Author: kannadanewsnow57

ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ವಿಶೇಷ ಸಾಂರ್ಭಿಕ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ಶಿಶು ಪಾಲನಾ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಕುರಿತು ಸರ್ಕಾರವನ್ನು ಉಲ್ಲೇಖ(1)ರಲ್ಲಿ ಕೋರಲಾಗಿತ್ತು. ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧನಾ ಸಿಬ್ಬಂದಿಗಳಿಗೆ ಶಿಶು ಪಾಲನಾ ರಜೆಯನ್ನು ನೀಡಬೇಕಾದರೆ ಸಂಬಂಧಿತ ಬೋಧಕರ ರಜೆ ಅವಧಿಯಲ್ಲಿ ಪರ್ಯಾಯ ಬೋಧಕ ವ್ಯವಸ್ಥೆಯನ್ನು ಮಾಡಿ ಅದಕ್ಕೆ ತಗಲುವ ವೆಚ್ಚವನ್ನು ತನ್ನ ಸ್ವಂತ ಸಂಪನ್ಮೂಲದಿಂದ ಭರಿಸಿದ್ದಲ್ಲಿ ಸದರಿ ಪ್ರಸ್ತಾವನೆಯನ್ನು ಒಪ್ಪಬಹುದಾಗಿದೆ ಎಂದು ನಿರ್ದೇಶಿಸಿದ್ದು, ಇದನ್ನು ತಮ್ಮ ಕಛೇರಿ ವ್ಯಾಪ್ತಿಯ ಖಾಸಗಿ ಅನುದಾನಿತ ಕಾಲೇಜುಗಳ ಗಮನಕ್ಕೆ ತರಲು ಈ ಮೂಲಕ ತಿಳಿಸಲಾಗಿದೆ.

Read More

ಬೆಳಗಾವಿ : ಗ್ರಾಮೀಣ ಪ್ರದೇಶಗಳಲ್ಲಿನ ಕಂದಾಯ ಜಮೀನಿನಲ್ಲಿ ನಿವೇಶನವನ್ನು ಕೇವಲ ಕರಾರು ಒಪ್ಪಂದ ಪತ್ರದಲ್ಲಿ ಖರೀದಿಸಿ, ಮನೆ ನಿರ್ಮಿಸಿಕೊಂಡವರಿಗೆ ಹಕ್ಕುಪತ್ರ ನೀಡಿ, ಖಾತಾ ಒದಗಿಸುವುದಕ್ಕೆ ನಿಯಮಗಳನ್ನು ರೂಪಿಸಲು ಕಾಲಾವಕಾಶ ಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರ ಪ್ರಶ್ನೆಗೆ ಉತ್ತರಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಬಡ ಕುಟುಂಬಗಳು ಕಂಪ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಬೆಲೆಗೆ ನಿವೇಶನಗಳು ದೊರಕುತ್ತದೆ ಎಂದು ಈ ಹಿಂದೆ ಕಂದಾಯ ಜಮೀನಿನ ನಿವೇಶನಗಳಲ್ಲಿ ಜಮೀನಿನ ಮಾಲೀಕರೊಂದಿಗೆ ಅಗ್ರೀಮೆಂಟ್ ಪತ್ರ ಮಾಡಿಕೊಂಡು ಖರೀದಿಸಿ, ಈಗಾಗಲೇ ವಸತಿ ಮನೆಗಳನ್ನು ನಿರ್ಮಿಸಿಕೊಂಡು ವಾಸವಿದ್ದಾರೆ, ಇಂತಹ ಪ್ರಕರಣಗಳು ರಾಜ್ಯಾದ್ಯಂತ ಇವೆ. ಹೀಗಾಗಿ ಇಂತಹವರಿಗೆ ದಾಖಲೆಗಳನ್ನು ಪರಿಶೀಲಿಸಿ, ಹಕ್ಕುಪತ್ರ ಕೊಡಿಸಿ, ಇವರಿಗೆ ನ್ಯಾಯ ಒದಗಿಸಿಕೊಡಬೇಕಿದೆ ಎಂದು ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಮನವಿ ಮಾಡಿದರು. ಗ್ರಾಮೀಣಾಭಿವೃದ್ಧಿ ಮತ್ತು…

