Author: kannadanewsnow57

ಇಂದಿನ ವೇಗದ ಜೀವನದಲ್ಲಿ, ಅನೇಕ ಜನರು ನಿದ್ರೆಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಉತ್ತಮ ಆರೋಗ್ಯಕ್ಕೆ ಸಾಕಷ್ಟು ನಿದ್ರೆ ಬಹಳ ಮುಖ್ಯ. ತಜ್ಞರ ಪ್ರಕಾರ.. ಸರಿಯಾದ ನಿದ್ರೆ ಇಲ್ಲದೆ, ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತದೆ ಮತ್ತು ಮಧುಮೇಹ, ಹೃದ್ರೋಗ ಮತ್ತು ಖಿನ್ನತೆಯಂತಹ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ ಎಂದು ತಜ್ಞರು ಎಚ್ಚರಿಸುತ್ತಾರೆ. ಎಷ್ಟೇ ಪ್ರಯತ್ನಿಸಿದರೂ ನಿದ್ರೆ ಮಾಡಲು ಸಾಧ್ಯವಾಗದವರು.. ವೇಗವಾಗಿ ನಿದ್ರಿಸಲು ಯಾವ ಬದಿಯಲ್ಲಿ ಮಲಗಬೇಕು ಎಂದು ತಿಳಿದುಕೊಳ್ಳುವುದು ಅವಶ್ಯಕ. ವೇಗವಾಗಿ ನಿದ್ರಿಸಲು ನೀವು ಯಾವ ಬದಿಯಲ್ಲಿ ಮಲಗಬೇಕು..? ಈ ಲೇಖನದಲ್ಲಿ ಆರೋಗ್ಯಕರ ನಿದ್ರೆಗೆ ಪರಿಹಾರದ ಬಗ್ಗೆ ಕೆಲವು ವಿಷಯಗಳನ್ನು ತಿಳಿದುಕೊಳ್ಳೋಣ. ನಿದ್ರೆಗೆ ಉತ್ತಮ ಸ್ಥಾನ: ಎಡಭಾಗ: ಎಡಭಾಗದಲ್ಲಿ ಮಲಗುವುದು ಸಾಮಾನ್ಯವಾಗಿ ಆರೋಗ್ಯವಂತ ಜನರಿಗೆ ತುಂಬಾ ಪ್ರಯೋಜನಕಾರಿ. ಸಂಶೋಧನೆಯ ಪ್ರಕಾರ.. ಈ ಸ್ಥಾನದಲ್ಲಿ ಮಲಗುವುದು ಹೊಟ್ಟೆ ಮತ್ತು ಕರುಳಿನ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ. ಸರಿಯಾದ ಜೀರ್ಣಕ್ರಿಯೆಯಿಂದಾಗಿ, ಗ್ಯಾಸ್ ಮತ್ತು ಆಮ್ಲೀಯತೆಯಂತಹ ಯಾವುದೇ ಸಮಸ್ಯೆಗಳಿಲ್ಲ.. ಇದು ಮನಸ್ಸನ್ನು ತಾಜಾವಾಗಿರಿಸುತ್ತದೆ ಮತ್ತು ಬೇಗನೆ ನಿದ್ರಿಸಲು…

