Author: kannadanewsnow57

ಯುವನಿಧಿ ಯೋಜನೆಯಡಿ ನೋಂದಾಯಿತರಾಗಿ ನಿರುದ್ಯೋಗ ಭತ್ಯೆಯನ್ನು ಪಡೆಯುತ್ತಿರುವ ಫಲಾನುಭವಿಗಳು ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಲು ಕೌಶಲ್ಕರ್ ಪೋರ್ಟಲ್ನಲ್ಲಿ ಕಡ್ಡಾಯವಾಗಿ ನೊಂದಣಿಯಾಗಲು ಸೂಚಿಸಲಾಗಿದೆ. ತರಬೇತಿ ಅವಧಿಯಲ್ಲಿ ಯುವನಿಧಿ ನಿರುದ್ಯೋಗ ಭತ್ಯೆಯನ್ನು ಪಡೆಯಲು ಯಾವುದೇ ತೊಂದರೆ ಇರುವುದಿಲ್ಲ. ಫಲಾನುಭವಿಗಳು ಕೌಶಲ್ಕರ್ ಪೋರ್ಟ್ನಲ್ಲಿ ನೊಂದಾಯಿಸದಿದ್ದರೆ, ಅವರ ಭತ್ಯ ಸ್ಥಗಿತಗೊಳಿಸುವ ಷರತ್ತು ವಿಧಿಸಲಾಗಿದೆ. ಔದ್ಯೋಗಿಕ ಬೇಡಿಕೆಗಳ ಅನುಸಾರವಾಗಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿ ನೀಡಿ ಶೇ.70 ರಷ್ಟು ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸಲಾಗುವುದು. ಫಲಾನುಭವಿಗಳು www.kaushalkar.com/app/registration-verify ಕೌಶಲ್ಕರ್ ಈ ಪೋರ್ಟಲ್ನಲ್ಲಿ ನೊಂದಾಯಿಸಿಕೊಂಡು ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು. ವಿದೇಶದಲ್ಲಿ ಉದ್ಯೋಗಾಸಕ್ತಿ ಹೊಂದಿರುವ ನರ್ಸಿಂಗ್ ವ್ಯಾಸಾಂಗ ಮಾಡಿರುವ ಹಾಗೂ ಮಾಡುತ್ತಿರುವವರಿಗೆ ಉಚಿತವಾಗಿ ವಿದೇಶಿ ಭಾಷಾ ತರಬೇತಿ ನೀಡಲಾಗುದೆ. ಆಸಕ್ತರು http://nursesflt.ksdckarnataka.com ಪೊರ್ಟ್ಲ್ನಲ್ಲಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಸರಸ್ವತಿಪುರಂ 3ನೇ ಕ್ರಾಸ್, ರಾಯಲ್ ಓಕ್ ಕಟ್ಟಡದ ಹಿಂಬಾಗದಲ್ಲಿರುವ ಕಛೇರಿ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 7338674796, 7338674791 ಗೆ ಕರೆ ಮಾಡುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ…

