Author: kannadanewsnow57

ಬೆಳಗಾವಿ : ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ  ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್ದಾಪರರ ಆದಾಯ ಮಿತಿಯನ್ನು ರೂ.1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ರೂ.500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ರೂ.1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿ.ಪಿ.ಎಲ್ ಹಾಗೂ 1.25 ಲಕ್ಷ ಎ.ಪಿ.ಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ.…

Read More

ತುಮಕೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಸಿಎಂ ಸ್ಥಾನ ಕೊಡದಿದ್ದರೆ ಕಾಂಗ್ರೆಸ್ ಸರ್ವನಾಶವಾಗುತ್ತೆ ಎಂದು ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಸಿಎಂ ಸ್ಥಾನ ಕೊಡದಿದ್ದರೆ ಕಾಂಗ್ರೆಸ್ ಸರ್ವನಾಶವಾಗುತ್ತೆ. ಡಿ.ಕೆ. ಶಿವಕುಮಾರ್ ಅವರು ಪಕ್ಷಕ್ಕಾಗಿ ದುಡಿದಿದ್ದಾರೆ. ಹೀಗಾಗಿ ಅವರು ಸಿಎಂ ಆಗಬೇಕು. ಅವರು ದುಡಿದಿದ್ದಕ್ಕೆ ಕೂಲಿ ಕೊಡಬೇಕು ಎಂದು ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನ ಮುಗಿದ ಕೂಡಲೇ ಅವರನ್ನು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಬೇಕು. ಇಲ್ಲ ಅಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಹೇಳಿದ್ದಾರೆ.

Read More

ಬೆಳಗಾವಿ : ಕಾಂಗ್ರೆಸ್ ನಲ್ಲಿ ಮತ್ತೆ ಡಿನ್ನರ್ ಪಾಲಿಟಿಕ್ಸ್ ಜೋರಾಗಿದ್ದು, ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮಾಡಿದ್ದಾರೆ . ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಡಿನ್ನರ್ ನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೆಚ್.ಸಿ. ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಎಂ.ಸಿ. ಸುಧಾಕರ್, ಶಾಸಕ ಪೊನ್ನಣ್ಣ, ಎಂ.ಎಲ್. ಸಿ ನಜೀರ್ ಸೇರಿದಂತೆ ಸಿಎಂ ಸಿದ್ದರಾಮಯ್ಯ ಆಪ್ತರಷ್ಟೇ ಭಾಗಿಯಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತರಿಗೆ ಆಹ್ವಾನಿಸಿಲ್ಲ ಎಂದು ತಿಳಿದುಬಂದಿದೆ. ಸದ್ಯ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಡಿನ್ನರ್ ಮೀಟಿಂಗ್ ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Read More

ಬೆಳಗಾವಿ : 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವು ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಗೃಹಸಚಿವ ಡಾ:ಜಿ.ಪರಮೇಶ್ವರ್ ಅವರು ಈ ವಿಧೇಯಕವು ವ್ಯಕ್ತಿ ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂತಹ ಅಪರಾಧಗಳಿಗೆ ದಂಡನೆಯನ್ನು ಉಪಬಂದಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕವನ್ನು ತರಲಾಗಿದೆ. ವಿಧೇಯಕವನ್ನು ಪರ್ಯಾಲೋಚಿಸಿ ಅನುಮೋದನೆ ನೀಡುವಂತೆ ಕೋರಿದರು. ವಿಧೇಯಕವು ವಿಧಾನಸಬೆಯಲ್ಲಿ ಅಂಗೀಕಾರವಾಯಿತು. ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರ್ಯಾಲೋಚನೆಗೆ ತಂದರು. ಗದ್ದಲದ ನಡುವೆ ಅಂಗೀಕಾರಕ್ಕೆ ಮುನ್ನ, ಪುನರಾವರ್ತಿತ ಅಪರಾಧಕ್ಕೆ ಜೈಲು ಶಿಕ್ಷೆಯನ್ನು 10 ರಿಂದ ಏಳು ವರ್ಷಕ್ಕೆ ಇಳಿಸಲಾಗಿದೆ ಎಂದು ತಿಳಿಸಿದರು.