Read More

ಚಾಮರಾಜನಗರ : ಗ್ರಾಮಪಂಚಾಯಿತಿ ಕಚೇರಿ ಎದುರೇ ವಾಟರ್ ಮ್ಯಾನ್ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಗ್ರಾಮಪಂಚಾಯಿತಿ ಕಚೇರಿ ಮುಂದೆಯೇ ವಾಟರ್ ಮ್ಯಾನ್ ಚಿಕ್ಕಸು ನಾಯಕ (65) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಂಗನೂರು ಗ್ರಾಮಪಂಚಾಯಿತಿನಲ್ಲಿ ಚಿಕ್ಕಸು ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಮುಂಜಾನೆ ಗ್ರಾಮಸ್ಥರು ಗ್ರಾ.ಪಂ.ಕಚೇರಿಗೆ ಬಂದಾಗ ಚಿಕ್ಕಸು ಗ್ರಾ.ಪಂ. ಬಾಗಿಲು ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಟರ್ ಮ್ಯಾನ್ ಚಿಕ್ಕಸು ಆತ್ಮಹತ್ಯೆಗೆ ಪೊಲೀಸರು ನಿಖರ ಕಾರಣಕ್ಕಾಗಿ ತನಿಖೆ ನಡೆಸುತ್ತಿದ್ದಾರೆ.ಸ್ಥಳಕ್ಕೆ ಚಾಮರಾಜನಗರ ಪೂರ್ವ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅಸ್ಸಾಂ : ತಡರಾತ್ರಿ ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯ ಕಾಕೋಪಥರ್ ಪ್ರದೇಶದಲ್ಲಿ ಭಾರೀ ಗುಂಡಿನ ಚಕಮಕಿ ಮತ್ತು ಬಹು ಗ್ರೆನೇಡ್ ಸ್ಫೋಟಗಳು ಸಂಭವಿಸಿವೆ. ಕಾಕೋಪಥರ್ ಸೇನಾ ಶಿಬಿರದ ಬಳಿ ಈ ಘಟನೆ ನಡೆದಿದ್ದು, ಸುಮಾರು ಒಂದು ಗಂಟೆ ಕಾಲ ಗುಂಡಿನ ಚಕಮಕಿ ನಡೆಯಿತು. ಮಧ್ಯರಾತ್ರಿಯ ಸುಮಾರಿಗೆ ಭಾರತೀಯ ಸೇನೆಯ 19 ಗ್ರೆನೇಡಿಯರ್ಸ್ ಘಟಕದ ಶಿಬಿರದ ಮೇಲೆ ಗ್ರೆನೇಡ್‌ಗಳನ್ನು ಎಸೆಯಲಾಗಿದೆ ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ. ಭದ್ರತಾ ಮೂಲಗಳ ಪ್ರಕಾರ, ಸ್ಫೋಟದಲ್ಲಿ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಸೇನೆ ಮತ್ತು ಪೊಲೀಸರು ಪ್ರದೇಶವನ್ನು ಸುತ್ತುವರೆದು ನಾಗರಿಕರ ಸಂಚಾರವನ್ನು ನಿರ್ಬಂಧಿಸಿದ್ದಾರೆ. ದಾಳಿಕೋರರನ್ನು ಪತ್ತೆಹಚ್ಚಲು ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ದಾಳಿಕೋರರು ಬಳಸಿದ ಟ್ರಕ್ ಅನ್ನು ನಂತರ ನೆರೆಯ ಅರುಣಾಚಲ ಪ್ರದೇಶದ ತೆಂಗಪಾನಿ ಪ್ರದೇಶದಲ್ಲಿ ಬಿಟ್ಟುಹೋಗಿರುವುದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಹನದಲ್ಲಿ ಗ್ರೆನೇಡ್ ಅವಶೇಷಗಳು ಮತ್ತು ಶಸ್ತ್ರಾಸ್ತ್ರಗಳ ಗುರುತುಗಳು ಕಂಡುಬಂದಿವೆ, ಇದು ತನಿಖೆಯ ಕೇಂದ್ರಬಿಂದುವಾಗಿದೆ. ದಾಳಿಯ ಹೊಣೆಯನ್ನು ಯಾವುದೇ…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಏಕಕಾಲಕ್ಕೆ ಇಬ್ಬರು ಯುವತಿಯರನ್ನು ಮದುವೆಯಾಗಿರುವ ಘಟನೆ ನಡೆದಿದ್ದು, ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಚಿತ್ರದುರ್ಗದ ಎಂ.ಕೆ. ಪ್ಯಾಲೇಸ್ ನಲ್ಲಿ ಯುವಕನೊಬ್ಬ ಏಕಕಾಲಕ್ಕೆ ಇಬ್ಬರು ಯುವತಿರನ್ನು ಮದುವೆಯಾಗಿರುವ ಘಟನೆ ನಡೆದಿದೆ. ವಸೀಮ್ ಶೇಖ್ ಜೊತೆಗೆ ಶಿಫಾ ಮತ್ತು ಜನ್ನತ್ ಅವರು ಮದುವೆಯಾಗಿದ್ದಾರೆ. ವಸೀಮ್ ಶೇಕ್ ಗೋವಾದಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿ ವಸೀಮ್ ಗೆ ಇಬ್ಬರು ಯುವತಿಯರ ಪರಿಚಯವಾಗುತ್ತದೆ. ಇಬ್ಬರು ಯುವತಿಯರ ಜೊತೆಗೆ ವಸೀಮ್ ಗೆ ಪ್ರೇಮಾಂಕುರವಾಗಿತ್ತು. ಹೀಗಾಗಿ ಇಬ್ಬರನ್ನು ಏಕಕಾಲಕ್ಕೆ ಮದುವೆ ಆಗಿದ್ದಾನೆ. ಸದ್ಯ ಈ ಮದುವೆಯ ಫೋಟೋ, ವಿಡಿಯೋ ವೈರಲ್ ಆಗುತ್ತಿವೆ.

Read More

ಯುವನಿಧಿ ಯೋಜನೆಯಡಿ ನೋಂದಾಯಿತರಾಗಿ ನಿರುದ್ಯೋಗ ಭತ್ಯೆಯನ್ನು ಪಡೆಯುತ್ತಿರುವ ಫಲಾನುಭವಿಗಳು ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಲು ಕೌಶಲ್ಕರ್ ಪೋರ್ಟಲ್ನಲ್ಲಿ ಕಡ್ಡಾಯವಾಗಿ ನೊಂದಣಿಯಾಗಲು ಸೂಚಿಸಲಾಗಿದೆ. ತರಬೇತಿ ಅವಧಿಯಲ್ಲಿ ಯುವನಿಧಿ ನಿರುದ್ಯೋಗ ಭತ್ಯೆಯನ್ನು ಪಡೆಯಲು ಯಾವುದೇ ತೊಂದರೆ ಇರುವುದಿಲ್ಲ. ಫಲಾನುಭವಿಗಳು ಕೌಶಲ್ಕರ್ ಪೋರ್ಟ್ನಲ್ಲಿ ನೊಂದಾಯಿಸದಿದ್ದರೆ, ಅವರ ಭತ್ಯ ಸ್ಥಗಿತಗೊಳಿಸುವ ಷರತ್ತು ವಿಧಿಸಲಾಗಿದೆ. ಔದ್ಯೋಗಿಕ ಬೇಡಿಕೆಗಳ ಅನುಸಾರವಾಗಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿ ನೀಡಿ ಶೇ.70 ರಷ್ಟು ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸಲಾಗುವುದು. ಫಲಾನುಭವಿಗಳು www.kaushalkar.com/app/registration-verify ಕೌಶಲ್ಕರ್ ಈ ಪೋರ್ಟಲ್ನಲ್ಲಿ ನೊಂದಾಯಿಸಿಕೊಂಡು ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು. ವಿದೇಶದಲ್ಲಿ ಉದ್ಯೋಗಾಸಕ್ತಿ ಹೊಂದಿರುವ ನರ್ಸಿಂಗ್ ವ್ಯಾಸಾಂಗ ಮಾಡಿರುವ ಹಾಗೂ ಮಾಡುತ್ತಿರುವವರಿಗೆ ಉಚಿತವಾಗಿ ವಿದೇಶಿ ಭಾಷಾ ತರಬೇತಿ ನೀಡಲಾಗುದೆ. ಆಸಕ್ತರು http://nursesflt.ksdckarnataka.com ಪೊರ್ಟ್ಲ್ನಲ್ಲಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಸರಸ್ವತಿಪುರಂ 3ನೇ ಕ್ರಾಸ್, ರಾಯಲ್ ಓಕ್ ಕಟ್ಟಡದ ಹಿಂಬಾಗದಲ್ಲಿರುವ ಕಛೇರಿ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 7338674796, 7338674791 ಗೆ ಕರೆ ಮಾಡುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ…

