Author: kannadanewsnow57

ವಾಷಿಂಗ್ಟನ್, : ಭಾರತದ ಆರ್ಥಿಕತೆಯು (Indian economy) 2024ರಲ್ಲಿ ಶೇ.7.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ವಿಶ್ವಬ್ಯಾಂಕ್ (World Bank) ಹೇಳಿದೆ. ಒಟ್ಟಾರೆಯಾಗಿ, ದಕ್ಷಿಣ ಏಷ್ಯಾದಲ್ಲಿ ಬೆಳವಣಿಗೆಯು 2024 ರಲ್ಲಿ ಶೇಕಡಾ 6.0 ಕ್ಕೆ ಬಲವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ, ಇದು ಮುಖ್ಯವಾಗಿ ಭಾರತದಲ್ಲಿ ದೃಢವಾದ ಬೆಳವಣಿಗೆ ಮತ್ತು ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಚೇತರಿಕೆಯಿಂದ ಪ್ರೇರಿತವಾಗಿದೆ ಎಂದು ವಿಶ್ವ ಬ್ಯಾಂಕ್ ಮಂಗಳವಾರ ತನ್ನ ಇತ್ತೀಚಿನ ದಕ್ಷಿಣ ಏಷ್ಯಾ ಅಭಿವೃದ್ಧಿ ನವೀಕರಣದಲ್ಲಿ ತಿಳಿಸಿದೆ. ವರದಿಯ ಪ್ರಕಾರ, ಮುಂದಿನ ಎರಡು ವರ್ಷಗಳವರೆಗೆ ದಕ್ಷಿಣ ಏಷ್ಯಾವು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಪ್ರದೇಶವಾಗಿ ಉಳಿಯುವ ನಿರೀಕ್ಷೆಯಿದೆ, 2025 ರಲ್ಲಿ ಬೆಳವಣಿಗೆಯು 6.1% ಎಂದು ಅಂದಾಜಿಸಲಾಗಿದೆ. “ಈ ಪ್ರದೇಶದ ಆರ್ಥಿಕತೆಯ ಬಹುಭಾಗವನ್ನು ಹೊಂದಿರುವ ಭಾರತದಲ್ಲಿ, ಉತ್ಪಾದನಾ ಬೆಳವಣಿಗೆಯು ಮಧ್ಯಮ ಅವಧಿಯಲ್ಲಿ 6.6% ಕ್ಕೆ ಮರಳುವ ಮೊದಲು ಹಣಕಾಸು ವರ್ಷ 23/24 ರಲ್ಲಿ 7.5% ತಲುಪುವ ನಿರೀಕ್ಷೆಯಿದೆ, ಸೇವೆಗಳು ಮತ್ತು ಉದ್ಯಮದಲ್ಲಿನ ಚಟುವಟಿಕೆಯು ದೃಢವಾಗಿ ಉಳಿಯುವ ನಿರೀಕ್ಷೆಯಿದೆ” ಎಂದು ಬ್ಯಾಂಕ್ ತನ್ನ ವರದಿಯಲ್ಲಿ…

Read More

ಬೆಂಗಳೂರು : ದಿನಾಂಕ: 01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ:01-04-2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಸಂಬಂಧ ಈ ಕಳಕಂಡ ಷರತ್ತುಗಳಿಗೆ ಒಳಪಟ್ಟು ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಸೂಚನೆಗಳನ್ನು ನೀಡಲಾಗಿರುತ್ತದೆ. 1. ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ:30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು…