Read More

ಬೆಳಗಾವಿ : ಬ್ರಿವೇರಿಗಳಲ್ಲಿ ಉತ್ಪಾದನೆಯಾಗುವ ಬಿಯರ್ ಗಳಲ್ಲಿ ಇಥೈಲ್ ಆಲ್ಕೋಹಾಲ್ ಇರುವಿಕೆ ಮತ್ತು ಮಿಥೈಲ್ ಆಲ್ಕೋಹಾಲ್, Obnoxious Substance ಮತ್ತು Suspended Sediments ಇಲ್ಲದಿರುವಿಕೆಯನ್ನು ಖಚಿತಪಡಿಸಿಕೊಂಡು ಮಾನವ ಸೇವನೆಗೆ ಯೋಗ್ಯವಾಗಿದೆ ಎಂದು ರಾಸಾಯನಿಕ ವಿಶ್ಲೇಷಣಾ ವರದಿಯನ್ನು ನೀಡಲಾದ ನಂತರವೇ ಬಿಯರ್ನ್ನು ಮಾರಾಟಕ್ಕೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಅಬಕಾರಿ ಸಚಿವರು ಆರ್.ಜಿ.ತಿಮ್ಮಾಪುರ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಶಿವಕುಮಾರ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಅಬಕಾರಿ ಇಲಾಖೆಯಲ್ಲಿ 2 ರಾಸಾಯನಿಕ ಪ್ರಯೋಗಾಲಯಗಳು ಬೆಂಗಳೂರು ಮತ್ತು ಧಾರವಾಡದಲ್ಲಿ ಮಂಜೂರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ರಾಸಾಯನಿಕ ಪ್ರಯೋಗಾಲಯವು ಕಾರ್ಯನಿರ್ವಹಿಸುತ್ತಿದೆ. ಧಾರವಾಡದಲ್ಲಿನ ಪ್ರಯೋಗಾಲಯ ಪ್ರಾರಂಭಿಸಲು ಪರಿಶೀಲಿಸಲಾಗುತ್ತಿದ್ದು, ಅಬಕಾರಿ ಇಲಾಖೆಯಿಂದ ಖಾಸಗಿ ಪ್ರಯೋಗಾಲದ ಜೊತೆ ಯಾವುದೇ ಒಡಂಬಡಿಕೆ ಮಾಡಿಕೊಂಡಿರುವುದಿಲ್ಲ ಎಂದು ತಿಳಿಸಿದರು. ರಾಜ್ಯದಲ್ಲಿ 2025-26 ನೇ ಸಾಲಿನ ಅಕ್ಟೋಬರ್ 2025 ರ ಅಂತ್ಯಕ್ಕೆ ಸ್ವತಂತ್ರ ಆರ್.ವಿ.ಬಿ (Independent RVB) 64 ಹಾಗೂ ವಿವಿಧ ರೀತಿಯ ಸನ್ನದಿಗೆ ಹೊಂದಿಕೊಂಡಂತಿರುವ ಆರ್.ವಿ.ಬಿ (Attached RVB) 915 ಹೀಗೆ,…

