Author: kannadanewsnow57

ಬೆಂಗಳೂರು : 2024-25ನೇ ಸಾಲಿನ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ದಾಖಲಾತಿ ಮಾಡಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಪಟ್ಟಂತೆ 2024-25ನೇ ಶೈಕ್ಷಣಿಕ ವರ್ಷದಲ್ಲಿ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಗೆ ಪ್ರವೇಶ ಪರೀಕ್ಷೆಯನ್ನು ನಡೆಸಿದ್ದು, ಫಲಿತಾಂಶ ಸಹ ಪ್ರಕಟಗೊಂಡಿರುತ್ತದೆ. ಈ ಸಂಬಂಧ ಪ್ರತಿ ಆದರ್ಶ ವಿದ್ಯಾಲಯಕ್ಕೆ ಕರ್ನಾಟಕ ಮೀಸಲಾತಿ ಅನ್ವಯ ಪ್ರತಿ ಶಾಲೆಗೆ 120 ರಂತೆ ಸೀಟುಗಳ ಪಟ್ಟಿ ಸಿದ್ಧಪಡಿಸಿ ಸಂಬಂಧಿಸಿದ ಮುಖ್ಯ ಶಿಕ್ಷಕರಿಗೆ www.vidyavahini.karnataka.gov.in , ಶಾಲೆಯ ಆವರಣದಲ್ಲಿ 3 ರಿಂದ 4 ಸ್ಥಳಗಳಲ್ಲಿ ಪ್ರಕಟಿಸಬೇಕು. ಅಗತ್ಯ ದಾಖಲೆಗಳನ್ನು ಪಡೆದು ಕೆಳಗಿನ ವೇಳಾಪಟ್ಟಿಯನ್ವಯ ದಾಖಲಾತಿಯನ್ನು ಮಾಡಿಕೊಳ್ಳಲು ಆದರ್ಶ ವಿದ್ಯಾಲಯಗಳ ಮುಖ್ಯ ಶಿಕ್ಷಕರಿಗೆ ಅನುಮತಿಸಿ ಆದೇಶಿಸಿದೆ. 2024-25ನೇ ಸಾಲಿನಲ್ಲಿ ಆದರ್ಶ ವಿದ್ಯಾಲಯಗಳ 6ನೇ ತರಗತಿಯ ದಾಖಲಾತಿಯ ಮಾರ್ಗಸೂಚಿಯ ಸುತ್ತೋಲೆ ದಿನಾಂಕ 16.01.2024 ಅನ್ನು ಕಡ್ಡಾಯವಾಗಿ ಆದರ್ಶ ವಿದ್ಯಾಲಯಗಳ ಮುಖ್ಯ ಶಿಕ್ಷಕರು ಪಾಲಿಸುವುದು.

