Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ಸ್ಥಾಪಿಸಲಾದ ರಾಷ್ಟ್ರೀಯ ಶಿಕ್ಷಣ ಸಂಘ (NESTS), ಶಿಕ್ಷಕರು ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ EMRS ನೇಮಕಾತಿ 2023 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಕಾರ್ಯನಿರ್ವಹಿಸುತ್ತಿರುವ 400 ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ (EMRS) 7,267 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 23. ವಿವಿಧ ಉದ್ಯೋಗ ಖಾಲಿ ಹುದ್ದೆಗಳ ವಿವರಗಳು ಶಾಲಾ ಪ್ರಾಂಶುಪಾಲರು ಖಾಲಿ ಹುದ್ದೆಗಳ ಸಂಖ್ಯೆ: 225 ಶೈಕ್ಷಣಿಕ ಅರ್ಹತೆ: ಸ್ನಾತಕೋತ್ತರ ಪದವಿ ಮತ್ತು ಬಿ.ಎಡ್ ಪದವಿ ಹೊಂದಿರಬೇಕು. ಅಲ್ಲದೆ, 12 ವರ್ಷಗಳ ಕೆಲಸದ ಅನುಭವ ಕಡ್ಡಾಯವಾಗಿದೆ. ವಯಸ್ಸಿನ ಅರ್ಹತೆ: 50 ವರ್ಷಕ್ಕಿಂತ ಕಡಿಮೆ ಇರಬೇಕು. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು. ಸಂಬಳ: ₹78,800 – ₹2,09,200 ಸ್ನಾತಕೋತ್ತರ ಶಿಕ್ಷಕರು (PGT) ಖಾಲಿ ಹುದ್ದೆಗಳ ಸಂಖ್ಯೆ: 1,460 ಇಂಗ್ಲಿಷ್ – 112…
ನವದೆಹಲಿ. ಇಲ್ಲಿಯವರೆಗೆ, ಮಧುಮೇಹವು ವಯಸ್ಕರು ಅಥವಾ ಹಿರಿಯ ಮಕ್ಕಳ ಕಾಯಿಲೆ ಎಂದು ಭಾವಿಸಲಾಗಿತ್ತು, ಆದರೆ ವಿಜ್ಞಾನಿಗಳು ಇತ್ತೀಚೆಗೆ ಒಂದು ಚಕಿತಗೊಳಿಸುವ ಆವಿಷ್ಕಾರವನ್ನು ಮಾಡಿದ್ದಾರೆ. ಆರು ತಿಂಗಳೊಳಗಿನ ಕೆಲವು ಶಿಶುಗಳಲ್ಲಿ ಸಂಪೂರ್ಣವಾಗಿ ಹೊಸ ರೀತಿಯ ಮಧುಮೇಹ ಕಂಡುಬಂದಿದೆ. ಇದು ಸಾಮಾನ್ಯ ಕಾರಣಗಳಿಂದ ಉಂಟಾಗುವುದಿಲ್ಲ, ಬದಲಿಗೆ ಅವರ ಡಿಎನ್ಎಯಲ್ಲಿನ ನಿರ್ದಿಷ್ಟ ಬದಲಾವಣೆಗಳಿಂದ ಉಂಟಾಗುತ್ತದೆ. ರೋಗದ ರಹಸ್ಯ ಜೀನ್ಗಳಲ್ಲಿದೆ ಅಂತರರಾಷ್ಟ್ರೀಯ ವಿಜ್ಞಾನಿಗಳ ತಂಡವು ನವಜಾತ ಮಧುಮೇಹ ಪ್ರಕರಣಗಳಲ್ಲಿ ಸರಿಸುಮಾರು 85 ಪ್ರತಿಶತಕ್ಕೆ ಆನುವಂಶಿಕ ದೋಷಗಳು ಕಾರಣವೆಂದು ಕಂಡುಹಿಡಿದಿದೆ. ಈ ಹೊಸ ಆವಿಷ್ಕಾರವು TMEM167A ಎಂಬ ಜೀನ್ ಅನ್ನು ಈ ಕಾಯಿಲೆಗೆ ಲಿಂಕ್ ಮಾಡಿದೆ. ಈ ಜೀನ್ನಲ್ಲಿನ ರೂಪಾಂತರಗಳು ಮಗುವಿನ ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತವೆ. ಡಾ. ಎಲಿಸೇಡ್ಫ್ರಾಂಕೊ ಮತ್ತು ಅವರ ತಂಡವು ಈ ಅಧ್ಯಯನವು ಇನ್ಸುಲಿನ್ ಉತ್ಪಾದನೆ ಮತ್ತು ಸ್ರವಿಸುವಿಕೆಯಲ್ಲಿ ಒಳಗೊಂಡಿರುವ ಜೀನ್ಗಳನ್ನು ಅರ್ಥಮಾಡಿಕೊಳ್ಳಲು ಹೊಸ ಮಾರ್ಗವನ್ನು ತೆರೆದಿದೆ ಎಂದು ವಿವರಿಸಿದರು. TMEM167A ಜೀನ್ನಲ್ಲಿನ ಬದಲಾವಣೆಗಳು ಮಧುಮೇಹಕ್ಕೆ ಮಾತ್ರವಲ್ಲದೆ ಅಪಸ್ಮಾರ ಮತ್ತು…
ನವದೆಹಲಿ : ಫಕೀರ್ ಎಂದೇ ಜನಪ್ರಿಯರಾಗಿರುವ ಗಾಯಕ ಮತ್ತು ನಟ ರಿಷಭ್ ಟಂಡನ್ ಅವರು ಹೃದಯಾಘಾತದಿಂದ 35 ನೇ ವಯಸ್ಸಿನಲ್ಲಿ ದುರಂತವಾಗಿ ನಿಧನರಾದರು. ದೀಪಾವಳಿಗೆ ದೆಹಲಿಯಲ್ಲಿ ತಮ್ಮ ಹೆತ್ತವರನ್ನು ಭೇಟಿ ಮಾಡುವಾಗ ಅವರಿಗೆ ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಟಂಡನ್ ತಮ್ಮ ಪತ್ನಿಯೊಂದಿಗೆ ಮುಂಬೈನಲ್ಲಿ ವಾಸಿಸುತ್ತಿದ್ದರು ಮತ್ತು ಇನ್ಸ್ಟಾಗ್ರಾಮ್ನಲ್ಲಿ ಗಣನೀಯ ಅನುಯಾಯಿಗಳನ್ನು ಹೊಂದಿದ್ದರು. ರಿಷಭ್ ಟಂಡನ್ ಅವರ ಸಾವು ಹೃದಯಾಘಾತದಿಂದ ಸಂಭವಿಸಿದೆ ಎಂದು ಮಾಧ್ಯಮ ವರದಿಗಳು ಖಚಿತಪಡಿಸುತ್ತವೆ. ತಮ್ಮ ಕುಟುಂಬವನ್ನು ನೋಡಲು ದೆಹಲಿಗೆ ಭೇಟಿ ನೀಡಿದ್ದಾಗ ಈ ಘಟನೆ ಸಂಭವಿಸಿದೆ. ಪಾಪರಾಜೋ ಆಗಿರುವ ವೈರಲ್ ಭಯಾನಿ, ಇನ್ಸ್ಟಾಗ್ರಾಮ್ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡರು, ಇದು ಅಭಿಮಾನಿಗಳು ಮತ್ತು ಮನರಂಜನಾ ಉದ್ಯಮದಲ್ಲಿ ಬೇಗನೆ ಹರಡಿತು. ವೃತ್ತಿಪರವಾಗಿ ಫಕೀರ್ ಎಂದು ಕರೆಯಲ್ಪಡುವ ರಿಷಭ್ ಟಂಡನ್, ಇನ್ಸ್ಟಾಗ್ರಾಮ್ನಲ್ಲಿ ಸುಮಾರು ಅರ್ಧ ಮಿಲಿಯನ್ ಅನುಯಾಯಿಗಳೊಂದಿಗೆ ಬಲವಾದ ಸಾಮಾಜಿಕ ಮಾಧ್ಯಮ ಉಪಸ್ಥಿತಿಯನ್ನು ಹೊಂದಿದ್ದರು. ರಿಷಭ್ ಮುಂಬೈನಲ್ಲಿ ನೆಲೆಸಿದ್ದರು ಮತ್ತು ಹಲವಾರು ಚಲನಚಿತ್ರಗಳಲ್ಲಿ ನಟಿಸಿದ್ದರು. ಅವರು ಪ್ರಭಾವಿ ಮತ್ತು ನಿರ್ಮಾಪಕಿಯಾಗಿರುವ ತಮ್ಮ ಪತ್ನಿ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಮೂವರು ಯುವಕರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಗಂಗೋಂಡನಹಳ್ಳಿಯಲ್ಲಿ ನಿನ್ನೆ ರಾತ್ರಿ ಮಹಿಳೆ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಂಗೊಂಡನಹಳ್ಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ. ಕುಡಿದ ಮತ್ತಿನಲ್ಲಿ ದುರುಳರು ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಜೀವ ಬೆದರಿಕೆ ಕರೆ ಬೆನ್ನಲ್ಲೇ ಸಚಿವ `ಪ್ರಿಯಾಂಕ್ ಖರ್ಗೆ’ ಭದ್ರತೆ ಹೆಚ್ಚಳ : ಎಸ್ಕಾರ್ಟ್ ನೀಡಿದ ಸರ್ಕಾರ.!
ಬೆಂಗಳೂರು : ಬೆದರಿಕೆ ಕರೆ ಬೆನ್ನಲ್ಲೇ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರ ಸಚಿವರಿಗೆ ಹೆಚ್ಚಿನ ಭದ್ರತೆ ಒದಿಗಿಸಿದ್ದು, ಎಸ್ಕಾರ್ಟ್ ಸಿಬ್ಬಂದಿಯನ್ನು ನೀಡಿದೆ. ಹೌದು, ಬೆದರಿಕೆ ಕರೆ ಹಿನ್ನಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಮಗೆ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದೀಗ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಸಚಿವರಿಗೆ ಬೆಂಗಾವಲು ವಾಹನ ನೀಡಿ, ಭದ್ರತೆಯನ್ನು ಇನ್ನಷ್ಟು ಹೆಚ್ಚಳ ಮಾಡಲಾಗಿದೆ. ಬೆದರಿಕೆ ಕರೆ ಹಿನ್ನೆಲೆಯಲ್ಲಿ ಈಗಾಗಲೇ ಸಚಿವ ಪ್ರಿಯಾಂಕ್ ಖರ್ಗೆ ನಿವಾಸ ಹಾಗೂ ಸಚಿವರಿಗೆ ಭದ್ರತಾ ಸಿಬ್ಬಂದಿಗಳನ್ನು ಹೆಚ್ಚಿಸಲಾಗಿತ್ತು. ಇದೀಗ ಸಚಿವರಿಗೆ ಎಸ್ಕಾರ್ಟ್ ಸಿಬಂದಿಯನ್ನು ಗೃಹ ಇಲಾಖೆ ನೀಡಿದೆ.
ವಿಜಯಪುರ : ಸಿಂದಗಿ ಶಾಸಕ ಅಶೋಕ್ ಮನಗೂಳಿ ಅವರ ಕಾರಿಗೆ ವಾಹನವೊಂದು ಡಿಕ್ಕಿಹೊಡೆದಿರುವ ಘಟನೆ ಜಿಲ್ಲೆಯ ಸಿಂದಗಿ ಬೈಪಾಸ್ ಬಳಿ ನಡೆದಿದೆ. ಸಿಂದಗಿ ಬೈಪಾಸ್ ಬಳಿಇನ್ನೋವಾ ಹೈಕ್ರಾಸ್ ಕಾರಿಗೆ ಹಾಗೂ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಶಾಸಕರ ಕಾರಿನಲ್ಲಿ ಅವರ ಪುತ್ರಿ, ಸಹೋದರನ ಮಗ ಪ್ರಯಾಣಿಸುತ್ತಿದ್ದರು. ಕಲಬುಗಿಯಿಂದ ಸಿಂದಗಿ ಕಡೆಗೆ ಬರ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿಎ.
