Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು :ಪೊಲೀಸ್ ಇಲಾಖೆಯ ಪಿಸಿ ಹಾಗೂ ಹೆಚ್ಸಿ ರವರುಗಳಿಗೆ NAVY BLUE PEAK CAP ಗಳನ್ನು ವಿತರಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸೆಬಲ್ ಮತ್ತು ಹೆಡ್ ಕಾನ್ಸಬಲ್ ರವರುಗಳಿಗೆ ನೀಡಲಾಗುತ್ತಿರುವ ಖಾಕಿ ಗ್ಲೋಚ್ ಹ್ಯಾಟ್ ಬದಲಿಗೆ NAVY BLUE PEAK CAP ಗಳನ್ನು ವಿತರಿಸುವ ಕುರಿತು ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಸಹಮತಿ ನೀಡಿ ಆದೇಶಿಸಲಾಗಿದೆ. ಅದರಂತೆ, ದಿನಾಂಕ: 28.10.2025 ರಂದು ನಡೆದ ಪೊಲೀಸ್ ಸಿಬ್ಬಂದಿಗಳ ಪೀಕ್-ಕ್ಯಾಪ್ ಪರಿಚಯಮತ್ತು ವಿತರಣೆ ಸಮಾರಂಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಹಾಗೂ ಮುಖ್ಯ ಅತಿಥಿಗಳ ಉಪಸ್ಥಿತಿಯಲ್ಲಿ NAVY BLUE PEAK CAP ಗಳನ್ನು ಬಿಡುಗಡೆ ಮಾಡಲಾಗಿರುತ್ತದೆ. “ಸದರಿ ಸಮಾರಂಭದಲ್ಲಿ ಪೊಲೀಸ್ ಪ್ರಧಾನ ಕಛೇರಿ ವತಿಯಿಂದ 600 ಸಂಖ್ಯೆಯ ಪೀಕ್ ಕ್ಯಾಪ್ ಗಳನ್ನು ತಲಾ ಒಂದಕ್ಕೆ ರೂ.226/-(ತೆರಿಗೆ ಸೇರಿ) ಗಳ ವೆಚ್ಚದಲ್ಲಿ ಖರೀದಿಸಿ ವಿತರಿಸಲಾಗಿರುತ್ತದೆ. ಸರ್ಕಾರದ ವತಿಯಿಂದ ನೀಡಿಲಾದ ಆದೇಶದಂತೆ, ಇಲಾಖೆಯ ಎಲ್ಲಾ ಪೊಲೀಸ್ ಕಾನ್ಸಬಲ್…
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ ಜನರು ತಾಲ್ಲೂಕು, ಜಿಲ್ಲಾ ಮಟ್ಟಕ್ಕೆ ಅಲೆಯುವುದನ್ನು ಸರ್ಕಾರ ತಪ್ಪಿಸಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಸಿಗುವಂತ ಸೇವೆಗಳ ಸಂಪೂರ್ಣ ಮಾಹಿತಿ ಮುಂದಿದೆ ಓದಿ ತಿಳಿದುಕೊಳ್ಳಿ. ಬಾಪೂಜಿ ಸೇವಾ ಕೇಂದ್ರ (ಬಿ.ಎಸ್.ಕೆ.)(bsk.karnataka.gov.in) ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪಿಸಿರುವ ಕೇಂದ್ರವೇ ‘ಬಾಪೂಜಿ ಸೇವಾ ಕೇಂದ್ರ’. ಪಂಚತಂತ್ರ, ನಾಡಕಛೇರಿ ತಂತ್ರಾಂಶ ಹಾಗೂ ಭೂಮಿ ತಂತ್ರಾಂಶಗಳನ್ನು ಸಮ್ಮಿಲನಗೊಳಸಿ ಗ್ರಾಮ ಪಂಚಾಯಿತಿಗಳು ಈ ಸೇವೆಯನ್ನು ನೀಡುತ್ತಿವೆ. ಈಗ ನೀಡುತ್ತಿರುವ 19 ಸೇವೆಗಳ ಜೊತೆಗೆ ಕಂದಾಯ ಇಲಾಖೆಯಿಂದ ಪಹಣಿ ಪತ್ರ ಒಳಗೊಂಡಂತೆ 40 ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಗುತ್ತದೆ.ಇದರಿಂದ ಸಾರ್ವಜನಿಕರು ತಮ್ಮ ದಾಖಲೆಗಳಗಾಗಿ ಕಛೇರಿಯಿಂದ…