Read More

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಸಿಬ್ಬಂದಿ ಸಚಿವಾಲಯ ಭರ್ಜರಿ ಸಿಹಿಸುದ್ದಿ ನೀಡಿದೆ. ೨೦೨೪ ರ ಜನವರಿ ೧ ರಿಂದಲೇ ಅನ್ವಯವಾಗುವಂತೆ ಹಲವು ಭತ್ಯೆ ಮತ್ತು ಸಬ್ಸಿಡಿ ಏರಿಕೆ ಮಾಡಿರುವುದಾಗಿ ಘೋಷಿಸಿದೆ. ಸಿಬ್ಬಂದಿ ಸಚಿವಾಲಯದ ಆದೇಶದ ಪ್ರಕಾರ, ಕೇಂದ್ರ ಸರ್ಕಾರವು ಕೇಂದ್ರ ನೌಕರರ ಮಕ್ಕಳ ಶಿಕ್ಷಣ ಭತ್ಯೆ (ಸಿಇಎ) ಮತ್ತು ಹಾಸ್ಟೆಲ್ ಸಬ್ಸಿಡಿಯ ಮಿತಿಗಳನ್ನು ಹೆಚ್ಚಿಸಿದೆ. ಜನವರಿ 1, 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯನ್ನು ಹೆಚ್ಚಿಸುವ ಘೋಷಣೆಯ ನಂತರ ಸರ್ಕಾರ ಈ ಕ್ರಮ ಕೈಗೊಂಡಿದೆ. 2018 ರ ಮಾರ್ಗಸೂಚಿಗಳ ದೃಷ್ಟಿಯಿಂದ, ತುಟ್ಟಿಭತ್ಯೆ (ಡಿಎ) ಅನ್ನು ಶೇಕಡಾ 50 ರವರೆಗೆ ಹೆಚ್ಚಿಸಿದಾಗಲೆಲ್ಲಾ, ಮಕ್ಕಳ ಶಿಕ್ಷಣ ಭತ್ಯೆ ಮತ್ತು ಹಾಸ್ಟೆಲ್ ಸಬ್ಸಿಡಿ ಸ್ವಯಂಚಾಲಿತವಾಗಿ ಶೇಕಡಾ 25 ರಷ್ಟು ಹೆಚ್ಚಾಗುತ್ತದೆ. ಕೇಂದ್ರ ನೌಕರರ ಅಂಗವಿಕಲ ಮಕ್ಕಳ ಶಿಕ್ಷಣ ಭತ್ಯೆ ಸಾಮಾನ್ಯಕ್ಕಿಂತ ದುಪ್ಪಟ್ಟಾಗಲಿದೆ. ಪ್ರಸ್ತುತ, ಸಾಮಾನ್ಯ ದರವನ್ನು ತಿಂಗಳಿಗೆ 5625 ರೂ.ಗೆ ನಿಗದಿಪಡಿಸಲಾಗಿದೆ. ಎಲ್ಲಾ ಕೇಂದ್ರ ಸಚಿವಾಲಯಗಳಿಗೆ ಹೊರಡಿಸಿದ ಆದೇಶದಲ್ಲಿ, ಅಂಗವಿಕಲ ಮಹಿಳೆಯರ ಮಕ್ಕಳ ಆರೈಕೆಗಾಗಿ…

Read More

ನವದೆಹಲಿ : ಅಸ್ಟ್ರಾಜೆನೆಕಾ ಮಹತ್ವದ ತಿರುವಿನಲ್ಲಿ, ತನ್ನ ಕೋವಿಡ್ -19 ಲಸಿಕೆ ಅಪರೂಪದ ಅಡ್ಡಪರಿಣಾಮಕ್ಕೆ ಕಾರಣವಾಗಬಹುದು ಎಂದು ನ್ಯಾಯಾಲಯದ ದಾಖಲೆಗಳಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಆಕ್ಸ್ಫರ್ಡ್-ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆಯನ್ನು ಜಾಗತಿಕವಾಗಿ ಕೋವಿಶೀಲ್ಡ್ ಮತ್ತು ವ್ಯಾಕ್ಸ್ಜೆವ್ರಿಯಾ ಎಂಬ ಬ್ರಾಂಡ್ ಹೆಸರುಗಳಲ್ಲಿ ಮಾರಾಟ ಮಾಡಲಾಯಿತು. ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದ ಲಸಿಕೆಯಿಂದ ಉಂಟಾದ ಗಂಭೀರ ಗಾಯಗಳು ಮತ್ತು ಸಾವುಗಳನ್ನು ಆರೋಪಿಸಿ ಔಷಧೀಯ ಕಂಪನಿ ವರ್ಗ-ಕ್ರಮ ಮೊಕದ್ದಮೆಯನ್ನು ಎದುರಿಸುತ್ತಿದೆ. ಅಸ್ಟ್ರಾಜೆನೆಕಾ ಲಸಿಕೆಯ ಅಡ್ಡಪರಿಣಾಮಗಳು ವಿನಾಶಕಾರಿ ಪರಿಣಾಮಗಳನ್ನು ಬೀರಿವೆ ಎಂದು ಹಲವಾರು ಕುಟುಂಬಗಳು ನ್ಯಾಯಾಲಯದ ದೂರಿನ ಮೂಲಕ ಆರೋಪಿಸಿವೆ. ಕಂಪನಿಯ ಪ್ರವೇಶವು ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಒಂದು ಪ್ರಮುಖ ಕ್ಷಣವನ್ನು ಸೂಚಿಸುತ್ತದೆ, ವ್ಯಾಕ್ಸಿನೇಷನ್ಗೆ ಸಂಬಂಧಿಸಿದ ಸಂಭಾವ್ಯ ಅಪಾಯಗಳನ್ನು ಎತ್ತಿ ತೋರಿಸುತ್ತದೆ. ಏಪ್ರಿಲ್ 2021 ರಲ್ಲಿ ಅಸ್ಟ್ರಾಜೆನೆಕಾ ಲಸಿಕೆ ಪಡೆದ ನಂತರ ಮೆದುಳಿಗೆ ಶಾಶ್ವತ ಗಾಯದಿಂದ ಬಳಲುತ್ತಿದ್ದ ಜೇಮಿ ಸ್ಕಾಟ್ ಈ ಮೊಕದ್ದಮೆಯನ್ನು ಪ್ರಾರಂಭಿಸಿದರು. ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್ಲೆಟ್ ಎಣಿಕೆಯಿಂದ ನಿರೂಪಿಸಲ್ಪಟ್ಟ ಥ್ರಾಂಬೋಸಿಸ್ ವಿತ್ ಥ್ರಾಂಬೋಸೈಟೋಪೆನಿಯಾ…

