Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿಯೂ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ ಮುಂದಾಗಿದೆ. ಹೌದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಿದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ ನೀಡಿದ ಬೆನ್ನಲ್ಲೇ ಇತರೆ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿಯೂ ವಿನಾಯಿತಿ ನೀಡಲು ಸರ್ಕಾರ ಮುಂದಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಾಣ ಮಾಡಿದ ನೆಲ ಅಂತಸ್ತು, ಎರಡು ಅಂತಸ್ತು, ಸ್ಟಿಲ್ಟ್ ಮತ್ತು ಮೂರು ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ವಿನಾಯಿತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆಯಡಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ, ಕರ್ನಾಟಕ ಪುರಸಭೆಗಳ ಅಧಿನಿಯಮದಡಿ ಪುರಸಭೆಗಳ ವ್ಯಾಪ್ತಿಯಲ್ಲಿ ವಿನಾಯಿತಿ ಕೋರಲಾಗುವುದು. ಈ ವೇಳೆ ನಕ್ಷೆ ಮಂಜೂರಾತಿ ಪಡೆದು…
ಬೆಂಗಳೂರು : ಫೆಬ್ರವರಿ/ಮಾರ್ಚ್ 2026 ರಲ್ಲಿ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವತಿಯಿಂದ ನಡೆಸುತ್ತಿರುವ ಫೆಬ್ರವರಿ/ಮಾರ್ಚ್ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಉಲ್ಲೇಖಿತ ಸರ್ಕಾರದ ಆದೇಶಗಳನ್ವಯ ಪಿಯುಸಿ ಶಿಕ್ಷಣ ಬೋಧಿಸುವ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಅರ್ಹ ಅಭ್ಯರ್ಥಿಗಳಿಂದ ದಿನಾಂಕ:15-10-2025 ರಿಂದ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ONLINE ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೇರವಾಗಿ ಕಾಲೇಜಿನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿರುವುದಿಲ್ಲ. ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಕಡ್ಡಾಯವಾಗಿ ಇರಬೇಕಾದ ಅರ್ಹತೆಗಳು ಹಾಗೂ ಸೂಚನೆಗಳು: 1. ದಿನಾಂಕ: 31-03-2026 ಕ್ಕೆ 17 ವರ್ಷಗಳು ತುಂಬಿರಬೇಕು. (31-03-2009 ರಂದು ಅಥವಾ ಅದಕ್ಕಿಂತ ಹಿಂದೆ…
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ಮಧ್ಯಾಹ್ನ 1.44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಚ್.ಅರುಣ್ ಮಾಚಯ್ಯ, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಕಾಳನ ರವಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್, ಇತರರು ಪಾಲ್ಗೊಳ್ಳಲಿದ್ದಾರೆ. ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ…
ಬೆಂಗಳೂರು : ರಾಜ್ಯದಲ್ಲಿರುವ ಆಯ್ದ ಸರ್ಕಾರಿ ಶಾಲೆಗಳನ್ನು (ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 200 ಶಾಲೆಗಳನ್ನು ಹಾಗೂ ರಾಜ್ಯದ ಇತರೆಡೆ 500 ಶಾಲೆಗಳನ್ನು) ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ, ಹೆಚ್ಚುವರಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಸುಮಾರು 47,493 ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿವೆ. ಇವುಗಳಲ್ಲಿ 19,603 ಪ್ರಾಥಮಿಕ ಶಾಲೆಗಳು, 21,676 ಹಿರಿಯ ಪ್ರಾಥಮಿಕ ಶಾಲೆಗಳು, 4,895 ಪ್ರೌಢಶಾಲೆಗಳು ಮತ್ತು 1,319 ಪದವಿಪೂರ್ವ ಕಾಲೇಜುಗಳಿರುತ್ತವೆ. ಒಟ್ಟಾರೆಯಾಗಿ ಕೇವಲ 309 ಶಾಲೆಗಳು ಎಲ್.ಕೆ.ಜಿಯಿಂದ 12ನೇ ತರಗತಿಯವರೆಗೆ ಸಂಯುಕ್ತ ವ್ಯವಸ್ಥೆಯನ್ನು ಹೊಂದಿವೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯು 2015-16ರಲ್ಲಿ 47.1 ಲಕ್ಷದಿಂದ 2025-26ರಲ್ಲಿ 38.2 ಲಕ್ಷಕ್ಕೆ (19% ಕಡಿಮೆ) ಕುಸಿದಿರುತ್ತದೆ. ಒಟ್ಟು ದಾಖಲಾತಿಯಲ್ಲಿ ಸರ್ಕಾರಿ ಶಾಲೆಗಳ ಪಾಲು 46% ರಿಂದ 38% ಕ್ಕೆ ಕುಸಿದಿರುತ್ತದೆ. ಆದರೆ ಖಾಸಗಿ ಅನುದಾನರಹಿತ ಶಾಲೆಗಳ ಪಾಲು 2015-16ರಲ್ಲಿ 36.3 ಲಕ್ಷ ವಿದ್ಯಾರ್ಥಿಗಳಿಂದ 2025-26ರಲ್ಲಿ 47 ಲಕ್ಷ ವಿದ್ಯಾರ್ಥಿಗಳಿಗೆ (29%) ಹೆಚ್ಚಾಗಿದೆ.…
ಬೆಂಗಳೂರು : ಶಿಕ್ಷಕ, ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿರುವವರಿಗೆ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ, ಅನುದಾನಿತ ಶಾಲೆಗಳು ಹಾಗೂ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕರ ಕೊರತೆ ನೀಗಿಸಲು 18 ಸಾವಿರ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಇಲ್ಲವೇ ಡಿಸೆಂಬರ್ನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಿದ ನಂತರ ಸಿಇಟಿ ಮೂಲಕ ಶಿಕ್ಷಕರ ನೇಮಕಾತಿ ಮಾಡಲಾಗುವುದು, ಅನುದಾನಿತ ಶಾಲೆಗಳಿಗೆ 5000 ಶಿಕ್ಷಕರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಸೇರಿ ಒಟ್ಟು 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಿಸಲಾಗುತ್ತದೆ ಎಂದು ಹೇಳಿದ್ದಾರೆ. ಪರಿಶಿಷ್ಟ ಜಾತಿ ಒಳಪಂಗಡಗಳಿಗೆ ಒಳ ಮೀಸಲಾತಿ ಅನುಸಾರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ, ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು ಎಂದರು.
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ಲೈನ್ ವ್ಯವಸ್ಥೆಗೆ ಚಾಲನೆ ದೊರೆತಿದೆ. ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ 2000 ಚ.ಮೀ.ಗಳ ವರೆಗೆ * ನಿಮ್ಮ ಮೊಬೈಲ್ ಮತ್ತು ಓಟಿಪಿ ಬಳಸಿ https://bbmp.karnataka.gov.in/BtoAKhata ರಲ್ಲಿ ಲಾಗಿನ್ ಆಗಿ * ನಿಮ್ಮ ಅಂತಿಮ ಬಿ-ಖಾತೆಯ ಇಪಿಐಡಿ ಸಂಖ್ಯೆಯನ್ನು ನಮೂದಿಸಿ ವಿವರಗಳನ್ನು ಪಡೆಯಿರಿ * ಮಾಲೀಕರ ಆಧಾರ್ ದೃಢೀಕರಿಸಿ * ನಿವೇಶನವಿರುವ ಸ್ಥಳವನ್ನು ಮತ್ತು ನಿವೇಶನ ಮುಂಭಾಗದ ರಸ್ತೆಯ ಪ್ರಕಾರವನ್ನು ದೃಢಪಡಿಸಿ * ಭೂ ಪರಿವರ್ತನೆಯಾದ ಮತ್ತು ಭೂ ಪರಿವರ್ತನೆಯಾಗದ ಎರಡೂ ನಿವೇಶನಗಳು ಅರ್ಹ (ಫ್ಲಾಟ್ಗಳಿಗೆ ಅರ್ಹತೆಯಿಲ್ಲ) + ಸ್ವೀಕೃತಿಯನ್ನು ಪಡೆಯಿರಿ * ನಗರ ಪಾಲಿಕೆ ವತಿಯಿಂದ ನಿವೇಶನಕ್ಕೆ ಭೇಟಿ ಮತ್ತು ದೃಢೀಕರಣ * ಮಾರುಕಟ್ಟೆ ಮೌಲ್ಯದ ಶೇ. 5% ರಷ್ಟು ಮೊತ್ತವನ್ನು “ಏಕ ನಿವೇಶನ”…
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ಲೈನ್ ವ್ಯವಸ್ಥೆಗೆ ಚಾಲನೆ ದೊರೆತಿದೆ. ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ 2000 ಚ.ಮೀ.ಗಳ ವರೆಗೆ * ನಿಮ್ಮ ಮೊಬೈಲ್ ಮತ್ತು ಓಟಿಪಿ ಬಳಸಿ https://bbmp.karnataka.gov.in/BtoAKhata ರಲ್ಲಿ ಲಾಗಿನ್ ಆಗಿ * ನಿಮ್ಮ ಅಂತಿಮ ಬಿ-ಖಾತೆಯ ಇಪಿಐಡಿ ಸಂಖ್ಯೆಯನ್ನು ನಮೂದಿಸಿ ವಿವರಗಳನ್ನು ಪಡೆಯಿರಿ * ಮಾಲೀಕರ ಆಧಾರ್ ದೃಢೀಕರಿಸಿ * ನಿವೇಶನವಿರುವ ಸ್ಥಳವನ್ನು ಮತ್ತು ನಿವೇಶನ ಮುಂಭಾಗದ ರಸ್ತೆಯ ಪ್ರಕಾರವನ್ನು ದೃಢಪಡಿಸಿ * ಭೂ ಪರಿವರ್ತನೆಯಾದ ಮತ್ತು ಭೂ ಪರಿವರ್ತನೆಯಾಗದ ಎರಡೂ ನಿವೇಶನಗಳು ಅರ್ಹ (ಫ್ಲಾಟ್ಗಳಿಗೆ ಅರ್ಹತೆಯಿಲ್ಲ) + ಸ್ವೀಕೃತಿಯನ್ನು ಪಡೆಯಿರಿ * ನಗರ ಪಾಲಿಕೆ ವತಿಯಿಂದ ನಿವೇಶನಕ್ಕೆ ಭೇಟಿ ಮತ್ತು ದೃಢೀಕರಣ * ಮಾರುಕಟ್ಟೆ ಮೌಲ್ಯದ ಶೇ. 5% ರಷ್ಟು ಮೊತ್ತವನ್ನು “ಏಕ ನಿವೇಶನ”…
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದು, ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು ಹೆಚ್ಚಳ ಮಾಡಲಾಗಿದೆ. ಹೌದು, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಹೊರಟ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ಶಾಕ್ ನೀಡಿದ್ದು, ಟಿಕೆಟ್ ದರವನ್ನು ದುಪ್ಪಟ್ಟು ಹೆಚ್ಚಳ ಮಾಡಿದೆ ಎನ್ನಲಾಗಿದೆ. 18 ಶನಿವಾರ, 19 ಭಾನುವಾರ, 20 ನರಕ ಚತುರ್ದಶಿ, 21 ಅಮಾವ್ಯಾಸೆ, 22 ದೀಪಾವಳಿಯಿದೆ. ಹೀಗಾಗಿ ಸಾಲು ಸಾಲು ರಜೆ ಬಂದಿವೆ ಹೀಗಾವಿ ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಿದೆ. ಇದೇ ಶುಕ್ರವಾರ ಬೆಂಗಳೂರಿನಿಂದ ಕರ್ನಾಟಕದ ವಿವಿಧ ಊರುಗಳಿಗೆ ಹೋಗುವ ಖಾಸಗಿ ಬಸ್ಗಳು ಟಿಕೆಟ್ ದರವನ್ನು ದುಪ್ಪಟು ಮಾಡಿವೆ. ಇನ್ನೂ ಕೆಲ ಬಸ್ಗಳು 50% ಟಿಕೆಟ್ ದರ ಏರಿಕೆ ಮಾಡಿವೆ ಎಂದು ಹೇಳಲಾಗುತ್ತಿದೆ. ಬೆಂಗಳೂರು-ಹುಬ್ಬಳ್ಳಿ ಪ್ರಸ್ತುತ ದರ 900-1,000 ರೂ. ಇದ್ದದ್ದು 2,500-3,000 ರೂ.ಗೆ ಏರಿಕೆ ಆಗಿದೆ. ಬೆಂಗಳೂರು –ಬೆಳಗಾವಿ 1,500-1,600ರೂ. ಇದ್ದದ್ದು,…
ಬೆಂಗಳೂರು : 2025-26ನೇ ಸಾಲಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಹೊಸ (REGULAR) ವಿದ್ಯಾರ್ಥಿಗಳ ನೋಂದಣಿ ಮಾಹಿತಿಗಳನ್ನು ಮಂಡಲಿಯ ಜಾಲತಾಣದ PU EXAM PORTAL ಲಾಗಿನ್ ನಲ್ಲಿ ಅಪ್ಲೋಡ್ ಮಾಡುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಹಾಗೂ ಉಲ್ಲೇಖಿತ ಸರ್ಕಾರದ ಆದೇಶ ಸಂಖ್ಯೆ: ಇಪಿ.203.ಎಸ್.ಎಲ್.ಬಿ 2023 ದಿನಾಂಕ:21-09-2023 ರಸ್ತೆಯ 2025-26ನೇ ಸಾಲಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಅರ್ಹ ಹೊಸ ವಿದ್ಯಾರ್ಥಿಗಳ (REGULAR) ನೋಂದಣಿ ಮಾಹಿತಿಗಳನ್ವಯ ಮಂಡಲಿಯ (https://kseab.karnataka.gov.in) PU EXAM PORTAL , ಯೋಜಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜಿನ 2025-26ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ತೆಗೆದುಕೊಳ್ಳುವ ಹೊಸ ವಿದ್ಯಾರ್ಥಿಗಳ ವಿವರಗಳನ್ನು ಕಡ್ಡಾಯವಾಗಿ ಆನ್ ಲೈನ್ ಮೂಲಕ ಅಪ್ಲೋಡ್ ಮಾಡುವಂತೆ ಈ ಮೂಲಕ ಸೂಚಿಸಿದೆ. 1) ಈ ನೋಂದಣಿ ಕಾರ್ಯಕ್ಕೆ ದಿನಾಂಕ:…
ನವದೆಹಲಿ: ಭಾರತೀಯ ವನ್ಯಜೀವಿ ಸಂಸ್ಥೆ ನಡೆಸಿದ ಅಖಿಲ ಭಾರತ ಸಿಂಕ್ರೊನಸ್ ಆನೆ ಅಂದಾಜು (SAIEE) 2025 ರ ಪ್ರಕಾರ ದೇಶದಲ್ಲಿ 22,446 ಆನೆಗಳಿವೆ, ಇದು 2017 ರ ಅಂದಾಜಿಗಿಂತ ಸುಮಾರು 18% ಇಳಿದಿದೆ ಎಂದು ವರದಿಯಗಿದೆ. ವರದಿಯ ಪ್ರಕಾರ ಕರ್ನಾಟಕ (6013) ಅತಿ ಹೆಚ್ಚು ಆನೆ ಸಂಖ್ಯೆಯನ್ನು ಹೊಂದಿದೆ. ಪಶ್ಚಿಮ ಘಟ್ಟಗಳು ಅತಿ ಹೆಚ್ಚು ಆನೆಗಳಿಗೆ (11,934) ನೆಲೆಯಾಗಿದೆ. ನಂತರ ಈಶಾನ್ಯ ಬೆಟ್ಟಗಳು ಮತ್ತು ಬ್ರಹ್ಮಪುತ್ರ ಪ್ರವಾಹ ಪ್ರದೇಶಗಳು 6,559. ಶಿವಾಲಿಕ್ ಬೆಟ್ಟಗಳು ಮತ್ತು ಗಂಗಾನದಿಯ ಬಯಲು ಪ್ರದೇಶಗಳು 2,062 ಆನೆಗಳನ್ನು ಹೊಂದಿವೆ. ಆದರೆ ಮಧ್ಯ ಭಾರತ ಮತ್ತು ಪೂರ್ವ ಘಟ್ಟಗಳು ಒಟ್ಟಾಗಿ 1,891 ಆನೆಗಳನ್ನು ಹೊಂದಿವೆ. ಯಾವ ರಾಜ್ಯದಲ್ಲಿ ಎಷ್ಟು ಆನೆಗಳಿವೆ? ಇಲ್ಲಿದೆ ಮಾಹಿತಿ ಕರ್ನಾಟಕ -6,013 ಆನೆಗಳನ್ನು ಹೊಂದಿದೆ. ಅಸ್ಸಾಂ -4,159 ತಮಿಳುನಾಡು -3,136 ಕೇರಳ -2,785 ಉತ್ತರಾಖಂಡ -1,792 ಒಡಿಶಾ -912 ಛತ್ತೀಸಗಢ ಮತ್ತು ಜಾರ್ಖಂಡ–650 ಮಧ್ಯಪ್ರದೇಶ- 97 ಮಹಾರಾಷ್ಟ್ರ -63