ನವದೆಹಲಿ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ಸ್ಥಾಪಿಸಲಾದ ರಾಷ್ಟ್ರೀಯ ಶಿಕ್ಷಣ ಸಂಘ (NESTS), ಶಿಕ್ಷಕರು ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ EMRS ನೇಮಕಾತಿ 2023 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಕಾರ್ಯನಿರ್ವಹಿಸುತ್ತಿರುವ 400 ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ (EMRS) 7,267 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 23. ವಿವಿಧ ಉದ್ಯೋಗ ಖಾಲಿ ಹುದ್ದೆಗಳ ವಿವರಗಳು ಶಾಲಾ ಪ್ರಾಂಶುಪಾಲರು ಖಾಲಿ ಹುದ್ದೆಗಳ ಸಂಖ್ಯೆ: 225 ಶೈಕ್ಷಣಿಕ ಅರ್ಹತೆ: ಸ್ನಾತಕೋತ್ತರ ಪದವಿ ಮತ್ತು ಬಿ.ಎಡ್ ಪದವಿ ಹೊಂದಿರಬೇಕು. ಅಲ್ಲದೆ, 12 ವರ್ಷಗಳ ಕೆಲಸದ ಅನುಭವ ಕಡ್ಡಾಯವಾಗಿದೆ. ವಯಸ್ಸಿನ ಅರ್ಹತೆ: 50 ವರ್ಷಕ್ಕಿಂತ ಕಡಿಮೆ ಇರಬೇಕು. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು. ಸಂಬಳ: ₹78,800 – ₹2,09,200 ಸ್ನಾತಕೋತ್ತರ ಶಿಕ್ಷಕರು (PGT) ಖಾಲಿ ಹುದ್ದೆಗಳ ಸಂಖ್ಯೆ: 1,460 ಇಂಗ್ಲಿಷ್ – 112…
ರಾಯಚೂರು: ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂತ್ರಾಲಯದಲ್ಲಿ ಧರ್ಮಪತ್ನಿಯ ಸಮೇತ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಾಲಯಕ್ಕೆ ಭೇಟಿ ನೀಡಿದ ಕುರಿತು ಪ್ರತಿಕ್ರಿಯೆ ನೀಡಿದ ದೇಗುಲದ ಪ್ರಧಾನ ಅರ್ಚಕ ಶಾಮಾಚಾರ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂಕಲ್ಪ ಮಾಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗೇ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇಂದು ಮಂತ್ರಾಲಯದಲ್ಲಿ ಧರ್ಮಪತ್ನಿಯ ಸಮೇತ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯುವ ಸೌಭಾಗ್ಯ ಲಭಿಸಿತು. ಈ ಪವಿತ್ರ ಕ್ಷಣದಲ್ಲಿ, ನಾಡಿನ ಸಮಸ್ತ ಜನತೆಯ ಒಳಿತಿಗಾಗಿ ಮತ್ತು ಎಲ್ಲರ ಸುಖ-ಶಾಂತಿಗಾಗಿ ರಾಯರಲ್ಲಿ ಪ್ರಾರ್ಥಿಸಲಾಯಿತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶ್ರೀ ಸುಬುಧೇಂದ್ರ ಶ್ರೀಗಳ ಆಶಿರ್ವಾದ ಪಡೆದು ಫಲ-ಮಂತ್ರಾಕ್ಷತೆಗಳನ್ನು ಪಡೆದರು. ಈ ವೇಳೆ ಡಿಸಿಎಂ ಅವರಿಗೆ ಶ್ರೀ ಸುಬುಧೇಂದ್ರ ತೀರ್ಥರು ಶಾಲು ಹೊದಿಸಿ ಸನ್ಮಾನಿಸಿದರು. ಗುರು ರಾಯರ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಹಲವುಬಾರಿ…
ಬೆಂಗಳೂರು : ಬೆಂಗಳೂರಿನ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನವೆಂಬರ್ 17 ರಿಂದ ಎರಡು ದಿನ ಪರಿಷೆ ನಡೆಯಲಿದೆ. ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ ಆಗಿದೆ. ನವೆಂಬರ್ 17 ಮತ್ತು 18ರಂದು ಎರಡು ದಿನಗಳ ಕಾಲ ಪರಿಷೆ ನಡೆಯಲಿದೆ. ಬಸವನಗುಡಿಯ ದೊಡ್ಡಗಣಪತಿ ದೇವಾಲಯದಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಐತಿಹಾಸಿಕ ಹಿನ್ನೆಲೆ ಇದ್ದು, ಪ್ರತಿ ವರ್ಷದಂತೆ ಈ ವರ್ಷವು ಯಾವುದೇ ಅಹಿತಕರ ಘಟನೆ ಆಗದಂತೆ ಅದ್ಧೂರಿ ಆಗಿ ಕಡಲೆಕಾಯಿ ಪರಿಷೆ ನಡೆಸಲು ನಿರ್ಧರಿಸಲಾಗಿದೆ.
ರಾಯಚೂರು: ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂತ್ರಾಲಯದಲ್ಲಿ ಧರ್ಮಪತ್ನಿಯ ಸಮೇತ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಮಂತ್ರಾಲಯದಲ್ಲಿ ಧರ್ಮಪತ್ನಿಯ ಸಮೇತ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯುವ ಸೌಭಾಗ್ಯ ಲಭಿಸಿತು. ಈ ಪವಿತ್ರ ಕ್ಷಣದಲ್ಲಿ, ನಾಡಿನ ಸಮಸ್ತ ಜನತೆಯ ಒಳಿತಿಗಾಗಿ ಮತ್ತು ಎಲ್ಲರ ಸುಖ-ಶಾಂತಿಗಾಗಿ ರಾಯರಲ್ಲಿ ಪ್ರಾರ್ಥಿಸಲಾಯಿತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶ್ರೀ ಸುಬುಧೇಂದ್ರ ಶ್ರೀಗಳ ಆಶಿರ್ವಾದ ಪಡೆದು ಫಲ-ಮಂತ್ರಾಕ್ಷತೆಗಳನ್ನು ಪಡೆದರು. ಈ ವೇಳೆ ಡಿಸಿಎಂ ಅವರಿಗೆ ಶ್ರೀ ಸುಬುಧೇಂದ್ರ ತೀರ್ಥರು ಶಾಲು ಹೊದಿಸಿ ಸನ್ಮಾನಿಸಿದರು. ಗುರು ರಾಯರ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಹಲವುಬಾರಿ ಮಂತ್ರಾಲಯಕ್ಕೆ ಬಂದು ಗುರು ರಾಘವೆಂದ್ರ ಸ್ವಾಮಿಗಳ ದರ್ಶನ ಪಡೆಯಬೇಕು ಎಂದುಕೊಂಡಿದ್ದೆ. ಅನೇಕ ಸಲ ನನಗೆ ಆಹ್ವಾನವೂ ಇತ್ತು. ಆದರೆ ಸಾಧ್ಯವಾಗಿರಲಿಲ್ಲ. ಇಂದು ಕುಟುಂಬ ಸಮೇತ ಬಂದು ರಾಯರ ದರ್ಶನ ಪಡೆಯುವ ಭಾಗ್ಯ ಸಿಕ್ಕಿದೆ. ಇದು ನನ್ನ ಸೌಭಾಗ್ಯ. ಎಲ್ಲದಕ್ಕೂ…












