಬಹುದು, ಅದು 20 ವರ್ಷಗಳಾಗಿರಬಹುದು, ಅದು ದೀರ್ಘವಾಗಬಹುದು – ಆದರೆ ನಮ್ಮ ಜನರನ್ನು ನಿರಾಸೆಗೊಳಿಸಲು ನಮಗೆ ಸಾಧ್ಯವಿಲ್ಲ. ನಾವು ಜಾಗರೂಕರಾಗಿರಬೇಕು, ಸಿದ್ಧರಾಗಿರಬೇಕು ಮತ್ತು ಮತ್ತೆ ತ್ಯಾಗ ಮಾಡಲು ಸಿದ್ಧರಾಗಿರಬೇಕು “ಎಂದು ಲಂಡನ್ನ ಕಿಂಗ್ಸ್ ಕಾಲೇಜಿನ ಸಾಂಕ್ರಾಮಿಕ ರೋಗಗಳ ಕ್ಲಿನಿಕಲ್ ಉಪನ್ಯಾಸಕ ಡಾ.ಮ್ಯಾಕ್ ಹೇಳಿದರು. ಜಾಗತಿಕ ತಾಪಮಾನ ಏರಿಕೆ ಮತ್ತು ಅರಣ್ಯನಾಶವು ವೈರಸ್ಗಳು ಅಥವಾ ಬ್ಯಾಕ್ಟೀರಿಯಾಗಳು…

Read More

ಹೆಣ್ಣುಮಕ್ಕಳಿಗೆ ಮೇಕಪ್‌ ಮಾಡಿಕೊಳ್ಳುವುದೆಂದರೆ ಎಷ್ಟು ಇಷ್ಟವೋ ಮೆಹಂದಿ ಹಾಕಿಕೊಳ್ಳುವುದೆಂದರೂ ಅಷ್ಟೇ ಇಷ್ಟ. ಕೈಮೇಲೆ ಚೆಂದದ ಚಿತ್ರ ಬಿಡಿಸಿ ಅಂದು ಕೆಂಬಣ್ಣಕ್ಕೆ ತಿರುಗಿದರೆ ಅದರ ಖುಷಿಯೇ ಬೇರೆ. ಮದುವೆ ಸಮಾರಂಭಗಳಲ್ಲಿ ಹೆಂಗಳೆಯರ ಕೈ ಕೆಂಪೇರದೇ ಸಡಗರವೇ ಇಲ್ಲ. ಮದುಮಗಳಿಗಂತೂ ಮೆಹಂದಿ ಅಲಂಕಾರ ಹೆಚ್ಚು ಮೆರುಗು ನೀಡುವುದಂತೂ ಸುಳ್ಳಲ್ಲ. ಇತ್ತೀಚಿನ ದಿನಗಳಲ್ಲಿ ಮೆಹಂದಿ ಹಾಕುವುದೂ ಕೂಡ ಒಂದು ರೀತಿಯ ಉದ್ಯಮವಾಗಿಬಿಟ್ಟಿದೆ. ಕೈಗೆ ಮಾತ್ರ ಆದರೆ ಇಷ್ಟು ರೇಟ್‌, ಕಾಲಿಗೂ ಮೆಹಂದಿ ಬೇಕೆಂದರೆ ಒಂದು ರೇಟ್‌. ಇನ್ನು ಈಗ ಫಾಸ್ಟ್ ಮೆಹಂದಿ, ಸ್ಟಿಕರ್‌ ಮೆಹಂದಿ ಎಂದು ಅದರಲ್ಲೂ ಹಲವು ವಿಧಗಳೂ ಹುಟ್ಟಿಕೊಂಡಿವೆ. ಈ ಮೆಹಂದಿಯನ್ನು ಹಾಕಿದ ಮೇಲೆ ಹೆಚ್ಚು ಕೆಂಪಾಗಬೇಕು ಎಂದು ಎಲ್ಲರೂ ಬಯಸುತ್ತಾರೆ. ಅದರಲ್ಲೂ ಮದುಮಗಳ ಮೆಹಂದಿ ಕೆಂಪಾದಷ್ಟು ಗಂಡನಾಗುವವನು ಅಷ್ಟು ಜಾಸ್ತಿ ಪ್ರೀತಿ ಮಾಡುತ್ತಾನಂತೆ ಎಂದು ರೇಗಿಸುವ ಮಾತುಗಳೂ ಕೂಡ ರೂಢಿಯಲ್ಲಿದೆ. ಹಾಗಾದರೆ ಈ ಮೆಹಂದಿ ಕೈಗೆ ಹಾಕಿದ ಮೇಲೆ ಹೆಚ್ಚು ಕೆಂಪಗಾಗಲು ಏನು ಮಾಡಬೇಕು. ಮನೆಯಲ್ಲಿಯೇ ಯಾವೆಲ್ಲಾ ವಿಧಾನಗಳನ್ನು ಅನುಸರಿಸಿದರೆ ಕೈಗೆ…