ಉಡುಪಿ: ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರಿಗಾಗಿ ನವೆಂಬರ್ 19 ರಂದು ಅಕ್ಕಪಡೆಗೆ ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗಲು ‘ಅಕ್ಕ’ ಪಡೆ ಆರಂಭಿಸಲಾಗುತ್ತಿದೆ. ನ.19ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದೇವೆ ಹೇಳಿದರು. ರಾಜ್ಯದಲ್ಲಿ ಅಂಗನವಾಡಿ ಪ್ರಾರಂಭವಾಗಿ 50 ವರ್ಷ ಪೂರ್ಣಗೊಂಡಿದ್ದು, ನ.19ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ‘ಸುವರ್ಣ ಮಹೋತ್ಸವ’ ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಳಗಾವಿ : ನವೆಂಬರ್ 1 ರ ನಿನ್ನೆ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ನಡೆದಿದ್ದು, ರಾಜ್ಯೋತ್ಸವದ ಮೆರವಣಿಗೆ ವೇಳೆ 300 ಕ್ಕೂ ಹೆಚ್ಚು ಮೊಬೈಲ್ ಗಳನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಸುತ್ತಮುತ್ತ ನಿನ್ನೆ ಸಂಜೆ 7 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಡೆದ ಮೆರವಣಿಗೆ ವೇಳೆ 300 ಕ್ಕೂ ಹೆಚ್ಚು ಮೊಬೈಲ್ ಕಳ್ಳತನ ಮಾಡಲಾಗಿದೆ. ಯುವಕ, ಯುವತಿಯರನ್ನು ಟಾರ್ಗೆಟ್ ಮಾಡಿ ಕಳ್ಳರ ಗ್ಯಾಂಗ್ ಕಳ್ಳತನ ಮಾಡಿದೆ. ಮೊಬೈಲ್ ಕಳೆದುಕೊಂಡವರು ಆ್ಯಪ್ ಮೂಲಕ ದೂರು ನೀಡಿದ್ದು, ಪೊಲೀಸ್ ಠಾಣೆಗೆ ಆಗಮಿಸಿ ಮೊಬೈಲ್ ಹುಡುಕಿ ಕೊಡುವಂತೆ ಮನವಿ ಮಾಡಿದ್ದಾರೆ. ಸದ್ಯ ಬೆಳಗ್ಗೆಯಿಂದ 300 ಕ್ಕೂ ಹೆಚ್ಚು ಜನರು ಬೆಳಗಾವಿಯ ಖಡೇಬಜಾರ್, ಮಾರ್ಕೆಟ್, ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ “ಚೆನ್ನಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯನ್ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ.ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು. 2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಹೇಳಿದ್ದಾರೆ. ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಮತ್ತು ಸಚಿವರಾದ ಎನ್.ಎಸ್. ಬೋಸರಾಜು, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸೇರಿ…
