Subscribe to Updates
Get the latest creative news from FooBar about art, design and business.
Author: kannadanewsnow57
ಅನೇಕ ಜನರು ವಾಟ್ಸಾಪ್ ಬಳಸುತ್ತಾರೆ. ಆದರೆ ಅದರಲ್ಲಿರುವ ಹೆಚ್ಚಿನ ವೈಶಿಷ್ಟ್ಯಗಳು ಅವರಿಗೆ ತಿಳಿದಿಲ್ಲ. ವಾಟ್ಸಾಪ್ನಲ್ಲಿ ನಿಮಗೆ ತಿಳಿದಿಲ್ಲದ ಹಲವು ಟ್ರಿಕ್ಗಳಿವೆ. ಇಂದು ನಾವು ಅಂತಹ ಒಂದು ಟ್ರಿಕ್ ಬಗ್ಗೆ ನಿಮಗೆ ಹೇಳುತ್ತೇವೆ. ಕೆಲವೊಮ್ಮೆ ನಾವು ಇತರರ ವಾಟ್ಸಾಪ್ ಸ್ಟೇಟಸ್ ಅನ್ನು ಅವರಿಗೆ ತಿಳಿಯದೆ ವೀಕ್ಷಿಸಲು ಬಯಸುತ್ತೇವೆ. ಆದರೆ, ಇದನ್ನು ಹೇಗೆ ಮಾಡಬೇಕೆಂದು ಅನೇಕ ಜನರಿಗೆ ತಿಳಿದಿಲ್ಲ. ನೀವು ಇತರರ ವಾಟ್ಸಾಪ್ ಸ್ಟೇಟಸ್ ಅನ್ನು ಅವರಿಗೆ ತಿಳಿಯದೆ ವೀಕ್ಷಿಸಲು ಬಯಸಿದರೆ.. ಅದಕ್ಕೆ ಮೂರು ಮಾರ್ಗಗಳಿವೆ. ಅವು ಯಾವುವು? ಅದನ್ನು ಹೇಗೆ ಆನ್ ಮಾಡುವುದು? ಇಲ್ಲಿ ಕಂಡುಹಿಡಿಯೋಣ. Read receipt ಆಫ್ ಮಾಡಿ (ಆಂಡ್ರಾಯ್ಡ್/ಐಒಎಸ್) ಆಂಡ್ರಾಯ್ಡ್ ಮತ್ತು ಐಒಎಸ್ ವಾಟ್ಸಾಪ್ ಬಳಕೆದಾರರು ತಮ್ಮ ವಾಟ್ಸಾಪ್ನಲ್ಲಿ Read receipt ಎಂಬ ಆಯ್ಕೆಯನ್ನು ಹೊಂದಿರುತ್ತಾರೆ. ಅದನ್ನು ಆಫ್ ಮಾಡಿ. ಇದನ್ನು ಮಾಡುವುದರಿಂದ ಯಾರಿಗೂ ತಿಳಿಯದಂತೆ ಸಂದೇಶಗಳನ್ನು ಓದಲು ನಿಮಗೆ ಸಹಾಯವಾಗುತ್ತದೆ. ನೀವು ಆಯ್ಕೆ ಮಾಡಿದ ವ್ಯಕ್ತಿಯ ವಾಟ್ಸಾಪ್ ಸ್ಟೇಟಸ್ ಅನ್ನು ವೀಕ್ಷಿಸಿದಾಗ, ನಿಮ್ಮ ಹೆಸರು ಅವರ ಹಿಸ್ಟರಿಯಲ್ಲಿ…
ನವದೆಹಲಿ : PhonePe, Paytm, ಮತ್ತು Cred ನಂತಹ ಆನ್ಲೈನ್ ಪಾವತಿ ಅಪ್ಲಿಕೇಶನ್ಗಳು ಕ್ರೆಡಿಟ್ ಕಾರ್ಡ್ಗಳನ್ನು ಬಳಸಿಕೊಂಡು ಬಾಡಿಗೆ ಪಾವತಿಸುವ ಸೇವೆಯನ್ನು ನಿಲ್ಲಿಸಿವೆ. ರಿಸರ್ವ್ ಬ್ಯಾಂಕ್ ಹೊರಡಿಸಿದ ಹೊಸ ನಿಯಮಗಳಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಬೇಕಾಯಿತು. ಕ್ರೆಡಿಟ್ ಕಾರ್ಡ್ಗಳ ಮೂಲಕ ಸುಲಭವಾಗಿ ಬಾಡಿಗೆ ಪಾವತಿಸುವ ಲಕ್ಷಾಂತರ ಬಾಡಿಗೆದಾರರಿಗೆ ಈ ಬದಲಾವಣೆಯು ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹೊಸ RBI ಸುತ್ತೋಲೆಯ ಪ್ರಕಾರ. ಪಾವತಿ ಸಂಗ್ರಾಹಕರು ಮತ್ತು ಪಾವತಿ ಗೇಟ್ವೇಗಳು ಅಧಿಕೃತವಾಗಿ ನೋಂದಾಯಿತ ವ್ಯಾಪಾರಿಗಳಿಂದ ಮಾತ್ರ ವಹಿವಾಟುಗಳನ್ನು ಪ್ರಕ್ರಿಯೆಗೊಳಿಸಬೇಕು. ಆದಾಗ್ಯೂ, ಅನೇಕ ಮನೆಮಾಲೀಕರು ವ್ಯಾಪಾರಿಗಳಾಗಿ ನೋಂದಾಯಿಸಿಕೊಂಡಿಲ್ಲ. ಈ ಕಾರಣದಿಂದಾಗಿ, ಫಿನ್ಟೆಕ್ ಅಪ್ಲಿಕೇಶನ್ಗಳು ಕ್ರೆಡಿಟ್ ಕಾರ್ಡ್ಗಳ ಮೂಲಕ ಅವರಿಗೆ ಬಾಡಿಗೆ ಪಾವತಿ ಸೇವೆಯನ್ನು ಒದಗಿಸಲು ಸಾಧ್ಯವಿಲ್ಲ. ಇದಲ್ಲದೆ, RBI KYC ನಿಯಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಅನೇಕ ಜನರು ಈ ಬಾಡಿಗೆ ಪಾವತಿಗಳನ್ನು ಬಳಸುತ್ತಿದ್ದಾರೆ, ನಿಕಟ ಸಂಬಂಧಿಗಳ ಖಾತೆಗಳಿಗೆ ಹಣವನ್ನು ವರ್ಗಾಯಿಸುತ್ತಿದ್ದಾರೆ ಮತ್ತು ಇತರ ಉದ್ದೇಶಗಳಿಗಾಗಿ ಬಳಸುತ್ತಿದ್ದಾರೆ ಎಂದು ಕಂಡುಬಂದಿದೆ. ಪೂರ್ಣ ಪರಿಶೀಲನಾ ಪ್ರಕ್ರಿಯೆಯನ್ನು ತಪ್ಪಿಸಲು ಇದು ಉಪಯುಕ್ತವಾಗಿದೆ…
ಬೆಂಗಳೂರು : ನಿಮ್ಮ ಗ್ರಾಮದಲ್ಲಿ ಕುಡಿಯುವ ನೀರು, ಘನತ್ಯಾಜ್ಯ ವಿಲೇವಾರಿ ಕುರಿತು ದೂರುಗಳಿದ್ದರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ನಿಮ್ಮ ಗ್ರಾಮದಲ್ಲಿ ಕುಡಿಯುವ ನೀರು, ನೈರ್ಮಲ್ಯ, ಘನತ್ಯಾಜ್ಯ ವಿಲೇವಾರಿ ಕುರಿತು ದೂರುಗಳಿದ್ದಲ್ಲಿ, ಪಂಚಮಿತ್ರ ಸಹಾಯವಾಣಿ 8277506000 ಗೆ ಕರೆ ಮಾಡಿ. ವಾಟ್ಸಾಪ್ ಮೂಲಕವೂ ದೂರು ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಹೌದು,ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿಯೊಂದು ಸಮಸ್ಯೆಗೂ ಒಂದೇ ಪರಿಹಾರ. ಪಂಚಮಿತ್ರ ವಾಟ್ಸಾಪ್ ಚಾಟ್ ಬಾಟ್ ಅಥವಾ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ. ಪಂಚಮಿತ್ರ ವಾಟ್ಸಾಪ್ ಚಾಟ್ ಬಾಟ್ ಅಥವಾ ಸಹಾಯವಾಣಿಯನ್ನು ಸಂಪರ್ಕಿಸಿ, ನಿಮ್ಮ ಗ್ರಾಮದ ಯಾವುದೇ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ಹಾಗೂ ಪರಿಹಾರ ಪಡೆಯಿರಿ. https://twitter.com/KarnatakaVarthe/status/1968635653337256240?ref_src=twsrc%5Etfw%7Ctwcamp%5Etweetembed%7Ctwterm%5E1968635653337256240%7Ctwgr%5Ed6c594bcabaddd971ef8cb2d49e59a007715858b%7Ctwcon%5Es1_c10&ref_url=https%3A%2F%2Fkannadadunia.com%2Fif-you-have-any-complaints-regarding-drinking-water-and-solid-waste-disposal-in-your-village-call-this-number%2F