Read More

ಬೆಂಗಳೂರು : ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ / ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2023-24ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಿದ್ದು, ಮುಂದಿನ 2024-25 ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುವುದರಿಂದ ರಾಜ್ಯಾದ್ಯಂತ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾಯೋಜನೆ/ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ. ಸದರಿ ಮಾರ್ಗಸೂಚಿಯಲ್ಲಿ ವಾರ್ಷಿಕ/ಮಾಹೆವಾರು ಪಾಠ ಹಂಚಿಕೆ, ಪಠ್ಯತರ ಚಟುವಟಿಕೆಗಳು, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳು, ಸಂಭ್ರಮ ಶನಿವಾರ (ನೋ ಬ್ಯಾಗ್ ಡೇ) ಆಯೋಜನೆಗೆ ಪೂರಕವಾದ ಪಠ್ಯಾಧಾರಿತ ಚಟುವಟಿಕೆ ಬ್ಯಾಂಕ್ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ CCE (ಪರೀಕ್ಷೆಗಳು/ ಮೌಲ್ಯಂಕನ,ವಿಶ್ಲೇಷಣೆ) ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ, ಸಿದ್ಧಪಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2024 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು…

Read More

ಕಲಬುರಗಿ : ರೈತರ 3.50 ಕೋಟಿ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದ ಕೇಂದ್ರ ಬಿಜೆಪಿ ಸರ್ಕಾರ, ಶ್ರೀಮಂತರ 12 ಲಕ್ಷ ಕೋಟಿ‌ ಸಾಲ ಮನ್ನಾ ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಕೇಳಿದರೆ, ನಾವು ಬದುಕು ಕಟ್ಟುವ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತೇವೆ. ನಮ್ಮ ಸರ್ಕಾರದ ಜನಪರ ಐದು ಗ್ಯಾರಂಟಿ ಯೋಜನೆಗಳನ್ನು ಜಾತಿ ಧರ್ಮದ ಮಿತಿ ದಾಟಿ ಎಲ್ಲರಿಗೂ ತಲುಪಿಸುತ್ತಿರುವುದು ನೋಡಿ ಬಿಜೆಪಿ ನಾಯಕರಿಗೆ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ.‌ ಜನರ ತೆರಿಗೆಯ ದುಡ್ಡನ್ನು ಈ ಯೋಜನೆಗಳ ಮೂಲಕ ಮತ್ತೆ ಜನರಿಗೆ ವಾಪಸ್ ಕೊಡುತ್ತಿದ್ದೇವೆ. ಇದಕ್ಕೆ ಬಿಜೆಪಿಗರು ಬಿಟ್ಟಿ ಭಾಗ್ಯ ಎಂದು ಟೀಕಿಸುತ್ತಿದ್ದಾರೆ. ” ಬಿಜೆಪಿಗರು ಬರೀ ವಾಟ್ಸಪ್ ಹಾಗೂ ಇತರೆ ಸಾಮಾಜಿಕ ಜಾಲತಾಣದಲ್ಲಿ ಮುಳುಗಿರುತ್ತಾರೆ ಅವರಿಗೆ ವಾಸ್ತವ ಗೊತ್ತಿಲ್ಲ.‌ ಬಡತನ, ನಿರುದ್ಯೋಗ, ಬೆಲೆ ಏರಿಕೆ, ರೈತರ ಸಮಸ್ಯೆಗಳ ಬಗ್ಗೆ ಅರಿವಿಲ್ಲ. ಸಂಸದ ಉಮೇಶ ಜಾಧವ ಅವರು…