Read More

ಕಾರವಾರ : ಕಾರವಾರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಹೊಟ್ಟೆಗೆ ಮೀನಿನ ಮೂತಿ ಚುಚ್ಚಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದಾನೆ. ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗ ನಿವಾಸಿ 24 ವರ್ಷದ ಅಕ್ಷಯ ಅನಿಲ ಮಾಜಾಳಿಕರ್ ಮೃತ ಯುವಕ. ಅಕ್ಷಯ ಮಂಗಳವಾರ (ಅ.14) ಎಂದಿನಂತೆ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಎರಡು ದಿನಗಳ ಹಿಂದೆ ಅಕ್ಷಯ್ ಮೀನುಗಾರಿಕೆಗೆ ತೆರಳಿದಾಗ ಸ್ಥಳೀಯವಾಗಿ ‘ತೋಳೆ ಕಾಂಡೆ ಮೀನು’ ಎಂದು ಕರೆಯಲಾಗುವ ಅಟ್ಲಾಂಟಿಕ್ ನೀಡಲ್‌ ಫಿಶ್ ಆತನ ಹೊಟ್ಟೆಗೆ ಚುಚ್ಚಿತ್ತು. ಗಾಯಗೊಂಡಿದ್ದ ಆತನನ್ನು ಕಾರವಾರ ಕ್ರಿಮ್ಸ್ ಬೋಧಕ ಆಸ್ಪತ್ರೆಗೆ ಸೇರಿಸಲಾಗಿತ್ತು. ವೈದ್ಯರು ಗಾಯಕ್ಕೆ ಹೊಲಿಗೆ ಹಾಕಿ ಚಿಕಿತ್ಸೆ ನೀಡಿದ್ದರು. ಆದರೆ, ಆತ ಗುಣಮುಖವಾಗದ ಕಾರಣ ಮತ್ತೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ರಾತ್ರಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.  ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಮತ್ತು ಸ್ಥಳೀಯ ಮೀನುಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಬೆಂಗಳೂರು ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಹೆತ್ತ ತಾಯಿರನ್ನೇ ಪಾಪಿ ಪುತ್ರರು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.  ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯ ನಡೆದಿದ್ದು, ಮಗನೊಬ್ಬ ತನ್ನ ಹೆತ್ತ ತಾಯಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಹೆತ್ತ ತಾಯಿಯನ್ನೇ ಕತ್ತು ಸೀಳಿ ಕೊಂದು ಪಾಪಿ ಪುತ್ರ.! ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಜಾಲಮಂಗಲದಲ್ಲಿ ಸ್ವಂತ ಮಗನೇ ತಾಯಿಯನ್ನು ಕೊಲೆ ಮಾಡಿದ್ದಾನೆ. ಕೊಲೆಯಾದ ಮಹಿಳೆಯನ್ನು ಸರೋಜಮ್ಮ (60) ಎಂದು ಗುರುತಿಸಲಾಗಿದೆ. ಅನಿಲ್ (36) ತಾಯಿಯನ್ನೇ ಕೊಂದ ಮಗ. ಜಮೀನು ಮಾರಾಟ ಮಾಡಿದ ಹಣ ಕೊಡಲಿಲ್ಲ ಎಂದು ತಾಯಿಯಾದ ಸರೋಜಮ್ಮಳ ಕತ್ತು ಕೊಯ್ದಿದ್ದಾನೆ. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ಸರೋಜಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆಯಲ್ಲಿ ಕುಡಿಯಲು ಹಣ ಕೊಡಲಿಲ್ಲವೆಂದು ಹೆತ್ತ ತಾಯಿಯನ್ನೇ…

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನ್ಯಾಯಾಲಯವು ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಮೊಹಮ್ಮದ್ ಯೂಸುಫ್ ಶಾ ಅಲಿಯಾಸ್ ಸೈಯದ್ ಸಲಾಹ್-ಉದ್-ದಿನ್ ನನ್ನು 2012 ರ ಪ್ರಕರಣದಲ್ಲಿ ಘೋಷಿತ ಅಪರಾಧಿ ಎಂದು ಘೋಷಿಸಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಸೊಪೋರ್ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಣಬೀರ್ ದಂಡ ಸಂಹಿತೆಯ ಸೆಕ್ಷನ್ 153-ಬಿ (ಆರೋಪಗಳು, ರಾಷ್ಟ್ರೀಯ ಏಕೀಕರಣಕ್ಕೆ ಹಾನಿಕರವಾದ ಪ್ರತಿಪಾದನೆಗಳು) ಮತ್ತು ಐಪಿಸಿಯ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಶಾನನ್ನು ಘೋಷಿತ ಅಪರಾಧಿ ಎಂದು ಘೋಷಿಸಿದೆ. “ಭಯೋತ್ಪಾದನೆಯ ವಿರುದ್ಧದ ಯುದ್ಧ ಮುಂದುವರೆದಿದೆ: ಪಾಕಿಸ್ತಾನದಿಂದ ಆಶ್ರಯ ಪಡೆದಿರುವ ಹಿಜ್ಬುಲ್ ಮುಜಾಹಿದ್ದೀನ್ನ ಸ್ವಯಂ ಘೋಷಿತ ಕಮಾಂಡರ್ ಮೊಹಮ್ಮದ್ ಯೂಸುಫ್ ಶಾ ಅಲಿಯಾಸ್ ಸೈಯದ್ ಸಲಾಹುದ್ದೀನ್ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಘೋಷಣೆ ಆದೇಶಗಳನ್ನು ಪಡೆದುಕೊಂಡಿದ್ದಾರೆ, ಪಿಎಸ್ ಡಂಗಿವಾಚಾ ಅವರ ಎಫ್ಐಆರ್ 67/2012 ರಲ್ಲಿ!” ಜೆ-ಕೆ ಪೊಲೀಸರು X ನಲ್ಲಿ ತಿಳಿಸಿದ್ದಾರೆ. https://twitter.com/JmuKmrPolice/status/1978868515550695740?ref_src=twsrc%5Etfw%7Ctwcamp%5Etweetembed%7Ctwterm%5E1978868515550695740%7Ctwgr%5Ee98535871a66505cd6ad1a86ada8fb9858f583c4%7Ctwcon%5Es1_c10&ref_url=https%3A%2F%2Fwww.newsdrum.in%2Fnational%2Fcourt-in-j-ks-baramulla-declares-hizbul-mujahideen-chief-proclaimed-offender-10570151tw ಈ ವರ್ಷದ ಜುಲೈನಲ್ಲಿ, ಇಲ್ಲಿನ NIA…