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ಸೇರಿದಂತೆ ಹಲವು ಸಚಿವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಜಾತಿ ಗಣತಿ ಮುಂದೂಡುವಂತೆ ಒತ್ತಡ ಹೆಚ್ಚಿದ್ದು, ಹೊಸದಾಗಿ 331 ಜಾತಿಗಳ ಸೇರ್ಪಡೆಗೂ ತೀವ್ರ ಆಕ್ಷೇಪ ವ್ಯಕ್ತವಾಗಿದೆ ಎಂದು ಹೇಳಲಾಗಿದೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ಧಪಡಿಸಲಾದ ಜಾತಿ ಪಟ್ಟಿಯಲ್ಲಿ ಹಿಂದೂ ಜಾತಿಗಳ ಹೆಸರಿನ ಮುಂದೆ ಕ್ರಿಶ್ಚಿಯನ್ ಪದ ಸೇರ್ಪಡೆ, 331 ಹೊಸ ಜಾತಿಗಳನ್ನು ಉಲ್ಲೇಖಿಸಿರುವ ಬಗ್ಗೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಾತಿ ಪಟ್ಟಿಯ ಕುರಿತಾಗಿ ಗೊಂದಲ ಬಗೆಹರಿಯುವವರೆಗೆ ಸಮೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಕ್ರಿಶ್ಚಿಯನ್ ಬ್ರಾಹ್ಮಣ, ಕ್ರಿಶ್ಚಿಯನ್ ಒಕ್ಕಲಿಗ, ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ದಲಿತ ಎಂಬಿತ್ಯಾದಿಯಾಗಿ ಹಿಂದೂ ಜಾತಿಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಜೋಡಿಸಿ ಜಾತಿ ಸಮೀಕ್ಷೆಯಲ್ಲಿ ಸೇರಿಸಲಾಗಿತ್ತು. ಈ ಪಟ್ಟಿಗೆ ವಿರೋಧ ವ್ಯಕ್ತವಾಗಿತ್ತು. ವಿಪಕ್ಷಗಳು, ಹಿಂದೂ ಸಮುದಾಯ ಮಾತ್ರವಲ್ಲ, ಸಂಪುಟ ಸಭೆಯಲ್ಲಿ ಸಚಿವರೇ…
ಬೆಂಗಳೂರು : ಇಂದಿನಿಂದ ಒಂದು ವಾರ ರಾಜ್ಯಾದ್ಯಂತ ಮುಂದಿನ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ. ಕರಾವಳಿ ಹಾಗೂ ಒಳನಾಡಿನ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಚಿಕ್ಕಮಗಳೂರು, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೆ.19ರಂದು ಕರಾವಳಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಪ್ರಸವ ಪೂರ್ವದ ಮರಣ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ರಾಜ್ಯಮಟ್ಟದ ನಿರ್ಜೀವ ಜನನ (ಸ್ಟಿಲ್ ಬರ್ಥ್) ಆಡಿಟ್ ಸಮಿತಿ ರಚಿಸಿ ‘ನಿರ್ಜೀವ ಜನನ ಕಣ್ಣಾವಲು ಮತ್ತು ಪ್ರತಿಕ್ರಿಯೆ (ಎಸ್ಬಿಎಸ್ಆರ್)’ ವ್ಯವಸ್ಥೆ ಜಾರಿಗೊಳಿಸಲು ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ನಿರ್ಜೀವ ಜನನಗಳನ್ನು ಗುರುತಿಸಿ, ಕಾರಣಗಳನ್ನು ವರ್ಗೀಕರಿಸಿ ಮತ್ತು ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಮಟ್ಟದ ನಿರ್ಜೀವ ಜನನ (Still Birth) ಆಡಿಟ್ ಸಮಿತಿಯನ್ನು ರಚಿಸಿ, Still birth Surveillance and Response (SBSR) ರ ವ್ಯವಸ್ಥೆಯನ್ನು ಜಾರಿಗೊಳಿಸಲು ಈ ಕೆಳಕಂಡಂತೆ ಅನುಮೋದನೆ ನೀಡಿದೆ. (1) ಆಸ್ಪತ್ರೆ ಮಟ್ಟ: ಆಸ್ಪತ್ರೆಯ ನೋಡಲ್ ಅಧಿಕಾರಿಗಳು ನಿರ್ಜೀವ ಜನನದ 24 ಗಂಟೆಗಳ ಒಳಗಾಗಿ ಆಡಿಟ್ ನಡೆಸಿ, ವರದಿಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದ ನೋಡಲ್ ಅಧಿಕಾರಿಗಳಿಗೆ ಕೂಡಲೇ ಸಲ್ಲಿಸುವುದು. (2) ಜಿಲ್ಲಾ ಮಟ್ಟದಲ್ಲಿ MDSR ಸಮಿತಿಯಿಂದ : ಪ್ರತಿ ತಿಂಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