Read More

ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಚುನಾವಣೆ ನಡೆಯಲಿದ್ದು, ಮತದಾನ ದಿನದಂದು ಕರ್ತವ್ಯಕ್ಕೆ ನೇಮಕವಾದ ಅಧಿಕಾರಿ, ಸಿಬ್ಬಂದಿಗಳು ಇಂದಿನಿಂದ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ ಮತ್ತು ಮತದಾನ ದಿನ ಕರ್ತವ್ಯಕ್ಕೆ ನಿಯೋಜಿತರಾವರಿಗೆ ಮತದಾನಕ್ಕೆ ಸೌಲಭ್ಯ ಕಲ್ಪಿಸಲಾಗಿದೆ.ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ಮೇ. ೧ ರಿಂದ ಮೂರು ದಿನಗಳ ಕಾಲ ಅಂಚೆ ಮತದಾನ ಮಾಡಲು ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಈ ಕ್ಷೇತ್ರಗಳಲ್ಲಿ ಮತದಾನ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ.

Read More

ನವದೆಹಲಿ : 14 ವರ್ಷದ ಅತ್ಯಾಚಾರ ಸಂತ್ರಸ್ತೆಯೊಬ್ಬಳು ತನ್ನ 30 ವಾರಗಳ ಗರ್ಭಧಾರಣೆಯನ್ನು ಕೊನೆಗೊಳಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು. ಆದರೆ, ಈಗ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಪೀಠವು ಬಾಲಕಿಯ ಪೋಷಕರೊಂದಿಗೆ ಮಾತನಾಡಿದ ನಂತರ ಏಪ್ರಿಲ್ 22 ರ ಆದೇಶವನ್ನು ಸೋಮವಾರ ಹಿಂತೆಗೆದುಕೊಂಡಿತು. ಏಪ್ರಿಲ್ 22 ರಂದು ಸುಪ್ರೀಂ ಕೋರ್ಟ್ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ಅಪ್ರಾಪ್ತ ಬಾಲಕಿಗೆ ಗರ್ಭಪಾತ ಮಾಡಲು ಅವಕಾಶ ನೀಡುವ ಅಧಿಕಾರವನ್ನು ಚಲಾಯಿಸಿತ್ತು. ಅನುಚ್ಛೇದ 142 ರ ಅಡಿಯಲ್ಲಿ, ಯಾವುದೇ ಪ್ರಕರಣದಲ್ಲಿ ಸಂಪೂರ್ಣ ನ್ಯಾಯಕ್ಕಾಗಿ ಅಗತ್ಯ ಆದೇಶಗಳನ್ನು ಹೊರಡಿಸುವ ಹಕ್ಕನ್ನು ನ್ಯಾಯಾಲಯ ಹೊಂದಿದೆ. ಆದರೆ, ಸೋಮವಾರ ಸಿಜೆಐ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ, ಮನೋಜ್ ಮಿಶ್ರಾ ಅವರ ನ್ಯಾಯಪೀಠವು ಮಧ್ಯಾಹ್ನ 2 ಗಂಟೆಗೆ ನ್ಯಾಯಾಲಯದಲ್ಲಿ ಈ ವಿಷಯವನ್ನು ಆಲಿಸಿತು ಮತ್ತು ನ್ಯಾಯಪೀಠಕ್ಕೆ ಸಹಾಯ ಮಾಡುತ್ತಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಮತ್ತು ಅಪ್ರಾಪ್ತ ಬಾಲಕಿಯ ಪೋಷಕರ ವಕೀಲರೊಂದಿಗೆ ಮಾತನಾಡಿತು. ಬಾಲಕಿಯ ಪೋಷಕರು ನ್ಯಾಯಾಧೀಶರೊಂದಿಗೆ…