Read More

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮೂವರು ಮಾಜಿ ಅಪರಾಧಿಗಳು, ಎಲ್ಲರೂ ಶ್ರೀಲಂಕಾದವರು, ಸುಪ್ರೀಂ ಕೋರ್ಟ್ ನಿಂದ ಬಿಡುಗಡೆಯಾದ ಸುಮಾರು ಎರಡು ವರ್ಷಗಳ ನಂತರ ಬುಧವಾರ ತಮ್ಮ ತಾಯ್ನಾಡಿಗೆ ಮರಳಿದ್ದಾರೆ. ಮಾಜಿ ಪ್ರಧಾನಿಯ ಹತ್ಯೆಗೆ ಸಂಬಂಧಿಸಿದಂತೆ ಅವರು ಈ ಹಿಂದೆ ಮೂರು ದಶಕಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದರು. ವಿ ಮುರುಗನ್ ಅಲಿಯಾಸ್ ಶ್ರೀಕರನ್, ಎಸ್ ಜಯಕುಮಾರ್ ಮತ್ತು ಬಿ ರಾಬರ್ಟ್ ಪಯಾಸ್ ಬುಧವಾರ ಶ್ರೀಲಂಕಾದ ವಾಹಕ ನೌಕೆಯಲ್ಲಿ ಕೊಲಂಬೊಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀಲಂಕಾ ಹೈಕಮಿಷನ್ ಮುರುಗನ್ ಮತ್ತು ಇತರರಿಗೆ ಪ್ರಯಾಣ ದಾಖಲೆಗಳನ್ನು ನೀಡಿದೆ ಮತ್ತು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್ಆರ್ಆರ್ಒ) ಗಡೀಪಾರು ಆದೇಶ ಹೊರಡಿಸಿದ ನಂತರ ಅವರು ಮನೆಗೆ ಮರಳಬಹುದು ಎಂದು ತಮಿಳುನಾಡು ಸರ್ಕಾರ ಕಳೆದ ತಿಂಗಳು ಮದ್ರಾಸ್ ಹೈಕೋರ್ಟ್ಗೆ ತಿಳಿಸಿತ್ತು.

Read More

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿನ ರಾಜ್ಯಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಾರ್ಷಿಕ ಚಟುವಟಿಕೆಗಳ ಕ್ರಿಯಾ ಯೋನೆ/ ಮಾರ್ಗಸೂಚಿ ಅನುಷ್ಠಾನಗೊಳಿಸುವ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೊದಲನೇ ಅವಧಿಯು 2024ರ ಮೇ 29ರಿಂದ ಅಕ್ಟೋಬರ್ 2ರವರೆಗೆ ಹಾಗೂ ಎರಡನೇ ಅವಧಿಯು ಅ.21ರಿಂದ 2025ರ ಏ.10ರವರೆಗೆ ಶಾಲಾ ಕರ್ತವ್ಯದ ದಿನಗಳನ್ನು ನಿಗದಿ ಮಾಡಿದೆ. ಹಾಗೆಯೇ, ಅ.3ರಿಂದ 20ರವರೆಗೆ ದಸರಾ ರಜೆ, 2025ರ ಏ.11ರಿಂದ ಮೇ 28ರವರೆಗೆ ಬೇಸಿಗೆ ರಜೆಯನ್ನು ನಿಗದಿ ಮಾಡಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. 244 ಶಾಲಾ ಕರ್ತವ್ಯದ ದಿನಗಳು ಲಭ್ಯವಾಗಲಿವೆ. ಈ ವಾರ್ಷಿಕ ಮಾರ್ಗಸೂಚಿಯಲ್ಲಿ ಮಾಸಿಕ ಪಾಠ ಹಂಚಿಕೆ, ಪಠ್ಯತರ ಚಟುವಟಿಕೆಗಳು, ಗುಣಮಟ್ಟದ ಶಿಕ್ಷಣಕ್ಕಾಗಿ ಲಿತಾಂಶಮುಖಿ ಚಟುವಟಿಕೆಗಳು, ಸಂಭ್ರಮ ಶನಿವಾರ ಸೇರಿ ಇತರೆ ಯೋಜನೆಗಳನ್ನು ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ.

