Subscribe to Updates
Get the latest creative news from FooBar about art, design and business.
Author: kannadanewsnow57
ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೀದಿ ನಾಯಿ ದಾಳಿಗೆ ಇದೀಗ ಬಾಲಕಿ ಒಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ. ನಾಯಿ ಕಚ್ಚಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಅಲೈನಾ ಲೋಕಾಪುರ ಸಾವನಪ್ಪಿದ್ದಾಳೆ. ಕಳೆದ ಡಿಸೆಂಬರ್ 27ರಂದು ಬಾಗಲಕೋಟೆ ನಗರದ ನವನಗರದಲ್ಲಿ ಅಲೈನ ಮೇಲೆ ಬೀದಿ ನಾಯಿ ದಾಳಿ ನಡೆಸಿತ್ತು. ಕಣ್ಣು ಮೂಗು ಮತ್ತು ಮುಖಕ್ಕೆ ಗಂಭೀರವಾಗಿ ಗಾಯಗಳಾಗಿತ್ತು. ತಕ್ಷಣ ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೆ ಇಂದು ಅಲೈನ ಸಾವನ್ನಪ್ಪಿದ್ದಾಳೆ. ಬಾಲಕಿ ಅಲೈನಾ ಮನೆ ಮುಂದೆ ಆಟವಾಡುತ್ತಿದ್ದಾಗ ಬೀದಿನಾಯಿಗಳು ಬಾಲಕಿ ಮೇಲೆ ಎರಗಿತ್ತು. ಪರಿಣಾಮ ಆಕೆಯ ಕಣ್ಣು, ಮುಖ, ಮೂಗು, ಮುಖಕ್ಕೆ ಗಂಭೀರ ಗಾಯಗಳಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬಾಲಕಿ ಮೃತಪಟ್ಟಿದ್ದಾಳೆ. ಸಾರ್ವಜನಿಕರೇ ಗಮನಿಸಿ : ನಾಯಿ ಕಚ್ಚಿದಲ್ಲಿ ಕೂಡಲೇ ರೇಬಿಸ್ ಲಸಿಕೆ ಹಾಕಿಸಿರಿ ಸಾಕಿದ ಅಥವಾ…
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇದೀಗ ಮತ್ತೊಂದು ಬೆಳವಣಿಗೆ ಆಗಿದ್ದು, ನಿನ್ನೆ ರಾಹುಲ್ ಗಾಂಧಿ, ಮೈಸೂರಿನ ಮೂಲಕ ಕೇರಳಕ್ಕೆ ತೆರಳಿದ್ದರು. ಇದೀಗ ಕೇರಳದಿಂದ ವಾಪಸ್ ಆದಾಗ ಮೈಸೂರಿನ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ. ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ’ಎಂದು ಪೋಸ್ಟ್ ಮಾಡಿದ್ದಾರೆ. ನಿನ್ನೆ ಮೈಸೂರಿನ ಏರ್ಪೋರ್ಟ್ ನಲ್ಲಿ ರಾಹುಲ್ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕೆಲವು ಕಾಲ ಚರ್ಚೆ ಮಾಡಿದ್ದಾರೆ. ಹಲವು ದಿನಗಳ ಬಳಿಕ ರಾಹುಲ್ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಸಿದ್ದರಾಮಯ್ಯ ಜೊತೆಗೂ ರಾಹುಲ್ ಗಾಂಧಿ ಮಾತನಾಡಿದ್ದಾರೆ. ‘Nothing To Worry Dk’ : ಡಿಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ಮಹತ್ವದ ಸಂದೇಶ ಈ ವೇಳೆ ಡಿಕೆ ಶಿವಕುಮಾರ್…
