Author: kannadanewsnow57

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಿದೆ. ನಮೂನೆ-18 ರಲ್ಲಿ  ಮತಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಭಾರತ ಚುನಾವಣಾ ಆಯೋಗದ ಸೂಚನೆಯಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆಗೆ ವೇಳಾಪಟ್ಟಿ ನಿಗಧಿಪಡಿಸಿದ್ದಾರೆ. 1 ನವೆಂಬರ್ 2025 ಕ್ಕೆ ಇದ್ದಂತೆ ಮತದಾರರ ಪಟ್ಟಿ ಸಿದ್ದಪಡಿಸಲಾಗವುದು. ಈ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು, ನಗರಸಭೆ ವ್ಯಾಪ್ತಿಯಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ ಹಾಗೂ ನಿರ್ಧಿಷ್ಟಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು. ಮತದಾರ ಪಟ್ಟಿ ತಯಾರಿಕೆಗೆ ಸೆ.30 ರಂದು ಅಧಿಸೂಚನೆ  ಹೊರಡಿಸಲಾಗಿದೆ. ಅಕ್ಟೋಬರ್ 15 ರಂದು ಮೊದಲ ಬಾರಿಗೆ ಹಾಗೂ 25 ರಂದು ಎರಡನೇ ಬಾರಿಗೆ ಅಧಿಸೂಚನೆಯನ್ನು ಪತ್ರಿಕೆಗಳಲ್ಲಿ ಪ್ರಕಟಣೆ ನೀಡಲಾಗುವುದು. ನಮೂನೆ-18 ರಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 6 ಕಡೆಯ ದಿನವಾಗಿದೆ. ನವೆಂಬರ್ 20 ವರೆಗೆ…

Read More

ಕೊಪ್ಪಳ : ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅಕ್ಟೋಬರ್ 6ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 10.30 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 11.40ಕ್ಕೆ ಕೊಪ್ಪಳದ ಗಿಣಿಗೇರಾ ಏರ್ಸ್ಟ್ರೀಪ್ (ಎಂ.ಎಸ್.ಪಿ.ಎಲ್)ಗೆ ಆಗಮಿಸುವರು. ಅಲ್ಲಿಂದ 11.50ಕ್ಕೆ ನಿರ್ಗಮಿಸಿ ರಸ್ತೆಯ ಮೂಲಕ ಮಧ್ಯಾಹ್ನ 12 ಗಂಟೆಗೆ ಕೊಪ್ಪಳ ನಗರದ ಗಂಗಾವತಿ ರಸ್ತೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್) ಭೋಧಕ ಆಸ್ಪತ್ರೆಗೆ ಆಗಮಿಸಿ ವೈದ್ಯಕೀಯ ಶಿಕ್ಷಣ ಇಲಾಖೆ, ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್) ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೊಪ್ಪಳ ವತಿಯಿಂದ ಆಯೋಜಿಸಲಾದ 450 ಹಾಸಿಗೆಯ ಸಾಮರ್ಥ್ಯದ ಬೋಧಕ ಆಸ್ಪತ್ರೆಯ ನೂತನ ಕಟ್ಟಡ ಮತ್ತು ಧರ್ಮಶಾಲಾ ಕಟ್ಟಡದ ಉದ್ಘಾಟನಾ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿಸುವರು. ಮಧ್ಯಾಹ್ನ 12.30ಕ್ಕೆ ಕೊಪ್ಪಳ ಬಸ್ ನಿಲ್ದಾಣ ಎದುರುಗಡೆ ಭಕ್ತ ಕನಕದಾಸರ ಪುತ್ಥಳಿ ಅನಾವರಣಗೊಳಿಸುವರು. ನಂತರ 12.45ಕ್ಕೆ ಕೊಪ್ಪಳ ಸಮೀಪದ ಭಾಗ್ಯನಗರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ…