Read More

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಾದೇವ ನಗರದಲ್ಲಿ ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಓರ್ವ ಬಾಲಕ ಹಾಗೂ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಶಿವಮ್ಮ ರಾಜೂ ರಾಠೋಡ್ (8), ಕಾರ್ತಿಕ ವಿಶ್ವಾ ರಾಠೋಡ್ (7) ಹಾಗೂ ಸ್ವಪ್ನಾ ರಾಜೂ ರಾಠೋಡ್ (12) ಮೃತ ಮಕ್ಕಳು ಎಂದು ಗುರುತಿಸಲಾಗಿದೆ. ಕುರಿಗಳ ಜೊತೆಗೆ ಆಟ ಆಡುತ್ತಾ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

Read More

ಕೆನಡಾ : ಆಘಾತಕಾರಿ ಘಟನೆಯೊಂದರಲ್ಲಿ ಕೆನಡಾದ ಸರ್ರೆಯಲ್ಲಿರುವ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆಫೆ ಕ್ಯಾಪ್ಸ್ ಕೆಫೆ ಮತ್ತೊಮ್ಮೆ ದಾಳಿಗೆ ಒಳಗಾಗಿದೆ. ಇದು ಕೇವಲ ನಾಲ್ಕು ತಿಂಗಳಲ್ಲಿ ಮೂರನೇ ಗುಂಡಿನ ದಾಳಿಯಾಗಿದ್ದು, ಭದ್ರತೆ ಮತ್ತು ಗ್ಯಾಂಗ್ ಸಂಬಂಧಿತ ಹಿಂಸಾಚಾರದ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಗುರುವಾರ ರಾತ್ರಿಯ ಒಂದು ವೀಡಿಯೊದಲ್ಲಿ, ಹಿಂದಿನ ದಾಳಿಗಳ ನಂತರ ದುರಸ್ತಿ ಮಾಡಿದ ನಂತರ ಇತ್ತೀಚೆಗೆ ಮತ್ತೆ ತೆರೆಯಲಾದ ಕೆಫೆಯ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ. ಈ ಘಟನೆಯನ್ನು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹಚರರು ಹೇಳಿಕೊಂಡಿದ್ದಾರೆ, ಕುಲ್ವೀರ್ ಸಿಧು ಮತ್ತು ಗೋಲ್ಡಿ ಧಿಲ್ಲನ್ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ದಾಳಿಯನ್ನು ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಈ ಇಬ್ಬರು ಸಾರ್ವಜನಿಕರೊಂದಿಗೆ ತಮಗೆ ಯಾವುದೇ ದ್ವೇಷವಿಲ್ಲ ಎಂದು ಹೇಳಿದರು ಆದರೆ “ನಮ್ಮ ಧರ್ಮದ ವಿರುದ್ಧ ಮೋಸ ಮಾಡುವವರು ಅಥವಾ ಮಾತನಾಡುವವರು ಸಿದ್ಧರಾಗಿರಬೇಕು, ಗುಂಡುಗಳು ಎಲ್ಲಿಂದಲಾದರೂ ಬರಬಹುದು” ಎಂದು ಎಚ್ಚರಿಸಿದರು. https://twitter.com/ndtv/status/1978810270349725826?ref_src=twsrc%5Etfw%7Ctwcamp%5Etweetembed%7Ctwterm%5E1978810270349725826%7Ctwgr%5Eed9a7fc57e9e8dd47960254e527c862c2e270022%7Ctwcon%5Es1_c10&ref_url=https%3A%2F%2Fkannadadunia.com%2Fshocking-comedian-kapil-sharma-cafe-again-attacked-by-gunmen-video-goes-viral-watch-video%2F