ನವದೆಹಲಿ : ದೇಶದ ಒಂದು ಶತಕೋಟಿಗೂ ಹೆಚ್ಚು ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಸುದ್ದಿ ಇದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) 2025 ರ ವರ್ಷಕ್ಕೆ ಹಲವಾರು ಆಧಾರ್ ಸಂಬಂಧಿತ ಸೇವೆಗಳು ಮತ್ತು ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ. ನವೆಂಬರ್ 1 ರಿಂದ ವ್ಯವಸ್ಥೆಯನ್ನು ಸಂಪೂರ್ಣವಾಗಿ ಡಿಜಿಟಲ್ ನವೀಕರಣ ವ್ಯವಸ್ಥೆ ನವೆಂಬರ್ 1, 2025 ರಿಂದ, ಯುಐಡಿಎಐ ಹೊಸ ಡಿಜಿಟಲ್ ನವೀಕರಣ ವ್ಯವಸ್ಥೆಯನ್ನು ಪ್ರಾರಂಭಿಸಿದೆ, ಇದು ಆಧಾರ್ ಹೊಂದಿರುವವರಿಗೆ ಪ್ರಮುಖ ಪರಿಹಾರವಾಗಿರುತ್ತದೆ. ಸೇವಾ ಕೇಂದ್ರಗಳಿಗೆ ಇನ್ನು ಮುಂದೆ ಭೇಟಿ ನೀಡುವುದಿಲ್ಲ: ಈ ವ್ಯವಸ್ಥೆಯಡಿಯಲ್ಲಿ, ಹೆಸರು, ವಿಳಾಸ, ಜನ್ಮ ದಿನಾಂಕ, ಲಿಂಗ ಮತ್ತು ಮೊಬೈಲ್ ಸಂಖ್ಯೆಯಂತಹ ಮಾಹಿತಿಯನ್ನು ಈಗ ಸಂಪೂರ್ಣವಾಗಿ ಆನ್ಲೈನ್ನಲ್ಲಿ ನವೀಕರಿಸಬಹುದು. ಸ್ವಯಂಚಾಲಿತ ಪರಿಶೀಲನೆ: ಹೊಸ ವ್ಯವಸ್ಥೆಯು ಸರ್ಕಾರಿ ಡೇಟಾಬೇಸ್ಗಳ ಮೂಲಕ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪರಿಶೀಲಿಸುತ್ತದೆ. ಪ್ರತಿಯೊಂದು ಸಣ್ಣ ದೋಷವನ್ನು ಸರಿಪಡಿಸಲು ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಅಥವಾ ದಾಖಲೆಗಳನ್ನು ಅಪ್ಲೋಡ್ ಮಾಡುವ ಅಗತ್ಯವಿಲ್ಲ. ಗ್ರಾಮೀಣ ಪ್ರದೇಶಗಳಿಗೆ ಲಾಭ…
ಬೆಂಗಳೂರು : ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಹಿಂಬದಿ ಸವಾರಿ ಮಾಡುವಾಗ ತಲೆಯ ಮೇಲೆ ಕಡಾಯಿ ಹಿಡಿದುಕೊಂಡ ವೀಡಿಯೊವೊಂದು ವೈರಲ್ ಆಗಿದೆ. ಭಾರೀ ಟ್ರಾಫಿಕ್ ನಲ್ಲಿ ದಂಡವನ್ನು ತಪ್ಪಿಸಲು ಪ್ರಯತ್ನಿಸಿದ್ದಾಗಿ ತಿಳಿದುಬಂದಿದೆ. ರೂಪೇನ ಅಗ್ರಹಾರ ಬಳಿ ಬೈಕ್ ಟ್ರಾಫಿಕ್ ಮೂಲಕ ಚಲಿಸುವಾಗ ಹಿಂಬದಿ ಸವಾರ ತನ್ನ ತಲೆಯ ಮೇಲೆ ಆಳವಾದ ಅಡುಗೆ ಪಾತ್ರೆಯನ್ನು ಸಮತೋಲನಗೊಳಿಸುತ್ತಿರುವುದನ್ನು ತೋರಿಸಿದೆ.ಅವರ ಹಿಂದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಚಿತ್ರೀಕರಿಸಿದ ವೀಡಿಯೊದಲ್ಲಿ, ಹೆಲ್ಮೆಟ್ ಇರಬೇಕಾದ ಸ್ಥಳದಲ್ಲಿ ಆ ವ್ಯಕ್ತಿ ಕಡಾಯಿಯನ್ನು ಹಿಡಿದಿರುವುದನ್ನು ತೋರಿಸಲಾಗಿದೆ. ಈ ಅಸಾಮಾನ್ಯ ದೃಶ್ಯವು ತೀಕ್ಷ್ಣವಾದ ಪ್ರತಿಕ್ರಿಯೆಗಳಿಗೆ ಕಾರಣವಾಯಿತು, ನೆಟ್ಟಿಗರು ಆ ವ್ಯಕ್ತಿಯ ಸುರಕ್ಷತಾ ಪ್ರಜ್ಞೆ ಮತ್ತು ಶಾರ್ಟ್ಕಟ್ ನಲ್ಲಿ ಅವರ ಪ್ರಯತ್ನವನ್ನು ಪ್ರಶ್ನಿಸಿತು.ಹೆಲ್ಮೆಟ್ಗಳು “ಜೀವರಕ್ಷಕಗಳು, ವೈರಲ್ ರೀಲ್ಗಳಿಗೆ ಆಧಾರಗಳಲ್ಲ” ಎಂದು ಟೀಕಿಸಿದ್ದಾರೆ. https://twitter.com/karnatakaportf/status/1984616794301349917
