Subscribe to Updates
Get the latest creative news from FooBar about art, design and business.
Author: kannadanewsnow57
ಬಳ್ಳಾರಿ : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಇ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಆ.14, 15ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. 78ನೇ ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಆ.14 ಮತ್ತು ಆ.15ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ಆ.15ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆ ಕೈಗೊಳ್ಳಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತ ಗಂಗಾಧರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಆಗಸ್ಟ್ 10 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಆಗಸ್ಟ್ 10 ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ಪಡಿತರ ಚೀಟಿಯಲ್ಲಿ ಹೆಂಡತಿ, ಮಕ್ಕಳ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ…
ಬೆಂಗಳೂರು : ಮೈಸೂರಿನಲ್ಲಿ 600 ಕೋಟಿ ರೂ. ಹೂಡಿಕೆಯೊಂದಿಗೆ ಹೊಸ ಕಂಪನಿಗಳ ಸ್ಥಾಪನೆ ಮಾಡಲಾಗುವುದು, ಇದರಿಂದ 5,000 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ, ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಡಿಸೈನ್ ಮತ್ತು ತಯಾರಿಕೆ (ಇಎಸ್ಡಿಎಂ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನಾಗಿಸುವ ಗುರಿ ಇಟ್ಟುಕೊಳ್ಳಲಾಗಿದ್ದು, ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಮ್ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್ಡಿಎಂ ಕಂಪನಿಗಳು ಕ್ಲಸ್ಟರ್ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600 ಕೋಟಿ ರೂ.ಗಳ ಹೊಸ ಹೂಡಿಕೆ ಹರಿದು ಬಂದಿದೆ. ಹೆಚ್ಚುವರಿಯಾಗಿ 150 ಎಕರೆಗಳಷ್ಟು ಪಿಸಿಬಿ ಕ್ಲಸ್ಟರ್ ಸ್ಥಾಪಿಸುವ ಉದ್ದೇಶದಿಂದ ಪ್ರಸ್ತುತ ಪರೀಕ್ಷಾ ಸೌಲಭ್ಯವನ್ನು ವಿಸ್ತರಿಸಲು, ಮಲ್ಟಿಟೆನೆನ್ಸಿ ಕ್ಲೀನ್ ರೂಮ್ ಅನ್ನು ಸೇರಿಸಲು ಉದ್ದೇಶಿಸಿದ್ದೇವೆ. ಇದು…
ಕೆಎನ್ ಎನ್ ಡಿಜಿಟಲ್ ಡೆಸ್ಕ್ : ಹಲ್ಲುಗಳು ಹಳದಿ ಬಣ್ಣವಾಗಿವೆ. ಇನ್ನು ಬಾಯಿ ದುರ್ವಾಸನೆ ಬೀರುತ್ತಿದೆ. ಇದಕ್ಕೆ ಮನೆಯಲ್ಲಿಯೇ ಕೆಲ ಪರಿಹಾರಗಳನ್ನು ಮಾಡಬಹುದು. ಅವುಗಳೆಂದರೆ, ದಿನಕ್ಕೆ ಎರಡು ಬಾರು ಹಲ್ಲು ಉಜ್ಜೋದು ಉತ್ತಮ ಅಭ್ಯಾಸ. ಇದರಿಂದ ಬಾಯಿಯ ಕೊಳೆ ಸಂಪೂರ್ಣವಾಗಿ ನಾಶವಾಗುತ್ತದೆ. ಬೆಳಗ್ಗೆ ಎದ್ದ ಮೇಲೆ ಹಾಗು ಮಲಗುವ ಮುನ್ನ ಹಲ್ಲುಜ್ಜಿದರೆ ದಂತವೈದ್ಯರ ಪ್ರಕಾರ ಹಲ್ಲಿನ ಯಾವುದೇ ಸಮಸ್ಯೆಗಳು ಅಷ್ಟು ಸುಲಭವಾಗಿ ಕಂಡುಬರುವುದಿಲ್ಲ. ಹಳೆಯ ಸಂಪ್ರದಾಯ ಪದ್ಧತಿಯಂತೆ ಹಲ್ಲುಜ್ಜಲು ಬೇವಿನ ಕಡ್ಡಿಯನ್ನು ಬಳಸಿ. ಇದೊಂದು ನೈಸರ್ಗಿಕ ಹಾಗು ಅಷ್ಟೆ ಪರಿಣಾಮಕಾರಿ ಮನೆಮದ್ದಾಗಿದೆ. ಬೇವಿನ ಕಡ್ಡಿಯಿಂದ ಹಲ್ಲು ಉಜ್ಜಿದರೆ ಹಲ್ಲುಗಳು ಬಿಳಿ ಬಣ್ಣಕ್ಕೆ ತಿರುಗುತ್ತವೆ ಹಾಗು ಕ್ಯಾವೀಟೀಸ್ಗಳಿಂದಲೂ ರಕ್ಷಣೆ ನೀಡುತ್ತದೆ. ಬ್ರೆಷ್ ಆದ ಮೇಲೆ ತೋರು ಬೆರಳನ ಮೂಲಕ ಒಸಡುಗಳನ್ನು ಉಜ್ಜಿಕೊಳ್ಳಿ. ಮಸಾಜ್ ಮಾಡುವರೂಪದಲ್ಲಿ ಒಸಡನ್ನು ಉಜ್ಜಿ. ಹೀಗೆ ಮಾಡಿದರೆ ಒಸಡಿನ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಇದರಿಂದ ಒಸಡಿನ ರಕ್ತಸ್ರಾವವನ್ನು ತಡೆಯಬಹುದು. ಹಲ್ಲು ಒಸಡಿನ ಜೊತೆಗೆ ನಾಲಿಗೆಯನ್ನೂ ಸ್ವಚ್ಛಗೊಳಿಸಿ. ಇಲ್ಲದಿದ್ದರೆ ಬಾಯಿಯಿಂದ ಕೆಟ್ಟ…
ಕಾರವಾರ : ಕಾರವಾರದಲ್ಲಿ ಮಧ್ಯರಾತ್ರಿ 60 ವರ್ಷದ ಹಳೆಯ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಕೋಡಿಭಾಗ್ ನಲ್ಲಿ ನಡೆದಿದೆ. ಕಾರವಾರದ ಕೋಡಿಭಾಗ್ ನಲ್ಲಿ ಕಾಳಿನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ 60 ವರ್ಷದ ಹಳೆಯ ಸೇತುವೆ ಕುಸಿದು ಬಿದ್ದಿದೆ. ಈ ಸೇತುವೆ ಹಲವು ದಿನಗಳಿಂದ ಬಿರುಕು ಬಿಟ್ಟಿತ್ತು. ಈ ನಡುವೆ ತಡರಾತ್ರಿ ಕುಸಿದು ಬಿದ್ಇದೆ. ಮಧ್ಯರಾತ್ರಿ ಸೇತುವೆ ಕುಸಿದು ಬಿದ್ದಿದ್ದು, ಜನರ ಸಂಚಾರ ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸೇತುವೆ ಕುಸಿದ ಪರಿಣಾಮ ತಮಿಳುನಾಡಿನ ಲಾರಿ ಚಾಲಕ ಬಾಲ ಮುರುಗನ್ ಲಾರಿ ಸಮೇತ ನದಿಗೆ ಬಿದ್ದಿದ್ದ ಈ ವೇಳೆ ಪೊಲೀಸರು ಹಾಗೂ ಸ್ಥಳೀಯ ಮೀನುಗಾರರು ಲಾರಿ ಚಾಲಕನನ್ನು ಕಾಪಾಡಿದ್ದಾರೆ. ಬಳಿಕ ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ : ಬೆಳಗಾವಿಯಲ್ಲಿ ತಡರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿಯ ನಾವಗೆಯ ಸ್ನೇಹಂ ಸೆಲೋ ಟೇಪ್ ತಯಾರಿಕಾ ಕಂಪನಿಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಕೆಎಲ್ ಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಗ್ನಿ ಅವಘಡ ಸಂದರ್ಭದಲ್ಲಿ ಒಟ್ಟು 153 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರೆ. ಮತ್ತೊಬ್ಬ ಕಾರ್ಮಿಕ ಯಲ್ಲಪ್ಪ ಎಂಬುವರು ನಾತ್ತೆಯಾಗಿದ್ದಾರೆ. ಸತತ 5 ಗಂಟೆಗಳಿಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಬೆಂಗಳೂರು: ರಾಜ್ಯದ ಖಾಸಗಿ ಕೈಗಾರಿಕೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಆಡಳಿತ ಮಂಡಳಿಯಲ್ಲಿ ಶೇ.50 ಮತ್ತು ನಿರ್ವಹಣೆಯೇತರ ಹುದ್ದೆಗಳಲ್ಲಿ ಶೇ.70ರಷ್ಟು ಮೀಸಲಾತಿ ನೀಡುವ ಕರಡು ಮಸೂದೆಗೆ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಅಮೃತಲಕ್ಷ್ಮಿ ಆರ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ. ಸಾಂವಿಧಾನಿಕ ಸವಾಲುಗಳು ಬಗೆಹರಿಯುವವರೆಗೆ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಅದರ ಅನುಷ್ಠಾನವನ್ನು ತಡೆಹಿಡಿಯಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಅರ್ಜಿದಾರರು ಐಎಂಟಿ ಇಂಡಸ್ಟ್ರಿಯಲ್ ಅಸೋಸಿಯೇಷನ್ ಪ್ರಕರಣದಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪನ್ನು ಅವಲಂಬಿಸಿದ್ದಾರೆ. 30,000 ರೂ.ಗಿಂತ ಕಡಿಮೆ ಮಾಸಿಕ ವೇತನ ಹೊಂದಿರುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಹರಿಯಾಣದ ಸ್ಥಳೀಯರಿಗೆ 75% ವಾಸಸ್ಥಳ ಮೀಸಲಾತಿ “ಅಸಂವಿಧಾನಿಕ” ಎಂದು ನ್ಯಾಯಾಲಯ ಘೋಷಿಸಿದ ಹರಿಯಾಣ ರಾಜ್ಯ ಮತ್ತು ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯವು “ಅಸಂವಿಧಾನಿಕ” ಎಂದು ಘೋಷಿಸಿತ್ತು. ಆದಾಗ್ಯೂ, ಮೇಲಿನ ತೀರ್ಪಿನಿಂದ ಭಿನ್ನವಾಗಿ, ನ್ಯಾಯಾಲಯವು “ಆ ಪ್ರಕರಣದಲ್ಲಿ ಶಾಸಕಾಂಗ…
ಬೆಂಗಳೂರು: ರಾಜ್ಯದಲ್ಲಿ ವಾಹನ ಚಾಲಕರಿಗೆ ನೀಡಲಾಗುವ ಡಿಎಲ್ ಮತ್ತು ವಾಹನ ನೋಂದಣಿ ಪ್ರಮಾಣ ಪತ್ರ ಸ್ವರೂಪ ಬದಲಾಯಿಸಲಾಗುತ್ತಿದ್ದು, ಮೈಕ್ರೋಚಿಪ್ ಜೊತೆಗೆ ಕ್ಯೂಆರ್ ಕೋಡ್ ಅಳವಡಿಸಿದ ಡಿಎಲ್ ಮತ್ತು ಆರ್ ಸಿ ಸ್ಮಾರ್ಟ್ ಕಾರ್ಡ್ ವಿತರಿಸಲು ರಾಜ್ಯ ಸಾರಿಗೆ ಇಲಾಖೆ ನಿರ್ಧರಿಸಿದೆ. ದೇಶಾದ್ಯಂತ ಏಕರೂಪದ ವಾಹನ ಚಾಲನಾ ಪರವಾನಿಗೆ, ವಾಹನ ನೋಂದಣಿ ಪ್ರಮಾಣ ಪತ್ರ ಜಾರಿಗೆ ಕೇಂದ್ರದಿಂದ ನಿಯಮ ತಂದಿದ್ದು, ರಾಜ್ಯದಲ್ಲಿ ಆರ್.ಸಿ., ಡಿಎಲ್ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದೆ. ಡಿಎಲ್ ಮತ್ತು ಆರ್.ಸಿ.ಗಳಲ್ಲಿ ಕ್ಯೂಆರ್ ಕೋಡ್ ಇರಲಿದ್ದು, ಅದನ್ನು ಸ್ಕ್ಯಾನ್ ಮಾಡಿದರೆ ವಾಹನ ಸಂಪೂರ್ಣ ವಿವರ ಮತ್ತು ಚಾಲಕನ ವಿವರ ಸಿಗಲಿದೆ. ವಾಹನಗಳ ಮೇಲೆ ಪ್ರಕರಣಗಳ ಕುರಿತು ಮಾಹಿತಿಯೂ ಸಿಗಲಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರೂಪಿಸಿರುವ ನಿಯಮ ಅನುಷ್ಠಾನಕ್ಕೆ ರಾಜ್ಯ ಸಾರಿಗೆ ಇಲಾಖೆ ಮುಂದಾಗಿದೆ. ಕ್ಯೂಆರ್ ಕೋಡ್ ಇರುವ ಡಿಎಲ್ ಮತ್ತು ಆರ್.ಸಿ. ಮುದ್ರಿಸಿ ವಿತರಿಸಲು ಟೆಂಡರ್ ಪ್ರಕ್ರಿಯೆ ನಡೆಸಲಾಗಿದ್ದು, ಈ…
ಮನುಷ್ಯನ ದೇಹಕ್ಕೆ ಉಟಕ್ಕಿಂತಲು ನೀರು ತುಂಬಾ ಮುಖ್ಯವಾಗುತ್ತದೆ. ದೇಹದಲ್ಲಿ ಮುಕ್ಕಾಲು ಭಾಗ ನೀರು ಆವೃತವಾಗಿದೆ. ಹೀಗಿದ್ದರೂ ತಜ್ಞರ ಪ್ರಕಾರ ಮನುಷ್ಯ ಆರೋಗ್ಯವಾಗಿರಬೇಕೆಂದರೆ ದಿನವೊಂದಕ್ಕೆ ಕನಿಷ್ಟ ಎಂಟು ಗ್ಲಾಸ್ ನೀರು ಸೇವಿಸಬೇಕು. ದಿನವೂ ತಣ್ಣೀರಿನ ಜೊತೆಗೆ ಒಂದು ಗ್ಲಾಸ್ ಬಿಸಿ ನೀರು ಸೇವಿಸಿ ಆಗ ನಿಮ್ಮ ಆರೋಗ್ಯದ ಮೇಲೆ ಚಮತ್ಕಾರವೇ ಆಗಿಬಿಡುತ್ತದೆ. ಬೆಳಗ್ಗೆ ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ವ್ಯಾಯಾಮ ಶುರು ಮಾಡುವ ಮೊದಲು ಒಂದು ಗ್ಲಾಸ್ ಬೆಚ್ಚಗಿನ ನೀರು ಕುಡಿಯಿರಿ. ಹೀಗೆ ಮಾಡಿದರೆ ದೇಹದ ತಾಪಮಾನ ಹೆಚ್ಚಾಗುತ್ತದೆ. ಇದು ವ್ಯಾಯಾಮದ ಒಂದು ಬಗೆ ಅಂದರೂ ತಪ್ಪಿಲ್ಲ. ಪ್ರತಿದಿನ ಬೆಚ್ಚಗಿನ ನೀರು ಸೇವೆನ ಮಾಡಿದರೆ ದೇಹದಲ್ಲಿನ ವಿಷಕಾರಿ ಅಂಶ ಕಡಿಮೆಯಾಗುತ್ತದೆ. ಇದರಿಂದ ಚರ್ಮದ ಆರೋಗ್ಯ ಚೆನ್ನಾಗಿರುತ್ತದೆ. ಹಾಗು ತ್ವಚೆ ಹೊಳಪಿನಿಂದ ಕೂಡಿರುತ್ತದೆ. ಚರ್ಮ ಭಾಗದಲ್ಲಿ ಕಂಡುಬರುವ ರಕ್ತನಾಳಗಳಲ್ಲಿ ಅಧಿಕ ರಕ್ತಸಂಚಾರ ಉಂಟಾಗುತ್ತದೆ ಹಾಗು ಚರ್ಮದ ಜೀವಕೋಶಗಳಿಗೆ ಪೌಷ್ಟಿಕ ಸತ್ವವನ್ನು ನೀಡುತ್ತದೆ. ಉಗುರು ಬೆಚ್ಚಗಿನ ನೀರು ಚರ್ಮದ ಭಾಗದಲ್ಲಿ ಕಂಡುಬರುವ ಫ್ರೀ ರಾಡಿಕಲ್ ಅಂಶವನ್ನು ಹೊರ…
ಬೆಂಗಳೂರು : ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತಂದಿದ್ದು, ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ರಾಜ್ಯ ಸರ್ಕಾರವು ಗೃಹ ಆರೋಗ್ಯ ಯೋಜನೆ ಮೊದಲ ಹಂತದಲ್ಲಿ ಎಂಟು ಜಿಲ್ಲೆಗಳಲ್ಲಿ ಮುಂದಿನ ತಿಂಗಳಿನಿಂದ ಆರಂಭವಾಗಲಿದೆ. ಈ ಯೋಜನೆಯ ಆರಂಭದ ದಿನಾಂಕವನ್ನು ಬುಧವಾರ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ. ಗೃಹ ಆರೋಗ್ಯ ಯೋಜನೆಯ ಮೂಲಕ ಮಧುಮೇಹ, ಅಧಿಕ ರಕ್ತದೊತ್ತಡ ಸೇರಿ ಇತರೆ ಆರೋಗ್ಯ ಸಮಸ್ಯೆ ಇರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಮನೆಗಳಿಗೆ ನೇರವಾಗಿ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಡಯಾಬಿಟಿಕ್, ಪ್ರಿ –ಡಯಾಬಿಟಿಕ್ ಪತ್ತೆ ಹಚ್ಚುವ ನಿಟ್ಟಿನಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸಮುದಾಯ ಮಧುಮೇಹ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.