Read More

ನವದೆಹಲಿ : ತಂತ್ರಜ್ಞಾನ-ಸಕ್ರಿಯಗೊಳಿಸಿದ ಮತ್ತು ಹೊಂದಿಕೊಳ್ಳುವ ಉದ್ಯೋಗಕ್ಕೆ ಪ್ರವೇಶವನ್ನ ವಿಸ್ತರಿಸುವ ಗುರಿಯನ್ನ ಹೊಂದಿರುವ ಈ ಕ್ರಮದಲ್ಲಿ, ಭಾರತ ಸರ್ಕಾರವು ಜೊಮಾಟೊ ಜೊತೆ ತಿಳುವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಿದೆ, ಇದು ರಾಷ್ಟ್ರೀಯ ವೃತ್ತಿ ಸೇವೆ (NCS) ಪೋರ್ಟಲ್ ಮೂಲಕ ವಾರ್ಷಿಕವಾಗಿ 2.5 ಲಕ್ಷ ಉದ್ಯೋಗಾವಕಾಶಗಳನ್ನ ಸೃಷ್ಟಿಸುತ್ತದೆ. ಈ ಸಹಯೋಗವು ಭಾರತದ ಔಪಚಾರಿಕ ಉದ್ಯೋಗ ಪರಿಸರ ವ್ಯವಸ್ಥೆಯಲ್ಲಿ ವೇದಿಕೆ ಆಧಾರಿತ ಗಿಗ್ ಪಾತ್ರಗಳನ್ನ ಸಂಯೋಜಿಸುವ ಕಡೆಗೆ ಒಂದು ಕಾರ್ಯತಂತ್ರದ ಹೆಜ್ಜೆಯನ್ನ ಗುರುತಿಸುತ್ತದೆ, ವಿಶೇಷವಾಗಿ ಯುವಕರು ಮತ್ತು ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಪ್ರಯೋಜನವನ್ನು ನೀಡುತ್ತದೆ. NCS ಪೋರ್ಟಲ್ ಎಂದರೇನು? 2015ರಲ್ಲಿ ಪ್ರಾರಂಭವಾದ ರಾಷ್ಟ್ರೀಯ ವೃತ್ತಿ ಸೇವೆ (NCS) ಪೋರ್ಟಲ್ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಒಂದು ಪ್ರಮುಖ ವೇದಿಕೆಯಾಗಿದ್ದು, ವಿವಿಧ ವಲಯಗಳ ಉದ್ಯೋಗದಾತರೊಂದಿಗೆ ಉದ್ಯೋಗಾಕಾಂಕ್ಷಿಗಳನ್ನು ಸಂಪರ್ಕಿಸಲು ವಿನ್ಯಾಸಗೊಳಿಸಲಾಗಿದೆ. 2025ರ ಹೊತ್ತಿಗೆ, ಪೋರ್ಟಲ್ 7.7 ಕೋಟಿಗೂ ಹೆಚ್ಚು ಖಾಲಿ ಹುದ್ದೆಗಳನ್ನು ಸಜ್ಜುಗೊಳಿಸಿದೆ, ಇದು ದೇಶಾದ್ಯಂತ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗ ಮತ್ತು ಜೀವನೋಪಾಯವನ್ನು ಸುಗಮಗೊಳಿಸುವ ಮಹತ್ವದ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯ ನಡೆದಿದ್ದು, ಮಗನೊಬ್ಬ ತನ್ನ ಹೆತ್ತ ತಾಯಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಜಾಲಮಂಗಲದಲ್ಲಿ ಸ್ವಂತ ಮಗನೇ ತಾಯಿಯನ್ನು ಕೊಲೆ ಮಾಡಿದ್ದಾನೆ. ಕೊಲೆಯಾದ ಮಹಿಳೆಯನ್ನು ಸರೋಜಮ್ಮ (60) ಎಂದು ಗುರುತಿಸಲಾಗಿದೆ. ಅನಿಲ್ (36) ತಾಯಿಯನ್ನೇ ಕೊಂದ ಮಗ. ಜಮೀನು ಮಾರಾಟ ಮಾಡಿದ ಹಣ ಕೊಡಲಿಲ್ಲ ಎಂದು ತಾಯಿಯಾದ ಸರೋಜಮ್ಮಳ ಕತ್ತು ಕೊಯ್ದಿದ್ದಾನೆ. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ಸರೋಜಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಹಿನ್ನೆಲೆ ಮಾಜಿ ಕ್ರಿಕೆಟಿಗ ಸುನೀಲ್ ಜೋಶಿ ಅವರು ಎಕ್ಸ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಆಕ್ರೋಶ ಹೊರಹಾಕಿರುವ ಕ್ರಿಕೆಟರ್ ಸುನೀಲ್ ಜೋಶಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸರ್, ವಿಮಾನ ನಿಲ್ದಾಣ ಮಾರ್ಗದಲ್ಲಿ ದಿನದ ವೇಳೆಯಲ್ಲೂ ಸರಕು ಮತ್ತು ನಿರ್ಮಾಣ ವಾಹನಗಳನ್ನು ಹೇಗೆ ಅನುಮತಿಸಲಾಗುತ್ತಿದೆ? ಇವುಗಳಿಗೆ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಮಾತ್ರ ಚಾಲನೆಗೆ ಅನುಮತಿ ಇರಬೇಕು ಅಲ್ಲವೇ? ಈಗ ಈ ವಾಹನಗಳು ಫಾಸ್ಟ್ ಲೇನ್ಗಳನ್ನು ಬಂದ್ ಮಾಡುತ್ತಿವೆ, ಇದರಿಂದ ವಿಮಾನ ನಿಲ್ದಾಣಕ್ಕೆ ಹೋಗುವ ಅಥವಾ ಬರುವ ಪ್ರಯಾಣಿಕರಿಗೆ ಭಾರೀ ಟ್ರಾಫಿಕ್ ಜಾಮ್ ಆಗುತ್ತಿದೆ. ದಯವಿಟ್ಟು ಈ ಕುರಿತು ಕ್ರಮ ಕೈಗೊಳ್ಳಿ ಸರ್, ಸಾಮಾನ್ಯ ಜನರು ಪ್ರಯಾಣಿಸಲು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ ಎಂದು ಪೋಸ್ಟ್ ಮಾಡಿದ್ದಾರೆ. https://twitter.com/SunilJoshi_Spin/status/1978755061762216166