Read More

ಮೈಸೂರು : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸುಳ್ಳು ಹೇಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸುಳ್ಳು ಹೇಳುವುದಿಲ್ಲ ಎಂದರು. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಮೈಸೂರು, ಚಾಮರಾಜನಗರ ಕ್ಷೇತ್ರವನ್ನೂ ಸೇರಿಸಿದಂತೆ ರಾಜ್ಯದ ಎಲ್ಲಾ 28 ಕ್ಷೇತ್ರವನ್ನೂ ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ. ನಮ್ಮ ಸರ್ಕಾರ ನುಡಿದಂತೆ ನಡೆದಿದ್ದು, ಜನರಿಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ. ಗ್ಯಾರಂಟಿಗಳಿಗೆ ಈ ವರ್ಷ ₹36,000…

Read More

ಬೆಂಗಳೂರು : ರಾಜ್ಯ ಸರ್ಕಾರದ ಯೋಜನೆಗಳಿಗೆ ಅವರೇ ಹಣ ಹೊಂದಿಸಿಕೊಳ್ಳಬೇಕು, ಕೇಂದ್ರ ಸರ್ಕಾರವನ್ನು ಕೇಳಬಾರದು ಎನ್ನುವ ನಿರ್ಮಲಾ ಸೀತಾರಾಮನ್ ಅವರ ಯಜಮಾನಿಕೆಯ ಧೋರಣೆ ಅತ್ಯಂತ ಖಂಡನೀಯ, ಈ ಹೇಳಿಕೆ ಆರುವರೆ ಕೋಟಿ ಕನ್ನಡಿಗರಿಗೆ ತೋರಿರುವ ಅಗೌರವ ಮತ್ತು ಮಾಡಿರುವ ಅವಮಾನ ಎಂದು ತಿಳಿದುಕೊಳ್ಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಶತಾಯಗತಾಯ ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಸೃಷ್ಟಿಸಿ ಬಡವರಿಗೆ ನೀಡಲಾಗಿರುವ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವಂತೆ ಮಾಡಬೇಕೆಂಬ ದುರಾಲೋಚನೆ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಇದೆ ಎನ್ನುವುದು ಕನ್ನಡಿಗರಿಗೆ ಈಗ ಅರ್ಥವಾಗಿದೆ. ಇದಕ್ಕೆ ತಕ್ಕ ಉತ್ತರವನ್ನು ರಾಜ್ಯದ ಮತದಾರರು ಲೋಕಸಭಾ ಚುನಾವಣೆಯಲ್ಲಿ ನೀಡಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೇ, ನಾವು ನಮ್ಮ ಗ್ಯಾರಂಟಿ ಯೋಜನೆಗಳಿಗೆ ವಿಶೇಷವಾದ ಅನುದಾನ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಬೇಡಿಕೊಳ್ಳುತ್ತಿಲ್ಲ, ಈ ಯೋಜನೆಗಳಿಗೆ ಬೇಕಿರುವ ಅನುದಾನವನ್ನು ಬಜೆಟ್ ನಲ್ಲೇ ಮೀಸಲಿಟ್ಟಿದ್ದೇವೆ ಎಂದರು. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿರುದ್ದ ಸಿಡಿದೆದ್ದಿರುವ ಕನ್ನಡಿಗರ ಕೂಗಿಗೆ…