ಬೆಂಗಳೂರು : ಖ್ಯಾತ ರಂಗಭೂಮಿ ಕಲಾವಿದ ಕೆರೆಯಾಗಲಹಳ್ಳಿ ಮೈಲಾರಪ್ಪ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗಭೂಮಿ ಕಲಾವಿದ ಹಾಗೂ ಸಾಮಾಜಿಕ ಕಳಕಳಿಯ ಹಿರಿಯ ನಾಯಕರಾದ ಕೆರೆಯಾಗಲಹಳ್ಳಿ ಮೈಲಾರಪ್ಪನವರ ನಿಧನವಾರ್ತೆ ನೋವುಂಟುಮಾಡಿದೆ, ಮೃತರ ಆತ್ಮಕೆ ಶಾಂತಿಯನ್ನು ಕರುಣಿಸಲಿ ಮತ್ತು ದುಃಖತಪ್ತ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ನವದೆಹಲಿ: ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಮತ್ತು ಅಂಬಟಿ ರಾಯುಡು ಅವರೊಂದಿಗೆ ಆಡಿದ್ದ ಅನುಭವಿ ಆಲ್ರೌಂಡರ್ ರಾಜೇಶ್ ಬಾನಿಕ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ರಾಜೇಶ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ ಪರೀಕ್ಷೆಯ ನಂತರ ಆಸ್ಪತ್ರೆಯ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ರಾಜೇಶ್ ಬಾನಿಕ್ ಅವರ ನಿಧನಕ್ಕೆ ತ್ರಿಪುರ ಕ್ರಿಕೆಟ್ ಅಕಾಡೆಮಿ ಸಂತಾಪ ಸೂಚಿಸಿದೆ. ಟಿಸಿಎ ಕಾರ್ಯದರ್ಶಿ ಸುಬ್ರತಾ ಡೇ, “ನಾವು ಒಬ್ಬ ಪ್ರತಿಭಾನ್ವಿತ ಕ್ರಿಕೆಟಿಗ ಮತ್ತು ಅಂಡರ್ -16 ಕ್ರಿಕೆಟ್ ತಂಡದ ಆಯ್ಕೆದಾರರನ್ನು ಕಳೆದುಕೊಂಡಿರುವುದು ತುಂಬಾ ದುರದೃಷ್ಟಕರ. ಈ ಘಟನೆಯಿಂದ ನಮಗೆ ಆಘಾತವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಹೇಳಿದರು. ರಾಜೇಶ್ 2002-03ರಲ್ಲಿ ಆಲ್ರೌಂಡರ್ ಆಗಿ ತ್ರಿಪುರ ಪರ ರಣಜಿ ಟ್ರೋಫಿಗೆ ಪಾದಾರ್ಪಣೆ ಮಾಡಿದರು ಎಂಬುದು ಗಮನಿಸಬೇಕಾದ ಸಂಗತಿ. ಅವರ ಆಟವು ಎಷ್ಟು ಶಕ್ತಿಯುತವಾಗಿತ್ತೆಂದರೆ ಅವರು ಬೇಗನೆ ರಾಜ್ಯದ ಪ್ರಮುಖ ಕ್ರಿಕೆಟಿಗರಲ್ಲಿ ಒಬ್ಬರಾದರು. ನಂತರ ಅವರನ್ನು ತ್ರಿಪುರ ಅಂಡರ್ -16…
ಕೋಲಾರ : ತೋಟದಲ್ಲಿ ಮೋಟರ್ ಸ್ವಿಚ್ ಹಾಕುವಾಗ ವಿದ್ಯುತ್ ಪ್ರವಹಿಸಿ ಬಾಲಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ತಾಲೂಕಿನ ದೊಡ್ಡವಲ್ಲಭಿ ಗ್ರಾಮದಲ್ಲಿ ತೋಟದಲ್ಲಿ ಮೋಟರ್ ಸ್ವಿಚ್ ಹಾಕುವಾಗ ವಿದ್ಯುತ್ ಪ್ರವಹಿಸಿ ದಿಲೀಪ್ (17) ಸಾವನ್ನಪ್ಪಿದ್ದು, ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.