Read More

ಬೆಂಗಳೂರು : ದಿನಾಂಕ:01-04-2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳವಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ(1)ರಲ್ಲಿನ ಸರ್ಕಾರದ ಆದೇಶ ದಿನಾಂಕ:01/04/2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿದ್ದು, ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿರುತ್ತದೆ. ಅದರಂತೆ ಈ ಆದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರಿಂದ ದಿನಾಂಕ:30/06/2024 ರೊಳಗೆ ಅಭಿಮತವನ್ನು ಪಡೆದು ಕ್ರೂಡೀಕೃತ ಪ್ರಸ್ತಾವನೆಯನ್ನು ಸರ್ಕಾರದ ಪರಿಶೀಲನೆಗಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿರುತ್ತದೆ. ಮೇಲೆ ಓದಲಾದ ಕ್ರಮ ಸಂಖ್ಯೆ (2) ರಲ್ಲಿನ ಸರ್ಕಾರದ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಹಿಂದಿನ ಡಿಫೈನ್ಸ್ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ನೌಕರರ ಎನ್‌ಪಿಎಸ್ ಪ್ರಾನ್ ಖಾತೆಯಲ್ಲಿನ…

Read More

ಬೆಂಗಳೂರು : ರಾಜ್ಯದಲ್ಲಿ ಮಂಗನ ಕಾಯಿಲೆ ತಡೆಗಟ್ಟಲು ಕೈಗೊಳ್ಳಬೇಕಾದ ನಿಯಂತ್ರಣ ಕ್ರಮಗಳ ಕುರಿತು ರಾಜ್ಯ ಸರ್ಕಾರವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆ.ಎಫ್.ಡಿ.) ಅಥವಾ ಮಂಗನ ಕಾಯಿಲೆಯು ಸೋಂಕಿತ ಉಣ್ಣೆಗಳು ಕಚ್ಚುವುದರಿಂದ ಹರಡುವ ವೈರಾಣು ರೋಗವಾಗಿದ್ದು, ಸಾಮಾನ್ಯವಾಗಿ ನವೆಂಬರ್‌ನಿಂದ ಜೂನ್ ತಿಂಗಳ ಅವಧಿಯಲ್ಲಿ ಕಂಡುಬರುತ್ತದೆ. ಪ್ರಸ್ತುತ, ಈ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆಯಾಗಲಿ ಲಸಿಕೆಯಾಗಲಿ ಲಭ್ಯವಿರುವುದಿಲ್ಲ. ಈ ಹಿನ್ನಲೆಯಲ್ಲಿ, ರೋಗವನ್ನು ತಡೆಗಟ್ಟುವುದು ಮತ್ತು ರೋಗವನ್ನು ಪ್ರಾಥಮಿಕ ಹಂತದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಿ ಸಂಭವನೀಯ ಮರಣಗಳನ್ನು ತಡೆಗಟ್ಟುವುದು ಅತ್ಯಂತ ಅವಶ್ಯಕವಾಗಿದ್ದು, ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ಕೈಗೊಳ್ಳಬೇಕಾದ ಕ್ರಮಗಳು 1. ಮಂಗಗಳ ಅಸಾಮಾನ್ಯ ಸಾವಿನ ಘಟನೆಗಳು ಕೆಎಫ್‌ಡಿ ಹರಡುವಿಕೆಯ ಪ್ರಾಥಮಿಕ ಸೂಚಕಗಳಾಗಿರುವುದರಿಂದ, ಸಮುದಾಯ ಹಾಗೂ ಅರಣ್ಯ ಸಿಬ್ಬಂದಿಗಳಿಂದ ಮಂಗಗಳ ಸಾವಿನ ಮಾಹಿತಿಯನ್ನು ಸಂಗ್ರಹಿಸತಕ್ಕದ್ದು. ಇದಕ್ಕಾಗಿ ಅರಣ್ಯ ಇಲಾಖೆಯೊಂದಿಗೆ ಸಮನ್ವಯತೆ ಮತ್ತು ಗ್ರಾಮ ಮಟ್ಟದಲ್ಲಿ ಸಮುದಾಯದೊಂದಿಗೆ ಸಂವಹನ ನಡೆಸಿ ನೈಜ ಸಮಯದಲ್ಲಿ (real time) ಮಂಗಗಳ ಸಾವಿನ ವರದಿಯು ಲಭ್ಯವಾಗುವಂತೆ…