Read More

ಕಾರವಾರ : ಕಾರವಾರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಹೊಟ್ಟೆಗೆ ಮೀನಿನ ಮೂತಿ ಚುಚ್ಚಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದಾನೆ. ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗ ನಿವಾಸಿ 24 ವರ್ಷದ ಅಕ್ಷಯ ಅನಿಲ ಮಾಜಾಳಿಕರ್ ಮೃತ ಯುವಕ. ಅಕ್ಷಯ ಮಂಗಳವಾರ (ಅ.14) ಎಂದಿನಂತೆ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಎರಡು ದಿನಗಳ ಹಿಂದೆ ಅಕ್ಷಯ್ ಮೀನುಗಾರಿಕೆಗೆ ತೆರಳಿದಾಗ ಸ್ಥಳೀಯವಾಗಿ ‘ತೋಳೆ ಕಾಂಡೆ ಮೀನು’ ಎಂದು ಕರೆಯಲಾಗುವ ಅಟ್ಲಾಂಟಿಕ್ ನೀಡಲ್‌ ಫಿಶ್ ಆತನ ಹೊಟ್ಟೆಗೆ ಚುಚ್ಚಿತ್ತು. ಗಾಯಗೊಂಡಿದ್ದ ಆತನನ್ನು ಕಾರವಾರ ಕ್ರಿಮ್ಸ್ ಬೋಧಕ ಆಸ್ಪತ್ರೆಗೆ ಸೇರಿಸಲಾಗಿತ್ತು. ವೈದ್ಯರು ಗಾಯಕ್ಕೆ ಹೊಲಿಗೆ ಹಾಕಿ ಚಿಕಿತ್ಸೆ ನೀಡಿದ್ದರು. ಆದರೆ, ಆತ ಗುಣಮುಖವಾಗದ ಕಾರಣ ಮತ್ತೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ರಾತ್ರಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.  ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಮತ್ತು ಸ್ಥಳೀಯ ಮೀನುಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಬೆಂಗಳೂರು ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಹೆತ್ತ ತಾಯಿರನ್ನೇ ಪಾಪಿ ಪುತ್ರರು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.  ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯ ನಡೆದಿದ್ದು, ಮಗನೊಬ್ಬ ತನ್ನ ಹೆತ್ತ ತಾಯಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಹೆತ್ತ ತಾಯಿಯನ್ನೇ ಕತ್ತು ಸೀಳಿ ಕೊಂದು ಪಾಪಿ ಪುತ್ರ.! ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಜಾಲಮಂಗಲದಲ್ಲಿ ಸ್ವಂತ ಮಗನೇ ತಾಯಿಯನ್ನು ಕೊಲೆ ಮಾಡಿದ್ದಾನೆ. ಕೊಲೆಯಾದ ಮಹಿಳೆಯನ್ನು ಸರೋಜಮ್ಮ (60) ಎಂದು ಗುರುತಿಸಲಾಗಿದೆ. ಅನಿಲ್ (36) ತಾಯಿಯನ್ನೇ ಕೊಂದ ಮಗ. ಜಮೀನು ಮಾರಾಟ ಮಾಡಿದ ಹಣ ಕೊಡಲಿಲ್ಲ ಎಂದು ತಾಯಿಯಾದ ಸರೋಜಮ್ಮಳ ಕತ್ತು ಕೊಯ್ದಿದ್ದಾನೆ. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ಸರೋಜಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆಯಲ್ಲಿ ಕುಡಿಯಲು ಹಣ ಕೊಡಲಿಲ್ಲವೆಂದು ಹೆತ್ತ ತಾಯಿಯನ್ನೇ…

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನ್ಯಾಯಾಲಯವು ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಮೊಹಮ್ಮದ್ ಯೂಸುಫ್ ಶಾ ಅಲಿಯಾಸ್ ಸೈಯದ್ ಸಲಾಹ್-ಉದ್-ದಿನ್ ನನ್ನು 2012 ರ ಪ್ರಕರಣದಲ್ಲಿ ಘೋಷಿತ ಅಪರಾಧಿ ಎಂದು ಘೋಷಿಸಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಸೊಪೋರ್ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಣಬೀರ್ ದಂಡ ಸಂಹಿತೆಯ ಸೆಕ್ಷನ್ 153-ಬಿ (ಆರೋಪಗಳು, ರಾಷ್ಟ್ರೀಯ ಏಕೀಕರಣಕ್ಕೆ ಹಾನಿಕರವಾದ ಪ್ರತಿಪಾದನೆಗಳು) ಮತ್ತು ಐಪಿಸಿಯ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಶಾನನ್ನು ಘೋಷಿತ ಅಪರಾಧಿ ಎಂದು ಘೋಷಿಸಿದೆ. “ಭಯೋತ್ಪಾದನೆಯ ವಿರುದ್ಧದ ಯುದ್ಧ ಮುಂದುವರೆದಿದೆ: ಪಾಕಿಸ್ತಾನದಿಂದ ಆಶ್ರಯ ಪಡೆದಿರುವ ಹಿಜ್ಬುಲ್ ಮುಜಾಹಿದ್ದೀನ್ನ ಸ್ವಯಂ ಘೋಷಿತ ಕಮಾಂಡರ್ ಮೊಹಮ್ಮದ್ ಯೂಸುಫ್ ಶಾ ಅಲಿಯಾಸ್ ಸೈಯದ್ ಸಲಾಹುದ್ದೀನ್ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಘೋಷಣೆ ಆದೇಶಗಳನ್ನು ಪಡೆದುಕೊಂಡಿದ್ದಾರೆ, ಪಿಎಸ್ ಡಂಗಿವಾಚಾ ಅವರ ಎಫ್ಐಆರ್ 67/2012 ರಲ್ಲಿ!” ಜೆ-ಕೆ ಪೊಲೀಸರು X ನಲ್ಲಿ ತಿಳಿಸಿದ್ದಾರೆ. https://twitter.com/JmuKmrPolice/status/1978868515550695740?ref_src=twsrc%5Etfw%7Ctwcamp%5Etweetembed%7Ctwterm%5E1978868515550695740%7Ctwgr%5Ee98535871a66505cd6ad1a86ada8fb9858f583c4%7Ctwcon%5Es1_c10&ref_url=https%3A%2F%2Fwww.newsdrum.in%2Fnational%2Fcourt-in-j-ks-baramulla-declares-hizbul-mujahideen-chief-proclaimed-offender-10570151tw ಈ ವರ್ಷದ ಜುಲೈನಲ್ಲಿ, ಇಲ್ಲಿನ NIA…