Read More

ನವದೆಹಲಿ : ಇಂದಿನ ಡಿಜಿಟಲ್ ಯುಗದಲ್ಲಿ ಹೆಚ್ಚುತ್ತಿರುವ ತಪ್ಪು ಮಾಹಿತಿಯ ಹರಡುವಿಕೆಯನ್ನು ತಡೆಯುವ ಪ್ರಯತ್ನದಲ್ಲಿ, ಭಾರತದ ಚುನಾವಣಾ ಆಯೋಗ (ಇಸಿಐ) “ಮಿಥ್ ವರ್ಸಸ್ ರಿಯಾಲಿಟಿ” ರಿಜಿಸ್ಟರ್ ಅನ್ನು ಪ್ರಾರಂಭಿಸಿದೆ, ಇದು ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳನ್ನು ಎದುರಿಸಲು ಸಹಾಯ ಮಾಡುತ್ತದೆ, ಇದರಿಂದಾಗಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಖಚಿತಪಡಿಸುತ್ತದೆ. ಮಿಥ್ ವರ್ಸಸ್ ರಿಯಾಲಿಟಿ ರಿಜಿಸ್ಟರ್ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ನಕಲಿ ಸುದ್ದಿಗಳ ಭಂಡಾರವಾಗಿ ಕಾರ್ಯನಿರ್ವಹಿಸುತ್ತದೆ, ಮತದಾನದ ಅವಧಿಯಲ್ಲಿ ಪ್ರಸಾರವಾಗುವ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು ವಿಶ್ವಾಸಾರ್ಹ ಸಂಪನ್ಮೂಲವನ್ನು ಒದಗಿಸುತ್ತದೆ. ಇತ್ತೀಚಿನ ನಕಲಿ ಸುದ್ದಿಗಳನ್ನು ಸೇರಿಸಲು ಇದನ್ನು ನಿಯಮಿತವಾಗಿ ನವೀಕರಿಸಲಾಗುವುದು. ತಪ್ಪು ಮಾಹಿತಿ ಮತ್ತು ಸುಳ್ಳು ನಿರೂಪಣೆಗಳ ಪ್ರಸರಣದೊಂದಿಗೆ, ಈ ಪೂರ್ವಭಾವಿ ಉಪಕ್ರಮವು ಚುನಾವಣಾ ಪ್ರಕ್ರಿಯೆಯುದ್ದಕ್ಕೂ ಮತದಾರರಿಗೆ ನಿಖರವಾದ ಮತ್ತು ಪರಿಶೀಲಿಸಿದ ಮಾಹಿತಿಗೆ ಪ್ರವೇಶವಿದೆ ಎಂದು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ. https://twitter.com/DDIndialive/status/1775214111149916671?ref_src=twsrc%5Etfw%7Ctwcamp%5Etweetembed%7Ctwterm%5E1775214111149916671%7Ctwgr%5E8c1c52abd1d656b254ba518f79d199addc078371%7Ctwcon%5Es1_c10&ref_url=https%3A%2F%2Fapi-news.dailyhunt.in%2F ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು…

Read More

ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲ್ಲೂಕುಗಳಿಗೆ ತಾಲ್ಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭಾರತ ಸರ್ಕಾರವು ಹೊರಡಿಸಿರುವ Drought Manual 2020 ರಲ್ಲಿನ ಮಾನದಂಡಗಳನ್ನು ಅನುಸರಿಸಿ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ, ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದ್ದರ ಮೇರೆಗೆ, ಬರಪರಿಹಾರ ಕ್ರಮಗಳನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡಂತೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯನ್ನು ಸರ್ಕಾರದ ಆದೇಶ ಸಂಖ್ಯೆ: ಕಂಇ 449 ಟಿಎನ್‌ಆರ್ 2023, ದಿನಾಂಕ: 06.11.2023ರಲ್ಲಿ ರಚಿಸಲಾಗಿರುತ್ತದೆ. ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಸಂಬಂಧ ಮಾದರಿ ಚುನಾವಣೆ ನೀತಿ ಸಂಹಿತಿಯು ದಿನಾಂಕ:16.03.2024 ರಿಂದ ಜಾರಿಗೆ ಬಂದಿರುತ್ತದೆ. ಭಾರತದ ಚುನಾವಣಾ ಆಯೋಗವು ಮಾದರಿ ಚುನಾವಣೆ ನೀತಿ ಸಂಹಿತಿಯ ಸಂಬಂಧ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಕೆಳಕಂಡಂತೆ ನಿರ್ದೇಶಿಸಿರುತ್ತದೆ. “1) No minister…