ಮಾನವ ದೇಹದಲ್ಲಿ ಹಲವಾರು ರೀತಿಯ ಕ್ಯಾನ್ಸರ್ಗಳು ಬರುತ್ತವೆ. ಇವುಗಳಲ್ಲಿ ಹಲವು ವರೆಗೆ ಪ್ರಾಣಾಂತಕವಾದವು. ಹೇಗಾದರೂ, ಯಾವುದಾದರೂ ಕ್ಯಾನ್ಸರ್ ಸೋಕಿದಾಗ ಅದನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಚಿಕಿತ್ಸೆ ನೀಡಿದರೆ ಪ್ರಾಣಾಪಾಯವು ಇರುವುದಿಲ್ಲ. ಆದರೆ, ಕೆಲವೊಮ್ಮೆ ಕ್ಯಾನ್ಸರ್ ನ ಆರಂಭಿಕ ಹಂತದಲ್ಲಿ ಗುರುತಿಸುವುದು ಕಷ್ಟ, ಏಕೆಂದರೆ ಆ ಸಮಯದಲ್ಲಿ ಯಾವುದೇ ಲಕ್ಷಣಗಳು ಕಾಣಿಸುವುದಿಲ್ಲ. ಕೊಂದರಲ್ಲಿ ಅಲ್ಪ ಲಕ್ಷಣಗಳು ಇರಬಹುದು, ಮರಿಕೊಂಡರಲ್ಲಿ ಅಸಲು ಇರಬಾರದು. ಆದರೂ, ನಾವು ಸಾಮಾನ್ಯವಾದಂತೆ ಭಾವಿಸಿದರೆ ಕೆಲವು ಅನಾರೋಗ್ಯದ ಕ್ಯಾನ್ಸರ್ ಲಕ್ಷಣಗಳು ಬೇಕು. ಇವುಗಳನ್ನು ಗಮನಿಸಿದಾಗ ಕ್ಯಾನ್ಸರ್ ಪರೀಕ್ಷೆಗಳನ್ನು ನಡೆಸುವುದು ಒಳ್ಳೆಯದು. ಗಮನಿಸಬೇಕಾದ ಮುಖ್ಯ ಲಕ್ಷಣಗಳು: ಗಡ್ಡೆಗಳು (ಗಡ್ಡೆಗಳು): ಹಲವಾರು ರೀತಿಯ ಕ್ಯಾನ್ಸರ್ಗಳನ್ನು ಚರ್ಮದಿಂದ ತಾಕುವುದು ಗುರುತಿಸಬಹುದು. ವಿಶೇಷವಾಗಿ ರೊಮ್ಮು, ವೃಷಣಗಳು, ಶೋಷಗ್ರಂಧುಗಳು (ದುಗ್ಧರಸ ಗ್ರಂಥಿಗಳು) ಮತ್ತು ಮೃದು ಅಂಗಾಂಶಗಳಲ್ಲಿ ಬರುವ ಕ್ಯಾನ್ಸರ್ಗಳನ್ನು ಅವು ದೇಹದಲ್ಲಿ ಪತ್ತೆ ಹಚ್ಚಬಹುದು. ಚರ್ಮದ ಮೇಲೆ ಹುಲ್ಲುಗಳು ಅಥವಾ ಉರಿಯೂತಗಳು ಕ್ಯಾನ್ಸರ್ನ ಪ್ರಾರಂಭ ಅಥವಾ ನಂತರದ ಹಂತವಾಗಬಹುದು. ನಿಮ್ಮ ದೇಹದಲ್ಲಿ ಯಾವುದೇ ಹೊಸ ಗಡ್ಡ ಕಾಣಿಸಿಕೊಂಡರೂ…
ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡದ ಯುವಕ / ಯುವತಿಯರಲ್ಲಿ ಸ್ವ-ಉದ್ಯೋಗವನ್ನು ಉತ್ತೇಜಿಸಲು ಸ್ವಾವಲಂಬಿ ಸಾರಥಿ ಯೋಜನೆ ಆರಂಭಿಸಿದ್ದು, ಈ ಯೋಜನೆ ಮೂಲಕ ಟ್ರ್ಯಾಕ್ಟರ್, ಸರಕು, ಸಾರಿಗೆ ವಾಹನ ಖರೀದಿಗೆ 4 ಲಕ್ಷ ರೂ.ಗಳ ಸಹಾಯಧನ ಸಿಗಲಿದೆ. ಸರಕು ಸಾಗಾಣಿಕೆ ವಾಹನ, ಸಾರಿಗೆ ವಾಹನ, ಟ್ರಾಕ್ಟರ್ ಹಾಗೂ ಇತರೆ ವ್ಯಾಪಾರ ಉದ್ದೇಶಗಳಿಗೆ ನೆರವು ಸಿಗಲಿದ್ದು, ಘಟಕ ವೆಚ್ಚದ 70% ರಷ್ಟು ಅಥವಾ ಗರಿಷ್ಠ ರೂ. 4.00 ಲಕ್ಷ ಸಹಾಯಧನ ನೀಡಲಿದೆ. ಉಳಿದ ಮೊತ್ತವನ್ನು ಬ್ಯಾಂಕ್ ಸಾಲದ ಮೂಲಕ ಭರಿಸಲಾಗುತ್ತದೆ ಸ್ವಂತ ವಾಹನ ಖರೀದಿ ಮೂಲಕ ಸ್ವಂತ ಉದ್ಯಮ ಆರಂಭಿಸುವ ಅವಕಾಶ. ಯುವಕರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ನೆರವಾಗುವ ಯೋಜನೆ ಇದಾಗಿದೆ. ಸ್ವಾವಲಂಬಿ ಸಾರಥಿ ಯೋಜನೆ ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಟ್ರ್ಯಾಕ್ಟರ್ ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು. ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು…