ರಷ್ಯಾ : ಇಂದು ಬೆಳ್ಳಂಬೆಳಗ್ಗೆ ರಷ್ಯಾದ ಪೂರ್ವ ಪ್ರದೇಶದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಪ್ರಕಾರ, ಪೆಟ್ರೋಪಾವ್ಲೋವ್ಸ್ಕ್-ಕಮ್ಚಟ್ಸ್ಕಿ ಪ್ರದೇಶದಲ್ಲಿ ಸಂಭವಿಸಿದ ಭೂಕಂಪವು 7.8 ತೀವ್ರತೆಯನ್ನು ಹೊಂದಿದ್ದು, ಕೇವಲ 10 ಕಿಲೋಮೀಟರ್ ಆಳದಲ್ಲಿ ಕೇಂದ್ರೀಕೃತವಾಗಿತ್ತು. ಬಲವಾದ ಕಂಪನದ ನಂತರ 5.8 ತೀವ್ರತೆಯನ್ನು ತಲುಪಿದ ನಂತರದ ಭೂಕಂಪಗಳ ಸರಣಿ ಸಂಭವಿಸಿದೆ. ಕಮ್ಚಟ್ಕಾ ಪ್ರದೇಶದ ಗವರ್ನರ್ ವ್ಲಾಡಿಮಿರ್ ಸೊಲೊಡೊವ್, ಭೂಕಂಪದ ನಂತರ ಪರ್ಯಾಯ ದ್ವೀಪದ ಪೂರ್ವ ಕರಾವಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಟೆಲಿಗ್ರಾಮ್ನಲ್ಲಿ ಬರೆದಿದ್ದಾರೆ. ಸ್ಥಳೀಯ ನಿವಾಸಿಗಳಿಗೆ ಅಪಾಯದ ಬಗ್ಗೆ ಎಚ್ಚರಿಕೆ ನೀಡಲಾಗುತ್ತಿದೆ, ಆದರೆ ಇನ್ನೂ ಯಾವುದೇ ದೊಡ್ಡ ಹಾನಿ ದೃಢೀಕರಿಸಲಾಗಿಲ್ಲ ಎಂದು ಅವರು ಹೇಳಿದರು. ಪೆಟ್ರೋಪಾವ್ಲೋವ್ಸ್ಕ್-ಕಮ್ಚಟ್ಸ್ಕಿ ವಿಶ್ವದ ಅತ್ಯಂತ ಭೂಕಂಪನಶೀಲ ಸಕ್ರಿಯ ಪ್ರದೇಶಗಳಲ್ಲಿ ಒಂದಾಗಿದೆ. ಪೆಸಿಫಿಕ್ ಪ್ಲೇಟ್ ಮತ್ತು ಉತ್ತರ ಅಮೆರಿಕಾದ ಪ್ಲೇಟ್ ಇಲ್ಲಿ ಡಿಕ್ಕಿ ಹೊಡೆಯುವುದರಿಂದ ಆಗಾಗ್ಗೆ ಭೂಕಂಪಗಳು ಸಂಭವಿಸುತ್ತವೆ. ಒಂದು ವಾರದ ಹಿಂದೆ, ಶನಿವಾರ, ಅದೇ ಪ್ರದೇಶದಲ್ಲಿ 7.4…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಮುಂಬಡ್ತಿ ಹೊಂದಲು ಹುದ್ದೆಗೆ ಅಗತ್ಯವಾದ ತರಬೇತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದು, ವಿವಿಧ ಇಲಾಖೆಗಳ ಉನ್ನತ ಹುದ್ದೆಗಳಿಗೆ ಕಂಪ್ಯೂಟರ್, ತಂತ್ರಾಂಶ, ಸಾಫ್ಟ್ ಸ್ಕಿಲ್ಸ್ ಸೇರಿ ಹಲವು ತರಬೇತಿ ಅಗ ತ್ಯವಿರುತ್ತದೆ. ಈ ತರಬೇತಿ ಪಡೆಯದಿದ್ದರೆ ಮುಂಬ ಡ್ತಿಗೆ ಅವಕಾಶವಿಲ್ಲ ಎಂದು ಸಂಪುಟ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರಕಾರದ ‘ಸಿ’ ವೃಂದ ಮೇಲ್ಪಟ್ಟ ಎಲ್ಲ ಅಧಿಕಾರಿ, ನೌಕರರಿಗೆ ಮುಂಬಡ್ತಿಗೆ ತರಬೇತಿ ಕಡ್ಡಾಯಗೊಳಿಸುವ ಮಹತ್ವದ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಕೇಂದ್ರ ನಾಗರಿಕ ಸೇವಾ ಅಧಿ ಕಾರಿಗಳಿಗೆ ಸೇವಾವಧಿ ನಡುವೆ ಲಾಲ್ ಬಹದ್ದೂರ್ ಶಾಸ್ತ್ರಿ ಅಕಾಡೆಮಿಯಲ್ಲಿ ತರಬೇತಿ ವ್ಯವಸ್ಥೆ ಇದ್ದು, ಅದೇ ಮಾದರಿಯಲ್ಲಿ ರಾಜ್ಯ ಸರಕಾರದ ಎಲ್ಲ ಅಧಿಕಾರಿ ವರ್ಗಕ್ಕೆ ತರಬೇತಿಗೆ ನಿರ್ಧರಿಸಲಾಗಿದೆ. ಮುಂಬಡ್ತಿಗಾಗಿ ಈ ತರಬೇತಿಯನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.…