Read More

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದ ನಂತ್ರ, ಅಕ್ರಮ ತಡೆಗೆ ಕಟ್ಟು ನಿಟ್ಟಿನ ಕ್ರಮವನ್ನು ಆಯೋಗವು ಕೈಗೊಂಡಿದೆ. ಇದರ ನಡುವೆ ಭಾನುವಾರ ಒಂದೇ ದಿನ ಬರೋಬ್ಬರಿ 2.84 ಕೋಟಿ ಮೌಲ್ಯದ ಹಣ, ವಸ್ತು, ಮದ್ಯವನ್ನು ಚುನಾವಣಾಧಿಕಾರಿಗಳು ಸೀಜ್ ಮಾಡಿದ್ದಾರೆ. ಈ ಕುರಿತಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಭಾನುವಾರ ಕ್ಷಿಪ್ರಪಡೆ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸರು ರೂ.1,87,81,820 ಹಣವನ್ನು ಜಪ್ತಿ ಮಾಡಿರೋದಾಗಿ ತಿಳಿಸಿದ್ದಾರೆ. ಇನ್ನೂ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡ, ಪೊಲೀಸರು ಸೇರಿ 133 ಕ್ವಿಂಚಾಲ್ ಪಿಡಿಎಸ್ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಅದರ ಬೆಲೆ ರೂ.3,33,000 ಆಗಿದೆ. ಇದಲ್ಲದೇ 764.55 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ. ಒಟ್ಟಾರೆಯಾಗಿ 5.04 ಕೆಜಿ ಮಾದಕ ದ್ರವ್ಯ, ಅಬಕಾರಿ ಇಲಾಖೆಯಿಂದ 3.65 ಕೆಜಿ ಸೇರಿದಂತೆ 8.69 ಕೆಜಿ ಮಾದಕ ದ್ರವ್ಯ ಸೇರಿದಂತೆ ರೂ.2,84,21,200 ಮೌಲ್ಯದ ನಗದು, ಮದ್ಯ, ಮಾದಕ ದ್ರವ್ಯಗಳನ್ನು ಜಪ್ತಿ ಮಾಡಿರೋದಾಗಿ ತಿಳಿಸಿದೆ.

Read More

ಬೆಂಗಳೂರು ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ಒಂದಾಗಿದೆ ಮತ್ತು ಇದು ದೇಶದ ಹೆಚ್ಚಿನ ಕಾರ್ಪೊರೇಟ್ ಕಚೇರಿಗಳನ್ನು ಹೊಂದಿರುವುದರಿಂದ ಇದನ್ನು ‘ಭಾರತದ ಸಿಲಿಕಾನ್ ವ್ಯಾಲಿ’ ಎಂದು ಕರೆಯಲಾಗುತ್ತದೆ. ನೀವು ಬೆಂಗಳೂರಿನ ನಿವಾಸಿಯಾಗಿದ್ದರೆ ನಿಮಗೆ ಒಳ್ಳೆಯ ಸುದ್ದಿ ಇದೆ! ನೀವು ಕರ್ನಾಟಕದ ರಾಜಧಾನಿಯಲ್ಲಿ ವಾಸಿಸುತ್ತಿದ್ದರೆ, ಮಾರ್ಚ್ ವಿದ್ಯುತ್ ಬಿಲ್ಗಳನ್ನು ತಡವಾಗಿ ಪಾವತಿಸಿದರೆ ನಿಮಗೆ ದಂಡ ಶುಲ್ಕ ವಿಧಿಸಲಾಗುವುದಿಲ್ಲ. ಡಿಜಿಟಲ್ ಸೇವೆಗಳಲ್ಲಿನ ಅಡೆತಡೆಗಳಿಗೆ ಪ್ರತಿಕ್ರಿಯೆಯಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತನ್ನ ಆನ್ ಲೈನ್ ವ್ಯವಸ್ಥೆಗೆ ತಾಂತ್ರಿಕ ನವೀಕರಣಗಳನ್ನು ಮಾಡಿದ ನಂತರ ಈ ಘೋಷಣೆ ಮಾಡಿದೆ. ಮಾರ್ಚ್ ವಿದ್ಯುತ್ ಬಿಲ್ ಗೆ ವಿಳಂಬ ದಂಡ ಶುಲ್ಕವಿಲ್ಲ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಾರ್ಚ್ ವಿದ್ಯುತ್ ಬಿಲ್ಗಳಿಗೆ ಯಾವುದೇ ವಿಳಂಬ ದಂಡ ಶುಲ್ಕವನ್ನು ವಿಧಿಸುವುದಿಲ್ಲ ಎಂದು ಘೋಷಿಸಿದೆ. ಮಾರ್ಚ್ 10 ಮತ್ತು 19 ರ ನಡುವೆ ಬೆಸ್ಕಾಂಗೆ ಆನ್ ಲೈನ್ ವ್ಯವಸ್ಥೆಗೆ ತಾಂತ್ರಿಕ ನವೀಕರಣದ ನಂತರ ವಿದ್ಯುತ್ ಕಂಪನಿಯ ಈ ಕ್ರಮ…