ಆರೋಗ್ಯಕರ ಜೀವನಕ್ಕೆ ಸರಿಯಾದ ನಿದ್ರೆ ಎಷ್ಟು ಮುಖ್ಯ ಎಂಬುದನ್ನು ವಿವರಿಸುವ ಅಮೆರಿಕದ ಒರೆಗಾನ್ ವಿಶ್ವವಿದ್ಯಾಲಯದ ಸಂಶೋಧಕರ ಇತ್ತೀಚಿನ ಸಂಶೋಧನೆಗಳು ಇಲ್ಲಿವೆ. ಕಡಿಮೆ ನಿದ್ರೆ ಎಂದರೆ ಕಡಿಮೆ ಜೀವಿತಾವಧಿ! ಈ ಸಂಶೋಧನೆಯು ದೇಹದಿಂದ ಆಯಾಸವನ್ನು ನಿವಾರಿಸುವುದಲ್ಲದೆ, ನಾವು ಎಷ್ಟು ಕಾಲ ಬದುಕುತ್ತೇವೆ ಎಂಬುದು ನಾವು ಪಡೆಯುವ ನಿದ್ರೆಯ ಮೇಲೆ ಅವಲಂಬಿತವಾಗಿರುತ್ತದೆ ಎಂದು ಎಚ್ಚರಿಸುತ್ತದೆ. ನಾವು ದಿನಕ್ಕೆ ಕನಿಷ್ಠ 7 ರಿಂದ 9 ಗಂಟೆಗಳ ಕಾಲ ಶಾಂತಿಯುತವಾಗಿ ಮಲಗಬೇಕು. 7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವವರಲ್ಲಿ ಜೀವಿತಾವಧಿ ವೇಗವಾಗಿ ಕಡಿಮೆಯಾಗುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ನಿದ್ರೆಯ ಪ್ರಯೋಜನಗಳು ‘ಸ್ಲೀಪ್ ಅಡ್ವಾನ್ಸಸ್’ ಜರ್ನಲ್ನಲ್ಲಿ ಪ್ರಕಟವಾದ ಈ ವರದಿಯ ಪ್ರಕಾರ, ನಿದ್ರೆ ಕೇವಲ ವಿಶ್ರಾಂತಿಯಲ್ಲ, ಇದು ‘ಸ್ವಯಂ-ಗುಣಪಡಿಸುವ’ ಪ್ರಕ್ರಿಯೆಯಾಗಿದೆ. ನಿದ್ರೆ ಸ್ಮರಣೆಯನ್ನು ಸುಧಾರಿಸುತ್ತದೆ ಮತ್ತು ಮೆದುಳನ್ನು ಸಕ್ರಿಯವಾಗಿರಿಸುತ್ತದೆ. ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ರೋಗಗಳಿಂದ ರಕ್ಷಿಸುತ್ತದೆ. ಸರಿಯಾದ ನಿದ್ರೆ ಮಧುಮೇಹ ಮತ್ತು ಹೃದ್ರೋಗದಂತಹ ಸಮಸ್ಯೆಗಳನ್ನು ತಡೆಯುತ್ತದೆ. ಅಧ್ಯಯನದ ಹಿನ್ನೆಲೆ ಒರೆಗಾನ್ ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಆಂಡ್ರ್ಯೂ…
ಗದಗ : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಯಲಾಗಿದ್ದು, ಈ ನಿಧಿಯು 300 ವರ್ಷಗಳಿಗಿಂತ ಹಳೆಯದು, ವಿಜಯನಗರ ಸಾಮ್ರಾಜ್ಯ, ಚಾಲುಕ್ಯರ ಕಾಲದ್ದು ಎಂದು ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿಗಳು, ಲಕ್ಕುಂಡಿಯ ನಿಧಿ ಬ್ರಿಟಿಷರ ಕಾಲಕ್ಕಿಂತಲೂ ಹಳೆಯದು, ಈ ನಿಧಿಯು 300 ವರ್ಷಗಳಿಗಿಂತ ಹಳೆಯದು, ವಿಜಯನಗರ ಸಾಮ್ರಾಜ್ಯ, ಚಾಲುಕ್ಯರ ಕಾಲದ್ದು ಎಂದು ತಿಳಿಸಿದ್ದಾರೆ. ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ದೊರೆತ ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ಬಾಲಕ ಪ್ರಜ್ವಲ್ ಗೆ ಇದೀಗ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದು ಬಿಹೆಚ್ ಪಾಟೀಲ್ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಿದೆ. ಈ ಕುರಿತು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಸಿದ್ದಲಿಂಗಯ್ಯ ಪಾಟೀಲ್ ಭರವಸೆ ನೀಡಿದ್ದಾರೆ. ಪ್ರಜ್ವಲ್ ಗೆ ಪಿಯುಸಿವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಭರವಸೆ ನೀಡಿದ್ದಾರೆ. ಈಗಾಗಲೇ ಆತ 8ನೇ ತರಗತಿಯಲ್ಲಿ ಓದುತ್ತಿದ್ದಾನೆ. ನಿನ್ನೆ ನಮ್ಮ ಎಲ್ಲಾ ಆಡಳಿತ ಮಂಡಳಿ ಸೇರಿ ಅವನಿಗೆ ಸನ್ಮಾನಿಸಿದ್ದೇವೆ. ಪಿಯುಸಿ ದ್ವಿತೀಯ…
ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ನಡೆದಿದೆ. ಭಾರತೀಪುರ ಬಳಿ ಭೀಕರ ರಸ್ತೆ ಅಪಘಾತ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಿಹಾನ್ (15) ರಾಹಿಲ್ (9) ಹಾಗೂ ಫಾತಿಮಾ (76) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಚಾಲಕ ಸೇರಿದಂತೆ ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಂದೇ ಕುಟುಂಬದ 6 ಜನ ಪ್ರಯಾಣ ಮಾಡುತ್ತಿದ್ದರು. ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಮದುವೆಗೆ ತೆರಳಿದ್ದರು. ಮದುವೆ ಮುಗಿಸಿಕೊಂಡು ಶೃಂಗೇರಿಗೆ ವಾಪಸ್ ಆಗುವ ವೇಳೆ ಅಪಘಾತ ಸಂಭವಿಸಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ ಅಡಿಯಲ್ಲಿ ಆಂತರರಾಷ್ಟ್ರೀಯ ಉಪಯೋಜನೆ ಅಡಿಯಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡಿದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ (01.01.2024 ರಿಂದ 31.12.2024) ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ. ಅದರಂತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಅಧಿಕೃತ ಜಾಲತಾಣ: https://sevasindhu.karnataka.gov.in . ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 31-01-2026 ರಂದು ಕಡೆಯ ದಿನಾಂಕವಾಗಿರುತ್ತದೆ. ಈ ಬಗ್ಗೆ ತಮ್ಮ ಜಿಲ್ಲೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವ ಸ್ಥಳೀಯ…