Read More

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಾದೇವ ನಗರದಲ್ಲಿ ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಓರ್ವ ಬಾಲಕ ಹಾಗೂ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಶಿವಮ್ಮ ರಾಜೂ ರಾಠೋಡ್ (8), ಕಾರ್ತಿಕ ವಿಶ್ವಾ ರಾಠೋಡ್ (7) ಹಾಗೂ ಸ್ವಪ್ನಾ ರಾಜೂ ರಾಠೋಡ್ (12) ಮೃತ ಮಕ್ಕಳು ಎಂದು ಗುರುತಿಸಲಾಗಿದೆ. ಕುರಿಗಳ ಜೊತೆಗೆ ಆಟ ಆಡುತ್ತಾ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

Read More

ಕೆನಡಾ : ಆಘಾತಕಾರಿ ಘಟನೆಯೊಂದರಲ್ಲಿ ಕೆನಡಾದ ಸರ್ರೆಯಲ್ಲಿರುವ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆಫೆ ಕ್ಯಾಪ್ಸ್ ಕೆಫೆ ಮತ್ತೊಮ್ಮೆ ದಾಳಿಗೆ ಒಳಗಾಗಿದೆ. ಇದು ಕೇವಲ ನಾಲ್ಕು ತಿಂಗಳಲ್ಲಿ ಮೂರನೇ ಗುಂಡಿನ ದಾಳಿಯಾಗಿದ್ದು, ಭದ್ರತೆ ಮತ್ತು ಗ್ಯಾಂಗ್ ಸಂಬಂಧಿತ ಹಿಂಸಾಚಾರದ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಗುರುವಾರ ರಾತ್ರಿಯ ಒಂದು ವೀಡಿಯೊದಲ್ಲಿ, ಹಿಂದಿನ ದಾಳಿಗಳ ನಂತರ ದುರಸ್ತಿ ಮಾಡಿದ ನಂತರ ಇತ್ತೀಚೆಗೆ ಮತ್ತೆ ತೆರೆಯಲಾದ ಕೆಫೆಯ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ. ಈ ಘಟನೆಯನ್ನು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹಚರರು ಹೇಳಿಕೊಂಡಿದ್ದಾರೆ, ಕುಲ್ವೀರ್ ಸಿಧು ಮತ್ತು ಗೋಲ್ಡಿ ಧಿಲ್ಲನ್ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ದಾಳಿಯನ್ನು ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಈ ಇಬ್ಬರು ಸಾರ್ವಜನಿಕರೊಂದಿಗೆ ತಮಗೆ ಯಾವುದೇ ದ್ವೇಷವಿಲ್ಲ ಎಂದು ಹೇಳಿದರು ಆದರೆ “ನಮ್ಮ ಧರ್ಮದ ವಿರುದ್ಧ ಮೋಸ ಮಾಡುವವರು ಅಥವಾ ಮಾತನಾಡುವವರು ಸಿದ್ಧರಾಗಿರಬೇಕು, ಗುಂಡುಗಳು ಎಲ್ಲಿಂದಲಾದರೂ ಬರಬಹುದು” ಎಂದು ಎಚ್ಚರಿಸಿದರು. https://twitter.com/ndtv/status/1978810270349725826?ref_src=twsrc%5Etfw%7Ctwcamp%5Etweetembed%7Ctwterm%5E1978810270349725826%7Ctwgr%5Eed9a7fc57e9e8dd47960254e527c862c2e270022%7Ctwcon%5Es1_c10&ref_url=https%3A%2F%2Fkannadadunia.com%2Fshocking-comedian-kapil-sharma-cafe-again-attacked-by-gunmen-video-goes-viral-watch-video%2F

Read More