Read More

ದಾಂಪತ್ಯದಲ್ಲಿ ಅನ್ಯೋನ್ಯತೆಯು ಇದ್ದರೆ ಮಾತ್ರ ಅದು ಹೆಚ್ಚು ಕಾಲ ಬಾಳಿಕೆ ಬರಲು ಸಾಧ್ಯ. ಸಂಗಾತಿಗಳಿಬ್ಬರು ತಮ್ಮ ನಿತ್ಯ ಜೀವನದಲ್ಲಿ ಮಾಡುವಂತಹ ಕೆಲವೊಂದು ಚಟುವಟಿಕೆಗಳು ಹಾಗೂ ಕಾರ್ಯಗಳು ಅವರ ನಡುವಿನ ಭಾಂದವ್ಯವನ್ನು ಹೆಚ್ಚಿಸುವುದು. ಆದರೆ ಇಂದಿನ ದಿನಗಳಲ್ಲಿ ಪತಿ ಹಾಗೂ ಪತ್ನಿ ಇಬ್ಬರು ಉದ್ಯೋಗಸ್ಥರಾಗಿರುವ ಕಾರಣದಿಂದಾಗಿ ಜತೆಯಾಗಿ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ ಎನ್ನುವ ಮಾತು ಕೇಳಿಬರುತ್ತಲಿದೆ. ದಂಪತಿಯು ಈ ಚಟುವಟಿಕೆಗಳನ್ನು ಜತೆಯಾಗಿ ನಡೆಸಿದರೆ ಅದರಿಂದ ಅವರ ನಡುವೆ ಭಾಂದವ್ಯ ಹೆಚ್ಚಾಗುವುದು ಎಂದು ಹೇಳಲಾಗುತ್ತದೆ. ಅಂತಹ ಕೆಲವು ಚಟುವಟಿಕೆಗಳ ಬಗ್ಗೆ ತಿಳಿಯಲು ನೀವು ಈ ಲೇಖನ ಓದಿ. ದಂಪತಿಯು ತಮ್ಮ ಮಕ್ಕಳನ್ನು ಇಂತಹ ಜಾಗಗಳಿಗೆ ಕರೆದುಕೊಂಡು ಹೋಗುವುದು ಸಹಜ. ಆದರೆ ದಂಪತಿಗಳಿಬ್ಬರೇ ಇಲ್ಲಿಗೆ ಹೋದರೆ ಅವರ ನಡುವಿನ ಭಾಂದವ್ಯ ಹೆಚ್ಚಾಗುವುದು. ಇಂತಹ ಸ್ಥಳಗಳಿಗೆ ಭೇಟಿ ನೀಡಿದ ವೇಳೆ ನಾವು ಕೆಲವೊಂದು ಬಾಲ್ಯದ ವಿಚಾರಗಳನ್ನು ಹಂಚಿ ಕೊಳ್ಳುತ್ತೇವೆ. ಇದು ಇಬ್ಬರ ಮನಸ್ಸನ್ನು ಸರಿಯಾಗಿ ಅರಿಯಲು ಸಾಧ್ಯವಾಗಲಿದೆ. ಕೆಲವರಿಗೆ ಸಂಗೀತದಲ್ಲಿ ಆಸಕ್ತಿ ಇದ್ದರೆ ಇನ್ನು ಕೆಲವರಿಗೆ…