Read More

ಬೆಳಗಾವಿ : ಆಯುಷ್ ಇಲಾಖೆಯಲ್ಲಿನ ವೈದ್ಯಾಧಿಕಾರಿಗಳ ಹುದ್ದೆಯಿಂದ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ಮುಂಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಎಲ್.ಎ. ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು. ಆಯುಷ್ ಇಲಾಖೆಯಲ್ಲಿ ವೈದ್ಯಾಧಿಕಾರಿಗಳ ಹುದ್ದೆಯಿಂದ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ಮುಂಬಡ್ತಿ ಮೂಲಕ ಒಟ್ಟು 95 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಇದರಲ್ಲಿ 65 ಆಯುರ್ವೇದ, 15-ಯುನಾನಿ, 12-ಹೋಮಿಯೋಪಥಿ ಹಾಗೂ ಪ್ರಕೃತಿ ಚಿಕಿತ್ಸೆ ಮತ್ತು ಯೋಗದ 03 ವೈದ್ಯರಿಗೆ ಮುಂಬಡ್ತಿ ನೀಡಬೇಕಿದೆ. ಇಲಾಖೆಯಲ್ಲಿ 116 ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳು ಮಂಜೂರಾಗಿದ್ದು, ಕಳೆದ ಆರೇಳು ವರ್óಗಳಿಂದ ಹಿರಿಯ ವೈದ್ಯಾಧಿಕಾರಿಗಳ ವೃಂದದಲ್ಲಿ ಹುದ್ದೆಗಳು ಖಾಲಿ ಇವೆ. ವೈದ್ಯಾಧಿಕಾರಿಗಳಿಗೆ ಸ್ಥಾನಪನ್ನ ಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗಿದ್ದು, ಬಳಿಕ ಮುಂಬಡ್ತಿ…

Read More

ನೀವು ಖರೀದಿಸುವ ಬೆಲ್ಲವು ಬಣ್ಣಬಣ್ಣದ್ದಾಗಿದೆಯೇ? ಅಥವಾ ಆಕರ್ಷಕವಾದ ತಿಳಿ ಹಳದಿ ಬಣ್ಣದ್ದಾಗಿದೆಯೇ? ಬೆಲ್ಲದ ಬಣ್ಣ ವ್ಯತ್ಯಾಸದ ಹಿಂದಿನ ರಹಸ್ಯ ಮತ್ತು ಅದರ ತಯಾರಿಕೆಯಲ್ಲಿ ಬಳಸುವ ರಾಸಾಯನಿಕಗಳ ತಿಳಿಯಿರಿ ಪೋಷಕಾಂಶಗಳಿಂದ ತುಂಬಿರುವ ಮೂಲ ಬೆಲ್ಲವನ್ನು ಹೇಗೆ ಗುರುತಿಸುವುದು ಎಂದು ತಿಳಿದುಕೊಳ್ಳುವುದು ಆರೋಗ್ಯಕರ ಜೀವನಕ್ಕೆ ಬಹಳ ಮುಖ್ಯ. ಬಿಳಿ ಬೆಲ್ಲ: ಇದು ಆರೋಗ್ಯಕ್ಕೆ ಹಾನಿಕಾರಕವೇ? ನೋಡಲು ತುಂಬಾ ಆಕರ್ಷಕವಾಗಿರುವ ಬಿಳಿ ಅಥವಾ ತಿಳಿ ಹಳದಿ ಬೆಲ್ಲವನ್ನು ತಯಾರಿಸುವಾಗ ಹೆಚ್ಚಾಗಿ ರಾಸಾಯನಿಕಗಳನ್ನು ಬಳಸಲಾಗುತ್ತದೆ. ರಾಸಾಯನಿಕಗಳ ಬಳಕೆ: ಬೆಲ್ಲಕ್ಕೆ ಮಸುಕಾದ ಬಣ್ಣ ಮತ್ತು ಹೊಳಪನ್ನು ನೀಡಲು ಸೋಡಿಯಂ ಬೈಕಾರ್ಬನೇಟ್ ಮತ್ತು ಕ್ಯಾಲ್ಸಿಯಂ ಕಾರ್ಬೋನೇಟ್ನಂತಹ ರಾಸಾಯನಿಕಗಳನ್ನು ಸೇರಿಸಲಾಗುತ್ತದೆ. ಪರಿಣಾಮ: ಇದು ಬೆಲ್ಲದಲ್ಲಿರುವ ನೈಸರ್ಗಿಕ ಪೋಷಕಾಂಶಗಳನ್ನು ನಾಶಪಡಿಸುವುದಲ್ಲದೆ, ಈ ರಾಸಾಯನಿಕ ಅವಶೇಷಗಳು ದೇಹಕ್ಕೆ ಹಾನಿಕಾರಕವಾಗಬಹುದು. ಅದಕ್ಕಾಗಿಯೇ ಬಿಳಿ ಬೆಲ್ಲವನ್ನು ತಪ್ಪಿಸುವುದು ಒಳ್ಳೆಯದು. ಕೆಂಪು ಅಥವಾ ಗಾಢ ಬೆಲ್ಲ: ಮೂಲ ಗಾಢ ಕಂದು ಅಥವಾ ಕಪ್ಪು ಬಣ್ಣದ ಬೆಲ್ಲವನ್ನು ಮೂಲ ಮತ್ತು ಆರೋಗ್ಯಕರವೆಂದು ಪರಿಗಣಿಸಲಾಗುತ್ತದೆ. ತಯಾರಿಸುವ ವಿಧಾನ: ಯಾವುದೇ ರಾಸಾಯನಿಕಗಳಿಲ್ಲದೆ ನೈಸರ್ಗಿಕವಾಗಿ…