Read More

ದಾವಣಗೆರೆ : ಕುಟುಂಬದಲ್ಲಿ ತಂದೆ, ತಾಯಿ, ಮಕ್ಕಳಿದ್ದರೆ ಅದೇನೋ ಚಂದದ ಮನೆಯಂತೆ ಕಾಣುತ್ತದೆ. ಅನೇಕರ ದಾಂಪತ್ಯದಲ್ಲಿ ಮಕ್ಕಳ ಫಲವಿಲ್ಲದೇ ಜೀವನದ ನಿರುತ್ಸಾಹ, ನಿರಾಸೆ ಭಾವನೆಯಿಂದ ದಿನಗಳನ್ನು ಸಾಗಿಸುತ್ತಾರೆ. ಕಳೆದ 16 ವಷರ್Àಗಳಿಂದ ಮಕ್ಕಳಿಲ್ಲದೆ ನಿರಾಸೆಯಾಗಿದ್ದ ಬಳ್ಳಾರಿ ಮೂಲದ ದಂಪತಿಗಳು ಸರ್ಕಾರದಿಂದ 4 ತಿಂಗಳ ಗಂಡು ಮಗುವನ್ನು ದತ್ತು ಪಡೆದಿದ್ದಾರೆ. ದಾವಣಗೆರೆ ಜಿಲ್ಲಾ ದತ್ತು ಸ್ವೀಕಾರ ಕೇಂದ್ರದಿಂದ ಬಳ್ಳಾರಿ ಮೂಲದ ದಂಪತಿಗಳು ಸೋಮವಾರ ಮಗುವನ್ನು ದತ್ತು ಪಡೆದಿದ್ದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ಮಗುವನ್ನು ದತ್ತು ನೀಡಿದರು. ಮಕ್ಕಳಿಲ್ಲದವರು ಮತ್ತು ಮಕ್ಕಳನ್ನು ಸಾಕಲು ಸಾಕಬಯಸುವ ಪೋಷಕರು ಮಕ್ಕಳನ್ನು ದತ್ತು ಪಡೆಯಲು ಅವಕಾಶ ಇರುತ್ತದೆ. ಪ್ರತಿಯೊಂದು ಜಿಲ್ಲೆಯಲ್ಲಿ ದತ್ತು ಸ್ವೀಕಾರ ಕೇಂದ್ರಗಳಿರುತ್ತವೆ. ಅನಾಥವಾಗಿರುವ ಮಗು, ಮಗು ಬೇಡವಾದ ದಂಪತಿಗಳಿಂದ ಮಗು ಸ್ವೀಕಾರ, ಮಗು ಪೋಷಣೆ ಮಾಡಲು ಸಾಧ್ಯವಾಗದವರಿಂದ ಮಗುವನ್ನು ಈ ಕೇಂದ್ರದಲ್ಲಿ ಪಡೆಯಲಾಗುತ್ತದೆ. ಈ ಮಗುವನ್ನು ಇಲ್ಲಿ ಪಾಲನೆ ಪೋಷಣೆ ಮಾಡಿ ಮಗುವಿಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಸರ್ಕಾರದಿಂದ ಕಲ್ಪಿಸಿ ಮಗುವನ್ನು ಪಾಲನೆ,…