Read More

ನೇಪಾಳ: ಪೂರ್ವ ನೇಪಾಳದ ವಿವಿಧ ಸ್ಥಳಗಳಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾದ ಭೂಕುಸಿತ ಮತ್ತು ಪ್ರವಾಹದಲ್ಲಿ ಭಾನುವಾರ ಬೆಳಿಗ್ಗೆವರೆಗೆ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಎಂದು ಸಶಸ್ತ್ರ ಪೊಲೀಸ್ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಭಾರೀ ಮಳೆಯಿಂದ ಉಂಟಾದ ಭೂಕುಸಿತಗಳಿಂದಾಗಿ ಕೋಶಿ ಪ್ರಾಂತ್ಯದ ಇಲಾಮ್ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸುಮಾರು 37 ಜನರು ಸಾವನ್ನಪ್ಪಿದ್ದಾರೆ ಎಂದು ಸಶಸ್ತ್ರ ಪೊಲೀಸ್ ಪಡೆಯ ವಕ್ತಾರ ಕಾಳಿದಾಸ್ ಧೌಬಾಜಿ ತಿಳಿಸಿದ್ದಾರೆ. 37 ಜನರಲ್ಲಿ, ದೆಯುಮೈ ಮತ್ತು ಮೈಜೋಗ್ಮೈ ಪುರಸಭೆಗಳಲ್ಲಿ ತಲಾ ಎಂಟು ಜನರು, ಇಲಾಮ್ ಪುರಸಭೆ ಮತ್ತು ಸಂದಕ್ಪುರ್ ಗ್ರಾಮೀಣ ಪುರಸಭೆಯಲ್ಲಿ ತಲಾ ಆರು ಜನರು, ಸೂರ್ಯೋದಯ ಪುರಸಭೆಯಲ್ಲಿ ಐದು ಜನರು, ಮಂಗ್ಸೆಬಂಗ್ನಲ್ಲಿ ಮೂವರು ಮತ್ತು ಫಕ್ಫೋಕ್ಥಮ್ ಗ್ರಾಮದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಉದಯಪುರದಲ್ಲಿ ಇಬ್ಬರು ಮತ್ತು ಪಂಚಥರ್‌ನಲ್ಲಿ ಒಬ್ಬರು ಪ್ರವಾಹ ಮತ್ತು ಭೂಕುಸಿತದಿಂದ ಸಾವನ್ನಪ್ಪಿದ್ದಾರೆ. ಪ್ರತ್ಯೇಕವಾಗಿ,…

Read More

ಡಾರ್ಜಿಲಿಂಗ್ : ಪಶ್ಚಿಮ ಬಂಗಾಳದ ಸುಂದರ ಡಾರ್ಜಿಲಿಂಗ್ ಭಾನುವಾರ ಬೆಟ್ಟದ ಜಿಲ್ಲೆ ಮತ್ತು ಪಕ್ಕದ ಜಲ್ಪೈಗುರಿಯಲ್ಲಿ ನಿರಂತರ ಮಳೆಯಿಂದಾಗಿ ದಶಕದಲ್ಲಿ ಸಂಭವಿಸಿದ ಅತ್ಯಂತ ಭೀಕರ ಭೂಕುಸಿತಗಳಲ್ಲಿ ಒಂದನ್ನು ಕಂಡಿತು, ಇದರಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದರು ಮತ್ತು ಅನೇಕರು ಗಾಯಗೊಂಡರು. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ಮತ್ತು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮತ್ತು ಜಲಪೈಗುರಿ ಜಿಲ್ಲಾಡಳಿತಗಳು ಸಂಗ್ರಹಿಸಿದ ವರದಿಗಳ ಪ್ರಕಾರ, ಹಲವಾರು ಸ್ಥಳಗಳಿಂದ ಸಾವುನೋವುಗಳು ವರದಿಯಾಗಿವೆ – ಸರ್ಸಾಲಿ, ಜಸ್ಬಿರ್ಗಾಂವ್, ಮಿರಿಕ್ ಬಸ್ತಿ, ಧಾರ್ ಗಾಂವ್ (ಮೆಚಿ), ಮಿರಿಕ್ ಸರೋವರ ಪ್ರದೇಶ ಮತ್ತು ಜಲಪೈಗುರಿ ಜಿಲ್ಲೆಯ ನಾಗರಕಟ ಪ್ರದೇಶ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ಪ್ರಕಾರ, ಡಾರ್ಜಿಲಿಂಗ್ನಲ್ಲಿ ಒಟ್ಟು 18 ಜನರು ಸಾವನ್ನಪ್ಪಿದ್ದಾರೆ, ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶವಾದ ಮಿರಿಕ್ನಲ್ಲಿ 11 ಜನರು ಮತ್ತು ಜೋರೆಬಂಗ್ಲೋ, ಸುಕಿಯಾ ಪೋಖ್ರಿ ಮತ್ತು ಸದರ್ ಪೊಲೀಸ್ ಠಾಣೆ ಪ್ರದೇಶಗಳು ಸೇರಿದಂತೆ ಡಾರ್ಜಿಲಿಂಗ್ ಉಪವಿಭಾಗದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಜಲಪೈಗುರಿ ಜಿಲ್ಲೆಯ ನಾಗರಕಟದಲ್ಲಿ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಾಪಿಸಿ ನಿರ್ವಹಿಸಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಭಾರತ್ ಸ್ಕೌಟ್ಸ್ & ಗೈಡ್ಸ್ ಘಟಕಗಳನ್ನು ಸ್ಥಾಪಿಸಿ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ ಹಾಗೂ ಈ ಘಟಕಗಳನ್ನು ನಿರ್ವಹಿಸಲು ತರಬೇತಿ ಪಡೆದ ಅಧ್ಯಾಪಕರುಗಳಿಗೆ ಜವಾಬ್ದಾರಿ ನೀಡಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಯುವ ಆಪ ದ್ ಮಿತ್ರ ಯೋಜನೆಯ ಅಂಗವಾಗಿ ವಿವತ್ತು ನಿರ್ವಾಹಣಾ ತರಬೇತಿ ಶಿಬಿರಕ್ಕೆ ಆಸಕ್ತ ರೋವರ್ಸ್-ರೇಜರ್ಸ್, ದಳನಾಯಕರನ್ನು, ತರಬೇತಿಗೆ ಕಡ್ಡಾಯವಾಗಿ ನಿಯೋಜಿಸಲು ಅನುಬಂಧದಲ್ಲಿ ಲಗತ್ತಿಸಲಾಗಿದ್ದು ಪ್ರಾಂಶುಪಾಲರಿಗೆ ಈ ಮೂಲಕ ಸೂಚಿಸಲಾಗಿದೆ. ಅ.24 ರಿಂದ 30ರವರೆಗೆ ಡಾ. ಅನಿ ಬೆಸೆಂಟ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ತರಬೇತಿ ನಡೆಯಲಿದೆ. ಭಾಗವಹಿಸಿದ ವಿದ್ಯಾರ್ಥಿಗಳು ಮತ್ತು ಸ್ವಯಂ ಸೇವಕರು ಮುಂದಿನ 3…

