Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬಂಗಾರ ಕೊಳ್ಳುವ ಮಹಿಳೆಯರಿಗೆ ಶಾಕಿಂಗ್ ನ್ಯೂಸ್, ಕಳೆದ ಒಂದು ವರ್ಷದಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಹೌದು, ಚಿನ್ನದ ಬೆಲೆಯಲ್ಲಿ ಕಳೆದ 1 ವರ್ಷದಲ್ಲಿ ಶೇ.65 ರಷ್ಟು ಬೆಲೆ ಏರಿಕೆಯಾಗಿದ್ದು, ಮುಂದಿನ ವರ್ಷ ಬಂಗಾರದ ಬೆಲೆ 15,000 ರೂ. ಏರಿಕೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಬಂಗಾರದ ಬೆಲೆ 30ರಿಂದ 50 ರೂ.ಗಳಷ್ಟು ಏರಿಕೆಯಾಗುತ್ತಿದೆ. 24 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂ.ಗೆ 2024ರಲ್ಲಿ 5,688 ರೂ. ಇದ್ದದ್ದು, 2025 ರಲ್ಲಿ 12,315 ರೂ. ಅಷ್ಟು ಏರಿಕೆಯಾಗಿದೆ. ಒಟ್ಟು 6,627 ರೂ. ನಷ್ಟು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂ 2024 ರಲ್ಲಿ 7100 ಇದ್ದದ್ದು, 2025ರಲ್ಲಿ 11,290 ರೂ. ಏರಿಕೆಯಾಗಿದೆ. ಈ ಮೂಲಕ ಒಂದೇ ವರ್ಷದಲ್ಲಿ 4,190 ರೂ. ಏರಿಕೆಯಾಗಿದೆ. `ಚಿನ್ನ’ ಖರೀದಿಸುವಾಗ ಎಂದಿಗೂ ಈ 5 ತಪ್ಪುಗಳನ್ನು ಮಾಡಬೇಡಿ.! ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ಗಗನಕ್ಕೇರಿದ್ದು, ಚಿನ್ನ ಖರೀದಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ…
ಫಿಲಿಪೈನ್ಸ್ : ಫಿಲಿಪೈನ್ಸ್ನ ಮಿಂಡಾನಾವೊ ಪ್ರದೇಶದಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ಇಂದು ಮುಂಜಾನೆ ಫಿಲಿಪೈನ್ಸ್ ನಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಜೀವ ಮತ್ತು ಆಸ್ತಿಪಾಸ್ತಿಗೆ ಇದುವರೆಗೆ ಭಾರಿ ಹಾನಿಯಾಗಿರುವ ಸಾಧ್ಯತೆ ಇದೆ, ಕೆಲವು ಸ್ಥಳೀಯ ಪ್ರದೇಶಗಳಲ್ಲಿ ಕಟ್ಟಡಗಳಿಗೆ ಹಾನಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. 7.6 ತೀವ್ರತೆಯ ಭೂಕಂಪದಿಂದ ಉಂಟಾದ ತೀವ್ರ ಕಂಪನದ ನಡುವೆ, ಫಿಲಿಪೈನ್ಸ್ನ ಟಾಗಮ್ ಸಿಟಿ ದಾವೊ ಪ್ರಾದೇಶಿಕ ವೈದ್ಯಕೀಯ ಕೇಂದ್ರದಿಂದ ರೋಗಿಗಳು ಮತ್ತು ಸಿಬ್ಬಂದಿ ಸ್ಥಳಾಂತರಿಸುತ್ತಿರುವ ದೃಶ್ಯ ವೈರಲ್ ಆಗಿದೆ. https://twitter.com/newsnoteworthy/status/1976474477388235068 https://twitter.com/geotechwar/status/1976470916243783812 https://twitter.com/MarioNawfal/status/1976472017449672793
ಫಿಲಿಪೈನ್ಸ್ : ಫಿಲಿಪೈನ್ಸ್ನ ಮಿಂಡಾನಾವೊ ಪ್ರದೇಶದಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ಇಂದು ಮುಂಜಾನೆ ಫಿಲಿಪೈನ್ಸ್ ನಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಜೀವ ಮತ್ತು ಆಸ್ತಿಪಾಸ್ತಿಗೆ ಇದುವರೆಗೆ ಭಾರಿ ಹಾನಿಯಾಗಿರುವ ಸಾಧ್ಯತೆ ಇದೆ, ಕೆಲವು ಸ್ಥಳೀಯ ಪ್ರದೇಶಗಳಲ್ಲಿ ಕಟ್ಟಡಗಳಿಗೆ ಹಾನಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. 