Read More

ನವದೆಹಲಿ: ಪೂರ್ವ ಮತ್ತು ಈಶಾನ್ಯ ರಾಜ್ಯಗಳಿಗಿಂತ ತಮಿಳುನಾಡು, ತೆಲಂಗಾಣ, ಕರ್ನಾಟಕ ಮತ್ತು ದೆಹಲಿಯಲ್ಲಿ ಸ್ತನ ಕ್ಯಾನ್ಸರ್ ನ ಹೆಚ್ಚಿನ ಹೊರೆ ಇದೆ ಎಂದು ಐಸಿಎಂಆರ್ ಅಧ್ಯಯನ ತಿಳಿಸಿದೆ. 2016 ರಲ್ಲಿ ಭಾರತೀಯ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ನ ಹೊರೆ ವಯಸ್ಸಿನ ಪ್ರಮಾಣೀಕರಣದ ನಂತರ 1,00,000 ಮಹಿಳೆಯರಿಗೆ 515.4 ಡಿಎಎಲ್ವೈ ಎಂದು ಅಂದಾಜಿಸಲಾಗಿದೆ. ಪೂರ್ವ ಮತ್ತು ಈಶಾನ್ಯ ಪ್ರದೇಶಗಳಿಗಿಂತ ತಮಿಳುನಾಡು, ತೆಲಂಗಾಣ, ಕರ್ನಾಟಕ ಮತ್ತು ದೆಹಲಿಯಲ್ಲಿ ಸ್ತನ ಕ್ಯಾನ್ಸರ್ ನ ಹೆಚ್ಚಿನ ಹೊರೆ ಇದೆ. 2025 ರ ಅಂದಾಜಿನ ಪ್ರಕಾರ 5.6 ಮಿಲಿಯನ್ ಡಿಎಎಲ್ವೈಗಳನ್ನು ತಲುಪುವ ಮೂಲಕ ಗಣನೀಯ ಹೆಚ್ಚಳವನ್ನು ಸೂಚಿಸುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಧ್ಯಯನ ತಿಳಿಸಿದೆ. ಡಿಎಎಲ್ವೈಗಳು ಒಟ್ಟಾರೆ ರೋಗದ ಹೊರೆಯ ಅಳತೆಯಾಗಿದ್ದು, ಅನಾರೋಗ್ಯ, ಅಂಗವೈಕಲ್ಯ ಅಥವಾ ಅಕಾಲಿಕ ಮರಣದಿಂದಾಗಿ ಕಳೆದುಹೋದ ವರ್ಷಗಳ ಸಂಖ್ಯೆಯಾಗಿ ವ್ಯಕ್ತಪಡಿಸಲಾಗುತ್ತದೆ. ಗ್ರಾಮೀಣ ಮಹಿಳೆಯರು ತಮ್ಮ ನಗರ ಮಹಿಳೆಯರಿಗಿಂತ ಸ್ತನ ಕ್ಯಾನ್ಸರ್ಗೆ ತುತ್ತಾಗುವ ಸಾಧ್ಯತೆ ಕಡಿಮೆ ಮತ್ತು ನಗರ ಮತ್ತು ಮೆಟ್ರೋ ಪ್ರದೇಶಗಳಲ್ಲಿ…