ಬೆಂಗಳೂರು : ಬೆಂಗಳೂರಿನ ರಿಂಗ್ ರಸ್ತೆಯಲ್ಲಿ ಟ್ರಾಫಿಕ್ ಕಂಟ್ರೋಲ್ ಗಾಗಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಬೆಂಗಳೂರಿನ ಎಚ್ಎಎಲ್ ಠಾಣಾ ವ್ಯಾಪ್ತಿಯ ರಿಂಗ ರಸ್ತೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಸೆಪ್ಟೆಂಬರ್ 19 ರಿಂದ 26ರವರೆಗೆ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ ಲೇ ಅರೇಬಿಯಾ, ಬಿರಿಯಾನಿ ಜೋನ್ ಕ್ರೋಮ್ ಜಂಕ್ಷನ್ ನಿಂದ ಮಾರತಹಳ್ಳಿ, ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆ ಅವರಿಗೆ ಸಂಚಾರ ನಿರ್ಬಂಧಿಸಲಾಗಿದೆ. ಹೆಚ್.ಎ.ಎಲ್ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣೆ ಸರಹದ್ದಿನ ಹೊರವರ್ತುಲ ರಸ್ತೆಯಲ್ಲಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಬಂಧ ದಿನಾಂಕ:19.09.2025 ರಿಂದ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಈ ಕೆಳಕಂಡ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ. ದಿನಾಂಕ ಮತ್ತು ಸಮಯ 19.09.2025 ರಿಂದ 26.09.2025ರವರೆಗೆ (ಒಂದು ವಾರ) ವಾಹನ ನಿರ್ಬಂಧಿಸಲಾದ ರಸ್ತೆ ಮಾರ್ಗ + ಲೇ ಅರೇಬಿಯಾ, ಬಿರಿಯಾನಿ ಜೋನ್ ಮತ್ತು ಕ್ರೋಮ ಜಂಕ್ಷನ್ ಬಳಿ ಹೊರವರ್ತುಲ ರಸ್ತೆಯಿಂದ ಮಾರತ್ತಹಳ್ಳಿ-ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ನಿರ್ಬಂಧಿಸಲಾದ…
ನವದೆಹಲಿ : ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಪ್ರಾಯೋಜಿತ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು. ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪ್ರತಾಪ್ ಸಿಂಹ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಅರ್ಜಿ ವಜಾಗೊಳಿಸಿದೆ. ದಸರಾ ಉದ್ಘಾಟಕರ ಆಯ್ಕೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಹೇಳಿ ಪ್ರತಾಪ್ ಸಿಂಹ…