Read More

ಬೆಳಗಾವಿ : ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಂದಾಗಿ ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನ ತಲುಪಿದ್ದು, ರಾಜ್ಯದ ತಲಾದಾಯ ಸರಾಸರಿ 3.39 ಲಕ್ಷ ರು.ಗೆ ತಲುಪಿದೆ. ದೇಶದ ಆರ್ಥಿಕತೆ ಕುಸಿಯುತ್ತಿರುವಾಗ, ಗ್ಯಾರಂಟಿಗಳಿಂದಾಗಿ ರಾಜ್ಯದ ಆರ್ಥಿಕತೆ ವೃದ್ಧಿಯಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನಪರಿಷತ್ತಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿನ ಆರ್ಥಿಕ ಅಸಮಾನತೆ ಕಡಿಮೆಯಾಗುವಂತೆ ಮಾಡಿದೆ. ತಲಾ ಆದಾಯದಲ್ಲಿ ಕರ್ನಾಟಕವು ದೇಶಕ್ಕೇ ಮೊದಲ ಸ್ಥಾನ ಪಡೆಯುವಂತಾಗಿದೆ. ಆದರೂ ಇನ್ನೂ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ನಡುವಿನ ಅಸಮಾ ನತೆ ಕಡಿಮೆಯಾಗಿಲ್ಲ.ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರ 1.06 ಲಕ್ಷ ಕೋಟಿ ರು. ವೆಚ್ಚ ಮಾಡಿದ್ದು, ಅದರಲ್ಲಿ ಉತ್ತರ ಕರ್ನಾಟಕಕ್ಕಾಗಿಯೇ46,276 ಕೋಟಿರು.ವ್ಯಯಿಸಲಾಗಿದೆ. ಗ್ಯಾರಂಟಿ ಸ್ತ್ರೀಂಗಳ ಒಟ್ಟು ವೆಚ್ಚದಲ್ಲಿ ಶೇ. 43.63ರಷ್ಟನ್ನು ಉತ್ತರ ಕರ್ನಾಟಕ ಭಾಗಕ್ಕೆ ಖರ್ಚು ಮಾಡಲಾಗಿದೆ ಎಂದರು. ವಿಧಾನ ಪರಿಷತ್ ಅನ್ನು ಹಿರಿಯರ ಮನೆ ಎಂದು ಕರೆಯಲಾಗುತ್ತಿದ್ದು, ಇಲ್ಲಿನ ಸದಸ್ಯರ ಮಾತಿಗೆ…

Read More

ಬೆಂಗಳೂರು: ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿ.20ರಿಂದ 22ರವರೆಗೆ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕದ ಒಟ್ಟು‌ 24,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಅಷ್ಟೂ‌ ಮಂದಿಗೆ ಮೂರು ದಿನಗಳ ಕಾಲ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು. ಅತ್ಯಂತ ಪಾರದರ್ಶಕ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಜತೆಗೆ ಜಾಮರ್ ಕೂಡ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆ ಇದ್ದು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ. ಡಿ.20ರಂದು ಬೆಂಗಳೂರಿನ ಏಳು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3,486 ಮಂದಿ ತೆಗೆದುಕೊಂಡಿದ್ದಾರೆ.…

Read More

ಬೆಂಗಳೂರು : ರಾಜ್ಯದ ರೈತರಿಗೆ ಸಿಹಿಸುದ್ದಿ, ಪಶುಪಾಲನಾ ಇಲಾಖೆಯಲ್ಲಿ ಈ ಕೆಳಕಂಡ ಯೋಜನೆಗಳಡಿ ರೈತರ ವಂತಿಕೆ ಮತ್ತು ಸರ್ಕಾರದ ಸಹಾಯಧನವನ್ನು ಪಡೆಯಬಹುದು. ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಸರಬರಾಜು ಮಾಡುವ ಸದಸ್ಯರಿಗೆ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ಗೆ ರೂ.5/-ಪ್ರೋತ್ಸಾಹಧನ ನೀಡಲಾಗುತ್ತಿದೆ. ರಾಸುಗಳು ಆಕಸ್ಮಿಕ ಮರಣ ಹೊಂದಿದಾಗ ರೈತರಿಗೆ ಉಂಟಾಗುವ ಆರ್ಥಿಕ ನಷ್ಟವನ್ನು ಭರಿಸಲು ಮರಣ ಹೊಂದಿದ ಧನ, ಎಮ್ಮೆ. ಹೋರಿ ಮತ್ತು ಕಡಸುಗಳಿಗೆ ರೂ 15,000/- ಪರಿಹಾರ ಧನವನ್ನು ರಾಸುಗಳ ಮಾಲೀಕರಿಗೆ ವಿತರಿಸಲಾಗುವುದು. ಆಕಸ್ಮಿಕ ಮರಣ ಹೊಂದಿದ 3-6 ತಿಂಗಳ ವಯಸ್ಸಿನ ಕುರಿ/ ಮೇಕೆಗಳಿಗೆ ರೂ. 3,500 ಹಾಗೂ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ಅವುಗಳ ಮಾಲೀಕರಿಗೆ ರೂ. 5000/-ಪರಿಹಾರ ವಿತರಣೆ ಮಾಡಲಾಗುವುದು.

Read More

ಬೆಂಗಳೂರು : ರಾಜ್ಯ ಸರ್ಕಾರದ 2026ನೇ ಸಾಲಿನ 20 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಒಟ್ಟು 20 ಸಾರ್ವತ್ರಿಕ ರಜೆ ದಿನ ಹಾಗೂ 21 ಪರಿಮಿತ ರಜಾ ದಿನಗಳ ಪಟ್ಟಿಗೆ ಮಂಜೂರಾತಿ ನೀಡಿದೆ. ಭಾನುವಾರ ಬರುವ ಮಹಾ ಶಿವರಾತ್ರಿ (ಫೆ.15), ಮಹರ್ಷಿ ವಾಲ್ಮೀಕಿ ಜಯಂತಿ (ಅ.25), ಕನ್ನಡ ರಾಜ್ಯೋತ್ಸವ (ನ.1) ಹಾಗೂ ನರಕ ಚತುರ್ದಶಿ (ನ.8) ಮತ್ತು ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆಯನ್ನು (ಅ.10) ಸಾರ್ವತ್ರಿಕ ರಜೆ ದಿನಗಳ ಪಟ್ಟಿಯಲ್ಲಿ ನಮೂದಿಸಿಲ್ಲ. ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಛೇರಿಗಳು ಮುಚ್ಚಲ್ಪಡುತ್ತವೆ. ಕಛೇರಿಯ ಜರೂರು ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ ಇಲಾಖಾ ಮುಖ್ಯಸ್ತರುಗಳು ಸೂಕ್ತ ವ್ಯವಸ್ಥೆ ಮಾಡತಕ್ಕದ್ದು. ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗಧಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗಧಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದು. ದಿನಾಂಕ:03.09.2026 (ಗುರುವಾರ) ಕೈಲ್ ಮೂಹೂರ್ತ, ದಿನಾಂಕ:18.10.2026 (ಭಾನುವಾರ)…

Read More

ಬೆಂಗಳೂರು : ಬೆಂಗಳೂರಿನ ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಬೆಂಗಳೂರಿನ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು 50×80 ಅಡಿಯವರೆಗಿನ ನಿವೇಶನಗಳಿಗೆ ಆನ್‌ಲೈನ್ ಮೂಲಕವೇ ತಕ್ಷಣ ನಕ್ಷೆ ಮಂಜೂರಾತಿ ನೀಡುವ ‘ನಂಬಿಕೆ ನಕ್ಷೆ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು 50×80 ಅಡಿಯವರೆಗಿನ ನಿವೇಶನಗಳಿಗೆ ಆನ್‌ಲೈನ್ ಮೂಲಕವೇ ತಕ್ಷಣ ನಕ್ಷೆ ಮಂಜೂರಾತಿ ನೀಡುವ ‘ನಂಬಿಕೆ ನಕ್ಷೆ’ ಯೋಜನೆಯನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ. ನೋಂದಾಯಿತ ಇಂಜಿನಿಯರ್‌ಗಳ ಮೂಲಕ ದಾಖಲೆಗಳನ್ನು ಅಪ್‌ಲೋಡ್ ಮಾಡಿದ 15 ದಿನದೊಳಗೆ ಪರಿಶೀಲನೆ ಪೂರ್ಣಗೊಂಡು, ಶುಲ್ಕ ಪಾವತಿಸಿದ ಕೂಡಲೇ ಕ್ಯೂಆರ್ ಕೋಡ್ ಸಹಿತ ಅಂತಿಮ ನಕ್ಷೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. https://twitter.com/DKShivakumar/status/2001857765850124392?ref_src=twsrc%5Etfw%7Ctwcamp%5Etweetembed%7Ctwterm%5E2001857765850124392%7Ctwgr%5E0d9ed386f070a8d32b5287f7a12af893b1f4bb81%7Ctwcon%5Es1_c10&ref_url=https%3A%2F%2Fkannadadunia.com%2Fgood-news-for-bengaluru-residents-faith-map-will-now-be-available-instantly-online%2F

Read More

ಬೆಂಗಳೂರು : ರಾಜ್ಯ ಸರ್ಕಾರವು ಆರ್ಥಿಕ ಬಡ ಕುಟುಂಬಗಳಿಗೆ ನೆರವಾಗಲು ವಿವಿಧ ನಿಗಮಗಳಿಂದ ಹಲವು ಯೋಜನೆಗಳನ್ನು ಘೋಷಿಸಿದ್ದು, ಈ ಯೋಜನೆಗಳ ಮೂಲಕ ಸ್ವಯಂ ಉದ್ಯೋಗ ಯೋಜನೆ , ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯಗಳು ಸಿಗಲಿವೆ. 1. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಸ್ವಯಂ ಉದ್ಯೋಗ ಸಾಲ ಯೋಜನೆ ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು) ಗಂಗಾ ಕಲ್ಯಾಣ ಯೋಜನೆ 2. ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಸ್ವಯಂ ಉದ್ಯೋಗ ಸಾಲ ಯೋಜನೆ ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ ಬ್ಯಾಂಕ್‌ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಯೋಜನೆ ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು) ಗಂಗಾ ಕಲ್ಯಾಣ ಯೋಜನೆ 3. ಕರ್ನಾಟಕ ಸವಿತಾ ಸಮಾಜ…

Read More