Read More

ಬೆಂಗಳೂರು : 2025-26ನೇ ಸಾಲಿನ ಎರಡು ವರ್ಷಗಳ ಬಿ.ಇಡಿ. ಕೋರ್ಸ್‌ಗೆ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಮತ್ತು ಹಂಚಿಕೆ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಶೈಕ್ಷಣಿಕ ಸಾಲಿಗೆ ಎರಡು ವರ್ಷಗಳ ಬಿ.ಇಡಿ. ಪದವಿಯ ವ್ಯಾಸಂಗಕ್ಕಾಗಿ ದಾಖಲಾತಿ ಸಂಬಂಧ ಉಲ್ಲೇಖ: 1 ರಿಂದ 7ರ ವರೆಗಿನ ಆದೇಶಗಳನ್ವಯ ಮತ್ತು ಉಲ್ಲೇಖ (8) ರಲ್ಲಿ ವಿಶ್ವವಿದ್ಯಾಲಯಗಳಿಂದ ಸಲ್ಲಿಕೆಯಾದ ಪ್ರಸ್ತಾವನೆ ಹಾಗೂ ಉಲ್ಲೇಖ (9)ರ ಸರ್ಕಾರದ ಅನುಮತಿಯಂತೆ ಬಿ.ಇಡಿ. ಶಿಕ್ಷಣ ಮಹಾವಿದ್ಯಾಲಯಗಳಲ್ಲಿ ಲಭ್ಯವಿರುವ ಸರ್ಕಾರಿ ಕೋಟಾದ ಸೀಟುಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2025-26ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ದಿನಾಂಖ :04/10/2025 ರಿಂದ 2:03/11/2025 ರವರೆಗೆ ಆಹ್ವಾನಿಸಲಾಗಿದೆ. ವೆಬ್‌ಸೈಟ್ https://schooleducation.karnataka.gov.in ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ…

Read More

ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, ಅಕ್ಟೋಬರ್ 07, 2025 ರಂದು ಬೆಳಗ್ಗೆ 9 ಗಂಟೆಗೆ ತಮ್ಮ ಕಚೇರಿಗಳಲ್ಲಿ ಕಡ್ಡಾಯವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ನಿರ್ದೇಶಿಸಿದ್ದಾರೆ. ಜಿಲ್ಲಾ ಮಟ್ಟದ ಕಾರ್ಯಕ್ರಮ: ಅಕ್ಟೋಬರ 7 ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವ ಚಿತ್ರದ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಟೋಲ್‍ನಾಕ…

Read More

ಬೆಂಗಳೂರು : ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ. ನಮ್ಮಲ್ಲಿ ಅನೇಕ ಜಾತಿ, ಅನೇಕ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದರು. ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ ನಂಬಿಕೆ – ಬದ್ಧತೆ ಇಟ್ಟುಕೊಂಡಿದ್ದೇನೆ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು…

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅರ್ಜಿ ಆಹ್ವಾನಿಸಿದೆ. ಕೆಳಕಂಡ ಸರ್ಕಾರಿ ಸಂಸ್ಥೆ/ನಿಗಮ/ಸಂಸ್ಥೆಗಳಲ್ಲಿ ಉಳಿಕೆ ಮೂಲ ವೃಂದದಲ್ಲಿರುವ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು. 1. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 2. ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ 3. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 4. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ 5. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 6. ಕೃಷಿ ಮಾರಾಟ ಇಲಾಖೆ 7. ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು 8. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)

Read More

ಜೈಪುರ : ಜೈಪುರದ ಅತಿದೊಡ್ಡ ಆಸ್ಪತ್ರೆಯಾದ ಎಸ್ಎಂಎಸ್ನ ಆಘಾತ ಕೇಂದ್ರದಲ್ಲಿ ಸಂಭವಿಸಿದ ಬೆಂಕಿಯಲ್ಲಿ ಆರು ರೋಗಿಗಳು ಸಾವನ್ನಪ್ಪಿದ್ದಾರೆ. ಎಸ್ಎಂಎಸ್ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಹಲವಾರು ರೋಗಿಗಳನ್ನು ರಕ್ಷಿಸಲು ಬೆಂಕಿಯೊಳಗೆ ಹಾರಿದರು. ಘಟನೆ ಭಾನುವಾರ ಮಧ್ಯರಾತ್ರಿ ಸಂಭವಿಸಿದೆ. ವರದಿಗಳ ಪ್ರಕಾರ ಐದು ರೋಗಿಗಳು ಸುಟ್ಟುಹೋಗಿದ್ದಾರೆ. ಐಸಿಯುನಲ್ಲಿ ಬೆಂಕಿ ಎಷ್ಟು ತೀವ್ರವಾಗಿತ್ತೆಂದರೆ ಇಡೀ ವಿಭಾಗವೇ ಬೂದಿಯಾಯಿತು. ಕಾನ್ಸ್ಟೆಬಲ್ಗಳಾದ ವೇದವೀರ್ ಸಿಂಗ್, ಹರಿ ಮೋಹನ್ ಮತ್ತು ಲಲಿತ್ 10 ಕ್ಕೂ ಹೆಚ್ಚು ರೋಗಿಗಳು ಮತ್ತು ಅವರ ಸಂಬಂಧಿಕರನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ವರದಿ ಮಾಡಿದ್ದಾರೆ. ರೋಗಿಗಳನ್ನು ರಕ್ಷಿಸುವ ಸಮಯದಲ್ಲಿ, ಈ ಸಿಬ್ಬಂದಿ ಸ್ವತಃ ಪ್ರಜ್ಞಾಹೀನರಾದರು. ಹಲವಾರು ಪೊಲೀಸ್ ಅಧಿಕಾರಿಗಳು ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ. ಎಸ್ಎಂಎಸ್ ತುರ್ತು ಕೋಣೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಕಿ ಹೊತ್ತಿಕೊಂಡ ಐಸಿಯುಗೆ ಹನ್ನೊಂದು ರೋಗಿಗಳು ದಾಖಲಾಗಿದ್ದಾರೆ. ಐಸಿಯು ಮತ್ತು ಅರೆ-ಐಸಿಯುನಲ್ಲಿದ್ದ ಹದಿನೆಂಟು ರೋಗಿಗಳನ್ನು ಇತರ ಐಸಿಯುಗಳಿಗೆ ಸ್ಥಳಾಂತರಿಸಲಾಗಿದೆ. ಜೈಪುರದ ಎಸ್ಎಂಎಸ್ ಆಸ್ಪತ್ರೆ ರಾಜ್ಯದ ಅತಿದೊಡ್ಡ ಆಸ್ಪತ್ರೆಗಳಲ್ಲಿ ಒಂದಾಗಿದೆ. ಘಟನೆಯ…

Read More