Read More

ಬೆಳಗಾವಿ : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಪ್ಪದೇ ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇ-ಕೆವೈಸಿ ಮಾಡಿಸಬೇಕು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ಅಧಿಕಾರಿಗಳು ಮತ್ತು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಅಧ್ಯಕ್ಷರೊಂದಿಗೆ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪಡಿತರ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇ-ಕೆವೈಸಿ ಮಾಡಿಸಬೇಕು. ಅರ್ಹರು ಒಂದು ವೇಳೆ ಪರಿಷ್ಕರಣೆ ವೇಳೆ ಎಪಿಎಲ್ಗೆ ಬದಲಾಗಿದ್ದಲ್ಲಿ, ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರ ಕಚೇರಿಗೆ ಭೇಟಿ ಮಾಡಿ ಮನವಿ ಸಲ್ಲಿಸಬೇಕು. ಅದನ್ನು ಪರಿಶೀಲನೆ ಮಾಡಿ ಪುನಃ ಬಿಪಿಎಲ್ಗೆ ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 3 ಲಕ್ಷದ 96 ಸಾವಿರ ಪಡಿತರ ಕಾರ್ಡುಗಳನ್ನು ಒಂದು ತಿಂಗ ಳೊಳಗೆ ಪರಿಷ್ಕರಣೆ ಮಾಡಿ, ನೂತನ ಕಾರ್ಡ್ ನೀಡಲು ಕ್ರಮ ವಹಿಸಬೇಕು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈ ವರ್ಷ ಪ್ರತಿ ಕ್ವಿಂಟಲ್ ರಾಗಿಗೆ 4,886 ರೂ. ಬೆಲೆಯಂತೆ ಖರೀದಿಸಲಾಗುತ್ತಿದೆ. ಈಗಾಗಲೇ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ರೈತರು ನೋಂದಣಿ ಮಾಡಿಕೊಂಡಿದ್ದಾರೆ.…