Read More

ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ರೂ.50 ಸಾವಿರ ಮೇಲ್ಪಟ್ಟು ನಗದು ಹಣವನ್ನು ಸೂಕ್ತ ದಾಖಲೆಗಳಿಲ್ಲದೇ ತೆಗೆದುಕೊಂಡು ಹೋಗಲು ಮತ್ತು ಸಾಗಾಣಿಕೆ ಮಾಡಲು ಅವಕಾಶ ಇರುವುದಿಲ್ಲ. ದಾಖಲೆಗಳಿಲ್ಲದೇ ಸಾಗಾಣಿಕೆ ಮಾಡಿದ ನಗದು ಹಣವನ್ನು ಚುನಾವಣಾ ತಂಡಗಳು ಜಪ್ತಿ ಮಾಡಿ ಸಮಿತಿಗೆ ಹಾಜರುಪಡಿಸಿ ವರದಿ ಸಲ್ಲಿಸಲಾಗುತ್ತದೆ. ಚುನಾವಣಾ ತಂಡದಿಂದ ನಗದು ಹಣವನ್ನು ಜಪ್ತಿ ಮಾಡಿದಲ್ಲಿ, ಸಾರ್ವಜನಿಕರು ಹಣ ಬಿಡುಗಡೆಗಾಗಿ ಮೇಲ್ಮನವಿಯನ್ನು ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಕುಂದು ಕೊರತೆಗಳ ಸಮಿತಿಯನ್ನು ಸಂಪರ್ಕಿಸಬಹುದು ಎಂದು ಲೋಕಸಭೆ ಸಾರ್ವತ್ರಿಕ ಚುನಾವಣೆಯ ಜಿಲ್ಲಾ ಕುಂದು ಕೊರತೆಗಳ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ. ಸಮಿತಿಯ ವಿವರ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಜಿಲ್ಲಾ ಕುಂದು ಕೊರತೆಗಳ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಬಳ್ಳಾರಿ. ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ: ಲೋಕಸಭಾ ಸಾರ್ವತ್ರಿಕ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಟ್ಯಾಂಕರ್ ಮಾಫಿಯಾಕ್ಕೆ ಕಡಿವಾಣ ಹಾಕಲು ಜಲಮಂಡಳಿಯು ಮುಂದಾಗಿದ್ದು, ೨೪ ಸಾವಿರಕ್ಕೂ ಹೆಚ್ಚು ವಾಟರ್ ಟ್ಯಾಂಕರ್ ಗಳಿಗೂ ದರ ನಿಗದಿ ಮಾಡಿ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರವು 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದ್ದು, ಉಲ್ಲೇಖ(1)ರ ಪತ್ರದಲ್ಲಿ ಬೆಂಗಳೂರು ನಗರ ನಿವಾಸಿಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು 24,000 ಲೀಟರ್ ಮತ್ತು ಮೇಲ್ಪಟ್ಟು ಸಾಮರ್ಥ್ಯದ ತಾತ್ಕಾಲಿಕವಾಗಿ ಮೂರು ತಿಂಗಳ ಅವಧಿಗೆ 200 ಖಾಸಗಿ ನೀರಿನ ಟ್ಯಾಂಕರ್‌ಗಳನ್ನು ಬಾಡಿಗೆ ಮೇರೆಗೆ ಉಪಯೋಗಿಸಲು ಧರವನ್ನು ನಿಗಧಿಪಡಿಸಲು ಕೋರಿರುತ್ತಾರೆ. ಅದರಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಕುಡಿಯುವ ನೀರನ್ನು ಸಮರ್ಪಕವಾಗಿ ನಿಭಾಯಿಸುವ ದೃಷ್ಟಿಯಿಂದ ದರ ನಿಗಧಿಪಡಿಸಲು ತಾಂತ್ರಿಕ ಸಮಿತಿಯನ್ನು ಉಲ್ಲೇಖ(2)ರಂತೆ ರಚಿಸಿ ಆದೇಶಿಸಲಾಗಿರುತ್ತದೆ. ಮುಂದುವರೆದು ಸದರಿ ತಾಂತ್ರಿಕ ಸಮಿತಿಯೂ ಕುಡಿಯುವ ನೀರಿನ ಖಾಸಗಿ ನೀರಿನ ಟ್ಯಾಂಕರ್‌ಗಳ ದರ ನಿಗಧಿಪಡಿಸುವ ಬಗ್ಗೆ ಸಾಧಕ-ಬಾಧಕಗಳು, ಲೋಕೋಪಯೋಗಿ ಇಲಾಖೆಯ ಎಸ್.ಆರ್. ದರಗಳು ಮತ್ತು ವಾಸ್ತವಿಕ ಲಭ್ಯವಿರುವ ಅಂಕಿ- ಅಂಶಗಳನ್ನು…

Read More