Read More

ಲಕ್ನೋ : ಮಕ್ಕಳ ಕೈಗೆ ಮೊಬೈಲ್ ಕೊಡುವ ಪೋಷರಕೇ ಎಚ್ಚರ, ಉತ್ತರ ಪ್ರದೇಶದ ಲಕ್ನೋದಿಂದ ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಮೊಬೈಲ್ ಗೇಮ್ ಆಡುತ್ತಿದ್ದಾಗ 13 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಕುಟುಂಬದವರು ಅವನು ನಿದ್ದೆಗೆ ಜಾರಿದ್ದನೆಂದು ಭಾವಿಸಿದ್ದರು, ಆದರೆ ಅವನ ಸಹೋದರಿ ಬೆಳಿಗ್ಗೆ ಅವನನ್ನು ಎಬ್ಬಿಸಲು ಪ್ರಯತ್ನಿಸಿದಾಗ ಅವನ ದೇಹವು ತಣ್ಣಗಾಗಿತ್ತು. ಇಂದಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪರಮೇಶ್ವರ್ ಎನ್‌ಕ್ಲೇವ್‌ನ ಶಿವಾಜಿಪುರಂನಲ್ಲಿ ಈ ಘಟನೆ ನಡೆದಿದೆ. ಮೃತ ಮಗುವನ್ನು ವಿವೇಕ್ ಕಶ್ಯಪ್ ಎಂದು ಗುರುತಿಸಲಾಗಿದೆ, ಅವರು ಫ್ರೀ ಫೈರ್ ಉತ್ಸಾಹಿ. ತಡರಾತ್ರಿಯವರೆಗೂ ಆಟ ಆಡುವುದರಲ್ಲಿ ಮಗ್ನರಾಗಿದ್ದರು ಮತ್ತು ಯಾರೊಂದಿಗೂ ಮಾತನಾಡಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಮೂಲತಃ ಸೀತಾಪುರ ಜಿಲ್ಲೆಯ ನೈಮಿಶ್ ಠಾಕೂರ್ ನಗರದ ವಿವೇಕ್ ಕಶ್ಯಪ್, ತನ್ನ ತಾಯಿ ಪ್ರೇಮ್ ಕುಮಾರಿ ಮತ್ತು ಮೂವರು ಸಹೋದರಿಯರಾದ ಅಂಜು, ಚಾಂದನಿ ಮತ್ತು ಪಿಂಕಿ ಅವರೊಂದಿಗೆ ಲಕ್ನೋದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಸಹೋದರಿ ಚಾಂದಿನಿ ಪ್ರಕಾರ, ಕೆಲಸದಿಂದ ಹಿಂತಿರುಗಿದ…

Read More