Read More

ಢಾಕಾ: ಬಾಂಗ್ಲಾದೇಶದಲ್ಲಿ ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ ಬಳಿಕ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಸ್ಟಾರ್ ಹೋಟೆಲ್, ಕಟ್ಟಡಗಳ ಮೇಲೆ ಪ್ರತಿಭಟನಾಕಾರು ದಾಳಿ ನಡೆಸಿದ್ದಾರೆ. ಕಳೆದ ವರ್ಷ ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಹಿಂಸಾತ್ಮಕ ದಂಗೆಯನ್ನು ಹುಟ್ಟುಹಾಕಿದ್ದ ವಿರೋಧ ಪಕ್ಷದ ನಾಯಕ ಓಸ್ಮಾನ್ ಹಾದಿ ಗುರುವಾರ ಸಿಂಗಾಪುರದಲ್ಲಿ ನಿಧನರಾದರು. ಯುವ ನಾಯಕ ಉಸ್ಮಾನ್ ಹಾದಿ ಅವರ ಮರಣದ ನಂತರ, ಗುರುವಾರ ತಡರಾತ್ರಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತು, ಪ್ರತಿಭಟನಾಕಾರರು ಹಿಂಸಾತ್ಮಕವಾಗಿ ಮಾರ್ಪಟ್ಟರು. ಹಾದಿ ಅವರ ಮರಣದ ನಂತರ, ಇಂಕ್ವಿಲಾಬ್ ಮಂಚ್‌ನ ಪ್ರತಿಭಟನಾಕಾರರು ಬಾಂಗ್ಲಾದೇಶದ ಪತ್ರಿಕೆಗಳಾದ ಪ್ರೋಥೋಮ್ ಅಲೋ ಮತ್ತು ಢಾಕಾದಲ್ಲಿ ಡೈಲಿ ಸ್ಟಾರ್‌ನ ಕಟ್ಟಡಗಳ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದರು. ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ದೊಡ್ಡ, ಹಿಂಸಾತ್ಮಕ ಪ್ರತಿಭಟನೆಗಳು ಸಹ ನಡೆಯುತ್ತಿವೆ. ಕಳೆದ ವಾರ ಉಸ್ಮಾನ್ ಹಾದಿಗೆ ಗುಂಡು ಹಾರಿಸಲಾಯಿತು ಮತ್ತು ಆರು ದಿನಗಳ ಕಾಲ ಜೀವನ್ಮರಣ ಹೋರಾಟದ ನಂತರ ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಗುರುವಾರ ನಿಧನರಾದರು. ಫೆಬ್ರವರಿ…

Read More

ಬೆಂಗಳೂರು : 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ವಿಭಾಗದ 07 ಜಿಲ್ಲೆಗಳ 1345 ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ‘ಪರಿಹಾರ ಬೋಧನೆ” ತರಗತಿಗಳನ್ನು ಹಮ್ಮಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ಹಾಗೂ ಅನುದಾನ ಬಿಡುಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಪ್ರಸ್ತಾವನೆಯಲ್ಲಿ ಕಳೆದ ಹಲವು ವರ್ಷಗಳಿಂದ ಕಲ್ಯಾಣ ಕರ್ನಾಟಕ ಪ್ರದೇಶದ 07 ಜಿಲ್ಲೆಗಳ ಫಲಿತಾಂಶ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕಡಿಮೆಯಾಗಿರುವುದು ಗಮನಿಸಬಹುದು. ಪ್ರಸಕ್ತ ಸಾಲಿನ ಫಲಿತಾಂಶ ಉತ್ತಮ ಪಡಿಸಲು ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಜಾರಿಮಾಡುವುದರ ಜೊತೆಗೆ ಕೆಕೆಆರ್ಡಿಬಿ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ) ವತಿಯಿಂದ ಫಲಿತಾಂಶ ಸುಧಾರಣೆಗಾಗಿಯೇ ದೊರೆಯುವ ಅನುದಾನ ಬಳಸಿಕೊಳ್ಳಲು ಕ್ರಿಯಾಯೋಜನೆ ರೂಪಿಸಲಾಗಿದ್ದು, ಅನುಮೋದನೆಗಾಗಿ ಸಲ್ಲಿಸಿರುತ್ತಾರೆ. ಕಲಬುರಗಿ ವಿಭಾಗದ ಎಲ್ಲಾ 1345 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಎಲ್ಲಾ ಪ್ರೌಢ ಶಾಲೆಗಳಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಮತ್ತು ಸಾಯಂಕಾಲ ವಿಶೇಷ ತರಗತಿಗಳನ್ನು ನಡೆಸಿ, ಪರಿಹಾರ ಬೋಧನೆ…

Read More