Read More

ಬೆಂಗಳೂರು : ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ / ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2023-24ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಿದ್ದು, ಮುಂದಿನ 2024-25 ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುವುದರಿಂದ ರಾಜ್ಯಾದ್ಯಂತ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾಯೋಜನೆ/ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ. ಸದರಿ ಮಾರ್ಗಸೂಚಿಯಲ್ಲಿ ವಾರ್ಷಿಕ/ಮಾಹೆವಾರು ಪಾಠ ಹಂಚಿಕೆ, ಪಠ್ಯತರ ಚಟುವಟಿಕೆಗಳು, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳು, ಸಂಭ್ರಮ ಶನಿವಾರ (ನೋ ಬ್ಯಾಗ್ ಡೇ) ಆಯೋಜನೆಗೆ ಪೂರಕವಾದ ಪಠ್ಯಾಧಾರಿತ ಚಟುವಟಿಕೆ ಬ್ಯಾಂಕ್ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ CCE (ಪರೀಕ್ಷೆಗಳು/ ಮೌಲ್ಯಂಕನ,ವಿಶ್ಲೇಷಣೆ) ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ, ಸಿದ್ಧಪಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2024 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು…

Read More

ನವದೆಹಲಿ : ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ಏಷ್ಯಾ ಮತ್ತು ಭಾರತದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಫೋರ್ಬ್ಸ್ನ ಇತ್ತೀಚಿನ ‘2024 ಬಿಲಿಯನೇರ್ಗಳ ಪಟ್ಟಿ’ ಪ್ರಕಾರ, ಅಂಬಾನಿಯ ಸಂಪತ್ತು 83 ಬಿಲಿಯನ್ ಡಾಲರ್ನಿಂದ 116 ಬಿಲಿಯನ್ ಡಾಲರ್ಗೆ ಏರಿದೆ. ಅವರು 100 ಬಿಲಿಯನ್ ಡಾಲರ್ ಕ್ಲಬ್ನಲ್ಲಿ ಏಕೈಕ ಏಷ್ಯನ್. ಫೋರ್ಬ್ಸ್ನ ಇತ್ತೀಚಿನ ವರದಿಯಲ್ಲಿ, ಒಟ್ಟು 200 ಭಾರತೀಯರು ಕಾಣಿಸಿಕೊಂಡಿದ್ದಾರೆ, ಹಿಂದಿನ ವರ್ಷ 169 ರಷ್ಟಿತ್ತು. ಈ ಭಾರತೀಯರ ಒಟ್ಟು ಸಂಪತ್ತು 954 ಬಿಲಿಯನ್ ಡಾಲರ್ ದಾಖಲಾಗಿದ್ದು, ಕಳೆದ ವರ್ಷ ಇದು 675 ಬಿಲಿಯನ್ ಡಾಲರ್ ಆಗಿತ್ತು, ಅಂದರೆ ಭಾರತೀಯ ಬಿಲಿಯನೇರ್ ಸಂಪತ್ತು ಈ ವರ್ಷ ಶೇಕಡಾ 41 ರಷ್ಟು ಹೆಚ್ಚಾಗಿದೆ. ಪಟ್ಟಿಯ ಪ್ರಕಾರ, ಗೌತಮ್ ಅದಾನಿ ಎರಡನೇ ಶ್ರೀಮಂತ ಭಾರತೀಯರಾಗಿದ್ದಾರೆ. ಅವರು ತಮ್ಮ ನಿವ್ವಳ ಮೌಲ್ಯಕ್ಕೆ 36.8 ಬಿಲಿಯನ್ ಡಾಲರ್ ಸೇರಿಸಿದ್ದಾರೆ ಮತ್ತು 84 ಬಿಲಿಯನ್ ಡಾಲರ್ ನಿವ್ವಳ ಮೌಲ್ಯದೊಂದಿಗೆ, ಅವರು ವಿಶ್ವ ಬಿಲಿಯನೇರ್ ಪಟ್ಟಿಯಲ್ಲಿ 17 ನೇ…

Read More