ಭಾರತದಲ್ಲಿ ನೀರಿನ ಬಿಕ್ಕಟ್ಟು ಪ್ರತಿ ವರ್ಷ ಲಕ್ಷಾಂತರ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ನಗರಗಳು ಮತ್ತು ಹಳ್ಳಿಗಳಲ್ಲಿ ಅನೇಕ ಜನರು ಶುದ್ಧ ನೀರನ್ನು ಕುಡಿಯಲು ಸಾಧ್ಯವಾಗುತ್ತಿಲ್ಲ ಮತ್ತು ಕಲುಷಿತ ನೀರನ್ನು ಕುಡಿಯಲು ಒತ್ತಾಯಿಸಲ್ಪಡುತ್ತಿದ್ದಾರೆ. ಈ ಕಲುಷಿತ ನೀರು ಅನೇಕ ರೋಗಗಳಿಗೆ ಪ್ರಮುಖ ಕಾರಣವಾಗಿದೆ. ಕಲುಷಿತ ನೀರನ್ನು ಕುಡಿಯುವುದರಿಂದ ಹೊಟ್ಟೆ, ಯಕೃತ್ತು, ಮೂತ್ರಪಿಂಡ ಮತ್ತು ಚರ್ಮದ ಸಮಸ್ಯೆಗಳು ಉಂಟಾಗುತ್ತವೆ. ತೀವ್ರತರವಾದ ಸಂದರ್ಭಗಳಲ್ಲಿ, ಇದು ಸಾವಿಗೆ ಕಾರಣವಾಗಬಹುದು. ನಮ್ಮ ದೇಶದಲ್ಲಿ ಜೀವನಕ್ಕೆ ನೀರು ಅತ್ಯಗತ್ಯ. ಆದರೆ ಪ್ರತಿ ವರ್ಷ ಲಕ್ಷಾಂತರ ಜನರು ಕೊಳಕು ಅಥವಾ ಕಲುಷಿತ ನೀರನ್ನು ಕುಡಿಯುವುದರಿಂದ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ನಿಮಗೆ ತಿಳಿದಿದೆಯೇ? ಭಾರತದ ಅನೇಕ ಸ್ಥಳಗಳಲ್ಲಿ, ಜನರಿಗೆ ಇನ್ನೂ ಶುದ್ಧ ನೀರಿನ ಲಭ್ಯತೆಯಿಲ್ಲ. ಇದು ಕೇವಲ ಹಳ್ಳಿಗಳ ಸಮಸ್ಯೆಯಲ್ಲ; ನಗರಗಳು ಮತ್ತು ಮಹಾನಗರಗಳಲ್ಲಿನ ಜನರು ಕಲುಷಿತ ನೀರಿನಿಂದ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಆದ್ದರಿಂದ, ಕಲುಷಿತ ನೀರನ್ನು ಕುಡಿಯುವುದರಿಂದ ದೇಶದಲ್ಲಿ ಪ್ರತಿ ವರ್ಷ ಎಷ್ಟು ಜನರು ಅನಾರೋಗ್ಯಕ್ಕೆ ಒಳಗಾಗುತ್ತಾರೆ ಮತ್ತು…
ಬೆಂಗಳೂರು : ಖಜಾನೆಗಳಲ್ಲಿ ವರ್ಷಾಂತ್ಯದ ಬಿಲ್ಲುಗಳನ್ನು ಮಾರ್ಚ್ 31ರಂದೇ ತೀರ್ಣಗೊಳಿಸಿ ಲೆಕ್ಕವನ್ನು ಮುಕ್ತಾಯಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2024-25 ನೇ ಸಾಲಿನ ವರ್ಷಾಂತ್ಯದ ಬಿಲ್ಲುಗಳನ್ನು ಖಜಾನೆಗಳಲ್ಲಿ ಸ್ವೀಕರಿಸಿ, ತೀರ್ಣಗೊಳಿಸಿ ದಿನಾಂಕ:31.03.2025 ರಂದೇ 2024-25 ನೇ ಸಾಲಿನ ಲೆಕ್ಕಗಳನ್ನು ಮುಕ್ತಾಯಗೊಳಿಸಲು ಉಲ್ಲೇಖ (1)ರ ಸರ್ಕಾರಿ ಆದೇಶ ಮತ್ತು ತದನಂತರದ ಆದೇಶಗಳಲ್ಲಿ ಕಾಲಮಿತಿ ಸೂಚಿಸಿ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿತ್ತು. 2025-26 ನೇ ಸಾಲಿನ ವರ್ಷಾಂತ್ಯದ ಬಿಲ್ಲುಗಳನ್ನೂ ಸಹ ಖಜಾನೆಗಳಲ್ಲಿ ಸ್ವೀಕರಿಸಿ ತೀರ್ಣಗೊಳಿಸಿ, ದಿನಾಂಕ:31.03.2026 ರಂದೇ 2025-26 ನೇ ಸಾಲಿನ ಲೆಕ್ಕಗಳನ್ನು ಮುಕ್ತಾಯಗೊಳಿಸಲು ಸೂಕ್ತ ವೇಳಾಪಟ್ಟಿಯನ್ನು ನೀಡಿ ಸಾಕಷ್ಟು ಮುಂಚಿತವಾಗಿ ಆದೇಶವನ್ನು ಹೊರಡಿಸುವುದು ಅವಶ್ಯವಿದೆಯೆಂದು ಖಜಾನೆ ಆಯುಕ್ತರು ಮೇಲೆ ಉಲ್ಲೇಖ(2)ರಲ್ಲಿ ಓದಲಾದ ಕಡತದಲ್ಲಿ ಸರ್ಕಾರವನ್ನು ಕೋರಿದ್ದಾರೆ. ಆದ್ದರಿಂದ ಈ ಆದೇಶ. ಸರ್ಕಾರಿ ಆದೇಶ ಸಂಖ್ಯೆ: ಆಇ 56 ಬಿಪಿಇ 2025 ಬೆಂಗಳೂರು, ದಿನಾಂಕಃ12.01.2026 ಆಡಳಿತ ಇಲಾಖೆಗಳು ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ನಿಗದಿಗೊಳಿಸಿರುವ ಕಾಲಮಿತಿ ಈ ಕೆಳಗಿನಂತಿದೆ:













