Subscribe to Updates
Get the latest creative news from FooBar about art, design and business.
Author: kannadanewsnow57
ಮೈಸೂರು : ಕಲುಷಿತ ನೀರು ಸೇವಿಸಿ ಒಂದೇ ಗ್ರಾಮದ 25 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿಯಲ್ಲಿ ನಡೆದಿದೆ. ಜೆಜೆಎಂ ಯೋಜನೆಯ ಕಾಮಗಾರಿ ಪೈಲ್ ಲೈನ್ ಒಡೆದು ಕಲುಷಿತ ನೀರು ಸೇರ್ಪಡೆಯಾಗಿ ಕಡೇಮನುಗನಹಳ್ಳಿಯ 25 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ಗ್ರಾಮದ ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗ್ರಾಮಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ತಮ್ಮ ಜನ್ಮದಿನವಾದ ಮೇ 15 ರಂದು ಚುನಾವಣೆ ಪ್ರಚಾರ, ಖಾಸಗಿ ಕಾರ್ಯಕ್ರಮ ನಿಮಿತ್ತ ತಾವು ಉತ್ತರ ಭಾರತ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಯಾರಿಗೂ ಸಿಗುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಬಂಧುಗಳು ಅಂದು ತಮ್ಮನ್ನು ಭೇಟಿ ಮಾಡಲು ಪ್ರಯತ್ನಿಸುವುದು ಬೇಡ. ದಯವಿಟ್ಟು ಯಾರೂ ತಪ್ಪು ತಿಳಿಯಬಾರದು. ತಾವು ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ ಎಂದು ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಬರಗಾಲವಿದೆ. ಮಳೆ, ಬೆಳೆ ಇಲ್ಲದೆ ಜನರು ಬವಣೆ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾರೂ ನನ್ನ ಜನ್ಮದಿನವನ್ನು ಆಚರಿಸಬಾರದು. ಯಾವುದೇ ಕಾರ್ಯಕ್ರಮ ಹಮ್ಮಿಕೊಳ್ಳಬಾರದು. ಕಟೌಟ್, ಪೋಸ್ಟರ್ಸ್ ಹಾಕುವುದಾಗಲಿ, ಮಾಧ್ಯಮಗಳಲ್ಲಿ ಜಾಹೀರಾತು ನೀಡುವುದಾಗಲಿ ಮಾಡಬಾರದು. ನಿಮ್ಮ ಪ್ರೀತಿಯಷ್ಟೇ ನನಗೆ ಸಾಕು. ಅದುವೇ ನನಗೆ ಶ್ರೀರಕ್ಷೆ ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಫೇಲ್ ಆಗಿದ್ದಕ್ಕೆ ಹೆದರಿ ಎಂಜಿನಿಯರಿಂಗ್ ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಎರಡು ವಿಷಯಗಳಲ್ಲಿ ಫೇಲ್ ಆಗಿದ್ದಕ್ಕೆ ಹೆದರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಹಾರ ಮೂಲದ ಅಮೃತೇಶ್ ಪಾಂಡೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು, ಹೇಮಲತಾ ಪಾಂಡೆ, ವಿಜಯಶಂಕರ್ ದಂಪತಿಯ ಮಗ ಅಮೃತೇಶ್ ಪಾಂಡೆ ಆರ್. ವಿ.ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ. ಆದರೆ ಎರಡು ವಿಷಯದಲ್ಲಿ ಫೇಲ್ ಆಗಿದ್ದು, ತಂದೆಗೆ ತಿಳಿಯುತ್ತದೆ ಎಂದು ಹೆದರಿ ಜಿಗಣಿ ಕೆರೆಗೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಿಗಣಿ ಕೆರೆಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳೀಯರು ಜಿಗಣಿ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದ 21 ವರ್ಷದ ವ್ಯಕ್ತಿಯನ್ನು ಥಳಿಸಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಶಾಲ್ ಕುಮಾರ್ ಬಲಿಯಾಗಿದ್ದಾನೆ, ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕುಮಾರ್ ಅವರು ಪತ್ನಿ ಮತ್ತು ಒಂದು ವರ್ಷದ ಮಗನನ್ನು ಅಗಲಿದ್ದಾರೆ, ಅವರು ಪ್ರತಾಪ್ ನಗರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ಕಿರಿಯ ಸಹೋದರ ಮತ್ತು ಸಹೋದರಿ ಅಧ್ಯಯನ ಮಾಡುತ್ತಿದ್ದಾರೆ. ಕುಮಾರ್ ಸದರ್ ಬಜಾರ್ ನ ಸೌಂದರ್ಯವರ್ಧಕ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಅವರ ಕಿರಿಯ ಸಹೋದರ ಕುನಾಲ್ ತಮ್ಮ ಮನೆಯ ಬಳಿ ಕ್ರಿಕೆಟ್ ಆಡಲು ಹೋಗಿದ್ದರು, ನಂತರ, ಕುನಾಲ್ ಮತ್ತು ಇತರರ ನಡುವೆ ಜಗಳ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಕುನಾಲ್ ತನ್ನ ಸಹೋದರನನ್ನು ಅಲ್ಲಿಗೆ ಕರೆದನು. ಅವರು ಮೈದಾನವನ್ನು…
ನವದೆಹಲಿ : ಸೈನಿಕರ ಡ್ರೆಸ್ ಕೋಡ್ಗೆ ಸಂಬಂಧಿಸಿದಂತೆ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯಲ್ಲಿ, ಮಹಿಳಾ ಸೈನಿಕರ ಡ್ರೆಸ್ ಕೋಡ್ ಬಗ್ಗೆ ವಿಶೇಷ ವಿಷಯಗಳನ್ನು ಹೇಳಲಾಗಿದೆ. ಬಿಎಸ್ಎಫ್ ಹೊರಡಿಸಿದ ಸುತ್ತೋಲೆಯಲ್ಲಿ ಮಹಿಳಾ ಸೈನಿಕರು ಕರ್ತವ್ಯದಲ್ಲಿರುವಾಗ ಭಾರವಾದ ಮೇಕಪ್, ಉದ್ದನೆಯ ಕಿವಿಯೋಲೆಗಳು, ತೆರೆದ ಕೂದಲು ಮತ್ತು ಹೆಚ್ಚಿನ ಬಳೆಗಳನ್ನು ಧರಿಸಲು ಅನುಮತಿಸಲಾಗುವುದಿಲ್ಲ ಎಂದು ಹೇಳಲಾಗಿದೆ. ಶಿಸ್ತುಬದ್ಧ ಪಡೆಗೆ ಇದು ಒಳ್ಳೆಯದಲ್ಲ. ಯಾವುದೇ ಮಹಿಳಾ ಸಿಬ್ಬಂದಿ ಈ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದರೆ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಈ ಸುತ್ತೋಲೆಯನ್ನು ಮೇ 6 ರಂದು ಹೊರಡಿಸಲಾಗಿದೆ. ಮಹಿಳಾ ಸೈನಿಕರು ಕರ್ತವ್ಯದ ಸಮವಸ್ತ್ರವನ್ನು ಧರಿಸಿ ಭಾರಿ ಮೇಕಪ್ ಧರಿಸಿರುವುದು ಕಂಡುಬಂದಾಗ ಸುತ್ತೋಲೆ ಹೊರಡಿಸುವ ಅಗತ್ಯವು ಉದ್ಭವಿಸಿತು. ಇದಲ್ಲದೆ, ಮಹಿಳಾ ಸೈನಿಕರು ಕರ್ತವ್ಯದ ಸಮವಸ್ತ್ರದೊಂದಿಗೆ ಸಾಕಷ್ಟು ಅಲಂಕಾರಿಕ ಬಳೆಗಳನ್ನು ಧರಿಸಿದ್ದ ಅನೇಕ ಪ್ರಕರಣಗಳಿವೆ. ಬಿಎಸ್ಎಫ್ನಲ್ಲಿ ಡ್ರೆಸ್ ಕೋಡ್ನ ನಿಯಮಗಳು ತುಂಬಾ ಕಟ್ಟುನಿಟ್ಟಾಗಿವೆ,…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರು ಮೇ. 15 ರಂದು ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಇದೀಗ ವಿಮಾನ ಟಿಕೆಟ್ ಕ್ಯಾನ್ಸಲ್ ಆಗಿದೆ ಎಂದು ಹೇಳಲಾಗುತ್ತಿದೆ. ರಾಜ್ಯಕ್ಕೆ ವಾಪಸ್ ಬರಲು ಪ್ರಜ್ವಲ್ ರೇವಣ್ಣ ಅವರು ಲುಪ್ತಾನ್ಸಾ ಫ್ಲೈಟ್ ಟಿಕೆಟ್ ಬುಕ್ ಫ್ರಾಂಕ್ ಫರ್ಟ್ ನಿಂದ ಬೆಂಗಳೂರಿಗೆ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದರು. ಆದರೆ ಇದೀಗ ಈ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ ಎನ್ನಲಾಗಿದೆ. ಮೇ.15 ರ ಮಧ್ಯಾಹ್ನ 1.30 ಕ್ಕೆ ಫ್ರಾಂಕ್ ಫರ್ಟ್ ನಿಂದ ವಿಮಾನವು ಹೊರಡಲಿದ್ದು, ರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಆದರೆ ಈ ವಿಮಾನದ ಟಿಕೆಟ್ ಅನ್ನು ಬುಕ್ ಮಾಡಿದ್ದ ಪ್ರಜ್ವಲ್ ರೇವಣ್ಣ ಅವರು ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣವನ್ನು ಎಸ್ ಐಟಿಗೆ ನೀಡುವ ಮುನ್ನವೇ ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ಹೋಗಿದ್ದು,ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ…
ದಾವಣಗೆರೆ : ವಯೋಸಹಜವಾಗಿ ಮೃತಪಟ್ಟ ತಂದೆ ಸಾವಿನಿಂದ ಮನನೊಂದ ಮಗ ವಿಷ ಸೇವಿಸಿ ಆತ್ಮತಹ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಚೀಲಾಪುರ ಗ್ರಾಮದಲ್ಲಿ ನಡೆದಿದೆ. ವಯೋಸಹಜವಾಗಿ ತಂದೆ ಚಂದ್ರನಾಯ್ಕ್ (೬೨) ಮೃತಪಟ್ಟಿದ್ದು, ತಂದೆ ಸಾವಿನಿಂದ ಮನನೊಂದ ಮಗ ಶಿವಕುಮಾರ್ (೩೨) ಆತ್ಮಹತ್ಯೆಗೆ ಶರಣಾಗಿದ್ದಾರೆ. ದಿವ್ಯಾಂಗನಾಗಿದ್ದ ಶಿವಕುಮಾರ್ ಗೆ ಆಸರೆಯಾಗಿದ್ದ ತಂದೆ ಚಂದ್ರನಾಯ್ಕ್ ಸಾವಿನಿಂದ ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು:ಜೂನ್ 3 ರಂದು ನಡೆಯಲಿರುವ ಆರು ವಿಧಾನ ಪರಿಷತ್ ಸ್ಥಾನಗಳ ಪೈಕಿ ಐದು ಸ್ಥಾನಗಳಿಗೆ ಬಿಜೆಪಿ ಶನಿವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಪಕ್ಷವು ತನ್ನ ಮಿತ್ರ ಪಕ್ಷವಾದ ಜೆಡಿಎಸ್ ಗೆ ಒಂದು ಸ್ಥಾನವನ್ನು ನಿಗದಿಪಡಿಸಿದೆ.ಹಾಲಿ ಸದಸ್ಯರ ನಿವೃತ್ತಿಯಿಂದಾಗಿ ಜೂನ್ ೨೧ ರಂದು ಆರು ಸ್ಥಾನಗಳು ಖಾಲಿಯಾಗಲಿವೆ. ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ್ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರದಿಂದ ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜು ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ನೈಋತ್ಯ ಶಿಕ್ಷಕರ ಕ್ಷೇತ್ರವನ್ನು ತನ್ನ ಮಿತ್ರ ಪಕ್ಷವಾದ ಜನತಾದಳ (ಸೆಕ್ಯುಲರ್) ಗೆ ಬಿಟ್ಟಿರುವುದರಿಂದ ಪಕ್ಷವು ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ. ಜೂನ್ 3 ರಂದು ಮತದಾನ ನಡೆಯಲಿದ್ದು, ಜೂನ್ 6 ರಂದು ಮತ ಎಣಿಕೆ ನಡೆಯಲಿದೆ ಎಂದು…
ಬೆಂಗಳೂರು : ಬೆಂಗಳೂರಿನಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಫಂಗಲ್ ಇನ್ಫೆಕ್ಷನ್ ಹಾಗೂ ಥ್ರೋಟ್ ಇನ್ಫೆಕ್ಷನ್ ಕೇಸ್ಗಳು 10% ರಷ್ಟು ಹೆಚ್ಚಳವಾಗಿವೆ. ಹವಾಮಾನ ವೈಪರಿತ್ಯದಿಂದಾಗಿ ಥ್ರೋಟ್ ಇನ್ಫೆಕ್ಷನ್ ಜಾಸ್ತಿಯಾಗಿವೆ. ಹೆಚ್ಚು ಬಿಸಿಲು ಅಂತ ಅತೀವವಾದ ತಣ್ಣನೆಯ ಆಹಾರ ಪದಾರ್ಥಗಳನ್ನ ಸೇವಿಸುವುದರ ಜೊತೆಗೆ ನೀರು ಕುಡಿಯುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಅಲ್ಲದೇ ಹವಾಮಾನದಲ್ಲಿನ ಬದಲಾವಣೆಗೆ ದೇಹ ತಕ್ಷಣಕ್ಕೆ ಹೊಂದಿಕೊಳ್ಳುವುದಿಲ್ಲ. ಈ ವೇಳೆ ಥ್ರೋಟ್ ಇನ್ಫೆಕ್ಷನ್ ಕೇಸ್ಗಳು ಹೆಚ್ಚಾಗಿ ಕಂಡು ಬರಲಿದೆ. ಥ್ರೋಟ್ ಇನ್ಫೆಕ್ಷನ್ ಕಂಟಲು ನೋವು ಬರುವುದು, ಏರು ಉಸಿರು ಕಾಣಿಸಿಕೊಳ್ಳುವುದು, ತಲೆಭಾರವಾಗುವುದು, ಅಲರ್ಜಿ ಆಗುವಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸಧ್ಯ ಬೆಂಗಳೂರಿನಲ್ಲಿ 10% ರಷ್ಟು ಥ್ರೋಟ್ ಇನ್ಫೆಕ್ಷನ್ ಕಾಣಿಸಿಕೊಳ್ಳುತ್ತಿದ್ದು, ಮಧ್ಯ ವಯಸ್ಕರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಇನ್ನು, ಥ್ರೋಟ್ ಇನ್ಫೆಕ್ಷನ್ ಜೊತೆಗೆ ಫಂಗಲ್ ಇನ್ಫೆಕ್ಷನ್ ಕೇಸ್ಗಳು ಸಹ ಹೆಚ್ಚಾಗುತ್ತಿವೆ.ಫಂಗಲ್ ಇನ್ಫೆಕ್ಷನ್ ಹೆಚ್ಚಾದಾಗ ದೇಹದಲ್ಲಿ ರೋಗ ನಿರೋಧಕ ಶಕ್ತಿಯು ಕಡಿಮೆಯಾಗುತ್ತದೆ. ಇದರಿಂದ ಸ್ಕಿನ್ನಲ್ಲಿ ವೈಟ್ ಪ್ಯಾಚಾಸ್ ಉಂಟಾಗುವುದು, ಸ್ಕಿನ್ ಡ್ರೈ…
ಭಾನುವಾರದಂದು ಭಗವಂತನಿಗೆ ಈ ಮಾಲೆಯನ್ನು ನಿಮ್ಮ ಕೈಯಿಂದಲೇ ಕಟ್ಟಿಕೊಂಡರೆ ಎಷ್ಟೇ ದೊಡ್ಡ ಅಡೆತಡೆಯಾದರೂ ಕ್ಷಣಾರ್ಧದಲ್ಲಿ ನಿವಾರಣೆಯಾಗುತ್ತದೆ. ಋಣಭಾರ ತೊಲಗಲು, ದುಷ್ಟ ಶಕ್ತಿಗಳಿಂದ ಮುಕ್ತಿ ಪಡೆಯಲು, ಶತ್ರು ಬಾಧೆಯಿಂದ ಮುಕ್ತಿ ಹೊಂದಲು ಭೈರವನ ಆರಾಧನೆ ಹೇಗೆ ಉತ್ತಮವೋ, ಅದೇ ರೀತಿ ಅಡೆತಡೆಗಳ ನಿವಾರಣೆಗೆ ಭೈರವನ ಆರಾಧನೆ ಮಾಡಬಹುದು. ಕೆಲವು ಕೆಲಸಗಳು ಎಂದಿಗೂ ಮುಗಿಯುವುದಿಲ್ಲ. ನಾವು ಅನೇಕ ವಿಷಯಗಳನ್ನು ಪ್ರಯತ್ನಿಸಿದ್ದೇವೆ. ಭೈರವನನ್ನು ಪೂಜಿಸುವಾಗ ಅಡೆತಡೆಗಳು ಕಂಡುಬಂದರೆ ತಕ್ಷಣವೇ ಅಡೆತಡೆಗಳು ನಿವಾರಣೆಯಾಗುತ್ತವೆ. ಶಿವನ ಅಂಶವುಳ್ಳ ಈ ಭೈರವನಿಗೆ ಎಂತಹ ದೊಡ್ಡ ಸಂಕಷ್ಟವನ್ನೂ ನಿವಾರಿಸುವ ಶಕ್ತಿಯಿದೆ. ಅಡೆತಡೆಗಳನ್ನು ನಿವಾರಿಸುವ ಭೈರವನ ಆರಾಧನೆಯನ್ನು ನಾವೂ ತಿಳಿಯೋಣವೇ? ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ…