Read More

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ಬೇಗೆಗೆ ರಾಜ್ಯದಲ್ಲಿ ಇಬ್ಬರು ವೃದ್ಧೆಯರು ಸಾವನ್ನಪ್ಪಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕುರಕುಂದಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಾಲಾ ಹೂಳೆತ್ತುವ ಕೆಲಸ ಮಾಡುತ್ತಿದ್ದಾಗ ಬಿಸಿಲಿನ ತಾಪದಿಂದ ಕುಸಿದು ಬಿದ್ದು ಹಣಮಂತಿ ಮಲ್ಲಿಕಾರ್ಜುನಪ್ಪ (೫೨) ಎಂಬ ಮಹಿಳೆ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಿಸಿಲಿನ ತಾಪದಿಂದ ದಾರಿ ಮದ್ಯೆಯೇ ಕುಸಿದು ಬಿದ್ದು ರತ್ನಮ್ಮ (೭೫) ಎಂಬ ಮಹಿಳೆ ಮೃತಪಟ್ಟಿದ್ದಾರೆ. ಹವಾಮಾನ ಇಲಾಖೆಯು ಬೀದರ್, ಕಲಬುರಗಿ, ವಿಜಯಪುರ, ರಾಯಚೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ಬಿಸಿಗಾಳಿ ಬೀಸುವ ಎಚ್ಚರಿಕೆ ನೀಡಿದೆ. ಈಗಾಗಲೇ ರಾಜ್ಯ ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ಒಣಹವೆಯೊಂದಿಗೆ ಬಿಸಿಗಾಳಿ ಬೀಸುವ ಕುರಿತು ಮುನ್ನಚ್ಚೆರಿಕೆ ನೀಡಿರುವ ಹಿನ್ನಲೆ ಪ್ರತಿಯೊಬ್ಬರು ಆದಷ್ಟು ನೆರಳಿನಲ್ಲಿ ಇರುವುದಕ್ಕೆ ಆದ್ಯತೆ ನೀಡಬೇಕು. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ದೇಹದಲ್ಲಿ ನಿರ್ಜಲೀಕರಣವನ್ನು ತಡೆಗಟ್ಟಲು…

Read More

ಬೆಂಗಳೂರು : ಶ್ರೀನಿವಾಸ ಪ್ರಸಾದ್‌ರವರ ನಿಧನಕ್ಕೆ ಗೌರವ ಸೂಚಕವಾಗಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಶ್ರೀನಿವಾಸ ಪ್ರಸಾದ್‌ರವರ ನಿಧನಕ್ಕೆ ಗೌರವ ಸೂಚಕವಾಗಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 15 ದಿನಗಳ ಹಿಂದೆ ಭೇಟಿಯಾಗಿದ್ದಾಗ ರಾಜಕೀಯ ಮಾತನಾಡಿದೆವು. ಹೋರಾಟದ ಬದುಕಿನಲ್ಲಿ ಇರುವವರಿಗೆ ಸಂತೋಷದ ಕ್ಷಣಗಳು ಕಡಿಮೆ. ಬಹಳ ವರ್ಷಗಳ ನಂತರ ಭೇಟಿಯಾಗಿದ್ದ ಕಾರಣ ಸಂತೋಷವಾಗಿದ್ದೇನೆ ಎಂದು ನನ್ನ ಬಳಿ ಹೇಳಿದ್ದರು.ನಾನು ಮತ್ತು ಶ್ರೀನಿವಾಸ ಪ್ರಸಾದ್ ಅವರು ಜೊತೆಯಲ್ಲಿಯೇ ರಾಜಕಾರಣ ಮಾಡಿದವರು. ಜನತಾ ಪಕ್ಷ ಹಾಗೂ ಕಾಂಗ್ರೆಸ್ ನಲ್ಲಿ ಒಟ್ಟಿಗಿದ್ದವರನ್ನು ಕಳೆದುಕೊಂಡಾಗ ಬಹಳ ದುಃಖವಾಗುತ್ತದೆ ಎಂದರು. ಶ್ರೀನಿವಾಸ ಪ್ರಸಾದ್ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿ ಅವರ…

Read More

ಬೆಂಗಳೂರು : ಬರದಿಂದ ತತ್ತರಿಸಿರು ಜನತೆಗೆ ಶಾಕಿಂಗ್ ನ್ಯೂಸ್, ರಾಜ್ಯದ ಡ್ಯಾಂಗಳಲ್ಲಿ ಸದ್ಯಕ್ಕೆ ಕೇವಲ ಶೇ. 10.83 ರಷ್ಟು ಮಾತ್ರ ನೀರು ಇದೆ ಎಂದು ವರದಿಯಾಗಿದೆ. ರಾಜ್ಯದಲ್ಲಿ 22 ಜಲಾಶಯಗಳಲ್ಲಿ ಸದ್ಯ ಡೆಡ್ ಸ್ಟೋರೇಜ್ ಹೊರತುಪಡಿಸಿ 57.62 ಟಿಎಂಸಿ ನೀರು ಮಾತ್ರ ಉಳಿದಿದ್ದು, ಅದರಲ್ಲಿ ಕೃಷ್ಣಾಕೊಳ್ಳದ ಜಲಾಶಯಗಳಲ್ಲಿಯೇ 49.19 ಟಿಎಂಸಿ ನೀರು ಶೇಖರಣೆಯಾಗಿದೆ. ರಾಜ್ಯದಲ್ಲಿ ಮಳೆ ಕೊರತೆ, ಬಿಸಿಲಿನ ಪ್ರಮಾಣ ಹೆಚ್ಚಳದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಭಾರಿ ಪ್ರಮಾಣದಲ್ಲಿ ಕುಸಿತವಾಗಿದೆ. ಸಕಾಲದಲ್ಲಿ ಮಳೆಯಾಗದಿದ್ದರೆ ರಾಜ್ಯದ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ.

Read More

ಕುಷ್ಟಗಿ : ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಬಡ ಕುಟುಂಬದ ಮಹಿಳೆಗೆ 1 ಲಕ್ಷ ರೂಪಾಯಿ, ನಿರುದ್ಯೋಗಿ ಯುವಕರಿಗೆ 1 ಲಕ್ಷ ರೂ. ಹಾಗೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕುಷ್ಟಗಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ – ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ ಮೇಲೆ ಎ.ಐ.ಸಿ.ಸಿ ಕೂಡ ಗ್ಯಾರಂಟಿ ಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಬಡ ಕುಟುಂಬದ ಮಹಿಳೆಗೆ 1 ಲಕ್ಷ ರೂಪಾಯಿ ಕೊಡುತ್ತೇವೆ ಎಂದು ಹೇಳಿದ್ದಾರೆ. ತಿಂಗಳಿಗೆ 8,500 ರೂ.ಗಳು ದೊರೆಯಲಿದೆ. ಕುಟುಂಬ ನಡೆಸಲು, ಜನರ ಕೊಳ್ಳುವ ಶಕ್ತಿ ಹೆಚ್ಚಿಸಲು ಈ ಘೋಷಣೆ ಮಾಡಲಾಗಿದೆ. ನಿರುದ್ಯೋಗಿ ಯುವಕರಿಗೆ 1 ಲಕ್ಷ ರೂ. ಹಾಗೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು ಎಂದರು. ಕೇಂದ್ರದಲ್ಲಿ ನರೇಂದ್ರ ಮೋದಿ ಅವರು 10 ವರ್ಷಗಳ ಕಾಲ ಸಂವಿಧಾನದ ಧ್ಯೇಯೋದ್ದೇಶಗಳನ್ನು…

Read More