7.6 ತೀವ್ರತೆಯ ಭೂಕಂಪದಿಂದ ಉಂಟಾದ ತೀವ್ರ ಕಂಪನದ ನಡುವೆ, ಫಿಲಿಪೈನ್ಸ್ನ ಟಾಗಮ್ ಸಿಟಿ ದಾವೊ ಪ್ರಾದೇಶಿಕ ವೈದ್ಯಕೀಯ ಕೇಂದ್ರದಿಂದ ರೋಗಿಗಳು ಮತ್ತು ಸಿಬ್ಬಂದಿ ಸ್ಥಳಾಂತರಿಸುತ್ತಿರುವ ದೃಶ್ಯ ವೈರಲ್ ಆಗಿದೆ. ಮಿಂಡಾನಾವೊ ಪ್ರದೇಶದ ದಾವೊ ಓರಿಯಂಟಲ್ನಲ್ಲಿರುವ ಮನಾಯ್ ಪಟ್ಟಣದ ನೀರಿನಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ನಂತರ ಹಾನಿ ಮತ್ತು ನಂತರದ ಕಂಪನಗಳ ಬಗ್ಗೆ ಫಿವೊಲ್ಕ್ಸ್ ಸಂಸ್ಥೆ ಎಚ್ಚರಿಸಿದೆ. ಭೂಕಂಪವು 10 ಕಿಮೀ (6 ಮೈಲಿ) ಆಳದಲ್ಲಿ ಸಂಭವಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. https://twitter.com/newsnoteworthy/status/1976474477388235068 https://twitter.com/geotechwar/status/1976470916243783812 https://twitter.com/MarioNawfal/status/1976472017449672793
ಹಾಸನ : ಪ್ರಸಿದ್ಧ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ನಿನ್ನೆ ತೆರೆದಿದ್ದು, ದೇವಾಲಯಕ್ಕೆ ಅರ್ಚಕರ ತಂಡ ಪೂಜಾ ಸಾಮಗ್ರಿಗಳನ್ನು ತಂದಿದ್ದು, ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಸಮೇತ ಆಗಮಿಸಿ ಅರ್ಚಕರು, ಪ್ರಧಾನ ಅರ್ಚಕ ನಾಗರಾಜ ನೇತ್ರತ್ವದಲ್ಲಿ ದೇಗುಲದ ಬಾಗಿಲು ತೆರೆಯಲಾಯಿತು. ಅರ್ಚಕರಿಂದ ಪೂಜೆ ನೆರವೇರಿಸಿದ ಬಳಿಕ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಈ ವೇಳೆ ಆಡಿ ಚುಂಚನಗಿರಿ ಮಠದ. ಪೀಠಾಧ್ಯಕ್ಷ ನಿರ್ಮಲಾನಂದನಾಥ್ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ, ಸಂಸದ ಶ್ರೇಯಸ್ ಪಟೇಲ್, ಹಾಸನ ಡಿಸಿ ಎಸ್.ಪಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಅಕ್ಟೊಬರ್ 23 ವೆರೆಗೆ ಹಾಸನಾಂಬೆ ದೇವಿ ಜಾತ್ರೆ ನಡೆಯಲಿದೆ. ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡ, ಸಂಸದರಾದ ಶ್ರೇಯಸ್ ಎಂ…
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯಾದ್ಯಾಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮಧ್ಯ ಕರ್ನಾಟಕ, ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ಕೋಲಾರ ಸೇರಿ 24 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
JOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `708′ ಸರ್ಕಾರಿ ಹುದ್ದೆಗಳ ನೇಮಕಾತಿಗೆ ‘KEA’ಯಿಂದ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸರ್ಕಾರಿ ಸಂಸ್ಥೆ, ನಿಗಮ, ಸಂಸ್ಥೆಗಳಲ್ಲಿ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವಂತ ವಿವಿಧ ವೃಂದದ 708 ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತಂತೆ ಕೆಇಎ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಖಾಲಿ ಇರುವಂತ 18 ಹುದ್ದೆ, ಕರ್ನಾಟಕ ಸೋಪ್ಸ್ ಆಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತ 14 ಸೇರಿದಂತೆ 394 ಹುದ್ದೆಗಳ ನೇಮಕಾತಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೇಮಕಾತಿ ಹುದ್ದೆಗಳ ವಿವರ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ- 18+07 ಹುದ್ದೆಗಳು ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ – 07+ 14 ಹುದ್ದೆಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ, ಬೆಂಗಳೂರು – 40+4 ಹುದ್ದೆಗಳು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ- 63+253 ಹುದ್ದೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ- 19 ಹುದ್ದೆ ಕೃಷಿ ಮಾರಾಟ ಇಲಾಖೆ- 180 ಹುದ್ದೆಗಳು…
ಮೈಸೂರು : ದಸರಾ ಹಿನ್ನೆಲೆಯಲ್ಲಿ ಮೈಸೂರಿಗೆ ವಲಸೆ ಬಂದಿದ್ದ 10 ವರ್ಷದ ಬಾಲಕಿಯನ್ನು ಅಮಾನುಷವಾಗಿ ಅತ್ಯಾಚಾರವೆಸಗಿ ಭೀಕರವಾಗಿ ಹತ್ಯೆ ಮಾಡಿದ್ದ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯದ ಸುಳಿವಿನ ಮೇಲೆ ಕಾರಾಚರಣೆ ಕೈಗೊಂಡ ಪೊಲೀಸರು ಕೊಳ್ಳೇಗಾಲದಲ್ಲಿ ಆರೋಪಿ ಕಾರ್ತಿಕ್ನನ್ನು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಕುಟುಂಬ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿಯಿಂದ ಮೈಸೂರಿಗೆ ಬಂದಿದ್ದವು. ಇವರೆಲ್ಲರೂ ಮೈಸೂರು ಅರಮನೆ ಮುಂಭಾಗದ ದೊಡ್ಡಕೆರೆ ಮೈದಾನದ ಬಯಲಿನಲ್ಲಿ ತಂಗಿದ್ದರು. ಚಾಮುಂಡಿಬೆಟ್ಟ, ದಸರಾ ವಸ್ತುಪ್ರದರ್ಶನ, ದೇವರಾಜ ಮಾರುಕಟ್ಟೆ ಸೇರಿ ಹಲವು ಸ್ಥಳಗಳಲ್ಲಿ ಬಲೂನ್ ಮಾರುತ್ತಿದ್ದರು. ಬುಧವಾರ ರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ವ್ಯಾಪಾರ ಮುಗಿಸಿಕೊಂಡು ಬಂದಿದ್ದ ಬಾಲಕಿ, ಪಾಲಕರೊಂದಿಗೆ ಮಲಗಿದ್ದಳು. ಮಧ್ಯರಾತ್ರಿ ವೇಳೆ ಸ್ಥಳಕ್ಕೆ ಬಂದ ದುಷ್ಕರ್ಮಿ ಸ್ಥಳದಿಂದ ಅಪಹರಿಸಿದ್ದಾನೆ. ದೊಡ್ಡ ಮೋರಿಯ ಬಳಿ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿಯ ಶವವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ…
ಬೆಂಗಳೂರು: 2026ರ ಮಾರ್ಚ್/ಏಪ್ರಿಲ್ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ನೋಂದಣಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ‘ಶಾಲಾ ವಿದ್ಯಾರ್ಥಿ’ಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಶಾಲೆಗಳ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳ ಮಾಡುವಂತೆ ತಿಳಿಸಿದೆ. ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ 710 ರೂ. ಶುಲ್ಕ ನಿಗದಿಪಡಿಸಲಾಗಿದೆ. ಬಾಲಕಿಯರು, ಪರಿಶಿಷ್ಟರು, ಆದಾಯಮಿತಿಗೆ ಒಳಪಟ್ಟು ವಿವಿಧ ಪ್ರವರ್ಗಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗಲು ಶೇ.75 ಹಾಜರಾತಿ ಹೊಂದಿರುವುದು ಕಡ್ಡಾಯವಾಗಿದೆ. 2026ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ/ ಕಾಲೇಜುಗಳಿಂದ (ಪ್ರೌಢ ಶಾಲಾ ವಿಭಾಗ) ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ 2026ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF)…
ಮಾನ್ವಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ತಾಲ್ಲೂಕಿನಲ್ಲಿರುವ ಗ್ರಾಮವೊಂದರಲ್ಲಿ ಮೂವರು ಅತ್ಯಾಚಾರ ನಡೆಸಿದ್ದರಿಂದ ಬಾಲಕಿ ಗರ್ಭಿಣಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅನಾರೋಗ್ಯ ಹಿನ್ನೆಲೆ ಪಾಲಕರು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಈ ಸಂಗತಿ ತಿಳಿಸಿದ್ದಾರೆ. ಪೋಷಕರು ಬಾಲಕಿಯನ್ನು ವಿಚಾರಿಸಿದಾಗ, ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಮೂವರು ಮುಸುಕುಧಾರಿಗಳು ಗುಡ್ಡಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ವಿಷಯ ಬಹಿರಂಗ ಮಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದಿದ್ದಾಳೆ. ಘಟನೆ ಸಂಬಂಧ ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ಗಗನಕ್ಕೇರಿದ್ದು, ಚಿನ್ನ ಖರೀದಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ ಚಿನ್ನ ಖರೀದಿಸುವಾಗ ಎಚ್ಚರಿಕೆಯಿಂದ ಖರೀದಿಸುವುದ ಅಗತ್ಯ. ಚಿನ್ನ ಖರೀದಿಸುವಾಗ ಎಂದಿಗೂ ಈ 5 ತಪ್ಪುಗಳನ್ನು ಮಾಡಬೇಡಿ. BIS ಹಾಲ್ಮಾರ್ಕ್ ನೀವು ಖರೀದಿಸುವ ಚಿನ್ನವು ಅಸಲಿಯೋ ಅಲ್ಲವೋ ಎಂದು ಹೇಳುವ ಏಕೈಕ ವಿಷಯವೆಂದರೆ BIS ಹಾಲ್ಮಾರ್ಕ್. ನೀವು ಖರೀದಿಸುವ ಪ್ರತಿಯೊಂದು ತುಂಡಿನ ಮೇಲೂ BIS ಲೋಗೋ, ಶುದ್ಧತೆ ಸಂಖ್ಯೆ ಮತ್ತು 6-ಅಂಕಿಯ HUID ಕೋಡ್ ಇದೆಯೇ ಎಂದು ಪರಿಶೀಲಿಸಿ. ಈ ಹಾಲ್ಮಾರ್ಕ್ ಇಲ್ಲದೆ ಎಂದಿಗೂ ಚಿನ್ನವನ್ನು ಖರೀದಿಸಬೇಡಿ. ಚಿನ್ನದ ಬೆಲೆ ಮತ್ತು ಅದರ ಶುದ್ಧತೆಯು ಕ್ಯಾರೆಟ್ ಅನ್ನು ಅವಲಂಬಿಸಿರುತ್ತದೆ. 24K ಎಂದರೆ ಶುದ್ಧ ಚಿನ್ನ. ಇದು ತುಂಬಾ ಮೃದುವಾಗಿರುತ್ತದೆ. ಅದಕ್ಕಾಗಿಯೇ ಇದನ್ನು ಆಭರಣಗಳಿಗೆ ಬಳಸಲಾಗುವುದಿಲ್ಲ. ಆಭರಣಗಳು ಮತ್ತು ಆಭರಣಗಳನ್ನು ತಯಾರಿಸಲು 22K ಚಿನ್ನವನ್ನು ಅತ್ಯುತ್ತಮವೆಂದು ಹೇಳಲಾಗುತ್ತದೆ. ಬಾಳಿಕೆಗಾಗಿ 18K ಚಿನ್ನಕ್ಕೆ ಇತರ ಲೋಹಗಳನ್ನು ಸೇರಿಸಲಾಗುತ್ತದೆ. ಆಭರಣಗಳನ್ನು ಖರೀದಿಸುವಾಗ ಇವುಗಳ ಬಗ್ಗೆ ಎಚ್ಚರಿಕೆಯಿಂದ ಕೇಳಿ. ಉತ್ಪಾದನಾ ಶುಲ್ಕಗಳು…














